ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಗೋಡೆ ಮೇಲೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ವಕೀಲನ ಮೇಲೆ ಹಲ್ಲೆ;  ಪೊಲೀಸ್‌  ಕಾನ್ಸ್‌ಟೇಬಲ್ ವಶಕ್ಕೆ

ವಕೀಲನ ಮೇಲೆ ಹಲ್ಲೆ; ಪೊಲೀಸ್‌ ಕಾನ್ಸ್‌ಟೇಬಲ್ ವಶಕ್ಕೆ

ಗೋಡೆ ಮೇಲೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ವಕೀಲರೊಬ್ಬರ ಮೇಲೆ ಹಲ್ಲೆಗೈದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬನನ್ನು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್; ಮರುಪರಿಶೀಲನಾ‌ ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್‌

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಜೈಲು ಸೇರಿದ್ದ ಸೂರಜ್ ರೇವಣ್ಣ, ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದರು.

ಅತ್ಯಾಚಾರ ಪ್ರಕರಣ: 31 ವಾರಗಳ ಗರ್ಭಿಣಿ ಹದಿಹರೆಯದ ಸಂತ್ರಸ್ತೆಯ ಗರ್ಭಪಾತಕ್ಕೆ ಕೋರ್ಟ್‌ ಅನುಮತಿ

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿ

ಅತ್ಯಾಚಾರಕ್ಕೆ ಒಳಗಾಗಿದ್ದ ಹದಿಹರೆಯದ ಸಂತ್ರಸ್ತೆ 31 ವಾರಗಳ ಗರ್ಭಿಣಿಯಾಗಿದ್ದು, ಅವಳ ಗರ್ಭಪಾತಕ್ಕೆ ನ್ಯಾಯಾಲಯ ಅನುಮತಿ ನೀಡಿದೆ. ಈ ಕುರಿತು ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಸಂತಾನೋತ್ಪತ್ತಿ ಸ್ವಾತಂತ್ರ್ಯವನ್ನು ಉಲ್ಲೇಖಿಸಿದ್ದು, ವೈದ್ಯಕೀಯ ಮಂಡಳಿಯ ಅಭಿಪ್ರಾಯ ಪಡೆದು ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯಡಿಯಲ್ಲಿ ಅನುಮತಿಯನ್ನು ನೀಡಿದೆ.

ಪ್ರೇಮಿಗಳ ದಿನವೇ ಪತ್ನಿಯ ಕೊಲೆ; ದರೋಡೆಯ  ಕಥೆ ಕಟ್ಟಿದ ಆರೋಪಿ ಪತಿ ಸಿಕ್ಕಿ ಬಿದ್ದಿದ್ದು ಹೇಗೆ?

ಪತ್ನಿಯ ಕೊಂದು ದರೋಡೆಕೋರರ ಕಥೆ ಕಟ್ಟಿದ ಆರೋಪಿ ಪತಿ

Husband killed wife: ಪ್ರೇಮಿಗಳ ದಿನವೇ ನೆತ್ತರು ಹರಿದಿದೆ. ಪ್ರೇಮಿಗಳ ದಿನದಂದು ಭೋಜನ ಮುಗಿದ ಬಳಿಕ ಪತಿಯೇ ತನ್ನ ಪತ್ನಿಯನ್ನು ಹತ್ಯೆಗೈದು, ದರೋಡೆಯ ಕಥೆ ಕಟ್ಟಿದ್ದಾನೆ. ಹರಿಯಾಣದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ದುರ್ದೈವಿಯನ್ನು ಬ್ಯಾಂಕ್ ಉದ್ಯೋಗಿ ಮಹಾಕ್ ಎಂದು ಗುರುತಿಸಲಾಗಿದೆ.

ಕ್ಯಾಬ್‌ನಲ್ಲಿ ಮಲಗಿದ್ದ ಮಗುವನ್ನು ಮರೆತ ಬೆಂಗಳೂರಿನ ದಂಪತಿ; ಮುಂದೇನಾಯ್ತು ಗೊತ್ತೆ?

