ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿ ನಿಗೂಢ ಸಾವು; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿ ನಿಗೂಢ ಸಾವು

Bengaluru Woman Death Case: ಬೆಂಗಳೂರು ನಗರದ ಆಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆ ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿ ಎಂದು ತಿಳಿದುಬಂದಿದೆ. ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಮಹಿಳೆ ಸಾವು ಪ್ರಕರಣ ಬೆಳಕಿಗೆ ಬಂದಿದೆ.

Hassan News: ಅಮ್ಮನ ಜತೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಅಮ್ಮನ ಜತೆ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಟೆಕ್ಕಿ ಯುವತಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಟೆಕ್ಕಿ ಯುವತಿ ಬ್ರೈನ್‌ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ. ತಾಯಿಯ ಜತೆ ನಗುತ್ತಾ ಮಾತನಾಡುತ್ತಿದಾಗ ಏಕಾಏಕಿ ಕುಸಿದು ಬಿದ್ದಿದ್ದ ಯುವತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾರೆ.

ಥೈಲ್ಯಾಂಡ್ ರೆಸ್ಟೋರೆಂಟ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ತೀವ್ರ ಹಲ್ಲೆ: ವಿಡಿಯೊ ವೈರಲ್

ಥೈಲ್ಯಾಂಡ್ ರೆಸ್ಟೋರೆಂಟ್‌ನಲ್ಲಿ ಭಾರತೀಯ ಯುವಕನ ಮೇಲೆ ಹಲ್ಲೆ

Viral Video: ಭಾರತೀಯ ಯುವಕನ ಮೇಲೆ ಥೈಲ್ಯಾಂಡ್‌ನ ಪುಕೆಟ್‌ನಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ವಿಡಿಯೊದಲ್ಲಿ ಜಿತೇಶ್ ಎಂದು ಗುರುತಿಸಲಾದ ವ್ಯಕ್ತಿಯನ್ನು ರೆಸ್ಟೋರೆಂಟ್‌ನೊಳಗೆ ಸಿಬ್ಬಂದಿ ಥಳಿಸುತ್ತಿರುವ ದೃಶ್ಯ ಕಂಡು ಬಂದಿದೆ. ಇದನ್ನು ನೋಡಿದ ಅನೇಕರು ಆತಂಕ ವ್ಯಕ್ತ ಪಡಿಸಿದ್ದಾರೆ.

Mangaluru cooker Blast Case: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಅಪರಾಧಿ ಮೊಹಮ್ಮದ್ ಶಾರೀಕ್​ಗೆ 10 ವರ್ಷ ಜೈಲು ಶಿಕ್ಷೆ

ಕುಕ್ಕರ್ ಬಾಂಬ್ ಸ್ಫೋಟ; ಅಪರಾಧಿ ಮೊಹಮ್ಮದ್ ಶಾರೀಕ್​ಗೆ 10 ವರ್ಷ ಜೈಲು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿರುವ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಮೊಹಮ್ಮದ್ ಶಾರೀಕ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 94 ಸಾವಿರ ರೂಪಾಯಿ ದಂಡ ವಿಧಿಸಿದೆ.

ಪತಿ ಮೇಲೆ ಆ್ಯಸಿಡ್ ಎರಚಿದ ಪತ್ನಿ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಪತಿ ಮೇಲೆ ಆ್ಯಸಿಡ್ ಎರಚಿದ ಪತ್ನಿ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Wife throws acid on husband: ದಾಂಪತ್ಯ ಕಲಹದ ಬಳಿಕ ಮಹಿಳೆಯೊಬ್ಬಳು ತನ್ನ ಪತಿಯ ಮೇಲೆ ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನಡೆದಿದೆ. ಇದರ ಪರಿಣಾಮ ಪತಿ ತೀವ್ರವಾಗಿ ಗಾಯಗೊಂಡಿದ್ದು, ಕೃತ್ಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಪತ್ನಿಯನ್ನು ಕೊಂದು ಶವವನ್ನು ಮರದ ಪೆಟ್ಟಿಗೆಯಲ್ಲಿ ಹಾಕಿ ಸಿಮೆಂಟ್‌ನಿಂದ ಮುಚ್ಚಿದ ಪಾಪಿ ಪತಿ

ಪತ್ನಿಯನ್ನು ಕೊಂದು ಸಿಮೆಂಟ್‌ನಿಂದ ಮುಚ್ಚಿದ ಪಾಪಿ ಪತಿ

ಪತ್ನಿಯನ್ನು ಕೊಂದು ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿಟ್ಟು ಮಣ್ಣು ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ.

