ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಉಗ್ರಗಾಮಿ ಚಟುವಟಿಕೆಗೆ ನೆರವು: ಭಯೋತ್ಪಾದಕ  ಹಫೀಜ್ ಸಯೀದ್ ಗೆ ಜಾಮೀನು ರಹಿತ ವಾರಂಟ್ ಜಾರಿ

ಭಯೋತ್ಪಾದಕ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ನೆರವು ನೀಡುವ ಆರೋಪದಲ್ಲಿ ಭಯೋತ್ಪಾದಕ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ. ಪಾಕಿಸ್ತಾನದಲ್ಲಿ ನೆಲೆಸಿರುವ ಸಯೀದ್ ಉಗ್ರರಿಗೆ ಆರ್ಥಿಕ ನೆರವು, ಶಸ್ತ್ರಾಸ್ತ್ರಗಳನ್ನು ಒದಗಿಸಲು ನೆರವಾಗುತ್ತಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.

Jaipur Horror: ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಇಟ್ಟಿಗೆಯಿಂದ ಜಜ್ಜಿ ಕೊಂದ ಪಾಪಿ; ಏನೂ ಆಗೇ ಇಲ್ಲವೆನ್ನುವಂತೆ ಚಹಾ ಮಾಡಿ ಕುಡಿದು ಎಸ್ಕೇಪ್‌

ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಇಟ್ಟಿಗೆಯಿಂದ ಜಜ್ಜಿ ಕೊಂದ ಪಾಪಿ

Jaipur Shocker: ಜೈಪುರದಲ್ಲಿ ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭೀಕರ ಸಾಮೂಹಿಕ ಕೊಲೆ ನಡೆದಿದೆ. ವ್ಯಕ್ತಿಯೊಬ್ಬ ನಿದ್ರಿಸುತ್ತಿದ್ದ ಪತ್ನಿ ಮತ್ತು ಮೂವರು ಹೆಣ್ಣುಮಕ್ಕಳನ್ನು ಇಟ್ಟಿಗೆಯಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕೃತ್ಯದ ಬಳಿಕ ಹಾಲಿನವನಿಂದ ಹಾಲು ಪಡೆದು ವೃದ್ಧ ತಂದೆಗೆ ಚಹಾ ಮಾಡಿಕೊಟ್ಟು ಪರಾರಿಯಾಗಿರುವ ಆರೋಪಿ ರಾಹುಲ್ ಝಾ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಎಸ್‌ಬಿಐ ಬ್ಯಾಂಕ್‌ ಸಿಬ್ಬಂದಿಗೆ ಖಾರದ ಪುಡಿ ಎರಚಿ 4 ಲಕ್ಷ ರೂಪಾಯಿ ದೋಚಿದ ಕಳ್ಳ: ಕೆಲವೇ ನಿಮಿಷದಲ್ಲಿ ಖದೀಮನ ಹೆಡೆಮುಡಿ ಕಟ್ಟದ ಪೊಲೀಸರು

ಬ್ಯಾಂಕ್ ಸಿಬ್ಬಂದಿ ಮೇಲೆ ಮೆಣಸಿನ ಪುಡಿ ಎರಚಿ 4 ಲಕ್ಷ ರೂ. ದೋಚಿದ

Viral News: ಬ್ಯಾಂಕ್‌ ಉದ್ಯೋಗಿಗಳ ಕಣ್ಣಿಗೆ ಖಾರದ ಪುಡಿ ಎರಚಿ, 4 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾದ ಘಟನೆಯೊಂದು ನಡೆದಿದೆ. ಆದಾಗ್ಯೂ, ಪೊಲೀಸರು 30 ನಿಮಿಷಗಳಲ್ಲಿ ಆತನನ್ನು ಪತ್ತೆಹಚ್ಚಿ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಈ ಸಿನಿಮೀಯ ಘಟನೆ ನಡೆದಿದೆ.

10ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ನೊಂದ ಬಾಲಕಿ ಆತ್ಮಹತ್ಯೆಗೆ ಶರಣು

ಶಿಕ್ಷಕನಿಂದ ಲೈಂಗಿಕ ಕಿರುಕುಳ: ಬಾಲಕಿ ಆತ್ಮಹತ್ಯೆಗೆ ಶರಣು

Self-harming: ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಘಟನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಲಂನಲ್ಲಿ ವಾಸಿಸುತ್ತಿದ್ದ ಮುಂಬೈಯ ಟೈಲರ್‌ ಮಗ ವಿದೇಶದಲ್ಲಿ ಪೈಲಟ್‌ ತರಬೇತಿ ಪಡೆದಿದ್ದೇಕೆ? ಈತನಿಗೂ 9/11 ನ್ಯೂಯಾರ್ಕ್ ದಾಳಿಗೂ ಸಂಬಂಧವೇನು? ತನಿಖೆ ವೇಳೆ ಹೊರ ಬಂದ ರಹಸ್ಯವಿದು

ಕರಾಳ 9/11 ನ್ಯೂಯಾರ್ಕ್ ದಾಳಿ ಬಳಿಕ ಭಾರತದಲ್ಲಿ ತನಿಖೆ ನಡೆಸಿದ್ದೇಕೆ?

9/11 New York Attacks: 2001ರ ಸೆಪ್ಟೆಂಬರ್ 11ರಂದು ವಿಶ್ವವನ್ನೇ ಬೆಚ್ಚಿಬೀಳಿಸಿದ ಭಯೋತ್ಪಾದಕ ದಾಳಿಯ ಹಲವು ವರ್ಷಗಳ ಬಳಿಕವೂ ಅದರ ಹಿಂದಿನ ಸಂಚುಗಳು ಹಾಗೂ ಆರೋಪಿಗಳ ಕುರಿತ ಮಾಹಿತಿಗಳು ಕುತೂಹಲ ಮೂಡಿಸುತ್ತಲೇ ಇವೆ. ಈ ಬಗ್ಗೆ ಭಾರತದಲ್ಲೂ ತನಿಖೆ ನಡೆದಿತ್ತು. ಅದೇಕೆ ಎನ್ನುವ ವಿವರ ಇಲ್ಲಿದೆ.

Lokayukta Raid: ಎರಡೂವರೆ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ; ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಲೋಕಾಯುಕ್ತ ಬಲೆಗೆ

ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಲೋಕಾಯುಕ್ತ ಬಲೆಗೆ

Tumkur News: ಅರಣ್ಯ ಇಲಾಖೆಯಿಂದ ಮಂಜೂರಾದ ಕಾಮಗಾರಿ ಕೆಲಸ ಮಾಡಲು ಕಾಂಟ್ರಾಕ್ಟರ್‌ ಒಬ್ಬರಿಂದ 2,60,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ಹಣ ಪಡೆಯುತ್ತಿದ್ದ ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಕೆ.ಎಸ್., ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪಾವಗಡದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ? ಪೀಪಲ್ಸ್ ವಾ‌ರ್ ಜನಶಕ್ತಿ ಪಾರ್ಟಿ ಕಾಮ್ರೇಡ್‌ ದೇವನ್ನ ದಳಂ ಹೆಸರಲ್ಲಿ 5 ಲಕ್ಷ ರೂಪಾಯಿಗೆ ಬೇಡಿಕೆ; ಗೇಟ್‌ನಲ್ಲಿ ಪತ್ರ ಪತ್ತೆ

ಪಾವಗಡದಲ್ಲಿ ಮತ್ತೆ ಆರಂಭವಾಯ್ತ ನಕ್ಸಲ್ ಚಟುವಟಿಕೆ?

