ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ನೇಪಾಳ ಪ್ರವಾಹ: ಇನ್ಫೋಸಿಸ್ ಪಬ್ಲಿಕ್ ಸರ್ವೀಸಸ್ ಸಿಇಒ ಲಕ್ಷ್ ಗೋಪಿ ಸೆಟ್ಟಿ ನಾಪತ್ತೆ

ನೇಪಾಳದಲ್ಲಿ ಇನ್ಫೋಸಿಸ್ ಪಬ್ಲಿಕ್ ಸರ್ವೀಸಸ್ ಸಿಇಒ ನಾಪತ್ತೆ

Nepal flash flood: ನೇಪಾಳ ಪ್ರವಾಹದ ಬಳಿಕ ಭಾರತೀಯರು ಸೇರಿದಂತೆ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಇದರಲ್ಲಿ ಇನ್ಫೋಸಿಸ್ ಪಬ್ಲಿಕ್ ಸರ್ವೀಸಸ್ ಸಿಇಒ ಕೂಡ ಸೇರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಇನ್ಫೋಸಿಸ್ ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವೀಸಸ್ ಸಿಇಒ ಲಕ್ಷ್ ಗೋಪಿ ಸೆಟ್ಟಿ ನಾಪತ್ತೆಯಾಗಿರುವುದಾಗಿ ತಿಳಿಸಿದೆ.

ಮೂವರು ಸಹೋದರರ ಕೈಗೆ ರಾಖಿ ಕಟ್ಟುವ ಮುನ್ನವೇ ಚಿರನಿದ್ರೆಗೆ ಜಾರಿದ ಸಹೋದರಿ; ರಕ್ಷಾ ಬಂಧನದ ಮುನ್ನಾ ದಿನ ಘೋರ ದುರಂತ

ವರದಕ್ಷಿಣೆ ಕಿರುಕುಳದಿಂದ ರಾಖಿಕಟ್ಟುವ ಮುನ್ನ ಸಹೋದರಿಯ ಸಾವು

Raksha Bandhan: ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ರಕ್ಷಾಬಂಧನದ ಒಂದು ದಿನ ಮುನ್ನ 28 ವರ್ಷದ ಜಾಂಕೀ ಬಾಯಿ ಎಂಬ ವಿವಾಹಿತ ಮಹಿಳೆ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುತ್ತಿಗೆಯಲ್ಲಿ ಹಗ್ಗ ಹಾಗೂ ದೇಹದ ಮೇಲೆ ರಕ್ತದ ಗುರುತುಗಳು ಕಂಡುಬಂದಿವೆ. ಮಹಿಳೆಯ ತಂದೆ ಪತಿ ಹಾಗೂ ಅತ್ತೆ-ಮಾವನ ವಿರುದ್ಧ ಕೊಲೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರಿಗೆ ಎರಡು ವರ್ಷದ ಮಗಳಿದ್ದಾಳೆ.

Chikkanayakanahalli Accident: ಚಿಕ್ಕನಾಯಕನಹಳ್ಳಿಯ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರ ಸಾವು, ಮೂವರಿಗೆ ಗಾಯ

ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ನಾಲ್ವರ ಸಾವು, ಮೂವರಿಗೆ ಗಾಯ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆನ್‌ಲೈನ್‌ ಫುಡ್‌ ಡೆಲಿವರಿ ವಿಚಾರಕ್ಕೆ ವಾಗ್ವಾದ; ಸೆಕ್ಯುರಿಟಿ ಗಾರ್ಡ್‌ ಮೇಲೆ ಮಹಿಳೆಯಿಂದ ಹಲ್ಲೆ: ವಿಡಿಯೊ ವೈರಲ್‌

