ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಬಿರಿಯಾನಿ ಹೋಟೆಲ್‌ ಮೂಲಕ ಬರೋಬ್ಬರಿ 70,000 ಕೋಟಿ ರುಪಾಯಿ ಹಗರಣ; ಐಟಿ ದಾಳಿ ವೇಳೆ ಬಯಲಾಯ್ತು ಬೃಹತ್‌ ಜಾಲ

ಬಿರಿಯಾನಿ ಹೋಟೆಲ್‌ಗಳ ಮೇಲೆ ಐಟಿ ದಾಳಿ; 70,000 ಕೋಟಿ ರು. ಹಗರಣ ಪತ್ತೆ

ಬಿರಿಯಾನಿ ಹೋಟೆಲ್‌ಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಸುಮಾರು 70,000 ಕೋಟಿ ರುಪಾಯಿ ಬಿಲ್ಲಿಂಗ್ ಹಗರಣ ಬೆಳಕಿಗೆ ಬಂದಿದೆ. ನಕಲಿ ಬಿಲ್ಲಿಂಗ್, ತೆರಿಗೆ ತಪ್ಪಿಸುವಿಕೆ ಹಾಗೂ ಲೆಕ್ಕಪತ್ರಗಳಲ್ಲಿ ಅಕ್ರಮ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ದಾಖಲೆಗಳು, ಡಿಜಿಟಲ್ ಮಾಹಿತಿಗಳು ಮತ್ತು ಹಣಕಾಸು ವ್ಯವಹಾರಗಳ ಪರಿಶೀಲನೆ ಮುಂದುವರಿದಿದೆ.

ಅಪ್ರಾಪ್ತ ಬಾಲಕಿಗೆ 'ಫ್ಲೈಯಿಂಗ್ ಕಿಸ್' ನೀಡಿದ್ದ  ವ್ಯಕ್ತಿಗೆ 9 ವರ್ಷಗಳ ಬಳಿಕ ಜೈಲು ಶಿಕ್ಷೆ

ಮುಂಬೈನಲ್ಲಿ ಅಪ್ರಾಪ್ತೆಗೆ ಕಿರುಕುಳ: ಆರೋಪಿಗೆ 3 ವರ್ಷ ಜೈಲು

2017ರಲ್ಲಿ ಮುಂಬೈನಲ್ಲಿ 16 ವರ್ಷದ ಬಾಲಕಿಗೆ ಬೆನ್ನುಹತ್ತಿ ಕಿರುಕುಳ ನೀಡಿದ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ವಿಶೇಷ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ₹3,000 ದಂಡ ವಿಧಿಸಿದೆ. ‘ಫ್ಲೈಯಿಂಗ್ ಕಿಸ್’ ನೀಡಿದುದು ಲೈಂಗಿಕ ಸೂಚಕ ಕೃತ್ಯವಾಗಿದ್ದು, ಇದು ಬಾಲಕಿಯ ಘನತೆಯನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನೆರೆಯವರ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಾಗಿದೆ ಎಂಬ ಆರೋಪಿಯ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ.

ಪತ್ರಿಕೆಯ ಪ್ರಧಾನ ಸಂಪಾದಕನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು! ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ದಿನಪತ್ರಿಕೆಯೊಂದರ ಪ್ರಧಾನ ಸಂಪಾದಕನ ಮೇಲೆ ಗುಂಡು ಹಾರಿಸಿ ಹಲ್ಲೆ

firing in Manipur: ಮಣಿಪುರದ ಸ್ಥಳೀಯ ದಿನಪತ್ರಿಕೆಯೊಂದರ ಪ್ರಧಾನ ಸಂಪಾದಕನ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ನಹರೋಲ್ಗಿ ಥೌಡಾಂಗ್ ಎಂಬ ಸ್ಥಳೀಯ ದಿನಪತ್ರಿಕೆಯ ಪ್ರಧಾನ ಸಂಪಾದಕ ಖೋಯಿರೋಮ್ ಲೋಯಲಕ್ಪಾ ಅವರು ಕಚೇರಿಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ಶಸ್ತ್ರಸಜ್ಜಿತ ದಾಳಿಕೋರರು ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ.

