ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆ; ಮ್ಯಾನೇಜರ್‌ ಮೇಲೆ ಗುಂಡು ಹಾರಿಸಿ 5 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ!

ಹುಣಸೂರಿನಲ್ಲಿ ಚಿನ್ನದಂಗಡಿ ದರೋಡೆ; 5 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ

Jewellery shop Robbery in Hunsur: ದರೋಡೆಕೋರರು ಗನ್‌ ತೋರಿಸಿ ಸುಮಾರು 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ ಮಾಡಿದ್ದಾರೆ. 5ಕ್ಕೂ ಹೆಚ್ಚು ಜನರಿದ್ದ ಗ್ಯಾಂಗ್‌ನಿಂದ ಕೃತ್ಯ ಎಸಗಲಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ:  ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ, ನಿರಂತರ ಚಳುವಳಿ ಮತ್ತು ಸಿದ್ಧಾಂತ: ಸಿಎಂ

ಬೆಂಗಳೂರಿನ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು. MGNAREGA ಕಾರ್ಯಕ್ರಮದಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು. ಈಗ ರಾಜ್ಯಗಳ ಮೇಲೆ ಭಾರಿ ಹೊರೆಯನ್ನೇ ಹೊರೆಸುತ್ತಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

ಲಿವ್‌ ಇನ್‌ ಸಂಗಾತಿಗೆ ವಂಚನೆ, ಆಕೆಯ ತಂಗಿ ಮೇಲೂ ಅತ್ಯಾಚಾರ; ಆರೋಪಿ ಅರೆಸ್ಟ್

ಲಿವ್‌ ಇನ್‌ ಸಂಗಾತಿಗೆ ವಂಚನೆ, ಆಕೆಯ ತಂಗಿ ಮೇಲೂ ಅತ್ಯಾಚಾರ ಎಸಗಿದ!

Bengaluru News: ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲವ್ ಸೆಕ್ಸ್​ ದೋಖಾ ಪ್ರಕರಣ ನಡೆದಿದೆ. ಸಂತ್ರಸ್ತ ಯುವತಿ ಬಳಿ ಲಕ್ಷ ಲಕ್ಷ ಹಣ ಪಡೆದಿದ್ದ ಆರೋಪಿ, ಯುವತಿ ಮನೆಯಲ್ಲಿ ಚಿನ್ನಾಭರಣ ಸಹ ಕದ್ದಿದ್ದ. ಈ ಬಗ್ಗೆ ದೂರು ನೀಡಿದರೆ ಸಾಯಿಸುತ್ತೇನೆ ಎಂದು ಬೆದರಿಸಿದ್ದ. ಅಲ್ಲದೇ ಸಂತ್ರಸ್ತೆಯ ಅಪ್ರಾಪ್ತ ವಯಸ್ಸಿನ ಸಹೋದರಿಯ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಜಮ್ಮು ಕಾಶ್ಮೀರದಲ್ಲಿ ಅಡಗಿರುವ ಉಗ್ರರ ಬೇಟೆ ಆರಂಭಿಸಿದ ಭದ್ರತಾ ಪಡೆ

ಜಮ್ಮು ಕಾಶ್ಮೀರದಲ್ಲಿ ಅಡಗಿರುವ ಉಗ್ರರು

ಜೈಶ್ ಕಮಾಂಡರ್ ಮತ್ತು ಸಹಾಯಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಡಗಿದ್ದಾರೆ ಎನ್ನುವ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಭಾರತೀಯ ಭದ್ರತಾ ಪಡೆಯು ಬೇಟೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಿಶ್ತ್ವಾರ್‌ನ ಚತ್ರೂ ಉಪವಿಭಾಗದ ಹಳ್ಳಿಗಳನ್ನು ಸುತ್ತುವರಿದಿರುವ ಭಾರತೀಯ ಸೇನೆಯು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಳೆದ ಒಂದು ವಾರದಿಂದ ಇಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

Physical Assault: ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ ಬಿಜೆಪಿ ನಾಯಕಿಯ ಪತಿ

ಮಹಿಳೆ ಮೇಲೆ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಬಿಜೆಪಿ ನಾಯಕಿಯ ಪತಿ

ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ.

ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದ ಡ್ರಗ್ಸ್‌ ದಂಧೆ; 3 ಫ್ಯಾಕ್ಟರಿ ಸೀಜ್‌, 55 ಕೋಟಿ ಮೌಲ್ಯದ ಡ್ರಗ್‌ ಪತ್ತೆ

ಬೆಂಗಳೂರಿನಲ್ಲಿ 3 ಫ್ಯಾಕ್ಟರಿ ಸೀಜ್‌, 55 ಕೋಟಿ ಮೌಲ್ಯದ ಡ್ರಗ್‌ ಪತ್ತೆ

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜಾಗುತ್ತಿದ್ದ ವೇಳೆಯಲ್ಲೇ ಭಾರೀ ಡ್ರಗ್ಸ್‌ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮಹಾರಾಷ್ಟ್ರದ ANTF ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಮಾಡಲಾಗಿದೆ.

ಐಷಾರಾಮಿ ಕಾರಲ್ಲಿ ಮೋಜು- ಮಸ್ತಿ; ಅಡ್ಡಾದಿಡ್ಡಿ ವಾಹನ ಓಡಿಸಿ ಡೆಲವೆರಿ ಬಾಯ್​​ ಪ್ರಾಣ ತೆಗೆದ ವಿದ್ಯಾರ್ಥಿ

ಅಡ್ಡಾದಿಡ್ಡಿ ವಾಹನ ಓಡಿಸಿ ಡೆಲವೆರಿ ಬಾಯ್​​ ಪ್ರಾಣ ತೆಗೆದ ವಿದ್ಯಾರ್ಥಿ

Car Accident: ವಿದ್ಯಾರ್ಥಿಯೋರ್ವ ತನ್ನ ಮೋಜು ಮಸ್ತಿಗೆ ಐಶಾರಾಮಿ ಕಾರು ಹತ್ತಿಸಿ ಬಡ ಯುವಕನನ್ನು ಕೊಂದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಐಷಾರಾಮಿ ಕಾರನ್ನ ಅಡ್ಡಾದಿಡ್ಡಿಯಾಗಿ ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.

Tiger attack in Bandipur: ಬಂಡೀಪುರದಲ್ಲಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ; ಫಾರೆಸ್ಟ್‌ ವಾಚರ್‌ ಸಾವು

ಬಂಡೀಪುರದಲ್ಲಿ ಹುಲಿ ದಾಳಿಯಿಂದ ಫಾರೆಸ್ಟ್‌ ವಾಚರ್‌ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಳಹಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ ಮಾಡಿ ಕೊಂದಿದೆ.

Post Man Cheat: ಪೋಸ್ಟ್ ಮ್ಯಾನ್ ವಂಚನೆಯಿಂದ ಹಣ ಕಳೆದುಕೊಂಡ ಸಾವಿರಾರು ಖಾತೆದಾರರು

ಪೋಸ್ಟ್ ಮ್ಯಾನ್ ವಂಚನೆ: ಹಣ ಕಳೆದುಕೊಂಡ ಸಾವಿರಾರು ಖಾತೆದಾರರು

ತಾಲ್ಲೂಕಿನ ಇಡಗೂರು ಗ್ರಾಮದ ರಮ್ಯಾ ಎಂಬಾಕೆ ಕೆಲಸ ಆರಂಭಿಸಿದ್ದು, ಇತ್ತೀಚಿನ ಕೆಲವು ತಿಂಗಳುಗಳಿಂದ ಗ್ರಾಹಕರ ಠೇವಣಿ, ಮನಿ ಆರ್ಡರ್, ಮಂತ್ರಿ ಪಿಂಚಣಿ, ಮಾಸಾಶನ, ಸ್ಥಿರ ಠೇವಣಿಯ ಸುಮಾರು ಎರಡು ಕೋಟಿಯಷ್ಟು ಹಣವನ್ನು ಅಕ್ರಮ ಹಾಗೂ ವಂಚನೆ ಮಾಡಿದ್ದಾರೆ