ಸೆಕ್ಯುರಿಟಿ ಗಾರ್ಡ್‌ ಮೇಲೆ ದೌರ್ಜನ್ಯ: ಮಹಿಳೆ ವರ್ತನೆ ವಿರುದ್ಧ ಕಿಡಿ

Viral Video: ಮಹಿಳೆಯೊಬ್ಬಳು ಸೆಕ್ಯೂರಿಟಿ ಗಾರ್ಡ್‌ ಜತೆ ವಾಗ್ವಾದ ನಡೆಸಿ ಹಲ್ಲೆ ಮಾಡಿರುವ ಅಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಬಿಸ್ರಾಖ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಗ್ರೇಟರ್ ನೋಯ್ಡಾ ವೆಸ್ಟ್‌ನಲ್ಲಿರುವ ಸೆಂಚುರಿಯನ್ ಪಾರ್ಕ್ ಟೆರೇಸ್ ಹೋಮ್ಸ್‌ನಲ್ಲಿ ಸಂಭವಿಸಿದ ಈ ಘಟನೆಯ ವಿಡಿಯೊ ವೈರಲ್‌ ಆಗಿದೆ. ಪೊಲೀಸರ ಪ್ರಕಾರ, ಮಹಿಳೆ ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡಿದ ನಂತರ ಈ ಘರ್ಷಣೆ ಪ್ರಾರಂಭವಾಗಿದೆ. ಡೆಲಿವರಿ ಸಿಬ್ಬಂದಿಯನ್ನು ಭದ್ರತಾ ಸಿಬ್ಬಂದಿ ಗೇಟ್‌ನಲ್ಲಿ ತಡೆದಿದ್ದಾರೆ ಎನ್ನುವ ಕಾರಣಕ್ಕೆ ಜಗಳ ಭುಗಿಲೆದ್ದಿದೆ.

ಸಾಕು ನಾಯಿಯೊಂದಿಗೆ ಜಗಳವಾಡಿದ ಬೀದಿ ನಾಯಿಯನ್ನು ಕೊಂದೇ ಬಿಟ್ಟ ಪಾಪಿ; ಶಿವಮೊಗ್ಗದಲ್ಲೊಂದು ಹೃದಯ ವಿದ್ರಾವಕ ಘಟನೆ

ಬೀದಿ ನಾಯಿಯನ್ನು ಕೊಂದ ವ್ಯಕ್ತಿಯ ಬಂಧನ

shivamogga crime: ಪರವಾನಿಗೆ ಇಲ್ಲದ ಬಂದೂಕಿನಿಂದ ಬೀದಿ ನಾಯಿಯನ್ನು ಕೊಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ಶುಕ್ರವಾರ ನಡೆದಿದೆ. ಸಾಗರ ತಾಲೂಕಿನ‌ ನಾಡವಳ್ಳಿ ಗ್ರಾಮದ ನಿವಾಸಿ ಲಿಂಗಮೂರ್ತಿ ಬಂಧಿತ ಆರೋಪಿಯ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಭೀಕರ ಬಸ್ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರ ಸಾವು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ; ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸಾವು

Madhya Pradesh Bus Accident: ಮಧ್ಯಪ್ರದೇಶದ ರಾಜ್‌ಗಢದ ಬಿಯೋರಾದ ಭೋಪಾಲ್ ಬೈಪಾಸ್‌ ರಸ್ತೆಯಲ್ಲಿ ಅಪಘಾತ ನಡೆದಿದೆ. ವೇಗವಾಗಿ ಸಾಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಸೈಬರ್ ವಂಚನೆ ಪ್ರಕರಣಗಳಲ್ಲಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆ ಬಳಕೆ: ಪೊಲೀಸ್ ನೋಟಿಸ್‌ಗೆ ಹೆದರಿ ಆತ್ಮಹತ್ಯೆ

ಪೊಲೀಸ್ ನೋಟಿಸ್‌ಗೆ ಹೆದರಿ ಮಹಿಳೆ ಆತ್ಮಹತ್ಯೆ

Woman Dies by Self-harming: ರಾಜಸ್ಥಾನದ ಚುರು ಸೈಬರ್ ಸೆಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಆಗಸ್ಟ್ 8 ರಂದು ಮಹಿಳೆಯ ಮನೆಗೆ ಭೇಟಿ ನೀಡಿದ್ದರು. ಅವರ ಬ್ಯಾಂಕ್ ಆಫ್ ಮಹಾರಾಷ್ಟ್ರ ಖಾತೆಯನ್ನು ಆನ್‌ಲೈನ್ ವಂಚನೆಗಾಗಿ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಅವರಿಗೆ ನೋಟಿಸ್ ನೀಡಿದ್ದರು.

