ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ತಾನು ಸತ್ತರೆ ಒಂಟಿಯಾಗ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಇಸ್ರೋ ನಿವೃತ್ತ ಉದ್ಯೋಗಿ!

ತಾನು ಸತ್ತರೆ ಒಂಟಿಯಾಗ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ!

Bengaluru Murder Case: ಬೆಂಗಳೂರು ಹೊರವಲಯದ ಆವಲಹಳ್ಳಿ ಅಪಾರ್ಟ್‌ನಲ್ಲಿ ಕೊಲೆ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ವೃದ್ಧ ವ್ಯಕ್ತಿಯೊಬ್ಬ, ತಾನು ಆತ್ಮಹತ್ಯೆ ಮಾಡಿಕೊಂಡರೆ ಪತ್ನಿ ಒಂಟಿಯಾಗುತ್ತಾಳೆ ಎಂಧು ಆಕೆಯನ್ನು ಕೊಲೆ ಮಾಡಿದ್ದು, ನಂತರ ಆತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬ್ಲಿಂಕ್‌ಇಟ್‌ನಿಂದ ಖರೀದಿಸಿದ ಚಾಕುವಿನಿಂದ 2 ಕೊಲೆ; ಇ-ಕಾಮರ್ಸ್ ಕಂಪನಿ ವಿರುದ್ಧ ಪ್ರಕರಣ ದಾಖಲು

ಬ್ಲಿಂಕ್‌ಇಟ್‌ನಿಂದ ಖರೀದಿಸಿದ ಚಾಕುವಿನಿಂದ ಇಬ್ಬರ ಕೊಲೆ

Police raid BlinkIt stores: ಕೊಲೆಗಳಲ್ಲಿ ಹೆಚ್ಚಾಗಿ ಬಳಸುವ ಬಟನ್ ಚಾಕುಗಳು ಅಥವಾ ಬಟನ್ ಲಾಕ್ ಚಾಕುಗಳನ್ನು ಮಾರಾಟ ಮಾಡಿದ್ದಕ್ಕಾಗಿ ಆನ್‌ಲೈನ್ ವಿತರಣಾ ಕಂಪನಿ ಬ್ಲಿಂಕ್‌ಇಟ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಶ್ಚಿಮ ದೆಹಲಿಯಲ್ಲಿ ನಡೆದ ಎರಡು ಪ್ರತ್ಯೇಕ ಕೊಲೆಗಳ ತನಿಖೆಯ ಸಮಯದಲ್ಲಿ, ಎರಡೂ ಅಪರಾಧಗಳಲ್ಲಿ ಬಳಸಲಾದ ಚಾಕುಗಳನ್ನು ಬ್ಲಿಂಕ್‌ಇಟ್ ಮೂಲಕ ಖರೀದಿಸಲಾಗಿದೆ ಎಂದು ತಿಳಿದುಬಂದಿದೆ.

ʼʼಆಗಬೇಕಾದ್ದು ಆಗೋಯ್ತುʼʼ: ಗೆಳತಿಯನ್ನು ಕೊಂದಿದ್ದೇಕೆ ಎಂದು ಪ್ರಶ್ನಿಸಿದಾಗ ಪ್ರಾಯಶ್ಚಿತವೇ ಇಲ್ಲದೆ ನಕ್ಕ ಯುವಕನ ಮನಸ್ಥಿತಿಗೆ ಬೆಚ್ಚಿಬಿದ್ದ ದೇಶ

