ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Mandya Car Accident: ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ಭಾನುವಾರ ಅಪಘಾತ ನಡೆದಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಧ್ಯರಾತ್ರಿ ಸೊಸೆ ಕೋಣೆಯಲ್ಲಿ ಪತ್ತೆಯಾದ ಪ್ರಿಯಕರ; ಅತ್ತೆ ಶಾಕ್

ಸೊಸೆ ಕೋಣೆಯಲ್ಲಿ ಶಬ್ದ ಕೇಳಿ ನೋಡಿದ ಅತ್ತೆಗೆ ಶಾಕ್

ಮಧ್ಯರಾತ್ರಿ ಸೊಸೆಯ ಕೊನೆಯಲ್ಲಿ ಕೇಳಿ ಬರುತ್ತಿದ್ದ ಸದ್ದು ಕೇಳಿ ಏನಿರಬಹುದು ಎನ್ನುವ ಕುತೂಹಲದಿಂದ ನೋಡಿದ ಅತ್ತೆಗೆ ಮಂಚದ ಕೆಳಗೆ ಸೊಸೆಯ ಪ್ರಿಯಕರ ಪತ್ತೆಯಾಗಿದ್ದಾನೆ. ಇದನ್ನು ನೋಡಿ ಅತ್ತೆ ಫುಲ್ ದಂಗಾಗಿದ್ದಾರೆ. ಈ ಘಟನೆ ಅಯೋಧ್ಯಯಲ್ಲಿ ನಡೆದಿದೆ. ಇಬ್ಬರು ಮಕ್ಕಳ ತಾಯಿಯಾಗಿರುವ ಮಹಿಳೆಯ ಪತಿ ದುಬೈಯಲ್ಲಿದ್ದಾನೆ ಎನ್ನಲಾಗಿದೆ.

ಮಾದಕ ದ್ರವ್ಯ ನೀಡಿ ಕೋರ್ಟ್‌ ಆವರಣದಲ್ಲೇ  ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಥಾಣೆಯಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ ಘಟನೆ

ಯೂಟ್ಯೂಬರ್ ಗಳಿಂದ ಸಾಮೂಹಿಕ ಅತ್ಯಾಚಾರ

ಥಾಣೆಯಲ್ಲಿ ಯೂಟ್ಯೂಬರ್ ಗಳಿಬ್ಬರು ಮಹಿಳೆಯೊಬ್ಬರಿಗೆ ಮಾದಕ ದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಕಳೆದ ವರ್ಷ ಆಗಸ್ಟ್ 25ರಂದು ನಡೆದಿದ್ದು, ಆರೋಪಿಗಳಿಬ್ಬರು ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದುದರಿಂದ ತಡವಾಗಿ ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Viral News: ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕ ಮೆದುಳಿನ ರಕ್ತಸ್ರಾವದಿಂದ ಸಾವು; ಅತಿಯಾದ ಒತ್ತಡವೇ ಕಾರಣ ಎಂದು ಕುಟುಂಬಸ್ಥರ ಆರೋಪ

ಮೆದುಳಿನ ರಕ್ತಸ್ರಾವದಿಂದ ಶಿಕ್ಷಕ ಸಾವು

Teacher dies of brain haemorrhage: ಚುನಾವಣಾ ಕರ್ತವ್ಯದಲ್ಲಿದ್ದ ನಿಯೋಜಿತ ಶಿಕ್ಷಕ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಾವಿಗೆ ಅತಿಯಾದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. 58 ವರ್ಷದ ಜೀವಶಾಸ್ತ್ರ ಶಿಕ್ಷಕ ನೆಹರೂ ನಗರದ ತಮ್ಮ ನಿವಾಸದಲ್ಲಿ ಶನಿವಾರ ನಿಧನರಾದರು.

Congress Worker Ganesh Murder Case: ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಗೌಡ ಕೊಲೆ ಕೇಸ್‌: ಬಜರಂಗ ದಳ ಕಾರ್ಯಕರ್ತ ಮಿಥುನ್‌ ಬಂಧನ

ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಕೊಲೆ: ಬಜರಂಗ ದಳ ಸದಸ್ಯ ಮಿಥುನ್‌ ಬಂಧನ

ಡಿ.5ರಂದು ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತ ಗಣೇಶ್ (40) ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ A1 ಸಂಜಯ್ ಮತ್ತು A3 ನಾಗಭೂಷಣ್​​ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, A2 ನಿತಿನ್, A4 ದರ್ಶನ್ ಹಾಗೂ ಅಜಯ್​​​​ಗಾಗಿ ಹುಡುಕಾಟ ಮುಂದುವರಿದಿದೆ.