2ನೇ ಹಂತದ ಮತದಾನದ ಸಿದ್ಧತೆಯಲ್ಲಿರುವ ಪಶ್ಚಿಮ ಬಂಗಾಳದಲ್ಲಿ 100 ಕಚ್ಚಾ ಬಾಂಬ್‌ ಪತ್ತೆ; NIA ತನಿಖೆಗೆ ಚುನಾವಣಾ ಆಯೋಗ ಆದೇಶ

ಬಂಗಾಳ ಬಾಂಬ್ ಪತ್ತೆ ಪ್ರಕರಣಕ್ಕೆ NIA ಎಂಟ್ರಿ

ಪಶ್ಚಿಮ ಬಂಗಾಳದಲ್ಲಿ ಪತ್ತೆಯಾದ ಕಚ್ಚಾ ಬಾಂಬ್ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಗೆ ಒಪ್ಪಿಸಲು ಚುನಾವಣಾ ಆಯೋಗ ಸೂಚಿಸಿದೆ. ರಾಜ್ಯದಲ್ಲಿ ಶಾಂತಿಯುತ ಚುನಾವಣೆ ಖಚಿತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ಫೋಟಕಗಳ ತಯಾರಿ ಮತ್ತು ಸಂಗ್ರಹದಲ್ಲಿ ತೊಡಗಿರುವವರನ್ನು ಗುರುತಿಸಿ ಬಂಧಿಸಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದ್ದು, ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇತ್ತೀಚೆಗೆ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಕಚ್ಚಾ ಬಾಂಬ್‌ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಕಲ್ಲಂಗಡಿ ಹಣ್ಣು ಸೇವಿಸಿ ಒಂದೇ ಕುಂಟುಂಬದ ಐವರು ಸಾವು

ಕಲ್ಲಂಗಡಿ ಹಣ್ಣು ಸೇವಿಸಿ ಒಂದೇ ಕುಂಟುಂಬದ ಐವರು ಸಾವು

ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಸಭೆಯ ನಂತರ ಕಲ್ಲಂಗಡಿ ಸೇವಿಸಿದ ಶಂಕಿತ ವಿಷಪೂರಿತ ಆಹಾರ ಸೇವನೆಯಿಂದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಪುತ್ರಿಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

Belagavi shootout: ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ; ಪುತ್ರಿ ಅಪಾಯದಿಂದ ಪಾರು

ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಫೈರಿಂಗ್​ ಮಾಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Haveri News: ಹಾವೇರಿಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ಲವ್‌ ಜಿಹಾದ್‌ ಆರೋಪ

ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಲವ್‌ ಜಿಹಾದ್‌ ಆರೋಪ

Haveri love jihad case: ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಯುವತಿ ನಾಪತ್ತೆಯಾಗಿದ್ದಾಳೆ. ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ಕಾಣೆಯಾಗಿದ್ದರಿಂದ ಪೋಷಕರು ಕಂಗಾಲಾಗಿದ್ದಾರೆ. ಆದರೆ, ಯವತಿಯು ಮುಸ್ಲಿಂ ಯುವಕನ ಜತೆ ಪರಾರಿಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದು ಲವ್‌ ಜಿಹಾದ್‌ ಎಂದು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮನೆಯ ಗೇಟ್‌ಗೆ ಕಟ್ಟಿದ ನಾಯಿಗೆ ದೊಣ್ಣೆಯಿಂದ ಹೊಡೆದ ಅಪ್ಪ-ಮಗ; ಕ್ರೂರ ಕೃತ್ಯ ಕ್ಯಾಮರಾದಲ್ಲಿ ಸೆರೆ

ಕಟ್ಟಿರುವ ನಾಯಿಯನ್ನು ಥಳಿಸಿದ ದುಷ್ಕರ್ಮಿಗಳು

ಮನೆಯ ಗೇಟ್ ಗೆ ಕಟ್ಟಿದ್ದ ನಾಯಿಗೆ ಚಿತ್ರಹಿಂಸೆ ನೀಡಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಯಿಯ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಪಡೆಯುತ್ತಿದೆ.

Kodagu News: ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೈ ಸೆಕ್ಯುರಿಟಿ ಇದ್ದರೂ ಶ್ವೇತಭವನಕ್ಕೆ ಎಂಟ್ರಿ; ಟ್ರಂಪ್‌ ಮೇಲೆ ದಾಳಿ ಮಾಡಲು ಬಂದಿದ್ದ ವ್ಯಕ್ತಿ ಯಾರು?

