ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

POCSO: ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ; ಪೋಕ್ಸೋ ಅಡಿ ಪ್ರಕರಣ ದಾಖಲು

ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ; ಪೋಕ್ಸೋ ಅಡಿ ಪ್ರಕರಣ ದಾಖಲು

ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.  ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ ಚಂದ್ರು ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪತ್ನಿ ಮೇಲೆ ಕ್ರೂರ ಹಲ್ಲೆ: ಹೆಂಡತಿಯ ತಲೆ ಬೋಳಿಸಿ, ಮೂತ್ರ ಕುಡಿಸಿದ ಪತಿ

ಪತ್ನಿಯ ತಲೆ ಬೋಳಿಸಿ, ಮೂತ್ರ ಕುಡಿಸಿದ ಪತಿ

Brutal Assault on Wife: ಪತ್ನಿಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿ, ತಲೆ ಬೋಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 85 (ಪತಿ ಅಥವಾ ಸಂಬಂಧಿಕರಿಂದ ಕ್ರೌರ್ಯ), 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 296 (ಅಶ್ಲೀಲ ಕೃತ್ಯಗಳು) ಮತ್ತು 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Bengaluru CID Inspector: ಕೇರಳ ಉದ್ಯಮಿಗಳನ್ನು ಬೆದರಿಸಿ 20 ಲಕ್ಷ ವಸೂಲಿ ಮಾಡಿದ ಸಿಐಡಿ ಇನ್ಸ್‌ಪೆಕ್ಟರ್; ದೂರಿನ ಬೆನ್ನಲ್ಲೇ ಎಸ್ಕೇಪ್‌!

ಕೇರಳ ಉದ್ಯಮಿಗಳನ್ನು ಬೆದರಿಸಿ 20 ಲಕ್ಷ ಪೀಕಿದ ಸಿಐಡಿ ಇನ್ಸ್‌ಪೆಕ್ಟರ್

ವ್ಯಾಪಾರ ಉದ್ದೇಶಕ್ಕಾಗಿ ಬಂದಿದ್ದ ಕೇರಳದ ಉದ್ಯಮಿಗಳು ಹಣದೊಂದಿಗೆ ಬೆಂಗಳೂರಿನ ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, ಗ್ಯಾಂಗ್‌ನೊಂದಿಗೆ ಹೋಟೆಲ್‌ಗೆ ತೆರಳಿ ಉದ್ಯಮಿಗಳಿಂದ 20 ಹಣ ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Bengaluru Mobile Theft: ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನಿಗೆ ಹೃದಯಾಘಾತ; ಓಡಿ ಓಡಿ ಸುಸ್ತಾಗಿ ಸ್ಥಳದಲ್ಲೇ ಸಾವು!

ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳ ಹೃದಯಾಘಾತದಿಂದ ಸಾವು!

Mobile phone theft in Bengaluru: ಬೆಂಗಳೂರಿನ ಕಬ್ಬನ್‌ಪೇಟೆಯಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಪಾದಚಾರಿಯ ಮೊಬೈಲ್‌ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಸ್ಥಳೀಯರು ಬೆನ್ನಟ್ಟಿದ್ದಾರೆ. ಈ ವೇಳೆ ವೇಗವಾಗಿ ಅಲ್ಲಿಂದ ಓಡುತ್ತಿದ್ದ ಕಳ್ಳನಿಗೆ ಹೃದಯಾಘಾತವಾಗಿದೆ. ಇದರಿಂದ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾನೆ.

ಬಿಹಾರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ: ಮಹಿಳೆ ಮೇಲೆ ಗ್ಯಾಂಗ್ ರೇಪ್, ಖಾಸಗಿ ಅಂಗಕ್ಕೆ ಗುಂಡು, ಕಲ್ಲು ತುರುಕಿ ವಿಕೃತಿ ಮೆರೆದ ದುಷ್ಕರ್ಮಿಗಳು

