ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

6 ಮಂದಿಯಿಂದ ಕಿಡ್ನಾಪ್‌, ಸಾಮೂಹಿಕ ಅತ್ಯಾಚಾರ; ದುಷ್ಕರ್ಮಿಯ ಫೋನ್‌ನಿಂದಲೇ ಪೊಲೀಸರಿಗೆ ಕರೆ ಮಾಡಿ ಸಿನಿಮೀಯವಾಗಿ ಪಾರಾದ ಸಂತ್ರಸ್ತೆ

ಡ್ಯಾನ್ಸರ್‌ ಅಪಹರಿಸಿ ಸಾಮೂಹಿಕ ಅತ್ಯಾಚಾರ

ಬಿಹಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆರ್ಕೆಸ್ಟ್ರಾ ಡ್ಯಾನ್ಸರ್‌ನನ್ನು ಅಪಹರಿಸಿ 6 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಪರಾಧಿಗಳ ಪೈಕಿ ಓರ್ವನ ಫೋನ್‌ನಿಂದ ಪೊಲೀಸರಿಗೆ ಕರೆ ಮಾಡಿ ಸಂತ್ರಸ್ತೆ ಪಾರಾಗಿದ್ದಾಳೆ. ಸದ್ಯ ಓರ್ವನನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ದುಬೈಯಲ್ಲಿರುವ ತಂದೆಯೊಂದಿಗೆ ವಿಡಿಯೊ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಎಎಂಯು ವಿದ್ಯಾರ್ಥಿನಿ; ಕಾರಣ ನಿಗೂಢ

ತಂದೆಯೊಂದಿಗೆ ಮಾತನಾಡುತ್ತಲೇ ವಿದ್ಯಾರ್ಥಿನಿ ಆತ್ಮಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಸೋಮವಾರ (ಜನವರಿ 12) ಸಂಜೆ ತಂದೆಯೊಂದಿಗೆ ವಿಡಿಯೊ ಕಾಲ್‌ನಲ್ಲಿ ಮಾತನಾಡುತ್ತಲೇ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿಯ ತಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದು, ಸಂತ್ರಸ್ತೆ ಮಹಿಳಾ ಪಾಲಿಟೆಕ್ನಿಕ್‌ನ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿಯಾಗಿದ್ದಳು.

ಕಾಡು ಹಂದಿ ಬೇಟೆಗೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡು ರೈತನಿಗೆ ಗಂಭೀರ ಗಾಯ

ಮಧುಗಿರಿಯಲ್ಲಿ ಸಿಡಿಮದ್ದು ಸ್ಫೋಟಗೊಂಡು ರೈತನಿಗೆ ಗಂಭೀರ ಗಾಯ

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ವೀರನಾಗೇನಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ಗಾಯಾಳು ರೈತನನ್ನು ಆಂಬ್ಯುಲೆನ್ಸ್ ಮೂಲಕ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ, ಕೊಡಿಸಲಾಗಿದೆ. ಪ್ರಾಣಿಗಳ ಬೇಟೆಗೆ ಕೆಲ ಕಿಡಿಗೇಡಿಗಳು ಅಕ್ರಮವಾಗಿ ಸಿಡಿಮದ್ದುಗಳನ್ನು ಇಡುತ್ತಿರುವುದು ರೈತರ ಜೀವಕ್ಕೆ ಮಾರಕವಾಗಿದೆ ಎಂದು ಗ್ರಾಮಸ್ಥರು ಆತಂಕ ಹೊರಹಾಕಿದ್ದಾರೆ.

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಾವಳಿ ಹೆಚ್ಚಳವಾಗಿರುವ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ; ವಿದ್ಯಾರ್ಥಿಯ ಶೈಕ್ಷಣಿಕ‌ ಸಾಧನೆ ಸಹಿಸಲಾಗದೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸಹಪಾಠಿಗಳು

ವಿದ್ಯಾರ್ಥಿಗೆ ಬೆಂಕಿ ಹಚ್ಚಿದ ಸಹಪಾಠಿಗಳು; ಕಾರಣ ಕೇಳಿದ್ರೆ ಶಾಕ್‌ ಆಗ್ತೀರ

ಉತ್ತರ ಪ್ರದೇಶದ ಬರೇಲಿಯಲ್ಲಿ ಗುರುವಾರ (ಜನವರಿ 8) ಮಧ್ಯಾಹ್ನ ಹಿಂದೂ ಕಾಲೇಜ್‌ ಎದುರಿನಲ್ಲಿ ಭೀಕರ ಘಟನೆ ಸಂಭವಿಸಿದೆ. 19 ವರ್ಷದ ಬಿಕಾಂ ವಿದ್ಯಾರ್ಥಿ ಫರ್ಹಾದ್ ಅಲಿ ಅವರ ಮೇಲೆ ಸಹಪಾಠಿಗಳು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾರೆ. ಆರೋಪಿಗಳಾಗಿ ಅದೇ ಕಾಲೇಜಿನ ಬಿಎ 3ನೇ ಸೆಮಿಸ್ಟರ್ ವಿದ್ಯಾರ್ಥಿ ಆರುಷ್ ಸಿಂಗ್ (21) ಮತ್ತು ಅವನ ಸ್ನೇಹಿತ ದೀಪಕ್ ಕುಮಾರ್ (20) ಎಂದು ಗುರುತಿಸಲಾಗಿದೆ.

Bengaluru News: ಬೆಂಗಳೂರಿನಲ್ಲಿ ಬಾಂಗ್ಲಾದೇಶಕ್ಕೆ ಜೈಕಾರ ಹಾಕಿದ ಮಹಿಳೆ ಬಂಧನ

ಬೆಂಗಳೂರಿನಲ್ಲಿ ಬಾಂಗ್ಲಾದೇಶಕ್ಕೆ ಜೈಕಾರ ಹಾಕಿದ ಮಹಿಳೆ ಬಂಧನ

ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್ ಎಂಬ ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗಿದ್ದಾಳೆ. ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ದೇಶವಿರೋಧಿ ಘೋಷಣೆ ಕೂಗಿದ ಮಹಿಳೆಯನ್ನು ಬಂಧಿಸಿದ್ದಾರೆ.

ಎಂಟು ವರ್ಷಗಳಿಂದ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ ಪತ್ನಿಯನ್ನು ಕೊಂದ ಪತಿ

ಲೈಂಗಿಕ ಕ್ರಿಯೆಗೆ ನಿರಾಕರಣೆ ಮಾಡಿದ ಪತ್ನಿಯ ಕೊಲೆ

ಕಳೆದ ಎಂಟು ವರ್ಷಗಳಿಂದ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. 40 ವರ್ಷದ ಮಹಿಳೆಯನ್ನು ಕೊಂದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಿರುವುದಾಗಿ ಉಪ ಪೊಲೀಸ್ ಆಯುಕ್ತ ಶ್ರೀಕೃಷ್ಣ ಲಾಲ್‌ಚಂದಾನಿ ಅವರು ತಿಳಿಸಿದ್ದಾರೆ.

Self Harming: ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬಾಲಕ ಜಗದೀಶನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಸ್ ಬಂದಿದ್ದ. ನಂತರ ಶಾಲೆಗೆ ಹೋಗಲು ನಿರಾಕರಿಸಿದ್ದ. ಇದರಿಂದ ತಂದೆ ಬುದ್ದಿವಾದ ಹೇಳಿದ್ದಕ್ಕೆ ಶಾಲೆಗೆ ತೆರಳಿದ್ದ ಬಾಲಕ ಗೆಳೆಯನ ಜೊತೆಗೆ ಮನೆಗೆ ವಾಪಸ್ ಬರುವಾಗ ಗೆಳೆಯನನ್ನು ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಧಾರವಾಡದಲ್ಲಿ ಕಿಡ್ನ್ಯಾಪ್‌ ಆಗಿದ್ದ ಇಬ್ಬರು ಮಕ್ಕಳು ದಾಂಡೇಲಿಯಲ್ಲಿ ಪತ್ತೆ; ಬೈಕ್​​ನಲ್ಲೇ ಕೂರಿಸಿಕೊಂಡು ಪರಾರಿಯಾಗಿದ್ದ ಕಳ್ಳ!

ಧಾರವಾಡದಲ್ಲಿ ಕಿಡ್ನ್ಯಾಪ್‌ ಆಗಿದ್ದ ಇಬ್ಬರು ಮಕ್ಕಳು ದಾಂಡೇಲಿಯಲ್ಲಿ ಪತ್ತೆ!