Naxal Movement: ಕೇಂದ್ರ ನಕ್ಸಲ್‌ ಮುಕ್ತ ಭಾರತ ಘೋಷಣೆ ಮಾಡುತ್ತಿದ್ದರೆ ಇತ್ತ ಆಂಧ್ರ ಪ್ರದೇಶ ಹಾಗೂ ತುಮಕೂರಿನ ಪಾವಗಡ ಗಡಿಭಾಗದಲ್ಲಿ ನಿಷ್ಕ್ರಿಯವಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಶಂಕೆ ವ್ಯಕ್ತವಾಗಿದೆ. ಪೀಪಲ್ಸ್ ವಾರ್ ಜನಶಕ್ತಿ ಪಾರ್ಟಿಯ ಕಾಮ್ರೇಡ್‌ ದೇವನ್ನ ದಳಂ ಹೆಸರಿನ ಪತ್ರ ಪಾವಗಡದಲ್ಲಿಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಆಸ್ಪತ್ರೆಯ ಮುಖ್ಯ ದ್ವಾರಕ್ಕೆ ಬೀಗ; ಹಿಂಬದಿಯಿಂದ ಬಾಗಿಲು ತೆರೆದು ಚಿಕಿತ್ಸೆ: ಉತ್ತರ ಪ್ರದೇಶದಲ್ಲಿ ಹೆರಿಗೆ ವೇಳೆ ತಾಯಿ, ಮಗು ಸಾವು

ಸೀಲ್ ಮಾಡಲಾದ ಆಸ್ಪತ್ರೆಯಲ್ಲಿ ಹೆರಿಗೆ; ತಾಯಿ, ಮಗು ಸಾವು

Sealed Hospital: ಆರೋಗ್ಯ ಇಲಾಖೆಯಿಂದ ಸೀಲ್ ಮಾಡಲಾದ ಆಸ್ಪತ್ರೆಯೊಂದು ಹಿಂಬದಿಯ ಬಾಗಿಲು ತೆರೆದು ಕಾರ್ಯಾಚರಣೆ ನಡೆಸುತ್ತಿದ್ದದ್ದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿ ಹೆರಿಗೆಗಾಗಿ ಬಂದ ಮಹಿಳೆ ಮತ್ತು ನವಜಾತ ಶಿಶು ಸಾವನ್ನಪ್ಪಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಮತ್ತೆ ಆಸ್ಪತ್ರೆಯನ್ನು ಸೀಲ್ ಮಾಡಿದ್ದಾರೆ.

ನೆಲಮಂಗಲದಲ್ಲಿ 3 ವರ್ಷದ ಬಾಲಕಿ ಅನುಮಾನಾಸ್ಪದ ಸಾವು; ಮಲ ತಾಯಿಯಿಂದ ಕೊಲೆ ಶಂಕೆ!

ನೆಲಮಂಗಲದಲ್ಲಿ 3 ವರ್ಷದ ಬಾಲಕಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ!

Nelamangala News: ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡಹಳ್ಳಿಯಲ್ಲಿ ಘಟನೆ ನಡೆದಿದೆ. ಬಾಲಕಿಯ ಸಾವಿನ ಹಿಂದೆ ಮಲತಾಯಿಯ ಕೈವಾಡವಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯಲ್ಲೇ ಮಾವನ ಭೀಕರ ಕೊಲೆ; ಪಾರ್ಟಿ ಮೂಡ್‌ನಲ್ಲಿ ಸೊಸೆ, 6 ಲಕ್ಷ ಸುಪಾರಿ ಕೊಟ್ಟವಳು ಸಿಕ್ಕಿ ಬಿದ್ದಿದ್ದೇಗೆ?

ತಡರಾತ್ರಿ ಪಾರ್ಟಿಗೆ ಹೋದ ಸೊಸೆ; ಅದೇ ವೇಳೆ ಮಾವನ ಭೀಕರ ಹತ್ಯೆ!

ಕಾನ್ಪುರದಲ್ಲಿ 63 ವರ್ಷದ ಉದ್ಯಮಿ ವಿನೀತ್ ಮಿನೋಚಾ ಹತ್ಯೆ ಪ್ರಕರಣದಲ್ಲಿ ಸೊಸೆಯೇ ಪ್ರಮುಖ ಆರೋಪಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಮನೆ ಕೆಲಸಗಾರನಿಗೆ ₹6 ಲಕ್ಷ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾಳೆ ಎಂದು ಪೊಲೀಸರು ಆರೋಪಿಸಿದ್ದು, ಘಟನೆ ನಡೆದ ವೇಳೆ ಆಕೆ ಪಾರ್ಟಿಯಲ್ಲಿದ್ದರೂ ಹಂತಕರೊಂದಿಗೆ ಸಂಪರ್ಕದಲ್ಲಿದ್ದಳು ಎನ್ನಲಾಗಿದೆ.