ಪಾಕಿಸ್ತಾನದ ಐಎಸ್ಐ ಪರ ಬೇಹುಗಾರಿಕೆ; ದೆಹಲಿಯಲ್ಲಿ ಮುಸ್ಲಿಂ ದಂಪತಿ ಬಂಧನ

ಪಾಕಿಸ್ತಾನದ ಪರ ಬೇಹುಗಾರಿಕೆ; ದೆಹಲಿಯಲ್ಲಿ ದಂಪತಿ ಬಂಧನ

Espionage for Pakistan's ISI: ದೆಹಲಿ ಪೊಲೀಸರ ವಿಶೇಷ ಘಟಕವು ಪಾಕಿಸ್ತಾನದ ಐಎಸ್ಐ ಬೆಂಬಲಿತ ಬೇಹುಗಾರಿಕೆ ಜಾಲವನ್ನು ಭೇದಿಸಿದ್ದು, ಎರಡು ವರ್ಷಗಳಿಂದ ಈ ಜಾಲಕ್ಕೆ ಕೈ ಜೋಡಿಸಿದ್ದ ದಂಪತಿಯನ್ನು ಬಂಧಿಸಿದೆ. ಇವರು ಭಾರತೀಯ ಸಿಮ್ ಕಾರ್ಡ್‌ಗಳನ್ನು ಪಡೆದು, ಈ ಜಾಲದ ಬಳಕೆಗಾಗಿ ದುಬೈ ಮೂಲಕ ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಈದ್‌ ಸಂಘರ್ಷ:‌ 8 ಮಂದಿ ಸೆರೆ

ಈದ್‌ ಸಂಘರ್ಷ:‌ 8 ಮಂದಿ ಸೆರೆ

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆಯ ವೇಳೆ ಎರಡು ಕೋಮಿನ ಗುಂಪುಗಳ ನಡುವೆ ಗಲಾಟೆ ಸಂಬಂಧ ಪ್ರತ್ಯೇಕ ಮೂರು ಪ್ರಕರಣ ದಾಖಲಿಸಿಕೊಂಡಿರುವ ಬಸವನ ಗುಡಿ ಪೊಲೀಸರು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಬಸವನಗುಡಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಆಂಧ್ರ ಪ್ರದೇಶದಲ್ಲಿ ಆಟೋ ರಿಕ್ಷಾಕ್ಕೆ  ಡಿಕ್ಕಿ ಹೊಡೆದ ಬಸ್: 7 ಮಂದಿ ಸಾವು

ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಪಲ್ನಾಡು ಜಿಲ್ಲೆಯ ಕಲಾ ಮಂದಿರ ಜಂಕ್ಷನ್ ಬಳಿ ಆಟೋರಿಕ್ಷಾಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆ ಕುರಿತು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಆಘಾತ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಜಿಮ್‌ನಿಂದ ಹೊರ ಬರುತ್ತಿದ್ದ ಗಾಯಕ ಅಂಕಿತ್ ಬಲ್ಯಾನ್ ಮೇಲೆ ಗುಂಡಿನ ಮಳೆಗೆರೆದು ಹತ್ಯೆ; ಬೈಕ್‌ನಲ್ಲಿ ಪರಾರಿಯಾದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರಿಂದ ಕಾರ್ಯಾಚರಣೆ

ಗಾಯಕ, ಯುಟ್ಯೂಬರ್ ಅಂಕಿತ್ ಬಲ್ಯಾನ್ ಗುಂಡಿಕ್ಕಿ ಹತ್ಯೆ

Ankit Balyan Shot Dead: ಯುಟ್ಯೂಬರ್ ಮತ್ತು ಹರಿಯಾಣ್ವಿ ಗಾಯಕ ಅಂಕಿತ್ ಬಲ್ಯಾನ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಇದನ್ನು ಜಾಟ್ ಸಮುದಾಯದ ಮೇಲಿನ ದಾಳಿ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಾನ್ಪುರದಲ್ಲಿ ವಿಮಾನ ಅಪಘಾತ: ಇಬ್ಬರು ಪೈಲಟ್‌ಗಳ ದುರ್ಮರಣ

