ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರೈಂ

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್ ಸಂದೇಶ್ ಫಸ್ಟ್‌ ರಿಯಾಕ್ಷನ್ ಏನು?

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಇನ್ಸ್‌ಪೆಕ್ಟರ್ ಫಸ್ಟ್‌ ರಿಯಾಕ್ಷನ್

Moodbidri Police Inspector Case: ನಾನು ಯಾವ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿಲ್ಲ, ಅವರ ಬಳಿ ಯಾವುದೇ ಹಣವನ್ನೂ ನಾನು ಕೇಳಿಲ್ಲ, ಇದು ಸತ್ಯಕ್ಕೆ ದೂರವಾದ ವಿಷಯ ಅದು. ಆಡಿಯೊ ಬಗ್ಗೆ ಮೇಲಧಿಕಾರಿಗಳು ತನಿಖೆ ಮಾಡ್ತಾರೆ ಎಂದು ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್ ಸಂದೇಶ್ ತಿಳಿಸಿದ್ದಾರೆ.

ದಂಪತಿ ನಡುವೆ ಕಲಹ:  ಪತ್ನಿಯನ್ನು ರೈಲ್ವೇ ಹಳಿಗೆ ತಳ್ಳಿ ಕೊಲೆ ಮಾಡಿದ ಪಾಪಿ ಪತಿ

ಪತ್ನಿಯನ್ನು ರೈಲ್ವೇ ಹಳಿಗೆ ತಳ್ಳಿ ಕೊಲೆ ಮಾಡಿದ ಪತಿ

Crime News: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಲೋಕಲ್ ರೈಲಿನ ಮುಂದೆ ತಳ್ಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ವಿಚಾರಣೆಯ ಸಮಯದಲ್ಲಿ, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ರಾಜ್‌ಕುಮಾರ್ ಗುಪ್ತಾ ಎಂದು ಗುರುತಿಸಲ್ಪಟ್ಟ ಆರೋಪಿ, ತನ್ನ ಪತ್ನಿ ಪುಷ್ಪಾ ಗುಪ್ತಾ (36) ಜೊತೆ ಆಗಾಗ ಜಗಳವಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾನೆ.

Assault Case: ದಲಿತ ಕಾಂಗ್ರೆಸ್‌ ನಾಯಕಿಗೆ ಕಾಂಗ್ರೆಸ್‌ ನಾಯಕನಿಂದಲೇ ಹಲ್ಲೆ, ಪ್ರಧಾನಿಗೆ ಮೊರೆ

ದಲಿತ ಕಾಂಗ್ರೆಸ್‌ ನಾಯಕಿಗೆ ಪಕ್ಷದ ಮುಖಂಡನಿಂದಲೇ ಹಲ್ಲೆ, ಪ್ರಧಾನಿಗೆ ಮೊರೆ

ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ನಡೆದಿದೆ. ಚೇತನಾ ಅವರ ಮನೆಯನ್ನು ಬಾಡಿಗೆಗೆ ಪಡೆದಿದ್ದ ರಾಹಿಲ್ ಷರೀಫ್ ಮನೆ ಖಾಲಿ ಮಾಡಿಸಿದ್ದಕ್ಕೆ ಕೋಪಗೊಂಡು ರಾತ್ರಿ ಮನೆಗೆ ನುಗ್ಗಿ ಚೇತನಾ ಮತ್ತು ಅವರ ಪತಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ದಂಪತಿಗಳಿಗೆ ಗಾಯಗಳಾಗಿತ್ತು.

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ; ಪುತ್ತೂರು ಎಸಿಯಿಂದ ಕ್ರಮ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 3ನೇ ಬಾರಿ ಗಡಿಪಾರು ಆದೇಶ

Mahesh Shetty Timarodi: ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಎಂದು ಹೇಳಿಕೊಳ್ಳುವ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಮೂರನೇ ಬಾರಿ ಗಡಿಪಾರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಮಹೇಶ್ ಶೆಟ್ಟಿ ತಿಮರೋಡಿ ಅವರು 2026ರ ಮಾರ್ಚ್ 16 ರಿಂದ ಸೆಪ್ಟೆಂಬರ್ 19 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯೊಳಗೆ ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿಯಲ್ಲಿ ಅವರು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನೆಲೆಸಬೇಕೆಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

Sirsi News: ಬಾವಿಗೆ ಬಿದ್ದು ಯಮನನ್ನು ಗೆದ್ದು ಬಂದ 2ರ ಬಾಲೆ; ಜೀವದ ಹಂಗು ತೊರೆದು ರಕ್ಷಿಸಿದ ವ್ಯಕ್ತಿ!

