ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Self Harming: ಬೆಂಗಳೂರಿನ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!

ಬೆಂಗಳೂರಿನ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!

Bengaluru News: ಮನೆಯವರಿಂದ ಪ್ರೀತಿಗೆ ವಿರೋಧ ವ್ಯಕ್ತವಾಗಿದ್ದರಿಂದ ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ. ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭವಾಗಿದೆ.

Physical Assault:  AI ತಂತ್ರಜ್ಞಾನ ಬಳಸಿ ತನ್ನ 36 ಸ್ನೇಹಿತೆಯರ ಅಶ್ಲೀಲ ಚಿತ್ರ ತಯಾರಿಸಿದ ವಿದ್ಯಾರ್ಥಿ!

ತನ್ನ 36 ಸ್ನೇಹಿತೆಯರ ಅಶ್ಲೀಲ ಚಿತ್ರ ತಯಾರಿಸಿದ ಐಟಿ ವಿದ್ಯಾರ್ಥಿ!

ವಿದ್ಯಾರ್ಥಿಯೊಬ್ಬ ಎಐ ತಂತ್ರಜ್ಞಾನ (AI Technology) ಬಳಸಿಕೊಂಡು ತನ್ನದೇ ಸ್ನೇಹಿತೆಯರ ಅಶ್ಲೀಲ ಚಿತ್ರ ಸೃಷ್ಟಿಸಿದ ಘಟನೆ ಛತ್ತೀಸಢದ ನಯಾ ರಾಯುರದಲ್ಲಿರುವ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದಿದೆ. ಸದ್ಯ ಈ ಕುರಿತು ತನಿಖೆ ನಡೆಸಲಾಗುತ್ತಿದೆ.

Kodagu school Tragedy: ಮಡಿಕೇರಿ ಶಾಲೆ ಅಗ್ನಿ ದುರಂತ; 51 ಮಕ್ಕಳನ್ನು ರಕ್ಷಿಸಿದ ಇಬ್ಬರು ಧೈರ್ಯವಂತ ಬಾಲಕರು!

ಮಡಿಕೇರಿ ಶಾಲೆ ಅಗ್ನಿ ದುರಂತ; 51 ಮಕ್ಕಳನ್ನು ರಕ್ಷಿಸಿದ ಇಬ್ಬರು ಬಾಲಕರು!

Fire Accident at Madikeri school: ಮಡಿಕೇರಿ ತಾಲೂಕಿನ ಕಾಟಿಕೇರಿ ಗ್ರಾಮದ ವಸತಿ ಶಾಲೆಯಲ್ಲಿ ಗುರುವಾರ ಬೆಳಗ್ಗೆ ನಡೆದ ನಡೆದ ಅಗ್ನಿ ದುರಂತದಲ್ಲಿ ಒಬ್ಬ ಬಾಲಕ ಮೃತಪಟ್ಟಿದ್ದಾನೆ. ಅವಘಡದ ಸಂದರ್ಭದಲ್ಲಿ ಬಬಿನ್ ಮತ್ತು ಯಶ್ವಿನ್ ಎಂಬ ಬಾಲಕರಿಬ್ಬರ ಸಮಯಪ್ರಜ್ಞೆಯಿಂದ 51 ಮಕ್ಕಳ ಜೀವ ಉಳಿದಿದೆ. ಹೀಗಾಗಿ ಇವರ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Karur Stampede Tragedy: ಇನ್ನೂ ಆರಿಲ್ಲ ಕಾಲ್ತುಳಿತದ ಕಿಚ್ಚು; ವಿಜಯ್‌ ಮನೆಗೆ ಮತ್ತೆ ಬಾಂಬ್‌ ಬೆದರಿಕೆ