14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೌಲ್ವಿ; ಮಗುವಿಗೆ ಜನ್ಮಕೊಟ್ಟ ಅಪ್ರಾಪ್ತೆ!

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೌಲಾನಾ

Crime News: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಮೌಲಾನನೊಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬಾಲಕಿಗೆ ಹಠಾತ್ತನೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡ ಬಳಿಕವೇ ವಿಚಾರ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮಹಿಳೆಯನ್ನು ಮಂತ್ರವಾದಿ ಎಂದು ಆರೋಪಿಸಿ ಮಗು ಸಮೇತ ಸುಟ್ಟು ಹಾಕಿದ ಗ್ರಾಮಸ್ಥರು; ಕೂದಲೆಳೆ ಅಂತರದಲ್ಲಿ ಪತಿ ಪಾರು

ಮಹಿಳೆ, ಮಗುವನ್ನು ಸುಟ್ಟು ಕೊಂದ ದುಷ್ಕರ್ಮಿಗಳು

ಮಹಿಳೆಯನ್ನು ಮಂತ್ರವಾದಿ ಎಂದು ಹೇಳಿ ಮಗು ಸಮೇತ ಸೀಮೆಎಣ್ಣೆ ಹಾಕಿ ಸುಟ್ಟು ಕೊಂದು ಹಾಕಿದ ಘಟನೆ ಜಾರ್ಖಂಡ್‌ನಲ್ಲಿ ಮಂಗಳವಾರ ನಡೆದಿದೆ. ಆಕೆಯ ಪತಿಯನ್ನು ಕೂಡ ಗುಂಪು ಕೊಲ್ಲಲು ಪ್ರಯತ್ನಿಸಿದ್ದು, ಅದೃಷ್ಟವಶಾತ್ ಆತ ತಪ್ಪಿಸಿಕೊಂಡಿದ್ದಾನೆ. ಈ ಕುರಿತು ಕುಮಾರ್‌ಡುಂಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

Woman Murder: ಪತಿಯೆದುರೇ ವೃದ್ಧೆಯನ್ನು ಕೊಂದು ಚಿನ್ನ ದೋಚಿದವನು ಪಕ್ಕದ ಮನೆಯವನೇ!

ಪತಿಯೆದುರೇ ವೃದ್ಧೆಯನ್ನು ಕೊಂದು ಚಿನ್ನ ದೋಚಿದವನು ಪಕ್ಕದ ಮನೆಯವನೇ!

ಕರಣ ದಾಖಲಿಸಿಕೊಂಡ ನೆಲಮಂಗಲ ಟೌನ್ ಪೊಲೀಸರು ಸಿಸಿಟಿವಿಯ ದೃಶ್ಯ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಮೈತುಂಬ ಸಾಲವಿದ್ದು, ಸಾಲ ತೀರಿಸೋಕೆ ಚಿನ್ನಾಭರಣ ದೋಚುವ ಸ್ಕೆಚ್ ಹಾಕಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಕೊಲೆಯಾದ ಆರು ಗಂಟೆಯಲ್ಲಿ ನೆಲಮಂಗಲ ಟೌನ್ ಪೊಲೀಸರು ಪ್ರಕರಣ ಬೇಧಿಸಿದ್ದಾರೆ.

Murder Case: ಪತ್ನಿಯನ್ನು ಕೊಂದು ಮನೆಯೊಳಗೇ ಹೂತುಹಾಕಿ ನಾಪತ್ತೆ ಕಥೆ ಕಟ್ಟಿದವನು ಅಂದರ್!

ಪತ್ನಿಯ ಕೊಂದು ಮನೆಯೊಳಗೇ ಹೂತುಹಾಕಿ ನಾಪತ್ತೆ ಕಥೆ ಕಟ್ಟಿದವ ಅಂದರ್!