ವಿಮಾನ ಅಪಘಾತ: ಪೈಲಟ್‌ಗಳಿಬ್ಬರು ಸಾವು

Plane crash: ಉತ್ತರಪ್ರದೇಶದ ಕಾನ್ಪುರದಲ್ಲಿ ವಿಮಾನ ಅಪಘಾತವಾಗಿದ್ದು ಇಬ್ಬರು ಪೈಲೆಟ್ ಗಳು ಸಾವನ್ನಪ್ಪಿದ್ದಾರೆ. ಗಂಗಾ ನದಿಯ ದಡದ ಬಳಿಯ ಹೊಲದಲ್ಲಿ ಅವಳಿ ಎಂಜಿನ್ ತರಬೇತಿ ವಿಮಾನ ಗುರುವಾರ ಅಪಘಾತಕ್ಕೀಡಾಗಿದೆ. ಅಪಘಾತಕ್ಕೆ ಕಾರಣವೇನು ಎಂಬುದು ದೃಢಪಟ್ಟಿಲ್ಲ. ವಿಮಾನ ನಿಯಂತ್ರಣ ಕಳೆದುಕೊಂಡ ಭೂಮಿಗೆ ಅಪ್ಪಳಿಸಿದೆ ಎನ್ನಲಾಗಿದೆ.

Madikeri Accident: ಮಡಿಕೇರಿ ಬಳಿ ಪ್ರವಾಸಿಗರಿದ್ದ ಟಿಟಿ ಮೇಲೆ ಉರುಳಿದ ಲಾರಿ; 8 ಮಂದಿಗೆ ಗಾಯ

ಮಡಿಕೇರಿ ಬಳಿ ಪ್ರವಾಸಿಗರಿದ್ದ ಟಿಟಿ ಮೇಲೆ ಉರುಳಿದ ಲಾರಿ; 8 ಮಂದಿಗೆ ಗಾಯ

ಮಡಿಕೇರಿ ಬಳಿಯ ಸಂಪಾಜೆ ಸಮೀಪದ ಜೋಡುಪಾಲ ಅಬ್ಬಿಕೊಲ್ಲಿ ಜಲಪಾತದ ಬಳಿ ಈ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮಡಿಕೇರಿಯಿಂದ ಮಂಗಳೂರಿನತ್ತ ತೆರಳುತ್ತಿದ್ದರು. ರಸ್ತೆ ಬದಿ ಟಿಟಿ ನಿಂತಿದ್ದಾಗ ಲಾರಿ ಉರುಳಿ ಘಟನೆ ಸಂಭವಿಸಿದೆ.

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಟಾಟಾ ಏಸ್‌ಗೆ ಬೈಕ್ ಡಿಕ್ಕಿಯಾಗಿ ಮೂವರು ಸವಾರರ ದುರ್ಮರಣ

ಕೊಪ್ಪಳದಲ್ಲಿ ಟಾಟಾ ಏಸ್‌ಗೆ ಬೈಕ್ ಡಿಕ್ಕಿಯಾಗಿ ಮೂವರ ದುರ್ಮರಣ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಅಪಘಾತ ನಡೆದಿದೆ. ಈದ್ ಮಿಲಾದ್ ಸಂಭ್ರಮದಲ್ಲಿ ಭಾಗಿಯಾಗಲು ನೆರೆಯ ಗದಗ ಜಿಲ್ಲೆಯ ನರಗುಂದದಿಂದ ಕೊಪ್ಪಳಕ್ಕೆ ಯುವಕರು ತೆರಳುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್‌ ಡಿಕ್ಕಿ ಹೊಡೆದು, ದುರಂತ ಸಂಭವಿಸಿದೆ.

