ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಬೆಂಗಳೂರಿನಲ್ಲಿ 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯ‌ರ್

3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಂಜಿನಿಯ‌ರ್ ಅರೆಸ್ಟ್‌

Lokayukta Raid: ವಿದ್ಯುತ್ ಮೀಟರ್ ಸಂಪರ್ಕ ಮರುಚಾಲನೆ ಮತ್ತು ನೂತನ ಸಂಪರ್ಕ ನೀಡಲು 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರಿನ ಇಂದಿರಾನಗರದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯ‌ರ್ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್‌ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಜೈಲಿನಲ್ಲಿ ಭಯೋತ್ಪಾದಕ ಅಬ್ದುಲ್ ರೆಹಮಾನ್ ಹತ್ಯೆಗೈದ ಕಾಶ್ಮೀರಿ ಕೈದಿ!

ಜೈಲಿನಲ್ಲಿ ಭಯೋತ್ಪಾದಕನನ್ನು ಹತ್ಯೆಗೈದ ಕಾಶ್ಮೀರಿ ಕೈದಿ

Jail murder: ಭಯೋತ್ಪಾದಕ ಅಬ್ದುಲ್ ರೆಹಮಾನ್‌ನನ್ನು ಕಾಶ್ಮೀರಿ ಕೈದಿಯೊಬ್ಬ ಹತ್ಯೆಗೈದಿರುವ ಘಟನೆ ಫರಿದಾಬಾದ್ ಜಿಲ್ಲಾ ಜೈಲಿನಲ್ಲಿ ನಡೆದಿದೆ. ಕೈದಿಯೊಬ್ಬ ಭಾನುವಾರ ಜೈಲಿನ ಆವರಣದೊಳಗೆ ಶಂಕಿತ ಉಗ್ರನ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾನೆ. ಈ ಪ್ರಕರಣ ಜೈಲು ಭದ್ರತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಕಿಡ್ನ್ಯಾಪ್‌ಗೆ ಯತ್ನ; ತಪ್ಪಿಸಿಕೊಳ್ಳುವ ವೇಳೆ ಚಾಕು ಇರಿತ

ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಕಿಡ್ನ್ಯಾಪ್‌ಗೆ ಯತ್ನ

Kidnap Attempt: ಬೆಳ್ತಂಗಡಿ ಪಟ್ಟಣದ ಸಮೀಪ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ನಡೆದಿದೆ. ಬಾಲಕಿ ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ನಿರ್ಜನ ಪ್ರದೇಶವೊಂದರಲ್ಲಿ ಕಾರಿನಲ್ಲಿ ಬಂದ ಮೂವರು ಅಪರಿಚಿತರು ಕಿಡ್ನ್ಯಾಪ್‌ಗೆ ಯತ್ನಿಸಿದ್ದಾರೆ. ಬೆಳ್ತಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಲಾಸಿ ಜೀವನಶೈಲಿಗೆ ಕಳ್ಳತನಕ್ಕಿಳಿದ ಟೆಕ್ಕಿ; ಸುತ್ತಾಡಲು ಐಷಾರಾಮಿ ಬಿಎಂಡಬ್ಲ್ಯೂ ಕಾರು, ವಿದೇಶ ಪ್ರವಾಸ

ವಿಲಾಸಿ ಜೀವನಶೈಲಿಗೆ ಕಳ್ಳತನಕ್ಕಿಳಿದ ಟೆಕ್ಕಿ

Techie arrested: ವಿಲಾಸಿ ಜೀವನಶೈಲಿಗಾಗಿ ಟೆಕ್ಕಿಯೊಬ್ಬ ಕಳ್ಳತನದ ದಾರಿಗೆ ಇಳಿದಿರುವ ಘಟನೆ ಬೆಳಕಿಗೆ ಬಂದಿದೆ. ಐಷಾರಾಮಿ ಬಿಎಂಡಬ್ಲ್ಯೂ ಕಾರಿನಲ್ಲಿ ಸುತ್ತಾಟ, ವಿದೇಶ ಪ್ರವಾಸಗಳಿಗಾಗಿ ಕಳ್ಳತನ ಮಾಡಿದ್ದಾನೆ. ರಾತ್ರಿ ವೇಳೆ ಕಳ್ಳತನದ ದೂರುಗಳು ಪದೇ ಪದೇ ಬಂದ ಹಿನ್ನೆಲೆಯಲ್ಲಿ, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ಕಳ್ಳತನದ ಬೆನ್ನಟ್ಟಿದ ಪೊಲೀಸರು ಸನ್ನಿ ಎಂದೂ ಕರೆಯಲ್ಪಡುವ ಅಚ್ಚಿ ಮಹೇಶ್ ರೆಡ್ಡಿ ಎಂಬ ವ್ಯಕ್ತಿಯನ್ನು ಬಂಧಿಸಿದರು.

