Wednesday, 24th April 2024

ಸಂಭಾವನೆಯಿಲ್ಲದೆ ಕೃಷಿ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌

ಮೈಸೂರು : ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ. ಈ ಮೂಲಕ ನಟ ದರ್ಶನ್‌, ಮತ್ತೊಮ್ಮೆ ಕನ್ನಡಿಗರ ಮನ ಗೆದ್ದಿದ್ದಾರೆ.

ಈ ಕುರಿತಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದು, ಮೈಸೂರಿನ ದರ್ಶನ್ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಭೇಟಿ ಯಾಗಿ, ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ಮನವಿ ಮಾಡಲಾಯಿತು. ಇಂತಹ ಮನವಿಗೆ ಪ್ರತಿಸ್ಪಂದಿಸಿರುವ ನಟ ದರ್ಶನ್, ಯಾವುದೇ ಸಂಭಾವನೇ ಇಲ್ಲದೇ ರಾಯಭಾರಿಯಾಗಲು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!