ಗೆಳತಿಯನ್ನು ಕೊಂದಿದ್ದೇಕೆ ಎಂದು ಪ್ರಶ್ನಿಸಿದ್ದಕ್ಕೆ ನಕ್ಕ ಆರೋಪಿ

Crime News: ಮಧ್ಯ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ಬೆತ್ತಲಾಗಿದ್ದ ಯುವತಿಯೊಬ್ಬಳ ಮೃತದೇಹವೊಂದು ಇತ್ತೀಚೆಗೆ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಆಕೆಯ ಗೆಳೆಯನನ್ನು ಬಂಧಿಸಲಾಗಿದೆ. ತನ್ನ ಗೆಳತಿಯನ್ನು ಕೊಂದಿದ್ದಕ್ಕೆ ಆತನಿಗೆ ಒಂಚೂರು ಪಶ್ಚಾತ್ತಾಪವಿದ್ದಂತೆ ಕಾಣಿಸುತ್ತಿಲ್ಲ. ಮಾಧ್ಯಮವೊಂದು ಕೇಳಿದ ಪ್ರಶ್ನೆಗೆ ನಕ್ಕಿದ್ದಾನೆ. ಆಗಿದ್ದು ಆಗಿ ಹೋಯ್ತು ಎಂದು ಉಡಾಫೆ ಉತ್ತರ ನೀಡಿದ್ದಾನೆ.

ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿ ಸೋರಿಕೆ: ಅಲಿಫ್ ಇಸ್ಲಾಂನನ್ನು ಇಡುಕ್ಕಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು

ನೌಕಾಪಡೆಯ ಸೂಕ್ಷ್ಮ ಮಾಹಿತಿ ಹಂಚಿಕೊಂಡ ವ್ಯಕ್ತಿಯ ಬಂಧನ

Indian Navy information leak case: ಉಡುಪಿ ಪೊಲೀಸರು ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿಯ ಸೋರಿಕೆ ಆರೋಪ ಸಂಬಂಧ ನಾಲ್ಕನೇ ಶಂಕಿತನನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಡಿಜಿಟಲ್ ಸಾಕ್ಷ್ಯಗಳು ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆ ಮುಂದುವರಿದಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ.

ಬೆಳಗಾವಿಯಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸಾವು

ಬೆಳಗಾವಿಯಲ್ಲಿ ಲಾರಿ-ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸಾವು

Belagavi accident: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಜಮಖಂಡಿ-ಮೀರಜ್‌ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ, ಮೂವರು ಮೃತಪಟ್ಟಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆನ್‌ ಝೀಯ ಮತ್ತೊಂದು ಅವಾಂತರ; ಕ್ಷುಲ್ಲಕ ಕಾರಣಕ್ಕೆ ಸೋದರತ್ತೆಯನ್ನೇ ಹತ್ಯೆಗೈದ 15 ವರ್ಷದ ಬಾಲಕ

ಸೋದರತ್ತೆಯನ್ನು ಬರ್ಬರವಾಗಿ ಕೊಂದ ಹದಿಹರೆಯದ ಬಾಲಕ

Crime News: ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಕೋಪಗೊಂಡ ಬಾಲಕನೊಬ್ಬ ತನ್ನ ಸೋದರತ್ತೆಯನ್ನು ಬಿದಿರಿನ ಕೋಲಿನಿಂದ ಹೊಡೆದು ಕೊಲೆ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ವಸಾಯಿಯಲ್ಲಿ ನಡೆದಿದೆ. ತನ್ನ ಅಪರಾಧವನ್ನು ಮುಚ್ಚಿಹಾಕಲು ಬಾಲಕ ತನ್ನ ಹದಿಹರೆಯದ ಸ್ನೇಹಿತನ ಸಹಾಯ ಪಡೆದಿದ್ದಾನೆ. ಈ ಕೊಲೆಯ ಕೃತ್ಯ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಉಡುಪಿಯಲ್ಲಿ ಪಾದಚಾರಿಗೆ ಡಿಕ್ಕಿ ಹೊಡೆದು ಮೈಮೇಲೆ ಹರಿದ ಕ್ರೇನ್; ಬೆಚ್ಚಿಬೀಳಿಸುವ ವಿಡಿಯೊ ಇಲ್ಲಿದೆ

ಪೆರಂಪಳ್ಳಿಯಲ್ಲಿ ಪಾದಚಾರಿಗೆ ಕ್ರೇನ್ ಡಿಕ್ಕಿ

ಉಡುಪಿ ಜಿಲ್ಲೆಯ ಪೆರಂಪಳ್ಳಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕ್ರೇನ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ. ಇದರ ಭಯಾನಕ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಎದುರು ಬರುತ್ತಿದ್ದ ಕಾರಿಗೆ ಕ್ರೇನ್ ಚಾಲಕ ದಾರಿ ಬಿಟ್ಟು ಕೊಡುವಾಗ ಈ ಅಪಘಾತ ಸಂಭವಿಸಿದೆ.

