ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಬಸವಣ್ಣ ಒಬ್ಬ ಹೇಡಿ, ಅಕ್ಕಮಹಾದೇವಿ ಆ ರೀತಿಯ ಮಹಿಳೆ; ಅಶ್ಲೀಲ ಪೋಸ್ಟ್‌ ಹಾಕಿದ ಕಿಡಿಗೇಡಿ ಬಂಧನಕ್ಕೆ ಆಗ್ರಹ

ಬಸವಣ್ಣ, ಅಕ್ಕಮಹಾದೇವಿ ಬಗ್ಗೆ ಅಶ್ಲೀಲ ಪೋಸ್ಟ್‌; ಕಿಡಿಗೇಡಿ ಬಂಧನಕ್ಕೆ ಆಗ್ರಹ

Basavanna and Akka Mahadevi: ಶಿವಶರಣರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಖಂಡಿಸಿ ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಸವಾದಿ ಶರಣರ ಅನುಯಾಯಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಯ ಬಂಧನಕ್ಕೆ ಆಗ್ರಹಿಸಿದ್ದಾರೆ.

ಕೌಟುಂಬಿಕ ಕಲಹಕ್ಕೆ ಬಿತ್ತು 3 ಹೆಣ: ಪತ್ನಿ, ಸೊಸೆ, ಮೊಮ್ಮಗಳನ್ನು ಹತ್ಯೆಗೈದು ವೃದ್ಧ ಪರಾರಿ

ಪತ್ನಿ, ಸೊಸೆ, ಮೊಮ್ಮಗಳನ್ನು ಹತ್ಯೆಗೈದು ವೃದ್ಧ ಪರಾರಿ

Crime News: ಕುಡಿದ ಮತ್ತಿನಲ್ಲಿದ್ದ ವೃದ್ಧನೊಬ್ಬ ತನ್ನ ಪತ್ನಿ, ಸೊಸೆ ಮತ್ತು ಮೊಮ್ಮಗಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಒಡಿಶಾದ ದಿಯೋಗಢ ಜಿಲ್ಲೆಯಲ್ಲಿ ನಡೆದಿದೆ. ರಮೇಶ್ ಬುಧವಾರ (ಮಾ. 11) ತಡರಾತ್ರಿ ಇಬ್ಬರು ಮಹಿಳೆಯರು ಮತ್ತು ಬಾಲಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಬಸ್ತಾರ್‌ನಲ್ಲಿ ಐತಿಹಾಸಿಕ ಕ್ಷಣ: ಒಟ್ಟಿಗೆ ಶರಣಾದ 108 ಮಾವೋವಾದಿಗಳು

ಬಸ್ತಾರ್‌ನಲ್ಲಿ ಶರಣಾದ 108 ಮಾವೋವಾದಿಗಳು

ಮಾವೋವಾದಿ ವಿರೋಧಿ ಅಭಿಯಾನಕ್ಕೆ ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಬಹುದೊಡ್ಡ ಯಶಸ್ಸು ಸಿಕ್ಕಿದೆ. ಒಟ್ಟು 108 ಮಾವೋವಾದಿಗಳು ಏಕಕಾಲದಲ್ಲಿ ಶರಣಾಗಿದ್ದು, ಇದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಮಾವೋವಾದಿಗಳ ನಿರ್ಮೂಲನೆಗೆ 2026ರ ಮಾರ್ಚ್ 31ರ ಗಡುವಿನ ಮೊದಲೇ ನಡೆದಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು ಮಂಜೂರು

ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಬಸವರಾಜ್‌ ಜಾಮೀನು

ಬಿಕ್ಲು ಶಿವ ಪ್ರಕರಣದಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಿದ್ದಂತೆ ಶಾಸಕ ಬೈರತಿ ಬಸವರಾಜ್‌ ಪರಾರಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್‌ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಬೆಂಗಳೂರಿಗೆ ವಾಪಸ್ಸಾಗಿದ್ದ ಶಾಸಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀಜು ಸಿಕ್ಕಿದೆ.

ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಶಾಲಾ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಘಟನೆ ನಡೆದಿದೆ. ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲವ್ ಮಾಡುವಂತೆ ಸಹಪಾಠಿ ಚುಡಾಯಿಸುತ್ತಿದ್ದ. ಪ್ರೀತಿಸುವಂತೆ ಒತ್ತಡ ಹಾಕಿದ್ದರಿಂದ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

ಆಟವಾಡುತ್ತಿದ್ದ ಮಕ್ಕಳ ಮೇಲೆ ಕುದಿಯುವ ಎಣ್ಣೆ ಸುರಿದ ಕಿರಾತಕ: ಐವರಿಗೆ ಗಾಯ, ಇಬ್ಬರು ಗಂಭೀರ

ಮಕ್ಕಳ ಮೇಲೆ ಕುದಿಯುವ ಎಣ್ಣೆ ಸುರಿದ ದುಷ್ಕರ್ಮಿ

ಆಟವಾಡುತ್ತಿದ್ದ ಮಕ್ಕಳ ಮೇಲೆ ವ್ಯಕ್ತಿಯೊಬ್ಬ ಕುದಿಯುವ ಎಣ್ಣೆ ಸುರಿದ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಘಟನೆಯಲ್ಲಿ ಐವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ.

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಘಟನೆ ನಡೆದಿದೆ. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಮನೆಯೊಳಗೆ ತಂದೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು ಸಂಪ್‌ಗೆ ಬಿದ್ದು ಮೃತ ಪಟ್ಟಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್​ ಲಾರಿ ಡಿಕ್ಕಿ; ಕಾಲೇಜು ಗೇಟಿನ ಎದುರೇ MBBS ವಿದ್ಯಾರ್ಥಿನಿ ಸಾವು

ಟಿಪ್ಪರ್​ ಲಾರಿ ಡಿಕ್ಕಿ; ಕಾಲೇಜಿನ ಎದುರೇ MBBS ವಿದ್ಯಾರ್ಥಿನಿ ಸಾವು

ರಾಜರಾಜೇಶ್ವರಿ ನಗರದಲ್ಲಿ ನಡೆದ ಭಯಾನಕ ರಸ್ತೆ ಅಪಘಾತದಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಮತ್ತೊಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಘಟನೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಕೃತಿಕಾ (21) ಆರ್‌ಆರ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಸ್ನೇಹಿತೆ ಹಂಸ (21) ಸಹ ಇದೇ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ.

ಕುಡಿದ ಮತ್ತಿನಲ್ಲಿ ಅಣ್ಣ, ತಂಗಿಯನ್ನೇ ಬರ್ಬರ ಹತ್ಯೆ ಮಾಡಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಅಣ್ಣ, ತಂಗಿಯನ್ನೇ ಬರ್ಬರ ಹತ್ಯೆ ಮಾಡಿದ ವ್ಯಕ್ತಿ!

Murder Case: ರಾಜ್ಯದಲ್ಲಿ ಬೆಚ್ಚಿ ಬೀಳುವ ಘಟನೆಯೊಂದು ನಡೆದಿದ್ದು, ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣ ಮತ್ತು ತಂಗಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ಸಂಭವಿಸಿದೆ.

ವಡ್ಡಗೆರೆ ದೇವಸ್ಥಾನದಲ್ಲಿ ಹೈಟೆಕ್‌ ಕಳ್ಳರ ಕೈಚಳಕ; ಕೋಟಿ ರುಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಕಳವು

ವಡ್ಡಗೆರೆ ದೇವಸ್ಥಾನದಿಂದ ಕೋಟಿ ರುಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಕಳವು

Tumakuru News: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಗರ್ಭಗುಡಿ ಸೇರಿ 4 ಬಾಗಿಲನ್ನು ಗ್ಯಾಸ್ ಕಟರ್‌ನಿಂದ ತುಂಡರಿಸಿ 1 ಕೋಟಿ ರುಪಾಯಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಜತೆ ಸಿಸಿಟಿವಿಯ ಡಿವಿಆರ್ ಅನ್ನು ಕಳ್ಳರು ಹೊತ್ತೊಯ್ದಿದ್ದಾರೆ.

