ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಜಂತರ್ ಮಂತರ್ ಪ್ರತಿಭಟನೆ: ಭದ್ರತಾ ಸಿಬ್ಬಂದಿ ಮೇಲೆ ಹರಿತವಾದ ಆಯುಧಗಳಿಂದ ದಾಳಿ;  2,500ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ

ಜಂತರ್ ಮಂತರ್ ಪ್ರತಿಭಟನೆ: 2,500 ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ

ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದಿಂದ ನಡೆಯುತ್ತಿದ್ದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ನಡೆಸಲಾಗಿದೆ. ಈವರೆಗೆ 15 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 2,500ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Horrific accident on NH 44: ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಭೀಕರ ಅಪಘಾತ: ಫಾರ್ಚುನರ್ ಕಾರು ಡಿಕ್ಕಿ: ಬೈಕ್ ಸವಾರ ಬಲಿ

ಫಾರ್ಚುನರ್ ಕಾರು ಡಿಕ್ಕಿ: ಬೈಕ್ ಸವಾರ ಬಲಿ

ಮುನಿರಾಜು ಅವರು ತಮ್ಮ ಗ್ರಾಮದಿಂದ ಬೈಕ್‌ನಲ್ಲಿ ಚಿಕ್ಕಬಳ್ಳಾಪುರ ಹೂ ಮಾರುಕಟ್ಟೆಗೆ ಬಂದು ಹೂ ಮಾರಾಟ ಮಾಡಿದ್ದರು. ಬಳಿಕ ನೆರೆಯ ಗುವ್ವಲಕಾನಹಳ್ಳಿಗೆ ಹಸು ಖರೀದಿಸುವ ಸಲುವಾಗಿ ತೆರಳಿ, ವಾಪಸ್ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ–44ರ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ರಸ್ತೆ ದಾಟಲು ಮುಂದಾಗಿದ್ದರು.

ಬೆಂಗಳೂರಿನಲ್ಲಿ ‘ವಾಂತಿ ಗ್ಯಾಂಗ್’ ಕೈಚಳಕ; ಬಸ್‌ಗಳಲ್ಲಿ ಪ್ರಯಾಣಿಕರನ್ನು ಯಾಮಾರಿಸಿ ಪಿಕ್‌ಪಾಕೆಟ್‌ ಮಾಡುತ್ತಿದ್ದ ಇಬ್ಬರು ಅರೆಸ್ಟ್‌

ಬೆಂಗಳೂರಿನಲ್ಲಿ ‘ವಾಂತಿ ಗ್ಯಾಂಗ್’ ಕೈಚಳಕ; ಇಬ್ಬರು ಅರೆಸ್ಟ್‌

ಬಸ್‌ಗಳಲ್ಲಿ ಕಿಟಕಿ ಪಕ್ಕ ಕೂರುವ ಪ್ರಯಾಣಿಕರನ್ನು ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮೊದಲು ಪ್ರಯಾಣಿಕರ ಬಳಿ ತೆರಳಿ, ವಾಂತಿ ಬರುತ್ತಿದೆ, ಸೀಟ್ ಬಿಟ್ಟು ಕೊಡಿ ಎಂದು ನಂಬಿಸುತ್ತಿದ್ದರು. ಆಗ ಪ್ರಯಾಣಿಕರು ಸೀಟ್‌ನಿಂದ ಎದ್ದು ಹೋಗುವಾಗ ಕೈಚಳಕ ತೋರಿ, ಹಣ, ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದರು. ಇದಕ್ಕೆ ಸಂಬಂಧಿಸಿ ಸದ್ಯ ಇಬ್ಬರ ಬಂಧನವಾಗಿದೆ.

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೆಜಿಗೂ ಹೆಚ್ಚು ಗಾಂಜಾ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

ಎನ್‌ಎನ್‌ಟಿ ವೃತ್ತದ ಬಳಿ ಗಾಂಜಾ ಮಾರಾಟ ಯತ್ನ

ಬಂಧಿತ ಆರೋಪಿಗಳನ್ನು ಶ್ರೀನಿವಾಸ್ (19 ವರ್ಷ)ಮೂಲತಃ ಬೆಂಗಳೂರು ರೋಜಾ(40 ವರ್ಷ) ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆ ಗಳ ತಡೆಗೆ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ, ಬೆಳಿಗ್ಗೆ ಸುಮಾರು 11:30 ರ ವೇಳೆಗೆ ಬಾತ್ಮೀದಾರರಿಂದ ಖಚಿತ ಮಾಹಿತಿ ದೊರೆತಿತ್ತು.

