ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Belagavi News: ಅಣಬೆ ತಿನ್ನೋ ಮುನ್ನ ಎಚ್ಚರ; ಮಶ್ರೂಮ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಬೆಳಗಾವಿಯಲ್ಲಿ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಜಾಗ್ರತೆ ಇರಬೇಕಾಗುತ್ತದೆ. ಹೊಲಗಳಲ್ಲಿ ಬೆಳೆಯುವ ಅಣಬೆಗಳ ಮೇಲೆ ಕ್ರಿಮಿನಾಶಕಗಳು ಬಿದ್ದಿರುವ ಸಾಧ್ಯತೆ ಹೆಚ್ಚಿರುತ್ತದೆ. ಇನ್ನು ಕೆಲವು ಜಾತಿಯ ಅಣಬೆಗಳು ನೈಸರ್ಗಿಕವಾಗಿಯೇ ವಿಷಕಾರಿಯಾಗಿರುತ್ತವೆ. ಹೀಗಾಗಿ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

Vijayapura Car Accident: ವಿಜಯಪುರದಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ಅಪಘಾತ ನಡೆದಿದೆ. ದುರ್ಘಟನೆ ನಡೆದಿದೆ. ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ದುರ್ಘಟನೆ ನಡೆದಿದೆ. ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಕಿರುಕುಳ, ಸಹಾಯಕ್ಕಾಗಿ ಮೊರೆ: ಜೈಪುರ ಶಾಲಾ ಬಾಲಕಿಯ ಸಾವಿಗೂ ಮುಂಚಿನ ಸಿಸಿಟಿವಿ ದೃಶ್ಯಾವಳಿ ವೈರಲ್

ಕಿರುಕುಳಕ್ಕೆ ಬಲಿಯಾದ 9 ವರ್ಷದ ಬಾಲಕಿ..!

ಜೈಪುರದ ನೀರ್ಜಾ ಮೋದಿ ಶಾಲೆಯ 9 ವರ್ಷದ ವಿದ್ಯಾರ್ಥಿನಿ ಅಮೇರಾ ಸಾವಿಗೂ ಮುನ್ನದ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ತರಗತಿಯಲ್ಲಿ ಆತಂಕದಲ್ಲಿದ್ದ ಬಾಲಕಿ ಹಲವು ಬಾರಿ ಶಿಕ್ಷಕಿಯ ಬಳಿ ಸಹಾಯ ಕೇಳಲು ಪ್ರಯತ್ನಿಸಿದ್ದರೂ ನಿರ್ಲಕ್ಷ್ಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಆಕೆ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ. ಪ್ರಕರಣದಲ್ಲಿ ಶಾಲೆಯ ವಿರುದ್ಧ ಕುಟುಂಬ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದು, ಸಿಬಿಎಸ್‌ಇ ಕೂಡ ಸುರಕ್ಷತಾ ವೈಫಲ್ಯದ ಬಗ್ಗೆ ಶೋಕಾಸ್ ನೋಟಿಸ್ ನೀಡಿದೆ.

Chinthamani News: ಮನೆಯಿಂದ ಹೋದ ಬಾಲಕ ಮರಳಿ ವಾಪಸ್ ಬರಲಿಲ್ಲ: ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು

ಮನೆಯಿಂದ ಹೋದ ಬಾಲಕ ಮರಳಿ ವಾಪಸ್ ಬರಲಿಲ್ಲ

ಸಂಜೆಯಾದರೂ ಮನೆಗೆ ಬಾರದೇ ಇರುವ ಕಾರಣಕ್ಕೆ ಅವರ ತಂದೆ ತಾಯಿ ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಸುಳಿವು ಸಿಗದೇ ಇರುವ ಕಾರಣಕ್ಕೆ ಇಂದು ಅವರ ಅಣ್ಣ ಹಿದಾಯತ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

ಸಿಗರೇಟ್ ಖರೀದಿಸಲು 500 ರೂ. ಖೋಟಾ ನೋಟು ಕೊಟ್ಟು ಸಿಕ್ಕಿಬಿದ್ದ MBA ಪದವೀಧರ; ರಾಜ್ಯದಲ್ಲಿ ಬೃಹತ್ ಖೋಟಾ ನೋಟು ದಂಧೆ ಬೆಳಕಿಗೆ!