ಡೀಪ್‌ಫೇಕ್‌ಗೆ ಪೂರ್ವಾನುಮತಿ ಕಡ್ಡಾಯಗೊಳಿಸಲು ಲೋಕಸಭೆಯಲ್ಲಿ ಮಸೂದೆ ಮಂಡನೆ

ಡೀಪ್‌ಫೇಕ್‌ಗೆ ಕಡಿವಾಣ; ಮಸೂದೆ ಮಂಡನೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್‌ ವಿಡಿಯೊ ವೈರಲ್ ಆದ ಬೆನ್ನಲ್ಲೇ ಇದೀಗ ಲೋಕಸಭೆಯಲ್ಲಿ ಡೀಪ್‌ಫೇಕ್‌ಗೆ ಕಡಿವಾಣ ಹಾಕಲು ಮಸೂದೆಯನ್ನು ಮಂಡಿಸಲಾಗಿದೆ. ಈ ಮಸೂದೆಯ ಪ್ರಕಾರ ಡೀಪ್‌ಫೇಕ್ ವಿಷಯದಲ್ಲಿ ಯಾವುದೇ ವ್ಯಕ್ತಿಯನ್ನು ಚಿತ್ರೀಕರಿಸಲು ಮುಂದಾದರೆ ಅದಕ್ಕೆ ಪೂರ್ವಾನುಮತಿಯನ್ನು ಕಡ್ಡಾಯಗೊಳಿಸುವ ಉದ್ದೇಶವನ್ನು ಇದು ಹೊಂದಿದೆ.

ದಲಿತ ಯುವಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು: ವಿಡಿಯೊ ವೈರಲ್

ದಲಿತ ಯುವಕನಿಗೆ ಮನಬಂದಂತೆ ಹಲ್ಲೆ ನಡೆಸಿದ ಯುವಕರ ಗುಂಪು

ದಲಿತ ಸಮುದಾಯಕ್ಕೆ ಸೇರಿದ ಯುವಕನೊಬ್ಬನ ಮೇಲೆ ನಾಲ್ವರು ಯುವಕರ ಗುಂಪು ಬರ್ಬರವಾಗಿ ಥಳಿಸಿ ಚಪ್ಪಲಿಯಿಂದ ಹೊಡೆದಿದೆ. ಬಳಿಕ ಬಟ್ಟೆಯನ್ನು ಬಿಚ್ಚಿಸಿ ಕಾಲು ಮುಟ್ಟಿ ಕ್ಷಮೆಯಾಚಿಸುವಂತೆ ಬಲವಂತ ಮಾಡಿದೆ ಎನ್ನಲಾಗಿದೆ.‌ ಸದ್ಯ ಈ ಹೇಯ ಕೃತ್ಯದ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

25 ವರ್ಷದ ಯುವತಿಯೊಂದಿಗೆ ಮದುವೆಯಾಗಿದ್ದ ರಾಜಕಾರಣಿ ಸಾವು

ಮದುವೆಯಾಗಿ ವಾರ ಕಳೆದಿಲ್ಲ ವರ ಸಾವು, ವಧುವಿನ ಮೇಲೆ ಶಂಕೆ

ಎರಡನೇ ಮದುವೆಯಾಗಿದ್ದ ರಾಜಕಾರಣಿಯೊಬ್ಬರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಿಜೆಪಿಯಿಂದ ಅಮಾನತುಗೊಂಡಿದ್ದ ಮಾಜಿ ಕೌನ್ಸಿಲರ್ ನಯೀಮ್ ಖಾನ್ ವಾರಗಳ ಹಿಂದೆಯಷ್ಟೇ 25 ವರ್ಷದ ಯುವತಿಯನ್ನು ಮದುವೆಯಾಗಿದ್ದ. ಇದೀಗ ಆತ ನಿಗೂಢವಾಗಿ ಸಾವನ್ನಪ್ಪಿದ್ದು, ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತು ತನಿಖೆಗೆ ಕುಟುಂಬ ಆಗ್ರಹಿಸಿದೆ.

