ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಮದುವೆಯ ಉಡುಪಿನಲ್ಲೇ ನೇಣಿಗೆ ಶರಣಾದ ನವ ದಂಪತಿ; ಪತ್ನಿ 45 ದಿನಗಳ ಗರ್ಭಿಣಿ!

ಮದುವೆ ಉಡುಪಿನಲ್ಲೇ ಜೀವ ಕಳೆದುಕೊಂಡ ನವ ದಂಪತಿ

ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ನವ ದಂಪತಿ ಮದುವೆ ಉಡುಪಿನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಸುಮಾರು 45 ದಿನಗಳ ಗರ್ಭಿಣಿಯಾಗಿದ್ದ ವಿಷಯ ಬಹಿರಂಗವಾಗಿದ್ದು, ಘಟನೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Hubballi news: ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ, ಸಮೀರ್ ಪೊಲೀಸ್​ ವಶಕ್ಕೆ‌, ಯುವತಿ ಮನೆಗೆ ನುಗ್ಗಿ ಯುವಕನ ಕುಟುಂಬಸ್ಥರಿಂದ ಗಲಾಟೆ

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ, ಎರಡೂ ಕಡೆಯವರಿಂದ ಗಲಾಟೆ

ಯುವತಿ ಮತ್ತು ಸಮೀರ್ ನಡುವೆ ಜಿಮ್‌ನಲ್ಲಿ ಪರಿಚಯವಾಗಿತ್ತು. ಹಿಂದೂ ಕಾರ್ಯಕರ್ತರು ಯುವಕನನ್ನು ಹಿಡಿದು ಪೊಲೀಸರ ವಶಕ್ಕೊಪ್ಪಿಸಿದ್ದು, ಇದಾದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಸಮೀರ್ ಕುಟುಂಬದವರು ವಿಕಾಸನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ.

Self Harming: ಕಬ್ಬನ್‌ ಪಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಬ್ಬನ್‌ ಪಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಗುರುವಾರದಿಂದಲೇ ಕಾಣೆಯಾಗಿದ್ದ ಕಬ್ಬನ್ ಪೇಟೆ ಸುರೇಶ್, ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು ದೂರು ನೀಡಿದ್ದರು. ಇಂದು ಬೆಳಗ್ಗೆ ಪಾರ್ಕ್‌ನ ಮರೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಟಯರ್‌ಗೆ ಗಾಳಿ ತುಂಬಿಸುವಾಗ ಸ್ಫೋಟ, ವ್ಯಕ್ತಿ ಸ್ಥಳದಲ್ಲೇ ಸಾವು: ಉತ್ತರ ಪ್ರದೇಶದಲ್ಲಿ ನಡೀತು ಬೆಚ್ಚಿಬೀಳಿಸುವ ದುರ್ಘಟನೆ

ಟಯರ್‌ಗೆ ಗಾಳಿ ತುಂಬಿಸುವಾಗ ಸ್ಫೋಟ, ವ್ಯಕ್ತಿ ಸ್ಥಳದಲ್ಲೇ ಸಾವು

Man dies after tyre explodes: ಟಯರ್‌ನಲ್ಲಿ ಗಾಳಿ ತುಂಬಿಸುವಾಗ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಅಜಮ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಗಾಳಿ ತುಂಬಿಸುವಾಗ ಇದ್ದಕ್ಕಿದ್ದಂತೆ ಟೈರ್ ಸ್ಫೋಟಗೊಂಡಿದೆ. ಸ್ಫೋಟದ ಶಕ್ತಿ ಎಷ್ಟು ತೀವ್ರವಾಗಿತ್ತು ಎಂದರೆ ಆ ವ್ಯಕ್ತಿ ಮೇಲಕ್ಕೆ ಎಸೆಯಲ್ಪಟ್ಟು, ನಂತರ ರಸ್ತೆಗೆ ಬಿದ್ದು, ಗಂಭೀರ ಗಾಯಗೊಂಡರು.

