ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ನಾಪತ್ತೆಯಾಗಿದ್ದ ವೃದ್ಧ ದಂಪತಿ ಮನೆಯಲ್ಲೇ ಶವವಾಗಿ ಪತ್ತೆ; ಜೋಡಿ ಕೊಲೆಗೆ ಬೆಚ್ಚಿಬಿದ್ದ ಸ್ಥಳೀಯರು

ನಾಪತ್ತೆಯಾಗಿದ್ದ ವೃದ್ಧ ದಂಪತಿ ಮನೆಯಲ್ಲೇ ಶವವಾಗಿ ಪತ್ತೆ!

Crime News: ನಾಪತ್ತೆಯಾಗಿದ್ದ ದಂಪತಿ ಶವವಾಗಿ ಪತ್ತೆಯಾದ ಆಘಾತಕಾರಿ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯ ಪೂನವಾಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 65 ವರ್ಷದ ಲಹ್ರಿ ಲಾಲ್ ಪಲಿವಾಲ್ ಮತ್ತು 62 ವರ್ಷದ ರಾಧಾ ದೇವಿ ಎಂದು ಪೊಲೀಸರು ಗುರುತಿಸಿದ್ದಾರೆ. ಪಲಿವಾಲ್ ಜೀವನೋಪಾಯಕ್ಕಾಗಿ ಹಾಲು ಮಾರಾಟ ಮಾಡುತ್ತಿದ್ದರು.

ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

Shivam Associates Scam: ಶಿವಂ ಅಸೋಸಿಯೇಟ್ಸ್ ಸಂಸ್ಥೆಯು ಕರ್ನಾಟಕ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ, ಗೋವಾ ಹಾಗೂ ಛತ್ತೀಸ್‌ಗಢ ರಾಜ್ಯಗಳಾದ್ಯಂತ ಪೋಂಜಿ ಶೈಲಿಯ ಸ್ಕೀಮ್‌ಗಳ ಮೂಲಕ ಸಾರ್ವಜನಿಕರಿಂದ ಅಕ್ರಮವಾಗಿ ಹೂಡಿಕೆ ಸಂಗ್ರಹಿಸಿರುವುದು ಪತ್ತೆಯಾಗಿದೆ. ಹೀಗಾಗಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ದೇಶ, ಪಂಜಾಬ್‌ನ  ಶಾಂತಿ ಬಯಸದ ಸಾಕಷ್ಟು ಶಕ್ತಿಗಳಿವೆ: ಗುಂಡಿನ ದಾಳಿ ಬಳಿಕ ಸುಖಬೀರ್ ಸಿಂಗ್ ಬಾದಲ್ ಮೊದಲ ಪ್ರತಿಕ್ರಿಯೆ

ಎಲ್ಲವೂ ದೇವರ ಕೈಯಲ್ಲಿದೆ, ನಾನೀಗ ಹೆದರುವುದಿಲ್ಲ: ಸುಖಬೀರ್ ಸಿಂಗ್ ಬಾದಲ್

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ದಾಳಿಯ ಬಳಿಕ ಮೊದಲ ಬಾರಿಗೆ ಮಾತನಾಡಿದ ಅಕಾಲಿ ದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ನನಗೆ ಯಾವುದೇ ಭಯವಿಲ್ಲ. ನಾನು ಪರಿಪೂರ್ಣನಾಗಿದ್ದೇನೆ. ಪಂಜಾಬ್ ಮತ್ತು ಈ ದೇಶದಲ್ಲಿರುವ ಬಹಳಷ್ಟು ಶಕ್ತಿಗಳು ಇಲ್ಲಿ ಶಾಂತಿಯನ್ನು ಬಯಸುತ್ತಿಲ್ಲ ಎಂದು ಹೇಳಿದರು.

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿಯ ದುರಂತ ಅಂತ್ಯ: ಮೈಸೂರಿನಲ್ಲಿ ಯುವತಿ, ಕೇರಳದಲ್ಲಿ ಯುವಕ ಆತ್ಮಹತ್ಯೆ!

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿ ದುರಂತ ಅಂತ್ಯ!