ನಿದ್ರೆ ಔಷಧ ನೀಡಿ ಅತ್ಯಾಚಾರ, ವಿಡಿಯೊ ಮಾಡಿ ಬೆದರಿಕೆ: ಮೆಡಿಕಲ್ ಸ್ಟೋರ್ ಮಾಲೀಕನ ವಿರುದ್ಧ ಮಹಿಳೆ ದೂರು

ಅತ್ಯಾಚಾರ, ಬೆದರಿಕೆ; ಮಹಿಳೆ ದೂರು

ಮೆಡಿಕಲ್ ಸ್ಟೋರ್ ಮಾಲೀಕನೊಬ್ಬ ನಿದ್ರಾಜನಕ ನೀಡಿ ಅತ್ಯಾಚಾರ ಎಸಗಿ ಅದರ ವಿಡಿಯೊ ಮಾಡಿ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಆರೋಪಿಯು ಮಹಿಳೆಯೊಂದಿಗೆ ಮೂರು ತಿಂಗಳ ಕಾಲ ಸಂಬಂಧ ಹೊಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಸಾಜ್‌ ಪಾರ್ಲರ್‌ ಕೆಲಸ ಬಿಡಲ್ಲ ಎಂದಿದ್ದಕ್ಕೆ ಪತ್ನಿಯ ಕತ್ತು ಸೀಳಿ ಕೊಲೆಗೈದ 3ನೇ ಗಂಡ!

ಬೆಂಗಳೂರಿನಲ್ಲಿ ಪತ್ನಿಯ ಕತ್ತು ಸೀಳಿ ಕೊಲೆಗೈದ ಮೂರನೇ ಗಂಡ!

Bengaluru Murder Case: ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿ ಪ್ರಕರಣ ನಡೆದಿದೆ. ಕೊಲೆ ಮಾಡಿದ ಬಳಿಕ ಆರೋಪಿಯು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ಜನಾಂಗೀಯ ನಿಂದನೆ ಖಂಡಿಸಿದ್ದೇ ತಪ್ಪಾಯ್ತಾ?  ಬಿಎಸ್‌ಎಫ್ ಸೈನಿಕನ ಮಗನನ್ನು ಕೊಂದ ಕುಡುಕರು!

ತ್ರಿಪುರಾದಲ್ಲಿ ಬಿಎಸ್‌ಎಫ್ ಸೈನಿಕನ ಮಗನ ಕೊಲೆ

ಖರೀದಿಗಾಗಿ ಸಹೋದರನೊಂದಿಗೆ ಮಾರುಕಟ್ಟೆಗೆ ಬಂದಿದ್ದ ಬಿಎಸ್‌ಎಫ್ ಸೈನಿಕನ ಮಗನನ್ನು ಕೆಲವು ಕುಡುಕರು ಚಾಕುವಿನಿಂದ ಇರಿದಿರುವ ಘಟನೆ ಡೆಹ್ರಾಡೂನ್ ನ ತ್ರಿಪುರಾದಲ್ಲಿ ನಡೆದಿದೆ. ಜನಾಂಗೀಯ ನಿಂದನೆಗೆ ಎಂಬಿಎ ವಿದ್ಯಾರ್ಥಿಯಾಗಿರುವ ಎಸ್‌ಎಫ್ ಸೈನಿಕನ ಮಗ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಹದಿನೈದು ದಿನಗಳ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ.

ಭಯೋತ್ಪಾದಕ ಬೆದರಿಕೆ; ಭಾರತೀಯ ಮೂಲದ ವಿದ್ಯಾರ್ಥಿ ಬಂಧನ

ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಬಂಧನ

ಭಯೋತ್ಪಾದಕ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಡಲ್ಲಾಸ್‌ನ ಟೆಕ್ಸಾಸ್ ವಿಶ್ವವಿದ್ಯಾಲಯದ ಹಿರಿಯ ವಿದ್ಯಾರ್ಥಿ ಮನೋಜ್ ಸಾಯಿ ಲೆಲ್ಲಾ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಆತ ತನ್ನ ಮನೆಗೆ ಬೆಂಕಿ ಹಚ್ಚಿ, ಕುಟುಂಬಕ್ಕೆ ಭಯೋತ್ಪಾದಕ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

