ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಬೈಕ್‌ಗೆ ಕಾರು ಡಿಕ್ಕಿ;ತಂದೆ-ಮಗನಿಗೆ ಗಾಯ, ಚಾಲಕ ಪರಾರಿ!

ಬೈಕ್‌ಗೆ ಕಾರು ಡಿಕ್ಕಿ;ತಂದೆ-ಮಗನಿಗೆ ಗಾಯ, ಚಾಲಕ ಪರಾರಿ!

ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಸಾರ್ವಜನಿಕರು ತಕ್ಷಣವೇ ಆಟೋ ಒಂದರಲ್ಲಿ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.ಬಳಿಕ ವೈದ್ಯಾಧಿಕಾರಿಗಳ ಸಲಹೆಯ ಮೇರೆಗೆ ತೀವ್ರ ಗಾಯ ಗೊಂಡಿದ್ದ ಅಕ್ರಂಪಾಷಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಸ್ಪೋಟಕ್ಕೆ ಸಂಚು ? 31 ಜೀವಂತ ಬಾಂಬ್‌ ಪತ್ತೆ

ಪಶ್ಚಿಮ ಬಂಗಾಳದಲ್ಲಿ ಸ್ಪೋಟಕ್ಕೆ ಸಂಚು?

ಪಶ್ಚಿಮ ಬಂಗಾಳದ ಬಿರ್ಭುಮ್ ಪ್ರದೇಶದಲ್ಲಿ ಶುಕ್ರವಾರ 31 ಜೀವಂತ ಬಾಂಬ್‌ಗಳು ಪತ್ತೆಯಾಗಿವೆ. ಬಿದಿರಿನ ತೋಪಿನ ಬಳಿ ಶುಕ್ರವಾರ ಜೋಡಿಸಿಟ್ಟ ಜೀವಂತ ಬಾಂಬ್‌ಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಬಾಂಬ್ ನಿಷ್ಕ್ರಿಯ ದಳಕ್ಕೆ ಕರೆ ಮಾಡಿದ ಪೊಲೀಸರು ಪ್ರದೇಶವನ್ನು ಸೀಲ್ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ.

ತ್ವಿಶಾ ಶರ್ಮಾ ಸಾವು ಪ್ರಕರಣ: 10 ದಿನಗಳ ನಂತರ ಜಬಲ್‌ಪುರ ನ್ಯಾಯಾಲಯದಲ್ಲಿ ಶರಣಾದ ಪತಿ ಸಮರ್ಥ್ ಸಿಂಗ್

ಸಮರ್ಥ್ ಸಿಂಗ್ ಶರಣಾಗತಿ; ತ್ವಿಶಾ ಪ್ರಕರಣದಲ್ಲಿ ಹೊಸ ತಿರುವು

Twisha Sharma Death Case: ಭೋಪಾಲ್‌ನ ತ್ವಿಶಾ ಶರ್ಮಾ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿ ನಡೆದಿದ್ದು, 10 ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಸಮರ್ಥ್ ಸಿಂಗ್ ಜಬಲ್‌ಪುರ ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪ್ರಕರಣದಲ್ಲಿ ಆರೋಪಿ ಬಂಧನ ತಪ್ಪಿಸಲು ಪ್ರಭಾವಿ ವ್ಯಕ್ತಿಗಳ ಸಹಾಯ ದೊರೆಯುತ್ತಿದೆ ಎಂದು ತ್ವಿಶಾ ಕುಟುಂಬ ಆರೋಪಿಸಿದ್ದು, ಸಿಬಿಐ ತನಿಖೆ ಹಾಗೂ ಎರಡನೇ ಮರಣೋತ್ತರ ಪರೀಕ್ಷೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದೆ. ತ್ವಿಶಾ ಮೃತದೇಹವನ್ನು ಏಮ್ಸ್ ಆಸ್ಪತ್ರೆಯಲ್ಲಿ ವಿಶೇಷ ತಾಪಮಾನದಲ್ಲಿ ಸಂರಕ್ಷಿಸಲಾಗಿದೆ.