ಪ್ರೀತಿಸಿ ಮದುವೆಯಾಗಲು ಸಿದ್ಧಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣಾಗಿದೆ. ಡಿಸೆಂಬರ್‌ನಲ್ಲಿ ಈ ಜೋಡಿಯ ಮದುವೆ ನಡೆಯಬೇಕಿತ್ತು. ಆದರೆ, ಮದುವೆಗೂ ಕೆಲವೇ ತಿಂಗಳು ಬಾಕಿ ಇರುವಾಗ ಜೋಡಿಯ ಬದುಕು ದುರಂತದಲ್ಲಿ ಅಂತ್ಯವಾಗಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕೇರಳದಲ್ಲಿ ಯುವಕ ಸಾವಿಗೆ ಶರಣಾಗಿದ್ದಾನೆ.

ಬಿಹಾರದಲ್ಲಿ ಪೊಲೀಸರ ಮೇಲೆ ಜನರಿಂದ ಕಲ್ಲು ತೂರಾಟ: ಬಂಧಿಸಲ್ಪಟ್ಟಿದ್ದ ಅಪರಾಧಿ ಬಿಡುಗಡೆ

ಬಿಹಾರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ

ಶಸ್ತ್ರಾಸ್ತ್ರ ವ್ಯವಹಾರ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬೇಕಾಗಿರುವ ಅಪರಾಧಿಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಪೊಲೀಸರ ಮೇಲೆ ಸುಮಾರು 200 ಜನರ ತಂಡವೊಂದು ಕಲ್ಲು ತೂರಾಟ ನಡೆಸಿದೆ. ಇದರಿಂದ ಅಪರಾಧಿ ತಪ್ಪಿಸಿಕೊಂಡಿರುವುದಾಗಿ ಬಿಹಾರ ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.

ಸಿಎಂ ಸುವೇಂದು ಅಧಿಕಾರಿ ಎಚ್ಚರಿಕೆ ಹೊರತಾಗಿಯೂ ಕೋಲ್ಕತಾದಲ್ಲಿ ನೇತಾಜಿ ಪ್ರತಿಮೆ ಧ್ವಂಸ

ಕೋಲ್ಕತ್ತಾದ ನೇತಾಜಿ ಪ್ರತಿಮೆ ಧ್ವಂಸ

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎಚ್ಚರಿಕೆ ನೀಡಿದ್ದರೂ ಕೂಡ ಕಿಡಿಗೇಡಿಗಳು ದಕ್ಷಿಣ ಕೋಲ್ಕತ್ತಾದ ನ್ಯೂ ಅಲಿಪೋರ್ ಪ್ರದೇಶದ ಮೂರು-ಮಾರ್ಗ ಕ್ರಾಸಿಂಗ್ ಬಳಿ ಇರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಇದು ಈಗ ಸ್ಥಳೀಯರು ಮತ್ತು ರಾಜಕೀಯ ನಾಯಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಉತ್ತರಾಖಂಡದಲ್ಲಿ ಸುರಂಗದೊಳಗೆ ನುಗ್ಗಿದ ನೀರು: 7 ಮಂದಿ ಸಾವು, ಮೂವರು ಅಪಾಯದಲ್ಲಿ, ಹಲವರಿಗೆ ಗಾಯ

ಉತ್ತರಾಖಂಡದಲ್ಲಿ ಸುರಂಗದೊಳಗೆ ನೀರು ನುಗ್ಗಿ 7 ಮಂದಿ ಸಾವು

ಉತ್ತರಾಖಂಡದ ಚಮೋಲಿಯಲ್ಲಿ ಸುರಂಗದೊಳಗೆ ನೀರು ನುಗ್ಗಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುವಾರ ಸಂಜೆ 6.30 ರ ಸುಮಾರಿಗೆ ಜಲವಿದ್ಯುತ್ ಯೋಜನೆಗಾಗಿ ನಿರ್ಮಾಣ ಹಂತದಲ್ಲಿರುವ ಸುರಂಗದೊಳಗೆ ಭಾರಿ ಪ್ರಮಾಣದಲ್ಲಿ ಪ್ರವಾಹದ ನೀರು ನುಗ್ಗಿದೆ. ಇದರಲ್ಲಿ ಇನ್ನು ಮೂರು ಮಂದಿ ಸಿಲುಕಿಕೊಂಡಿದ್ದಾರೆ.