ಮಂಗಳಮುಖಿ ಜತೆ ಪ್ರೀತಿಯಲ್ಲಿದ್ದ ಯುವಕ; ಬಾಡಿಗೆ ಮನೆಯಲ್ಲಿ ಇಬ್ಬರೂ ಅನುಮಾನಾಸ್ಪದ ಸಾವು

ಬಾಡಿಗೆ ಮನೆಯಲ್ಲಿ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದ ಸಾವು

Ballari News: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ಯುವಕನೊಬ್ಬ, ಬಳ್ಳಾರಿ ತಾಲೂಕಿನ ಚಾಗನೂರ ಗ್ರಾಮದ ಮಂಗಳಮುಖಿಯನ್ನು ಪ್ರೀತಿಸುತ್ತಿದ್ದ. ಹಲವು ವರ್ಷಗಳಿಂದ ಒಟ್ಟಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ, ಇದೀಗ ಇಬ್ಬರೂ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಮತ್ತೊಂದು ಬೆಂಕಿ ದುರಂತ; ಹಗಲಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌

ಬೆಂಕಿ ದುರಂತ; ಹಗಲಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌

ರಾಜ್ಯದಲ್ಲಿ ಇತ್ತೀಚೆಗೆ ಸಾಲು ಸಾಲು ಖಾಸಗಿ ಬಸ್‌ಗಳು ಬೆಂಕಿ ದುರಂತಕ್ಕೆ ಸಿಲುಕುತ್ತಿವೆ. ಇದೀಗ ಚಂದ್ರಲೇಔಟ್ ಬಿಎಂಟಿಸಿ ಡಿಪೋ (BMTC) ಸಮೀಪದಲ್ಲಿ ನಿಂತಿದ್ದ ಹೊಸ ಖಾಸಗಿ ಬಸ್‌ವೊಂದು ಹಠಾತ್ ಹೊತ್ತಿ ಉರಿದಿದೆ. ಈ ಘಟನೆ ಇಂದು 10.20ರ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ಗೋಡೆ ಮೇಲೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ವಕೀಲನ ಮೇಲೆ ಹಲ್ಲೆ;  ಪೊಲೀಸ್‌  ಕಾನ್ಸ್‌ಟೇಬಲ್ ವಶಕ್ಕೆ

ವಕೀಲನ ಮೇಲೆ ಹಲ್ಲೆ; ಪೊಲೀಸ್‌ ಕಾನ್ಸ್‌ಟೇಬಲ್ ವಶಕ್ಕೆ

ಗೋಡೆ ಮೇಲೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ವಕೀಲರೊಬ್ಬರ ಮೇಲೆ ಹಲ್ಲೆಗೈದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬನನ್ನು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್; ಮರುಪರಿಶೀಲನಾ‌ ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್‌

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಜೈಲು ಸೇರಿದ್ದ ಸೂರಜ್ ರೇವಣ್ಣ, ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದರು.