ಮಗು ಮರೆತ ಬೆಂಗಳೂರಿನ ದಂಪತಿ

ಕ್ಯಾಬ್‌ನಲ್ಲಿ ಪ್ರವಾಸ ಮುಗಿಸಿ ಬಂದ ದಂಪತಿ ಮಗುವನ್ನು ಕಾರಿನಲ್ಲೇ ಮರೆತಿದ್ದರು. ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಅವರ ಸಹಾಯದಿಂದ ಮಗುವನ್ನು ಪತ್ತೆ ಮಾಡಿ ದಂಪತಿಯ ಕೈಗೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪೋಷಕರ ಬೇಜವಾಬ್ದಾರಿ ಬಗ್ಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ರೆಸ್ಟೋರೆಂಟ್ ಉದ್ಯೋಗಿಯ ದುಷ್ಕೃತ್ಯ; ದಂಪತಿಯ ಖಾಸಗಿ ಕ್ಷಣವನ್ನು ಚಿತ್ರೀಕರಿಸಿದ ಸಿಬ್ಬಂದಿ

ದಂಪತಿ ಖಾಸಗಿ ಕ್ಷಣವನ್ನು ಚಿತ್ರೀಕರಿಸಿದ ರೆಸ್ಟೋರೆಂಟ್ ಸಿಬ್ಬಂದಿ

Couple’s private video recorded: ರೆಸ್ಟೋರೆಂಟ್‌ ಒಂದರಲ್ಲಿ ಸಿಬ್ಬಂದಿ ದಂಪತಿಯ ಖಾಸಗಿ ದೃಶ್ಯವನ್ನು ಚಿತ್ರೀಕರಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಬೆಳಕಿಗೆ ಬಂದಿದೆ. ರೆಸ್ಟೋರೆಂಟ್ ಸಿಬ್ಬಂದಿಯೊಬ್ಬ ದಂಪತಿ ಖಾಸಗಿ ಕ್ಷಣಗಳಲ್ಲಿ ತೊಡಗಿರುವುದನ್ನು ಚಿತ್ರೀಕರಿಸಿದ್ದಾನೆ. ದಂಪತಿ ಉದ್ಯೋಗಿಯ ಮೇಲೆ ಅನುಮಾನ ವ್ಯಕ್ತಪಡಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ರಸ್ತೆ ದಾಟುವ ವೇಳೆ ಬೈಕ್‌ ಡಿಕ್ಕಿಯಾಗಿ ಯುವತಿ ದುರ್ಮರಣ

ಬೆಂಗಳೂರಿನಲ್ಲಿ ರಸ್ತೆ ದಾಟುವ ವೇಳೆ ಬೈಕ್‌ ಡಿಕ್ಕಿಯಾಗಿ ಯುವತಿ ದುರ್ಮರಣ

Bengaluru Accident: ಬೆಂಗಳೂರಿನ ರಾಜ್‌ಕುಮಾರ್ ರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಬಳಿ ಅಪಘಾತ ನಡೆದಿದೆ. ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿಯಾದ ಯುವತಿ, ಕೆಲಸದ ಸ್ಥಳದ ಸಮೀಪ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ಬೈಕ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಮಹಾ ಶಿವರಾತ್ರಿ ವೇಳೆ ದುರಂತ: ಸಾಹಸ ಪ್ರದರ್ಶನದ  ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಾವು

ಶಿವರಾತ್ರಿ ಮೆರವಣಿಗೆ ವೇಳೆ ದುರಂತ

ಶಿವರಾತ್ರಿ ಮೆರವಣಿಗೆ ವೇಳೆ ಸಾಹಸ ಪ್ರದರ್ಶನವೊಂದು ದುರಂತಕ್ಕೆ ಕಾರಣವಾದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಾಹಸ ಪ್ರದರ್ಶನದಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು, ಇದು ಪ್ರೇಕ್ಷಕನೊಬ್ಬನಿಗೆ ತಗಲಿದೆ. ಆತ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾನೆ.

ಪತ್ನಿ, ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿದ್ದ ಯೋಧ; ಕೌಟುಂಬಿಕ ಕಲಹ ಮೂವರ ಪ್ರಾಣ ಕಸಿಯಿತೆ?

ಪತ್ನಿ, ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಾಜಿ ಯೋಧ

Ex-serviceman kills wife and son: ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಮಾಜಿ ಯೋಧರೊಬ್ಬರು ಪತ್ನಿ ಮತ್ತು 16 ವರ್ಷದ ಮಗನನ್ನು ಮನೆಯಲ್ಲಿ ಗುಂಡಿಕ್ಕಿ ಕೊಂದು, ನಂತರ ಹತ್ತಿರದ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು 51 ವರ್ಷದ ನಿವೃತ್ತ ಸೇನಾ ಸಿಬ್ಬಂದಿ ಛೇತ್ರಮ್ ಪಾಸ್ವಾನ್ ಎಂದು ಗುರುತಿಸಲಾಗಿದೆ.