ಎಐಯ ಕರಾಳ ಮುಖ ಡೀಪ್‌ಫೇಕ್: ಬಲಿಯಾಗದಿರಲು ಈ ಟಿಪ್ಸ್‌ ಫಾಲೋ ಮಾಡಿ

ಎಐ ಡೀಪ್‌ಫೇಕ್‌ಗಳ ಬಗ್ಗೆ ಎಚ್ಚರ

Deepfakes: ಎಐ ತಂತ್ರಜ್ಞಾನದ ದುರ್ಬಳಕೆಯಿಂದ ಡೀಪ್‌ಫೇಕ್ ವಂಚನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಡಿಯೊ, ಆಡಿಯೊ ಮತ್ತು ಫೋಟೊಗಳನ್ನು ಪರಿಶೀಲಿಸದೆ ನಂಬಬಾರದು ಎಂದು ಸಿಬಿಐ ಹಾಗೂ ರಾಷ್ಟ್ರೀಯ ಸೈಬರ್ ಅಪರಾಧ ವರದಿ ಪೋರ್ಟಲ್ ಎಚ್ಚರಿಸಿದೆ. ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡದಿರುವುದು, ತುರ್ತು ಹಣ ವರ್ಗಾವಣೆ ತಪ್ಪಿಸುವುದು ಹಾಗೂ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ಪರಿಶೀಲಿಸುವುದು ಅಗತ್ಯ. ವಂಚನೆಗೆ ಒಳಗಾದರೆ ತಕ್ಷಣ 1930ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದು.

Bank manager dies: ಲಾಡ್ಜ್‌ನಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಸಾವು

Bank manager dies: ಲಾಡ್ಜ್‌ನಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಸಾವು

ಮಧು ತೇಜ್ ಸೋಮವಾರ ರಾತ್ರಿ ಸುಮಾರು 9.30ರ ವೇಳೆಗೆ ಲಾಡ್ಜ್‌ಗೆ ಆಗಮಿಸಿ, ತಾವು ಒಬ್ಬರೇ ಉಳಿದು ಬೆಳಗ್ಗೆ ಕೊಠಡಿ ಖಾಲಿ ಮಾಡುವುದಾಗಿ ತಿಳಿಸಿ ಕೊಠಡಿ ಪಡೆದಿದ್ದರು. ಆದರೆ ಮರುದಿನ ಬೆಳಗ್ಗೆಯಿಂದ ಕೊಠಡಿಯಿಂದ ಯಾವುದೇ ಚಲನವಲನ ಕಂಡುಬರದ ಹಿನ್ನೆಲೆಯಲ್ಲಿ ಲಾಡ್ಜ್ ಸಿಬ್ಬಂದಿ ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಂದಿರ ಲಿಲ್ಲ.

ಸ್ಯಾಂಡಲ್‌ವುಡ್‌ ನಟಿಯ ಸಹೋದರಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಕನ್ನಡದ ನಟಿಯ ಸಹೋದರಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತ ಯುವತಿ ನೀಡಿದ್ದ ದೂರಿನ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇನ್ನು ಆರೋಪಿಯು ಕೂಡ ನಟಿಯ ಸಹೋದರಿ ವಿರುದ್ಧ ಬೆಂಗಳೂರಿನ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾನೆ. ತನಗೆ ಹಾಗೂ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಏರ್ ಇಂಡಿಯಾ ವಿಮಾನ ಟರ್ಬುಲೆನ್ಸ್‌ಗೆ ಕಾರಣ ಪತ್ತೆ: ಮಾದಕ ದ್ರವ್ಯ ಸೇವಿಸಿದ್ದ ಪೈಲಟ್; ಇನ್ಮುಂದೆ ಇನ್ನಷ್ಟು ಬಿಗಿಯಾಗಲಿದೆ ನಿಯಮ

