ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಟಿಸಿಎಸ್ ಕಂಪನಿ ಮತಾಂತರ ಕೇಸ್‌;  ಗರ್ಭಿಣಿ ಎಂದು ನಿರೀಕ್ಷಣಾ ಜಾಮೀನು ಕೋರಲು ನಿದಾ ಖಾನ್ ಸಜ್ಜು?

ಗರ್ಭಿಣಿ ಎಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಾಳಾ ನಿದಾ ಖಾನ್?

religious conversion case: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಮಹಾರಾಷ್ಟ್ರದ ನಾಸಿಕ್ ಘಟಕದಲ್ಲಿ ನಡೆದ ಲೈಂಗಿಕ ಕಿರುಕುಳ ಹಾಗೂ ಧಾರ್ಮಿಕ ದಬ್ಬಾಳಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಿದಾ ಖಾನ್, ಗರ್ಭಿಣಿ ಎಂದು ಪ್ರಮುಖ ಕಾರಣವೆಂದು ಉಲ್ಲೇಖಿಸಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

Yadgir accident: ಯಾದಗಿರಿ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ; ಸಿರವಾರ ಪಟ್ಟಣ ಪಂಚಾಯತ್ ಸದಸ್ಯನ ಕುಟುಂಬದ 6 ಮಂದಿ ಸಜೀವ ದಹನ

Yadgir accident: ಯಾದಗಿರಿ ಅಪಘಾತದಲ್ಲಿ ಮೃತಪಟ್ಟವರ ವಿವರ ಇಲ್ಲಿದೆ

ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಶುಕ್ರವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿತ್ತು. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಇದರಿಂದ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

Bus Caught fire: ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ತಪ್ಪಿದ ದೊಡ್ಡ ಅನಾಹುತ

ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ತಪ್ಪಿದ ದೊಡ್ಡ ಅನಾಹುತ

ಮುರುಡೇಶ್ವರ ದೇವಸ್ಥಾನ ರಸ್ತೆಯಲ್ಲಿ ದೂರವಾಣಿ ಕೇಂದ್ರದ ಎದುರುಗಡೆ ಸಾಗುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಈ ಬಸ್ ವಾಯುವ್ಯ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ್ದು, ಕುಮಟಾದಿಂದ ಭಟ್ಕಳ ಮಾರ್ಗವಾಗಿ ಮುರುಡೇಶ್ವರ ಬಸ್ ನಿಲ್ದಾಣದತ್ತ ಸಾಗುತ್ತಿತ್ತು.

"ಸೈರನ್ ಹಾಕಿದ್ದೆ, ದಾರಿ ಬಿಡೋಕ್ಕೇನಾಗಿತ್ತು?": ಅಪಘಾತ ಮಾಡಿ ಸಂತ್ರಸ್ತರನ್ನೇ ಗದರಿಸಿದ ಬಿಜೆಪಿ ಶಾಸಕನ ಮಗ!

ಐವರ ಮೇಲೆ ಥಾರ್ ಕಾರು ಹರಿಸಿ ದರ್ಪ ಮೆರೆದ ಶಾಸಕರ ಮಗ!

ಮಧ್ಯಪ್ರದೇಶದ ಶಿವಪುರಿಯಲ್ಲಿ ಬಿಜೆಪಿ ಶಾಸಕ ಪ್ರೀತಮ್ ಲೋಧಿ ಅವರ ಪುತ್ರ ದಿನೇಶ್ ಲೋಧಿ ವೇಗವಾಗಿ ಚಲಾಯಿಸಿದ ಥಾರ್ ವಾಹನದಿಂದ ಐವರ ಮೇಲೆ ಡಿಕ್ಕಿ ಹೊಡೆದಿದ್ದಾನೆ. ಗಾಯಗೊಂಡವರಲ್ಲಿ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಅಪಘಾತದ ನಂತರ ಸಂತ್ರಸ್ತರನ್ನೇ “ಸೈರನ್ ಹಾಕಿದ್ದೆ, ಏಕೆ ಸರಿಯಲಿಲ್ಲ?” ಎಂದು ಪ್ರಶ್ನಿಸಿದ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ರಸಗುಲ್ಲಾ ತೆಗೆದುಕೊಂಡಿದ್ದಕ್ಕೆ ಬಾಲಕನನ್ನು ತಂದೂರಿ ಬಟ್ಟಿಗೆ ಎಸೆದ ಪಾಪಿ

