ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Harassment: ನನಗೆ ಕ್ಯಾನ್ಸರ್‌ ಇದೆ, ನಗ್ನ ಫೋಟೋ ಕಳಿಸು: ಶಿಕ್ಷಕಿಗೆ ಕಾಮುಕನ ಕಿರುಕುಳ!‌

ನನಗೆ ಕ್ಯಾನ್ಸರ್‌ ಇದೆ, ನಗ್ನ ಫೋಟೋ ಕಳಿಸು: ಶಿಕ್ಷಕಿಗೆ ಕಾಮುಕನ ಕಿರುಕುಳ!‌

ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬಂದು ದೈಹಿಕ ಸಂಬಂಧದ ಆಸೆಗೆ ಬಿದ್ದು ಮಹಿಳೆಗೆ ಮೊಬೈಲ್‌ ಸಂದೇಶದ ಮೂಲಕ ಕಿರುಕುಳ ನೀಡಿದ ಈ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಬಂಧಿಸಲು ತೆರಳುತ್ತಿದ್ದಂತೆ ಯುವಕ ಮರ್ಮಾಂಗ ಕತ್ತರಿಸಿಕೊಳ್ಳಲು ಯತ್ನಿಸಿದ್ದ.

ಸಾಮಾಜಿಕ ಮಾಧ್ಯಮಗಳ ಮೂಲಕ ಭಾರತದಲ್ಲಿ ಭಯೋತ್ಪಾದನಾ ಜಾಲ ವಿಸ್ತರಣೆ; ಬಯಲಾಯಿತು ಪಾಕಿಸ್ತಾನದ ಉಗ್ರರ ಸಂಚು

ಉತ್ತರಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರ ಬಂಧನ

ಸಾಮಾಜಿಕ ಮಾಧ್ಯಮ ಬಳಕೆಯು ಈಗ ಅಪಾಯಕಾರಿಯಾಗಿ ಪರಿಣಮಿಸಿದೆ. ಇದನ್ನು ಬಳಸಿಕೊಂಡು ಪಾಕಿಸ್ತಾನದ ಭಯೋತ್ಪಾದಕರು ಭಯೋತ್ಪಾದನೆಯ ಜಾಲವನ್ನು ವಿಸ್ತರಿಸುತ್ತಿರುವುದು ಈಗ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದ್ದು, ಈ ಮೂಲಕ ಹಲವು ರಹಸ್ಯವಾಗಿದ್ದ ಮಾಹಿತಿಗಳು ಬೆಳಕಿಗೆ ಬಂದಿದೆ.

ಐಎಎಸ್ ಅಧಿಕಾರಿಯಿಂದ ವ್ಯಕ್ತಿಗೆ 95 ಲಕ್ಷ ರೂಪಾಯಿ ವಂಚನೆ ಆರೋಪ; ತನಿಖೆಗೆ ಆದೇಶ

ಐಎಎಸ್ ಅಧಿಕಾರಿಯಿಂದ ವ್ಯಕ್ತಿಗೆ 95 ಲಕ್ಷ ರೂಪಾಯಿ ವಂಚನೆ ಆರೋಪ

ಒಡಿಶಾ ರಾಜ್ಯ ಗೃಹ ಇಲಾಖೆಯಲ್ಲಿ ಪ್ರಸ್ತುತ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಭೂಮಿ ನೀಡುವ ನಕಲಿ ಭರವಸೆ ನೀಡಿ ವ್ಯಕ್ತಿಯೊಬ್ಬರು 95 ಲಕ್ಷ ರೂ.ಗಳನ್ನು ವಂಚಿಸಿ, ನಂತರ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Koppal Love Jihad case: ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಫೋಟೊ, ವಿಡಿಯೊಗಳು!

ಹುಬ್ಬಳ್ಳಿ ಬಳಿಕ ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ; ಮುಸ್ತಫಾ ವಶಕ್ಕೆ

ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಕಳೆದ ಮೂರು ದಿನಗಳ ಹಿಂದೆ ಹಿಂದೂ ಯುವತಿ ಜತೆ ಓಡಾಡುತ್ತಿದ್ದಾ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Belagavi Digital arrest: ಬೆಳಗಾವಿ ಉದ್ಯಮಿಯ ಡಿಜಿಟಲ್ ಅರೆಸ್ಟ್ ಪ್ರಕರಣ; 15.45 ಕೋಟಿ ವಂಚಿಸಿದ್ದ ಇಬ್ಬರು ಖದೀಮರು ಅರೆಸ್ಟ್