ಗಾಂಜಾ ಸೇವಿಸಿದ್ದ ಏರ್ ಇಂಡಿಯಾ ವಿಮಾನ ಪೈಲಟ್

ಥೈಲ್ಯಾಂಡ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಇತ್ತೀಚೆಗೆ ಪ್ರಕ್ಷುಬ್ಧತೆಗೆ ಗುರಿಯಾಗಿದ್ದ ಪ್ರಕರಣದ ಕುರಿತು ತನಿಖೆ ವೇಳೆಯಲ್ಲಿ ವಿಮಾನದ ಪೈಲೆಟ್ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ. ಈ ಘಟನೆಯಲ್ಲಿ ವಿಮಾನವು ಸುಮಾರು 300 ಅಡಿಗಳಷ್ಟು ಕುಸಿದಿದ್ದು, 12 ಪ್ರಯಾಣಿಕರು ಗಾಯಗೊಂಡಿದ್ದರು.

200 ರುಪಾಯಿಯ ಮೀನು ಊಟಕ್ಕೆ 300 ರುಪಾಯಿ ಬಿಲ್: ರಣರಂಗವಾಯ್ತು ಹೋಟೆಲ್‌; ಗ್ರಾಹಕ- ಸಿಬ್ಬಂದಿಯ ಮಾರಾಮಾರಿಯ ವಿಡಿಯೊ ವೈರಲ್‌

200 ರುಪಾಯಿಯ ಊಟಕ್ಕೆ 300 ರುಪಾಯಿ ಬಿಲ್; ಮುಂದೇನಾಯ್ತು?

Viral News: ಹೋಟೆಲ್‌ಗೆ ಬಂದ ಗ್ರಾಹಕರಿಗೆ ಮೀನಿನ ಖಾದ್ಯ ಆರ್ಡರ್ ಮಾಡುವಾಗ 200 ರುಪಾಯಿ ಎಂದು ಹೇಳಲಾಗಿತ್ತು. ಆದರೆ ಊಟ ಮುಗಿಸಿ ಬಿಲ್ ನೋಡಿದಾಗ 300 ರುಪಾಯಿ ಎಂದು ನಮೂದಿಸಲಾಗಿತ್ತು. ಇದರಿಂದ ಕೆರಳಿದ ಗ್ರಾಹಕ ಹೋಟೆಲ್‌ ಸಿಬ್ಬಂದಿ ಜತೆ ಜಗಳ ಆರಂಭಿಸಿದ್ದಾನೆ. ಘಟನೆಯಲ್ಲಿ ಹಲವು ಮಂದಿ ಜನರು ಗಾಯಗೊಂಡಿದ್ದು, ಪೀಠೋಪಕರಣಗಳು ಹಾನಿಗೊಳಗಾಗಿವೆ.

ಕೋಲ್ಕತಾ ಆರ್‌ಜಿಕರ್ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ:  ಟಿಎಂಸಿ ಮಾಜಿ ಶಾಸಕ ನಿರ್ಮಲ್ ಘೋಷ್ ಬಂಧನ

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಟಿಎಂಸಿ ಮಾಜಿ ಶಾಸಕನ ಬಂಧನ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಮಾಜಿ ಶಾಸಕ ನಿರ್ಮಲ್ ಘೋಷ್ ಅವರನ್ನು ಬಂಧಿಸಲಾಗಿದೆ. ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024ರಲ್ಲಿ ನಡೆದ ವಿದ್ಯಾರ್ಥಿನಿಯೊಬ್ಬಳ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅವರ ಬಂಧನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್-ಖೈದಾಗೆ ಸೇರಿದ ಭಯೋತ್ಪಾದಕ ಸಂಘಟನೆಯಿಂದ 2025ರಲ್ಲಿ ಕೆಂಪು ಕೋಟೆ ಸ್ಫೋಟ; ವಿಶ್ವಸಂಸ್ಥೆಯ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಅಂಶ

ಅಲ್-ಖೈದಾ ಸಂಬಂಧಿತ ಗುಂಪಿನಿಂದ ಕೆಂಪು ಕೋಟೆ ಸ್ಫೋಟ

Delhi Red Fort Blast Case: 2025ರ ನವೆಂಬರ್‌ನಲ್ಲಿ ದೆಹಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಮೃತಪಟ್ಟಿದ್ದರು. ಉಗ್ರ ಸಂಘಟನೆ ಅಲ್‌ಖೈದಾಕ್ಕೆ ಸೇರಿದ ಗುಂಪಿನಿಂದ ಈ ದಾಳಿ ನಡೆದಿತ್ತು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮೇಲ್ವಿಚಾರಣಾ ತಂಡ ತಿಳಿಸಿದೆ.