ಅತ್ಯಾಚಾರ ಪ್ರಕರಣ: 31 ವಾರಗಳ ಗರ್ಭಿಣಿ ಹದಿಹರೆಯದ ಸಂತ್ರಸ್ತೆಯ ಗರ್ಭಪಾತಕ್ಕೆ ಕೋರ್ಟ್‌ ಅನುಮತಿ

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿ

ಅತ್ಯಾಚಾರಕ್ಕೆ ಒಳಗಾಗಿದ್ದ ಹದಿಹರೆಯದ ಸಂತ್ರಸ್ತೆ 31 ವಾರಗಳ ಗರ್ಭಿಣಿಯಾಗಿದ್ದು, ಅವಳ ಗರ್ಭಪಾತಕ್ಕೆ ನ್ಯಾಯಾಲಯ ಅನುಮತಿ ನೀಡಿದೆ. ಈ ಕುರಿತು ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಸಂತಾನೋತ್ಪತ್ತಿ ಸ್ವಾತಂತ್ರ್ಯವನ್ನು ಉಲ್ಲೇಖಿಸಿದ್ದು, ವೈದ್ಯಕೀಯ ಮಂಡಳಿಯ ಅಭಿಪ್ರಾಯ ಪಡೆದು ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯಡಿಯಲ್ಲಿ ಅನುಮತಿಯನ್ನು ನೀಡಿದೆ.

ಪ್ರೇಮಿಗಳ ದಿನವೇ ಪತ್ನಿಯ ಕೊಲೆ; ದರೋಡೆಯ  ಕಥೆ ಕಟ್ಟಿದ ಆರೋಪಿ ಪತಿ ಸಿಕ್ಕಿ ಬಿದ್ದಿದ್ದು ಹೇಗೆ?

ಪತ್ನಿಯ ಕೊಂದು ದರೋಡೆಕೋರರ ಕಥೆ ಕಟ್ಟಿದ ಆರೋಪಿ ಪತಿ

Husband killed wife: ಪ್ರೇಮಿಗಳ ದಿನವೇ ನೆತ್ತರು ಹರಿದಿದೆ. ಪ್ರೇಮಿಗಳ ದಿನದಂದು ಭೋಜನ ಮುಗಿದ ಬಳಿಕ ಪತಿಯೇ ತನ್ನ ಪತ್ನಿಯನ್ನು ಹತ್ಯೆಗೈದು, ದರೋಡೆಯ ಕಥೆ ಕಟ್ಟಿದ್ದಾನೆ. ಹರಿಯಾಣದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ದುರ್ದೈವಿಯನ್ನು ಬ್ಯಾಂಕ್ ಉದ್ಯೋಗಿ ಮಹಾಕ್ ಎಂದು ಗುರುತಿಸಲಾಗಿದೆ.

ಕ್ಯಾಬ್‌ನಲ್ಲಿ ಮಲಗಿದ್ದ ಮಗುವನ್ನು ಮರೆತ ಬೆಂಗಳೂರಿನ ದಂಪತಿ; ಮುಂದೇನಾಯ್ತು ಗೊತ್ತೆ?

ಮಗು ಮರೆತ ಬೆಂಗಳೂರಿನ ದಂಪತಿ

ಕ್ಯಾಬ್‌ನಲ್ಲಿ ಪ್ರವಾಸ ಮುಗಿಸಿ ಬಂದ ದಂಪತಿ ಮಗುವನ್ನು ಕಾರಿನಲ್ಲೇ ಮರೆತಿದ್ದರು. ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಅವರ ಸಹಾಯದಿಂದ ಮಗುವನ್ನು ಪತ್ತೆ ಮಾಡಿ ದಂಪತಿಯ ಕೈಗೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪೋಷಕರ ಬೇಜವಾಬ್ದಾರಿ ಬಗ್ಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ರೆಸ್ಟೋರೆಂಟ್ ಉದ್ಯೋಗಿಯ ದುಷ್ಕೃತ್ಯ; ದಂಪತಿಯ ಖಾಸಗಿ ಕ್ಷಣವನ್ನು ಚಿತ್ರೀಕರಿಸಿದ ಸಿಬ್ಬಂದಿ