Bengaluru: ಬೆಂಗಳೂರಿನಲ್ಲಿ ಭಯ ಮೂಡಿಸಿದ ಬಿಳಿ ಬೊಲೆರೋ ಅನುಮಾನಾಸ್ಪದ ಸಂಚಾರ

ಬೆಂಗಳೂರಿನಲ್ಲಿ ಭಯ ಮೂಡಿಸಿದ ಬಿಳಿ ಬೊಲೆರೋ ಅನುಮಾನಾಸ್ಪದ ಸಂಚಾರ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ಕಾರಿನ ಚಲನಚಲನ ಅನುಮಾನ ಮೂಡಿಸಿದೆ. ಈ ಕಾರು ಕರ್ನಾಟಕದ್ದಲ್ಲ, ಉತ್ತರ ಪ್ರದೇಶದ ನೋಂದಣಿ ನಂಬರ್ ಇರುವ ಬಿಳಿ ಬೊಲೆರೋ ಕಾರು ಅನ್ನೋದು ಗೊತ್ತಾಗಿದೆ. ವಾಹನದ ಬಗ್ಗೆ ಅನುಮಾನ ಬರುವ ರೀತಿಯಲ್ಲಿ ವಿಡಿಯೋ ಇದ್ದು, ವಿಡಿಯೋ ಬಗ್ಗೆ ಬನಶಂಕರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Kalaburagi Murder: ಕಲಬುರಗಿಯಲ್ಲಿ ಮಾಜಿ ಸಚಿವರ ಸಂಬಂಧಿಕನ ಕೊಚ್ಚಿ ಕೊಲೆ

ಕಲಬುರಗಿಯಲ್ಲಿ ಮಾಜಿ ಸಚಿವರ ಸಂಬಂಧಿಕನ ಕೊಚ್ಚಿ ಕೊಲೆ

ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದ ಅನಿಲ ರಾಠೋಡ್‌ನನ್ನು ಹಣಕಾಸಿನ ವಿಚಾರಕ್ಕೆ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿರುವ ಮೃತ ಅನಿಲನ ಕಚೇರಿಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.

Murder Case: ಸ್ನೂಕರ್‌ ಸ್ಟಿಕ್‌ನಲ್ಲಿ ಹೊಡೆದು ಹೆಡ್‌ಕುಕ್‌ ಹತ್ಯೆ, ಹೆಣ ಸಾಗಿಸುವಾಗ ಸಿಕ್ಕಿಬಿದ್ದ ಹೋಟೆಲ್‌ ಮಾಲಿಕ

ಸ್ನೂಕರ್‌ ಸ್ಟಿಕ್‌ನಲ್ಲಿ ಬಡಿದು ಹೆಡ್‌ಕುಕ್‌ ಹತ್ಯೆ, ಹೆಣ ಸಾಗಿಸುವಾಗ ಪತ್ತೆ

ಕೊಲೆ ಮಾಡಿ, ಕಾರಿನಲ್ಲಿ ಮೃತದೇಹ ಸಾಗಿಸುವ ವೇಳೆ ಹೋಟೆಲ್‌ ಮಾಲೀಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಹಣಕಾಸು ವ್ಯವಹಾರ ಹಾಗೂ ಹಣ ಕದ್ದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಾಗರ ಟೌನ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Chamarajanagara: ಪ್ರೀತಿಗೆ ಪೋಷಕರ ವಿರೋಧ, ಆದಿವಾಸಿ ಯುವಕ- ಯುವತಿ ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ, ಆದಿವಾಸಿ ಯುವಕ- ಯುವತಿ ಆತ್ಮಹತ್ಯೆ

ತಮ್ಮ ಮಗಳು ನಾಪತ್ತೆಯಾಗಿದ್ದಾಳೆಂದು ಪೋಷಕರು ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ವಿಷಯ ತಿಳಿದು ಹೆದರಿದ ನಾಗೇಂದ್ರ ಮತ್ತು ನದಿಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ವಿಮಾನದಲ್ಲಿ ನಟಿಗೆ ಕಿರುಕುಳ: ಪ್ರಯಾಣಿಕನ ಅಸಭ್ಯ ವರ್ತನೆ ಬಗ್ಗೆ ಸೋಶಿಯಲ್‌ ಮೀಡಿಯಾ ಪೋಸ್ಟ್ ಮೂಲಕ ಆಕ್ರೋಶ

ವಿಮಾನದಲ್ಲಿ ನಟಿಗೆ ಸಹಪ್ರಯಾಣಿಕನಿಂದ ಕಿರುಕುಳ

Viral Video: ವಿಮಾನ ಪ್ರಯಾಣದ ವೇಳೆ ನಟಿ ಜತೆ ಸಹಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ನಟಿ ಹಾಗೂ ಕಂಟೆಂಟ್ ಕ್ರಿಯೆಟರ್ ಉರ್ವಿ ಕೊಠಾರಿ ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಈ ವಿಚಾರ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಹುಟ್ಟು ಹಾಕಿದೆ.