ಶ್ವೇತಭವನದ ಭೋಜನಕೂಟದಲ್ಲಿ ಗುಂಡಿನ ದಾಳಿ

ವಾಷಿಂಗ್ಟನ್ ಡಿ.ಸಿ.ಯ ಶ್ವೇತಭವನದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ವರದಿಗಾರರ ಭೋಜನಕೂಟಕ್ಕೆ ಬಂದಿದ್ದ ಕ್ಯಾಲಿಫೋರ್ನಿಯಾದ ಟೊರೆನ್ಸ್‌ನ ಕೋಲ್ ತೋಮಸ್ ಅಲೆನ್ ಎಂಬಾತ ಭದ್ರತಾ ತಪಾಸಣೆ ಪ್ರದೇಶದ ಬಳಿ ಗುಂಡಿನ ದಾಳಿ ನಡೆಸಿದ್ದು ತಕ್ಷಣವೇ ಆತನನ್ನು ಬಂಧಿಸಲಾಗಿದ್ದು, ಉನ್ನತ ಮಟ್ಟದ ಭದ್ರತೆಯನ್ನು ಆತ ಉಲ್ಲಂಘಿಸಿದ್ದು ಹೇಗೆ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ.

ಸಾಂಬಾರ್‌ ಮಾಡಿಲ್ಲ ಎಂದು ಅಪ್ಪ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು!

ಸಾಂಬಾರ್‌ ಮಾಡಿಲ್ಲ ಎಂದು ಅಪ್ಪ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು!

ಸಾಂಬಾರ್ ಮಾಡಿಲ್ಲ ಎಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ಯುವತಿ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಘಟನೆ ನಡೆದಿದೆ. ಸದ್ಯ ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

Law Student Hospitalized: ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ವಿದ್ಯಾರ್ಥಿನಿ ಆಸ್ಪತ್ರೆ ಪಾಲು: ವಿದ್ಯಾರ್ಥಿಗಳಿಂದ ಬಾರೀ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ವಿದ್ಯಾರ್ಥಿನಿ ಆಸ್ಪತ್ರೆ ಪಾಲು

ಕೆಎಸ್‌ಆರ್‌ಟಿಸಿ ಬಸ್ ಹರಿದು ನಾಲ್ಕನೇ ಸೆಮಿಸ್ಟರ್ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ಕೂಡಲೇ ಬಸ್ ಆಕೆಯ ಕಾಲಿನ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸು ವಂತಾದ ಘಟನೆ ಎಸ್‌ಜೆಸಿಐಟಿ ಕಾಲೇಜು ಮುಂಭಾಗ ನಡೆದಿದೆ.

Actor Chetan Ahimsa: ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ; ನಟ ಚೇತನ್‌ ವಿರುದ್ಧ ಡಾ. ರಾಜ್‌ ಅಭಿಮಾನಿಗಳ ಆಕ್ರೋಶ, ದೂರು ದಾಖಲು

ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ; ಚೇತನ್‌ ಅಹಿಂಸಾ ವಿರುದ್ಧ ದೂರು

ಡಾ. ರಾಜಕುಮಾರ್ ಅವರ ಸಮಾಧಿಗಾಗಿ ಬೆಂಗಳೂರು ನಗರದ ಮಧ್ಯದಲ್ಲಿ 2.5 ಎಕರೆ ಭೂಮಿಯನ್ನು ನೀಡುವುದು ತಿಳಿವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ ಎಂದು ಫೇಸ್‌ಬುಕ್‌ನಲ್ಲಿ ನಟ ಚೇತನ್‌ ಪೋಸ್ಟ್‌ ಮಾಡಿದ್ದರು. ಈ ಬಗ್ಗೆ ಡಾ.ರಾಜ್‌ ಕುಮಾರ್‌ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ನಟನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದಾರೆ.

31 ವರ್ಷಗಳ ಹಿಂದೆ 13ರ ಹರೆಯದ ಬಾಲಕನ್ನು ಕೊಂದ ವ್ಯಕ್ತಿ ಅರೆಸ್ಟ್‌; ವೇಷ ಮರೆಸಿಕೊಂಡಾತ ಬಲೆಗೆ ಬಿದ್ದಿದ್ದು ಹೇಗೆ? ಇಲ್ಲಿದೆ ರೋಚಕ ಕಾರ್ಯಾಚರಣೆಯ ವಿವರ