ಕಾಕ್ರೋಚ್ ಜನತಾ ಪಕ್ಷದ ಸ್ಥಾಪಕ ಅಭಿಜೀತ್ ದಿಪ್ಕೆಗೆ ಕೊಲೆ ಬೆದರಿಕೆ

ಅಭಿಜೀತ್ ಡಿಪ್ಕೆಗೆ ಕೊಲೆ ಬೆದರಿಕೆ

ಒಂದು ವಾರಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಜನಪ್ರಿಯತೆ ಪಡೆದುಕೊಂಡಿರುವ ಕಾಕ್ರೋಚ್ ಪಕ್ಷದ ಸ್ಥಾಪಕ ಅಭಿಜೀತ್ ಡಿಪ್ಕೆಗೆ ಕೊಲೆ ಬೆದರಿಕೆಗಳು ಬರಲು ಪ್ರಾರಂಭವಾಗಿವೆ. ಅಮೆರಿಕದಲ್ಲೇ ನಿಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆಗಳು ಬರುತ್ತಿವೆ ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ಹೇಳಿಕೊಂಡಿದ್ದಾರೆ.

Chinthamani Crime: ಮರೀನಾಯಕನಹಳ್ಳಿ ಗೇಟ್ ಬಳಿ ಅಕ್ರಮ ದಂಧೆಗೆ ಬ್ರೇಕ್: ಮೂವರ ವಿರುದ್ಧ ಪ್ರಕರಣ ದಾಖಲು!

ಕೆಂಚಾರ್ಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ಅಕ್ರಮ ಮದ್ಯ ಮಾರಾಟಗಾರರು ಲಾಕ್!

ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಅಕ್ರಮ ದಂಧೆಕೋರರಿಗೆ ಪೆನಾಲ್ಟಿ ಹಾಕಿದ್ದಾರೆ. ಮರೀನಾಯಕನಹಳ್ಳಿ ಗೇಟ್ ಬಳಿಯ ಕಿರಾಣಿ ಅಂಗಡಿ ಯೊಂದರಲ್ಲಿ ಹಾಗೂ ಎರಡು ಮನೆಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಸಂಗ್ರಹಿಸಿ, ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾದ ಕೆಂಚಾರ್ಲಹಳ್ಳಿ ಪೊಲೀಸರು ನಿಗದಿತ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬಿಹಾರದಲ್ಲೊಂದು ಪವಾಡ;  4 ವರ್ಷದ ಬಾಲಕ ರಕ್ಷಣೆ ವೇಳೆ 2022ರಿಂದ ನಾಪತ್ತೆಯಾಗಿದ್ದ ಮತ್ತೊಂದು ಮಗು ಪತ್ತೆ!

ಬಿಹಾರದಲ್ಲಿ 2022ರಲ್ಲಿ ಅಪಹರಣಕ್ಕೊಳಗಾಗಿದ್ದ ಬಾಲಕನ ರಕ್ಷಣೆ

Rescue of Kidnapped Boy: ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ನಾಲ್ಕು ವರ್ಷದ ಅದ್ವಿಕ್ ಎಂಬ ಬಾಲಕನನ್ನು ರಕ್ಷಿಸಲು ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 2022ರಿಂದ ನಾಪತ್ತೆಯಾಗಿದ್ದ ಶಿವಂ ಎಂಬ ಮತ್ತೊಂದು ಮಗುವನ್ನೂ ಪತ್ತೆಹಚ್ಚಿದ್ದಾರೆ. ಆರೋಪಿ ರಂಜೂ ದೇವಿಯ ಮನೆಯಲ್ಲಿ ಇಬ್ಬರು ಮಕ್ಕಳು ಪತ್ತೆಯಾಗಿದ್ದು, ತೀವ್ರ ತನಿಖೆಯ ಬಳಿಕ ಶಿವಂನನ್ನು ಅವನ ತಾಯಿಯೊಂದಿಗೆ ಕಳುಹಿಸಲಾಗಿದೆ.