ಬಾಲಕನನ್ನು ತಂದೂರಿ ಬಟ್ಟಿಗೆ ಎಸೆದ ಪಾಪಿ

ಮದುವೆ ಸಮಾರಂಭದಲ್ಲಿ ಬಾಲಕನೊಬ್ಬ ರಸಗುಲ್ಲಾ ತೆಗೆದುದಕ್ಕಾಗಿ ಅಡುಗೆಯವನು ಆತನನ್ನು ತಂದೂರಿ ಬಟ್ಟಿಗೆ ಎಸೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಲಕ್ನೋ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಅಡುಗೆಯವನು ನಾಪತ್ತೆಯಾಗಿದ್ದಾನೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Tumkur news: ನಾಪತ್ತೆಯಾಗಿದ್ದ ಮಹಿಳೆಯ ತಲೆಬುರುಡೆ ಪತ್ತೆ, ಸಿಸಿಟಿವಿಯಲ್ಲಿ ಸಿಕ್ಕಿತು ಕೊಲೆ ಸುಳಿವು

ನಾಪತ್ತೆಯಾದ ಮಹಿಳೆಯ ತಲೆಬುರುಡೆ ಪತ್ತೆ, ಸಿಸಿಟಿವಿ ನೀಡಿತು ಕೊಲೆ ಸುಳಿವು

ಮೃತ ಯುಮುನಾ ತನ್ನ ಗಂಡ ಹಾಗೂ ಮಕ್ಕಳೊಂದಿಗೆ ಮಾ.19ರಂದು ಬರ್ತಡೇ ಆಚರಿಸಿಕೊಂಡಿದ್ದರು. ನಂತರ ಮಾ.21ರಂದು ಎಂದಿನಂತೆ ಕೆಲಸಕ್ಕೆ ಬಂದಿದ್ದಾರೆ. ಅಂದು ಸಂಜೆ ಕೆಲಸ ಬಿಟ್ಟಾಗ ಅನೈತಿಕ ಸಂಬಂಧ ಹೊಂದಿದ್ದ ರಾಘವೇಂದ್ರನ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

IPL match ticket black market: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟಿಕೆಟ್‌ ಕಾಳಸಂತೆ ದಂಧೆ ಪತ್ತೆ, ಕ್ಯಾಂಟೀನ್‌ ನೌಕರ ಸೆರೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ‌ ಐಪಿಎಲ್ ಟಿಕೆಟ್‌ ಕಾಳಸಂತೆ ದಂಧೆ ಪತ್ತೆ

ಆರೋಪಿ ಚಂದ್ರಶೇಖರ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ನೀಡಿದ್ದಾನೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಸದಸ್ಯ ಎನ್ನಲಾದ ಗಣೇಶ್ ಹರಿಕೇಶ್ ಎಂಬವರು ತನಗೆ ಈ ಟಿಕೆಟ್‌ಗಳನ್ನು ನೀಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತೆ ಸೂಚಿಸಿದ್ದರು ಎಂದು ಆತ ಒಪ್ಪಿಕೊಂಡಿದ್ದಾನೆ. ಇದರಿಂದಾಗಿ ಈ ದಂಧೆಯ ಬೇರುಗಳು ಬಹಳ ಆಳವಾಗಿರುವುದು ಸ್ಪಷ್ಟವಾಗಿದೆ.