ಭದ್ರಾವತಿಯಲ್ಲಿ ಕ್ರೈಸ್ತ ಧರ್ಮ ಸೇರಿದ ಹಿಂದೂ ಮಹಿಳೆ; ಮತಾಂತರವಾಗಲು ಗಂಡ, ಮಕ್ಕಳಿಗೂ ಕಿರುಕುಳ!

ಕ್ರೈಸ್ತ ಧರ್ಮ ಸೇರಿದ ಹಿಂದೂ ಪತ್ನಿ; ಪತಿಯಿಂದ ದೂರು

ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕೆನಡಾದಲ್ಲಿ ನೆಲಮಂಗಲ ಮೂಲದ  ವ್ಯಕ್ತಿಯ ಮೇಲೆ ಗುಂಡಿನ ದಾಳಿ; ಸ್ಥಳದಲ್ಲಿಯೇ ಮೃತಪಟ್ಟ ಕನ್ನಡಿಗ

ಕೆನಡಾದಲ್ಲಿ ನೆಲಮಂಗಲ ಮೂಲದ ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ 37 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯನ್ನು ಚಂದನ್ ಕುಮಾರ್ ಎಂದು ಗುರುತಿಸಲಾಗಿದ್ದು, ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದವರಾಗಿದ್ದಾರೆ. ಕೆಲಸದ ನಿಮಿತ್ತ ಕೆನಡಾದಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಗುಂಪು ಘರ್ಷಣೆ; ಹಲವು ಮನೆಗೆಳಿಗೆ ಬೆಂಕಿ

ಮಣಿಪುರದಲ್ಲಿ ಹಲವು ಮನೆಗಳಿಗೆ ಬೆಂಕಿ

ಮಣಿಪುರದಲ್ಲಿ ಮತ್ತೆ ಗುಂಪು ಘರ್ಷಣೆ ಭುಗಿಲೆದ್ದಿದೆ. ತಂಗ್ಖುಲ್ ನಾಗಾ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆದ ಬಳಿಕ ಹಲವು ಗುಂಪುಗಳ ಮಧ್ಯೆ ಘರ್ಷಣೆ ಉಂಟಾಗಿದ್ದು, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಲಿಟನ್ ಸರೈಖಾಂಗ್‌ನಲ್ಲಿ ತಂಗ್ಖುಲ್ ನಾಗಾ ಸಮುದಾಯದ ಸದಸ್ಯರಿಗೆ ಸೇರಿದ ಹಲವಾರು ಮನೆಗಳಿಗೆ ಕುಕಿ ಸಮುದಾಯದವರು ಬೆಂಕಿ ಹಚ್ಚಿದ್ದರೆ ಹತ್ತಿರದ ಪ್ರದೇಶದಲ್ಲಿ ಕುಕಿ ಸಮುದಾಯದ ಸದಸ್ಯರ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ.

ತರಗತಿಯೊಳಗೆ ನುಗ್ಗಿ ಕಾನೂನು ವಿದ್ಯಾರ್ಥಿನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ; ಭಯಾನಕ ವಿಡಿಯೋ ವೈರಲ್‌

ಕಾನೂನು ವಿದ್ಯಾರ್ಥಿನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Punjab Law college tragedy: ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆ ಪಂಜಾಬ್‌ನಲ್ಲಿ ನಡೆದಿದ್ದು, ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಪಂಜಾಬ್‌ನ ಟಾರ್ನ್ ತರಣ್ ಕಾನೂನು ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

Crime news: ಪ್ರಿಯಕರನಿಗೆ ತಾಯಿ, ಸಂಬಂಧಿಯ ಖಾಸಗಿ ಫೋಟೋ ಕಳಿಸಿದ ಪಾಪಿ ಮಗಳು!

ಪ್ರಿಯಕರನಿಗೆ ತಾಯಿ, ಸಂಬಂಧಿಯ ಖಾಸಗಿ ಫೋಟೋ ಕಳಿಸಿದ ಮಗಳು!

