Tuesday, 23rd April 2024

ಸಪ್ತಪದಿ ತುಳಿದ ನಿರ್ದೇಶಕ ಎಸ್​.ನಾರಾಯಣ್​ ಪುತ್ರ ಪಂಕಜ್​- ರಕ್ಷಾ

ಮೈಸೂರು: ಕನ್ನಡ ಚಿತ್ರರಂಗದ ನಿರ್ದೇಶಕ, ನಟ ಎಸ್​. ನಾರಾಯಣ್​ ಪುತ್ರ ಪಂಕಜ್​ ನಾರಾಯಣ್​ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್​ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ ಸಮ್ಮುಖದಲ್ಲಿ ವಿವಾಹ ನಡೆದಿದೆ. ಪಂಕಜ್​ ಮತ್ತು ರಕ್ಷಾ ಮದುವೆಯ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೊವಿಡ್ ಹರಡುವ ಭಯ, ಪುನೀತ್​ ರಾಜ್​ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್​ ಆಗಿ ಮದುವೆ ಮಾಡಲಾಗಿದೆ.

ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್​ನಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಮಾಜಿ ಸಚಿವ ಎನ್​.ಚೆಲುವರಾಯ ಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು. ಸೋಶಿಯಲ್​ ಮೀಡಿಯಾ ಮೂಲಕ ನವ ದಂಪತಿಗೆ ಶುಭ ಹಾರೈಸುತ್ತಿದ್ದಾರೆ.

ಚಿತ್ರರಂಗದಲ್ಲಿ ಎಸ್​. ನಾರಾಯಣ್​ ನಟನಾಗಿ, ನಿರ್ದೇಶಕನಾಗಿ ಅವರು ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿ ದ್ದಾರೆ. ಅವರ ಮೊದಲ ಪುತ್ರ ಪವನ್​ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದಾರೆ. ಎರಡನೇ ಪುತ್ರ ಪಂಕಜ್​ ಅವರು ಹಲವು ಸಿನಿಮಾ ಗಳಲ್ಲಿ ನಟಿಸಿದ್ದಾರೆ.

‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

error: Content is protected !!