ವಿಜಯ್‌ ಮನೆಗೆ ಮತ್ತೆ ಬಾಂಬ್‌ ಬೆದರಿಕೆ

ಚೆನ್ನೈಯಲ್ಲಿರುವ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಕುರಿತು ವರದಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್ ಅವರ ನೀಲಂಕರೈ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆ. ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ನಡೆದ ಕಾಲ್ತುಳಿತ ಪ್ರಕರಣ ಬಳಿಕ ತಮಿಸಿನಾಡಿನಲ್ಲಿ ಪರಿಸ್ಥಿತಿ ಅಸ್ತವ್ಯಸ್ತ ಆಗಿದ್ದು, ಇದೀಗ ಬಾಂಬ್ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

Crime News: ಲಿಫ್ಟ್‌ ನೀಡೋ ನೆಪದಲ್ಲಿ 50 ವರ್ಷದ ಮಹಿಳೆ ಮೇಲೆ ಎರಡು ಬಾರಿ ಗ್ಯಾಂಗ್ ರೇಪ್!

50 ವರ್ಷದ ಮಹಿಳೆ ಮೇಲೆ ಒಂದೇ ದಿನ ಎರಡು ಬಾರಿ ಗ್ಯಾಂಗ್ ರೇಪ್!

Physical Abused: 50 ವರ್ಷದ ವಿಧವೆಯ ಮೇಲೆ ಮೂವರು ಪುರುಷರು ಎರಡು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಹಳ್ಳಿಗೆ ತೆರಳಲು ಲಿಫ್ಟ್ ಆಫರ್ ನೀಡಿದ ದುಷ್ಕರ್ಮಿಗಳು ನಂತರ ಈ ಕೃತ್ಯವೆಸಗಿದ್ದಾರೆ. ಯಾರಿಗಾದರೂ ತಿಳಿಸಿದರೆ ಪರಿಣಾಮ ನೆಟ್ಟಗಿರಲ್ಲ ಎಂದೂ ಬೆದರಿಕೆ ಹಾಕಿದ್ದರು.

AI Video: ಸುಪ್ರಿಂ ಕೋರ್ಟ್ ಸಿಜೆಐ ಮೇಲೆ ಶೂ ಎಸೆದಿರುವಂತೆ AI ವಿಡಿಯೊ- ಕಿಡಿಗೇಡಿ ವಿರುದ್ಧFIR

ಸಿಜೆಐ ಮೇಲೆ ಶೂ ಎಸೆದಿರುವಂತೆ AI ವಿಡಿಯೊ- FIR ದಾಖಲು

Depicting Shoe Attack: ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಬಿರ್.ಆರ್ ಗವಾಯಿ ಅವರು ನ್ಯಾಯಾಲಯದಲ್ಲಿ ಕಲಾಪ ನಡೆಸುವ ವೇಳೆ ವಕೀಲ ರಾಕೇಶ್ ಕಿಶೋರ್ (Rakesh Kishore)ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ಆಗಿದ್ದು, ಗವಾಯಿ (CJI) ಅವರ ಮೇಲೆ ಶೂ ಎಸೆದಿರುವಂತೆ ತೋರಿಸುವ ಎಐ ಆಧಾರಿತ ವಿಡಿಯೋವನ್ನು ಸೃಷ್ಟಿಸಿದ ಆರೋಪದ ಮೇಲೆ ನವಿ ಮುಂಬೈ ಪೊಲೀಸರು ಸಾಮಾಜಿಕ ಮಾಧ್ಯಮ ಬಳಕೆದಾರನೊಬ್ಬನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Girl Murder Case: ಮೈಸೂರು ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಬಾಲಕಿಯ ಶವ ಪತ್ತೆ, ಅತ್ಯಾಚಾರ ಎಸಗಿ ಕೊಲೆ ಶಂಕೆ

ಮೈಸೂರು ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಬಾಲಕಿಯ ಶವ ಪತ್ತೆ

Mysuru Dasara: ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಮುಂಜಾನೆ ಮಳೆ ಬಂದು ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