ದೇವರಹಿಪ್ಪರಗಿ ನಿವಾಸಿ ಸರೋಜಿನಿ ಪ್ರಭು ರತ್ನಾಕರ (44) ಕೊಲೆಯಾದವಳು. ಈಕೆಯ ಪತಿ, ಪ್ರಭು ರತ್ನಾಕರ (46) ಕೊಲೆ ಆರೋಪಿ. ಆರೋಪಿ ಪ್ರಭು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ವಿಪರೀತ ಸಾಲ ಮಾಡಿದ್ದ. ಸಾಲಗಾರರಿಗೆ ತನ್ನ ಪತ್ನಿಯ ಹೆಸರಿನಲ್ಲಿ ಚೆಕ್ ನೀಡಿದ್ದ. ಈ ಸಂಬಂಧ ಸರೋಜಿನಿ ವಿರುದ್ಧ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇವರಿಗೆ ಆಗಾಗ ಜಗಳವಾಗುತ್ತಿತ್ತು.

Road Accident: ಬೈಕ್‌ಗೆ ಡಿಕ್ಕಿಯಾದ ಲಾರಿ, ಒಂದೇ ಕುಟುಂಬದ ಮೂವರು ಸಾವು

ಬೈಕ್‌ಗೆ ಡಿಕ್ಕಿಯಾದ ಲಾರಿ, ಒಂದೇ ಕುಟುಂಬದ ಮೂವರು ಸಾವು

ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Honour Killing: ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ: ಗರ್ಭಿಣಿ ತಂಗಿಯನ್ನು ಕೊಡಲಿಯಿಂದ ಕೊಚ್ಚಿದ ಪಾಪಿ

ಮರ್ಯಾದಾ ಹತ್ಯೆಗೆ ಯತ್ನ: ಗರ್ಭಿಣಿ ತಂಗಿಯನ್ನು ಕೊಡಲಿಯಿಂದ ಕೊಚ್ಚಿದ ಪಾಪಿ

ಕೊಪ್ಪಳ ತಾಲ್ಲೂಕಿನ ಹಂದ್ರಾಳದಲ್ಲಿ ಮರ್ಯಾದಾ ಹತ್ಯೆಗೆ ಯತ್ನ ನಡೆದಿದೆ. 4 ತಿಂಗಳ ಗರ್ಭಿಣಿಯಾಗಿದ್ದ ಮೀನಾಕ್ಷಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈಯೋದಕ್ಕೆ ಅಣ್ಣ ಮಂಜುನಾಥ್ ಯತ್ನಿಸಿದ್ದಾನೆ. ಮೀನಾಕ್ಷಿಯ ಪತಿ ಉದಯನ ಸಹೋದರನ ಮದುವೆಗೆ ದಂಪತಿ ಬಂದಾಗ ಈ ಕೃತ್ಯ ಎಸಗಲಾಗಿದೆ.

Kalaburagi news: ಘೋರ ದುರಂತ, ಸೆಪ್ಟಿಕ್‌ ಟ್ಯಾಂಕ್‌ ಸ್ವಚ್ಛ ಮಾಡಲು ಇಳಿದ ಇಬ್ಬರು ಸಾವು

ಘೋರ ದುರಂತ, ಸೆಪ್ಟಿಕ್‌ ಟ್ಯಾಂಕ್‌ ಸ್ವಚ್ಛ ಮಾಡಲು ಇಳಿದ ಇಬ್ಬರು ಸಾವು

ಶಿವಕುಮಾ‌ರ್ ಅವರು ತಮ್ಮ ಮನೆಯಲ್ಲಿನ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ರತನ್ ಎಂಬವರಿಗೆ ಹೇಳಿದ್ದು ಆತ ಟ್ಯಾಂಕ್ ಒಳಗಡೆ ಇಳಿದಿದ್ದರು. ರತನ್ ಒಳಗೆ ಇಳಿದು ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ರತನ್ ಮೇಲೆ ಬರದಿದ್ದಾಗ ಆತನ ರಕ್ಷಣೆಗೆ ತೆರಳಿದ ಮನೆಯ ಮಾಲೀಕ ಶಿವಕುಮಾರ್‌ ಅವರೂ ಉಸಿರುಗಟ್ಟಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.