ತಾಯಿ ಮತ್ತು ಆಂಟಿ ಮಲಗಿದ್ದಾಗ ಖಾಸಗಿ ಫೋಟೋ ತೆಗೆದು ಮಗಳು ಪ್ರಿಯಕರನಿಗೆ ಕಳುಹಿಸಿದ್ದಾಳೆ. ಈ ಕುರಿತು ಪ್ರಶ್ನೆ ಮಾಡಿದಾಗ ಆತನನ್ನೇ ಮದುವೆಯಾಗುವುದಾಗಿ ಮಗಳು ಹಠಕ್ಕೆ ಬಿದ್ದಿದ್ದಾಳೆ. ಮಗಳಿಗೆ ಬುದ್ಧಿ ಹೇಳಿ ತಾಯಿ ಫೋಟೋಗಳನ್ನು ಡಿಲೀಟ್ ಮಾಡಿಸಿದ್ದಾರೆ. ಮಗಳು ಮತ್ತು ಆಕೆಯ ಪ್ರಿಯಕರನ ವಿರುದ್ಧ ತಾಯಿ ಠಾಣೆಗೆ ದೂರು ನೀಡಿದ್ದಾರೆ.

ಪಾದಾಚಾರಿಗಳ ಮೇಲೆ ಲ್ಯಾಂಬೋರ್ಘಿನಿ ಕಾರು ಹರಿಸಿದ ತಂಬಾಕು ಉದ್ಯಮಿ ಮಗ;  ಹಲವರಿಗೆ ಗಂಭೀರ ಗಾಯ

ಪಾದಾಚಾರಿಗಳ ಮೇಲೆ ಲ್ಯಾಂಬೋರ್ಘಿನಿ ಕಾರು ಹರಿಸಿದ ತಂಬಾಕು ಉದ್ಯಮಿ ಮಗ

Lamborghini car accident: ಪಾದಚಾರಿಗಳು ಹಾಗೂ ಇತರೆ ವಾಹನಗಳಿಗೆ ಲ್ಯಾಂಬೋರ್ಘಿನಿ ಕಾರು ಡಿಕ್ಕಿ ಹೊಡೆದ ಘಟನೆ ಭಾರಿ ಚರ್ಚೆಗೆ ಕಾರಣವಾಗಿದೆ. ಉದ್ಯಮಿಯೊಬ್ಬನ ಪುತ್ರ ಚಲಾಯಿಸುತ್ತಿದ್ದ ಲ್ಯಾಂಬೋರ್ಘಿನಿ ಕಾರು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಕಾನ್ಪುರದ ದುಬಾರಿ ಗ್ವಾಲ್ಟೋಲಿ ಪ್ರದೇಶದಲ್ಲಿ ನಡೆದಿದೆ.

Bengaluru Crime News: ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಇದೇ ವೇಳೆ ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಫ್ಲೈಓವರ್‌ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಯ್ತು ಮೂವರ ಮೃತದೇಹ; ತನಿಖೆ ಚುರುಕು

ಫ್ಲೈಓವರ್‌ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಯ್ತು ಮೂವರ ಮೃತದೇಹ

ನವದೆಹಲಿಯ ಪೀರಗಢಿ ಫ್ಲೈಓವರ್‌ನಲ್ಲಿ ನಿಲ್ಲಿಸಲಾಗಿದ್ದ ಕಾರಿನೊಳಗೆ ಮೂವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ಲೈಓವರ್‌ನಲ್ಲಿ ಕಾರನ್ನು ನಿಲ್ಲಿಸಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಕಾರಿನ ಡೋರ್‌ ಓಪನ್‌ ಮಾಡಿದಾಗ ಮೂರು ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ಸಿಂಗ್ (40 ವರ್ಷ) ಮತ್ತು ಶಿವ ನಾರಾಯಣ್ (46 ವರ್ಷ) ಎಂದು ಹೇಳಲಾಗಿದೆ.

ಜ್ಯೋತಿಷಿ ಕಮಲಾಕರ್ ಭಟ್‌ಗಿಂತ ಮೊದಲು ಜಮೀನ್ದಾರನ ಜತೆ ಸುಚಿತ್ರಾ ಲವ್ವಿ ಡವ್ವಿ; ಫೋಟೊಗಳು ವೈರಲ್‌!

ಜ್ಯೋತಿಷಿಗಿಂತ ಮೊದಲು ಜಮೀನ್ದಾರನ ಜತೆ ಸುಚಿತ್ರಾ ಲವ್ವಿ ಡವ್ವಿ!