ಮಹಿಳೆ ಮೇಲೆ ಗ್ಯಾಂಗ್ ರೇಪ್, ಖಾಸಗಿ ಅಂಗಕ್ಕೆ ಗುಂಡು ತುರುಕಿದ ಪಾಪಿಗಳು

Bihar Horror: ಬಿಹಾರದ ಬೆಗುಸರಾಯ್‌ನಲ್ಲಿ ಐವರು ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅಮಾನವೀಯ ಕೃತ್ಯ ಮೆರೆದಿದ್ದಾರೆ. ಚಿಕಿತ್ಸೆ ವೇಳೆ ಸಂತ್ರಸ್ತೆಯ ಖಾಸಗಿ ಅಂಗದಿಂದ ಸಜೀವ ಗುಂಡು, ಕಲ್ಲು ಮತ್ತು ಮರದ ತುಂಡುಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Lokayukta Raid: ಲಂಚ ಸ್ವೀಕರಿಸುತ್ತಿದ್ದ ಸಿಎಂ ಪದಕ ವಿಜೇತ ಅಧಿಕಾರಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ, ಎಸ್‌ಬಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಕಾರ ನೀಡಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ವಿಶೇಷ ಶಾಖೆ (ಎಸ್‌ಬಿ) ಸಿಬ್ಬಂದಿ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಚ್ಚರಿ ಎಂದರೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆ ಹಾಗೂ ಆರೋಪಿಗಳ ಬಂಧನದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರ್ಪಡಿಸಿದ್ದರು.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕರೆಂಟ್ ಶಾಕ್ ಕೊಡಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಸ್ವಯಂ ಘೋಷಿತ ದೇವಮಾನವ; ಬಗೆದಷ್ಟು ಹೊರ ಬರುತ್ತಿದೆ ಕಾಮಕಾಂಡ

ಮಹಿಳೆಗೆ ಬಲವಂತವಾಗಿ ಮೂತ್ರ ಕುಡಿಸಿದ ಸ್ವಯಂ ಘೋಷಿತ ದೇವಮಾನವ!

Self-Styled Godman Arrested: ಸ್ವಯಂ ಘೋಷಿತ ದೇವಮಾನವ ಮತ್ತು ಆತನ ಸಹಚರರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಮಹಿಳೆಯೊಬ್ಬರ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿ ಆತ ಇದೀಗ ಕಾನೂನು ಬಲೆಗೆ ಬಿದ್ದಿದ್ದಾನೆ. ತಾನು ದೇವರ ಅವತಾರ ಎಂದು ಮಹಿಳೆಯ ಮನವೊಲಿಸಿದ್ದ ಬಾಬಾ ಆಕೆಗೆ ತನ್ನ ಮೂತ್ರವನ್ನೂ ಕುಡಿಸಿದ್ದ.

ಆರ್‌ಎಸ್‌ಎಸ್ ಕಚೇರಿ ಮೇಲೆ ದಾಳಿ ನಡೆಸಿದ ಆರೋಪಿ ಪರಾರಿಗೆ ಯತ್ನ; ಪೊಲೀಸರಿಂದ ಗುಂಡೇಟು

ಆರ್‌ಎಸ್‌ಎಸ್ ಕಚೇರಿ ಮೇಲೆ ದಾಳಿ ನಡೆಸಿದ ಆರೋಪಿ ಪರಾರಿಗೆ ಯತ್ನ

Accused Attempts to Escape: ಝಾರ್ಖಂಡ್‌ನ ರಾಂಚಿಯಲ್ಲಿ ಆರ್‌ಎಸ್‌ಎಸ್ ಕಚೇರಿಯ ಮೇಲೆ ನಡೆದಿದ್ದ ಪೆಟ್ರೋಲ್ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಗಳಲ್ಲಿ ಒಬ್ಬ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆ ತುಂಬಾ ಸಿಸಿಟಿವಿ, ಹೆಜ್ಜೆ ಹೆಜ್ಜೆಗೂ ಅನುಮಾನ; ಮದುವೆಯಾದ ಕೇವಲ 48 ದಿನಗಳಲ್ಲೇ ನವವಧು ಆತ್ಮಹತ್ಯೆಗೆ ಶರಣು