ಮೂವರು ಮಕ್ಕಳನ್ನು ಕೊಂದಿದ್ದ ಆರೋಪಿ, ಆಶ್ರಯ ನೀಡಿದ್ದ ಮಹಿಳೆಯನ್ನೂ ಬಿಡಲಿಲ್ಲ; ಭೀಕರವಾಗಿ ಹತ್ಯೆಗೈದು ಸಾವಿಗೆ ಶರಣು

ದುರಂತ ಅಂತ್ಯ ಕಂಡ ಮೂವರು ಮಕ್ಕಳನ್ನು ಕೊಂದಿದ್ದ ಕ್ರೂರಿ ಅಪ್ಪ

ತನ್ನ ಮೂವರು ಪುತ್ರರನ್ನು ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ಮತ್ತೆ ಭೀಕರ ಕೃತ್ಯ ಎಸಗಿ, ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದು ಈ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿದೆ.

blackmail: ಶೌಚಾಲಯದಲ್ಲಿ ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ದೂರು ದಾಖಲು

ಶೌಚಾಲಯದಲ್ಲಿ ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ದೂರು ದಾಖಲು

ನಟಿ ಬಾತ್‌ರೂಮ್‌ನಲ್ಲಿದ್ದಾಗ ಅಪರಿಚಿತನೊಬ್ಬ ಈ ವಿಡಿಯೋ ಮಾಡಿದ್ದಾನೆ. ಬಳಿಕ Swan.3704722 ಇನ್ಸ್ಟಾ ಅಕೌಂಟ್‌ನಿಂದ ಆಕೆಯ ಸ್ನೇಹಿತೆಯ ಅಕೌಂಟ್‌ಗೆ ನಾಲ್ಕಾರು ವೀಡಿಯೋಗಳನ್ನು ಕಳಿಸಿದ್ದ. ವಿಡಿಯೋ ಪಬ್ಲಿಕ್ ಮಾಡಬಾರದೆಂದರೆ ಇಂತಿಷ್ಟು ಹಣ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ. ವಿಡಿಯೋ ಕಾಲ್ ಮಾಡುವ ಮೂಲಕ ಮೂರ್ನಾಲ್ಕು ಬಾರಿ ಬೆದರಿಕೆ ಹಾಕಿದ್ದಾನೆ.

Self Harming: ಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿನಿ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿನಿ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ ಪದವಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ಶೋಧಿಸಲಾಗುತ್ತಿದೆ.

Murder Case: ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರರು

ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರರು

ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ ಮತ್ತು ಮಕ್ಕಳ ನಡುವೆ ತೀವ್ರ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರರು ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

Tiger death: ಹುಲಿ ಸಾವಿಗೆ ಕಾರಣ ಪತ್ತೆ, ಉರುಳಿಟ್ಟವರ ತಲಾಶೆಗೆ ಮುಂದಾದ ಇಲಾಖೆ

ಹುಲಿ ಸಾವಿಗೆ ಕಾರಣ ಪತ್ತೆ, ಉರುಳಿಟ್ಟವರ ತಲಾಶೆಗೆ ಮುಂದಾದ ಇಲಾಖೆ

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ವ್ಯಾಪ್ತಿಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಡ್ಯಾಂನಲ್ಲಿ ತೇಲುವ ಸ್ಥಿತಿಯಲ್ಲಿ ಹುಲಿಯ ಕಳೇಬರ ಸಿಕ್ಕಿತ್ತು. ಸತ್ತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಹುಲಿಯ ಕೊರಳಿಗೆ ಸ್ಕೂಟರ್ ಕ್ಲಚ್ ವೈರ್ ಸುತ್ತಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿರುವುದು ಅಧಿಕಾರಿಗಳಿಗೆ ಗೊತ್ತಾಗಿದೆ.

Stone Pelting: ಹಿಂದೂಗಳ ಮನೆ ಮೇಲೆ ನಿರಂತರ ಕಲ್ಲು ತೂರಾಟ, ಪ್ರದೇಶ ಉದ್ವಿಗ್ನ

ಹಿಂದೂಗಳ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ, ಪ್ರದೇಶ ಉದ್ವಿಗ್ನ

ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂಬ ಆರೋಪವನ್ನು ಗಾಯಾಳುಗಳು ಮತ್ತು ಸಮುದಾಯದ ಮುಖಂಡರು ಮಾಡುತ್ತಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಇಬ್ಬರು ಪಾಕಿಸ್ತಾನಿ ಬಾಲಕರು ಸೇರಿ ಮೂವರು ಪರಾರಿ; ಹೈ ಅಲರ್ಟ್‌