ಉದ್ಯಮಿಯ ಡಿಜಿಟಲ್ ಅರೆಸ್ಟ್; 15.45 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್

ಉದ್ಯಮಿ ಬಳಿ ಹಂತ ಹಂತವಾಗಿ ಬರೋಬ್ಬರಿ 15.45 ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಈ ಕುರಿತು ಬೆಳಗಾವಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹಾಡಹಗಲೇ ವಕೀಲನನ್ನು ಗುಂಡಿಕ್ಕಿ ಕೊಂದ ಹಂತಕರು; ನೋಡ ನೋಡುತ್ತಲೇ ಬೈಕ್‌ನಲ್ಲಿ ಪರಾರಿ

ವಕೀಲರ ಗುಂಡಿಕ್ಕಿ ಹತ್ಯೆ: ಹಂತಕರು ಬೈಕ್‌ನಲ್ಲಿ ಪರಾರಿ

Crime News: ಹಾಡಹಗಲೇ ವಕೀಲರೊಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಹಿರಿಯ ವಕೀಲ ರಾಜೀವ್ ಸಿಂಗ್ ಮೃತ ದುರ್ದೈವಿ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ;  ಗಂಟಲು ಸೀಳಿ ಕೊಂದ ಶಾಲಾ ಹಾಸ್ಟೆಲ್ ಸೆಕ್ಯುರಿಟಿ!

5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!

ಬಿಹಾರದ ಜಹಾನಾಬಾದ್ ಜಿಲ್ಲೆಯಲ್ಲಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ 5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕ್ಯಾಂಟೀನ್ ಕಾವಲುಗಾರನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯು ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ, ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Kalaburagi News: ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ

IPL Betting: ಐಪಿಎಲ್ ಪಂದ್ಯಗಳ ಮೇಲೆ ನಿರಂತರವಾಗಿ ಬೆಟ್ಟಿಂಗ್ ಕಟ್ಟುತ್ತಿದ್ದ ವ್ಯಕ್ತಿ ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಾರೆ. ಜೂಜಿಗಾಗಿ ಹಲವರಿಂದ ದೊಡ್ಡ ಮೊತ್ತದ ಸಾಲವನ್ನೂ ಮಾಡಿದ್ದರು. ಬೆಟ್ಟಿಂಗ್‌ನಲ್ಲಿ ಹಣ ಕೈಕೊಟ್ಟಿದ್ದರಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಾಲಗಾರರ ಒತ್ತಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಯಾಗಲು ತಿರಸ್ಕರಿಸಿದಕ್ಕೆ ಎಚ್‌ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಪಾಪಿ; ಮನನೊಂದ ಯುವತಿ ಆತ್ಮಹತ್ಯೆ

ಎಚ್‌ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಆರೋಪಿ

Crime News: ಮದುವೆಯಾಗಲು ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಗೆ ಎಚ್‌ಐವಿ ಪಾಸಿಟಿವ್ ರಕ್ತವನ್ನು ಚುಚ್ಚಿದ್ದ ಘಟನೆ ಹೈದರಾಬಾದ್‍ನಲ್ಲಿ ನಡೆದಿತ್ತು. ಘಟನೆ ನಡೆದು ಸುಮಾರು ಒಂದು ತಿಂಗಳ ನಂತರ, ಏ.10 ರಂದು ಯುವತಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆರೋಪಿ ಮನೋಹರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್ ಥೈಲ್ಯಾಂಡ್‌ನಿಂದ ಭಾರತಕ್ಕೆ ಗಡೀಪಾರು

ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಥೈಲ್ಯಾಂಡ್‌ನಿಂದ ಗಡೀಪಾರು

gangster Sahil Chauhan: ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಸಂಘಟಿತ ಅಪರಾಧಗಳಲ್ಲಿ ಕುಖ್ಯಾತ ವ್ಯಕ್ತಿಯಾಗಿರುವ ಚೌಹಾಣ್, ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೂ ಬೇಕಾಗಿದ್ದಾನೆ.

