Saturday, 27th July 2024

ಸಿಜೆಐ ಶರದ್ ಅರವಿಂದ್ ಬೋಬ್ಡೆ ಇಂದು ನಿವೃತ್ತಿ

ನವದೆಹಲಿ: ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23(ಶುಕ್ರವಾರ) ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಐತಿಹಾಸಿಕ ಅಯೋಧ್ಯೆ ತೀರ್ಪು ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ನ್ಯಾಯದಾನ ಮಾಡಿದ್ದ ಎನ್.ಎ ಬೋಬ್ಡೆ ನವೆಂಬರ್ 2019 ರಲ್ಲಿ ಭಾರತದ 47 ನೇ ಮುಖ್ಯನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು.

ಕೋವಿಡ್-19 ನಂತಹ ಸವಾಲಿನ ಪರಿಸ್ಥಿತಿಯಲ್ಲಿ ಸಿಜೆಐ ಸ್ಥಾನದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದ ಬೋಬ್ಡೆ  ಅವಧಿಯಲ್ಲಿ ಕೋರ್ಟ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯನಿರ್ವಹಿಸಿತ್ತು.

“ನ್ಯಾಯಾಧೀಶರಾಗಿ 21 ವರ್ಷಗಳ ಸೇವಾ ಅವಧಿಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಅನುಭವ ಶ್ರೀಮಂತವಾಗಿದೆ, ಸಹೋದ್ಯೋಗಿ ನ್ಯಾಯಾಧೀಶರೊಂದಿಗಿನ ನಿಕಟ ಸ್ನೇಹ ಅದ್ಭುತವಾಗಿತ್ತು” ಎಂದು ನೆನಪುಗಳನ್ನು ಮೆಲುಕು ಹಾಕಿದ್ದಾರೆ.

“ಜವಾಬ್ದಾರಿಯನ್ನು ಎನ್ ಬಿ ರಮಣ ಅವರಿಗೆ ವರ್ಗಾಯಿಸುತ್ತಿದ್ದು, (48 ನೇ ಸಿಜೆಐ) ಅವರು ಕೋರ್ಟ್ ನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!