ಪ್ರಧಾನಿ ಮೋದಿಗೆ  ಜಲ್ಮುರಿ ನೀಡಿದ ಪಶ್ಚಿಮ ಬಂಗಾಳದ ವ್ಯಾಪಾರಿಗೆ ಪಾಕಿಸ್ತಾನ, ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ

ಪ್ರಧಾನಿ ಮೋದಿ ಬಂದುಹೋದ ಮೇಲೆ ಜಲ್ಮುರಿ ವ್ಯಾಪಾರಿಗೆ ಬೆದರಿಕೆ

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಬದಿಯ ಅಂಗಡಿಯೊಂದರಿಂದ ರಾಜ್ಯದ ಖ್ಯಾತ ತಿಂಡಿ ಮಂಡಕ್ಕಿಯಿಂದ ಮಾಡಿದ ಜಲ್ಮುರಿಯನ್ನು ಸವಿದಿದ್ದರು. ಇದರ ಬಳಿಕ ಅಂಗಡಿಯವ ಖ್ಯಾತಿ ಪಡೆದಿದ್ದು, ಇದು ಈಗ ಆತನಿಗೆ ತೊಂದರೆಯನ್ನು ಉಂಟು ಮಾಡಿದೆ. ಪ್ರಧಾನಿ ಮೋದಿಯವರು ಬಂದು ಹೋದ ಮೇಲೆ ಆತನಿಗೆ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದ ಸಂಖ್ಯೆಗಳಿಂದ ಬಾಂಬ್ ಮತ್ತು ಕೊಲೆ ಬೆದರಿಕೆಗಳು ಬರಲು ಪ್ರಾರಂಭವಾಗಿವೆ.

Chinthamani News: ನೀರು ಬಿಡುವ ವಿಚಾರಕ್ಕೆ ಗಲಾಟೆ; ಮೂವರ ವಿರುದ್ಧ ಬಟ್ಲಹಳ್ಳಿ ದೂರು ದಾಖಲು!

ನೀರು ಬಿಡುವ ವಿಚಾರಕ್ಕೆ ಗಲಾಟೆ; ದೂರು ದಾಖಲು

ಚಿಂತಾಮಣಿ ತಾಲ್ಲೂಕಿನ ಮುಂಗಾನಹಳ್ಳಿ ಗ್ರಾಮದ ವಾಟರ್‌ಮ್ಯಾನ್ ನಾಗಮ್ಮ ಎಂಬುವವರು ಸರಿಯಾಗಿ ನೀರು ಬಿಡುತ್ತಿರಲಿಲ್ಲ ಎನ್ನಲಾಗಿದೆ.ಈ ವಿಚಾರವಾಗಿ ಗಾಯಾಳು ಪ್ರಭಾಕರ್ ಅವರ ಅಣ್ಣ ಸುಧಾಕರ್ ಅವರು ಪಿ.ಡಿ.ಓ ಅವರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಪಿ.ಡಿ.ಓ ಅವರು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ಬಗೆಹರಿಸಿದ್ದರು.

Doctor Self harming: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯ ಆತ್ಮಹತ್ಯೆ

ಡಾ.ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸಿ ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ಸಮಾಜದಲ್ಲಿ ಸರಳ ಹಾಗೂ ಸ್ನೇಹಪರ ವ್ಯಕ್ತಿತ್ವ ದಿಂದ ಪರಿಚಿತರಾಗಿದ್ದ ಅವರು, ವೈದ್ಯ ವಲಯದಲ್ಲಿಯೂ ಗೌರವ ಪಡೆದಿದ್ದರು.