Aryan khan: ಶಾರುಖ್‌ ಪುತ್ರನ ಅಸಹ್ಯ ವರ್ತನೆ; ಬೆಂಗಳೂರಿನಲ್ಲಿ ದೂರು ದಾಖಲು

ಶಾರುಖ್‌ ಖಾನ್‌ ಪುತ್ರ ಆರ್ಯನ್‌ ವಿರುದ್ಧ ದೂರು ದಾಖಲು

ಪಬ್‌ವೊಂದರಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಹಿಂದೂ ಮುಖಂಡರೊಬ್ಬರು ಪೊಲೀಸ್ ಆಯುಕ್ತರು ಮತ್ತು ಡಿಜಿಪಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದರು.

Murder Case: ದತ್ತ ಜಯಂತಿ ಬ್ಯಾನರ್‌ ಗಲಾಟೆ; ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ

ಬ್ಯಾನರ್‌ ಗಲಾಟೆ; ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ

Chikkamagaluru News: ದತ್ತ ಜಯಂತಿ ಬ್ಯಾನರ್ ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರ ಕೊಲೆಯಾಗಿದೆ. ಚಿಕ್ಕಮಗಳೂರಿನ ಸಖರಾಯಪಟ್ಟಣ ಬಸ್ ನಿಲ್ದಾಣದ‌ ಮುಂಭಾಗ ಬ್ಯಾನರ್ ವಿಚಾರಕ್ಕೆ ಭಜರಂಗದಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿತ್ತು.

Shivamogga News: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಪುತ್ರ ಆಕಾಶ್ ಆತ್ಮಹತ್ಯೆ

ಶಿವಮೊಗ್ಗದ ಖ್ಯಾತ ವೈದ್ಯೆ ಡಾ. ಜಯಶ್ರೀ ಹಾಗೂ ಪುತ್ರ ನೇಣಿಗೆ ಶರಣು

ಡಾ. ಜಯಶ್ರೀ ಮತ್ತು ಮಗ ಆಕಾಶ್ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿನೋಬನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಡೆತ್ ನೋಟ್ ಪತ್ತೆಯಾಗಿದೆ. ಡಾ. ಜಯಶ್ರೀ ಅವರ ಪತಿ ಹಾಗೂ ಸೊಸೆ ಕೂಡ ಈ ಮೊದಲು ಆತ್ಮಹತ್ಯೆಗೆ ಶರಣಾಗಿದ್ದರು.

Murder Case: ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

Doddaballapuara news: ಯುವತಿಯೊಬ್ಬಳನ್ನು ಈತ ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಕೆಲವರು ನಿನ್ನನ್ನು ನೋಡಿಕೊಳ್ಳುವುದಾಗಿ ಈತನಿಗೆ ಧಮಕಿ ಹಾಕಿದ್ದರು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ದರು. ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.

Digital Arrest: ಬ್ಯಾಂಕ್‌ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ತಪ್ಪಿದ ಡಿಜಿಟಲ್‌ ಆರೆಸ್ಟ್‌, ವೃದ್ಧ ದಂಪತಿಯ 84 ಲಕ್ಷ ರೂ. ಬಚಾವ್

ಬ್ಯಾಂಕ್‌ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ತಪ್ಪಿದ ಡಿಜಿಟಲ್‌ ಆರೆಸ್ಟ್‌‌

ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನಡಿಕ್ಟ್‌ ಫರ್ನಾಂಡಿಸ್ (84) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71) ಅವರಿಗೆ ಡಿಸೆಂಬರ್ 1ರಂದು ಸೈಬರ್‌ ಕ್ರಿಮಿನಲ್‌ಗಳು (Cyber crime) ಉತ್ತರ ಪ್ರದೇಶದ ಸಿಐಡಿ ಪೊಲೀಸ್ ಎಂಬ ಸೋಗಿನಲ್ಲಿ ಮೊಬೈಲ್ ಫೋನ್- ವಾಟ್ಸ್ಯಾಪ್​ ಮೂಲಕ ಸಂಪರ್ಕಿಸಿದ್ದರು. ವೃದ್ಧ ದಂಪತಿಗಳು 6 ಕೋಟಿ ಮೋಸ ಮಾಡಿರುವುದಾಗಿ, ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಆರೆಸ್ಟ್​​ಗೆ ಒಳಪಡಿಸಿದ್ದರು.