Siddapur Murder Case: ಕಲಬುರಗಿಯ ಜಮೀನ್ದಾರನ ಜತೆ ಮೂರು ವರ್ಷ ಲಿವ್-ಇನ್‌ನಲ್ಲಿದ್ದ ಸುಚಿತ್ರಾ, ಆತನ ಹಣದಿಂದ ಆರ್ಕೆಸ್ಟ್ರಾ ಮಾಡಿಕೊಂಡಿದ್ದಳು. ಪತ್ನಿಯ ಲಿವ್‌-ಇನ್‌ ರಿಲೇಷನ್‌ಗೆ ಬೇಸತ್ತು ಗಂಡ ದೂರವಾಗಿದ್ದ. ಇದೀಗ ಪ್ರಿಯಕರನ ಜತೆಗಿನ ಖಾಸಗಿ ಕ್ಷಣದ ಫೋಟೊಗಳು ವೈರಲ್‌ ಆಗುತ್ತಿವೆ.

ಮಕ್ಕಳಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ? ಮೂವರು ಸಹೋದರಿಯರ ಆತ್ಮಹತ್ಯೆ ಕುರಿತು ತಂದೆ ಹೇಳಿದ್ದೇನು?

ಮೂವರು ಸಹೋದರಿಯರ ಆತ್ಮಹತ್ಯೆ ಕುರಿತು ತಂದೆ ಹೇಳಿದ್ದೇನು?

ಗಾಜಿಯಾಬಾದ್‌ ಆತ್ಮಹತ್ಯೆ ಕುರಿತು ತನಿಖೆ ನಡೆಯುತ್ತಿದ್ದು, ಹಲವು ವಿಷಯಗಳು ಬಹಿರಂಗಗೊಂಡಿದೆ. ಆತ್ಮಹತ್ಯೆ ಮಾಡಿಕೊಂಡಿದ್ದ ಮೂವರು ಮಕ್ಕಳ ತಂದೆ ಚೇತನ್‌ ಕುಮಾರ್‌ ಇದೀಗ ತಮ್ಮ ಮಕ್ಕಳ ಸಾವಿನ ಕುರಿತು ಮಾತನಾಡಿದ್ದಾರೆ. ಸದ್ಯ ಘಟನೆ ಕುರಿತು ತನಿಖೆ ನಡೆಸುತ್ತಿದ್ದು, ಚೇತನ್‌ ಅವರಿಗೆ ಮೂವರು ಹೆಂಡತಿಯರಿದ್ದಾರೆ ಎಂದು ತಿಳಿದು ಬಂದಿದೆ.

ಗಣಿ  ಉದ್ಯಮಿಯ ತಲೆಗೆ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಸೋನಭದ್ರದಲ್ಲಿ ಉದ್ಯಮಿಯ ಹತ್ಯೆ

ಗಣಿ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಸೋನಭದ್ರದಲ್ಲಿ ನಡೆದಿದೆ. 76 ವರ್ಷದ ಗಣಿ ಉದ್ಯಮಿಯ ತಲೆಗೆ ಗುಂಡಿಕ್ಕಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಕಳ್ಳತನದ ಉದ್ದೇಶದಿಂದ ಅವರನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರನ್ನು ವಿಷ್ಣು ಹರಿ ಉಪಾಧ್ಯಾಯ ಎಂದು ಗುರುತಿಸಲಾಗಿದೆ.

ಹೇಯ ಕೃತ್ಯ;  ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ

ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ

Girl killed: ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ನಾಪತ್ತೆಯಾದ ಆರು ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮಗು ಒಂದೇ ವಯಸ್ಸಿನ ಇಬ್ಬರು ಹುಡುಗಿಯರೊಂದಿಗೆ ಆಟವಾಡಲು ಸಂಜೆ ಹೊರಗೆ ಹೋಗಿದ್ದಳು. ಆದರೆ ಮನೆಗೆ ಹಿಂತಿರುಗಲಿಲ್ಲ. ಇದರಿಂದ ಭೀತಿಗೊಂಡ ಕುಟುಂಬ ತೀವ್ರ ಹುಡುಕಾಟ ನಡೆಸಿದಾಗ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