ನಟ ದರ್ಶನ್‌ ಜತೆ ಜೈಲಿನಲ್ಲಿ ಸಿಗರೇಟ್‌ ಸೇದುತ್ತ ವೈರಲ್‌ ಆಗಿದ್ದ ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು; ಜೈಲಿನಿಂದ ಬಿಡುಗಡೆ

ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು

Belagavi News: ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದ ಬಂಧಿತ ಆರೋಪಿ, ನಟೋರಿಯಸ್ ರೌಡಿಶೀಟರ್‌ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆ ಕೈದಿ ವಾರ್ಡನಲ್ಲಿ ಆರೋಗ್ಯ ತಪಾಸಣೆ ನಡೆಸಿ ಬಿಡುಗಡೆ ಮಾಡಲಾಯಿತು.

Kalaburagi News: ಕರೆಂಟ್‌ ಹರಿಸಿ ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ತೆಲಂಗಾಣ ಗಡಿಭಾಗದ ಸಂಗಾಪೂರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕರೆಂಟ್‌ ಹರಿಸಿ ಪ್ರಾಣಿಗಳನ್ನು ಬಲಿ ಪಡೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗಾಪೂರ ಗ್ರಾಮದ ಮಾಣಿಕ ತಂದೆ ಹರಿಶ್ಚಂದ್ರ ಪವಾರ (40) ಹಾಗೂ ಸುನೀಲ ತಂದೆ ಧರ್ಮು ರಾಠೋಡ (30) ಬಂಧಿತರು.

ಪಾಕ್ ಮಹಿಳೆಯನ್ನು ವಿವಾಹವಾಗಿ ಭಾರತದ ವಿರುದ್ಧ ಬೇಹುಗಾರಿಕೆ; ಕೋಲ್ಕತ್ತಾದಲ್ಲಿ ಆರೋಪಿ ಬಂಧನ

ಪಾಕ್ ಮಹಿಳೆಯನ್ನು ವಿವಾಹವಾಗಿ ಭಾರತದ ವಿರುದ್ಧ ಬೇಹುಗಾರಿಕೆ

Spy case: ಪಾಕಿಸ್ತಾನ ಗುಪ್ತಚರ ಅಧಿಕಾರಿಗಳಿಗೆ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಆರೋಪಿಯನ್ನು ಜಾಫರ್ ರಿಯಾಜ್ ಅಲಿಯಾಸ್ ರಿಜ್ವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳು ಆತನ ವಿರುದ್ಧ ಲುಕ್-ಔಟ್ ಸುತ್ತೋಲೆ ಹೊರಡಿಸಿದ ನಂತರಯನ್ನು ಬಂಧಿಸಲಾಯಿತು.

ಬಲವಂತವಾಗಿ ಮದ್ಯ ಕುಡಿಸಿ ಸಹಪಾಠಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಮದ್ಯ ಕುಡಿಸಿ ಅತ್ಯಾಚಾರ; ಇಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

ತೆಲಂಗಾಣದ ಇಬ್ರಾಹಿಂಪಟ್ನಂ ಪ್ರದೇಶದಲ್ಲಿ ತೃತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನು ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ. ಘಟನೆ ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

"ರಕ್ತದಲ್ಲಿ ನೆನೆಸಿ, ಪ್ರಾಣಿಗಳ ಮಾಂಸ ಸುರಿದ"; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮತಾಂತರಕ್ಕೆ ಯತ್ನ!

ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಮತಾಂತರಕ್ಕೆ ಯತ್ನಿಸಿದವರ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಾಟ್ಲಾ ಹೌಸ್ ಪ್ರದೇಶದಲ್ಲಿ 23 ವರ್ಷದ ದಲಿತ ಮಹಿಳೆಯೊಬ್ಬರು ತನ್ನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿ, ಕ್ರೂರ ಚಿತ್ರಹಿಂಸೆ ನೀಡಿ, ಬಲವಂತವಾಗಿ ಧರ್ಮ ಮತಾಂತರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಲ ವಾಪಸ್ ಕೇಳಿದ್ದಕ್ಕೆ ದರ್ಪ; ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ, ವಿಡಿಯೋ ವೈರಲ್‌

ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ

drags man on car bonnet: ಹಣ ಮರುಪಾವತಿ ವಿಚಾರದಲ್ಲಿ ಸಾಲಗಾರನ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬರನ್ನು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಸುಮಾರು 500 ಮೀಟರ್ ಎಳೆದೊಯ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದ ಇತರರು ಘಟನೆಯ ದೃಶ್ಯವನ್ನು ವಿಡಿಯೊ ಮಾಡಿದ್ದಾರೆ.

ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ; ಏನಿದು ಸ್ಟೋರಿ?

ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ; ಏನಿದು ಸ್ಟೋರಿ?

ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪಾರ್ಟ್‌ ಟೈಂ ಜಾಬ್‌ ಮಾಡುತ್ತಿದ್ದ ಕಾಲೇಜು ಯುವತಿ ಮೇಲೆ ಅತ್ಯಾಚಾರ ನಡೆದಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನ ಕೈವಾಡ ಶಂಕೆ: ಗಡಿ ನಿಯಂತ್ರಣ ರೇಖೆ ಬಳಿ ಮಾದಕ ದ್ರವ್ಯ, ಚೀನೀ ಪಿಸ್ತೂಲ್ ವಶ

ಎಲ್‌ಒಸಿ ಬಳಿ ಮಾದಕ ದ್ರವ್ಯ, ಚೀನೀ ಪಿಸ್ತೂಲ್ ವಶ

ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯ ಬಳಿ ಬುಧವಾರ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ಮಾದಕ ದ್ರವ್ಯ, ಚೀನೀ ಪಿಸ್ತೂಲ್ ಅನ್ನು ವಶಕ್ಕೆ ಪಡೆದಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಜೊತೆ ಸಂಪರ್ಕ ಹೊಂದಿರುವ ಕಳ್ಳಸಾಗಣೆದಾರರು ಇದನ್ನು ಪಾಕಿಸ್ತಾನದಿಂದ ಭಾರತದ ಗಡಿಯಾಚೆಗೆ ಎಸೆದಿದ್ದಾರೆ ಎನ್ನಲಾಗಿದೆ.

Bengaluru Drug network: ಬೆಂಗಳೂರಿನಲ್ಲಿ ಬರೋಬ್ಬರಿ 35 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ; ವಿದೇಶಿ ಪ್ರಜೆಗಳು ಸೇರಿ 8 ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ 35 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ; 8 ಆರೋಪಿಗಳ ಬಂಧನ

Bengaluru MDMA racket: ದೆಹಲಿಯಿಂದ ಮಾದಕ ವಸ್ತುವನ್ನು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಮೂವರು ವಿದೇಶಿ ಪ್ರಜೆಗಳು, ಮೂವರು ಹೊರ ರಾಜ್ಯದವರು ಹಾಗೂ ರಾಜ್ಯದ ಇನ್ನಿಬ್ಬರು ಸೇರಿದ್ದಾರೆ.

ಮಾಟಮಂತ್ರ ಮಾಡುತ್ತಿದ್ದ ಶಂಕೆ: ವ್ಯಕ್ತಿಯನ್ನು ಕೊಂದು ಸುಟ್ಟು ಹಾಕಿದ ಗ್ರಾಮಸ್ಥರು

ಮಾಟಮಂತ್ರ ಶಂಕೆ: ವ್ಯಕ್ತಿಯನ್ನು ಕೊಂದ ಗ್ರಾಮಸ್ಥರು

ಮಾಟಮಂತ್ರ ಮಾಡುತ್ತಿದ್ದಾನೆ ಎನ್ನುವ ಶಂಕೆಯಲ್ಲಿ ಗ್ರಾಮಸ್ಥರು ವ್ಯಕ್ತಿಯೊಬ್ಬನನ್ನು ಕೊಂದು ಸುಟ್ಟು ಹಾಕಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಕಟಕ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಸೇರಿ ಕೊಂದಿದ್ದಾರೆ. ಸಾಕ್ಷ್ಯ ಅಳಿಸಿ ಹಾಕಲು ದೇಹವನ್ನು ಸುಟ್ಟು ಹಾಕಿದರು. ಪ್ರಕರಣಕ್ಕೆ ಸಂಬಂಧಿಸಿ 25 ಮಂದಿಯನ್ನು ಬಂಧಿಸಲಾಗಿದೆ.