Yogesh Gowda Murder Case: ಮೂವರು ಮಕ್ಕಳು ಇದ್ದಾರೆ, ಕಡಿಮೆ ಶಿಕ್ಷೆ ಕೊಡಿ; ಜಡ್ಜ್‌ಗೆ ಶಾಸಕ ವಿನಯ್‌ ಕುಲಕರ್ಣಿ ಮನವಿ

ನನಗೆ ಕಡಿಮೆ ಶಿಕ್ಷೆ ಕೊಡಿ; ಜಡ್ಜ್‌ಗೆ ಶಾಸಕ ವಿನಯ್‌ ಕುಲಕರ್ಣಿ ಮನವಿ

MLA Vinay Kulkarni: ಶಾಸಕ ವಿನಯ್‌ ಕುಲಕರ್ಣಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಎಸ್‌ ಶ್ಯಾಮ್‌ಸುಂದರ್‌ ಅವರು, ವಿನಯ್‌ ಕುಲಕರ್ಣಿ ಜನರ ವಿಶ್ವಾಸ ಗಳಿಸಿ ಗೆದ್ದಿದ್ದಾರೆ. ಮೂವರು ಮಕ್ಕಳಿದ್ದು, 3,500ಕ್ಕೂ ಅಧಿಕ ಆಕಳು/ಎಮ್ಮೆ ಸಾಕಿದ್ದು, ಅವುಗಳನ್ನು ನೋಡಿಕೊಳ್ಳಬೇಕಿದೆ. ಅವರಿಗೆ ಕಡಿಮೆ ಶಿಕ್ಷೆ ವಿಧಿಸಬೇಕು ಎಂದು ಕೋರಿದ್ದಾರೆ.

ನಾಸಿಕ್ ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ, ಮತಾಂತರದ ಹಗರಣ: ಉದ್ಯೋಗಿಗಳಿಗೆ ವರ್ಕ್‌ ಫ್ರಂ ಹೋಮ್‌

ಮಹಿಳಾ ಉದ್ಯೋಗಿಗಳ ಕಿರುಕುಳ: ಸಂಕಷ್ಟದಲ್ಲಿ ಟಿಸಿಎಸ್

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನ ನಾಸಿಕ್ ಬಿಪಿಒ ಕೇಂದ್ರದಲ್ಲಿ ಮಹಿಳಾ ಉದ್ಯೋಗಿಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಬಲವಂತದ ಧಾರ್ಮಿಕ ಆಚರಣೆ ಆರೋಪ ಹೊರಬಂದಿದೆ. ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಿ ಎಂಟು ಮಂದಿಯನ್ನು ಬಂಧಿಸಿದೆ. ಘಟನೆಯ ಹಿನ್ನೆಲೆಯಲ್ಲಿ ಕಚೇರಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಪ್ರಕರಣದ ತನಿಖೆಗೆ ಎಟಿಎಸ್ ಮತ್ತು ಎನ್‌ಐಎ ಸಹಾಯ ಪಡೆಯುವ ಸಾಧ್ಯತೆ ಇದೆ. ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಏಪ್ರಿಲ್ 18ರಂದು ಸ್ಥಳಕ್ಕೆ ಭೇಟಿ ನೀಡಲಿದೆ.

ಆಚರಣೆ ಹೆಸರಲ್ಲಿ ಲೈಂಗಿಕ ಶೋಷಣೆ: ನಕಲಿ ದೇವಮಾನವನ ಕರ್ಮಕಾಂಡ ಬೆಳಕಿಗೆ ಬಂದಿದ್ದು ಹೇಗೆ?

ಜಿಮ್ ತರಬೇತುದಾರ ದೇವಮಾನವನಾಗಿದ್ದೇಗೆ?

Gym Trainer Turned Godman: ಜಿಮ್ ತರಬೇತುದಾರ ಆಗಿದ್ದ ವ್ಯಕ್ತಿಯೊಬ್ಬ ಸ್ವಯಂಘೋಷಿತ ದೇವಮಾನವನಾದ ಕಥೆಯಿದು. ನಾಲ್ಕು ವರ್ಷಗಳ ಹಿಂದಿನವರೆಗೂ ಮುಂಬೈಯ ರಿದಮ್ ಪಾಂಚಾಲ್ ಅಲಿಯಾಸ್ ಮಾಂಟಿ ಎಂಬಾತ ಜಿಮ್ ತರಬೇತುದಾರರಾಗಿದ್ದ. ನಂತರ, ಒಂದು ದಿನ ಏಕಾಏಕಿ ಸ್ವಯಂಘೋಷಿತ ದೇವಮಾನವನಾದ. ಆತನ ಕುರಿತಾದ ವಿವರ ಇಲ್ಲಿದೆ.