Lamborghini case: ಲ್ಯಾಂಬೊರ್ಗಿನಿ ಕಾರಿನಲ್ಲಿಯೇ ಹೋಗಿ ರಸ್ತೆ ಕಸ ಗುಡಿಸಿ ಬನ್ನಿ: ಆರೋಪಿಗೆ ಹೈಕೋರ್ಟ್‌ ಸೂಚನೆ

ಲ್ಯಾಂಬೊರ್ಗಿನಿ ಕಾರಲ್ಲಿಯೇ ಹೋಗಿ ರಸ್ತೆ ಕಸ ಗುಡಿಸಿ: ಆರೋಪಿಗೆ ಹೈಕೋರ್ಟ್‌

ಮನುಷ್ಯನ ಪ್ರಾಣಕ್ಕೆ ಹಾನಿಯಾಗುವಂಥ ಸೈಲೆನ್ಸರ್‌ ಅಳವಡಿಸಿಕೊಂಡಿರುವ ಲ್ಯಾಂಬೊರ್ಗಿನಿ ಕಾರನ್ನು ಮೈಸೂರು ರಸ್ತೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಕುರಿತು ಬೆಂಗಳೂರಿನ ಕೆಂಗೇರಿ ಸಂಚಾರಿ ಠಾಣೆಯಲ್ಲಿ ಚಿರಂತನ್‌ ಎಂಬವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.

Murder Case: ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದ ಹಾಶ್ಮಿನಗರದಲ್ಲಿದ್ದ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಗೆ ನಿನ್ನೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Zombie Drug: ಬೆಂಗಳೂರಿನಲ್ಲಿ ಝಾಂಬಿ ಡ್ರಗ್ ಹಾವಳಿ ಇಲ್ಲ; ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಕಮಿಷನರ್‌

ಝಾಂಬಿ ಡ್ರಗ್ ಹಾವಳಿ ಇಲ್ಲ; ವಿಡಿಯೊ ಶೇರ್‌ ಮಾಡಿದ್ದ ವ್ಯಕ್ತಿ ಅರೆಸ್ಟ್‌

ಬೆಂಗಳೂರಿನಲ್ಲಿ ಝಾಂಬಿ ಡ್ರಗ್‌ ಹಾವಳಿ ಶುರುವಾಗಿದೆ ಎಂಬ ಸುದ್ದಿ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಪೋಸ್ಟ್ ಮಾಡುವ ಮೊದಲು ಯೋಚಿಸಿ. ಸುಳ್ಳು ಸುದ್ದಿ ಸತ್ಯಕ್ಕಿಂತ ವೇಗವಾಗಿ ಹರಡುತ್ತದೆ ಮತ್ತು ಅದರ ಹಾನಿ ಬಹಳ ದೀರ್ಘಕಾಲ ಉಳಿಯುತ್ತದೆ. ಜವಾಬ್ದಾರಿಯಿಂದ ವರ್ತಿಸಿ. ಮಾಹಿತಿ ಹಂಚಿಕೊಳ್ಳುವ ಮುನ್ನ ಖಚಿತಪಡಿಸಿಕೊಳ್ಳಿ ಎಂದು ಬೆಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.

ಡಿಜಿಟಲ್‌ ಅರೆಸ್ಟ್‌ ಆಗಿದ್ದ ತಂದೆ ತಾಯಿಯನ್ನು ರಕ್ಷಿಸಿದ 8 ನೇ ತರಗತಿ ಬಾಲಕ!

‘ಡಿಜಿಟಲ್ ಅರೆಸ್ಟ್’: ಬಾಲಕನ ಚಾಣಾಕ್ಷತನದಿಂದ ತಪ್ಪಿದ ದೊಡ್ಡ ವಂಚನೆ

ಉತ್ತರ ಪ್ರದೇಶದ ಬರೇಲಿಯಲ್ಲಿ ಸೈಬರ್ ವಂಚಕರು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ದಂಪತಿಯನ್ನು 10 ಗಂಟೆಗಳ ಕಾಲ ವಿಡಿಯೋ ಕಾಲ್ ಮೂಲಕ ಒತ್ತೆಯಾಳಾಗಿಟ್ಟಿದ್ದರು. ಈ ವೇಳೆ ಅವರ 8ನೇ ತರಗತಿ ಓದುತ್ತಿರುವ ಮಗ ಸಮಯಪ್ರಜ್ಞೆ ತೋರಿಸಿ ಫೋನ್ ಅನ್ನು ಫ್ಲೈಟ್ ಮೋಡ್‌ಗೆ ಹಾಕಿ ವಂಚಕರ ಸಂಪರ್ಕ ಕಡಿತಗೊಳಿಸಿ ಪೋಷಕರನ್ನು ರಕ್ಷಿಸಿದ್ದಾನೆ.