Murder case: ವ್ಹೀಲ್‌ ಚೇರ್‌ನಲ್ಲಿದ್ದ ಪತಿಯ ಎದುರೇ ಪತ್ನಿಯನ್ನು ಕೊಂದು ಚಿನ್ನಾಭರಣ ದೋಚಿ ಪರಾರಿ

ವ್ಹೀಲ್‌ ಚೇರ್‌ನಲ್ಲಿದ್ದ ಪತಿಯ ಎದುರೇ ಪತ್ನಿಯ ಕೊಂದು ಚಿನ್ನಾಭರಣ ದರೋಡೆ

ಮಾಹಿತಿಗಳ ಪ್ರಕಾರ ಮಧ್ಯಾಹ್ನ 4 ಗಂಟೆ ಸರಿಸುಮಾರಿಗೆ ಪೇಟೆ ಬೀದಿಯಿಂದ ಮನೆಗೆ ಬಂದಿದ್ದ ಶೋಭಾರನ್ನು ಆರೋಪಿ ಹಿಂಬಾಲಿಸಿದ್ದಾನೆ. ಇವರ ಮೈಮೇಲಿದ್ದ ಸುಮಾರು 100 ಗ್ರಾಂಗಳಿಗೂ ಹೆಚ್ಚು ತೂಕದ ಒಡವೆ ಆರೋಪಿ ಕಣ್ಣಿಗೆ ಬಿದ್ದಿದೆ. ಹೀಗಾಗಿ ನೀರು ಕೇಳುವ ನೆಪದಲ್ಲಿ ಮನೆಗೆ ಬಂದ ದುಷ್ಕರ್ಮಿ, ತನ್ನ ಬಳಿಯಿದ್ದ ಚಾಕುವಿನಿಂದ ಶೋಭಾರ ಕತ್ತು ಸೀಳಿದ್ದಾನೆ.

ಮದುವೆಯಾದ ಕೆಲವೇ ದಿನಕ್ಕೆ ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಹತೈಗೈದ ಮಾಜಿ ಪತಿ

ಮಾಜಿ ಪತಿಯಿಂದ ಸಾಫ್ಟ್‌ವೇರ್ ಉದ್ಯೋಗಿಯ ಹತ್ಯೆ

ಹೈದರಾಬಾದ್ ವನಸ್ಥಲಿಪುರಂ ಪ್ರದೇಶದಲ್ಲಿ 36 ವರ್ಷದ ಸಾಫ್ಟ್‌ವೇರ್ ಉದ್ಯೋಗಿಯನ್ನು ಆಕೆಯ ಮಾಜಿ ಪತಿ ಕ್ರೂರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ವಿಚ್ಛೇದನದ ಬಳಿಕ ಮಹಿಳೆ ಮರುಮದುವೆಯಾಗಿದ್ದ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿ ಮನೆಗೆ ತೆರಳಿ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ತಲೆಗೆ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾನು ಸತ್ತರೆ ಒಂಟಿಯಾಗ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಇಸ್ರೋ ನಿವೃತ್ತ ಉದ್ಯೋಗಿ!

ತಾನು ಸತ್ತರೆ ಒಂಟಿಯಾಗ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ!