ಹಾಡ ಹಗಲೇ 4 ವರ್ಷದ ಮಗುವಿನ ಅಪಹರಣ: ದುಷ್ಕರ್ಮಿಗಳ ವಿರುದ್ಧ ಅಜ್ಜ-ಅಜ್ಜಿಯ ದಿಟ್ಟ ಹೋರಾಟ

ಹಗಲಿನಲ್ಲೇ 4 ವರ್ಷದ ಬಾಲಕಿಯ ಕಿಡ್ನಾಪ್

Viral News: ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದೆ. ಹಗಲು ಸಮಯದಲ್ಲೇ 4 ವರ್ಷದ ಹೆಣ್ಣು ಮಗುವೊಂದನ್ನು ಸಿನಿಮೀಯ ಮಾದರಿಯಲ್ಲಿ ಅಪಹರಿಸಿದ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಲಕಿ ತನ್ನ ಅಜ್ಜನೊಂದಿಗೆ ಸ್ಕೂಟರ್‌ನಲ್ಲಿ ಮನೆಯ ಹೊರಗೆ ಕುಳಿತಿದ್ದಾಗ ಘಟನೆ ಸಂಭವಿಸಿದೆ. ಅಜ್ಜಿ ಗೇಟ್ ತೆರೆಯಲು ಹೋದಾಗ ಬೈಕ್‌ನಲ್ಲಿ ಬಂದ ಇಬ್ಬರು ಪುರುಷರು ಇದ್ದಕ್ಕಿದ್ದಂತೆ ಮನೆಯ ಬಳಿಗೆ ಧಾವಿಸಿದರು. ಮಗುವನ್ನು ರಕ್ಷಿಸಲು ವೃದ್ಧ ಅಜ್ಜ ಮತ್ತು ಅಜ್ಜಿ ತಮ್ಮ ಪ್ರಾಣದ ಹಂಗು ತೊರೆದು ದುಷ್ಕರ್ಮಿಗಳ ವಿರುದ್ಧ ಹೊರಾಡಿದ್ದಾರೆ.

ಭಯೋತ್ಪಾದಕ ಸಂಘಟನೆಗೆ ಯುವಕರ ನೇಮಕಾತಿ; ಅಪರಾಧಿ ಹಮ್ರಾಜ್ ವರ್ಶಿದ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ

ಉಗ್ರ ಸಂಘಟನೆಗೆ ನೇಮಕಾತಿ; ಹಮ್ರಾಜ್ ವರ್ಶಿದ್ ಶೇಖ್‌ಗೆ 7 ವರ್ಷ ಜೈಲು

ಮಹಾರಾಷ್ಟ್ರದ ಹಮ್ರಾಜ್ ವರ್ಶಿದ್ ಶೇಖ್ ಆನ್‌ಲೈನ್ ಮೂಲಕ ಯುವಕರನ್ನು ಸೆಳೆದು ಭಯೋತ್ಪಾದಕ ಸಂಘಟನೆಗೆ ನೇಮಕ ಮಾಡುತ್ತಿದ್ದ. ನಿಷೇಧಿತ ತಾಲಿಬಾನ್ ಮತ್ತು ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ ಭಯೋತ್ಪಾದಕ ಸಂಘಟನೆಗೆ ಯುವಕರನ್ನು ನೇಮಿಸಲು ಯತ್ನಿಸಿರುವುದು ಎನ್‌ಐಎ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಈತನಿಗೆ ಶಿಕ್ಷೆ ಪ್ರಕಟಿಸಿದೆ.

