ಪುಂಡಾಟ ಮೆರೆದ ವಿದ್ಯಾರ್ಥಿಗಳ ಮೇಲೆ ದೂರು ದಾಖಲು
ಬೈಕ್ ಕರ್ಕಶ ಶಬ್ಧ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್ಐ ಗಂಗರಾಜು ಸೈಲೆಂಟ್ ಆಗಿ ಹೋಗಿ ಎಂದು ತಿಳಿ ಹೇಳಿದ್ದರಂತೆ. ಈ ವೇಳೆ ಪೊಲೀಸರ ಎಚ್ಚರಿಕೆಗೆ ಕ್ಯಾರೆ ಎನ್ನದೇ ಒಬ್ಬ ವಿದ್ಯಾರ್ಥಿ ಬೈಕ್ ಜೋರು ಸೌಂಡ್ ಮಾಡಿದ್ದಾನೆ. ಬೇರೆ ವಿದ್ಯಾರ್ಥಿಗಳು ಬೇಡ ಅಂದ್ರೂ ಅವನೊಬ್ಬ ಪೊಲೀಸ್ ಏನು? ಮಾಡ್ತಾನೆ? ಎಂದು ಮತ್ತೆ ಶಬ್ಧ ಮಾಡಿದ್ದಾನೆ. ಈ ವೇಳೆ ಕೆರಳಿದ ಎಎಸ್ಐ ಗಂಗರಾಜು ವಿದ್ಯಾರ್ಥಿಯ ಮೇಲೆ ಲಾಠಿ ಬೀಸಿದ್ದು, ವಿದ್ಯಾರ್ಥಿಗೆ ಗಾಯವಾಗಿ ರಕ್ತ ಬಂದಿದೆ ಎನ್ನಲಾಗಿದೆ.