ಗಲಾಟೆ ಕೇಸ್‌ನಲ್ಲಿ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್‌; ವಿಚಾರಣೆಗೆ ಹೈಕೋರ್ಟ್‌ ತಡೆ

ಅನಂತಕುಮಾರ್‌ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

Road rage case: ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಗಲಾಟೆ ಪ್ರಕರಣದಿಂದ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಹೀಗಾಗಿ ಮಗನ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಹೈಕೋರ್ಟ್‌ ಆದೇಶದಿಂದ ದಾಬಸ್‌ಪೇಟೆ ಬಳಿ ನಡೆದಿದ್ದ ರೋಡ್‌ ರೇಜ್‌ ಪ್ರಕರಣದಲ್ಲಿ ಅಶುತೋಷ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದಿದೆ.

ಪ್ರೀತಿ-ಪ್ರೇಮ ಹೆಸರಲ್ಲಿ ಬ್ಲ್ಯಾಕ್‌ಮೇಲ್: ಡೇಟಿಂಗ್ ಆ್ಯಪ್‌ಗಳ ಮೂಲಕ 500 ಮಹಿಳೆಯರಿಗೆ 2 ಕೋಟಿ ರುಪಾಯಿ ವಂಚನೆ

ಡೇಟಿಂಗ್ ಆ್ಯಪ್‌ಗಳ ಮೂಲಕ 500 ಮಹಿಳೆಯರಿಗೆ 2 ಕೋಟಿ ರುಪಾಯಿ ವಂಚನೆ

Dating App Fraud: ಡೇಟಿಂಗ್ ಆ್ಯಪ್‌ಗಳ ಮೂಲಕ 500 ಮಹಿಳೆಯರಿಗೆ ವಂಚಿಸಿದ್ದ ಕುಖ್ಯಾತ ವಂಚಕನನ್ನು ಬಂಧಿಸಲಾಗಿದೆ. ಕುಖ್ಯಾತ ಸೈಬರ್ ವಂಚಕ ಆನಂದ್ ಕುಮಾರ್‌ನನ್ನು ಇದೀಗ ಬಂಧಿಸಲಾಗಿದೆ. ಯುವತಿಯೊಬ್ಬಳು ವಂಚನೆ ಬಗ್ಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

5 ವರ್ಷದ ಮೊಮ್ಮಗಳ ಕೈ ಕಾಲು ಕಟ್ಟಿ ಕಟ್ಟಿಹಾಕಿ ಬಿಸಿಲಿನಲ್ಲಿ ನಿಲ್ಲಿಸಿದ ಮಹಿಳಾ ಎಎಸ್‌ಐ

5 ವರ್ಷದ ಮೊಮ್ಮಗಳನ್ನು ಬಿಸಿಲಿನಲ್ಲಿ ಕಟ್ಟಿಹಾಕಿದ ಮಹಿಳಾ ಎಎಸ್‌ಐ

ಪಂಜಾಬ್‌ನ ಫರಿದ್‌ಕೋಟ್‌ನಲ್ಲಿ ನಡೆದ ಅಮಾನವೀಯ ಘಟನೆಯೊಂದು ದೇಶಾದ್ಯಂತ ಆಕ್ರೋಶ ಹುಟ್ಟುಹಾಕಿದೆ. ಎಎಸ್‌ಐ ಸರಬ್‌ಜಿತ್ ಕೌರ್ ತನ್ನ 5 ವರ್ಷದ ಮೊಮ್ಮಗಳನ್ನು ಬಿಸಿಲಿನಲ್ಲಿ ಗೇಟ್‌ಗೆ ಕಟ್ಟಿಹಾಕಿದ ವಿಡಿಯೋ ವೈರಲ್ ಆಗಿದೆ. ಮಗುವಿನ ಅಳುವಿನ ಶಬ್ದ ಕೇಳಿದ ನೆರೆಹೊರೆಯವರು ಆಕೆಯನ್ನು ರಕ್ಷಿಸಿದ್ದಾರೆ. ಈ ಮಗುವಿನ ಪೋಷಕರು ವಿದೇಶದಲ್ಲಿದ್ದಾರೆ. ಸದ್ಯ ಎಎಸ್‌ಐಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