ರಾಜ್ಯದಲ್ಲಿ ಖೋಟಾ ನೋಟು ದಂಧೆ ಬೆಳಕಿಗೆ; 6 ಮಂದಿ ಅರೆಸ್ಟ್‌

Fake currency racket: ಅಂಗಡಿಯೊಂದರಲ್ಲಿ ಚಲಾವಣೆಯಾದ ಕೇವಲ ಒಂದು ನಕಲಿ ನೋಟಿನ ಜಾಡು ಹಿಡಿದು ತನಿಖೆ ನಡೆಸಿದ ಪೊಲೀಸರು, ಸದ್ಯ ಪ್ರಕರಣಕ್ಕೆ ಸಂಬಂಧಿಸಿ ದಂಧೆಯ ಕಿಂಗ್‌ಪಿನ್ ಸೇರಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 500 ರೂ. ಮುಖಬೆಲೆಯ 60ಕ್ಕೂ ಹೆಚ್ಚು ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

Udupi News: ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ ಜಿಲ್ಲೆಯ ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಬೆಳಗ್ಗೆ ಅಪಘಾತ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪತಿ ಶ್ರೀ ಬಾಲಾಜಿ ದೇವಾಲಯದಲ್ಲಿ ಕೊಳ್ಳೆ ಹೊಡೆದ ಕಳ್ಳರು

ಗುವಾಹಟಿ ದೇವಾಲಯ ದೋಚಿದ ಕಳ್ಳರು

ಗುವಾಹಟಿಯ ತಿರುಪತಿ ಶ್ರೀ ಬಾಲಾಜಿ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಗುರುವಾರ ಬೆಳಕಿಗೆ ಬಂದಿದೆ. ದೇವಾಲಯದ ಹಲವಾರು ಕಾಣಿಕೆ ಪೆಟ್ಟಿಗೆಗಳನ್ನು ಬಲವಂತವಾಗಿ ತೆರೆದು ಅದರಿಂದ ಹಣವನ್ನು ಕದ್ದೊಯ್ಯಲಾಗಿದೆ. ದೇವಾಲಯದಲ್ಲಿದ್ದ ಸಿಸಿಟಿವಿ ಕೆಮರಾಗಳನ್ನು ಒಡೆದು ಹಾಕಿದ ಬಳಿಕ ಈ ಕೃತ್ಯ ನಡೆಸಲಾಗಿದೆ ಎಂದು ದೇವಾಲಯ ನಿರ್ವಹಣಾ ಸಮಿತಿ ಸದಸ್ಯರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಗುರುಗ್ರಾಮದಲ್ಲಿ ಗುಂಡಿನ ಚಕಮಕಿ: ನಾಲ್ವರು ದರೋಡೆಕೋರರ ಎನ್‌ಕೌಂಟರ್

ಗುರುಗ್ರಾಮ: ನಾಲ್ವರು ದರೋಡೆಕೋರ ಎನ್‌ಕೌಂಟರ್

ಗುರುಗ್ರಾಮದಲ್ಲಿ ಪೊಲೀಸರು ಮತ್ತು ದರೋಡೆಕೋರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ದರೋಡೆಕೋರರು ಸಾವನ್ನಪ್ಪಿದ್ದಾರೆ. ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಓರ್ವ ಗಾಯಾಳು ದರೋಡೆಕೋರನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುರುಗ್ರಾಮದ ಸುಶಾಂತ್ ಲೋಕ್ ಫೇಸ್- 2 ಪ್ರದೇಶದಲ್ಲಿ ಗುರುವಾರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ.

ರಾಜ್ಯದಲ್ಲಿ ಮತ್ತೊಂದು ಲವ್‌ ಜಿಹಾದ್‌? ಹಿಂದೂ ಯುವತಿಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ ನವಾಜ್‌