Jaish-e-Mohammed: ಮಹಿಳೆಯರೇ ಉಗ್ರರ ಟಾರ್ಗೆಟ್‌! ರಹಸ್ಯ ಯುದ್ದಕ್ಕಾಗಿ ಮಹಿಳಾ ಬ್ರಿಗೇಡ್ ಆರಂಭ

ರಹಸ್ಯ ಯುದ್ದಕ್ಕಾಗಿ ಮಹಿಳಾ ಬ್ರಿಗೇಡ್-ಜೈಷ್‌ ಉಗ್ರರ ಸಂಚು ಬಯಲು

Women's brigade for secret warfare: ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರನ್ನು ಗುರಿಯಾಗಿಸಿಕೊಂಡು ರಹಸ್ಯ ಯುದ್ದಕ್ಕಾಗಿ ಮಹಿಳಾ ಬ್ರಿಗೇಡ್ ರೂಪಿಸುತ್ತಿದೆ ಜೈಶ್-ಎ-ಮೊಹಮ್ಮದ್ ಎಂಬುದಾಗಿ ಉನ್ನತ ಗುಪ್ತಚರ ಮೂಲಗಳು ತಿಳಿಸಿವೆ. ಇದರಲ್ಲಿ ಎನ್‌ಕ್ರಿಪ್ಟ್ ಮಾಡಲಾದ ಆನ್‌ಲೈನ್ ನೆಟ್‌ವರ್ಕ್‌ಗಳ ಮೂಲಕ ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ ಮತ್ತು ಭಾರತದ ದಕ್ಷಿಣ ರಾಜ್ಯಗಳಲ್ಲಿ ಮಹಿಳೆಯರನ್ನು ಗುರಿ ಮಾಡುವ ಯೋಜನೆ ಇದೆ ಎನ್ನಲಾಗಿದೆ.

Deadly attack on MP: ಬಿಜೆಪಿ ಸಂಸದನ ಮೇಲೆ ಡೆಡ್ಲಿ ಅಟ್ಯಾಕ್!‌ ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳ ಅಟ್ಟಹಾಸ

ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಅರೆಸ್ಟ್

MLA Attacked: ಪಶ್ಚಿಮ ಬಂಗಾಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ತೆರಳುತ್ತಿದ್ದ ಬಿಜೆಪಿ ನಾಯಕರ ಮೇಲೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಅಹಿತಕರ ಘಟನೆಯಲ್ಲಿ ಬಿಜೆಪಿ ಸಂಸದ ಖಗೆನ್ ಮುರ್ಮು ಗಂಭೀರವಾಗಿ ಗಾಯಗೊಂಡಿದ್ದು, ಅವರ ವಾಹನಗಳು ಹಾನಿಗೊಳಗಾಗಿವೆ. ಇಬ್ಬರನ್ನೂ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Actress Ramya: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಪ್ರಕರಣ: 380 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಪ್ರಕರಣ: 380 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Actor Darshan: ಆರೋಪಿಗಳ ಮೊಬೈಲ್, ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್‌, ವಿಡಿಯೋ ಶೇರ್ ಆಗಿರುವ ಲಿಂಕ್‌ಗಳು, ದೂರುದಾರೆ ರಮ್ಯಾ ಸ್ಟೇಟ್‌ಮೆಂಟ್, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.

UP College Shocker: ಶವ ಬಿದ್ದಿದ್ದ ವಾಟರ್‌ ಟ್ಯಾಂಕ್‌ನಿಂದಲೇ ನೀರು ಕುಡಿದ ವಿದ್ಯಾರ್ಥಿಗಳು!

ಶವ ಬಿದ್ದಿದ್ದ ವಾಟರ್‌ ಟ್ಯಾಂಕ್‌ನಿಂದಲೇ ನೀರು ಕುಡಿದ ವಿದ್ಯಾರ್ಥಿಗಳು!

