Thursday, 28th March 2024

ಮನೀಶ್ ಸಿಸೋಡಿಯಾ ಎರಡನೇ ಸುತ್ತಿನ ವಿಚಾರಣೆ ಇಂದು

ವದೆಹಲಿ: ಅಬಕಾರಿ ನೀತಿ ಅಕ್ರಮಗಳ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ಎಎಪಿ ಮುಖಂಡ ಮನೀಶ್ ಸಿಸೋಡಿಯಾ ಅವರನ್ನು ಇಂದು ಇಡಿ ಅಧಿಕಾರಿಗಳು ಎರಡನೇ ಸುತ್ತಿನ ವಿಚಾರಣೆಗೊಳಪಡಿಸಿದರು.

ಮೊನ್ನೆಯಷ್ಟೇ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಇಡಿ ಅಧಿಕಾರಿಗಳು ಇಂದು ಮತ್ತೆ ಹಲ ವಾರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

2021-22ರ ದೆಹಲಿ ಮದ್ಯ ಅಥವಾ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿ ಸಿದಂತೆ ಫೆಬ್ರವರಿ 26 ರಂದು ಸಿಬಿಐ ಅವರನ್ನು ಬಂಧಿಸಿದ ನಂತರ ಸಿಸೋಡಿಯಾ ಅವರನ್ನು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಇತ್ತೀಚಿನವರೆಗೂ ದೆಹಲಿಯ ಉಪ ಮುಖ್ಯಮಂತ್ರಿಯಾಗಿದ್ದ ರಾಜಕಾರಣಿಯನ್ನು ಜೈಲಿನ ಸೆಲ್ ನಂಬರ್ 1 ರಲ್ಲಿ ಪ್ರಶ್ನಿಸಲು ಇಡಿ ಸ್ಥಳೀಯ ನ್ಯಾಯಾಲಯದ ಅನುಮತಿಯನ್ನು ಪಡೆದುಕೊಂಡಿದೆ.

error: Content is protected !!