Vijayapura Jet Crash: ವಿಜಯಪುರದಲ್ಲಿ ಖಾಸಗಿ ಜೆಟ್‌ ಪತನ; ಇಬ್ಬರಿಗೆ ಗಂಭೀರ ಗಾಯ

ವಿಜಯಪುರದಲ್ಲಿ ಖಾಸಗಿ ಜೆಟ್‌ ಪತನ; ಇಬ್ಬರಿಗೆ ಗಂಭೀರ ಗಾಯ

ರೆಡ್‌ ಬರ್ಡ್ ಏವಿಯೇಷನ್ ಸಂಸ್ಥೆಯ ಸೆಸ್ನಾ 172 ಟ್ಯಾಂಗೋ ಚಾರ್ಲಿ ಹೆಸರಿನ ಪ್ರೈವೇಟ್ ಜೆಟ್ ಪತನಗೊಂಡಿದೆ. ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್‌ ವಿಮಾನ, ಇಂಧನ ಖಾಲಿಯಾದ ಕಾರಣ ಜಮೀನಿನಲ್ಲಿ ಪತನಗೊಂಡಿದೆ ಎಂದು ತಿಳಿದುಬಂದಿದೆ. ಕೂಡಲೇ ವಿಮಾನದಲ್ಲಿದ್ದ ಪೈಲಟ್ ಸೇರಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು ವರ್ಷದ ಪ್ರೀತಿಗೆ ಬಲಿಯಾಯಿತು ಬಾಡಿಬಿಲ್ಡರ್ ಜೀವ

ಕೈಕೊಟ್ಟ ಪ್ರೇಯಸಿ; ಬಾಡಿಬಿಲ್ಡರ್ ಆತ್ಮಹತ್ಯೆ

ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಕೈಕೊಟ್ಟ ಕಾರಣಕ್ಕೆ ನೊಂದು ಬಾಡಿಬಿಲ್ಡರ್ ವೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮಿ ಲೇಔಟ್ ನಲ್ಲಿ ಬಾಡಿಬಿಲ್ಡರ್ ಮತ್ತು ಜಿಮ್ ತರಬೇತುದಾರನಾಗಿದ್ದ ಕಿರಣ್ ನ ಪ್ರೇಯಸಿ ಬೇರೊಂದು ಹುಡುಗನೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ಆತ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಹೋದರಿಯರ ಆತ್ಮಹತ್ಯೆ ಕೇಸ್‌; ಬಾಲಕಿಯರ ತಂದೆಗೆ ಮೂವರು ಪತ್ನಿಯರು! ಬಗೆದಷ್ಟು ಬಯಲಾಗ್ತಿದೆ ರಹಸ್ಯ

ಸಹೋದರಿಯರ ಆತ್ಮಹತ್ಯೆ ಕೇಸ್‌; ಬಾಲಕಿಯರ ತಂದೆಗೆ ಮೂವರು ಪತ್ನಿಯರು!

ಗಾಜಿಯಾಬಾದ್‌ನಲ್ಲಿ ಮೂವರು ಅಪ್ರಾಪ್ತ ಸಹೋದರಿಯರ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಹೊಸ ಹೊಸ ವಿಷಯಗಳು ತೆರೆದುಕೊಳ್ಳುತ್ತಿವೆ. ಮೂವರು ಅಪ್ರಾಪ್ತ ಸಹೋದರಿಯರ ತಂದೆ ಚೇತನ್ ಕುಮಾರ್ ಹೆಸರು 2015 ರ ಮತ್ತೊಂದು ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿತ್ತು ಎಂದು ತಿಳಿದು ಬಂದಿದೆ.

ಕುಡಿದ ಮತ್ತಿನಲ್ಲಿ ಯುವತಿಯರಿಂದ ಕಿರಿಕ್‌; ಕ್ಯಾಬ್‌ ಚಾಲಕನ ಮೇಲೆ ಹಲ್ಲೆ, ಪೊಲೀಸರೊಂದಿಗೆ ಅಸಭ್ಯ ವರ್ತನೆ

ಕುಡಿದ ಮತ್ತಿನಲ್ಲಿ ಕ್ಯಾಬ್‌ ಚಾಲಕನ ಮೇಲೆ ಯುವತಿಯರಿಂದ ಹಲ್ಲೆ

ಕಂಠಪೂರ್ತಿ ಕುಡಿದ ಯುವತಿಯರಿಬ್ಬರು ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರೋಡ್‌ನ ಹುಳಿಮಾವು-ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಿರಿಕ್‌ ಮಾಡಿದ ಯುವತಿಯರನ್ನು ಉತ್ತರ ಭಾರತ ಮೂಲದ ಲೀಸಾ ಮತ್ತು ಮ್ಯಾಥ್ಯೂ ಎಂದು ಗುರುತಿಸಲಾಗಿದೆ.