Chikkaballapur News: ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ದಾಳಿ; 200 ಲೀಟರ್‌ಗೂ ಅಧಿಕ ರಾಸಾಯನಿಕ, ನಕಲಿ ಲೇಬಲ್‌ಗಳು ವಶ

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ಜಾಲ ಭೇದ

ಅಧಿಕಾರಿಗಳ ಮಾಹಿತಿ ಪ್ರಕಾರ, ತಾನೇ ವಿವಿಧ ಕಂಪನಿಗಳ ಲೇಬಲ್‌ಗಳನ್ನು ಮುದ್ರಿಸಿ ಬಾಟಲಿಗಳಿಗೆ ಅಂಟಿಸಿ, ಪ್ಯಾಕಿಂಗ್ ಮಾಡಿ ನೇರವಾಗಿ ರೈತರ ಜಮೀನುಗಳಿಗೆ ತೆರಳಿ ಮಾರಾಟ ನಡೆಸುತ್ತಿದ್ದ. ದಾಳಿ ವೇಳೆ ವಶಪಡಿಸಿಕೊಂಡ ಲೇಬಲ್‌ಗಳಲ್ಲಿ ಜಿಎಸ್‌ಟಿ ಸಂಖ್ಯೆಯೂ ನಕಲಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ

ಗದಗದ ಗ್ರಾಮೀಣಾಭಿವೃದ್ಧಿ ವಿವಿ ಹಾಸ್ಟೆಲ್‌ನಲ್ಲಿ MPH ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ!

ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ MPH ವಿದ್ಯಾರ್ಥಿನಿ ಶವ ಪತ್ತೆ!

Gadag Student death: ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ ವಿದ್ಯಾರ್ಥಿನಿ, ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಬಗ್ಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Fake PhD certificates: ರಾಜ್ಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ನಕಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಿ 249 ಮಂದಿ ಆಯ್ಕೆ; ಕೇಸ್‌ ದಾಖಲಿಸಲು ಸೂಚನೆ

ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿದ 249 ಅತಿಥಿ ಉಪನ್ಯಾಸಕರು!

Guest lecturer recruitment: ಒಟ್ಟು 249 ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳ ಪೈಕಿ 148 ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಪತ್ತೆಯಾಗಿವೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ 33 ಪ್ರಕರಣಗಳು ವರದಿಯಾಗಿವೆ. ನಕಲಿ ಪ್ರಮಾಣಪತ್ರ ಸಲ್ಲಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

Chikkaballapur News: ಹೆಣ್ಣು ಮಗು ಎಂಬ ಕಾರಣಕ್ಕೆ 13 ದಿನಗಳ ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

13 ದಿನಗಳ ಹೆಣ್ಣು ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

Child murder: ಚಿಕ್ಕಬಳ್ಳಾಪುರ ನಗರದ ಶಾಂತಿನಗರ (ನಕ್ಕಲಕುಂಟೆ) ಪ್ರದೇಶದಲ್ಲಿ ಘಟನೆ ನಡೆದಿದೆ. ತಾಯಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮತ್ತೊಮ್ಮೆ ಹೆಣ್ಣು ಮಗು ಜನಿಸಿದ್ದೇ ಕೃತ್ಯಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ; ಮಕ್ಕಳಿಗೆ ಭಾರವಾಗಬಾರದೆಂದು ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಇಬ್ಬರು ಹೆಣ್ಣು ಮಕ್ಕಳಿಗೆ ಭಾರವಾಗಬಾರದೆಂದು ವೃದ್ಧ ದಂಪತಿ ಆತ್ಮಹತ್ಯೆ!

Bengaluru News: ಬೆಂಗಳೂರಿನ ಬಸವೇಶ್ವರ ನಗರ ವ್ಯಾಪ್ತಿಯ ಮಂಜುನಾಥನಗರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು, ಮೊಮ್ಮಕ್ಕಳು ಹೊಂದಿದ್ದ ವೃದ್ಧ ದಂಪತಿ, ಇಳಿವಯಸ್ಸಿನಲ್ಲಿ ಯಾರಿಗೂ ಹೊರೆಯಾಗಬಾರದು ಎನ್ನುವ ಒಂದೇ ಕಾರಣಕ್ಕೆ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ.