ಹಿಂದೂ ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ನವಾಜ್‌

Love Jihad: ಬೆಂಗಳೂರಿನಲ್ಲಿ ಲವ್‌ ಜಿಹಾದ್‌ ಹೋಲುವ ಪ್ರಕರಣವೊಂದು ನಡೆದಿದೆ. ಬೆಂಗಳೂರಿನ ವರ್ತೂರು ಮುಖ್ಯ ರಸ್ತೆ ಬಳಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕಾಡುಗೋಡಿ ವೆನ್ನೆಲ್ಲಾ ಹತ್ಯೆ; ಕರುಳ ಕುಡಿಯನ್ನೇ ಕೊಂದ ಪ್ರಿಯಕರನಿಗೆ ನೆರವಾದ ಪಾಪಿ ತಾಯಿ ಪ್ರಿಯಾಂಕಾಗೆ ಜಾಮೀನು

ವೆನ್ನೆಲ್ಲಾ ಕೊಲೆ ಆರೋಪಿ ತಾಯಿ ಪ್ರಿಯಾಂಕಾಗೆ ಜಾಮೀನು

Vennella Case: ಬೆಂಗಳೂರು ಕಾಡುಗೋಡಿಯ 5 ವರ್ಷದ ಬಾಲಕಿ ವೆನ್ನೆಲ್ಲಾ ಕೊಲೆ ಪ್ರಕರಣದ ಆರೋಪಿ, ತಾಯಿ ಪ್ರಿಯಾಂಕಾಗೆ ಜಾಮೀನು ಸಿಕ್ಕಿದೆ. ಪ್ರಿಯಾಂಕಾ ಪರ ವಕೀಲ ಪ್ರಸನ್ನ ವಾದ ಮಂಡಿಸಿ ಕೊಲೆಯಲ್ಲಿ ಪ್ರಿಯಾಂಕಾ ನೇರವಾಗಿ ಭಾಗಿಯಾಗಿಲ್ಲ ಎಂದು ಹೇಳಿದ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಆಧಾರ್ ದುರ್ಬಳಕೆ ಮಾಡಿ ನಕಲಿ ಸಿಮ್‌ಗಳ ಜಾಲ: KBC ಲಾಟರಿ ವಂಚನೆ, ಸೆಕ್ಸ್‌ಟಾರ್ಷನ್ ಪ್ರಕರಣದಲ್ಲಿ ಇಬ್ಬರ ಬಂಧನ

ಆಧಾರ್ ದುರ್ಬಳಕೆ ಮಾಡಿ ನಕಲಿ ಸಿಮ್ ಜಾಲ; ಇಬ್ಬರ ಬಂಧನ

ಛತ್ತೀಸ್ಗಢದಲ್ಲಿ ಗ್ರಾಹಕರ ಆಧಾರ್ ಹಾಗೂ ಬಯೋಮೆಟ್ರಿಕ್ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡು ಅನಧಿಕೃತ ಸಿಮ್‌ಗಳನ್ನು ಸಕ್ರಿಯಗೊಳಿಸಿ ಸೈಬರ್ ಅಪರಾಧಿಗಳಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಇಬ್ಬರು ಅಧಿಕೃತ ಸಿಮ್ ಮಾರಾಟಗಾರರನ್ನು ಬಂಧಿಸಲಾಗಿದ್ದು, KBC ಲಾಟರಿ ವಂಚನೆ, ಸೆಕ್ಸ್‌ಟಾರ್ಷನ್ ಸೇರಿದಂತೆ ಹಲವು ಸೈಬರ್ ಅಪರಾಧಗಳಲ್ಲಿ ಈ ಸಿಮ್‌ಗಳನ್ನು ಬಳಸಲಾಗುತ್ತಿತ್ತು.

ʼʼನನ್ನನ್ನು ಕ್ಷಮಿಸಿʼʼ: ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು; ಡೆತ್‌ನೋಟ್‌ನಲ್ಲಿ ಏನಿದೆ?

ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

Self Harming: ಶಿಕ್ಷಕಿ ಬೈದರು, ಅವಮಾನ ಮಾಡಿದರೆಂಬ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ಹೃದಯಸ್ಪರ್ಶಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮಧುಶ್ರೀ ಎಂದು ಗುರುತಿಸಲಾಗಿದೆ.

