Sunday, 28th April 2024

ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಜಾರಿ

ಶ್ರೀನಗರ: ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆ(ಟಿ20 ವಿಶ್ವಕಪ್ ಸರಣಿಯ ಕ್ರಿಕೆಟ್ ಪಂದ್ಯ) ಯಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ ಯುಎಪಿಎ ಜಾರಿಗೊಳಿಸಲಾಗಿದೆ.

ಪ್ರಕರಣಗಳು ಶ್ರೀನಗರದಲ್ಲಿ ಯುಎಪಿಎ ಅಡಿ ದಾಖಲಾಗಿದ್ದು, ಕರಣ್ ನಗರ ಹಾಗೂ ಎಸ್ ಕೆಐಎಂಎಸ್ ಸೌರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸ ಲಾಗಿದೆ.

ಕಣಿವೆಯಲ್ಲಿ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿವೆ.

ಪಾಕಿಸ್ತಾನ ಗೆಲ್ಲುತ್ತಿದ್ದಂತೆಯೇ ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಪಟಾಕಿ ಹೊಡೆದು ಸಂಭ್ರಮಾಚರಣೆ ಮಾಡಲಾಗಿತ್ತು.

ವಿದ್ಯಾರ್ಥಿಗಳ ವಿರುದ್ಧ ದಾಖಲಿಸಲಾಗಿರುವ ಯುಎಪಿಎ ಪ್ರಕರಣಗಳನ್ನು ಮಾನವೀಯ ನೆಲೆಗಟ್ಟಿನಲ್ಲಿ ವಾಪಸ್ ಪಡೆಯು ವಂತೆ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಮನೋಜ್ ಸಿನ್ಹಾಗೆ ಜಮ್ಮು-ಕಾಶ್ಮೀರ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಜಾರಿಗೊಳಿಸುವುದು ಅತ್ಯಂತ ಕಠಿಣ ಶಿಕ್ಷೆಯಾಗಿದ್ದು, ಅವರ ಭವಿಷ್ಯಕ್ಕೇ ಮುಳುವಾಗಲಿದೆ. ಅವರ ವಿರುದ್ಧದ ಈ ಕ್ರಮ ಅವರ ಭವಿಷ್ಯವನ್ನೇ ಹಾಳುಮಾಡಲಿದೆ” ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!