Dharwad children Kidnap case: ಪೊಲೀಸರು ಹುಡುಕಾಟದಲ್ಲಿದ್ದಾಗ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಬಳಿ ಆರೋಪಿಯ ಬೈಕ್ ಅಪಘಾತವಾಗಿತ್ತು. ಬೈಕ್ ಮೇಲೆ ಒಬ್ಬ ವ್ಯಕ್ತಿ ಹಾಗೂ ಇಬ್ಬರು ಮಕ್ಕಳಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಇದೇ ವೇಳೆ ದಾಂಡೇಲಿ ಪೊಲೀಸರು ವ್ಯಕ್ತಿಯ ವಿಚಾರಣೆ ನಡೆಸಿದಾಗ ಆತ ಧಾರವಾಡದವನು ಎನ್ನುವುದು ಖಚಿತವಾಗಿದೆ. ಈ ವೇಳೆ ಆರೋಪಿಯನ್ನು ಬಂಧಿಸಿ, ಮಕ್ಕಳನ್ನು ರಕ್ಷಿಸಲಾಗಿದೆ.

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದವ ಅರೆಸ್ಟ್‌; ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಶಾಸಕಿ ಕಿಡಿ

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದ ಯುವಕ ಅರೆಸ್ಟ್‌

Congress MLA Nayana Motamma: ರಾಜಕೀಯಕ್ಕೆ ಪ್ರವೇಶ ಮಾಡುವ ಮುನ್ನ ಹೇಗಿದ್ದೆ ಅದೇ ರೀತಿ ಈಗಲೂ ಇರಲು ಪ್ರಯತ್ನ ಮಾಡುತ್ತೇನೆ. ನಾನು ನನ್ನ ಜೀವನವನ್ನು ಪಾರದರ್ಶಕವಾಗಿ ನಡೆಸಬೇಕು. ರಾಜಕೀಯವಾಗಿ ಯಾವುದೇ ಮುಚ್ಚುಮರೆ ಇರಬಾರದು. ಆದರೆ, ಪರ್ಸನಲ್ ಆಗಿ ಟಾರ್ಗೆಟ್ ಮಾಡಿ ಕಾಮೆಂಟ್ ‌ಮಾಡುತ್ತಾರೆ ಎಂದು ಶಾಸಕಿ ನಯನಾ ಮೋಟಮ್ಮ ಕಿಡಿಕಾರಿದ್ದಾರೆ.

ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡಲು ಅವಕಾಶ ಕೊಟ್ಟ ಕೋರ್ಟ್‌

ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡಲು ಕೋರ್ಟ್‌ ಅವಕಾಶ

ಪವಿತ್ರಾ ಗೌಡ ಸೇರಿ ಮೂವರು ಆರೋಪಿಗಳಿಗೆ ವಾರಕ್ಕೊಮ್ಕೆ ಮನೆಯೂಟ ಸವಿಯಲು ಕೋರ್ಟ್‌ ಅವಕಾಶ ನೀಡಿದೆ. ಜೈಲಿನ ಊಟದಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂದು ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಂದು ಆದೇಶ ನೀಡಿದೆ.

ಮೊಟ್ಟೆ ಕರಿ ಮಾಡದ್ದಕ್ಕೆ ಪತ್ನಿಯೊಂದಿಗೆ ಜಗಳ;  ಅವಮಾನಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಪತಿ

ಮೊಟ್ಟೆ ಕರಿ ಮಾಡದ್ದಕ್ಕೆ ಪತ್ನಿಯೊಂದಿಗೆ ಜಗಳ: ಪತಿ ಆತ್ಮಹತ್ಯೆ

Crime News: ಮೊಟ್ಟೆ ಕರಿ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯೊಂದಿಗೆ ನಡೆದ ಜಗಳವು ಭಾರಿ ದುರಂತಕ್ಕೆ ಕಾರಣವಾದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಜಗಳದ ವೇಳೆ ಅವಮಾನಕ್ಕೊಳಗಾದೆನೆಂದು ಮನನೊಂದ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಸೈನಿಕನ ಅಂತಿಮ ದರ್ಶನಕ್ಕೆ ಆಸ್ಪತ್ರೆಯಿಂದ ಆಗ ತಾನೇ ಜನಿಸಿದ ಮಗುವಿನೊಂದಿಗೆ  ಸ್ಟ್ರೆಚರ್‌ನಲ್ಲಿ ಬಂದ ಪತ್ನಿ