Harassment: ಬೆಂಗಳೂರಿನ ರಸ್ತೆಯಲ್ಲಿ ಬೈಕ್‌ ಚಲಾಯಿಸುತ್ತಿದ್ದ ಯುವತಿಗೆ ಪುಂಡರಿಂದ ಕಿರುಕುಳ

ಬೆಂಗಳೂರಿನಲ್ಲಿ ಬೈಕ್‌ ಚಲಾಯಿಸುತ್ತಿದ್ದ ಯುವತಿಗೆ ಪುಂಡರಿಂದ ಕಿರುಕುಳ

ಒಂದೇ ಬೈಕ್‌ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದ​​, ಹೆಲ್ಮೆಟ್​ ಕೂಡ ಧರಿಸಿರದ, ಅಡ್ಡಾದಿಡ್ಡಿ ಬೈಕ್‌ ಚಲಾಯಿಸುತ್ತಿದ್ದ ಯುವಕರು, ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯ ಬೆನ್ನು ಬಿದ್ದಿದ್ದಾರೆ. ಈ ವೇಳೆ ಯುವತಿಯನ್ನು ಫಾಲೋ ಮಾಡಿದ ಪುಂಡರು, ಬೈಕನ್ನು ಅಡ್ಡಾದಿಡ್ಡಿ ಓಡಿಸಿ ಯುವತಿಗೆ ಟಾರ್ಚರ್​ ಕೊಟ್ಟಿದ್ದಾರೆ. ಡಿಸೆಂಬರ್​ 25 ರಾತ್ರಿ 12 ಗಂಟೆ ಸುಮಾರಿಗೆ ಬಿಟಿಎಂ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ.

Self Harming: ನವವಿವಾಹಿತೆ ಸಾವಿನ ಹಿಂದೆಯೇ ಪತಿ ಕೂಡ ಆತ್ಮಹತ್ಯೆ, ಪತಿಯ ತಾಯಿಯಿಂದಲೂ ಸಾಯಲು ಯತ್ನ

ನವವಿವಾಹಿತೆ ಸಾವಿನ ಹಿಂದೆಯೇ ಪತಿಯೂ ಆತ್ಮಹತ್ಯೆ, ತಾಯಿಯೂ ಸಾಯಲು ಯತ್ನ

ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಅರ್ಧಕ್ಕೆ ವಾಪಸ್ಸಾಗಿ ಬಳಿಕ ಗಾನವಿ ನೇಣಿಗೆ ಶರಣಾಗಿದ್ದರು. ಇದೀಗ ನಾಗಪುರದ ತನ್ನ ಮನೆಯಲ್ಲಿ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಾಸಕ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌; ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು

ಶಾಸಕ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು

Byrathi Basavaraj Case: ಶಾಸಕ ಬೈರತಿ ಬಸವರಾಜ್‌ ವಿಚಾರಣಾಧೀನ ನ್ಯಾಯಾಲಯದಲ್ಲಿ ಮೊದಲಿಗೆ ನಿರೀಕ್ಷಣಾ ಜಾಮೀನು ಕೋರಿದ್ದರು. ಅಲ್ಲಿಯೂ ಜಾಮೀನು ಅರ್ಜಿ ವಜಾಗೊಂಡಿದ್ದರಿಂದ ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಇದೀಗ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಲಭಿಸಿದೆ.

ಮೆಟ್ರೋದಲ್ಲಿ ಯುವತಿ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ 45 ವರ್ಷದ ಅಂಕಲ್‌

ಮೆಟ್ರೋದಲ್ಲಿ ಯುವತಿ ಮೈಮುಟ್ಟಿ 45 ವರ್ಷದ ಅಂಕಲ್‌ ಅಸಭ್ಯ ವರ್ತನೆ

ಬೆಳಗಾವಿ ಮೂಲದ ವ್ಯಕ್ತಿಯೊಬ್ಬ, ನಮ್ಮ ಮೆಟ್ರೋದಲ್ಲಿ ಯುವತಿ ಮೈ ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. ಈತ ಖಾಸಗಿ ಕಂಪನಿಯಲ್ಲಿ ಹೌಸ್‌ಕೀಪರ್‌ ಆಗಿದ್ದು, ಉಪ್ಪಾರಪೇಟೆ ಠಾಣೆಯಲ್ಲಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮದುವೆ ಪ್ರಸ್ತಾಪ ನಿರಾಕರಿಸಿದ ಮಹಿಳೆ ಮೇಲೆ ಗುಂಡಿನ ದಾಳಿ

ಪ್ರಿಯಕರನಿಂದ ಮಹಿಳೆ ಮೇಲೆ ಗುಂಡಿನ ದಾಳಿ

ವಿವಾಹಿತ ಮಹಿಳೆ ಸ್ನೇಹಿತನ ಪ್ರಸ್ತಾಪವನ್ನು ತಿರಸ್ಕರಿಸಿ, ಗುರುಗ್ರಾಮ್ ಕ್ಲಬ್‌ನಲ್ಲಿ ಗುಂಡು ಹಾರಿಸಿದ ಘಟನೆ ವಿಚಾರಣೆಯ ಸಮಯದಲ್ಲಿ, ತುಷಾರ್ ಸುಮಾರು ಆರು ತಿಂಗಳ ಹಿಂದೆ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿದ್ದಾಗಿ ಮತ್ತು ಆಕೆಯನ್ನು ಮದುವೆಯಾಗಲು ಬಯಸಿದ್ದಾಗಿ ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ, ಆದರೆ ಆಕೆ ಪದೇ ಪದೇ ನಿರಾಕರಿಸಿದ್ದಳು.

ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣದ ಸಾವಿನ ಸಂಖ್ಯೆ 2ಕ್ಕೇರಿಕೆ; ಗಾಯಾಳು ಮಂಜುಳಾ ಸಾವು

ಮೈಸೂರು ಹೀಲಿಯಂ ಸ್ಫೋಟ ಪ್ರಕರಣ; ಗಾಯಾಳು ಮಂಜುಳಾ ಸಾವು

ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್​​ ಸಿಲಿಂಡರ್​ ಸ್ಫೋಟವಾಗಿ ಬಲೂನ್‌ ಮಾರುತ್ತಿದ್ದ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ವ್ಯಾಪಾರಿ ಸಲೀಂ ಖಮರುದ್ದೀನ್ (40) ಎಂಬಾತ ಮೃತಪಟ್ಟಿದ್ದ. ಇದೀಗ ಗಾಯಾಳು ಮಂಜುಳಾ ಎಂಬುವವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಜಪಾನ್‌ನ ಟೈರ್‌ ಕಾರ್ಖಾನೆಯಲ್ಲಿ ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ; 14 ಮಂದಿಗೆ ಗಾಯ

ಜಪಾನ್‌ನಲ್ಲಿ ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ

Japan Stabbing: ಮಧ್ಯ ಜಪಾನ್‌ನ ಟೈರ್‌ ಕಾರ್ಖಾನೆಯೊಂದರಲ್ಲಿ ಅಪರಿಚಿತ ವ್ಯಕ್ತಿ ಚಾಕು ಹಿಡಿದು ಮನಬಂದಂತೆ ದಾಳಿ ನಡೆಸಿದ್ದು ಸುಮಾರು 14 ಮಂದಿ ಗಾಯಗೊಂಡಿದ್ದಾರೆ. ಜತೆಗೆ ಕಾರ್ಖಾನೆಯಲ್ಲಿ ರಾಸಾಯನಿಕವನ್ನು ಸಿಂಪಡಿಸಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಶಿಜುವೊಕಾ ಪ್ರದೇಶದ ಮಿಶಿಮಾ ನಗರದಲ್ಲಿ ಈ ಘಟನೆ ನಡೆದಿದೆ.