ಕುಡಿತದ ಮತ್ತಿನಲ್ಲಿ ಬೀದಿನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ; ಮುಂಬೈಯಲ್ಲೊಂದು ಬೆಚ್ಚಿ ಬೀಳಿಸುವ ಘಟನೆ

ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಪಾಠ ಕಲಿಸಿದ ಸಾರ್ವಜನಿಕರು

Viral Video: ಮಹಾರಾಷ್ಟ್ರದ ಮುಂಬೈಯಲ್ಲಿ ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ. ನಾಯಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದಾರೆ. ಸದ್ಯ ಈ ಘಟನೆಯ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

Chitradurga news: ನಾಪತ್ತೆಯಾಗಿದ್ದ ಕಾಂಗ್ರೆಸ್‌ ಮುಖಂಡ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಕಾಂಗ್ರೆಸ್‌ ಮುಖಂಡ ಶವವಾಗಿ ಪತ್ತೆ

ಕಾಂಗ್ರೆಸ್‌ ಮುಖಂಡ (congress leader) ಶಿವಲಿಂಗಪ್ಪ (50) ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ (body found) ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಗೆ ಸಂಬಂಧಿಕರಿಂದ ಆಗ್ರಹ ವ್ಯಕ್ತವಾಗಿದ್ದು, ಚಿತ್ರದುರ್ಗ (Chitradurga news) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಐನಿಂದಾಗಿ ಕೆಲಸ ಕಳೆದುಕೊಂಡ ಪತಿ, ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ದಂಪತಿಯ ಹೃದಯವಿದ್ರಾವಕ ಕಥೆಯಿದು

ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ದಂಪತಿಯ ಹೃದಯವಿದ್ರಾವಕ ಕಥೆಯಿದು

self-harming: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀವ್ರ ಕಳವಳಕ್ಕೆ ಕಾರಣವಾಗಿದೆ. ಅಮೆರಿಕದಲ್ಲಿ ಕೆಲಸ ಕಳೆದುಕೊಂಡ ನಂತರ ರೆಡ್ಡಿ ಸುಮಾರು ಒಂದು ವರ್ಷದಿಂದ ನಗರದಲ್ಲಿ ಸ್ಥಿರವಾದ ಉದ್ಯೋಗವನ್ನು ಪಡೆಯಲು ಹೆಣಗಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಎಐ ಕಾರಣದಿಂದ ಅವರು ಉದ್ಯೋಗ ಕಳೆದುಕೊಂಡಿರಬಹುದು ಎಂದು ಮೂಲಗಳು ಹೇಳಿವೆ.

21 ಕ್ಕೂ ಅಧಿಕ ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

21 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಕೊಲೆ ಮತ್ತು ಮರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಮಾರು 21 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ (49)ಗೆ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂ. ದಂಡವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ.

ಬಕೆಟ್‌ನಲ್ಲಿ ಬಿದ್ದು 11 ತಿಂಗಳ ಮಗು ಸಾವು; ಮನನೊಂದು ಆತ್ಮಹತ್ಯೆಗೆ ಶರಣಾದ ತಾಯಿ

11 ತಿಂಗಳ ಮಗು ಸಾವು; ಮನನೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಮನೆಯ ಬಾತ್​ ರೂಮ್​ ಬಕೆಟ್​ ನೀರಿನಲ್ಲಿ ಮಗು ಬಿದ್ದು ಸಾವನ್ನಪ್ಪಿದ ಬಳಿಕ ಮನನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಗುವನ್ನು ಅಗಸ್ತ್ಯ ಎಂದು ಗುರುತಿಸಲಾಗಿದ್ದು, ಮೃತ ತಾಯಿ ಪ್ರತಿಭಾ ಎಂದು ಹೇಳಲಾಗಿದೆ.

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ಮನನೊಂದು  ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಅಪಪ್ರಚಾರಕ್ಕೆ ಬೇಸತ್ತು ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. 23 ವರ್ಷದ ನಿಖಿತಾ ಮೃತ ವಿದ್ಯಾರ್ಥಿನಿ. ಆತ್ಮಹತ್ಯೆಗೂ ಮುನ್ನ ನಿಖಿತಾ ಡೆತ್‌ನೋಟ್‌ ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಗಂಡನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಕೆಯ ಮೇಲೆ ಆಸಿಡ್‌ ದಾಳಿ ಮಾಡಿದ ಪತ್ನಿ!

ಗಂಡನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಕೆಯ ಮೇಲೆ ಆಸಿಡ್‌ ಹಾಕಿದ ಪತ್ನಿ

ಪತಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯ ಮೇಲೆ ಪತ್ನಿ ಆಸಿಡ್ ಎರೆಚಿದ ಘಟನೆ ಕೋಲಾರದ ಆಜಾದ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ. ಆರೋಪಿ ಆಯೇಷಾ ಹಾಗೂ ಗಾಯಾಳು ಮುಸ್ಕಾನ್ ಇಬ್ಬರೂ ಪರಸ್ಪರ ಸಂಬಂಧಿಕರು ಎಂದು ಹೇಳಲಾಗಿದೆ.

ಕೊಲೆ ಬಳಿಕವೂ ನಿಂತಿಲ್ಲ ದ್ವೇಷ;  SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು

Santekh Murder Case: ಜಿಲ್ಲೆಯ ಸೂಳೆಬೈಲು ಬಡಾವಣೆ ನಿವಾಸಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಸಂಕೇತ್ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಪೋಷಕರು ಆತಂಕಕ್ಕೀಡಾಗಿದ್ದಾರೆ. ಜಗಳ ಬಿಡಸಲು ಹೋದ ಅಮಾಯಕ ಬಾಲಕ ಸಂಕೇತ್​ನನ್ನ ಕಿಡಿಗೇಡಿ ಯುವಕರು ಹತ್ಯೆ ಮಾಡಿದ್ದರು.

ಧರ್ಮಸ್ಥಳ ಪ್ರಕರಣ; ಯೂಟ್ಯೂಬರ್‌ ಎಂ.ಡಿ.ಸಮೀರ್‌ ವಿರುದ್ಧ ತನಿಖೆಗೆ ಹೈಕೋರ್ಟ್‌ ತಡೆ

ಯೂಟ್ಯೂಬರ್‌ ಎಂ.ಡಿ.ಸಮೀರ್‌ ವಿರುದ್ಧ ತನಿಖೆಗೆ ಹೈಕೋರ್ಟ್‌ ತಡೆ

ಧರ್ಮಸ್ಥಳದಲ್ಲಿನ ಅಸಹಜ ಸಾವುಗಳ ತನಿಖೆಗೆ ಸಂಬಂಧಿಸಿ ಕಾಲ್ಪನಿಕ ವಿಚಾರಗಳನ್ನು ಆಧರಿಸಿ ವಿಡಿಯೊ ಹರಿಬಿಟ್ಟ ಸಂಬಂಧ ಯೂಟ್ಯೂಬರ್‌ ಎಂ.ಡಿ. ಸಮೀರ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ರದ್ದುಪಡಿಸುವಂತೆ ಕೋರಿ ಎಂ.ಡಿ. ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ತನಿಖೆಗೆ ತಡೆ ನೀಡಿದೆ.

ಮದ್ಯ ಖರೀದಿಗೆ ಹಣ ನಿರಾಕರಿಸಿದ್ದೇ ತಪ್ಪಾಯ್ತು: ನವವಧು-ವರನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಮದ್ಯಕ್ಕೆ ಹಣ ನೀಡದಿದ್ದಕ್ಕೆ ನವವಧು-ವರನ ಮೇಲೆ ಹಲ್ಲೆ

Viral Video: ಇಲ್ಲೊಂದು ಮದುವೆ ಸಂಭ್ರಮದ ನಡುವೆ ಮದ್ಯದ ವಿಚಾರವಾಗಿ ವಧು ವರನಿಗೆ ನೆರೆ ಮನೆಯ ಗುಂಪೊಂದು ಥಳಿಸಿರುವ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗಳು ವಧು-ವರರ ಮೇಲೆ ಹಲ್ಲೆ ಮಾಡಿದ್ದಾರೆ. ಈ ದೃಶ್ಯ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Rohini Sindhuri: ಬಟ್ಟೆ ಬ್ಯಾಗ್ ಖರೀದಿ ಹಗರಣ; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಸೂಚನೆ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಸೂಚನೆ

Bag purchase scam: ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಅರೋಪ ಕೇಳಿಬಂದಿತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13ಗೆ ರೂಪಾಯಿಗೆ ಸಿಗುವ ಬ್ಯಾಗ್​ಗಳನ್ನು ಜಿಲ್ಲಾಧಿಕಾರಿ 52 ರೂ. ನೀಡಿ ಖರೀದಿಸಿದ್ದರು ಎನ್ನಲಾಗಿತ್ತು. ಈ ಸಂಬಂಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಮಲತಂದೆಯ ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಂಡ ಬಾಲಕಿಯ ಮೇಲೆ ಒಡಿಶಾದಲ್ಲಿ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತೆ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ

Crime News: ಮಲತಂದೆಯಿಂದ ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಮನೆಯಿಂದ ಓಡಿಹೋಗಿದ್ದ ಆಂಧ್ರ ಪ್ರದೇಶದ 17 ವರ್ಷದ ಬಾಲಕಿಯ ಮೇಲೆ ಮೂವರು ಹದಿಹರೆಯದವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದ ಬೆರ್ಹಾಂಪುರದಲ್ಲಿ ನಡೆದಿದೆ. ಆಕೆಯ ತಾಯಿ ಮರುಮದುವೆಯಾದ ನಂತರ, ಮಲತಂದೆ ಆಕೆಯ ಮೇಲೆ ಪದೇ ಪದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಚಂಡೀಗಢ ಬಿಜೆಪಿ ಕಚೇರಿ ಮೇಲೆ ಗ್ರೆನೇಡ್‌ ಎಸೆದ ದುಷ್ಕರ್ಮಿಗಳು: ಖಲಿಸ್ತಾನಿ ಉಗ್ರರ ಕೃತ್ಯ?

ಚಂಡೀಗಢದ ಬಿಜೆಪಿ ಕಚೇರಿ ಬಳಿ ಭಾರಿ ಸ್ಫೋಟ

Punjab News: ಪಂಜಾಬ್‌ನ ಚಂಡೀಗಢದಲ್ಲಿರುವ ಬಿಜೆಪಿ ಕಚೇರಿಯ ಹೊರಗೆ ಬುಧವಾರ (ಏಪ್ರಿಲ್ 1) ಸಂಜೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸಂಜೆ 5:20ರ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಕಾರು ಮತ್ತು ಸ್ಕೂಟರ್‌ನ ವಿಂಡ್‌ಶೀಲ್ಡ್ ಹಾನಿಗೊಳಗಾಗಿದೆ.

ಮದುವೆಯಾದ ಒಂದು ತಿಂಗಳಲ್ಲೇ ಅತ್ತೆಗೆ ವಿಷ ಕುಡಿಸಿ, ನಗದು-ಆಭರಣಗಳೊಂದಿಗೆ ನವವಿವಾಹಿತೆ ಪರಾರಿ

ಅತ್ತೆಗೆ ವಿಷ ಕುಡಿಸಿ, ನಗದು-ಆಭರಣಗಳೊಂದಿಗೆ ನವವಿವಾಹಿತೆ ಪರಾರಿ

Crime News: ನವವಿವಾಹಿತೆಯೊಬ್ಬಳು ಅತ್ತೆಗೆ ವಿಷ ಕುಡಿಸಿ, ನಗದು-ಆಭರಣಗಳೊಂದಿಗೆ ಪರಾರಿಯಾಗಿರುವ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದಿದೆ. ಹೀಗೆ ಪರಾರಿಯಾದ ಮಹಿಳೆಯನ್ನು ರೇಕಾ ಎಂದು ಗುರುತಿಸಲಾಗಿದೆ. 2025ರ ಮೇ 26ರಂದು ಪಂಜಾಬ್‌ನ ಗುರುದ್ವಾರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ರೇಖಾಳನ್ನು ವಿವಾಹವಾದ ವಿಕ್ರಮ್‌ಜೀತ್ ಮದುವೆಗೆ ಐದು ಲಕ್ಷ ರುಪಾಯಿಗೂ ಹೆಚ್ಚು ಖರ್ಚು ಮಾಡಿದ್ದರು.

ಮಹಿಳೆಯ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ; ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

ಮಹಿಳೆಗೆ ಲೈಂಗಿಕ ಕಿರುಕುಳ; ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

ಬೆಂಗಳೂರಿನ ಗಾಂಧಿನಗರದಲ್ಲಿರುವ ರಾಜ್ಯ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕೆಲಸ ಮಾಡುವಾಗ ಮಹಿಳೆಗೆ ರಿಜಿಸ್ಟ್ರಾರ್ ಡಾ.ಮಲ್ಲು ಲೈಂಗಿಕ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ತಬ್ಬಿಕೊಂಡು ಮುತ್ತು ಕೊಡಲು ಹಾಗೂ ಬಲವಂತವಾಗಿ ಕಾರು ಹತ್ತಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Loading...