Actor Darshan: 82 ಲಕ್ಷ ರೂ. ಹಣದ ದಾಖಲೆ ತೋರಿಸದ ದರ್ಶನ್‌, ಕೃಷಿಯಿಂದ ಬಂತು ಎಂದ ದಾಸ

82 ಲಕ್ಷ ರೂ. ಹಣದ ದಾಖಲೆ ತೋರಿಸದ ದರ್ಶನ್‌, ಕೃಷಿಯಿಂದ ಬಂತು ಎಂದ ದಾಸ

Renuka swamy murder case: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ 82 ಲಕ್ಷ ರೂ. ನಗದು ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ದರ್ಶನ್ ಹೇಳಿಕೆ ಪಡೆಯಲಾಗಿದೆ. ಐಟಿ ಅಧಿಕಾರಿಗಳ ಮುಂದೆ A2 ಆರೋಪಿ ದರ್ಶನ್‌ ಹಾಗೂ ಪತ್ನಿ ವಿಜಯಲಕ್ಷ್ಮಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಕೃಷಿ ಮತ್ತು ಪಶು ಸಂಗೋಪನೆಯಿಂದ ಹಣ ಬಂದಿದ್ದಾಗಿ ದರ್ಶನ್ ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ದರ್ಶನ್, ವಿಜಯಲಕ್ಷ್ಮಿ, ಪ್ರಧೋಷ್, ನಿಖಿಲ್ ಹಾಗೂ ಕೇಶವಮೂರ್ತಿ ಮನೆಯಲ್ಲಿ 82 ಲಕ್ಷ ರೂಪಾಯಿ ಹಣ ಸಿಕ್ಕಿತ್ತು.

Love jihad: ಶ್ರದ್ಧಾ ಥರ ಕತ್ತರಿಸಿ ಹಾಕುವೆ ಎಂದು ಯುವತಿಗೆ ಬೆದರಿಕೆ; ಲೈಂಗಿಕ ದೌರ್ಜನ್ಯ, ಬ್ಲ್ಯಾಕ್‌ಮೇಲ್‌

ಶ್ರದ್ಧಾ ಥರ ಕತ್ತರಿಸಿ ಹಾಕುವೆ ಎಂದು ಯುವತಿಗೆ ಬೆದರಿಕೆ; ಲೈಂಗಿಕ ದೌರ್ಜನ್ಯ

Physical Abuse: ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಉಸ್ಮಾನ್, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನಾಭರಣ ದೋಚಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೈಹಿಕ ಮತ್ತು ಮಾನಸಿಕ ನೋವಿಗೊಳಗಾದ ಯುವತಿ 9 ತಿಂಗಳ ಹಿಂದೆಯೇ ಪೊಲೀಸರ ಮೊರೆ ಹೋಗಿದ್ದು, ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ತಿಳಿದು ಬಂದಿದೆ.

ಓಡಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿದ ಹಾಸ್ಟೆಲ್ ಸಿಬ್ಬಂದಿ, ತನಿಖೆಗೆ ಆದೇಶ

ವಿದ್ಯಾರ್ಥಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿ ಶಿಕ್ಷೆ

ಪದೇ ಪದೇ ಹಾಸ್ಟೆಲ್ ನಿಂದ ಓಡಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಹಾಸ್ಟೆಲ್ ನಲ್ಲಿ ಸರಪಳಿಯಿಂದ ಕಟ್ಟಿ ಹಾಕಿ ಬಂಧಿಸಿರುವ ಘಟನೆ ಒಡಿಶಾದ ಬಾಲಸೋರ್‌ನಲ್ಲಿ ನಡೆದಿದೆ. ಈ ಕುರಿತು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಾಹಿತಿ ತಿಳಿದ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಸರ್ಕಾರಿ ಹಾಸ್ಟೆಲ್‌ನಲ್ಲಿ 4ನೇ ತರಗತಿಯ ವಿದ್ಯಾರ್ಥಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಲಾಗಿತ್ತು.