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ;  ನೌಕಾಪಡೆ ಸಿಬ್ಬಂದಿ ಬಂಧನ

ಬೇಹುಗಾರಿಕೆ ಆರೋಪ: ಆರೋಪಿ ನೌಕಾಪಡೆಯ ಸಿಬ್ಬಂದಿ ಬಂಧನ

Naval personnel arrested: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಮತ್ತು ಸೂಕ್ಷ್ಮ ನೌಕಾ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ನೌಕಾಪಡೆಯ ಸೇವೆಯಲ್ಲಿರುವ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಲಕ್ಕಿ ಎಂದೂ ಕರೆಯಲ್ಪಡುವ ಆದರ್ಶ್ ಕುಮಾರ್ ಎಂದು ಗುರುತಿಸಲಾಗಿದೆ.

ಇನ್‌ಸ್ಟಾಗ್ರಾಂನಲ್ಲಿ ಪರಿಚಯ; ಅಪ್ರಾಪ್ತ ಬಾಲಕನೊಂದಿಗೆ ಓಡಿ ಹೋದ ಯುವತಿಯ ಬಂಧನ

ಓಡಿ ಹೋಗಿದ್ದ ಅಪ್ರಾಪ್ತ ವಯಸ್ಕ-ಯುವತಿ ಸೆರೆ

Love affair on Instagram: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿ ಅಪ್ರಾಪ್ತ ಹುಡುಗನ ಜೊತೆ ಓಡಿ ಹೋಗಿದ್ದ ಯುವತಿಯೊಬ್ಬಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಕುಟುಂಬಕ್ಕೆ ಈ ಸಂಬಂಧದ ಬಗ್ಗೆ ತಿಳಿದು, ಬೇರೆಡೆ ಮದುವೆ ಮಾಡಿಸಿದಾಗ ಸಮಸ್ಯೆ ಶುರುವಾಯಿತು. ಹೀಗಾಗಿ ಮೋನಾ ಓಡಿಹೋಗಿ ಅಪ್ರಾಪ್ತ ವಯಸ್ಕನನ್ನು ಮದುವೆಯಾಗಲು ನಿರ್ಧರಿಸಿದಳು ಎನ್ನಲಾಗಿದೆ.

ಪೊಲೀಸ್‌ ಇನ್‌ಸ್ಪೆಕ್ಟರ್‌ ವೇಷದಲ್ಲಿ ಬಂದು ನಗ- ನಗದು ದೋಚಿದವರು ಆರೆಸ್ಟ್‌

ಪೊಲೀಸ್‌ ಇನ್‌ಸ್ಪೆಕ್ಟರ್‌ ವೇಷದಲ್ಲಿ ಬಂದು ನಗ- ನಗದು ದೋಚಿದವರು ಆರೆಸ್ಟ್‌

ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಆರೋಪಿ ನಾಗೇಂದ್ರ ಎಂಬಾತ ಪಿಎಸ್‌ಐ ಸಮವಸ್ತ್ರ ಧರಿಸಿ ಅಧಿಕಾರಿಯಂತೆ ಮನೆಗೆ ನುಗ್ಗಿದ್ದ. ಮನೆಯವರ ಕೈಕಾಲುಗಳಿಗೆ ಟೇಪ್ ಸುತ್ತಿ, ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿದ್ದ ಈ ಗ್ಯಾಂಗ್, ಒಟ್ಟು 20 ಲಕ್ಷ ರೂಪಾಯಿ ನಗದು ಮತ್ತು 677 ಗ್ರಾಂ ಚಿನ್ನವನ್ನು ದೋಚಿ ಪರಾರಿಯಾಗಿತ್ತು.