ಮಗುವನ್ನು ನೋಡುವ ಮೊದಲೇ ಅಪಘಾತದಲ್ಲಿ ಮೃತಪಟ್ಟ ಸೈನಿಕ

ಮಹಾರಾಷ್ಟ್ರದಲ್ಲಿ ಪಿತೃತ್ವ ರಜೆಯಲ್ಲಿದ್ದ ಸೈನಿಕನೊಬ್ಬ ಅಪಘಾತದಲ್ಲಿ ಮೃತ ಪಟ್ಟಿದ್ದು, ಮೃತ ಸೈನಿಕನ ಅಂತಿಮ ದರ್ಶನಕ್ಕೆ ಆಸ್ಪತ್ರೆಯಿಂದ ಪತ್ನಿ ಆಗ ತಾನೇ ಜನಿಸಿದ ಮಗುವಿನೊಂದಿಗೆ ಬಂದ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿಕಂದರಾಬಾದ್- ಶ್ರೀನಗರ ವಲಯದಲ್ಲಿ ನಿಯೋಜಿತರಾಗಿದ್ದ ಪ್ರಮೋದ್ ಪರಶುರಾಮ್ ಜಾಧವ್ ಅಪಘಾತದಲ್ಲಿ ಮೃತಪಟ್ಟ ಸೈನಿಕ.

ಜನನಿಬಿಡ ರಸ್ತೆಯಲ್ಲಿ ಮಹಿಳೆಯ ಮೇಲೆ ಅಪರಿಚಿತನಿಂದ ಕಪಾಳಮೋಕ್ಷ, ದೌರ್ಜನ್ಯ; ರಕ್ಷಣೆಗೆ ಬಾರದ ಜನ, ಸಂತ್ರಸ್ತೆ ಬೇಸರ

ಜನನಿಬಿಡ ರಸ್ತೆಯಲ್ಲಿ ಮಹಿಳೆಯ ಮೇಲೆ ಅಪರಿಚಿತನಿಂದ ಕಪಾಳಮೋಕ್ಷ

woman assault in public: ಜನನಿಬಿಡ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬನು ಕಪಾಳಮೋಕ್ಷ ಮಾಡಿ ದೌರ್ಜನ್ಯ ನಡೆಸಿರುವ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಸುತ್ತಮುತ್ತ ಇದ್ದ ಜನರು ರಕ್ಷಣೆಗೆ ಮುಂದಾಗದೆ ನಿರ್ಲಕ್ಷ್ಯ ವಹಿಸಿರುವುದು ಮತ್ತಷ್ಟು ಬೇಸರಕ್ಕೆ ಕಾರಣವಾಗಿದ್ದು, ಸಂತ್ರಸ್ತೆ ಈ ಅಮಾನುಷ ವರ್ತನೆಯಿಂದ ತೀವ್ರವಾಗಿ ನೊಂದಿರುವುದಾಗಿ ಹೇಳಿದ್ದಾರೆ.

Question paper leak: ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಆರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಹರಿದಾಡಿತ್ತು. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ನೀಡಿದ್ದರು. ಪೊಲೀಸರ ತನಿಖೆ ವೇಳೆ ಪ್ರಶ್ನೆಪತ್ರಿಕೆ ಲೀಕ್ ಮಾಡಿರುವ ದೊಡ್ಡ ಜಾಲ ಬಯಲಾಗಿದೆ.

Cyber Crime: AI ಹುಡುಗಿ ನಂಬಿ ಬೆತ್ತಲಾದ ಯುವಕ, 1.5 ಲಕ್ಷ ರೂ. ಮಂಗಮಾಯ

AI ಹುಡುಗಿ ನಂಬಿ ಬೆತ್ತಲಾದ ಯುವಕ, 1.5 ಲಕ್ಷ ರೂ. ಮಂಗಮಾಯ

ಡೇಟಿಂಗ್ ಆ್ಯಪ್‌ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿದ ಕಿಡಿಗೇಡಿಗಳು, ಯುವಕನಿಗೆ ವಿಡಿಯೋ ಕಾಲ್ ಮಾಡಿದ್ದಾರೆ. ಬೆತ್ತಲೆಗೊಳಿಸಿ ಬ್ಲ್ಯಾಕ್‌ಮೇಲ್ ಮಾಡಿ ಒಂದೂವರೆ ಲಕ್ಷ ರೂ. ಸುಲಿಗೆ ಮಾಡಿದ್ದಾರೆ. ಈಜಿಪುರದಲ್ಲಿ ವಾಸವಾಗಿರುವ ಯುವಕ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಎಐ ಮೂಲಕ ಯುವತಿಯ ಪ್ರೊಫೈಲ್ ಸೃಷ್ಟಿಸಿದ್ದು, ಎಐ ಯುವತಿಯೇ ಬೆತ್ತಲೆಯಾಗಿದ್ದಾಳೆ ಎಂಬುದು ಗೊತ್ತಾಗಿದೆ