ಸಾಗರದಲ್ಲಿ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

Shivamogga News: ಶಿವಮೊಗ್ಗ ಜಿಲ್ಲೆ ಸಾಗರದ ಎಸ್.ಎನ್. ನಗರದಲ್ಲಿ ಘಟನೆ ನಡೆದಿದೆ. ಗಣೇಶ್ ಎಂಬುವವರ ಪುತ್ರ ಹಾವು ಕಚ್ಚಿದ್ದರಿಂದ ಮೃತಪಟ್ಟಿದ್ದಾನೆ. ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಕೈಗೆ ನಾಗರಹಾವು ಕಚ್ಚಿದೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.

‘ʼಮಗು ಬೇಕಾದರೆ ಪತ್ನಿಯನ್ನು ನನ್ನ ಬಳಿಗೆ ಕಳ್ಸುʼʼ: ಟಿಸಿಎಸ್ ಉದ್ಯೋಗಿ ಬಳಿ ಬಾಸ್‌ನ ಅಸಭ್ಯ ನಡವಳಿಕೆ

ಟಿಸಿಎಸ್ ಉದ್ಯೋಗಿ ಬಳಿ ಬಾಸ್‌ನ ಅಸಭ್ಯ ನಡವಳಿಕೆ

TCS employee’s assault: ಮಹಾರಾಷ್ಟ್ರದ ನಾಸಿಕ್ ಶಾಖೆಯ ಟಿಸಿಎಸ್ ಕಂಪನಿಯ ಪುರುಷ ಉದ್ಯೋಗಿಯೊಬ್ಬರು ಟೋಪಿ ಹಾಕಿ ನಮಾಜ್ ಮಾಡಲು ಒತ್ತಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ. ಮಗು ಬೇಕಾದರೆ ನಿನ್ನ ಹೆಂಡತಿಯನ್ನು ನನ್ನ ಕಳುಹಿಸು ಎಂದು ಬಾಸ್‌ ಹೇಳಿದ್ದಾಗಿ ಮತ್ತೊಬ್ಬ ಉದ್ಯೋಗಿ ತಿಳಿಸಿದ್ದಾರೆ. ಆ ಮೂಲಕ ಟಿಸಿಎಸ್ ಕಂಪನಿಯ ಕರ್ಮಕಾಂಡ ಬಗೆದಷ್ಟೂ ಹೊರ ಬರುತ್ತಿದೆ.

Love jihad: ಬೆಂಗಳೂರಿನಲ್ಲೂ ಲವ್‌ ಜಿಹಾದ್!‌ ಮತಾಂತರ ಆಗದಿದ್ದುದಕ್ಕೆ ಯುವತಿಗೆ ದಾರುಣ ಹಲ್ಲೆ

ಬೆಂಗಳೂರಿನಲ್ಲೂ ಲವ್‌ ಜಿಹಾದ್!‌ ಮತಾಂತರ ಆಗದ ಯುವತಿಗೆ ದಾರುಣ ಹಲ್ಲೆ

ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಮನಬಂದಂತೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

Yogesh gowda Murder Case: ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಯೋಗೇಶ್‌ ಗೌಡ ಕೊಲೆ ಪ್ರಕರಣ: ತೀರ್ಪು ನಾಳೆ ಪ್ರಕಟ

ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ನಿನ್ನೆ ತೀರ್ಪು ಪ್ರಕಟಿಸಿದ್ದರು. ಕೂಡಲೇ ಅವರನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿತ್ತು.