ಮದುವೆ ಮನೆಗೆ ನುಗ್ಗಿ ಯುವತಿಗೆ ಕಿರುಕುಳ ನೀಡಿದ್ದಲ್ಲದೆ ಹಾಸ್ಟೆಲ್‌ಗೂ ನುಗ್ಗಿದ ಕಿಡಿಗೇಡಿಗಳು: ಕ್ಯಾಮರಾದಲ್ಲಿ ನೀಚ ಕೃತ್ಯ ಸೆರೆ

ಮದುವೆ ಮನೆಯಲ್ಲಿ ಯುವತಿಗೆ ಕಿರುಕುಳ: ನೆಟ್ಟಿಗರು ಕಿಡಿಕಿಡಿ

Viral Video: ಮದುವೆ ಕಾರ್ಯಕ್ರಮದಲ್ಲಿ ಯುವತಿಯೊಬ್ಬಳನ್ನು ಹಿಂಬಾಲಿಸಿ ಇಬ್ಬರು ಯುವಕರು ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಆಮಂತ್ರಣವಿಲ್ಲದ ಮದುವೆಗೆ ತೆರಳಿ ಅಲ್ಲಿದ್ದ ಯುವತಿಯೊಬ್ಬಳನ್ನು ಆಕೆಯ ಹಾಸ್ಟೆಲ್‌ವರೆಗೆ ಬೆನ್ನಟ್ಟಿ ಕಿರುಕುಳ ನೀಡಿದ್ದಾರೆ. ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶ್ರೀಮಂತ ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ; ಬೆಳಗಾವಿಯಲ್ಲಿ ಖತರ್ನಾಕ್‌ ಮಹಿಳೆ ಅರೆಸ್ಟ್

ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ; ಬೆಳಗಾವಿಯಲ್ಲಿ ಮಹಿಳೆ ಅರೆಸ್ಟ್

Belagavi Honey trap Case: ಆರೋಪಿ ಮಹಿಳೆಯು, ಶ್ರೀಮಂತ ವ್ಯಕ್ತಿಗಳನ್ನು‌ ಪರಿಚಯ ಮಾಡಿಕೊಂಡು ಲಾಡ್ಜ್‌ಗೆ ಆಹ್ವಾನಿಸುತ್ತಿದ್ದಳು. ಲಾಡ್ಜ್‌ಗೆ ಬಂದ ವ್ಯಕ್ತಿಗಳಿಗೆ ಸ್ನಾನ ಮಾಡಿ ಬರುವಂತೆ ಹೇಳಿ, ಅವರು ಬಾತ್‌ರೂಮ್‌ಗೆ ಹೋದ ತಕ್ಷಣ ಹೊರಗಿನಿಂದ ಬಾಗಿಲು ಲಾಕ್ ಮಾಡಿ, ಅವರ ಹಣ, ಮೊಬೈಲ್ ಕದ್ದು ಎಸ್ಕೆಪ್ ಆಗುತ್ತಿದ್ದಳು.

ಆಹಾರಕ್ಕೆ 3 ಬಾರಿ ವಿಷ ಸೇರಿಸಿದರೂ ಪತ್ನಿ ಸಾಯಲಿಲ್ಲ; ಕೊನೆಗೆ ಪತಿ ಮಾಡಿದ್ದೇ ಖತರ್ನಾಕ್‌ ಐಡಿಯಾ

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ; ಕೊನೆಗೆ ಪತಿ ಮಾಡಿದ್ದೇನು?

Crime News: ವ್ಯಕ್ತಿಯೊಬ್ಬ ಪತ್ನಿಯ ಆಹಾರಕ್ಕೆ ವಿಷ ಬೆರೆಸಿ 3 ಬಾರಿ ಕೊಲ್ಲಲು ಯತ್ನಿಸಿದ್ದಾನೆ. ಆದರೆ ಪ್ರತಿ ಬಾರಿಯೂ ವಿಫಲವಾದಾಗ 1 ಲಕ್ಷ ರುಪಾಯಿ ಸುಪಾರಿ ನೀಡಿ ಹತ್ಯೆ ಮಾಡಿದ್ದಾನೆ. ಅದರಂತೆ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಾರು ಮೂಲಕ ಡಿಕ್ಕಿ ಹೊಡೆಸಲಾಗಿದೆ. ಮಹಾರಾಷ್ಟ್ರದ ಬುಲ್ದಾನದಲ್ಲಿ ಈ ಘಟನೆ ನಡೆದಿದೆ.

