ಆಟೋ ಪಕ್ಕಕ್ಕೆ ಹಾಕು ಎಂದಿದ್ದಕ್ಕೆ ಸಹೋದರರ ಮೇಲೆ ಹಲ್ಲೆ
ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳಾದ ತೋಟೆಂದ್ರ ಮತ್ತು ಸುನೀಲ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ತೆಗೆಯಲು ಹೇಳಿದ್ದಕ್ಕೆ ಸಹೋದರರ ಮೇಲೆ ದಾಳಿ ನಡೆದಿದೆ.