70 ಲಕ್ಷ ರುಪಾಯಿ ಲಂಚ, ಸಂದರ್ಶನದಲ್ಲೂ ಪ್ರಭಾವ; ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ ನೇಮಕಾತಿ ಅಕ್ರಮ ಒಂದೊಂದಾಗಿ ಬಯಲಿಗೆ

ಜಾರ್ಖಂಡ್‌ ಪರೀಕ್ಷೆ ಹಗರಣದ ಕರ್ಮಕಾಂಡ ಬಿಚ್ಚಿಟ್ಟ ಬಂಧಿತ ಅಧಿಕಾರಿ

JPSC Exam Scam: ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆ ತೀವ್ರಗೊಳ್ಳುತ್ತಿದ್ದಂತೆ, ಬಂಧಿತ ಆರೋಪಿಯೋರ್ವ ನೇಮಕಾತಿ ದಂಧೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯದ ಅಪರಾಧ ತನಿಖಾ ಇಲಾಖೆ ಇದುವರೆಗೆ 20 ಜನರನ್ನು ಬಂಧಿಸಿದೆ.

UP ATS Raid in Kalaburagi: ಪಾಕಿಸ್ತಾನದ ಜತೆ ಸಂಪರ್ಕ ಶಂಕೆ: ಕಲಬುರಗಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶದ ಎಟಿಎಸ್

ಪಾಕಿಸ್ತಾನದ ಜತೆ ಸಂಪರ್ಕ ಶಂಕೆ: ಕಲಬುರಗಿಯಲ್ಲಿ ಇಬ್ಬರು ಎಟಿಎಸ್‌ ವಶಕ್ಕೆ

Kalaburagi News: ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಉತ್ತರ ಪ್ರದೇಶ ಎಟಿಎಸ್ ತಂಡ ಕಲಬುರಗಿಯಲ್ಲಿ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ. ಉತ್ತರ ಪ್ರದೇಶದ ನಿವಾಸಿ ವಿಳಾಸ ಹೊಂದಿರುವ ಸಮೀರ್ ಸಲ್ಮಾನ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಅಮೆರಿಕದಲ್ಲಿ ತಾಯಿ, ಸಹೋದರನನ್ನು ಕೊಂದ ಭಾರತೀಯ ಮೂಲದ ಅಪ್ರಾಪ್ತ

ಭಾರತೀಯ ಮೂಲದ ಅಪ್ರಾಪ್ತನಿಂದ ಅಮೆರಿಕದಲ್ಲಿ ತಾಯಿ, ಸಹೋದರನ ಕೊಲೆ

ಅಮೆರಿಕದಲ್ಲಿ ಹದಿಹರೆಯದ ಯುವಕನೊಬ್ಬ ತನ್ನ ತಾಯಿ ಮತ್ತು ಸಹೋದರನನ್ನು ಕೊಂದು ಪರಾರಿಯಾಗಿದ್ದು, ಬಳಿಕ ಆತನನ್ನು ಬಂಧಿಸಲಾಗಿದೆ. ಸ್ಥಳೀಯ ಪ್ರಾದೇಶಿಕ ಪ್ರೌಢಶಾಲೆ ಆಕ್ಟನ್-ಬಾಕ್ಸ್‌ಬರೋದ ವಿದ್ಯಾರ್ಥಿಯಾಗಿದ್ದ ಅರ್ಜುನ್ ಅರವಿಂದ್ ಎಂಬಾತ ಮಂಗಳವಾರ ತನ್ನ ತಾಯಿ ಮತ್ತು ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದನು.