ಅಸ್ಸಾಂನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿಯ ಬಂಧನ, ಪೊಲೀಸರ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಅಸ್ಸಾಂನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

ಅಸ್ಸಾಂನ ಶ್ರೀಭೂಮಿಯಲ್ಲಿ 8 ವರ್ಷದ ಬಾಲಕಿಯನ್ನು ಆಮಿಷವೊಡ್ಡಿ ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ. 22 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಘಟನೆಯ ವೇಳೆ ಪೊಲೀಸರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Bengaluru Road Rage: ʼʼನಮ್ಮಲ್ಲಿರುವ ಚಿನ್ನ ತೆಗೆದುಕೊಂಡು ಬಿಟ್ಟುಬಿಡಿʼʼ: ಮಡಿಲಲ್ಲಿ 10 ತಿಂಗಳ ಮಗುವನ್ನಿಟ್ಟುಕೊಂಡು  ಮಹಿಳೆ ಬೇಡಿಕೊಂಡರೂ ದಾಳಿ ನಡೆಸಿದ ದುಷ್ಕರ್ಮಿಗಳು

ಮಹಿಳೆ ಕೈ ಮುಗಿದು ಬೇಡಿಕೊಂಡರೂ ದಾಳಿ ನಡೆಸಿದ ದುಷ್ಕರ್ಮಿಗಳು

Bengaluru-Mysuru Expressway: ಜುಲೈ 5ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದ ರೋಡ್‌ ರೇಜ್‌ಗೆ ಸಂಬಂಧಿಸಿದ ಇನ್ನಷ್ಟು ಆಘಾತಕಾರಿ ವಿವರಗಳು ಹೊರ ಬಿದ್ದಿವೆ. ಕಾರ್‌ನಲ್ಲಿದ್ದ ಪತ್ನಿ ಕೈ ಮುಗಿದು ಬೇಡಿಕೊಂಡರೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ಸಾಗರ್‌ ಹೇಳಿದ್ದಾರೆ.

ಅಮೆರಿಕದಲ್ಲಿ ಪತ್ನಿಯನ್ನು ಕೊಂದು, ಶವದ ಫೋಟೋವನ್ನು ಭಾರತದಲ್ಲಿರುವ ಪ್ರೇಮಿಗೆ ಕಳುಹಿಸಿದ ಇಂಡಿಯನ್‌ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದ ಭಾರತೀಯ ಸಾಫ್ಟ್‌ವೇರ್ ಪತಿ ಬಂಧನ

Crime News: ಅಮೆರಿಕದಲ್ಲಿ ತನ್ನ ಪತ್ನಿಯನ್ನು ಕೊಂದ ಆರೋಪದ ಮೇಲೆ 30 ವರ್ಷದ ಭಾರತೀಯ ಟೆಕ್ಕಿಯನ್ನು ಬಂಧಿಸಲಾಗಿದೆ. ಅಕ್ಟೋಬರ್ 27, 2025 ರಂದು, ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಎಂಜಿನಿಯರ್ ಆಗಿದ್ದ ನಾರ್ನೆ ಪೊಲೀಸರಿಗೆ ಕರೆ ಮಾಡಿದ್ದಾನೆ. ತನ್ನ ಪತ್ನಿ ಸ್ನಾನಗೃಹದಲ್ಲಿ ಲಾಕ್ ಆಗಿದ್ದು, ಹೊರಗೆ ಬರುತ್ತಿಲ್ಲ ಎಂದು ವರದಿ ಮಾಡಿದ್ದ.

ಯಲ್ಲಾಪುರದ ಅರಬೈಲ್‌ ಘಾಟ್‌ನಲ್ಲಿ ಭೀಕರ ಅಪಘಾತ; ಏಳು ಮಂದಿ ದುರ್ಮರಣ

ಯಲ್ಲಾಪುರದ ಅರಬೈಲ್‌ ಘಾಟ್‌ನಲ್ಲಿ ಭೀಕರ ಅಪಘಾತ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ʼʼಮಾಡಿದ ಪಾಪಕ್ಕೆ ತಕ್ಕ ಶಿಕ್ಷೆʼʼ: ಮಗನ ಮುಖ ನೋಡಲು ನಿರಾಕರಿಸಿದ ಎನ್‌ಕೌಂಟರ್‌ನಲ್ಲಿ ಸತ್ತ ಬರುಯಿಪುರ್ ಹತ್ಯಾಚಾರಿಯ ತಾಯಿ