ಭೀಮಾ ತೀರದಲ್ಲಿ ಮತ್ತೆ ರಕ್ತದ ಓಕುಳಿ: ಟಂ-ಟಂ ಚಾಲಕನಿಗೆ ಮಾರಣಾಂತಿಕ ಹಲ್ಲೆ

ಭೀಮಾ ತೀರದಲ್ಲಿ ಮತ್ತೆ ರಕ್ತದ ಓಕುಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಪ್ರಜ್ವಲ್ ತಂದೆ ಮಲ್ಕಪ್ಪ ಹೊಸಮನಿ ಹಾಗೂ ಪ್ರೀತಮ್ ಹೊಸಮನಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದತ್ತುವನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಸ್ಟಡಿಯಲ್ಲಿದ್ದ ಸಹೋದ್ಯೋಗಿ ಗುಂಡು ಹಾರಿಸಿದ್ದರಿಂದ ಇಬ್ಬರು ಬಿಎಸ್‌ಎಫ್ ಯೋಧರು ಸಾವು

ಇಬ್ಬರು ಬಿಎಸ್‌ಎಫ್ ಯೋಧರು ಸಾವು

ಪಶ್ಚಿಮ ಬಂಗಾಳದಲ್ಲಿ ಕಸ್ಟಡಿಯಲ್ಲಿದ್ದ ಬಿಎಸ್‌ಎಫ್ ಕಾನ್‌ಸ್ಟೆಬಲ್ ಒಬ್ಬ ರೈಫಲ್ ನಿಂದ ಗುಂಡು ಹಾರಿಸಿದ್ದರಿಂದ ಇಬ್ಬರು ಬಿಎಸ್‌ಎಫ್ ಯೋಧರು ಸಾವನ್ನಪ್ಪಿದ್ದಾರೆ. ಈ ಘಟನೆ ಮಾಲ್ಡಾದ ಶಿಬಿರದಲ್ಲಿ ನಡೆಸಿದೆ. ಬಂಧಿತ ಬಿಎಸ್‌ಎಫ್ ಕಾನ್‌ಸ್ಟೆಬಲ್ ಮಾನಸಿಕ ಒತ್ತಡದಿಂದ ಬಳಲುತ್ತಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ: ವೈದ್ಯರಿಂದ 2 ಕೋಟಿ ರುಪಾಯಿ ಸುಲಿಗೆ ಮಾಡಿದ ನರ್ಸ್; ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ವೈದ್ಯರಿಂದ 2 ಕೋಟಿ ರೂ. ಸುಲಿಗೆ ಮಾಡಿದ ನರ್ಸ್

ಖಾಸಗಿ ಚಿತ್ರಗಳ ಲೀಕ್, ಕೊಲೆ, ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ಖಾಸಗಿ ಆಸ್ಪತ್ರೆ ವೈದ್ಯರೊಬ್ಬರಿಂದ ನರ್ಸ್ ವೊಬ್ಬ 2 ಕೋಟಿ ರೂ. ಸುಲಿಗೆ ಮಾಡುವುದಾಗಿ ಬೆದರಿಕೆ ಒಡ್ಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ನರ್ಸ್ ನನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯಲ್ಲಿ ಹಿಂಸಾಚಾರ: ಇಬ್ಬರು ಎಸಿಪಿಗಳ ಮೇಲೆ ಪ್ರತಿಭಟನಾಕಾರರಿಂದ ದಾಳಿ

ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ

ಕಾಕ್ರೋಚ್ ಜನತಾ ಪಕ್ಷದಿಂದ ನಡೆಯುತ್ತಿರುವ ಪ್ರತಿಭಟನೆ ಬುಧವಾರ ರಾತ್ರಿ ಹಿಂಸಾತ್ಮಕ ರೂಪ ತಾಳಿದೆ. ಈ ಸಂದರ್ಭದಲ್ಲಿ ದೆಹಲಿ ಪೊಲೀಸ್ ಸಹಾಯಕ ಪೊಲೀಸ್ ಆಯುಕ್ತರಿಬ್ಬರ ಮೇಲೆ ಕಲ್ಲು, ಬಾಟಲ್ ನಿಂದ ದಾಳಿ ನಡೆಸಲಾಗಿದೆ. ದಿನವಿಡೀ ನಡೆದ ಘರ್ಷಣೆಯಲ್ಲಿ ಐದು ಮಂದಿ ಪ್ರತಿಭಟನಾಕಾರರು ಕೂಡ ಗಾಯಗೊಂಡಿದ್ದಾರೆ.

