Saturday, 27th April 2024

ಸಂಪುಟ ಪುನಾರಚನೆಗೆ ಮುನ್ನ ರಾಜಸ್ಥಾನ್ ಸಚಿವರ ರಾಜೀನಾಮೆ

ಜೈಪುರ : ಬಹುನಿರೀಕ್ಷಿತ ಸಂಪುಟ ಪುನಾರಚನೆಗೆ ಮುಂಚಿತವಾಗಿ, ರಾಜಸ್ಥಾನ ಮಂತ್ರಿಮಂಡಲದ ಎಲ್ಲಾ ಸಚಿವರು ಶನಿವಾರ ರಾಜೀನಾಮೆ ನೀಡಿದ್ದಾರೆ.

ಭಾನುವಾರ ನಿಗದಿಯಾಗಿರುವ ಕಾಂಗ್ರೆಸ್ ಸಮಿತಿ ಸಭೆಗೂ ಮುನ್ನ ಈ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನೇತೃತ್ವದ ಸಂಪುಟ ಸಭೆಯು ಶನಿವಾರ ಜೈಪುರದಲ್ಲಿ , ಅವರ ನಿವಾಸದಲ್ಲಿ ನಡೆಯಿತು. ಸಭೆಯ ನಂತರ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ಗೋವಿಂದ್ ಸಿಂಗ್ ದೋಟಾಸ್ರಾ ಅವರು ಸಭೆಯ ಆರಂಭದಲ್ಲಿ ಪ್ರಸ್ತಾಪ ಮಂಡಿಸಿದ್ದರು. ನಂತರ ಎಲ್ಲಾ ಸಚಿವರು ರಾಜೀನಾಮೆ ನೀಡಿದರು.

 

Leave a Reply

Your email address will not be published. Required fields are marked *

error: Content is protected !!