Haveri News: ಹಾವೇರಿನಲ್ಲಿ ರೈತನ ಬಲಿ ಪಡೆದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

ಹಾವೇರಿನಲ್ಲಿ ರೈತನ ಬಲಿ ಪಡೆದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿ ಸಿದ್ದಗೇರಿ ಗ್ರಾಮದ ಬಳಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಎರಡು ಗ್ರಾಮಗಳ ರೈತರ ನೆಮ್ಮದಿ ಕೆಡಿಸಿದ್ದ ಚಿರತೆಯನ್ನು ಸೋಮವಾರ ಬೆಳಗಿನ ಜಾವ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ.

ಭಾರತದ ಕ್ರೂರ ಸೈಕೋಪಾತ್‌ ಇವಳು; ತನಗಿಂತ ಸುಂದರವಾಗಿದ್ದಕ್ಕೆ ಮೂವರು ಬಾಲಕಿಯರ ಹತ್ಯೆ: ಮಗನನ್ನೂ ಕೊಂದ ಪಾಪಿ

ಸುಂದರವಾಗಿದ್ದಕ್ಕೆ ಮೂವರು ಬಾಲಕಿಯರ ಹತ್ಯೆ

Haryana Crime: ಮದುವೆಗೆ ಬಂದಿದ್ದ ಬಾಲಕಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಕೊನೆಗೆ ಅದು ಕೊಲೆ ಎಂದು ದೃಢಪಟ್ಟ ಘಟನೆ ಹರಿಯಾಣದಲ್ಲಿ ನಡೆದಿದೆ. ತನಗಿಂತ ಸುಂದರವಾಗಿದ್ದಕ್ಕೆ ಮಹಿಳೆಯೊಬ್ಬಳು ಈ ಕೊಲೆ ಮಾಡಿದ್ದಾಳೆ. ಅಷ್ಟೇ ಅಲ್ಲ, ಅದಕ್ಕೂ ಮೊದಲು ಈಕೆ ತನ್ನ ಮಗ ಹಾಗೂ ಇಬ್ಬರು ಬಾಲಕಿಯರನ್ನು ಕೊಂದಿರುವುದು ಕೂಡ ಬೆಳಕಿಗೆ ಬಂದಿದೆ.

Bengaluru Crime News: ಕಮಿಷನರ್‌ ಕಚೇರಿ ಆವರಣದಲ್ಲೇ ಆರೋಪಿಯ ಕಾರಿನಿಂದ 11 ಲಕ್ಷ ರೂ. ಎಗರಿಸಿದ ಪೊಲೀಸ್‌ ಸಿಬ್ಬಂದಿ!

ಕಮಿಷನರ್‌ ಕಚೇರಿ ಆವರಣದಲ್ಲೇ 11 ಲಕ್ಷ ರೂ. ಎಗರಿಸಿದ ಪೊಲೀಸ್‌ ಸಿಬ್ಬಂದಿ!

Theft: ಸುಮಾರು 11 ಲಕ್ಷ ಹಣ ಕಳ್ಳತನ ಮಾಡಿ ಹೆಡ್ ಕಾನ್‌ಸ್ಟೇಬಲ್‌ ಜಬಿವುಲ್ಲಾ ಆರಾಮಾಗಿ ಓಡಾಡಿಕೊಂಡಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂಗೆ ಹಣ ಕಳೆದುಕೊಂಡ ವ್ಯಕ್ತಿ ದೂರು ನೀಡಿದ್ದರು. ದೂರು ಪಡೆದುಕೊಂಡು ಕಾನ್ಸ್‌ಟೇಬಲ್‌ ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಹೈಡ್ರಾಮಾ ಮಾಡಿದ್ದಾನೆ. ಮನೆಯ ಒಳಗೆ ಸೈಬರ್ ಪೊಲೀಸರನ್ನ ಬಿಡದೆ ಗಲಾಟೆ ಮಾಡಿದ್ದಾನೆ.

Murder Case: ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು

ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು

Bengaluru Crime News: ವೆಂಕಟೇಶ್ ಬಿಎಂಟಿಸಿ ಡ್ರೈವರ್ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದ. ಪತ್ನಿಗೆ ಸ್ಟ್ರೋಕ್ ಆಗಿ ವೀಲ್‌ಚೇರ್‌ನಲ್ಲಿ ಜೀವನ ಸಾಗಿಸುತ್ತಿದ್ದರು. ಆರೋಗ್ಯ ಸಮಸ್ಯೆ ಸೇರಿದಂತೆ ಸಣ್ಣ ಪುಟ್ಟ ವಿಚಾರಗಳಿಗೂ ಕೂಡ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳು ಜಗಳ ಮಾಡಿಕೊಳ್ಳುತ್ತಿದ್ದರು. ಜಗಳ ಉಲ್ಭಣಿಸಿ ಕೊಲೆಗೆ ಕಾರಣವಾಗಿದೆ.