ಹತ್ಯಾಚಾರಿ ಮಗನ ಮುಖ ನೋಡಲು ನಿರಾಕರಿಸಿದ ತಾಯಿ

Baruipur Case: ಪಶ್ಚಿಮ ಬಂಗಾಳದ ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡಲ್ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸತ್ತಿದ್ದಾನೆ. ಮಗನ ಕ್ರೂರ ಕೃತ್ಯದಿಂದ ಆಘಾತಗೊಂಡ ತಾಯಿ, "ಅವನು ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆಯೇ ಇದು" ಎಂದು ಹೇಳಿ ಆತನ ಶವವನ್ನು ಸ್ವೀಕರಿಸಲು ಹಾಗೂ ಮುಖ ನೋಡಲು ನಿರಾಕರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಘಟನೆಯ ಬಳಿಕ ಹಿಂಸಾಚಾರವೂ ನಡೆದಿತ್ತು.

ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ನಕಲಿ ಡಿಎಸ್‌ಪಿ ಹೆಡೆಮುರಿ ಕಟ್ಟಿದ ವಿಜಯಪುರ ಖಾಕಿ

ನಕಲಿ ಡಿಎಸ್‌ಪಿ ಹೆಡೆಮುರಿ ಕಟ್ಟಿದ ವಿಜಯಪುರ ಖಾಕಿ

Vijayapura News: ತಾನು ಡಿಎಸ್‌ಪಿ ಎಂದು ನಂಬಿಸಿ, ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ರಾಮ ಮಂದಿರ ದೇಣಿಗೆ ಲೂಟಿ: ಆರು ಮಂದಿಯಿಂದ 40 ದಿನ ಕಳವು; ಪ್ರಮುಖ ಆರೋಪಿ ಅವಿನಾಶ್ ಶುಕ್ಲಾ

ರಾಮ ಮಂದಿರ ದೇಣಿಗೆ ಲೂಟಿ: ಎಸ್ ಐಟಿ ವರದಿಯಲ್ಲಿ ಏನಿದೆ?

ಅಯೋಧ್ಯೆ ರಾಮ ಮಂದಿರದಲ್ಲಿ ಬೆಳಕಿಗೆ ಬಂದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಅವಿನಾಶ್ ಶುಕ್ಲಾನನ್ನು ಪ್ರಮುಖ ಆರೋಪಿಯಾಗಿ ಗುರುತಿಸಲಾಗಿದೆ. ಆರು ಜನರು ಸೇರಿ ಸುಮಾರು 40 ದಿನಗಳ ಕಾಲ ಮಂದಿರದ ದೇಣಿಗೆ ಪೆಟ್ಟಿಗೆಯಿಂದ ಲಕ್ಷಾಂತರ ರುಪಾಯಿ ಕಳ್ಳತನ ಮಾಡಿರುವುದಾಗಿ ವಿಶೇಷ ತನಿಖಾ ತಂಡದ ಪ್ರಾಥಮಿಕ ವರದಿ ತಿಳಿಸಿದೆ.

Tumkur Accident: ಲಾರಿ ಹರಿದರೂ ಪವಾಡಸದೃಶ ರೀತಿಯಲ್ಲಿ ವಿದ್ಯಾರ್ಥಿನಿ ಪಾರು; ಇಲ್ಲಿದೆ ಎದೆ ಝಲ್ ಎನಿಸೋ Video!

ಲಾರಿ ಹರಿದರೂ ಪವಾಡಸದೃಶ ರೀತಿಯಲ್ಲಿ ಪಾರಾದ ವಿದ್ಯಾರ್ಥಿನಿ; Video

ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಭೀಕರ ನಡೆದಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದು,ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಮ ಮಂದಿರ ದೇಣಿಗೆ ಹಗರಣ: ಪ್ರತಿದಿನ ನಾಪತ್ತೆಯಾಗುತ್ತಿತ್ತು  6–8 ಲಕ್ಷ ರುಪಾಯಿ; ಎಸ್‌ಐಟಿ ತನಿಖೆಯಲ್ಲಿ ಹೊರ ಬರುತ್ತಿದೆ ಆಘಾತಕಾರಿ ಮಾಹಿತಿ