Bengaluru Murder Case: ಬೆಂಗಳೂರು ಹೊರವಲಯದ ಆವಲಹಳ್ಳಿ ಅಪಾರ್ಟ್‌ನಲ್ಲಿ ಕೊಲೆ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ವೃದ್ಧ ವ್ಯಕ್ತಿಯೊಬ್ಬ, ತಾನು ಆತ್ಮಹತ್ಯೆ ಮಾಡಿಕೊಂಡರೆ ಪತ್ನಿ ಒಂಟಿಯಾಗುತ್ತಾಳೆ ಎಂಧು ಆಕೆಯನ್ನು ಕೊಲೆ ಮಾಡಿದ್ದು, ನಂತರ ಆತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬ್ಲಿಂಕ್‌ಇಟ್‌ನಿಂದ ಖರೀದಿಸಿದ ಚಾಕುವಿನಿಂದ 2 ಕೊಲೆ; ಇ-ಕಾಮರ್ಸ್ ಕಂಪನಿ ವಿರುದ್ಧ ಪ್ರಕರಣ ದಾಖಲು

ಬ್ಲಿಂಕ್‌ಇಟ್‌ನಿಂದ ಖರೀದಿಸಿದ ಚಾಕುವಿನಿಂದ ಇಬ್ಬರ ಕೊಲೆ

Police raid BlinkIt stores: ಕೊಲೆಗಳಲ್ಲಿ ಹೆಚ್ಚಾಗಿ ಬಳಸುವ ಬಟನ್ ಚಾಕುಗಳು ಅಥವಾ ಬಟನ್ ಲಾಕ್ ಚಾಕುಗಳನ್ನು ಮಾರಾಟ ಮಾಡಿದ್ದಕ್ಕಾಗಿ ಆನ್‌ಲೈನ್ ವಿತರಣಾ ಕಂಪನಿ ಬ್ಲಿಂಕ್‌ಇಟ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಶ್ಚಿಮ ದೆಹಲಿಯಲ್ಲಿ ನಡೆದ ಎರಡು ಪ್ರತ್ಯೇಕ ಕೊಲೆಗಳ ತನಿಖೆಯ ಸಮಯದಲ್ಲಿ, ಎರಡೂ ಅಪರಾಧಗಳಲ್ಲಿ ಬಳಸಲಾದ ಚಾಕುಗಳನ್ನು ಬ್ಲಿಂಕ್‌ಇಟ್ ಮೂಲಕ ಖರೀದಿಸಲಾಗಿದೆ ಎಂದು ತಿಳಿದುಬಂದಿದೆ.

ʼʼಆಗಬೇಕಾದ್ದು ಆಗೋಯ್ತುʼʼ: ಗೆಳತಿಯನ್ನು ಕೊಂದಿದ್ದೇಕೆ ಎಂದು ಪ್ರಶ್ನಿಸಿದಾಗ ಪ್ರಾಯಶ್ಚಿತವೇ ಇಲ್ಲದೆ ನಕ್ಕ ಯುವಕನ ಮನಸ್ಥಿತಿಗೆ ಬೆಚ್ಚಿಬಿದ್ದ ದೇಶ

ಗೆಳತಿಯನ್ನು ಕೊಂದಿದ್ದೇಕೆ ಎಂದು ಪ್ರಶ್ನಿಸಿದ್ದಕ್ಕೆ ನಕ್ಕ ಆರೋಪಿ

Crime News: ಮಧ್ಯ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ಬೆತ್ತಲಾಗಿದ್ದ ಯುವತಿಯೊಬ್ಬಳ ಮೃತದೇಹವೊಂದು ಇತ್ತೀಚೆಗೆ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಆಕೆಯ ಗೆಳೆಯನನ್ನು ಬಂಧಿಸಲಾಗಿದೆ. ತನ್ನ ಗೆಳತಿಯನ್ನು ಕೊಂದಿದ್ದಕ್ಕೆ ಆತನಿಗೆ ಒಂಚೂರು ಪಶ್ಚಾತ್ತಾಪವಿದ್ದಂತೆ ಕಾಣಿಸುತ್ತಿಲ್ಲ. ಮಾಧ್ಯಮವೊಂದು ಕೇಳಿದ ಪ್ರಶ್ನೆಗೆ ನಕ್ಕಿದ್ದಾನೆ. ಆಗಿದ್ದು ಆಗಿ ಹೋಯ್ತು ಎಂದು ಉಡಾಫೆ ಉತ್ತರ ನೀಡಿದ್ದಾನೆ.

ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿ ಸೋರಿಕೆ: ಅಲಿಫ್ ಇಸ್ಲಾಂನನ್ನು ಇಡುಕ್ಕಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು

ನೌಕಾಪಡೆಯ ಸೂಕ್ಷ್ಮ ಮಾಹಿತಿ ಹಂಚಿಕೊಂಡ ವ್ಯಕ್ತಿಯ ಬಂಧನ

Indian Navy information leak case: ಉಡುಪಿ ಪೊಲೀಸರು ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿಯ ಸೋರಿಕೆ ಆರೋಪ ಸಂಬಂಧ ನಾಲ್ಕನೇ ಶಂಕಿತನನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಡಿಜಿಟಲ್ ಸಾಕ್ಷ್ಯಗಳು ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆ ಮುಂದುವರಿದಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ.

ಬೆಳಗಾವಿಯಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸಾವು

ಬೆಳಗಾವಿಯಲ್ಲಿ ಲಾರಿ-ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸಾವು

Belagavi accident: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಜಮಖಂಡಿ-ಮೀರಜ್‌ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ, ಮೂವರು ಮೃತಪಟ್ಟಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆನ್‌ ಝೀಯ ಮತ್ತೊಂದು ಅವಾಂತರ; ಕ್ಷುಲ್ಲಕ ಕಾರಣಕ್ಕೆ ಸೋದರತ್ತೆಯನ್ನೇ ಹತ್ಯೆಗೈದ 15 ವರ್ಷದ ಬಾಲಕ

ಸೋದರತ್ತೆಯನ್ನು ಬರ್ಬರವಾಗಿ ಕೊಂದ ಹದಿಹರೆಯದ ಬಾಲಕ

Crime News: ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಕೋಪಗೊಂಡ ಬಾಲಕನೊಬ್ಬ ತನ್ನ ಸೋದರತ್ತೆಯನ್ನು ಬಿದಿರಿನ ಕೋಲಿನಿಂದ ಹೊಡೆದು ಕೊಲೆ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ವಸಾಯಿಯಲ್ಲಿ ನಡೆದಿದೆ. ತನ್ನ ಅಪರಾಧವನ್ನು ಮುಚ್ಚಿಹಾಕಲು ಬಾಲಕ ತನ್ನ ಹದಿಹರೆಯದ ಸ್ನೇಹಿತನ ಸಹಾಯ ಪಡೆದಿದ್ದಾನೆ. ಈ ಕೊಲೆಯ ಕೃತ್ಯ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಉಡುಪಿಯಲ್ಲಿ ಪಾದಚಾರಿಗೆ ಡಿಕ್ಕಿ ಹೊಡೆದು ಮೈಮೇಲೆ ಹರಿದ ಕ್ರೇನ್; ಬೆಚ್ಚಿಬೀಳಿಸುವ ವಿಡಿಯೊ ಇಲ್ಲಿದೆ

ಪೆರಂಪಳ್ಳಿಯಲ್ಲಿ ಪಾದಚಾರಿಗೆ ಕ್ರೇನ್ ಡಿಕ್ಕಿ

ಉಡುಪಿ ಜಿಲ್ಲೆಯ ಪೆರಂಪಳ್ಳಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕ್ರೇನ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ. ಇದರ ಭಯಾನಕ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಎದುರು ಬರುತ್ತಿದ್ದ ಕಾರಿಗೆ ಕ್ರೇನ್ ಚಾಲಕ ದಾರಿ ಬಿಟ್ಟು ಕೊಡುವಾಗ ಈ ಅಪಘಾತ ಸಂಭವಿಸಿದೆ.

