ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಮಗಳನ್ನು ಬೈದ ಎಂದು ಅಳಿಯ ಮೇಲೆ ಹಲ್ಲೆ ನಡೆಸಿ ಕೊಂದ ಮಾವ; ಸಹೋದರರು ಸಾಥ್‌!

ಮಗಳನ್ನು ಬೈದ ಎಂದು ಅಳಿಯನನ್ನೇ ಕೊಲೆ ಮಾಡಿದ ಮಾವ

ಕ್ಷುಲಕ ಕಾರಣಕ್ಕೆ ಮಾವ ಹಾಗೂ ಆತನ ಕುಟುಂಬಸ್ಥರು ಅಳಿಯನ್ನು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 31 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ವಿನಯ್‌ ಗುಪ್ತಾ ಎಂದು ಗುರುತಿಸಲಾಗಿದೆ. ವಿನಯ್ ಗುಪ್ತಾ ಮತ್ತು ಅವರ ಪತ್ನಿ ರೇಖಾ ನಡುವೆ ಮಗುವಿಗೆ ಔಷಧಿ ನೀಡುವ ಬಗ್ಗೆ ವಾಗ್ವಾದ ನಡೆದಿತ್ತು. ಈ ಸಂಬಂಧ ಕೊಲೆಯಾಗಿದೆ.

Accident: ಹಬ್ಬದ ಸಾಮಗ್ರಿ ಖರೀದಿಸಲು ಬಂದಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಇಬ್ಬರ ಸಾವು

ಮಹಾಲಕ್ಷ್ಮಿ ಹಬ್ಬದ ದಿನವೇ ತಾಯಿ–ಮಗನ ದಾರುಣ ಅಂತ್ಯ

ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಮೂಲದ ನಾಗಮಣಿ (35) ಹಾಗೂ ಅವರ ಪುತ್ರ ಗಗನ್ (14) ಮೃತರು. ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಪೂಜೆ ಹಾಗೂ ಆಚರಣೆಗೆ ಅಗತ್ಯವಾದ ಸಾಮಗ್ರಿಗಳನ್ನು ಖರೀದಿಸಲು ನಗರಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಂಬೇಡ್ಕರ್ ವೃತ್ತದ ಬಳಿ ತಾಯಿ–ಮಗ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅವರ ಮೇಲೆ ಹರಿದಿದೆ. ಘಟನೆಯಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ ಎನ್ನಲಾಗಿದೆ

ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ ತರಲು ಹೊರಟ ವ್ಯಕ್ತಿ ಹೆಂಡತಿಯ ಕಣ್ಣೆದುರೇ ದುರಂತ ಅಂತ್ಯ

ಟಿಪ್ಪರ್ ಲಾರಿಗಳ ಅಟ್ಟಹಾಸಕ್ಕೆ ಮತ್ತೊಂದು ಬಲಿ

ವೆಂಕಟೇಶ್ (58) ಮೃತ ದುರ್ದೈವಿ. ಪೆರೇಸಂದ್ರದಿಂದ ಚಿಕ್ಕಬಳ್ಳಾಪುರದ ಕಡೆಗೆ ಪತ್ನಿಯೊಂದಿಗೆ ಎಪೆ ಆಟೋದಲ್ಲಿ ಬರುತ್ತಿದ್ದ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತ ದ ತೀವ್ರತೆಗೆ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಪತ್ನಿಯ ಕಣ್ಣೆದುರೇ ನೋವಿನಿಂದ ನರಳಾಡುತ್ತಿದ್ದರು ಎನ್ನಲಾಗಿದೆ.