ಮದುವೆಯಾದ ಕೇವಲ 48 ದಿನಗಳಲ್ಲೇ ನವವಧು ಆತ್ಮಹತ್ಯೆಗೆ ಶರಣು

Woman Dies by Self harming: ವೈದ್ಯನನ್ನು ಮದುವೆಯಾಗಿದ್ದ ಮಹಿಳೆಯೊಬ್ಬಳು ಗಂಡನ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿ ಪತಿಯೊಂದಿಗೆ ವಾಸವಾಗಿದ್ದ ವಿಶಾಖಾ, ನೆರೆಹೊರೆಯವರೊಂದಿಗೆ ಮಾತನಾಡಿದ್ದಕ್ಕಾಗಿ ಅತ್ತೆ, ಮೈದುನನಿಂದ ಹಲ್ಲೆಗೊಳಗಾಗಿದ್ದಳು ಎಂದು ಅವರ ಕುಟುಂಬ ಆರೋಪಿಸಿದೆ.

ಮರಳು ಗಣಿಗಾರಿಕೆ ವಿವಾದ; ಬಿಜೆಪಿ ನಾಯಕ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟು ಹತ್ಯೆ ಮಾಡಿದ ಪಾಪಿಗಳು!

ಬಿಜೆಪಿ ನಾಯಕ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟು ಹತ್ಯೆ ಮಾಡಿದ ಪಾಪಿಗಳು!

ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ವಿವಾದದ ಹಿನ್ನೆಲೆ ಬಿಜೆಪಿ ನಾಯಕ ಭರತ್ ಸಿಂಗ್ ಅಲಿಯಾಸ್ ಲಲ್ಲಾ ಸಿಂಗ್ ಸೇರಿದಂತೆ ಮೂವರನ್ನು ಫಾರ್ಚುನರ್ ಕಾರಿನಲ್ಲೇ ಜೀವಂತವಾಗಿ ಸುಟ್ಟು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಾಯುಪಡೆ ಅಧಿಕಾರಿ ಪತ್ನಿಯ ಬಲವಂತದ ಮತಾಂತರ ಕೇಸ್‌: ತಲೆಮರೆಸಿಕೊಂಡಿದ್ದ ಮೌಲಾನಾ ಬಂಧನ

ಬಲವಂತದ ಮತಾಂತರ ಪ್ರಕರಣ: ಪ್ರಮುಖ ಮೌಲಾನಾ ಬಂಧನ

24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಹಜ್ರತ್ ಮೌಲಾನಾವನ್ನು ನಾಗಪುರ ಪೊಲೀಸರು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ. ಮತಾಂತರ ಹಾಗೂ ನಿಕಾಹ್ ಪ್ರಕ್ರಿಯೆಯಲ್ಲಿ ಮೌಲಾನಾ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

Dharwad News: ಪಿಎಚ್‌ಡಿ ವಿದ್ಯಾರ್ಥಿನಿ ಜತೆ ಅನೈತಿಕ ಸಂಬಂಧ; ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು

ಅನೈತಿಕ ಸಂಬಂಧ; ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು

ಪಿಎಚ್‌ಡಿ ಕೊಡಿಸುವ ಆಮಿಷ ತೋರಿ ಸಂಶೋಧನಾ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿವಿ ಆಡಳಿತ ಶಿಸ್ತುಕ್ರಮ ಕೈಗೊಂಡಿದೆ.

ಗುಂಡ್ಲುಪೇಟೆಯಲ್ಲಿ ಗ್ರೈಂಡರ್‌ನಿಂದ ವಿದ್ಯುತ್‌ ಹರಿದು 4 ವರ್ಷದ ಮಗು ಸಾವು

ಗ್ರೈಂಡರ್‌ನಿಂದ ವಿದ್ಯುತ್‌ ಹರಿದು 4 ವರ್ಷದ ಮಗು ಸಾವು

Chamarajanagar News: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲೀಗೌಡನಹಳ್ಳಿಯಲ್ಲಿ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕಿ ನೀರು ಕುಡಿಯಲು ಅಡುಗೆ ಮನೆಗೆ ಹೋಗಿದ್ದಾಳೆ. ಈ ವೇಳೆ ಗ್ರೈಂಡರ್‌ನಿಂದ ವಿದ್ಯುತ್ ಹರಿದು ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Actor Prakash raj: ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ನನಗೆ ಫೋನ್‌ ಮಾಡಿದ್ದು ನಿಜ: ಧರ್ಮಸ್ಥಳ ಕೇಸ್‌ ಬಗ್ಗೆ ನಟ ಪ್ರಕಾಶ್‌ ರಾಜ್‌ ಸ್ಪಷ್ಟನೆ

ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ನನಗೆ ಫೋನ್‌ ಮಾಡಿದ್ದು ನಿಜ: ಪ್ರಕಾಶ್‌ ರಾಜ್‌

ಧರ್ಮಸ್ಥಳ ಪ್ರಕರಣದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ನನಗೆ ಫೋನ್‌ ಮಾಡಿದ್ದು ನಿಜ. ಆತ ನನ್ನನ್ನು ಭೇಟಿಯಾಗಬೇಕು ಎಂದು ಕೇಳಿದ್ದ. ಆದರೆ, ನಾನು ನಿರಾಕರಿಸಿದ್ದೆ. ಈ ಬಗ್ಗೆ ಎಸ್‌ಐಟಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ಈ ವಿವಾದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ನಟ ಪ್ರಕಾಶ್‌ ರಾಜ್‌ ತಿಳಿಸಿದ್ದಾರೆ.

ವರದಕ್ಷಿಣೆ ಕೊಡದ್ದಕ್ಕೆ ಪತಿ, ಅತ್ತೆ-ಮಾವನಿಂದ ಚಿತ್ರಹಿಂಸೆ ಆರೋಪ; ಸೊಸೆ ತಲೆ ಬೋಳಿಸಿ ದೌರ್ಜನ್ಯ ನೀಡಿದ ಕಿರಾತಕರು

ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆಗೆ ತಲೆ ಬೋಳಿಸಿ ದೌರ್ಜನ್ಯ

Woman Alleges Torture: ವರದಕ್ಷಿಣೆ ಕೊಡದ ಕಾರಣ ಪತಿ ಮತ್ತು ಅತ್ತೆ ಮಾವಂದಿರು ತನ್ನ ತಲೆಯನ್ನು ಬಲವಂತವಾಗಿ ಬೋಳಿಸಿದ್ದಾರೆ ಎಂದು ಮಹಾರಾಷ್ಟ್ರದ ಕಲ್ಯಾಣ್‌ನ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಮಹಿಳೆಯ ಪತಿಯ ಕುಟುಂಬದ ಐದು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್‌ ಇನ್‌ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ

ಲಿವ್‌ ಇನ್‌ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ

ಇನ್‌ಸ್ಟಾಗ್ರಾಂನಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಿಯಕರ ತನ್ನ ಲಿವ್‌ ಇನ್‌ ಗೆಳತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶನಿವಾರ ರಾತ್ರಿ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶರತ್‌ ಹಾಗೂ ಅನುಷಾ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಶರತ್‌ ವಾಟರ್‌ ಟ್ಯಾಂಕ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಮೂಲತಃ ಹಾಸನದವರಾದ ಇವರು 6 ತಿಂಗಳಿನಿಂದ ಇ ಜೋಡಿ ಮಲ್ಲೇಶ್ವರದಲ್ಲಿ ಲಿವ್‌ ಇನ್‌ನಲ್ಲೇ ವಾಸವಿದ್ದರು.

ದೆಹಲಿಯಲ್ಲಿ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲಿತ ಉಗ್ರ ಜಾಲ ಪತ್ತೆ: 7 ಮಂದಿ ಬಂಧನ

ಐಎಸ್‌ಐ ಬೆಂಬಲಿತ ಉಗ್ರ ಜಾಲ ಭೇದಿಸಿದ ದೆಹಲಿ ಪೊಲೀಸರು

ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಉಗ್ರ ಹಾಗೂ ಅಪರಾಧ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ಬಂಧಿಸಿದ್ದಾರೆ. ಈ ಜಾಲವು ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯಗಳನ್ನು ಭಾರತಕ್ಕೆ ಕಳ್ಳ ಸಾಗಣೆ ಮಾಡುತ್ತಿದ್ದು, ಸೂಕ್ಷ್ಮ ಪ್ರದೇಶಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿತ್ತು. ಬಂಧಿತರಿಂದ ಶಸ್ತ್ರಾಸ್ತ್ರಗಳು, ಕಾರತೂಸುಗಳು, ಮೊಬೈಲ್ ಫೋನ್‌ಗಳು ಮತ್ತು ಇತರ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.