Student Dead body Found: ಉತ್ತರ ಪ್ರದೇಶದ ಡಿಯೋರಿಯಾದ ಮಹರ್ಷಿ ದೇವ್ರಹಾ ಬಾಬಾ ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕರ್ ನಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ. ಕಳೆದ ಹತ್ತು ದಿನಗಳಿಂದ ಶವ ನೀರಿನಲ್ಲಿಯೇ ಇತ್ತು ಅಧಿಕಾರಿಗಳು ತಿಳಿಸಿದ್ದು, ಕಾಲೇಜಿನ ವಿದ್ಯಾರ್ಥಿಗಳು ಮೃತದೇಹವಿದ್ದ ನೀರನ್ನು ಕುಡಿದಿದ್ದಾರೆ ಎನ್ನಲಾಗಿದೆ.

Cough Syrup: 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್‌ ಸಿರಪ್‌ ಕಂಪನಿ ಮಾಲಿಕ ಚೆನ್ನೈಯಲ್ಲಿ ಸೆರೆ

20 ಮಕ್ಕಳ ಬಲಿಪಡೆದ ಕೋಲ್ಡ್ರಿಫ್‌ ಸಿರಪ್‌ ಕಂಪನಿ ಮಾಲಿಕ ಚೆನ್ನೈಯಲ್ಲಿ ಸೆರೆ

Coldrif Cough Syrup: ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಉತ್ಪಾದಿಸುವ ಜವಾಬ್ದಾರಿಯನ್ನು ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಹೊಂದಿದೆ. ಮಧ್ಯಪ್ರದೇಶದಲ್ಲಿ ಇದರ ಸೇವನೆಯಿಂದ ಇದುವರೆಗೆ 20 ಮಕ್ಕಳು ಸಾವನ್ನಪ್ಪಿದ್ದಾರೆ. ಇದು ಶ್ರೀಸನ್ ಫಾರ್ಮಾ ತಯಾರಿಸಿದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವನೆಯಿಂದ ಎಂದು ಹೇಳಲಾಗಿದೆ.

Murder Case: ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತ್ನಿಯ ಕೊಂದು ಮಂಚದೊಳಗಿಟ್ಟು ಪತಿ ಪರಾರಿ

ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತ್ನಿಯ ಕೊಂದು ಮಂಚದೊಳಗಿಟ್ಟು ಪತಿ ಪರಾರಿ

Belagavi news: ನಾಲ್ಕು ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. ಮೂರು ದಿನದ ಹಿಂದೆ ಸಾಕ್ಷಿ ಕಂಬಾರಳನ್ನು ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್ ಸ್ವಿಚ್​​ಆಫ್ ಮಾಡಿಕೊಂಡು ಆಕಾಶ್ ಪರಾರಿ ಆಗಿದ್ದಾನೆ. ಇತ್ತ ಊರಿಗೆ ಹೋಗಿದ್ದ ಅತ್ತೆ ಮನೆಗೆ ಹಿಂದಿರುಗಿದಾಗ ಹತ್ಯೆ ಬೆಳಕಿಗೆ ಬಂದಿದೆ.

Self Harming: ವಿಪಕ್ಷ ನಾಯಕ ಆರ್.‌ ಅಶೋಕ್‌ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ

ವಿಪಕ್ಷ ನಾಯಕ ಆರ್.‌ ಅಶೋಕ್‌ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ

Bengaluru: ಶರಣಗೌಡ ಪೊಲೀಸ್ ಬೆಂಗಾವಲು ವಾಹನ ಚಾಲಕರಾಗಿದ್ದು, ಕಳೆದ ಐದು ವರ್ಷಗಳಿಂದ ಅಶೋಕ್ ಅವರ ಬೆಂಗಾವಲು ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಆರ್ ಅಶೋಕ್ ಸಹ ವಿಕ್ಟೋರಿಯಾ ಆಸ್ಪತ್ರೆಯತ್ತ ದೌಡಾಯಿಸಿದ್ದು, ಪೊಲೀಸ್ ತನಿಖೆಯಲ್ಲಿ ಶರಣಗೌಡ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.