“ಪ್ರತಿಭೆ ಇದ್ದರೂ ಸಾಧನೆ ಸಾಧ್ಯವಾಗುತ್ತಿಲ್ಲ, ಅಮ್ಮ, ನನಗೆ ತುಂಬಾ ನೋವಾಗುತ್ತಿದೆ”: ತಾಯಿಗೆ ಕರೆ ಮಾಡಿ ಐಐಟಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು; ಅತಿಯಾದ ಸ್ಪರ್ಧೆ ಜೀವ ತೆಗೆಯಿತಾ?

ಅಮ್ಮ, ನನಗೆ ನೋವಾಗುತ್ತಿದೆ ಎಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

IIT Student Self-harming: 31 ವರ್ಷದ ಐಐಟಿ ದೆಹಲಿಯ (IIT Delhi) ಎಂಎಸ್ಸಿ ಫಿಸಿಕ್ಸ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಿಷಿಕೇಶ್ ಕುಮಾರ್ ಮೃತ ದುರ್ದೈವಿ. ತಾನು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವು ಗಂಟೆಗಳ ಮುನ್ನ ತಡರಾತ್ರಿ ತಾಯಿಗೆ ಕರೆ ಮಾಡಿ ಅತ್ಯಂತ ಭಾವುಕನಾಗಿ ಮನದಾಳದ ನೋವನ್ನು ತೋಡಿಕೊಂಡಿದ್ದ ಎನ್ನಲಾಗಿದೆ.

Gold smuggling: ಬಾಯಲ್ಲಿ 82 ಗ್ರಾಂ ತೂಕದ ಚಿನ್ನದ ಕ್ಯಾಪ್ಸುಲ್ ಕಳ್ಳ ಸಾಗಣೆ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕ ಅರೆಸ್ಟ್

ಬಾಯಲ್ಲಿ 82 ಗ್ರಾಂ ತೂಕದ ಚಿನ್ನದ ಕ್ಯಾಪ್ಸುಲ್: ಪ್ರಯಾಣಿಕ ಅರೆಸ್ಟ್

Bengaluru airport: ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಆರೋಪಿ, ಇಲ್ಲಿಂದ ಬೇರೆ ವಿಮಾನದ ಮೂಲಕ ಗಾಜಿಯಾಬಾದ್‌ಗೆ ತೆರಳಲು ಮುಂದಾಗಿದ್ದ. ಭದ್ರತಾ ತಪಾಸಣೆ ವೇಳೆ ಅನುಮಾನ ಮೂಡಿದ್ದರಿಂದ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ಬಾಯಿಯಲ್ಲಿ ಚಿನ್ನದ ಕ್ಯಾಪ್ಸುಲ್‌ ಇಟ್ಟುಕೊಂಡು ಸಾಗಿಸುತ್ತಿರುವುದು ಕಂಡುಬಂದಿದೆ.

ಎಚ್ಚರಿಕೆ ನೀಡಿದರೂ ರೈಲ್ವೆ ಹಳಿ ಬಳಿ ರೀಲ್ಸ್: ಟ್ರೈನ್ ಡಿಕ್ಕಿ ಹೊಡೆದು ಎರಡೂ ಕೈ ಕಳೆದುಕೊಂಡ 19 ವರ್ಷದ ಯುವತಿ

ರೈಲ್ವೆ ಹಳಿ ಬಳಿ ರೀಲ್ಸ್: ಕೈ ಕಳೆದುಕೊಂಡ ಯುವತಿ

Woman hit by train: 19 ವರ್ಷದ ಯುವತಿಯೊಬ್ಬಳು ರೈಲ್ವೆ ಹಳಿಯ ಬಳಿ ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿ ಹೊಡೆದಿದ್ದು, ಇದರಿಂದ ಎರಡೂ ಕೈಗಳು ತುಂಡಾಗಿವೆ. ದೇಹದ ಇತರ ಭಾಗಗಳಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸಂತ್ರಸ್ತೆಯನ್ನು ಪೂರ್ಣಿಮಾ ಕುಮಾರಿ ಎಂದು ಗುರುತಿಸಲಾಗಿದೆ.

Bomb threat: ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ; ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ!