ದಂಪತಿ ಖಾಸಗಿ ಕ್ಷಣವನ್ನು ಚಿತ್ರೀಕರಿಸಿದ ರೆಸ್ಟೋರೆಂಟ್ ಸಿಬ್ಬಂದಿ

Couple’s private video recorded: ರೆಸ್ಟೋರೆಂಟ್‌ ಒಂದರಲ್ಲಿ ಸಿಬ್ಬಂದಿ ದಂಪತಿಯ ಖಾಸಗಿ ದೃಶ್ಯವನ್ನು ಚಿತ್ರೀಕರಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಬೆಳಕಿಗೆ ಬಂದಿದೆ. ರೆಸ್ಟೋರೆಂಟ್ ಸಿಬ್ಬಂದಿಯೊಬ್ಬ ದಂಪತಿ ಖಾಸಗಿ ಕ್ಷಣಗಳಲ್ಲಿ ತೊಡಗಿರುವುದನ್ನು ಚಿತ್ರೀಕರಿಸಿದ್ದಾನೆ. ದಂಪತಿ ಉದ್ಯೋಗಿಯ ಮೇಲೆ ಅನುಮಾನ ವ್ಯಕ್ತಪಡಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ರಸ್ತೆ ದಾಟುವ ವೇಳೆ ಬೈಕ್‌ ಡಿಕ್ಕಿಯಾಗಿ ಯುವತಿ ದುರ್ಮರಣ

ಬೆಂಗಳೂರಿನಲ್ಲಿ ರಸ್ತೆ ದಾಟುವ ವೇಳೆ ಬೈಕ್‌ ಡಿಕ್ಕಿಯಾಗಿ ಯುವತಿ ದುರ್ಮರಣ

Bengaluru Accident: ಬೆಂಗಳೂರಿನ ರಾಜ್‌ಕುಮಾರ್ ರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಬಳಿ ಅಪಘಾತ ನಡೆದಿದೆ. ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿಯಾದ ಯುವತಿ, ಕೆಲಸದ ಸ್ಥಳದ ಸಮೀಪ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ಬೈಕ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಮಹಾ ಶಿವರಾತ್ರಿ ವೇಳೆ ದುರಂತ: ಸಾಹಸ ಪ್ರದರ್ಶನದ  ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಾವು

ಶಿವರಾತ್ರಿ ಮೆರವಣಿಗೆ ವೇಳೆ ದುರಂತ

ಶಿವರಾತ್ರಿ ಮೆರವಣಿಗೆ ವೇಳೆ ಸಾಹಸ ಪ್ರದರ್ಶನವೊಂದು ದುರಂತಕ್ಕೆ ಕಾರಣವಾದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಾಹಸ ಪ್ರದರ್ಶನದಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು, ಇದು ಪ್ರೇಕ್ಷಕನೊಬ್ಬನಿಗೆ ತಗಲಿದೆ. ಆತ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾನೆ.

ಪತ್ನಿ, ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿದ್ದ ಯೋಧ; ಕೌಟುಂಬಿಕ ಕಲಹ ಮೂವರ ಪ್ರಾಣ ಕಸಿಯಿತೆ?

ಪತ್ನಿ, ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಾಜಿ ಯೋಧ

Ex-serviceman kills wife and son: ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಮಾಜಿ ಯೋಧರೊಬ್ಬರು ಪತ್ನಿ ಮತ್ತು 16 ವರ್ಷದ ಮಗನನ್ನು ಮನೆಯಲ್ಲಿ ಗುಂಡಿಕ್ಕಿ ಕೊಂದು, ನಂತರ ಹತ್ತಿರದ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು 51 ವರ್ಷದ ನಿವೃತ್ತ ಸೇನಾ ಸಿಬ್ಬಂದಿ ಛೇತ್ರಮ್ ಪಾಸ್ವಾನ್ ಎಂದು ಗುರುತಿಸಲಾಗಿದೆ.