ಬಾವಿಗೆ ಬಿದ್ದು ಯಮನನ್ನು ಗೆದ್ದು ಬಂದ 2ರ ಬಾಲೆ

ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಈ ಬಗ್ಗೆ ಹತ್ತಿರದಲ್ಲೇ ವಾಸವಿದ್ದ ವ್ಯಕ್ತಿಗೆ ಮಾಹಿತಿ ನೀಡಿದ್ದು, ಆತ ಜೀವದ ಹಂಗು ತೊರೆದು ಮಗುವನ್ನು ರಕ್ಷಣೆ ಮಾಡಿದ್ದಾರೆ.

25 ಲಕ್ಷ ಕೊಡು, ಇಲ್ಲವೇ ನನ್ನ ಜತೆ ಮಲಗು; ಗಂಡನ ಬಂಧಿಸಿ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಲೈಂಗಿಕ ಕಿರುಕುಳ!

25 ಲಕ್ಷ ಕೊಡು, ಇಲ್ಲವೇ ನನ್ನ ಜತೆ ಮಲಗು; ಇನ್ಸ್‌ಪೆಕ್ಟರ್‌ ಕಾಮಕಾಂಡ ಬಯಲು

Moodubidire Police Inspector Case: ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ಗಂಡನ ವಿರುದ್ಧ ಸುಳ್ಳು ಕೇಸ್‌ ಹಾಕಿ, ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ನಿನ್ನ ಗಂಡ ಬಿಡುಗಡೆಯಾಗಲ್ಲ ಎಂದು ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿರುವ ಆರೋಪ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಕೇಳಿಬಂದಿದೆ.

ಗ್ಯಾಸ್ ಸಂಪರ್ಕ ಕಡಿತಗೊಳಿಸುವುದಾಗಿ ಬೆದರಿಸಿ ವೃದ್ಧೆಗೆ ಬರೋಬ್ಬರಿ 21 ಲಕ್ಷ ರುಪಾಯಿ ವಂಚನೆ

ಗ್ಯಾಸ್ ಸಂಪರ್ಕ ಹೆಸರಲ್ಲಿ ವೃದ್ಧೆಗೆ ಬರೋಬ್ಬರಿ 21 ಲಕ್ಷ ರು. ವಂಚನೆ

Cyber Crime: ಪಿಎನ್‌ಜಿ ಗ್ಯಾಸ್ ಸಂಪರ್ಕವನ್ನು ಕಡಿತಗೊಳಿಸುವುದಾಗಿ ಬೆದರಿಕೆ ಹಾಕಿ ಮಹಿಳೆಯೊಬ್ಬರಿಗೆ 21 ಲಕ್ಷ ರುಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಈ ಘಟನೆ ನಡೆದಿದೆ. ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್‌ನ ಉದ್ಯೋಗಿಯೆಂದು ಹೇಳಿಕೊಂಡು ಕಿಡಿಗೇಡಿ 61 ವರ್ಷದ ಮಹಿಳೆಗೆ ವಂಚಿಸಿದ್ದಾರೆ.

ಕೆನಡಾದಲ್ಲಿ ಕಾಲೇಜು ಸಹಪಾಠಿಗಳಿಂದಲೇ ಭಾರತೀಯ ಮೂಲದ ವಿದ್ಯಾರ್ಥಿಯ ಹತ್ಯೆ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಹತ್ಯೆ

Crime News: ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಕಾಲೇಜು ಸಹಪಾಠಿಗಳೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. 23 ವರ್ಷದ ವಿದ್ಯಾರ್ಥಿ ಗುರ್ಕಿರತ್ ಸಿಂಗ್ ಮನೋಚಾ ಅವರನ್ನು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಈ ಘಟನೆಗೆ ಸಂತಾಪ ಸೂಚಿಸಿದ್ದಾರೆ.

ರಸಗುಲ್ಲ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು; ಮದುವೆ ಮನೆಯಲ್ಲಿ ಘೋರ ದುರಂತ

ರಸಗುಲ್ಲ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

Tragedy at Wedding: ಜಾರ್ಖಂಡ್‌ನ ಹಳ್ಳಿಯೊಂದರಲ್ಲಿ ನಡೆದ ವಿವಾಹ ಸಂಭ್ರಮದ ಮಧ್ಯೆ 41 ವರ್ಷದ ಲಲಿತ್ ಸಿಂಗ್ ರಸಗುಲ್ಲ ತಿಂದು ಉಸಿರುಗಟ್ಟಿ ಸಾವಿಗೀಡಾದ ಆಘಾತಕಾರಿ ಘಟನೆ ನಡೆದಿದೆ. ಶುಕ್ರವಾರ (ಮಾರ್ಚ್‌ 13) ಲಲಿತ್ ಸಿಂಗ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಘೋರ ದುರಂತ: ಬೈಕ್ ಎಂಜಿನ್‌ನಿಂದ ಹೊರಬಂದ ವಿಷ ಗಾಳಿ; ನಿದ್ದೆಯಲ್ಲೇ ಪ್ರಾಣಬಿಟ್ಟ ಅಜ್ಜ, ಮೂವರು ಮಕ್ಕಳು