Zubeen Garg: ಗಾಯಕ ಜುಬೀನ್‌ ಗರ್ಗ್‌ ಸಾವಿನ ಪ್ರಕರಣಕ್ಕೆ ಟ್ವಿಸ್ಟ್‌; ಡಿಎಸ್‌ಪಿ ಸಂದೀಪನ್ ಗರ್ಗ್ ಬಂಧನ

ಗಾಯಕ ಜುಬೀನ್‌ ಗರ್ಗ್‌ ಸೋದರ ಸಂಬಂಧಿ ಸಂದೀಪನ್ ಗರ್ಗ್ ಬಂಧನ

ಸಿಂಗಾಪುರದಲ್ಲಿ ನಿಧನರಾಗಿದ್ದ ಜುಬೀನ್‌ ಗರ್ಗ್‌ (Zubeen Garg) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ತರ ಬೆಳೆವಣಿಗೆಯೊಂದು ನಡೆದಿದ್ದು, ಅಸ್ಸಾಂ ಪೊಲೀಸ್ ಇಲಾಖೆಯ ಡಿಎಸ್‌ಪಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗರ್ಗ್‌ರ ಸೋದರಸಂಬಂಧಿ ಸಂದೀಪನ್ ಗರ್ಗ್ (Sandipan Garg) ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

LeT- ISKP Alliance: ಬಲೂಚಿಸ್ತಾನದಲ್ಲಿ ಲಷ್ಕರ್-ಐಸಿಸ್ ಮೈತ್ರಿಕೂಟ: ದಾಖಲೆಗಳಿಂದ ಬಹಿರಂಗ

ಬಲೂಚಿಸ್ತಾನದಲ್ಲಿ ಲಷ್ಕರ್-ಐಸಿಸ್ ಮೈತ್ರಿಕೂಟ

ಗುಪ್ತಚರ ದಾಖಲೆಗಳ ಪ್ರಕಾರ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ಐಎಸ್‌ಕೆಪಿ) ಮೈತ್ರಿಕೂಟ ರಚನೆಗೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಸಹಕಾರ ನೀಡುತ್ತಿದೆ. ಈ ಮೂಲಕ ಭಯೋತ್ಪಾದಕ ಮೂಲಸೌಕರ್ಯಕ್ಕೆ ಐಎಸ್‌ಐ ಹೇಗೆ ಬೆಂಬಲ ನೀಡುತ್ತದೆ ಎಂಬುದು ಬಹಿರಂಗವಾಗಿದೆ.

Murder Case: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಕೇಸ್;  ನಾಲ್ವರು ಆರೋಪಿಗಳು ಅರೆಸ್ಟ್

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಕೇಸ್; ಆರೋಪಿ ಅರೆಸ್ಟ್‌

ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ (Venkatesh Kurubar) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿ ಬೈಕ್‌ನಲ್ಲಿ ಮನೆಗೆ (Murder Case) ಹಿಂದಿರುಗುತ್ತಿದ್ದ ವೇಳೆ, ಕಾರಿನಲ್ಲಿ ಹಿಂಬಾಲಿಸಿದ ಗುಂಪೊಂದು ವೆಂಕಟೇಶ್‌ರನ್ನು ಬರ್ಬರವಾಗಿ ಕೊಲೆ ಮಾಡಿದೆ.