ಫೋನ್ ಬಳಸಿದ್ದಕ್ಕಾಗಿ ಹೆಂಡತಿಯನ್ನು ಕೊಂದು ಮನೆ ಬಳಿಯೇ ಹೂತು ಹಾಕಿದ ಪತಿ

ದೃಶ್ಯಂ ಚಿತ್ರಕಥೆಯನ್ನು ಹೋಲುವ ಮರ್ಡರ್ ಸ್ಟೋರಿ

ಮಗಳಿಗೆ ತೊಂದರೆ ಕೊಟ್ಟ ಯುವಕನನ್ನು ಕೊಂದು ಹೂತು ಹಾಕಿರುವ ದೃಶ್ಯಂ ಚಿತ್ರ ನೋಡಿರುವವರಿಗೆ ಇದರ ಕಥೆ ಇನ್ನೂ ನೆನಪಿನಲ್ಲಿ ಉಳಿದಿದೆ. ಇದೇ ರೀತಿಯ ಘಟನೆ ಈಗ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿ ಹೆಂಡತಿ ತನಗೆ ಗೊತ್ತಿಲ್ಲದಂತೆ ಮೊಬೈಲ್ ಬಳಸಿದ ಎನ್ನುವ ಕಾರಣಕ್ಕೆ ಆಕೆಯನ್ನು ಕೊಂದ ಪತಿ ಬಳಿಕ ಶವವನ್ನು ಹಾಸಿಗೆಯಲ್ಲಿ ಸುತ್ತಿ ಮನೆಯ ಹಿಂದೆ ಹೂತು ಹಾಕಿದ್ದಾನೆ. ಬಳಿಕ ಪೊಲೀಸರ ದಾರಿ ತಪ್ಪಿಸಲು ಸಾಕಷ್ಟು ಕಥೆ ಹೆಣೆದು ಕೊನೆಗೆ ಸಿಕ್ಕಿಬಿದ್ದಿದ್ದಾನೆ.

Belagavi News: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲು

ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲು

children Drowns in canal: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ಘಟನೆ ನಡೆದಿದೆ. ಸದ್ಯ ಇಬ್ಬರು ಬಾಲಕರ ಶವಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಗಡೆ ತೆಗೆದಿದ್ದು, ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನುಮಾನದ ರೋಗ; ಮಕ್ಕಳೆದುರೇ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪಾಪಿ

ಮಕ್ಕಳೆದುರೇ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪಾಪಿ

ಪಾಪಿ ಪತಿಯೊಬ್ಬ ಮಕ್ಕಳ ಎದುರೇ ಪತ್ನಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ಹೈದರಾಬಾದ್‌ನ ನಲ್ಲಕುಂಟಾದಲ್ಲಿ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದೇ ವಿಷಯಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳವಾಗುತ್ತಿತ್ತು. ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದ್ದಾನೆ.

Murder Case: ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಪ್ರಿಯಕರನಿಂದ ಸ್ಟಾಫ್‌ ನರ್ಸ್‌ ಕೊಲೆ

ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಪ್ರಿಯಕರನಿಂದ ಸ್ಟಾಫ್‌ ನರ್ಸ್‌ ಕೊಲೆ

ಸುಧಾಕರ್‌ಗೆ ಇತ್ತೀಚೆಗೆ ಕುಟುಂಬಸ್ಥರು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದರು. ಈ ವಿಷಯ ತಿಳಿದ ಮಮತಾ, ಕೋಪಗೊಂಡು ತನ್ನನ್ನೇ ಮದುವೆಯಾಗಬೇಕು ಎಂದು ಒತ್ತಾಯಿಸಿದ್ದರು. ಅಷ್ಟೇ ಅಲ್ಲದೇ ತನ್ನನ್ನು ಬಿಟ್ಟು ಬೇರೆ ಮದುವೆಯಾದರೆ ತಾನು ಆತ್ಮಹತ್ಯೆ ಮಾಡಿಕೊಂಡು ಸುಧಾಕರ್ ಹಾಗೂ ಅವರ ಕುಟುಂಬವನ್ನು ಸಂಕಷ್ಟಕ್ಕೆ ಒಳಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

Loading...