ಬೈಕ್ ಎಂಜಿನ್‌ನಿಂದ ವಿಷ ಗಾಳಿ: ಹಾರಿಯೋಯ್ತು ನಾಲ್ವರ ಪ್ರಾಣಪಕ್ಷಿ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಪಟ್ಟಣದಲ್ಲಿ ಮನೆಯೊಳಗೆ ಇಡೀ ರಾತ್ರಿ ಬೈಕ್ ಎಂಜಿನ್ ಚಾಲನೆಯಲ್ಲಿಟ್ಟಿದ್ದರಿಂದ ಕಾರ್ಬನ್ ಮೊನಾಕ್ಸೈಡ್ ವಿಷಗಾಳಿ ಹರಡಿ ಒಂದೇ ಕುಟುಂಬದ ನಾಲ್ವರು, ಅಜ್ಜ ಮತ್ತು ಮೂವರು ಮಕ್ಕಳು — ನಿದ್ದೆಯಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೆಕ್ಯಾನಿಕ್ ನೀಡಿದ ಸಲಹೆಯಂತೆ ಬೈಕ್ ಅನ್ನು ಮನೆಯೊಳಗೆ ಚಾಲನೆಯಲ್ಲಿಟ್ಟಿದ್ದರಿಂದ ವಿಷಗಾಳಿ ಕೊಠಡಿಯನ್ನು ಆವರಿಸಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

ಕುಡಿದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಗೌರಮ್ಮ (45) ಎಂದು ಗುರುತಿಸಲಾಗಿದೆ. ನಾಗರಾಜ್ ಖಾಸಗಿ ಸಂಸ್ಥೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.

Yadgir News: ಯಾದಗಿರಿಯಲ್ಲಿ ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಯಾದಗಿರಿಯಲ್ಲಿ ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಯಾದಗಿರಿ ತಾಲೂಕಿನ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಶನಿವಾರ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಂದೆಯ ಸ್ವರ್ಜಿತ ಆಸ್ತಿಯಲ್ಲಿ ಮಗನಿಗೆ ಹಕ್ಕಿಲ್ಲ: ಹೈಕೋರ್ಟ್ ಆದೇಶ

ಪಿತ್ರಾರ್ಜಿತ ಮತ್ತು ಸ್ವರ್ಜಿತ ಆಸ್ತಿಗೆ ವ್ಯತ್ಯಾಸವಿದೆ ಎಂದ ಹೈಕೋರ್ಟ್

ತಂದೆ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿ ಮೇಲೆ ಮಗನಿಗೆ ಹಕ್ಕು ಇರುವುದಿಲ್ಲ. ಅವರು ತಮ್ಮ ಆಸ್ತಿಯನ್ನು ಯಾರಿಗೆ ಬೇಕಾದರೂ ನೀಡಬಹುದು. ಪಿತ್ರಾರ್ಜಿತ ಆಸ್ತಿಯಂತೆ ಸ್ವರ್ಜಿತ ಆಸ್ತಿಯು ತಂದೆಯಿಂದ ಮಗನಿಗೆ ವರ್ಗಾವಣೆಯಾಗುವುದಿಲ್ಲ ಈ ಕುರಿತು ಕೇರಳ ಹೈಕೋರ್ಟ್ ಪೀಠ ಮಹತ್ವದ ಆದೇಶವನ್ನು ನೀಡಿದೆ.

ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಕೇರಳ ಮೂಲದ ಮಹಿಳೆಗೆ ಕಿರುಕುಳ; ಆರೋಪಿ ಅರೆಸ್ಟ್‌

ಬೆಂಗಳೂರಿನಲ್ಲಿ ಮಹಿಳೆಗೆ ಕಿರುಕುಳ

Crime News: ಸಿಲಿಕಾನ್ ಸಿಟಿ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ, ದೌರ್ಜನ್ಯ ಮತ್ತು ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಹಾಸ್ಟೆಲ್‌ನಲ್ಲಿ ತಂಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರನ್ನು ನಿಂದಿಸಿದ್ದಾನೆ ಮತ್ತು ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಶಿರಸಿ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾಚರಣೆ; ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ ಬಂಧನ

ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ ಬಂಧನರ್‌

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಮಳಲಿ ಗ್ರಾಮದ ಅರುಣ (ಅರ್ಜುನ್) ಲಕ್ಷ್ಮಣ ಗೌಡ (28) ಬಂಧಿತನಾಗಿದ್ದಾನೆ. ಆರೋಪಿಯ ವಿರುದ್ಧ ಈಗಾಗಲೇ ನ್ಯಾಯಾಲಯಗಳಿಂದ ಮೂರು ಜಾಮೀನು ರಹಿತ ವಾರಂಟ್‌ಗಳು ಹೊರಡಿಸಲಾಗಿದ್ದು, ಒಂದು ಪ್ರಕರಣದಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಲಾಗಿತ್ತು.

ಚಿತ್ರದುರ್ಗದ ಬಳಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

ಭೀಕರ ಅಪಘಾತ; ಮೂವರು ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

Road Accident: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಅಮೃತಸರದಲ್ಲಿ ಪಾಕ್‌ ಐಎಸ್ಐ ಬೆಂಬಲಿತ ಭಯೋತ್ಪಾದಕ ಜಾಲ ಪತ್ತೆ: ಇಬ್ಬರನ್ನು ಬಂಧಿಸಿದ ಪಂಜಾಬ್ ಪೊಲೀಸ್

ಐಎಸ್ಐ ಬೆಂಬಲಿತ ಭಯೋತ್ಪಾದಕ ಜಾಲ ಬಯಲು

Terror suspects arrested: ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಹಾಗೂ ಗಡಿಪಾರು ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಪಂಜಾಬ್‌ನ ಅಮೃತಸರ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಇಬ್ಬರನ್ನು ಬಂಧಿಸಲಾಗಿದ್ದು, ಬಂಧಿತರಿಂದ ರೈಫಲ್‌ಗಳು, ಪಿಸ್ತೂಲು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ರ‍್ಯಾಲಿಗೂ ಮುನ್ನ ಕೋಲ್ಕತ್ತಾದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಭಾರಿ ಸಂಘರ್ಷ

ಕೋಲ್ಕತ್ತಾದಲ್ಲಿ ಬಿಜೆಪಿ–ಟಿಎಂಸಿ ನಡುವೆ ಕಲ್ಲು ತೂರಾಟ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿ ನಡೆಯುವ ಮುನ್ನ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಿರೀಶ್ ಪಾರ್ಕ್ ಪ್ರದೇಶದಲ್ಲಿ ಭಾರಿ ಘರ್ಷಣೆ ನಡೆದಿದೆ. ಉಭಯ ಪಕ್ಷಗಳು ಪರಸ್ಪರ ಕಲ್ಲು ತೂರಾಟದ ಆರೋಪಗಳನ್ನು ಮಾಡಿದ್ದು, ಹಲವು ವಾಹನಗಳಿಗೆ ಹಾನಿಯಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಮೀನು ತಿಂದಿದ್ದು ಇಲಿ, ಶಂಕಿಸಿದ್ದು ಸ್ನೇಹಿತನ ಮೇಲೆ: ಗೆಳೆಯನನ್ನು ಕೊಂದು ಇಬ್ಬರು ಪರಾರಿ; ಮುಂಬೈಯಲ್ಲಿ ಬೆಚ್ಚಿಬೀಳಿಸುವ ಘಟನೆ

ಮೀನು ತಿಂದಿದ್ದಾನೆ ಎಂದು ಶಂಕಿಸಿ ಗೆಳೆಯನನ್ನೇ ಕೊಂದ ಪಾಪಿಗಳು

Crime News: ಮೀನು ಕರಿ ಒಬ್ಬನೇ ತಿಂದು ಮುಗಿಸಿದ್ದಾನೆಂದು ಶಂಕಿಸಿ, ಕೋಪಗೊಂಡ ಗೆಳೆಯರಿಬ್ಬರು ತಮ್ಮ ಸ್ನೇಹಿತನನ್ನೇ ಕೊಲೆಗೈದ ಆಘಾತಕಾರಿ ಘಟನೆ ಮುಂಬೈಯಲ್ಲಿ ನಡೆದಿದೆ. ಫೆಬ್ರವರಿ 24ರಂದು ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಅಫ್ಸರ್ ಎಂದು ಗುರುತಿಸಲಾಗಿದೆ. ಇಲಿಗಳು ಪ್ಯಾನ್‌ನಲ್ಲಿದ್ದ ಬೇಯಿಸಿದ ಮೀನನ್ನು ತಿಂದು ಖಾಲಿ ಮಾಡಿದ್ದವು.