Lawrence Bishnoi: ರೆಸ್ಟೋರೆಂಟ್ ಮಾಲೀಕರ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಗುಂಡಿನ ದಾಳಿ

ಕೆನಡಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗುಂಡಿನ ದಾಳಿ

ಕೆನಡಾದ ಸರ್ರೆಯ ಹಲವು ಸ್ಥಳಗಳಲ್ಲಿ ಸರಣಿ ಗುಂಡಿನ ದಾಳಿಗಳು ವರದಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದೆ. ವಿವರಗಳ ಪ್ರಕಾರ , ಬಿಷ್ಣೋಯ್ ಗ್ಯಾಂಗ್‌ನ ಸಹಾಯಕ ವ್ಯಕ್ತಿಯೊಬ್ಬರ ಮೇಲೆ ಸುಲಿಗೆ ಆರೋಪ ಹೊರಿಸಿದ ಕೇವಲ ಎರಡು ದಿನಗಳ ನಂತರ ನಡೆದ ಹೊಸ ದಾಳಿಗಳು ವರದಿಯಾಗಿದೆ.

Murder Case: ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ

ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ

Koppala news: ವೆಂಕಟೇಶ ಕುರುಬರ ದೇವಿಕ್ಯಾಂಪ್‌ನಿಂದ ಸ್ನೇಹಿತರೊಂದಿಗೆ ಊಟ ಮಾಡಿ ಬೈಕ್‌ನಲ್ಲಿ ಗಂಗಾವತಿಗೆ ತೆರಳುತ್ತಿದ್ದರು. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ಬೈಕ್‌ಗೆ ಗುದ್ದಿ ಅಡ್ಡಗಟ್ಟಿದ ಗುಂಪು, ಲಾಂಗ್ ಮತ್ತು ಮಚ್ಚುಗಳಿಂದ ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.

ಬೆಂಗಳೂರಿನಲ್ಲೊಂದು ಭಯಾನಕ ಘಟನೆ: ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಉಬರ್ ಕ್ಯಾಬ್ ಡ್ರೈವರ್; ವಿಡಿಯೊ ಇಲ್ಲಿದೆ

ಬೆಂಗಳೂರು ಕ್ಯಾಬ್‌ನಲ್ಲಾದ ಕಹಿ ಅನುಭವ ಹಂಚಿಕೊಂಡ ಇನ್‌ಫ್ಲುಯೆನ್ಸರ್‌

ಸಿಲಿಕಾನ್ ಸಿಟಿ ಬೆಂಗಳೂರು ಮಹಿಳೆಯರಿಗೆ, ಯುವತಿಯರಿಗೆ ಎಷ್ಟು ಸೇಫ್ ಎಂಬ ಯಕ್ಷಪ್ರಶ್ನೆ ಆಗಾಗ ಎದುರಾಗುತ್ತಲೇ ಇರುತ್ತದೆ. ಇದೀಗ ನಗರದಲ್ಲಿ ಅಂತಹದ್ದೊಂದು ಭಯಾನಕ ಕೃತ್ಯ ನಡೆದಿದೆ. ಕ್ಯಾಬ್‌ನಲ್ಲಿ ಯುವತಿ ಮೇಲೆ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಆಗಿರುವ ಯುವತಿ ರಾತ್ರಿ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಮಗಾದ ಅನುಭವವನ್ನು ಅವರನ್ನು ಹಂಚಿಕೊಂಡಿದ್ದಾರೆ.

Self Harming: ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹಿರಿಯ ಐಪಿಎಸ್ ಅಧಿಕಾರಿ; ಕಾರಣ ನಿಗೂಢ

ಮನೆಯಲ್ಲೇ ಗುಂಡು ಹಾರಿಸಿಕೊಂಡು ಹಿರಿಯ ಐಪಿಎಸ್ ಅಧಿಕಾರಿ ಆತ್ಮಹತ್ಯೆ

ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಚಂಡೀಗಢದ ಸೆಕ್ಟರ್ 11ರ ತಮ್ಮ ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಂಗಳವಾರ (ಅಕ್ಟೋಬರ್‌ 7) ಬೆಳಕಿಗೆ ಬಂದಿದೆ. ಮೃತ ಅಧಿಕಾರಿಯನ್ನು ಹರಿಯಾಣದ ಎಡಿಜಿಪಿ ವೈ. ಪೂರನ್‌ ಕುಮಾರ್‌ ಎಂದು ಗುರುತಿಸಲಾಗಿದೆ.