ಮೂತ್ರದಿಂದ ಯೂರಿಯಾ ತೆಗೆದು ಬಾಂಬ್ ತಯಾರಿ? ರೆಡ್‌ಫೋರ್ಟ್ ಸ್ಫೋಟದ ಬಗ್ಗೆ NIA ಸ್ಫೋಟಕ ಮಾಹಿತಿ!

ರೆಡ್‌ಫೋರ್ಟ್ ಸ್ಫೋಟ: NIA ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ರೆಡ್‌ಫೋರ್ಟ್ ಕಾರು ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಸಂಗತಿಗಳು ಹೊರಬಿದ್ದಿವೆ. ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿ ಯೂರಿಯಾ ಬಳಸಿ ಸ್ಫೋಟಕ ತಯಾರಿಸಿದ್ದಾನೆ ಎಂದು NIA ಚಾರ್ಜ್‌ಶೀಟ್‌ನಲ್ಲಿ ಆರೋಪಿಸಿದೆ. ಮೂತ್ರದಿಂದ ಯೂರಿಯಾವನ್ನು ಹೊರತೆಗೆಯುವ ವಿಧಾನದ ಕುರಿತು ನಬಿ ಹಾಗೂ ಮತ್ತೊಬ್ಬ ಆರೋಪಿ ಶಾಹೀನ್ ಸಯೀದ್‌ಗೆ ಸೇರಿದ ಪೆನ್‌ಡ್ರೈವ್‌ಗಳಲ್ಲಿದ್ದ PDF ದಾಖಲೆಗಳಲ್ಲಿ ಮಾಹಿತಿ ಪತ್ತೆಯಾಗಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.

ಪ್ಲೇ ಸ್ಕೂಲ್‌ನಲ್ಲಿ 2 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ;  ಶಾಲಾ ಸಿಬ್ಬಂದಿಗಳನ್ನು ನೋಡಿ ಬೆಚ್ಚಿಬಿದ್ದ ಕಂದಮ್ಮ

ಪ್ಲೇ ಸ್ಕೂಲ್‌ನಲ್ಲಿ 2 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ರಾಜಸ್ಥಾನದ ಕೋಟಾದ ಪ್ಲೇ ಸ್ಕೂಲ್‌ನಲ್ಲಿ 2 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕಿ ಹಾಗೂ ಶಾಲೆಯ ಪುರುಷ ಸಿಬ್ಬಂದಿಗಳ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ವೈದ್ಯಕೀಯ ಹಾಗೂ ವಿಧಿವಿಜ್ಞಾನ ವರದಿ ಬಂದ ಬಳಿಕವಷ್ಟೇ ಘಟನೆ ಕುರಿತು ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಟ್ಕಾ ಪ್ಯಾಕ್‌ ತೆಗೆದುಕೊಂಡು ಹೋಗಲು ಅನುಮತಿ ಕೊಟ್ಟಿಲ್ಲವೆಂದು ಪಬ್‌ಗೆ ಬೆಂಕಿ ಹಚ್ಚಿದ ಭೂಪ!

ಕ್ಷುಲ್ಲಕ ಕಾರಣಕ್ಕೆ ಪಬ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ

ಗುಟ್ಕಾ ಪ್ಯಾಕೆಟ್ ತೆಗೆದುಕೊಂಡು ಪಬ್‌ಗೆ ಪ್ರವೇಶಿಸುವುದನ್ನು ತಡೆದಿದ್ದಕ್ಕೆ ಅವಮಾನಗೊಂಡ ವ್ಯಕ್ತಿಯೊಬ್ಬ ಸ್ನೇಹಿತನೊಂದಿಗೆ ಮರಳಿ ಬಂದು ಪಬ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಸುಮಾರು ₹9 ಲಕ್ಷ ನಷ್ಟ ಸಂಭವಿಸಿದೆ.