31 ವರ್ಷಗಳ ಹಿಂದೆ 13ರ ಹರೆಯದ ಬಾಲಕನ್ನು ಕೊಂದ ವ್ಯಕ್ತಿ ಈಗ ಅರೆಸ್ಟ್‌

31 ವರ್ಷಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆ ಕೊಲೆ ಪ್ರಕರಣದ ಅಪರಾಧಿಯನ್ನು ಪೊಲೀಸರು ಬಂಧಿಸಿದ್ದಾರೆ. 1995ರಲ್ಲಿ ಬಾಲಕನನ್ನು ಕೊಲೆ ಮಾಡಿ ತಲೆ ಮರೆಸಿಕೊಂಡು, ಬೇರೆ ಬೇರೆ ಹೆಸರಿನಿಂದ ಗುರುತಿಸಿಕೊಂಡಿದ್ದ ಸಲೀಂ ಖಾನ್‌ ಆಲಿಯಾಸ್‌ ಸಲೀಂ ವಾಸ್ತಿಕ್‌ನನ್ನು ದೆಹಲಿ ಪೊಲೀಸರು ಉತ್ತರ ಪ್ರದೇಶದ ಗಾಜಿಯಾಬಾದ್‌ನ ಲೋನಿಯಲ್ಲಿ ಬಂಧಿಸಿದ್ದಾರೆ.

Kalaburagi News: ಆಟೋ ಪಕ್ಕಕ್ಕೆ ಹಾಕು ಎಂದಿದ್ದಕ್ಕೆ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ

ಆಟೋ ಪಕ್ಕಕ್ಕೆ ಹಾಕು ಎಂದಿದ್ದಕ್ಕೆ ಸಹೋದರರ ಮೇಲೆ ಹಲ್ಲೆ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳಾದ ತೋಟೆಂದ್ರ ಮತ್ತು ಸುನೀಲ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ತೆಗೆಯಲು ಹೇಳಿದ್ದಕ್ಕೆ ಸಹೋದರರ ಮೇಲೆ ದಾಳಿ ನಡೆದಿದೆ.

Vinay Kulakarni: ಶಾಸಕ ಸ್ಥಾನ ಉಳಿಸಿಕೊಳ್ಳಲು ಮುಂದಾದ ವಿನಯ್‌ ಕುಲಕರ್ಣಿ, ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ

ಜೀವಾವಧಿ ಶಿಕ್ಷೆಗೆ ತಡೆ ಕೋರಿ ವಿನಯ್‌ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ

ಕೆಳಹಂತದ ನ್ಯಾಯಾಲಯ ನೀಡಿದ ತೀರ್ಪಿಗೆ ತಡೆ ನೀಡಬೇಕು ಮತ್ತು ತಮಗೆ ವಿಧಿಸಲಾದ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ವಿನಯ್‌ ಹೈಕೋರ್ಟ್‌ಗೆ ನೀಡಿದ ಅರ್ಜಿಯ ಮುಖ್ಯ ಉದ್ದೇಶವಾಗಿದೆ. ಮೇಲ್ಮನವಿ ಇತ್ಯರ್ಥವಾಗುವವರೆಗೆ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂಬ ವಿನಂತಿಯನ್ನೂ ಅವರು ನ್ಯಾಯಾಲಯದ ಮುಂದೆ ಇಡುವ ಸಾಧ್ಯತೆಯಿದೆ.

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಬಸ್‌ ಪಲ್ಟಿ, 10 ಮಂದಿಗೆ ಗಂಭೀರ ಗಾಯ

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; 10 ಜನರಿಗೆ ಗಾಯ

Chincholi Road Accident: ಚಿಂಚೋಳಿ ತಾಲೂಕಿನ ಬೀದರ್-ಮಹಬೂಬ್ ನಗರ ರಾಷ್ಟ್ರೀಯ ಹೆದ್ದಾರಿಯ ಪೋಲಕಪಳ್ಳಿ ತಾಂಡಾ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್, ಸಿಮೆಂಟ್ ಟ್ಯಾಂಕರ್ ಹಾಗೂ ಟಂ ಟಂ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

ಗೆಳೆಯನೊಟ್ಟಿಗೆ ಓಡಿ ಹೋದ ಯುವತಿ; ಯುವಕನ ವೃದ್ಧ ತಂದೆಯನ್ನು ಅಪಹರಿಸಿ ಮೂತ್ರ ಕುಡಿಸಿ ಚಿತ್ರಹಿಂಸೆ!