Belagavi news: ಅನೈತಿಕ ಸಂಬಂಧದ ಶಂಕೆ, ಗಂಡನ ಮೇಲೆ ಕುದಿವ ಎಣ್ಣೆ ಸುರಿದ ಹೆಂಡತಿ

ಅನೈತಿಕ ಸಂಬಂಧದ ಶಂಕೆ, ಗಂಡನ ಮೇಲೆ ಕುದಿವ ಎಣ್ಣೆ ಸುರಿದ ಹೆಂಡತಿ

Illicit relationship: ಗಂಡ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಹೆಂಡತಿ ವೈಶಾಲಿಗೆ ಸಂಶಯವಿತ್ತು. ಈ ವಿಚಾರದಲ್ಲಿ ಇಬ್ಬರಿಗೂ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ, ಮನೆಗೆ ಬಂದ ಗಂಡನ ಮೇಲೆ ಸುಡುವ ಎಣ್ಣೆ ತಂದು ಹೆಂಡತಿ ಸುರಿದಿದ್ದಾಳೆ.

Rakesh Kishore: CJI ಗವಾಯಿ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ಯಾರು? ಘಟನೆ ಹಿಂದಿದೆಯಾ ಆ ಕಾರಣ?

CJI ಗವಾಯಿ ಮೇಲೆ ಶೂ ಎಸೆತ ಯತ್ನ ಮಾಡಿದ್ದೇಕೆ ಗೊತ್ತಾ..?

ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಬಿರ್.ಆರ್ ಗವಾಯಿ ಅವರು ನ್ಯಾಯಾಲಯದಲ್ಲಿ ಕಲಾಪ ನಡೆಸುವ ವೇಳೆ ವಕೀಲ ರಾಕೇಶ್ ಕಿಶೋರ್ (Rakesh Kishore)ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದಾನೆ. ಹಾಗಾದ್ರೆ ಈ ಅಹಿತಕರ ಘಟನೆಗೆ ಕಾರಣವಾದ ರಾಕೇಶ್ ಕಿಶೋರ್ ಯಾರು...? ಅವರ ಈ ನಡೆಗೆ ಕಾರಣವೇನು..? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

Physical Abuse: ನಟಿಗೆ ಲೈಂಗಿಕ ಕಿರುಕುಳ, ಕನ್ನಡದ ನಟ- ನಿರ್ದೇಶಕ ಹೇಮಂತ್‌ ಬಂಧನ

ನಟಿಗೆ ಲೈಂಗಿಕ ಕಿರುಕುಳ, ಕನ್ನಡದ ನಟ- ನಿರ್ದೇಶಕ ಹೇಮಂತ್‌ ಬಂಧನ

Sandalwood: ಹೇಮಂತ್ ಅಶ್ಲೀಲ ಬಟ್ಟೆ ತೊಟ್ಟು ನಟಿಸಬೇಕು ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮುಂಬೈಗೆ ಶೂಟಿಂಗ್‌ಗೆ ಹೋಗಿದ್ದಾಗ ಅಸಭ್ಯ ವರ್ತನೆ ತೋರಿದ್ದಾನೆ. ನಿರಾಕರಿಸಿದ್ದಕ್ಕೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿದ್ದಾನೆ. ಚಿತ್ರೀಕರಣದ ಬಳಿಕ ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಸೆನ್ಸಾರ್ ಆಗದ ದೃಶ್ಯಗಳನ್ನು ವೈರಲ್ ಮಾಡಿದ್ದಾನೆ ಎಂದು ನಟಿ ಆರೋಪಿಸಿದ್ದಾರೆ.

Loading...