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು; ನಾಲ್ವರಿಗೆ ಗಾಯ

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು

Gurugram wall collapse: ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಗೋಡೆಯು ದೊಡ್ಡ ಶಬ್ಧದೊಂದಿಗೆ ಕುಸಿದು ಬಿದ್ದಿದ್ದು, ಸುಮಾರು 12ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ. ಅಧಿಕಾರಿಗಳು ಭಾರಿ ಯಂತ್ರೋಪಕರಣಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Fraud Case: ವರ್ಗಾವಣೆಗಾಗಿ ಗಿಳಿಶಾಸ್ತ್ರದ ಮೊರೆ ಹೋದ ಐಟಿ ಅಧಿಕಾರಿ, 35 ಲಕ್ಷ ರೂಪಾಯಿ ಮಂಗಮಾಯ!

ವರ್ಗಾವಣೆಗಾಗಿ ಗಿಳಿಶಾಸ್ತ್ರದ ಮೊರೆ ಹೋದ ಐಟಿ ಅಧಿಕಾರಿಗೆ ಲಕ್ಷ ಲಕ್ಷ ವಂಚನೆ!

ವರ್ಗಾವಣೆಯ ವಿಚಾರವಾಗಿ ಗಿಳಿಶಾಸ್ತ್ರ ಕೇಳಿದಾಗ, ದೊಡ್ಡ ಪೂಜೆ ಮಾಡಬೇಕು. ಅದಕ್ಕಾಗಿ ಮನೆಯಲ್ಲಿರುವ ಚಿನ್ನಾಭರಣಗಳನ್ನು ತರಬೇಕು ಎಂದು ಶೇಖರ್ ಸಲಹೆ ನೀಡಿದ್ದ. ಅವನ ಮಾತನ್ನು ನಂಬಿದ ಐಟಿ ಅಧಿಕಾರಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 194 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ 300 ಗ್ರಾಂ ಬೆಳ್ಳಿಯನ್ನು ತೆಗೆದುಕೊಂಡು ಹೋಗಿ ಆತನಿಗೆ ನೀಡಿದ್ದರು.

ನಟ ದ್ವಾರಕೀಶ್‌ ಸೊಸೆ ವಿರುದ್ಧ ಹಲವರಿಗೆ ವಂಚನೆ; ಹಣ ವಾಪಸ್‌ ಕೇಳಿದ್ದಕ್ಕೆ ಪೊರಕೆಯಿಂದ ಹಲ್ಲೆ!

ನಟ ದ್ವಾರಕೀಶ್‌ ಸೊಸೆ ವಿರುದ್ಧ ಹಲವರಿಗೆ ವಂಚನೆ ಆರೋಪ

Varsha Rai: ದ್ವಾರಕೀಶ್ ಅವರ ಎರಡನೇ ಪತ್ನಿ ಶೈಲಜಾ ಕುಮಾರಿ ಅವರ ಪುತ್ರ ಸಮರ್ಥ್ ಅವರ ಪತ್ನಿ ವರ್ಷಾ ರೈ ವಿರುದ್ಧ ಹತ್ತಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಪೊರಕೆಯಿಂದ ವರ್ಷಾ ರೈ ಹಲ್ಲೆ ನಡೆಸಿದ್ದಾರೆ.

ಕಾರವಾರದಲ್ಲಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, ಮೂವರಿಗೆ ಗಂಭೀರ ಗಾಯ

ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, 3 ಮಂದಿಗೆ ಗಾಯ

Karwar Accident: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಭೀಕರ ಅಪಘಾತ ನಡೆದಿದೆ. ಕಂಟೇನರ್ ಚಾಲಕ ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದಲ್ಲಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಲ್ಲದೇ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಎಂಡಬ್ಲ್ಯು ಕಾರ್‌  ಭೀಕರ ಅಪಘಾತ: ಶಾಕುನ್ ಗ್ರೂಪ್ ಎಂಡಿ ವಲ್ಲಭ ಮಹೇಶ್ವರಿ ನಿಧನ