ಬಾಲಾಪರಾಧಿ ಗೃಹದಿಂದ ಇಬ್ಬರು ಪಾಕಿಸ್ತಾನಿ ಬಾಲಕರು ಪರಾರಿ

ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಲ್ಲಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಮೂವರು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಂಡಿರುವ ಘಟನೆ ನಡೆದಿದೆ. ಪರಾರಿಯಾದ ಕೈದಿಗಳನ್ನು ಅಹ್ಸಾನ್ ಅನ್ವರ್ ಮತ್ತು ಮೊಹಮ್ಮದ್ ಸನಾವುಲ್ಲಾ (ಇಬ್ಬರೂ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿಗಳು) ಮತ್ತು ಜಮ್ಮು ನಿವಾಸಿ ಕರಣ್‌ಜಿತ್ ಸಿಂಗ್ ಅಲಿಯಾಸ್ ಗುಗ್ಗ ಎಂದು ಗುರುತಿಸಲಾಗಿದೆ.

Bidar News: ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಕೈಕಾಲು ತೊಳೆದುಕೊಳ್ಳಲು ಕಾರಂಜಾ ಡ್ಯಾಂನ ಕಾಲುವೆಯಲ್ಲಿ ಕಾಲುವೆಗೆ ಯುವಕ ಇಳಿದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ತಂದೆ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಯುವಕನ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ

2025ರ ಮಾರ್ಚ್‌ನಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪುರ ಬಳಿ ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಆಕೆಯ ಜತೆಗಿದ್ದ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ.

ಆಗ್ರಾ  ವಾಯುಪಡೆ ನಿಲ್ದಾಣದೊಳಗೆ ಪಾಕಿಸ್ತಾನ ಬಲೂನ್ ಪತ್ತೆ

ಆಗ್ರಾದಲ್ಲಿ ಪಾಕಿಸ್ತಾನ ಬಲೂನ್ ಪತ್ತೆ

ಆಗ್ರಾದ ವಾಯುಪಡೆ ನಿಲ್ದಾಣದ ತಾಂತ್ರಿಕ ಪ್ರದೇಶದೊಳಗೆ ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ ಎಂದು ಉಲ್ಲೇಖಿಸಿರುವ ಬಲೂನ್ ಪತ್ತೆಯಾಗಿದೆ. ಇದರಲ್ಲಿ ಯಾವುದೇ ಸಾಧನ ಅಥವಾ ವಿಷಕಾರಿ ವಸ್ತು ಪತ್ತೆಯಾಗದೇ ಇದ್ದರೂ ಇದು ಇಲ್ಲಿಗೆ ಹೇಗೆ ಮತ್ತು ಯಾಕೆ ಬಂತು ಎನ್ನುವ ಕುರಿತು ತೀವ್ರ ತನಿಖೆಯನ್ನು ನಡೆಸಲಾಗುತ್ತಿದೆ.

Crime at Gubbi: ಬೈಕ್ ನಿಲ್ಲಿಸಿದ್ದಕ್ಕೆ ಆರು ಜನರ ತಲೆಗೆ ಗಂಭೀರ ಪೆಟ್ಟು..!! : ಕ್ಷುಲ್ಲಕ ಕಾರಣಕ್ಕೆ ರಕ್ತದ ಕೋಡಿ

ಬೈಕ್ ನಿಲ್ಲಿಸಿದ್ದಕ್ಕೆ ಆರು ಜನರ ತಲೆಗೆ ಗಂಭೀರ ಪೆಟ್ಟು..!!

ಸಂಜೆ ವೇಳೆ ದಿಲೀಪ್ ತನ್ನ ಬೈಕ್ ನಲ್ಲಿ ಗುಬ್ಬಿಯಿಂದ ಬಂದು ಮನೆ ಮುಂದೆ ನಿಲ್ಲಿಸಿದ್ದ ವಿಚಾರಕ್ಕೆ ಏಕಾಏಕಿ ಅಶ್ಲೀಲ ಪದಗಳಿಂದ ಬೈಗುಳ ಆರಂಭಿಸಿ ಸ್ಥಳದಲ್ಲಿದ್ದ ದೊಣ್ಣೆ, ಗಳಗಳು, ಗುದ್ದಲಿ ಹಿಡಿದು ಅಟ್ಟ್ಯಾಕ್ ಮಾಡಿದ್ದರು. ಬೈಕ್ ತೆಗೆಯುವಷ್ಟರಲ್ಲಿ ಜಗಳ ತೆಗೆದು ಮಾರಣಾಂ ತಿಕವಾಗಿ ಹೊಡೆದಿದ್ದಾರೆ.