ಹುಲಿಕಲ್ ಘಾಟ್‌ ದುರಂತ; ಮೃತ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಹುಲಿಕಲ್ ಘಾಟ್‌ ದುರಂತ; ಮೃತ 3 ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

Hulikal Ghat road landslide: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.

ಗಂಡ ಕಪ್ಪಗಿದ್ದಾನೆಂದು ಪ್ರಿಯಕರನೊಟ್ಟಿಗೆ ಸೇರಿಗೆ ಪತಿಯನ್ನೇ ಕೊಂದ ಪತ್ನಿ!

ಪ್ರಿಯಕರನೊಟ್ಟಿಗೆ ಸೇರಿಗೆ ಪತಿಯನ್ನೇ ಕೊಂದ ಪತ್ನಿ!

ಪತ್ನಿಯೇ ಇದ್ದು ತನ್ನ ಗಂಡನನ್ನು ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. 28 ವರ್ಷದ ಪುರೋಹಿತ್ ದೇವಕೃಷ್ಣ ಕೊಲೆಯಾದ ವ್ಯಕ್ತಿ. ಅಪರಾಧ ಏಪ್ರಿಲ್ 7 ರ ರಾತ್ರಿ ನಡೆದಿತ್ತು. 28 ವರ್ಷದ ಪುರೋಹಿತ್ ದೇವಕೃಷ್ಣ ಅವರ ಮನೆಯಲ್ಲಿ ಕೊಲೆಯಾಗಿ ಪತ್ತೆಯಾಗಿದ್ದಾರೆ.

Physical Abuse: ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಆರೋಪ ಬಂದಿದೆ. ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ ವಿರುದ್ಧ ದೂರು ನೀಡಲಾಗಿದೆ. ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಆಗಿದ್ದು, ಮಕ್ಕಳ ರಕ್ಷಣಾಧಿಕಾರಿ ರೇಖಾ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ.

Physical Abuse: ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯ ಮೇಲೆ ಬಲಾತ್ಕಾರ, ಕ್ರಿಮಿನಲ್‌ ಕೇಸ್‌ ರದ್ದುಪಡಿಸಲು ಹೈಕೋರ್ಟ್ ನಕಾರ

ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯ ಮೇಲೆ ಬಲಾತ್ಕಾರ, ಕ್ರಿಮಿನಲ್‌ ಕೇಸ್‌

ಬಲವಂತದ ಸಂಭೋಗ, ಜೀವ ಬೆದರಿಕೆ ಮತ್ತು ಮನೆಗೆ ಅತಿಕ್ರಮ ಪ್ರವೇಶ ಆರೋಪ ಮೇಲೆ ಪತ್ನಿ ನಗರದ ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸಂಭೋಗ ನಡೆದಿಲ್ಲ ಎಂಬುದಾಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಹೇಳುತ್ತದೆ. ಇದರಿಂದ ಪತಿಯನ್ನು ಸುಳ್ಳು ಕೇಸಿನಲ್ಲಿ ಪತ್ನಿ ಸಿಲುಕಿಸಿರುವುದು ತಿಳಿಯುತ್ತದೆ ಎಂದು ಪತಿ ಪರ ವಕೀಲರು ವಾದಿಸಿದ್ದರು.

Zombie Drug: ಜೋಂಬಿ ಡ್ರಗ್ ಅಂತ ವೈರಲ್‌ ಆದ ವಿಡಿಯೋ ಅಸಲಿಯತ್ತೇನು?‌ ಪೊಲೀಸರು ಹೇಳಿದ್ದಿಷ್ಟು

ಜೋಂಬಿ ಡ್ರಗ್ ಅಂತ ವೈರಲ್‌ ಆದ ವಿಡಿಯೋ ಅಸಲಿಯತ್ತು ಹೊರಗೆಡಹಿದ ಪೊಲೀಸರು

ಸೋಶಿಯಲ್ ಮೀಡಿಯಾದಲ್ಲಿ ಬೆಂಗಳೂರಿನಲ್ಲಿ ಜೋಂಬಿ ಡ್ರಗ್ಸ್ ಎಂದು ‌ಒಂದು ವಿಡಿಯೊವನ್ನು ವೈರಲ್​ ಮಾಡಲಾಗಿತ್ತು. ಸದ್ಯ ತನಿಖೆಯಿಂದ ಅದರ ಅಸಲಿಯತ್ತು ಬಯಲಿಗೆ ಬಂದಿದೆ. ವಿಡಿಯೋ ಮಾಡಿ ಹರಿಬಿಟ್ಟವರ ವಿರುದ್ಧ ಕೇಸ್ ದಾಖಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Girl Missing: ಮುಳ್ಳಯ್ಯನಗಿರಿಯಲ್ಲಿ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌, ಕಿಡ್ನಾಪ್‌ ಆಗಿರಬಹುದು ಎಂದ ತಾಯಿ