Tamil Nadu Horror: ಮಗನ ಜೀವನ ಸರಿ ಮಾಡಲು ಮಾಟ ಮಾಡಿ 6 ವರ್ಷದ ಮೊಮ್ಮಗನನ್ನು ನರಬಲಿ ಕೊಟ್ಟ ಅಜ್ಜಿ; ತಮಿಳುನಾಡಿನಲ್ಲಿ ಅಮಾನುಷ ಕೃತ್ಯ

ಮಾಟ ಮಾಡಿ 6 ವರ್ಷದ ಮೊಮ್ಮಗನನ್ನು ನರಬಲಿ ಕೊಟ್ಟ ಅಜ್ಜಿ

Crime News: ತಮಿಳುನಾಡಿನ ವೆಲ್ಲೂರ್‌ ಜಿಲ್ಲೆಯಲ್ಲಿ ಅಮಾನುಷ ಘಟನೆಯೊಂದು ನಡೆದಿದ್ದು, 6 ವರ್ಷದ ಬಾಲಕನನ್ನು ಅಜ್ಜಿಯೇ ನರಬಲಿ ಕೊಟ್ಟಿದ್ದಾಳೆ. ಮೃತ ಬಾಲಕನನ್ನು ಮುಗಿಲನ್‌ ಎಂದು ಗುರುತಿಸಲಾಗಿದೆ. ಆತ ಅಜ್ಜಿ ಮನೆಯಲ್ಲಿ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ರೀತಿಯೇ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.

SIT SP's Car Accident: ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಎಸ್‌ಪಿ ತೆರಳುತ್ತಿದ್ದ ಕಾರು ಪಲ್ಟಿ; ಹಲವರಿಗೆ ಗಾಯ

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಎಸ್‌ಪಿ ತೆರಳುತ್ತಿದ್ದ ಕಾರು ಪಲ್ಟಿ

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಇನ್ನೋವಾ ಕಾರು ನಿಯಂತ್ರಣ ಕಳೆದುಕೊಂಡು, ಪಲ್ಟಿಯಾಗಿದೆ. ಕಾರಿನಲ್ಲಿ ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರು ಕಾರಿನಲ್ಲಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ ಎಸಗಿ, ಮತಾಂತರಕ್ಕೆ ಯತ್ನ- ಬೆಚ್ಚಿ ಬೀಳಿಸುವ ವಿಡಿಯೊ ವೈರಲ್‌

ಅತ್ಯಾಚಾರ, ಬ್ಲ್ಯಾಕ್‌ಮೇಲ್ ಆರೋಪ: ಇಬ್ಬರು ಅರೆಸ್ಟ್

Viral Video: ನಾಗಪುರದ ಭಾರತೀಯ ವಾಯುಪಡೆ ಅಧಿಕಾರಿಯ ಪತ್ನಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಮಾದಕ ವಸ್ತು ನೀಡಿ ತಮ್ಮ ಮೇಲೆ ಅತ್ಯಾಚಾರ ಎಸಗಿ, ಅಶ್ಲೀಲ ವಿಡಿಯೊ ಮೂಲಕ ಬ್ಲ್ಯಾಕ್‌ಮೇಲ್ ಮಾಡಿ, ಬಲವಂತವಾಗಿ ಮತಾಂತರಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೋರ್ವನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೋವನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಿ ತನಿಖೆ ಮುಂದುವರಿದಿದೆ.

