Friday, 24th March 2023

ಕುಂಬಳಗೋಡು ಸಮೀಪ ಭೀಕರ ಅಪಘಾತ: ಆರು ಮಂದಿ ಸಾವು

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿ, ಆರು ಮಂದಿ ಮೃತಪಟ್ಟಿದ್ದಾರೆ.

ಕೆಂಗೇರಿಯಿಂದ ಬಿಡದಿ ಮಾರ್ಗ ಮಧ್ಯೆ ಬರುವ ಕುಂಬಳಗೋಡು ಸಮೀಪದ ಕಣಿಮಿಣಿಕೆ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್​ ಲಾರಿಯೊಂದು ಪಲ್ಟಿಯಾಗಿ 2 ಕಾರು, 1 ಬೈಕ್​ ಮೇಲೆ ಮಗುಚಿ ಬಿದ್ದು ಈ ಅಪಘಾತ ಸಂಭವಿಸಿದೆ. ಒಂದು ಕಾರಿನಲ್ಲಿದ್ದ ನಾಲ್ವರು, ಇನ್ನೊಂದು ಕಾರಿನಲ್ಲಿದ್ದ ಒಬ್ಬರು ಹಾಗೂ ಬೈಕ್​ನಲ್ಲಿದ್ದ ಇನ್ನೊಬ್ಬರು ಸೇರಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ನಿಖಿತಾ ರಾಣಿ (29), ವೀಣಮ್ಮ(42), ಇಂದ್ರಕುಮಾರ್ (14), ಕೀರ್ತಿಕುಮಾರ್ (40) ಮೃತಪಟ್ಟಿದ್ದಾರೆ. ನಾಲ್ವರೂ ಮಾಗಡಿ ಮೂಲದವರು. ಟೊಯೊಟಾ ಕಂಪನಿಯ ನೌಕರ ಟಿ.ಜೆ. ಶಿವಪ್ರಕಾಶ್ ಸಾವಿಗೀಡಾಗಿದ್ದಾರೆ. ಬೈಕ್​ನಲ್ಲಿದ್ದ ಜಿತಿನ್​ ಬಿ. ಜಾರ್ಜ್​ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಿಂದಾಗಿ ಟ್ರಾಫಿಕ್ ಜಾಮ್​ ಆಗಿದ್ದು, ಕುಂಬಳ ಗೋಡು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅಗತ್ಯ ಕ್ರಮಕೈಗೊಂಡಿದ್ದಾರೆ. ಟಿಪ್ಪರ್ ಲಾರಿಯನ್ನು ಟೋ ಮಾಡಿ ತೆರವುಗೊಳಿಸಲಾಗಿದೆ.

error: Content is protected !!