ವಂದೇ ಮಾತರಂ ಹಾಡಲು ನಿರಾಕರಿಸಿದ ಇಂದೋರ್‌ನ ಇಬ್ಬರು ಮುಸ್ಲಿಂ ಕಾರ್ಪೊರೇಟರ್‌ಗಳು; ಭುಗಿಲೆದ್ದ ವಿವಾದ

ವಂದೇ ಮಾತರಂ ಹಾಡಲು ನಿರಾಕರಣೆ: ಎಫ್‌ಐಆರ್ ದಾಖಲು

ಇಂದೋರ್‌ನ ಇಬ್ಬರು ಕಾರ್ಪೊರೇಟರ್‌ಗಳು ವಂದೇ ಮಾತರಂ ಹಾಡಲು ನಿರಾಕರಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಏಪ್ರಿಲ್ 8ರಂದು ನಡೆದ ಬಜೆಟ್ ಅಧಿವೇಶನದಲ್ಲಿ ಇಬ್ಬರು ಕಾರ್ಪೊರೇಟರ್‌ಗಳು ವಂದೇ ಮಾತರಂ ಹಾಡಲು ನಿರಾಕರಿಸಿದ್ದರು. ಅವರ ವಿರುದ್ಧ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಒಳಪಡಿಸಲಾಗಿದೆ.

Murder Case: ಹೃದಯವಿದ್ರಾವಕ ಘಟನೆ: ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ

ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ

ತಾಯಿ ಪ್ರತಿದಿನ ಅನುಭವಿಸುತ್ತಿದ್ದ ನೋವು ಮತ್ತು ನರಳಾಟವನ್ನು ನೋಡಿ ವೆಂಕಟೇಶ್ ಮಾನಸಿಕವಾಗಿ ಕುಗ್ಗಿದ್ದ. ತಾಯಿ ಪಡುತ್ತಿದ್ದ ಕಷ್ಟವನ್ನು ನೋಡಲು ಆಗುತ್ತಿರಲಿಲ್ಲ, ಆ ಯಾತನೆಯ ಬದುಕಿನಿಂದ ಅವರಿಗೆ ಮುಕ್ತಿ ನೀಡಲು ಈ ನಿರ್ಧಾರ ಮಾಡಿದೆ ಎಂದು ವೆಂಕಟೇಶ್ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ.

ಬಾಗಲಕೋಟೆಯಲ್ಲೂ ಲವ್‌ ಜಿಹಾದ್‌ ಶಂಕೆ: ಅನ್ಯಕೋಮಿನ ಯುವಕನ ಕಿರುಕುಳ, ಯುವತಿ ಆತ್ಮಹತ್ಯೆ

ಬಾಗಲಕೋಟೆ:‌ ಲವ್‌ ಜಿಹಾದ್‌ ಶಂಕೆ, ಯುವಕನ ಕಿರುಕುಳ, ಯುವತಿ ಆತ್ಮಹತ್ಯೆ

ಟಯರ್‌ ಅಂಗಡಿಗೆ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೊಂಗ್ರಿಸಾಬ್ ನದಾಫ್‌ ಮಧ್ಯೆ ಕಳೆದ 2 ವರ್ಷಗಳಿಂದ ಪ್ರೀತಿಯಿತ್ತು. ಆದರೆ ಏಪ್ರಿಲ್ 15ರಂದು ಈಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾಗಿರುವ ಭೂಮಿಕಾ ಹಿಜಾಬ್‌ನಲ್ಲಿ ಕಾಣಿಸಿಕೊಂಡಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

ರಾಬರ್ಟ್ ವಾದ್ರಾಗೆ ಸಮನ್ಸ್ ಜಾರಿ

ಜಾರಿ ನಿರ್ದೇಶನಾಲಯವು ಸಲ್ಲಿಸಿದ ದೂರಿನ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ನ್ಯಾಯಾಲಯವು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ವಾದ್ರಾ ಮತ್ತು ಇತರ ಎಂಟು ಮಂದಿ ಮೇ 16 ರಂದು ನ್ಯಾಯಾಲಯದ ಮುಂದೆ ಹಾಜರಾಗಲು ಆದೇಶಿಸಿದೆ.