Bengaluru airport: ಅನಾಮಧೇಯ ವ್ಯಕ್ತಿ ಬಾಂಬ್ ಬೆದರಿಕೆ ಹಾಕಿದ್ದು, ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್-1ರ ತೀವ್ರ ಭದ್ರತಾ ಪರಿಶೀಲನೆ ನಡೆಸಲಾಗಿದೆ. ಕೆಲ ದಿನಗಳ ಹಿಂದೆಯೂ ಇಂಥಹದ್ದೇ ಘಟನೆ ನಡೆದಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಹ್ಮದಾಬಾದ್​ಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​​ ಬೆದರಿಕೆ ಪತ್ರ ಬಂದಿತ್ತು. ಇದೀಗ ಮತ್ತೊಮ್ಮೆ ಬಾಂಬ್‌ ಬೆದರಿಕೆ ಬಂದಿರುವುದು ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

Dharwad Cylinder Blast: ಧಾರವಾಡದಲ್ಲಿ ಸಿಲಿಂಡರ್ ಸ್ಫೋಟದಿಂದ ಮನೆ ಛಿದ್ರ ಛಿದ್ರ; ಒಬ್ಬರ ಸ್ಥಿತಿ ಗಂಭೀರ!

ಧಾರವಾಡದಲ್ಲಿ ಸಿಲಿಂಡರ್ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ

Dharwad News: ಧಾರವಾಡದ ಜನ್ನತ್ ನಗರದಲ್ಲಿ ಘಟನೆ ನಡೆದಿದೆ. ಸಿಲಿಂಡರ್‌ ಸ್ಫೋಟದಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗೆ ಅಳವಡಿಸಿದ್ದ ಪೈಪ್ ತುಂಡಾಗಿ ಮನೆಯೊಳಗೆ ಅನಿಲ ಸೋರಿಕೆಯಾಗಿ, ದುರಂತ ಸಂಭವಿಸಿದೆ.

ವಿಜಯಪುರದ ಪ್ರಸಿದ್ಧ ಪ್ರವಾಸಿ ತಾಣ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮೃತದೇಹಗಳು ಪತ್ತೆ!

ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮೃತದೇಹಗಳು ಪತ್ತೆ

Crime News: ವಿಜಯಪುರ ನಗರದ ಹೊರವಲಯದಲ್ಲಿರುವ ಐತಿಹಾಸಿಕ ಪ್ರವಾಸಿ ತಾಣವಾದ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಆರು ಜನರ ಮೃತದೇಹಗಳು ಪತ್ತೆಯಾಗಿದೆ. ಮೃತರ ಪೈಕಿ ಐವರು ಅಪ್ರಾಪ್ತ ಮಕ್ಕಳು ಹಾಗೂ ಒಬ್ಬ ಮಹಿಳೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಎಸಿ ಕಂಪ್ರೆಸರ್ ಸ್ಫೋಟ: ಪಾಕಿಸ್ತಾನ ಆಸ್ಪತ್ರೆಯಲ್ಲಿ ಸುಟ್ಟು ಕರಕಲಾದ 15 ಶಿಶುಗಳು

ಎಸಿ ಕಂಪ್ರೆಸರ್ ಸ್ಫೋಟಗೊಂಡು ಪಾಕಿಸ್ತಾನದಲ್ಲಿ 15 ಶಿಶುಗಳು ಸಾವು

ಇಸ್ಲಾಮಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ 15 ನವಜಾತ ಶಿಶುಗಳು ಸುಟ್ಟು ಕರಕಲಾಗಿರುವ ಬುಧವಾರ ನಡೆದಿದೆ. ಎಸಿ ಕಂಪ್ರೆಸರ್ ಸ್ಫೋಟದಿಂದ ಈ ಘಟನೆ ನಡೆದಿದ್ದು,ಕೇವಲ ಒಂದು ನವಜಾತ ಶಿಶುವನ್ನು ಮಾತ್ರ ರಕ್ಷಿಸಲಾಗಿದೆ. ಬೆಂಕಿ ನಂದಿಸಲಾಗಿದ್ದು, ಸ್ಥಳದಲ್ಲಿ ತುರ್ತು ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀಶೈಲಂ ದೇವಾಲಯದ ವಸತಿ ಗೃಹದಲ್ಲಿ ಒಂದೇ ಕುಟುಂಬದ ಐವರು ಸಾವು: ಆತ್ಮಹತ್ಯೆ ಶಂಕೆ