ನಾಪತ್ತೆಯಾಗಿ 6 ದಿನ ಕಳೆದರೂ ಟೆಕ್ಕಿ ಅದ್ವೈತ್‌ ಸುಳಿವಿಲ್ಲ: ಶಿವಗಂಗೆ ಬೆಟ್ಟದ ನೆರಳಲ್ಲಿ ನಡೆಯಿತಾ ಹೈಟೆಕ್ ಎಸ್ಕೇಪ್ ಪ್ಲ್ಯಾನ್?

ಆರು ದಿನಗಳಿಂದ ನಾಪತ್ತೆಯಾಗಿರುವ ಇಂದೋರ್ ಟೆಕ್ಕಿ

ಚಾರಣಕ್ಕೆಂದು ಹೋಗಿದ್ದ ಇಂದೋರ್ ವ್ಯಕ್ತಿ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಬೇಗೂರು ನಿವಾಸಿ, ಇಂದೋರ್ ಮೂಲದ ಟೆಕ್ಕಿ ಅದ್ವೈತ್ ಉಪಾಧ್ಯಾಯ (31) ನಾಪತ್ತೆಯಾದವರು. ಶಿವಗಂಗೆಗೆ ಏಕಾಂಗಿಯಾಗಿ ಚಾರಣ ಹೋಗುವುದಾಗಿ ಅವರು ತಮ್ಮ ಸ್ನೇಹಿತರ ಬಳಿ ತಿಳಿಸಿದ್ದರು. ಆಗಸ್ಟ್ 7 ರಂದು ಅವರು ಚಾರಣಕ್ಕೆ ಹೊರಟ್ಟಿದ್ದು, ಬಳಿಕ ನಾಪತ್ತೆಯಾಗಿದ್ದಾರೆ.

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ಸೆಕ್ಯೂರಿಟಿ ಗಾರ್ಡ್‌ನ ಕೊಂದು, 83 ಲಕ್ಷ ದೋಚಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೀದರ್ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಬಿಹಾರದ ವೈಶಾಲಿ ಜಿಲ್ಲೆಯ ಧಾಮೋದರ್ ಎಂಬ ಗ್ರಾಮದಲ್ಲಿ ಇಬ್ಬರು ಆರೋಪಿಗಳನ್ನು ಬೀದರ್‌ ಪೊಲೀಸರು ಬಂಧನ ಮಾಡಿದ್ದಾರೆ. ಪ್ರಕರಣ ನಡೆದ 1 ವರ್ಷ 7 ತಿಂಗಳ ಬಳಿಕ ದರೋಡೆಕೋರರ ಬಂಧನವಾಗಿದೆ. ಸದ್ಯ ದರೋಡೆಕೋರರನ್ನು ಪೊಲೀಸರು ಬೀದರ್‌ಗೆ ಕರೆತರುತ್ತಿದ್ದಾರೆ‌‌‌‌.

ಚಿಂತಾಮಣಿ ಬಳಿ ಭೀಕರ ಅಪಘಾತ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮೃತರನ್ನು ಆಂಧ್ರಪ್ರದೇಶದ ಮದನಪಲ್ಲಿ ನಿವಾಸಿ ಕೆಂಚಲ್ಲ ಮಧು ನಾಯ್ಡು (28) ಎಂದು ಗುರುತಿಸ ಲಾಗಿದೆ. ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾ ಗಿದ್ದು, ಸವಾರ ಗಂಭೀರವಾಗಿ ಮೃತಪಟ್ಟಿದ್ದಾರೆ.