ಇಂಗ್ಲೆಂಡ್‌ನಿಂದ ಯಾರಿಗೂ ತಿಳಿಸದೆ ಬಂದು ಸ್ನೇಹಿತನ ಸಹಾಯದಿಂದ ತಾಯಿಯನ್ನೇ ಹತೈಗೈದ; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

ಇಂಗ್ಲೆಂಡ್‌ನಿಂದ ಹಿಂತಿರುಗಿದ ಪಾಪಿ ತಾಯಿಯನ್ನೇ ಹತ್ಯೆಗೈದ

Crime news: ಇಂಗ್ಲೆಂಡ್‌ನಿಂದ ಹಿಂತಿರುಗಿದ ಪಾಪಿಯೊಬ್ಬ ತನ್ನ ಸ್ನೇಹಿತನ ಸಹಾಯದಿಂದ ತಾಯಿಯನ್ನು ಹತ್ಯೆ ಮಾಡಿದ ಶಾಕಿಂಗ್ ಘಟನೆ ಹರಿಯಾಣದಲ್ಲಿ ನಡೆದಿದೆ. ಕೌಟುಂಬಿಕ ಜಗಳದ ನಂತರ ಸ್ನೇಹಿತನ ಸಹಾಯದಿಂದ ತಾಯಿಯನ್ನು ಕೊಂದಿದ್ದಾನೆ. ಪ್ರಕರಣ ಸಂಬಂಧ ಮೃತ ಮಹಿಳೆಯ ಪುತ್ರ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

35 ವರ್ಷದ ಮಹಿಳಾ ಟೆಕ್ಕಿ ಸಾವಿನ ರಹಸ್ಯ ಬಯಲು​:‌ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೊಲೆಗೈದ 18 ವರ್ಷದ ವಿದ್ಯಾರ್ಥಿ ಅರೆಸ್ಟ್‌

35 ವರ್ಷದ ಟೆಕ್ಕಿಯನ್ನು ಕೊಂದ 18 ವರ್ಷದ ವಿದ್ಯಾರ್ಥಿ

Bengaluru News: ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯ ಅಪಾರ್ಟ್‌ಮೆಂಟ್‌ನಲ್ಲಿ ಜನವರಿ 3ರಂದು ಉಸಿರುಗಟ್ಟಿ ಮೃತಪಟ್ಟ ಮಹಿಳಾ ಟೆಕ್ಕಿಯ ಸಾವಿನ ಪ್ರಕರಣಕ್ಕೆ ತಿರುವು ಲಭಿಸಿದ್ದು, ಇದೊಂದು ವ್ಯವಸ್ಥಿತ ಕೊಲೆ ಎನ್ನುವುದು ತನಿಖೆಯಿಂದ ಬಯಲಾಗಿದೆ. ಕೊಲೆಗಾರನನ್ನು 18 ವರ್ಷದ ವಿದ್ಯಾರ್ಥಿ, ಕೇರಳ ಮೂಲದ ಕರ್ನಲ್ ಕುರೈ ಎಂದು ಗುರುತಿಸಲಾಗಿದೆ.

ಗೆಳೆಯನನ್ನು ಹೊಂದಿದ್ದ ಮಗಳ ಕನ್ಯತ್ವ ಪರೀಕ್ಷೆಗೆ ಒತ್ತಾಯ; ಪೋಷಕರಿಗೆ ಜೈಲು ಶಿಕ್ಷೆ

ಮಗಳ ಕನ್ಯತ್ವ ಪರೀಕ್ಷೆಗೆ ಪೋಷಕರಿಂದಲೇ ಒತ್ತಾಯ

ಮಗಳಿಗೆ ಗೆಳೆಯನಿದ್ದಾನೆ ಎಂದು ತಿಳಿದ ಪೋಷಕರು ಆಕೆಯ ಕನ್ಯತ್ವ ಪರೀಕ್ಷೆಗೆ ಒತ್ತಾಯಿಸಿದ ಘಟನೆ ಫ್ರಾನ್ಸ್ ನಲ್ಲಿ ನಡೆದಿದೆ. ಗೆಳೆಯನಿದ್ದಾನೆ ಎಂದು ತಿಳಿದ ಬಳಿಕ ಪೋಷಕರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಅಲ್ಲದೇ ಕನ್ಯತ್ವ ಪರೀಕ್ಷೆಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಬಾಲಕಿ ದೂರು ನೀಡಿದ್ದರಿಂದ ಪೋಷಕರು ಇದೀಗ ಜೈಲು ಪಾಲಾಗಿದ್ದಾರೆ.