Bantwal News: ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಮರ ಬಿದ್ದು ಬಾಲಕಿ ಸಾವು, ನಾಲ್ವರು ಮಕ್ಕಳಿಗೆ ಗಂಭೀರ ಗಾಯ

ಬಂಟ್ವಾಳದಲ್ಲಿ ಶಾಲಾ ಬಸ್‌ ಮೇಲೆ ಮರ ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪ ಕಲ್ಲೆಟ್ಟಿ ಘಟನೆ ನಡೆದಿದೆ. ಸಂಜೆ ಮಕ್ಕಳನ್ನು ಬಿಡಲು ಹೋಗುತ್ತಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದ ಬಸ್‌ ಮೇಲೆ ಮರ ಉರುಳಿ ಬಿದ್ದು ಬಾಲಕಿ ಮೃತಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಹೀನ ಕೃತ್ಯ; ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

Belagavi News: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಚಿಂಗ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಕೃತ್ಯ ಖಂಡಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಉಗ್ರ ಪ್ರತಿಭಟನೆ ನಡೆಸಿದ್ದಾರೆ.

‌Sowjanya case: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ

‌ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ

ಸೌಜನ್ಯ ತಾಯಿ ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ ಕರ್ತವ್ಯ ಲೋಪ ಹಾಗೂ ತನಿಖಾ ವೈಖರಿಯನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಪೊಲೀಸರು ಸಲ್ಲಿಸಿದ್ದ ವರದಿಯನ್ನೇ ಸಿಬಿಐ ಭಾಷಾಂತರಿಸಿ ಕೋರ್ಟ್‌ಗೆ ಸಲ್ಲಿಸಿದೆಯೇ ವಿನಃ ಆಳವಾದ ತನಿಖೆ ನಡೆಸಿಲ್ಲ ಎಂದು ಕಿಡಿಕಾರಿದೆ.

ಹಾವೇರಿಯಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ; ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ನೀಡಲು ರೈತ ಸಂಘ ಆಗ್ರಹ

ಹಾವೇರಿಯಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Haveri News: ಬೆಳೆ ವೈಫಲ್ಯ ಮತ್ತು ಸಾಲ ಬಾಧೆಯಿಂದ ಮನನೊಂದು ರೈತರೊಬ್ಬರು ತಮ್ಮ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಜರುಗಿದೆ. ಮೃತ ಕುಟುಂಬಕ್ಕೆ ₹50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

Vijayalakshmi Darshan: ದರ್ಶನ್ ಪತ್ನಿಗೆ ಅಶ್ಲೀಲ ಕಾಮೆಂಟ್ ಪ್ರಕರಣ; 4ನೇ ಆರೋಪಿಗೆ ಜಾಮೀನು ಮಂಜೂರು

ದರ್ಶನ್ ಪತ್ನಿಗೆ ಅಶ್ಲೀಲ ಕಾಮೆಂಟ್; 4ನೇ ಆರೋಪಿಗೆ ಜಾಮೀನು ಮಂಜೂರು

'ಡೆವಿಲ್' ಸಿನಿಮಾ ಪ್ರಚಾರದ ವೇಳೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ ಮಾಡಿ, ಟ್ರೋಲ್‌ ಮಾಡಲಾಗಿತ್ತು. ಈ ಕುರಿತು ವಿಜಯಲಕ್ಷ್ಮಿ ಅವರು ದೂರು ನೀಡಿದ ಬಳಿಕ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ನಾಲ್ಕನೇ ಆರೋಪಿಗೆ ಜಾಮೀನು ಮಂಜೂರು ಆಗಿದೆ.

ಶಾಸಕರ ಮೇಲೆ ಮೊಟ್ಟೆ ಎಸೆತ; ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ದೂರು

ಮೊಟ್ಟೆ ಎಸೆತ; ಬೆಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿಯಿಂದ ದೂರು

ಹಿಂಸೆಗೆ ಪ್ರಚೋದನೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕವನ್ನು ಗೂಂಡಾ‌ ರಾಜ್ಯದತ್ತ ತಳ್ಳುವ ಪ್ರಯತ್ನವನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಸದ್ಯದಲ್ಲೇ ಗೂಂಡಾ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯದ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ.