180ಕ್ಕೂ ಹೆಚ್ಚು ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಮೊಹಮ್ಮದ್ ಅಯಾಜ್ ವಿರುದ್ಧ  ಬುಲ್ಡೋಜರ್ ಕ್ರಮ; ಅಕ್ರಮವಾಗಿ ನಿರ್ಮಿಸಿದ ಮನೆಯ ಭಾಗ ನೆಲಸಮ

ಲೈಂಗಿಕ ದೌರ್ಜನ್ಯ ಆರೋಪಿ ವಿರುದ್ಧ ಬುಲ್ಡೋಜರ್ ಕ್ರಮ

ಸುಮಾರು 180ಕ್ಕೂ ಹೆಚ್ಚು ಮಂದಿ ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪಿ ವಿರುದ್ಧ ಬುಲ್ಡೋಜರ್ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಇದಕ್ಕೂ ಮುನ್ನ ಆರೋಪಿಯ ಮನೆಯ ಅಕ್ರಮ ಭಾಗಗಳನ್ನು ಕೆಡವಲಾಗಿದೆ. ಈ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಪರತ್ವಾಡ ನಗರದಲ್ಲಿ ನಡೆದಿದೆ.

ಬಗೆದಷ್ಟು ಬಯಲಾಗುತ್ತಿದೆ TCS ಮತಾಂತರ ದಂಧೆ: ಲೈಂಗಿಕ ಕಿರುಕುಳ, ಮತಾಂತರದ ಬೃಹತ್ ಜಾಲ ಬಯಲು; ಬೆಚ್ಚಿಬಿದ್ದ ದೇಶ!

ಟಿಸಿಎಸ್ ಕಚೇರಿಯಲ್ಲಿ ಕಿರುಕುಳ-ಮತಾಂತರ ಆರೋಪ

ನಾಸಿಕ್‌ನ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಬಲವಂತದ ಮತಾಂತರದ ಗಂಭೀರ ಆರೋಪಗಳು ಬೆಳಕಿಗೆ ಬಂದಿವೆ. ಎರಡು ವಾರಗಳ ಗುಪ್ತಚರ ಕಾರ್ಯಾಚರಣೆಯ ಬಳಿಕ ಪೊಲೀಸರು ಪ್ರಕರಣವನ್ನು ಬಯಲಿಗೆಳೆದು ಹಲವರನ್ನು ಬಂಧಿಸಿದ್ದಾರೆ. ಯುವತಿಯರನ್ನು ಗುರಿಯಾಗಿಸಿ ಒತ್ತಡ ಹಾಗೂ ಪ್ರಲೋಭನಗಳ ಮೂಲಕ ದುರುಪಯೋಗ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಘಟನೆ ಕಾರ್ಪೊರೇಟ್ ವಲಯದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಒಳಾಂಗಣ ದೂರು ವ್ಯವಸ್ಥೆಗಳ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.

ಎಚ್ಐವಿ ಹರಡುವ ಕಾರ್ಖಾನೆಯಾಯಿತಾ ಪಾಕಿಸ್ತಾನ ಆಸ್ಪತ್ರೆ ? ಸಿರಿಂಜ್ ಮರುಬಳಕೆ, ವೈದ್ಯರ ನಿರ್ಲಕ್ಷ್ಯದಿಂದ ಆತಂಕ

ಸಿರಿಂಜ್‌ ಮರುಬಳಕೆಯಿಂದ 331 ಮಕ್ಕಳಿಗೆ ಎಚ್‌ಐವಿ ಸೋಂಕು

ಪಾಕಿಸ್ತಾನ ಆಸ್ಪತ್ರೆಯಲ್ಲಿ ಸಿರಿಂಜ್ ಮರುಬಳಕೆಯಿಂದ 331 ಮಕ್ಕಳಿಗೆ ಎಚ್‌ಐವಿ ಸೋಂಕು ತಗಲಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದ್ದರೂ ಇದರ ಬಳಿಕವೂ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ಮುಂದುವರಿದಿದೆ. ಮಕ್ಕಳಲ್ಲಿ ಎಚ್‌ಐವಿ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರೂ ಕೂಡ ಆಸ್ಪತ್ರೆಯಲ್ಲಿ ಅಸುರಕ್ಷಿತ ವೈದ್ಯಕೀಯ ಪದ್ಧತಿಗಳನ್ನು ಅನುಸರಿಸುವುದನ್ನು ಮುಂದುವರಿಸಲಾಗಿದೆ ಎಂದು ಅನೇಕ ಕುಟುಂಬಗಳು ದೂರಿವೆ.

Loading...