ಮಂಗಳಮುಖಿ ಜತೆ ಪ್ರೀತಿಯಲ್ಲಿದ್ದ ಯುವಕ; ಬಾಡಿಗೆ ಮನೆಯಲ್ಲಿ ಇಬ್ಬರೂ ಅನುಮಾನಾಸ್ಪದ ಸಾವು

ಬಾಡಿಗೆ ಮನೆಯಲ್ಲಿ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದ ಸಾವು

Ballari News: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ಯುವಕನೊಬ್ಬ, ಬಳ್ಳಾರಿ ತಾಲೂಕಿನ ಚಾಗನೂರ ಗ್ರಾಮದ ಮಂಗಳಮುಖಿಯನ್ನು ಪ್ರೀತಿಸುತ್ತಿದ್ದ. ಹಲವು ವರ್ಷಗಳಿಂದ ಒಟ್ಟಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ, ಇದೀಗ ಇಬ್ಬರೂ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಮತ್ತೊಂದು ಬೆಂಕಿ ದುರಂತ; ಹಗಲಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌

ಬೆಂಕಿ ದುರಂತ; ಹಗಲಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌

ರಾಜ್ಯದಲ್ಲಿ ಇತ್ತೀಚೆಗೆ ಸಾಲು ಸಾಲು ಖಾಸಗಿ ಬಸ್‌ಗಳು ಬೆಂಕಿ ದುರಂತಕ್ಕೆ ಸಿಲುಕುತ್ತಿವೆ. ಇದೀಗ ಚಂದ್ರಲೇಔಟ್ ಬಿಎಂಟಿಸಿ ಡಿಪೋ (BMTC) ಸಮೀಪದಲ್ಲಿ ನಿಂತಿದ್ದ ಹೊಸ ಖಾಸಗಿ ಬಸ್‌ವೊಂದು ಹಠಾತ್ ಹೊತ್ತಿ ಉರಿದಿದೆ. ಈ ಘಟನೆ ಇಂದು 10.20ರ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ಗೋಡೆ ಮೇಲೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ವಕೀಲನ ಮೇಲೆ ಹಲ್ಲೆ;  ಪೊಲೀಸ್‌  ಕಾನ್ಸ್‌ಟೇಬಲ್ ವಶಕ್ಕೆ

ವಕೀಲನ ಮೇಲೆ ಹಲ್ಲೆ; ಪೊಲೀಸ್‌ ಕಾನ್ಸ್‌ಟೇಬಲ್ ವಶಕ್ಕೆ

ಗೋಡೆ ಮೇಲೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ವಕೀಲರೊಬ್ಬರ ಮೇಲೆ ಹಲ್ಲೆಗೈದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬನನ್ನು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್; ಮರುಪರಿಶೀಲನಾ‌ ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್‌

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಜೈಲು ಸೇರಿದ್ದ ಸೂರಜ್ ರೇವಣ್ಣ, ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದರು.

ಅತ್ಯಾಚಾರ ಪ್ರಕರಣ: 31 ವಾರಗಳ ಗರ್ಭಿಣಿ ಹದಿಹರೆಯದ ಸಂತ್ರಸ್ತೆಯ ಗರ್ಭಪಾತಕ್ಕೆ ಕೋರ್ಟ್‌ ಅನುಮತಿ

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿ

ಅತ್ಯಾಚಾರಕ್ಕೆ ಒಳಗಾಗಿದ್ದ ಹದಿಹರೆಯದ ಸಂತ್ರಸ್ತೆ 31 ವಾರಗಳ ಗರ್ಭಿಣಿಯಾಗಿದ್ದು, ಅವಳ ಗರ್ಭಪಾತಕ್ಕೆ ನ್ಯಾಯಾಲಯ ಅನುಮತಿ ನೀಡಿದೆ. ಈ ಕುರಿತು ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಸಂತಾನೋತ್ಪತ್ತಿ ಸ್ವಾತಂತ್ರ್ಯವನ್ನು ಉಲ್ಲೇಖಿಸಿದ್ದು, ವೈದ್ಯಕೀಯ ಮಂಡಳಿಯ ಅಭಿಪ್ರಾಯ ಪಡೆದು ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯಡಿಯಲ್ಲಿ ಅನುಮತಿಯನ್ನು ನೀಡಿದೆ.

Loading...