ವೃದ್ಧ ವ್ಯಕ್ತಿಯನ್ನು ಥಳಿಸಿ ಮೂತ್ರ ಕುಡಿಸಿದ ಪಾಪಿಗಳು

crime news: ಯುವತಿ ಓಡಿಹೋಗಿದ್ದಕ್ಕೆ ಕೋಪಗೊಂಡ ಆಕೆಯ ಕುಟುಂಬಸ್ಥರು ವ್ಯಕ್ತಿಯ ಕುಟುಂಬದ 70 ವರ್ಷದ ವೃದ್ಧರೊಬ್ಬರನ್ನು ಅಪಹರಿಸಿ, ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 70 ವರ್ಷದ ವ್ಯಕ್ತಿಯನ್ನು ಅಪಹರಿಸಿ, ಅವರ ಮಗ ಓಡಿಹೋದ ಯುವತಿಯ ಕುಟುಂಬದವರು ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ.

ಮಾಜಿ ಐಆರ್‌ಎಸ್‌ ಅಧಿಕಾರಿ ಪುತ್ರಿ ಕೊಲೆ ಪ್ರಕರಣ; ವಿಚಾರಣೆಯಲ್ಲಿ ಹತ್ಯೆ ಬಗ್ಗೆ ಹಂತಕ ಹೇಳಿದ್ದೇನು?

ಮಾಜಿ ಐಆರ್‌ಎಸ್‌ ಅಧಿಕಾರಿ ಪುತ್ರಿ ಕೊಲೆ ಆಗಿದ್ದೇಕೆ? ಇಲ್ಲಿದೆ ಕಾರಣ

EX IRS Officer Daughter Murder : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಐಆರ್‌ಎಸ್ ಅಧಿಕಾರಿಯ ಪುತ್ರಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ದೇಶವನ್ನೇ ಬೆಚ್ಚಿಬೀಳಿಸಿತ್ತು. ತಾನು ಕೊಲೆ ಮಾಡುವ ಉದ್ದೇಶ ಹೊಂದಿರಲಿಲ್ಲ ಎಂದು ಆರೋಪಿ ಹೇಳಿದ್ದಾನೆ. ಸಹೋದರಿ ಹಣ ಕೊಡಲಿಲ್ಲ, ಹೀಗಾಗಿ ಕೊಂದೆ. ಕೊಲೆ ಮಾಡುವ ಉದ್ದೇಶವಿರಲಿಲ್ಲ ಎಂದು ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾನೆ.

Fraud Case: ಯುವತಿಗೆ ಮಗು ನೀಡಿ ಮೋಸ; ಪುತ್ತೂರು ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಮಹತ್ವದ ಆದೇಶ

ಯುವತಿಗೆ ಮಗು ನೀಡಿ ಮೋಸ; ಪುತ್ತೂರು ಪ್ರಕರಣದಲ್ಲಿ ಹೈಕೋರ್ಟ್‌ ಮಹತ್ವದ ಆದೇಶ

ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಆಕೆಯನ್ನು ಆರೋಪಿ ಮದುವೆಯಾಗುವುದೇ ಉತ್ತಮ. ಯುವತಿ ಮತ್ತು ಮಗುವನ್ನು ಅನಾಥ ಆಗಿಸುವುದು ಸರಿಯಲ್ಲ. ತಂದೆ ಆಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿಯ ಕರ್ತವ್ಯ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.ಇದೀಗ ಜೀವನಾಂಶ ಆದೇಶ ಕೂಡ ನೀಡಿದೆ.

Girl Death: ಬಾಲಕಿಗೆ ಮೃತ್ಯುವಾದ ಜೋಕಾಲಿ, ಆಟವಾಡುವ ವೇಳೆ ಕುಣಿಕೆ ಬಿದ್ದು ಸಾವು

ಬಾಲಕಿಗೆ ಮೃತ್ಯುವಾದ ಜೋಕಾಲಿ, ಆಟವಾಡುವ ವೇಳೆ ಕುಣಿಕೆ ಬಿದ್ದು ಸಾವು

ಕೋಣೆಯ ಒಳಗೆ ಬಾಲಕಿ ಜೋಕಾಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಪಂಚೆಯ ಕುಣಿಕೆ ಬಾಲಕಿಯ ಕುತ್ತಿಗೆಗೆ ಬಿಗಿದುಕೊಂಡಿದೆ. ಬಾಗಿಲು ಒಳಗಿನಿಂದ ಲಾಕ್ ಆಗಿದ್ದರಿಂದ ಬಾಲಕಿಯ ಕಿರುಚಾಟ ಯಾರಿಗೂ ಕೇಳಿಸಲಿಲ್ಲ. ಉಸಿರಾಟಕ್ಕೆ ತೀವ್ರ ಅಡಚಣೆ ಉಂಟಾಗಿ ಆಕೆ ಅಲ್ಲೇ ಪ್ರಾಣ ಬಿಟ್ಟಿದ್ದಾಳೆ.

Loading...