ಸ್ಯಾಂಡಲ್‌ವುಡ್‌ ನಟಿಗೆ ಉದ್ಯುಮಿ ಕಿರುಕುಳ ನೀಡಿದ ಪ್ರಕರಣಕ್ಕೆ ಟ್ವಿಸ್ಟ್‌; ಇಬ್ಬರ ಖಾಸಗಿ ಫೋಟೊ ವೈರಲ್‌

ಉದ್ಯಮಿಯ ಜತೆಗಿನ ಸ್ಯಾಂಡಲ್‌ವುಡ್‌ ನಟಿಯ ಖಾಸಗಿ ಫೋಟೊ ಲೀಕ್‌

ಸ್ಯಾಂಡಲ್​​ವುಡ್​ ಖ್ಯಾತ ನಟಿಗೆ ಉದ್ಯಮಿ ಅರವಿಂದ್‌ ರೆಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದೆ. ಇದೀಗ ಅರವಿಂದ್‌ ರೆಡ್ಡಿ ಜತೆ ನಟಿ ಬೆಡ್‌ರೂಂನಲ್ಲಿರುವ ಫೋಟೊ ಸೇರಿದಂತೆ ಹಲವು ಖಾಸಗಿ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮಹಿಳೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಮಾಡಿದ ಪಾಪಿಗಳು

ಮಹಿಳೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಮಾಡಿದ ಪಾಪಿಗಳು

ಮಹಿಳೆಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ಚಿತ್ರೀಕರಿಸಿದ ಆರೋಪದ ಮೇಲೆ ಹುಬ್ಬಳ್ಳಿಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ವಾಟ್ಸಾಪ್‌ನಲ್ಲಿ ಅಶ್ಲೀಲ ದೃಶ್ಯಗಳನ್ನು ಪ್ರಸಾರ ಮಾಡಿದ್ದರು. ಶುಕ್ರವಾರ ರಾತ್ರಿ 11.30 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಈ ಘಟನೆ ನಡೆದಿದೆ.

Body Found: ಬಿಜೆಪಿ‌ ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ದಾವಣಗೆರೆ ಹೊರವಲಯ ಹದಡಿ ರಸ್ತೆಯ ಬಳಿಯ ತೋಟದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಕಾರ್ಪೊರೇಟರ್ ಮೃತ ದೇಹ ಸಿಕ್ಕಿದೆ. ಕಾರಿನಲ್ಲಿ ಕುಳಿತು ಮಾಜಿ ಕಾರ್ಪೊರೇಟರ್​ ಸಂಕೋಳ್ ಚಂದ್ರಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಅವರ ಮಗನಾದ ಮಗ ಹಾಗೂ ಮಗಳು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮತ್ತೊಂದು ಅತ್ಯಾಚಾರ ದೂರು: ಕೇರಳ ಶಾಸಕ ರಾಹುಲ್ ಮಮ್‌ಕೂಟತಿಲ್ ಬಂಧನ

ಕೇರಳ ಶಾಸಕ ರಾಹುಲ್ ಮಮ್‌ಕೂಟತಿಲ್ ಬಂಧನ

Harassment case: ಕೇರಳ ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಮೂರನೇ ಅತ್ಯಾಚಾರ ದೂರು ದಾಖಲಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೂ ರಾಹುಲ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಎರಡು ಪ್ರಕರಣಗಳಲ್ಲಿ ಬಂಧನದಿಂದ ರಕ್ಷಣೆ ಪಡೆದು ನಿರೀಕ್ಷಣಾ ಜಾಮೀನು ಪಡೆದಿದ್ದರು. ಇದೀಗ ಹೊಸ ದೂರಿನಲ್ಲಿ ಶಾಸಕನನ್ನು ಬಂಧಿಸಲಾಗಿದೆ.

Karwar News: ಪ್ರೀತಿಸುವಂತೆ ಜೆಡಿಎಸ್‌ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ

ಪ್ರೀತಿಸುವಂತೆ ಜೆಡಿಎಸ್‌ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳದಿಂದಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

Loading...