ಯೋಗಿ ನಾಡಲ್ಲಿ ಮುಂದುವರಿದ ದುಷ್ಕರ್ಮಿಗಳ ಬೇಟೆ; ಅರ್ಚಕನ ಹತ್ಯೆಗೈದವನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ ಪೊಲೀಸರು

ಅರ್ಚಕನ ಹತ್ಯೆಗೈದವನನ್ನು ಹೊಸಕಿ ಹಾಕಿದ ಉತ್ತರ ಪ್ರದೇಶ ಪೊಲೀಸರು

Priest Killed in Police Encounter: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದ ದೇವಾಲಯದ ಅರ್ಚಕನ ಹತ್ಯೆಯ ಪ್ರಮುಖ ಆರೋಪಿಯನ್ನು ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಪೊಲೀಸರ ಮೇಲೆಯೇ ಆತ ಗುಂಡು ಹಾರಿಸಿದ್ದರಿಂದ, ಪ್ರತಿದಾಳಿ ನಡೆಸಲಾಯಿತು. ಈ ವೇಳೆ ಗಂಭೀರ ಗಾಯಗೊಂಡ ಆತ ಸಾವಿಗೀಡಾಗಿದ್ದಾನೆ.

Vijayapur Accident: ವಿಜಯಪುರದಲ್ಲಿ ಟಿಪ್ಪರ್-ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ

ವಿಜಯಪುರದಲ್ಲಿ ಟಿಪ್ಪರ್-ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಹಿನ್ನೆಲೆ ಅಪಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಮೂವರು ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಐಸಿಸ್ ಲಿಂಕ್ ಆರೋಪ: ಖಾಜಾ ಮೊಯಿದ್ದೀನ್, ಸಹಚರ ಕೋರ್ಟ್‌ನಿಂದ ಖುಲಾಸೆ

ಉಗ್ರ ನಿಗ್ರಹ ಪ್ರಕರಣದಲ್ಲಿ ಖಾಜಾ ಮೊಯಿದ್ದೀನ್‌ಗೆ ಮುಕ್ತಿ

Khaja Moideen: ಐಸಿಸ್‌ ಜಾಲದ ಪ್ರಮುಖ ಸೂತ್ರಧಾರ ಎಂದು ಎನ್‌ಐಎ ಆರೋಪಿಸಿದ್ದ ಖಾಜಾ ಮೊಯಿದ್ದೀನ್ ಮತ್ತು ಅನ್ಸಾರ್ ಮೀರನ್ ವಿರುದ್ಧದ ಉಗ್ರ ಪಿತೂರಿ ಆರೋಪಗಳನ್ನು ಚೆನ್ನೈಯ ವಿಶೇಷ ಎನ್‌ಐಎ ನ್ಯಾಯಾಲಯ ವಜಾಗೊಳಿಸಿದೆ. ಖಾಜಾ ಮೊಯಿದ್ದೀನ್ ವಿರುದ್ಧ ಯಾವುದೇ ದೃಢ ಸಾಕ್ಷ್ಯ ಸಿಕ್ಕಿಲ್ಲ ಎಂದು ಕೋರ್ಟ್ ಹೇಳಿದ್ದು, ಇದನ್ನು ಎನ್‌ಐಎಗೆ ದೊಡ್ಡ ಹಿನ್ನಡೆಯಾಗಿ ಪರಿಗಣಿಸಲಾಗಿದೆ.

ನೀಟ್‌ ಮರು ಪರೀಕ್ಷೆಗೆ ಕೆಲವೇ ದಿನ ಬಾಕಿ ಇರುವಾಗಲೇ ವಿದ್ಯಾರ್ಥಿ ಆತ್ಮಹತ್ಯೆ!

ನೀಟ್‌ ಮರು ಪರೀಕ್ಷೆಗೆ ಕೆಲವೇ ದಿನ ಇರುವಾಗಲೇ ವಿದ್ಯಾರ್ಥಿ ಆತ್ಮಹತ್ಯೆ!

ರಾಜಸ್ಥಾನದ ಸಿಕಾರ್ ಜಿಲ್ಲೆಯ ತನ್ನ ವಸತಿ ಫ್ಲಾಟ್‌ನಲ್ಲಿ 22 ವರ್ಷದ ನೀಟ್ ಆಕಾಂಕ್ಷಿಯೊಬ್ಬ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರು ಪರೀಕ್ಷೆಗೆ ಕೇವಲ ಒಂದು ವಾರ ಮೊದಲು ಉಮೇಶ್ ಮಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Loading...