ಬಳ್ಳಾರಿ: ಕರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ನಿರಂತರ ಹೋರಾಟ ನಡೆಸುತ್ತಿವೆ. ಇಂತಹ ಸಂದರ್ಭದಲ್ಲಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು (ರಾಬಕೋ) 10 ಲಕ್ಷ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದೆ ಎಂದು ರಾಬಕೋ ಅಧ್ಯಕ್ಷ, ಶಾಸಕ ಭೀಮಾನಾಯ್ಕ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಭಾರತವು ಸೇರಿದಂತೆ ವಿಶ್ವದಾದ್ಯಂತ ಮಹಾಮಾರಿಯಾಗಿ ಹಬ್ಬುತ್ತಿರುವ ಕರೋನ (ಕೊವಿಡ್-19) ದ ಹರಡುವಿಕೆಯನ್ನು ತಡೆಗಟ್ಟಲು […]