ಸಮೋಸ ಸವಿದು ಬೈಕ್ ಕದ್ದ ವಿಚಿತ್ರ ಕಳ್ಳ! ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಸಮೋಸ ಸವಿದು ಬೈಕ್ ಕದ್ದ ಕಳ್ಳ

ರಾಜಸ್ಥಾನದ ಜೈಪುರದಲ್ಲಿ ವಿಚಿತ್ರ ವಾಹನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಬೈಕ್ ಕಳ್ಳತನ ಮಾಡಲು ಮೊದಲು ಅದರ ಹತ್ತಿರ ನಿಂತು ನಿರಾಳವಾಗಿ ಸಮೋಸ ಸವಿದ ಬಳಿಕ ಬೈಕ್ ಕದ್ದಿದ್ದಾನೆ. ಈ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನೋಯ್ಡಾದಲ್ಲಿ ಗುಂಡಿಗೆ ಮತ್ತೊಂದು ಸಾವು; ಆಟವಾಡುತ್ತಿದ್ದ ಮೂರು ವರ್ಷದ ಬಾಲಕ ಜೀವ ತೆಗೆದ ಅವೈಜ್ಞಾನಿಕ ಕಾಮಗಾರಿ

ಆಟವಾಡುತ್ತಿದ್ದ ಮೂರು ವರ್ಷದ ಬಾಲಕ ಜೀವ ತೆಗೆದ ಅವೈಜ್ಞಾನಿಕ ಕಾಮಗಾರಿ

Nodia: ಗ್ರೇಟರ್ ನೋಯ್ಡಾದ ದಲೇಲ್‌ಗಢ ಗ್ರಾಮದಲ್ಲಿ ನೀರು ತುಂಬಿದ ಗುಂಡಿಯಲ್ಲಿ ಮುಳುಗಿ ಮೂರು ವರ್ಷದ ಬಾಲಕ ಧಾರುಣವಾಗಿ ಸಾವನ್ನಪ್ಪಿದ್ದಾನೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಗುಂಡಿಗಳನ್ನು ಅವೈಜ್ಞಾನಿಕವಾಗಿ ತೋಡಿದ್ದು, ಈಗಾಗಲೇ ಹಲವರು ಈ ಗುಂಡಿಗಳಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಹೈಮಾಸ್ಟ್ ಕಂಬ; ಸಮಾಜವಾದಿ ಪಕ್ಷದ ನಾಯಕ ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಹೈಮಾಸ್ಟ್ ಕಂಬ

ಉತ್ತರಪ್ರದೇಶದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಹೈಮಾಸ್ಟ್ ಕಂಬ ಬಿದ್ದು ಸಮಾಜವಾದಿ ಪಕ್ಷದ ನಾಯಕ ಲಾಲ್ ಬಹದ್ದೂರ್ ಯಾದವ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಭಾನುವಾರ ನಡೆದಿದೆ. ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯವಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Chorla Ghat Robbery case: 400 ಕೋಟಿ ರೂ. ಲೂಟಿ ಕಥೆಗೆ ಟ್ವಿಸ್ಟ್‌, ಚೋರ್ಲಾ ಘಾಟಿಯಲ್ಲಿ ದರೋಡೆಯೇ ನಡೆದಿಲ್ಲ!

400 ಕೋಟಿ ರೂ. ಲೂಟಿ ಕಥೆಗೆ ಟ್ವಿಸ್ಟ್‌, ಚೋರ್ಲಾ ಘಾಟಿ ದರೋಡೆಯೇ ನಡೆದಿಲ್ಲ!

400 ಕೋಟಿ ರೂ. ದರೋಡೆ ಪ್ರಕರಣದ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಎಸ್ಐಟಿ ರಚಿಸಿತ್ತು. ಒಂದು ತಿಂಗಳ ಕಾಲ ಎಸ್ಐಟಿ ಅಧಿಕಾರಿಗಳು ಈ ಪ್ರಕರಣದ ಬೆನ್ನು ಬಿದ್ದಿದ್ದರು. ಅಮಾನ್ಯೀಕರಿಸಿದ 2000 ರೂ. ನೋಟುಗಳನ್ನು ತುಂಬಿದ ಕಂಟೈನರ್‌ ಮಾಯವಾಗಿದೆ ಎಂದು ಮೊದಲು ಆರೋಪಿಸಲಾಗಿತ್ತು. ಸಂದೀಪ್ ಪಾಟೀಲ್ ಎಂಬವರು ನಾಸಿಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Loading...