Fact Check: ಬಾಕಿ ತೆರಿಗೆ ಪಾವತಿಸುವಂತೆ ನಿಮಗೂ ಮೆಸೇಜ್ ಬಂದಿದೆಯಾ? 6,000 ರುಪಾಯಿ ನೋಟಿಸ್‌ ಕುರಿತು ಕೇಂದ್ರದಿಂದ ಎಚ್ಚರಿಕೆ

6,000 ರುಪಾಯಿ ತೆರಿಗೆ ನೋಟಿಸ್ ನಕಲಿ: PIB Fact Check ಸ್ಪಷ್ಟನೆ

PIB Fact Check: ಆದಾಯ ತೆರಿಗೆ ಇಲಾಖೆಯ ಹೆಸರಿನಲ್ಲಿ 6,000 ರುಪಾಯಿ ತೆರಿಗೆ ಬಾಕಿ ಪಾವತಿಸುವಂತೆ ಹರಿದಾಡುತ್ತಿರುವ ನೋಟಿಸ್ ನಕಲಿ ಎಂದು PIB Fact Check ಸ್ಪಷ್ಟಪಡಿಸಿದೆ. ಇಂತಹ ಸಂದೇಶಗಳಲ್ಲಿರುವ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಹಾಗೂ ವೈಯಕ್ತಿಕ ಅಥವಾ ಬ್ಯಾಂಕಿಂಗ್ ಮಾಹಿತಿಯನ್ನು ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಸೇನೆ, ಗಡಿ ಭದ್ರತಾ ಪಡೆ, ರೈಲ್ವೆ ಬಗ್ಗೆ ಬೇಹುಗಾರಿಕೆ: ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನದ ವ್ಯಕ್ತಿಯ ಬಂಧನ

ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ

ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಜೊತೆ ಸಂಪರ್ಕ ಹೊಂದಿದ್ದ ಪಾಕಿಸ್ತಾನ ಮೂಲದ ವ್ಯಕ್ತಿಯೊಬ್ಬನನ್ನು ಪಶ್ಚಿಮ ಬಂಗಾಳದಲ್ಲಿ ವಿಶೇಷ ಕಾರ್ಯಪಡೆ ಅಧಿಕಾರಿಗಳು ಬಂಧಿಸಿದ್ದಾರೆ. ನಕಲಿ ದಾಖಲೆಗಳನ್ನು ಬಳಸಿ ಆತ ಭಾರತದಲ್ಲಿ ಹಲವು ವರ್ಷಗಳಿಂದ ಸೇನೆ, ಗಡಿ ಭದ್ರತಾ ಪಡೆ, ರೈಲ್ವೆ ಬಗ್ಗೆ ಬೇಹುಗಾರಿಕೆ ನಡೆಸುತ್ತಿದ್ದ ಎನ್ನಲಾಗಿದೆ.

ಭೂಕುಸಿತ: ಮುಂಬೈನ ಕುರ್ಲಾದಲ್ಲಿ ಇಬ್ಬರು ಸಾವು, ನಾಲ್ಕೈದು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಭೂಕುಸಿತದಿಂದ ಮುಂಬೈನಲ್ಲಿ ಇಬ್ಬರು ಸಾವು

ಮುಂಬೈನ ಕುರ್ಲದಲ್ಲಿ ಬುಧವಾರ ಬೆಳಗ್ಗೆ ಭೂಕುಸಿತ ಉಂಟಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಮಾರು ನಾಲ್ಕೈದು ಮಂದಿ ಒಳಗೆ ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಾಟ್ಕೋಪರ್‌ನ ಚಿರಾಗ್ ನಗರದ ಗೌಶಿಯಾ ಚಾಲ್‌ನಲ್ಲಿ ಭೂಕುಸಿತ ಸಂಭವಿಸಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಅಗ್ನಿಶಾಮಕ ದಳ ತಿಳಿಸಿದೆ.

Telangana Accident: ತೆಲಂಗಾಣದಲ್ಲಿ ಭೀಕರ ಅಪಘಾತ; ಆಟೋಗೆ ಪೆಟ್ರೋಲ್‌ ಟ್ಯಾಂಕರ್‌ ಡಿಕ್ಕಿಯಾಗಿ ಬೀದರ್‌ ಮೂಲದ 7 ಕೃಷಿ ಕಾರ್ಮಿಕರ ದುರ್ಮರಣ

ತೆಲಂಗಾಣದಲ್ಲಿ ಭೀಕರ ಅಪಘಾತ; ಬೀದರ್‌ನ 7 ಕೃಷಿ ಕಾರ್ಮಿಕರ ದುರ್ಮರಣ

ಭೀಕರ ಅಪಘಾತಕ್ಕೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

Loading...