ಪರೀಕ್ಷೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ ಶಿಕ್ಷಕಿಗೆ ವಿದ್ಯಾರ್ಥಿಯಿಂದ ಕಪಾಳಮೋಕ್ಷ

ಶಿಕ್ಷಕಿಗೆ ವಿದ್ಯಾರ್ಥಿಯಿಂದ ಕಪಾಳಮೋಕ್ಷ

ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಶೇಹ್ರಾ ಪಟ್ಟಣದ ಎಸ್‌ಜೆ ದಾವೆ ಹೈಸ್ಕೂಲ್‌ನಲ್ಲಿ ಪೂರ್ವಭಾವಿ ಪರೀಕ್ಷೆಗೆ ತಡವಾಗಿ ಬಂದಿದ್ದ ವಿದ್ಯಾರ್ಥಿಯನ್ನು ಪ್ರಶ್ನಿಸಿದ ಶಿಕ್ಷಕಿಯ ಮೇಲೆ ಹಲ್ಲೆ ನಡೆದಿದೆ. ವಿದ್ಯಾರ್ಥಿಯೊಬ್ಬ ಕಪಾಳಮೋಕ್ಷ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ.

ಜೈಲಿನಲ್ಲಿ ಕೈದಿಯನ್ನು ಮರಕ್ಕೆ ಕಟ್ಟಿ ಹಾಕಿ ನಿರ್ದಯವಾಗಿ ಥಳಿಸಿದ ಜೈಲಾಧಿಕಾರಿ; ವ್ಯಾಪಕ ಆಕ್ರೋಶ

ಕೈದಿಯನ್ನು ಮರಕ್ಕೆ ಕಟ್ಟಿ ಹಾಕಿ ನಿರ್ದಯವಾಗಿ ಥಳಿಸಿದ ಜೈಲಾಧಿಕಾರಿ

Jail officer brutally beats: ಜೈಲಿನೊಳಗೆ ಮಾನವೀಯತೆಯನ್ನು ಮರೆತು ಪೊಲೀಸರು ವರ್ತಿಸಿದ ಘಟನೆಯೊಂದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕೈದಿಯನ್ನು ಮರಕ್ಕೆ ಕಟ್ಟಿ ಹಾಕಿ ಜೈಲಧಿಕಾರಿಯೊಬ್ಬ ನಿರ್ದಯವಾಗಿ ಥಳಿಸಿದ ಆರೋಪ ಕೇಳಿಬಂದಿದ್ದು, ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಹಾಸ್ಟೆಲ್‌ನಲ್ಲಿ ಚಾಕು ಇರಿತ; ರಷ್ಯಾದಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳಿಗೆ ಗಾಯ

ರಷ್ಯಾದಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳಿಗೆ ಚಾಕು ಇರಿತ

ರಷ್ಯಾದಲ್ಲಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ದಾಳಿಯಾಗಿದ್ದು, ನಾಲ್ವರು ಭಾರತೀಯ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ರಷ್ಯಾದ ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಈ ದಾಳಿ ನಡೆದಿದೆ. ಹದಿ ಹರೆಯದ ಯುವಕನೊಬ್ಬ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರಿಂದ ಭಾರತೀಯರು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ.

Bidar News: ಗಂಡನ ಮನೆಯವರ ಕಿರುಕುಳ ತಾಳಲಾರದೆ 22 ವರ್ಷದ ಗೃಹಿಣಿ ನೇಣಿಗೆ ಶರಣು: 10 ತಿಂಗಳ ಮಗು ತಬ್ಬಲಿ

ಗಂಡನ ಮನೆಯವರ ಕಿರುಕುಳ; 22 ವರ್ಷದ ಗೃಹಿಣಿ ಆತ್ಮಹತ್ಯೆ

Self Harming: ಗಂಡನ ಮನೆಯವರ ಕಿರುಕುಳ ತಾಳಲಾರದೆ 22 ವರ್ಷದ ಗೃಹಿಣಿ, 10 ತಿಂಗಳ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಅಂಜನಾಬಾಯಿ ಶೇಖರ್ ಪಾಟೀಲ್ ಎಂದು ಗುರುತಿಸಲಾಗಿದೆ.

Loading...