Thursday, 28th March 2024

ಧ್ರುವ ಸರ್ಜಾರಿಂದ ‘ದಾರಿ ಯಾವುದಯ್ಯಾ ವೈಕುಂಠಕ್ಕೆ’ ಫಸ್ಟ್ ಲುಕ್ ಬಿಡುಗಡೆ

ಬೆಂಗಳೂರು: ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ ‘ದಾರಿ ಯಾವುದ ಯ್ಯಾ ವೈಕುಂಠಕ್ಕೆ’ ಚಿತ್ರ ತೆರೆಗೆ ಬರಲು ಸಿದ್ದವಿದೆ. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ‌ ವೀಕ್ಷಿಸಲಿದೆ.

ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ನಟ ಧೃವ ಸರ್ಜಾ ಅವರಿಂದ ಬಿಡುಗಡೆಯಾಗಿದೆ. ಫಸ್ಟ್ ಲುಕ್ ಬಿಡುಗಡೆ ಮಾಡಿದ ಧ್ರುವ ಸರ್ಜಾ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಬೆಂಗಳೂರು, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ಈ ಹಿಂದೆ ‘ಕೃಷ್ಣ ಗಾರ್ಮೆಂಟ್ಸ್’ ಚಿತ್ರ ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಈ ಚಿತ್ರದ ನಿರ್ದೇಶಕರು. ವರ್ಧನ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅನುಷ. ‘ಡಿಂಗ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಅನುಷ ಅವರು ಶ್ರೀಮಾನ್ ಶ್ರೀ ಮತಿ ಹಾಗೂ ಅವಳು ಸುಜಾತ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

‘ತಿಥಿ’ ಚಿತ್ರದ ಖ್ಯಾತಿ ಪೂಜ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್. ಸುಚಿತ್, ಮೈಸೂರು ಬಸವರಾಜ್ ಮುಂತಾದವರು ಚಿತ್ರದ ತಾರಾಬಳಗ ದಲ್ಲಿದ್ದಾರೆ. ಲೋಕಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.

Leave a Reply

Your email address will not be published. Required fields are marked *

error: Content is protected !!