ದತ್ತಪೀಠದಲ್ಲಿ ಬಾಲಕಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌, ಅಪಹರಣದ ಶಂಕೆ

ಬಾಲಕಿ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್‍ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಆದರೆ, ಜನದಟ್ಟಣೆಯ ನಡುವೆ ಮೆಟ್ಟಿಲುಗಳನ್ನು ಇಳಿದು ಬರುವಾಗ ಅವಳು ಹಠಾತ್ತನೆ ಕಾಣೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

Student Self Harming: ಪಿಯುಸಿ ಫಲಿತಾಂಶ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು, ತಾಯಿಯ ಮೇಲೇ ಶಂಕೆ

ಪಿಯುಸಿ ಫಲಿತಾಂಶ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು, ತಾಯಿಯ ಮೇಲೇ ಶಂಕೆ

ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ತಾಯಿ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದೆ. ಆದರೆ, ಸಂಬಂಧಿಕರು ಮಾತ್ರ ವಿದ್ಯಾರ್ಥಿನಿಯ ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ.

Physical Abuse: ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಿಹಾರದ ಕೂಲಿ ಕಾರ್ಮಿಕ

ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಿಹಾರದ ಕೂಲಿ ಕಾರ್ಮಿಕ

ಆರೋಪಿ ಮೊಹಮ್ಮದ್ ಮುನ್ನ ಏಪ್ರಿಲ್ 08ರಂದು ಸಂಜೆ ಮನೆ ಬಳಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಳಿಕ ಇದನ್ನು ಯಾರಿಗೂ ಹೇಳಬೇಡ ಎಂದು ಬಾಲಕಿ ಕೈಗೆ 150 ರೂಪಾಯಿ ಕೊಟ್ಟು ಪರಾರಿಯಾಗಿದ್ದ.

ಕಚೇರಿಯಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ಆರೋಪ: ಟೀಂ ಲೀಡ್‌ ಸೇರಿ 6 ಜನ ಟೆಕ್ಕಿಗಳ ಬಂಧನ

ಲೈಂಗಿಕ ಕಿರುಕುಳ ಆರೋಪ: 6 ಜನ ಟೆಕ್ಕಿಗಳ ಬಂಧನ

Crime News: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಬಹುರಾಷ್ಟ್ರೀಯ ಕಂಪನಿಯೊಂದರ ಟೀಮ್ ಲೀಡರ್ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಒಂಬತ್ತು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣವನ್ನು ದ್ವಿಗುಣಗೊಳಿಸುವುದಾಗಿ ವಂಚನೆ; 12 ಕೋಟಿ ರೂ. ಕಳೆದುಕೊಂದ ವೈದ್ಯ!

ಹಣವನ್ನು ದ್ವಿಗುಣಗೊಳಿಸುವುದಾಗಿ ವಂಚನೆ; 12 ಕೋಟಿ ರೂ. ಕಳೆದುಕೊಂದ ವೈದ್ಯ!

Cyber Crime: 75 ವರ್ಷದ ವೈದ್ಯರೊಬ್ಬರಿಗೆ ಸೈಬರ್ ವಂಚಕರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಮೂಲಕ ಕೇವಲ 11 ದಿನಗಳಲ್ಲಿ ಅವರ ಹಣವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿ 12.31 ಕೋಟಿ ರೂ.ಗಳನ್ನು ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಷೇರು ಮಾರುಕಟ್ಟೆ ಹೂಡಿಕೆಗಳ ಮೂಲಕ ಹೆಚ್ಚಿನ ಆದಾಯವನ್ನು ನೀಡುವುದಾಗಿ ಸಂದೇಶ ಬಂದ ನಂತರ ವಂಚನೆ ನಡೆದಿದೆ.

Loading...