ಮೃತ ತ್ವಿಶಾ ಮಾದಕ ದ್ರವ್ಯ ವ್ಯಸನಿಯಾಗಿದ್ದಳೇ?  ಸೋದರಸಂಬಂಧಿ ಹೇಳಿದ್ದೇನು?

ತ್ವಿಶಾ ಮಾದಕ ದ್ರವ್ಯ ಸೇವಿಸುತ್ತಿರಲಿಲ್ಲ: ಸೋದರಸಂಬಂಧಿ

Twisha Sharma death case: ಪತಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ 31 ವರ್ಷದ ಮಹಿಳೆ ತ್ವಿಶಾ ಶರ್ಮಾ ಮಾದಕ ದ್ರವ್ಯ ಸೇವಿಸಿದ್ದಾರೆ ಎಂಬ ಆಕೆಯ ಅತ್ತೆಯ ಆರೋಪಗಳನ್ನು ಸೋದರಸಂಬಂಧಿ ತಿರಸ್ಕರಿಸಿದ್ದಾರೆ. ತ್ವಿಶಾ ಗಾಂಜಾ ಸೇವಿಸುತ್ತಿದ್ದರು ಎಂಬ ಆರೋಪ ಆಧಾರರಹಿತ ಎಂದು ಶರ್ಮಾ ಹೇಳಿದರು.

"ತ್ವಿಶಾ ಶರ್ಮಾ ಸಾವು ಆತ್ಮಹತ್ಯೆ"; ಎರಡನೇ ಮರಣೋತ್ತರ ಪರೀಕ್ಷೆ ಮಾಡುವಂತೆ ಪೋಷಕರು ಒತ್ತಾಯ

ತ್ವಿಶಾ ಶರ್ಮಾ ಸಾವು ಆತ್ಮಹತ್ಯೆ, ಕೊಲೆಯಲ್ಲ: ಪೊಲೀಸರು

Twisha Sharma death: ತ್ವಿಶಾ ಶರ್ಮಾ ಆತ್ಮಹತ್ಯೆಯಿಂದ ಮೃತಪಟ್ಟಿದ್ದಾರೆ, ಅವರನ್ನು ಕೊಲೆ ಮಾಡಿಲ್ಲ ಎಂದು ಭೋಪಾಲ್ ಪೊಲೀಸರು ಪ್ರತಿಪಾದಿಸಿದ್ದಾರೆ. ಇದು ಆತ್ಮಹತ್ಯೆ ಪ್ರಕರಣವೇ ಹೊರತು ಕೊಲೆಯಲ್ಲ. ಆಕೆಯ ಮರಣೋತ್ತರ ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವನೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೆರಿಕದಿಂದ 7 ಜೀವಂತ ಗುಂಡುಗಳ ಪಿಸ್ತೂಲ್‌ ಮ್ಯಾಗ್‌ಜೈನ್‌ ತಂದ ವ್ಯಕ್ತಿ ಅರೆಸ್ಟ್‌

ಅಮೆರಿಕದಿಂದ 7 ಜೀವಂತ ಗುಂಡುಗಳ ಪಿಸ್ತೂಲ್‌ ಮ್ಯಾಗ್‌ಜೈನ್‌ ತಂದವನ ಬಂಧನ

ಪರವಾನಗಿ ಇಲ್ಲದೆ ಅಕ್ರಮವಾಗಿ ಏಳು ಜೀವಂತ ಗುಂಡುಗಳನ್ನು ಹೊಂದಿದ್ದ ಆರೋಪದ ಮೇಲೆ ಅಮೆರಿಕ ಮೂಲದ ಅನಿವಾಸಿ ಭಾರತೀಯನೊಬ್ಬನನ್ನು ಬೆಂಗಳೂರಿನ ಜೆ.ಸಿ. ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಮೆರಿಕದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಅರ್ಮಾನ್ ಮುತಾಹರ್ (34) ಎಂದು ಗುರುತಿಸಲಾಗಿದೆ.

Loading...