ರೆಡ್‌ ಪೋರ್ಟ್‌ನಲ್ಲಿ ಆತ್ಮಾಹುತಿ ಬಾಂಬರ್‌ ಉಮರ್ ಉನ್ ನಬಿ ಕಾರ್‌ ಸ್ಫೋಟಿಸಿದ್ದು ಹೇಗೆ? NIA ಚಾರ್ಜ್‌ಶೀಟ್‌ನಲ್ಲಿದೆ ಇಂಚಿಂಚು ಮಾಹಿತಿ

ರೆಡ್‌ ಪೋರ್ಟ್‌ನಲ್ಲಿ ಬ್ಲಾಸ್ಟ್: ಉಮರ್ ಉನ್ ನಬಿ ಪ್ರಮುಖ ಸಂಚುಕೋರ

Red Fort Blast: ದೆಹಲಿಯ ರೆಡ್‌ ಪೋರ್ಟ್‌ ಬಳಿ ನಡೆದ ಕಾರ್‌ ಸ್ಫೋಟ ಪ್ರಕರಣದಲ್ಲಿ ಉಮರ್ ಉನ್ ನಬಿಯನ್ನು ಭಯೋತ್ಪಾದಕ ಘಟಕದ ಪ್ರಮುಖ ಸಂಚುಕೋರ ಹಾಗೂ ಆಪರೇಷನಲ್ ಇನ್‌ಚಾರ್ಜ್ ಎಂದು NIA ಆರೋಪಿಸಿದೆ. ಸ್ಫೋಟಕ ಅವಶೇಷಗಳು ಪತ್ತೆಯಾಗಿದ್ದು, ಪ್ರಕರಣದ ತನಿಖೆಯಲ್ಲಿ ದೊಡ್ಡ ಭಯೋತ್ಪಾದಕ ಸಂಚು ಬೆಳಕಿಗೆ ಬಂದಿದೆ.

ಬೆಂಗಳೂರಿನ ರಸ್ತೆಬದಿಯ ಅಂಗಡಿಯಿಂದ ಮಧ್ಯರಾತ್ರಿ ಗಣೇಶ ವಿಗ್ರಹ ಕಳವು: ಸಿಸಿಟಿವಿ ದೃಶ್ಯ ವೈರಲ್

ಬೆಂಗಳೂರಿನಲ್ಲಿ ಅಘಾತಕಾರಿ ಘಟನೆ: ರಸ್ತೆಬದಿ ಮಳಿಗೆಯಿಂದ ಗಣೇಶ ಮೂರ್ತಿ ಕಳವು

Viral News: ರಸ್ತೆಬದಿಯ ಮಳಿಗೆಯಿಂದಲೇ ಗಣೇಶ ಮೂರ್ತಿಯನ್ನು ತಡರಾತ್ರಿ ಕಳ್ಳತನ ಮಾಡಿರುವ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿ ಪ್ರದೇಶದ ರಸ್ತೆ ಬದಿಯ ಅಂಗಡಿಯಲ್ಲಿ ಮಾರಾಟಕ್ಕೆ ಇಡಲಾಗಿದ್ದ ಗಣೇಶ ವಿಗ್ರಹವನ್ನು ಕಳ್ಳತನ ಮಾಡಲಾಗಿದ್ದು ಈ ಸಂಪೂರ್ಣ ಕೃತ್ಯ ಹತ್ತಿರದ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು 8 ತಿಂಗಳ ಬಳಿಕ ಪತ್ತೆ; ಒಬ್ಬಾಕೆ ಈಗ ಗರ್ಭಿಣಿ!

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರು ಪತ್ತೆ; ಒಬ್ಬಾಕೆ ಈಗ ಗರ್ಭಿಣಿ!

Bengaluru Girls Missing Case: ಇತ್ತೀಚೆಗೆ ಒಬ್ಬ ಯುವತಿ ಹೊಸ ಸಿಮ್ ಕಾರ್ಡ್‌ ಖರೀದಿಸಲು ತನ್ನ ಆಧಾರ್ ಕಾರ್ಡ್ ಬಳಸಿದ್ದಳು. ಈ ವೇಳೆ ಆಧಾರ್ ಸಂಖ್ಯೆಯ ಬಳಕೆಯ ಕುರಿತು ಸರ್ವಿಸ್ ಪ್ರೊವೈಡರ್‌ನಿಂದ ಸಿಐಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಆ ಮಾಹಿತಿಯ ಆಧಾರದ ಮೇಲೆ ಯುವತಿಯರನ್ನು ಪತ್ತೆ ಹಚ್ಚಿದ್ದಾರೆ.

