ದೇವೇಂದ್ರ ಫಡ್ನವೀಸ್ ಎಂಟ್ರಿ ಆಗಿದ್ದೇಕೆ ?
ಯತ್ನಾಳ್ ಅವರು ಬಿಜೆಪಿಯಿಂದ ಉಚ್ಚಾಟಿತರಾದ ನಂತರದ ದಿನಗಳಲ್ಲಿ ರಮೇಶ್ ಜಾರಕಿಹೊಳಿ ಮೌನಕ್ಕೆ ಜಾರಿದ್ದಾರೆ. ಹಾಗಂತ ಪರ್ಮನೆಂಟಾಗಿ ಮೌನ ಧರಿಸಲು ಸಾಧ್ಯವಿಲ್ಲವಲ್ಲ? ಹೀಗಾಗಿ ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯ ಬಿಜೆಪಿಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಅವರು, ‘ಪಕ್ಷ ನಿಷ್ಠರಾದ ಯತ್ನಾಳ್ ಪ್ರಾಮಾಣಿಕವಾಗಿ ಮಾತನಾಡಿದ್ದೇ ಅವರಿಗೆ ಮುಳುವಾಗಿದೆ. ಹೀಗಾಗಿ ಉಚ್ಚಾಟಿತ ರಾಗಿರುವ ಅವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಅಂತ ವರಿಷ್ಠರಿಗೆ ಹೇಳಿ’ ಎಂದು ಮನವಿ ಮಾಡಿಕೊಂಡಿದ್ದಾರೆ.