ಒಂದೇ ಕುಟುಂಬದ ಐವರ ಸಾವು: ಆತ್ಮಹತ್ಯೆ ಶಂಕೆ

Crime news: ಒಂದೇ ಕುಟುಂಬದ ಐವರ ಮೃತದೇಹ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯ ಶ್ರೀಶೈಲಂ ದೇವಾಲಯದ ವಸತಿ ಗೃಹದಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಆತ್ಮಕೂರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ರಾಮಾಂಜಿ ನಾಯಕ್ ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ: ಕೆಎಸ್‌ಆರ್‌ಟಿಸಿ ಕಂಡಕ್ಟರ್ ವಿರುದ್ಧ ಮಹಿಳೆಯಿಂದ ದೂರು

ಕೆಎಸ್‌ಆರ್‌ಟಿಸಿ ಕಂಡಕ್ಟರ್ ವಿರುದ್ಧ ಮಹಿಳೆಯಿಂದ ದೂರು

ಚಿತ್ರದುರ್ಗ ಮೂಲದ ಕಾವೇರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾದಿಯಾಗಿ ಕೆಲಸ ಮಾಡು ತ್ತಿದ್ದು, ತರಬೇತಿಗಾಗಿ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್‌ನಲ್ಲಿ ಬಾಗೇಪಲ್ಲಿ ಮೂಲದ ಕೆಎಸ್‌ಆರ್‌ ಟಿಸಿ ಕಂಡಕ್ಟರ್‌ ಶ್ರೀನಾಥ್ ಪರಿಚಯವಾಗಿದ್ದ. ಕಳೆದ ಒಂದು ವರ್ಷದಿಂದ ಮದುವೆ ಯಾಗುವುದಾಗಿ ನಂಬಿಸಿ ತನ್ನೊಂದಿಗೆ ಸಂಬಂಧ ಬೆಳೆಸಿದ್ದಲ್ಲದೆ, ಕಷ್ಟದಲ್ಲಿರುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನ ಪಡೆದಿದ್ದಾರೆ ಎಂದು ಕಾವೇರಿ ಆರೋಪಿಸಿದ್ದಾರೆ

ಗಾಳಿಪಟ ಹಾರಿಸುತ್ತಾ ಚರಂಡಿಗೆ ಬಿದ್ದ ಬಾಲಕ; 4 ದಿನಗಳ ಬಳಿಕ ಮೃತದೇಹ ಪತ್ತೆ: ಕಸದ ರಾಶಿಯಲ್ಲಿ ಮಗನನ್ನು ಹುಡುಕುತ್ತಿದ್ದ ಮುಗ್ಧ ತಂದೆಯ ವಿಡಿಯೊ ವೈರಲ್‌

ಗಾಳಿಪಟ ಹಾರಿಸುವಾಗ ಚರಂಡಿಗೆ ಬಿದ್ದು ಬಾಲಕ ಸಾವು

Boy Falls into Drain: ದೆಹಲಿಯಲ್ಲಿ ತೆರೆದ ಚರಂಡಿಗೆ ಬಿದ್ದು ನಾಪತ್ತೆಯಾಗಿದ್ದ ನಾಲ್ಕು ದಿನಗಳ ನಂತರ ಇದೀಗ ಬಾಲಕನ ಮೃತದೇಹ ಪತ್ತೆಯಾಗಿದೆ. ಶನಿವಾರ (ಆಗಸ್ಟ್‌ 22) ಬೆಳಗ್ಗೆ ಗಾಳಿಪಟವನ್ನು ಹಾರಿಸುತ್ತಾ ಓಡುವಾಗ 15 ವರ್ಷದ ಬಾಲಕ ಮಿಥುನ್ ತೆರೆದ ಚರಂಡಿಗೆ ಬಿದ್ದಿದ್ದ. ನಾಲ್ಕು ದಿನಗಳಿಂದ ಬಾಲಕನಿಗಾಗಿ ಹುಡುಕಾಟ ನಡೆಯುತ್ತಿತ್ತು.

Loading...