ಆಮ್ಲಜನಕ ಸಿಲಿಂಡರ್ ರಸ್ತೆಗೆ ಬಿದ್ದು ಸ್ಫೋಟ: ಓರ್ವ ಸಾವು, ನಾಲ್ವರಿಗೆ ಗಾಯ

ಆಮ್ಲಜನಕ ಸಿಲಿಂಡರ್ ಸ್ಫೋಟ: 1 ಸಾವು, 4 ಮಂದಿಗೆ ಗಾಯ

Oxygen Cylinder Explode: ದೆಹಲಿಯ ಓಖ್ಲಾದಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಟ್ರಕ್‌ನಿಂದ ಆಮ್ಲಜನಕ ಸಿಲಿಂಡರ್ ಇಳಿಸುತ್ತಿದ್ದಾಗ ಸಿಲಿಂಡರ್ ರಸ್ತೆಗೆ ಬಿದ್ದು ಸ್ಫೋಟಗೊಂಡಿದೆ. ಮೃತರನ್ನು ಮೂಲತಃ ಜೈಪುರದ ಮೋಹಿತ್ ಸಿಂಗ್ ಎಂದು ಗುರುತಿಸಲಾಗಿದೆ. ದೆಹಲಿಯ ಓಖ್ಲಾ ಹಂತ-1 ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಂದು ಪತಿಯೂ ಆತ್ಮಹತ್ಯೆ!

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಪತ್ನಿಯ ಕೊಂದು ಪತಿಯೂ ಆತ್ಮಹತ್ಯೆ!

Bengaluru News: ಬೆಂಗಳೂರಿನ ಎಚ್‌ಎಎಲ್‌ ವಿಭೂತಿಪುರದಲ್ಲಿ ಘಟನೆ ನಡೆದಿದೆ. ಪತ್ನಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಅದೇ ವಿಚಾರಕ್ಕೆ ನಿನ್ನೆ ತಡರಾತ್ರಿ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯನ್ನು ಪತಿ ಕೊಂದಿದ್ದಾನೆ. ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Tiptur News: ತಿಪಟೂರಿನಲ್ಲಿ ಬ್ಯಾಟರಿಗಳು ಸ್ಫೋಟ; ಹೊತ್ತಿ ಉರಿದ ವಾಹನಗಳು

ತಿಪಟೂರಿನಲ್ಲಿ ಬ್ಯಾಟರಿಗಳು ಸ್ಫೋಟ; ಹೊತ್ತಿ ಉರಿದ ವಾಹನಗಳು

Tiptur News: ಸರಕು ಸಾಗಣೆ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಬ್ಯಾಟರಿಗಳು ಸ್ಫೋಟಗೊಂಡು ದ್ವಿಚಕ್ರ ವಾಹನ ಸೇರಿದಂತೆ ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ವಾಹನವೊಂದು ಹೊತ್ತಿ ಉರಿದ ಘಟನೆ ಹುಳಿಯಾರು ರಸ್ತೆಯ ಗೆದ್ದಲಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಜರುಗಿದೆ.

ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆಕ್ಷೇಪ: ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ಕಿಡಿಗೇಡಿಗಳು

ಮೂತ್ರ ವಿಸರ್ಜನೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ಬಿತ್ತು ಹೆಣ!

Crime News: ರಸ್ತೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಯುವಕರ ಗುಂಪೊಂದು 47 ವರ್ಷದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದ ಕಾಕದೇವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವಕರ ಗುಂಪು ಆತನನ್ನು ಸುತ್ತುವರೆದು ಹಲ್ಲೆ ನಡೆಸಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪ್ರಿಯಕರನ ವಿರುದ್ಧ ಹಲ್ಲೆ, ಕೊಲೆ ಶಂಕೆ: ಪೊಲೀಸ್ ತನಿಖೆ ಚುರುಕು

