R T Vittalmurthy Column: ಸುರ್ಜೇವಾಲಾ ವಿರುದ್ಧ ಶುರುವಾಗಲಿದೆ ದಂಗೆ ?
ಕರ್ನಾಟಕದ ನೆಲೆಯಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ಪವರ್ ಪುಲ್ ನಾಯಕ. ಅವರನ್ನು ಬದಲಿಸುವುದು ಎಂದರೆ ಪಕ್ಷವನ್ನು ಅಸ್ಥಿರಗೊಳಿಸುವುದು ಎಂದರ್ಥ ಅಂತ ಸುರ್ಜೇವಾಲಾ ವರಿಷ್ಠರಿಗೆ ವಸ್ತುಸ್ಥಿತಿಯ ವರದಿ ಕೊಟ್ಟರೂ ಸಾಕಿತ್ತು. ಹಾಗೊಂದು ವೇಳೆ ನಾಯಕತ್ವ ಬದಲಾವಣೆ ಅನಿವಾರ್ಯ ಅಂತನ್ನಿಸಿದ್ದರೆ ವರಿಷ್ಠರು ಏನೇ ತೀರ್ಮಾನ ತೆಗೆದುಕೊಳ್ಳಲಿ. ಆದರೆ, ಸುರ್ಜೇವಾಲಾ ಅವರು ನಿರಂತರವಾಗಿ ಸಿದ್ದರಾಮಯ್ಯ ವಿರೋಧಿ ಬಣಕ್ಕೆ ಕುಮ್ಮಕ್ಕು ಕೊಡುತ್ತಾ ಬಂದರು.