ಮೂವರು ಮಕ್ಕಳನ್ನು ಕೊಂದಿದ್ದ ಆರೋಪಿ, ಆಶ್ರಯ ನೀಡಿದ್ದ ಮಹಿಳೆಯನ್ನೂ ಬಿಡಲಿಲ್ಲ; ಭೀಕರವಾಗಿ ಹತ್ಯೆಗೈದು ಸಾವಿಗೆ ಶರಣು

ದುರಂತ ಅಂತ್ಯ ಕಂಡ ಮೂವರು ಮಕ್ಕಳನ್ನು ಕೊಂದಿದ್ದ ಕ್ರೂರಿ ಅಪ್ಪ

ತನ್ನ ಮೂವರು ಪುತ್ರರನ್ನು ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ಮತ್ತೆ ಭೀಕರ ಕೃತ್ಯ ಎಸಗಿ, ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದು ಈ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿದೆ.

blackmail: ಶೌಚಾಲಯದಲ್ಲಿ ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ದೂರು ದಾಖಲು

ಶೌಚಾಲಯದಲ್ಲಿ ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ದೂರು ದಾಖಲು

ನಟಿ ಬಾತ್‌ರೂಮ್‌ನಲ್ಲಿದ್ದಾಗ ಅಪರಿಚಿತನೊಬ್ಬ ಈ ವಿಡಿಯೋ ಮಾಡಿದ್ದಾನೆ. ಬಳಿಕ Swan.3704722 ಇನ್ಸ್ಟಾ ಅಕೌಂಟ್‌ನಿಂದ ಆಕೆಯ ಸ್ನೇಹಿತೆಯ ಅಕೌಂಟ್‌ಗೆ ನಾಲ್ಕಾರು ವೀಡಿಯೋಗಳನ್ನು ಕಳಿಸಿದ್ದ. ವಿಡಿಯೋ ಪಬ್ಲಿಕ್ ಮಾಡಬಾರದೆಂದರೆ ಇಂತಿಷ್ಟು ಹಣ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ. ವಿಡಿಯೋ ಕಾಲ್ ಮಾಡುವ ಮೂಲಕ ಮೂರ್ನಾಲ್ಕು ಬಾರಿ ಬೆದರಿಕೆ ಹಾಕಿದ್ದಾನೆ.

Self Harming: ಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿನಿ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿನಿ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ ಪದವಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ಶೋಧಿಸಲಾಗುತ್ತಿದೆ.

Murder Case: ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರರು

ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರರು

ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ ಮತ್ತು ಮಕ್ಕಳ ನಡುವೆ ತೀವ್ರ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರರು ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

Tiger death: ಹುಲಿ ಸಾವಿಗೆ ಕಾರಣ ಪತ್ತೆ, ಉರುಳಿಟ್ಟವರ ತಲಾಶೆಗೆ ಮುಂದಾದ ಇಲಾಖೆ

ಹುಲಿ ಸಾವಿಗೆ ಕಾರಣ ಪತ್ತೆ, ಉರುಳಿಟ್ಟವರ ತಲಾಶೆಗೆ ಮುಂದಾದ ಇಲಾಖೆ

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ವ್ಯಾಪ್ತಿಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಡ್ಯಾಂನಲ್ಲಿ ತೇಲುವ ಸ್ಥಿತಿಯಲ್ಲಿ ಹುಲಿಯ ಕಳೇಬರ ಸಿಕ್ಕಿತ್ತು. ಸತ್ತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಹುಲಿಯ ಕೊರಳಿಗೆ ಸ್ಕೂಟರ್ ಕ್ಲಚ್ ವೈರ್ ಸುತ್ತಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿರುವುದು ಅಧಿಕಾರಿಗಳಿಗೆ ಗೊತ್ತಾಗಿದೆ.

Stone Pelting: ಹಿಂದೂಗಳ ಮನೆ ಮೇಲೆ ನಿರಂತರ ಕಲ್ಲು ತೂರಾಟ, ಪ್ರದೇಶ ಉದ್ವಿಗ್ನ

ಹಿಂದೂಗಳ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ, ಪ್ರದೇಶ ಉದ್ವಿಗ್ನ

ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂಬ ಆರೋಪವನ್ನು ಗಾಯಾಳುಗಳು ಮತ್ತು ಸಮುದಾಯದ ಮುಖಂಡರು ಮಾಡುತ್ತಿದ್ದಾರೆ.

Loading...