ಮದುವೆ ಮಂಟಪಕ್ಕೆ ನುಗ್ಗಿ ವರನ ಕೈಗೆ ಕೋಳ ತೊಡಿಸಿದ ಪೊಲೀಸರು; ಠಾಣೆಗೆ ಬಂದು ಗೋಳಾಡಿದ ವಧು

ಸಿನಿಮೀಯ ಶೈಲಿಯಲ್ಲಿ ಮದುವೆಗೆ ಪೊಲೀಸರ ಎಂಟ್ರಿ

Groom Arrested for Robbery: ಸಿನಿಮೀಯ ಶೈಲಿಯಂತೆ ವಿವಾಹ ಮಂಟಪಕ್ಕೆ ನುಗ್ಗಿದ ಪೊಲೀಸರು ವರನ ಕೈಗೆ ಕೋಳ ತೊಡಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಗಳು ವರನನ್ನು ಬಂಧಿಸಿ ಕರೆದೊಯ್ಯುತ್ತಿರುವುದನ್ನು ಅತಿಥಿಗಳು ದಿಗ್ಭ್ರಮೆಯಿಂದ ನೋಡುತ್ತಿದ್ದರು. ವರನ ಜತೆ ಸಹಚರರನ್ನೂ ಕೂಡ ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ 15 ವರ್ಷದ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಾಯಿ; ಕೇಸ್‌ ದಾಖಲು

15 ವರ್ಷದ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಾಯಿ!

Bengaluru News: ಬೆಂಗಳೂರಿನ ಚಂದ್ರಾಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ ಸದ್ಯ ಬಾಲಕಿಯನ್ನು ರಕ್ಷಿಸಿದ್ದು, ಬಾಲಕಿಯ ತಾಯಿ, ಮಲತಂದೆ ಹಾಗೂ ಮಧ್ಯವರ್ತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Murder Case: ವೈರ್‌ನಿಂದ ಕುತ್ತಿಗೆ ಬಿಗಿದು ಪ್ರಿಯತಮೆಯ ಕೊಲೆ ಮಾಡಿದ ಪ್ರಿಯಕರ

ವೈರ್‌ನಿಂದ ಕುತ್ತಿಗೆ ಬಿಗಿದು ಪ್ರಿಯತಮೆಯ ಕೊಲೆ ಮಾಡಿದ ಪ್ರಿಯಕರ

ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಎಂಬಾತ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್‌ ಇನ್‌ ರಿಲೇಶನ್ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ. ಪತ್ನಿಗೆ ವಿಚ್ಛೇದನ ನೀಡದೆ ಅಯ್ಯಪ್ಪ ರಂಜಿತಾ ಜೊತೆಗೆ ವಾಸವಿದ್ದ. ಇದೀಗ ಮದುವೆ ವಿಚಾರಕ್ಕೆ ರಂಜಿತ ಹಾಗೂ ಅಯ್ಯಪ್ಪನ ನಡುವೆ ಜಗಳ ನಡೆದಿತ್ತು.

Shiradi ghat accident: ಶಿರಾಡಿ ಘಾಟ್‌ನಲ್ಲಿ ಭೀಕರ ಅಪಘಾತ; ಕೆಎಸ್‌ಆರ್‌ಟಿಸಿ ಬಸ್‌-ಕಾರು ಡಿಕ್ಕಿಯಾಗಿ ಮೂವರ ದುರ್ಮರಣ

ಶಿರಾಡಿ ಘಾಟ್‌ನಲ್ಲಿ ಬಸ್‌-ಕಾರು ಡಿಕ್ಕಿಯಾಗಿ ಮೂವರ ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಘಾಟ್‌ನ ಗುಂಡ್ಯ ಸಮೀಪ ಶುಕ್ರವಾರ ಸಂಜೆ ಭೀಕರ ಅಪಘಾತ ನಡೆದಿದೆ. ಧರ್ಮಸ್ಥಳದಿಂದ ತಿರುಪತಿಗೆ ಹೋಗುತ್ತಿದ್ದ ರಾಜಹಂಸ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

Byrathi Basavaraj: ಬಿಕ್ಲು ಶಿವ ಕೊಲೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಿಡುಗಡೆ

ಬಿಕ್ಲು ಶಿವ ಕೊಲೆ ಪ್ರಕರಣ; ಜೈಲಿನಿಂದ ಶಾಸಕ ಬೈರತಿ ಬಸವರಾಜ್ ಬಿಡುಗಡೆ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ಶಾಸಕ ಬೈರತಿ ಬಸವರಾಜ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Loading...