Saturday, 27th July 2024

ಹೇಳಿಕೆ ವಾಪಸ್‌: ವಿವಾದಕ್ಕೆ ತೆರೆ ಎಳೆದ ಬಾಬಾ ರಾಮದೇವ್‌

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪತ್ರ ಬರೆದ ಬೆನ್ನಲ್ಲೇ ಬಾಬಾ ರಾಮದೇವ್ ಅವರು ಅಲೋಪಥಿ ವೈದ್ಯಕೀಯ ಪದ್ಧತಿಯ ವಿರುದ್ಧ ನೀಡಿದ್ದ ತಮ್ಮ ಹೇಳಿಕೆ ಹಿಂಪಡೆದುಕೊಂಡಿದ್ದಾರೆ.

ಅಲೋಪತಿ ಅವೈಜ್ಞಾನಿಕ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿತ್ತು.

ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು, ಕರೋನಾ ವಿರುದ್ಧದ ಹೋರಾಟದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸು ತ್ತಿರುವ ವೈದ್ಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರಾದ ಕರೋನಾ ಯೋಧರನ್ನು ಅಗೌರವಗೊಳಿಸುವ ಮೂಲಕ ಅವರ ಭಾವನೆಗೆ ಘಾಸಿಯಾಗಿದೆ. ಹೀಗಾಗಿ ತಮ್ಮ ಹೇಳಿಕೆ ಹಿಂಪಡೆಯಬೇಕೆಂದು ಪತ್ರ ಬರೆದಿದ್ದರು.

ಇದಾದ ಬಳಿಕ ಬಾಬಾ ರಾಮ್ ದೇವ್ ಅಲೋಪತಿ ಅವೈಜ್ಞಾನಿಕ ಎಂದು ನೀಡಿದ ವಿವಾದಿತ ಹೇಳಿಕೆಯನ್ನು ಹಿಂಪಡೆದುಕೊಂಡಿ ದ್ದಾರೆ.

Leave a Reply

Your email address will not be published. Required fields are marked *

error: Content is protected !!