ಭುಗಿಲೆದ್ದ ಆಕ್ರೋಶ; ಪುಣೆ ಬಾಲಕನನ್ನು ಹತೈಗೈದ ಅಪ್ರಾಪ್ತನಿಗೆ ಸಾರ್ವಜನಿಕವಾಗಿ ಚಪ್ಪಲಿ ಏಟು ನೀಡಿದ ಮಹಿಳೆ: ವಿಡಿಯೊ ಇಲ್ಲಿದೆ

ಕೊಲೆ ಎಸಗಿದ ಅಪ್ರಾಪ್ತನಿಗೆ ಚಪ್ಪಲಿ ಏಟು ನೀಡಿದ ಮಹಿಳೆ

Viral Video: ಮಹಾರಾಷ್ಟ್ರದ ಪುಣೆಯ ಕಾತ್ರಾಜ್‌ನಲ್ಲಿ ಇತ್ತೀಚೆಗೆ ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, 17 ವರ್ಷದ ಬಾಲಕನ ಮೇಲೆ ಅಪ್ರಾಪ್ತ ಬಾಲಕರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೈದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ 17 ವರ್ಷದ ಗಣೇಶ್ ರವೀಂದ್ರ ಮಾಲ್ವೆ ಮೃತಪಟ್ಟಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ವಾಹನದ ಬಾನೆಟ್‌ಗೆ ಕಟ್ಟಿ ಮೆರವಣಿಗೆ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಈ ವೇಳೆ ಮಹಿಳೆಯೊಬ್ಬರು ಅಪ್ರಾಪ್ತರ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಾಜಿನಗರದಲ್ಲಿ ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌; ಪ್ರಮುಖ ಆರೋಪಿ ಸೇರಿ 11 ಮಂದಿ ಬಂಧನ

ಶಿವಾಜಿನಗರದಲ್ಲಿ ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌; 11 ಮಂದಿ ಬಂಧನ

ಶಿವಾಜಿನಗರದಲ್ಲಿ ಕರ್ತವ್ಯ ನಿರತ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಅಧಿಕಾರಿಗಳ ಹಾಗೂ ಸಿಬ್ಬಂದಿಯ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಸೇರಿದಂತೆ ಒಟ್ಟು 11 ಮಂದಿಯನ್ನು ಬಂಧಿಸಿದ್ದಾರೆ.

Bengaluru Murder: ರಾಮೋಹಳ್ಳಿಯ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ; ಸೂಟ್‌ಕೇಸ್‌ನಲ್ಲಿ ತುಂಬಿ ಎಸೆದ ದುಷ್ಕರ್ಮಿಗಳು!

ಕೆರೆಯಲ್ಲಿ ತೇಲಿಬಂದ ಸೂಟ್‌ಕೇಸ್‌ನಲ್ಲಿ‌‌ ಮಹಿಳೆಯ ಮೃತದೇಹ ಪತ್ತೆ!

Dead body found in suitcase: ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಂಬಳಗೋಡು ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Footpath clearance drive: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ರೆ ಸುಮ್ಮನಿರಲ್ಲ: ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ

ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ರೆ ಸುಮ್ಮನಿರಲ್ಲ: ಕೃಷ್ಣಬೈರೇಗೌಡ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳ ಅನುಸಾರ ಸುರಕ್ಷಿತ ಪಾದಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನವನ್ನು ಬೆಂಗಳೂರಿನಲ್ಲಿ ಕೈಗೊಳ್ಳಲಾಗಿದೆ. ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ಭಯಾನಕ ಘಟನೆ: ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಮದ್ಯ ಕುಡಿಸಿದ ಪಾಪಿಗಳು

ದೇವನಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

Crime News: ಬಾಲಕಿಯನ್ನು ಅಪಹರಿಸಿ, ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ, ಮರುದಿನ ಬೆಳಗ್ಗೆ ಆಕೆಯ ಮನೆಯ ಬಳಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ನೆಪದಲ್ಲಿ ಆಕೆಯನ್ನು ಹೊರಗೆ ಕರೆದೊಯ್ಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Loading...