ರಸ್ತೆ ಅಪಘಾತಕ್ಕೆ ಶಾಕುನ್ ಗ್ರೂಪ್ ಎಂಡಿ ವಲ್ಲಭ ಮಹೇಶ್ವರಿ ಬಲಿ

ಶಾಕುನ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ವಲ್ಲಭ ಮಹೇಶ್ವರಿ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಜಸ್ಥಾನದ ಅಲ್ವಾರ್ ಬಳಿ ಅವರು ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ಪೋಕ್ಸೊ ಕೇಸ್‌; ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಪೋಕ್ಸೊ ಕೇಸ್‌; ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದರು.

ಚಾಟ್ ಜಿಪಿಟಿ ಮೂಲಕ ಆತ್ಮಹತ್ಯೆಯ ವಿಧಾನ ಹುಡುಕಾಡಿದ ಯುವತಿಯರು; ಎಲಾನ್‌ ಮಸ್ಕ್ ಹೇಳಿದ್ದೇನು?

ಆತ್ಮಹತ್ಯೆಯ ವಿಧಾನಕ್ಕಾಗಿ ಚಾಟ್ ಜಿಪಿಟಿ ಮೊರೆ ಹೋದ ವಿದ್ಯಾರ್ಥಿನಿಯರು

ಗುಜರಾತ್‌ನ ಸೂರತ್‌ನ ಸ್ವಾಮಿನಾರಾಯಣ ದೇವಸ್ಥಾನದ ಶೌಚಾಲಯದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. 18–20 ವರ್ಷದ ಬಾಲ್ಯದ ಸ್ನೇಹಿತೆಯರಾದ ಅವರು ಕಳೆದ ಶುಕ್ರವಾರ (ಮಾರ್ಚ್‌ 6) ಕಾಲೇಜಿಗೆ ಹೋಗಿ ಮನೆಗೆ ಮರಳಿರಲಿಲ್ಲ. ಮೊಬೈಲ್ ಲೊಕೇಶನ್ ಆಧರಿಸಿ ಹುಡುಕಿದಾಗ ದೇವಸ್ಥಾನದ ಶೌಚಾಲಯದಲ್ಲಿ ಅವರ ಮೃತದೇಹಗಳು ಪತ್ತೆಯಾಗಿದ್ದು, ಘಟನಾ ಸ್ಥಳದಲ್ಲಿ ಅರಿವಳಿಕೆ ಮದ್ದು ಮತ್ತು ಸಿರಿಂಜ್‌ಗಳು ದೊರೆತಿದೆ. ಅದನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮೊಬೈಲ್ ಪರಿಶೀಲಿಸಿದಾಗ ಆತ್ಮಹತ್ಯೆಗೆ ಯಾವ ಔಷಧ ಬಳಸಬಹುದು ಎಂದು ChatGPTನಲ್ಲಿ ಹುಡುಕಿರುವುದು ತಿಳಿದುಬಂದಿದೆ. ಈ ಬಗ್ಗೆ ಎಲಾನ್‌ ಮಸ್ಕ್‌ ಪ್ರತಿಕ್ರಿಯಿಸಿದ್ದಾರೆ.

ಲೀವ್ ಇನ್ ಸಂಗಾತಿ ಮೇಲೆ ಆ್ಯಸಿಡ್ ಎರಚಿದ ಗೆಳೆಯ

ಆಸ್ಪತ್ರೆಯಲ್ಲೇ ಗೆಳತಿ ಮೇಲೆ ಆ್ಯಸಿಡ್ ಎರಚಿದ ವ್ಯಕ್ತಿ

ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ತನ್ನ ಗೆಳತಿ ಮೇಲೆ ಆ್ಯಸಿಡ್ ಎರಚಿದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಲೀವ್ ಇನ್ ಸಂಗಾತಿಯ ಮೇಲೆ ಹಲ್ಲೆ ನಡೆಸಿದ ಬಳಿಕ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ತಕ್ಷಣವೇ ಮಹಿಳೆಗೆ ಚಿಕಿತ್ಸೆ ನೀಡಲಾಗಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ.

Loading...