Thawarchand Gehlot: ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Karnataka Governor: ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳದ ಗಂಭೀರ ಆರೋಪಗಳು ಹೊರಬಿದ್ದಿದ್ದು, ತನ್ನ ಮಗುವನ್ನು ಬಲವಂತವಾಗಿ ಇರಿಸಿಕೊಳ್ಳಲಾಗಿದೆ ಎಂದು ಪತ್ನಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಆರೋಪದ ಹಿನ್ನೆಲೆಯಲ್ಲಿ ಕುಟುಂಬ ಕಲಹ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ.

ಬಲಗೊಳ್ಳುತ್ತಿದೆ ಜೈಶ್ ಮಹಿಳಾ ಘಟಕ: 5,000ಕ್ಕೂ ಹೆಚ್ಚು ಮಹಿಳೆಯರಿಗೆ 500 ರೂ. ಶುಲ್ಕ, ಆನ್‌ಲೈನ್ ತರಬೇತಿ

ಜೈಶ್ ಮಹಿಳಾ ವಿಭಾಗಕ್ಕೆ 5,000ಕ್ಕೂ ಹೆಚ್ಚು ಮಹಿಳೆಯರ ನೇಮಕ

ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ನ ಮಹಿಳಾ ಘಟಕ ಜಮಾತ್ ಉಲ್ ಮೊಮಿನಾತ್‌ಗಾಗಿ ನೇಮಕಾತಿ ಅಭಿಯಾನ ಅಕ್ಟೋಬರ್ 8ರಂದು ಪ್ರಾರಂಭವಾಗಿದ್ದು, ಈಗಾಗಲೇ 5,000ಕ್ಕೂ ಹೆಚ್ಚು ಸದಸ್ಯರ ನೇಮಕಾತಿ ಮಾಡಲಾಗಿದೆ. 500 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

Stone pelting: ಬನಾರಸ್‌ ವಿಶ್ವವಿದ್ಯಾಲಯ ಕೊತಕೊತ; ವಿದ್ಯಾರ್ಥಿ , ಸಿಬ್ಬಂದಿಯ ನಡುವೆ ಘರ್ಷಣೆ, ಕಲ್ಲು ತೂರಾಟ

ಬನಾರಸ್‌ ವಿಶ್ವವಿದ್ಯಾಲಯ ಕೊತಕೊತ; ವಿದ್ಯಾರ್ಥಿ, ಸಿಬ್ಬಂದಿಯ ನಡುವೆ ಘರ್ಷಣೆ

ವಾರಣಾಸಿಯ ಬಿರ್ಲಾ ಹಾಸ್ಟೆಲ್‌ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗಳ ನಡುವೆ ಘರ್ಷಣೆಯಾಗಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ದಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ಬಗ್ಗೆ ದೂರು ದಾಖಲಾಗಿದ್ದು, ಪ್ರಕರಣದಲ್ಲಿ ಇಬ್ಬರು ಅರೆಸ್ಟ್‌ ಆಗಿದ್ದಾರೆ.

Physical Assault: ಕಾಂಗ್ರೆಸ್ ಶಾಸಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ರಾಹುಲ್ ಮಮ್‌ಕೂಟತಿಲ್ ನಾಪತ್ತೆ

ಕಾಂಗ್ರೆಸ್ ಶಾಸಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

Congress MLA Rahul Mamkootathil : ಕೇರಳ ಕಾಂಗ್ರೆಸ್‌ ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಎರಡೆರಡು ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಮೊದಲನೇ ಆರೋಪ ಕೇಳಿಬಂದ ಕೂಡಲೇ ಶಾಸಕ ಪರಾರಿಯಾಗಿದ್ದಾನೆ. ಇದೀಗ ಮತ್ತೊಬ್ಬ ಯುವತಿ ತನಗೂ ಅನ್ಯಾಯವಾಗಿದೆ ಎಂದು ದೂರು ನೀಡಿದ್ದಾಳೆ. ಪೊಲೀಸರು ಆರೋಪಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ.

Loading...