ಚಿಕ್ಕಬಳ್ಳಾಪುರದಲ್ಲಿ ಮಹಿಳೆ ಅನುಮಾನಾಸ್ಪದ ಸಾವು

ತಾಲೂಕಿನ ಚೊಕ್ಕಹಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಇನಮಿಂಚೇನಹಳ್ಳಿ ಗ್ರಾಮದ ಚೈತ್ರಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮೂಲದ ಶಬ್ಬೀರ್ ಎಂಬ ವ್ಯಕ್ತಿಯ ವಿರುದ್ಧ ಕುಟುಂಬಸ್ಥರು ಹಲ್ಲೆ ಹಾಗೂ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ; ಒಬ್ಬ ಆರೋಪಿ ಅರೆಸ್ಟ್‌

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ

ಬೆಂಗಳೂರಿನ ನಗರದ ಗಾಂಧಿನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆಯಲಾಗಿದೆ. ನಕ್ಷತ್ರ ಆಮೆಗಳನ್ನು ಇಟ್ಟುಕೊಂಡರೆ ಅದೃಷ್ಟ ಬರುತ್ತದೆ ಎಂದು ಆರೋಪಿಗಳು ನಂಬಿಸಿ, ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಗುರುಗ್ರಾಮದಲ್ಲಿ ಭೀಕರ ಅಪಘಾತ; ವೇಗವಾಗಿ ಬಂದ ಕಾರ್‌ ಹರಿದು ತಾಯಿಯ ಕಣ್ಣೆದುರೇ ಉಸಿರು ಚೆಲ್ಲಿದ  2 ವರ್ಷದ ಕಂದಮ್ಮ

ಕಾರ್‌ ಹರಿದು ಅಮ್ಮನ ಕಣ್ಣೆದುರೇ ಪ್ರಾಣ ಬಿಟ್ಟ 2 ವರ್ಷದ ಕಂದಮ್ಮ

Viral News: ಹರಿಯಾಣದ ಗುರುಗ್ರಾಮ್‌ನ ಸೆಕ್ಟರ್ 6ರ ಮನೆಯೊಂದರ ಹೊರಗೆ ಅಕ್ಕನೊಂದಿಗೆ ಆಟವಾಡುತ್ತಿದ್ದ ಎರಡು ವರ್ಷದ ಬಾಲಕಿಗೆ ವೇಗವಾಗಿ ಬಂದ ಕಾರ್‌ ಡಿಕ್ಕಿ ಹೊಡೆದಿದ್ದು, ಅಲ್ಲೇ ಅಸುನೀಗಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ದೆಹಲಿಯಲ್ಲಿ ಮಣಿಪುರಿ ಗಾಯಕ ಚೋಂಗ್ಥಮ್ ವಿಕ್ರಮ್ ಸಿಂಗ್ ಹತ್ಯೆ; ಯಾರಿವರು? ಏನಿವರ ಹಿನ್ನೆಲೆ?

ದೆಹಲಿಯಲ್ಲಿ ಮಣಿಪುರಿ ಗಾಯಕ ಚೋಂಗ್ಥಮ್ ವಿಕ್ರಮ್ ಸಿಂಗ್ ಹತ್ಯೆ

Chongtham Vikram Singh: ದೆಹಲಿಯ ಕಿಲೋಕಾರಿ ಗ್ರಾಮದಲ್ಲಿರುವ ಅಪಾರ್ಟ್‌ಮೆಂಟ್ ಬಳಿ ಮಣಿಪುರಿ ಗಾಯಕ ಚೋಂಗ್ಥಮ್ ವಿಕ್ರಮ್ ಸಿಂಗ್‌ ಅವರನ್ನು ಗುಂಪೊಂದು ಹತ್ಯೆ ಮಾಡಿದೆ. ಚೋಂಗ್ಥಮ್ ವಿಕ್ರಮ್ ಸಿಂಗ್ ಮಣಿಪುರದ ಪ್ರಸಿದ್ಧ ಗಿಟಾರ್ ವಾದಕರಾಗಿದ್ದರು. ಅವರು 17 ವರ್ಷಗಳಿಂದ ದೆಹಲಿಯಲ್ಲಿ ಖಾಸಗಿ ಸಂಗೀತ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

Loading...