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣಕ್ಕೆ ಹೊಸ ಟ್ವಿಸ್ಟ್

Ram Temple Donations: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದ ದೇಣಿಗೆಯಲ್ಲಿ ಪ್ರತಿದಿನ 6–8 ಲಕ್ಷ ರುಪಾಯಿ ದುರ್ಬಳಕೆಯಾಗಿರಬಹುದು ಎಂದು ಎಸ್‌ಐಟಿ ತನಿಖೆಯಲ್ಲಿ ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಬಂಧಿಸಲಾಗಿದ್ದು, ಎಸ್‌ಬಿಐ ಸಿಬ್ಬಂದಿ, ಟ್ರಸ್ಟ್ ಅಧಿಕಾರಿಗಳು ಹಾಗೂ ಹಣದ ಹರಿವಿನ ಕುರಿತು ತನಿಖೆ ಮುಂದುವರಿದಿದೆ.

Kalaburagi News: ಕರ್ತವ್ಯದ ವೇಳೆಯೇ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್‌ ಆತ್ಮಹತ್ಯೆ!

ರೈಫಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಕಲಬುರಗಿ ನಗರದ ಜಗತ್ ವೃತ್ತದ ಬಳಿ ಪೊಲೀಸ್ ವಾಹನದಲ್ಲೇ ಕಾನ್‌ಸ್ಟೇಬಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಕಲಬುರಗಿ ಸಿಎಆರ್ ವಿಭಾಗದಲ್ಲಿ ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Viral Video: ನೆರೆಮನೆಯ ಯುವಕನಿಂದನೇ ಕಿರುಕುಳ; ವಿಡಿಯೊ ಮಾಡಿ ಕಣ್ಣೀರು ಹಾಕಿದ ಅಪ್ರಾಪ್ತ ಬಾಲಕಿ

ಅಪ್ರಾಪ್ತ ಬಾಲಕಿಗೆ ಕಿರುಕುಳ: ಕ್ರಮ ಕೈಗೊಳ್ಳಲು ನೆಟ್ಟಿಗರ ಆಗ್ರಹ

ಕಾನ್ಪುರದ ಬಾರ್ರಾ-2 ಪ್ರದೇಶದಲ್ಲಿ ನೆರೆಮನೆಯ ಯುವಕ ನಿರಂತರವಾಗಿ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿರುವ ಬಗ್ಗೆ ಬಾಲಕಿ ಆರೋಪಿಸಿದ್ದಾಳೆ. ವೈರಲ್ ಆದ ವೀಡಿಯೊದಲ್ಲಿ, ಬಾಲಕಿ ತನ್ನನ್ನು ಬರ್ರಾ-2 ನಿವಾಸಿ ಭೂಮಿ ಸಿಂಗ್ ರಾಥೋಡ್ ಎಂದು ಗುರುತಿಸಿಕೊಂಡಿದ್ದು ತಾನು ದಿನ ನಿತ್ಯವೂ ನಿರಂತರ ಭಯದಲ್ಲಿ ಬದುಕುವಂತೆ ಮಾಡಿದ ಹಲವಾರು ಘಟನೆಗಳನ್ನು ವಿವರಿಸಿದ್ದಾಳೆ..

ಪಶ್ಚಿಮ ಬಂಗಾಳದಲ್ಲಿ ಅಪ್ರಾಪ್ತೆಯ ಅತ್ಯಾಚಾರ-ಕೊಲೆ; ಸಾರ್ವಜನಿಕರ ಆಕ್ರೋಶಕ್ಕೆ ನಿರಪರಾಧಿ ಬಲಿ!

ಅತ್ಯಾಚಾರ-ಕೊಲೆ ಆರೋಪದ ಮೇಲೆ ಥಳಿಸಿ, ಹತ್ಯೆಯಾದ ವ್ಯಕ್ತಿ ನಿರಪರಾಧಿ

Crime News: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಬರೂಯಿಪುರ ಉಪನಗರದಲ್ಲಿ 11 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಶಂಕೆಯಿಂದ ಉದ್ರಿಕ್ತಗೊಂಡ ಜನಸಮೂಹ ವ್ಯಕ್ತಿಯೊಬ್ಬನನ್ನು ಥಳಿಸಿ ಹತ್ಯೆ ಮಾಡಿದೆ. ಆದರೆ, ಆತ ನಿರಪರಾಧಿ ಎಂದು ಬಳಿಕ ಗೊತ್ತಾಗಿದೆ.

Loading...