Yadgir News: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಬಾಲಕಿಗೆ ಲೈಂಗಿಕ ಕಿರುಕುಳ; ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಕೇಸ್‌

ಯಾದಗಿರಿ ಜಿಲ್ಲೆಯ ಸಕ್ರ್ಯ ನಾಯಕ ತಾಂಡಾ ನಿವಾಸಿ ಹಾಗೂ ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chitradurga Bus Accident: ಚಿತ್ರದುರ್ಗದ ಬಳಿ ಭೀಕರ ಅಪಘಾತ; ಪ್ರವಾಸಿ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, 26 ಮಂದಿಗೆ ಗಾಯ

ಚಿತ್ರದುರ್ಗದ ಬಳಿ ಪ್ರವಾಸಿ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, 26 ಮಂದಿಗೆ ಗಾಯ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಬಸ್‌ ಅಪಘಾತ ನಡೆದಿದೆ. ಬಸ್​​ನಲ್ಲಿ ಗೋವಾಕ್ಕೆ ತೆರಳುತ್ತಿದ್ದವರು ಬೆಂಗಳೂರಿನ ಯುನಿವರ್ಸಲ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಅಪಘಾತದಲ್ಲಿ ಬಸ್‌ ಚಾಲಕ ಮತ್ತು ಕ್ಲೀನರ್‌ ಮೃತಪಟ್ಟಿದ್ದಾರೆ.

ಶಿಗ್ಗಾವಿಯ ಆಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ; ಮುಸ್ಲಿಂ ಯುವಕ ಅರೆಸ್ಟ್‌

ಶಿಗ್ಗಾವಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ ಮುಸ್ಲಿಂ ಯುವಕ!

ಆರೋಪಿಯು ಮದ್ಯದ ಅಮಲಿನಲ್ಲಿ ಆಂಜನೇಯ ದೇವಸ್ಥಾನದೊಳಗೆ ತೆರಳಿ ಮಲಗಿದ್ದಲ್ಲದೆ, ದೇವರ ಮೂರ್ತಿಯ ಎದುರು ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನವನ್ನು ಅಪವಿತ್ರಗೊಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮಕ್ಕಳಿಲ್ಲದ ಮಹಿಳೆಗೆ ಆಶೀರ್ವಾದ ಮಾಡುವುದಾಗಿ ಮಂಗಳಮುಖಿಯಂತೆ ನಟಿಸಿ ಫ್ಲಾಟ್ ಗೆ  ನುಗ್ಗಿ  ಅತ್ಯಾಚಾರವೆಸಗಿದ ಕಾಮುಕ

ಮಂಗಳಮುಖಿಯಂತೆ ನಟಿಸಿ ಮಹಿಳೆ ಮೇಲೆ ಅತ್ಯಾಚಾರ

ಮಕ್ಕಳಿಲ್ಲದ ಮಹಿಳೆಗೆ ಆಶೀರ್ವಾದ ಮಾಡುವುದಾಗಿ ಬುಧವಾರ ಮಂಗಳಮುಖಿಯಂತೆ ನಟಿಸಿ ಬಂದ ವ್ಯಕ್ತಿಯೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿ, 2,000 ರೂಪಾಯಿಯನ್ನು ಕಸಿದುಕೊಂಡು ಪರಾರಿಯಾಗಿದ್ದ ಘಟನೆ ಮುಂಬೈಯಲ್ಲಿ ನಡೆದಿದೆ. ಆರೋಪಿಯನ್ನು ಅನಿಲ್ ಶಿಂಧೆ (30) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ದಿನವೇ ರಾತ್ರಿ ಬಂಧಿಸಲಾಗಿದೆ.

ಸಂಸದ  ಲಿಂಗಮನೇನಿ ರಮೇಶ್ ಪುತ್ರ ಚಲಾಯಿಸುತ್ತಿದ್ದ ಕಾರು ಡಿಕ್ಕಿ: ಮಹಿಳೆ ಸಾವು

ಸಂಸದರ ಪುತ್ರ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿ ಮಹಿಳೆ ಸಾವು

ವೇಗವಾಗಿ ಬಂದ ಕಾರೊಂದು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕಾರನ್ನು ಸಂಸದ ಲಿಂಗಮನೇನಿ ರಮೇಶ್ ಅವರ ಪುತ್ರ ಲಿಂಗಮನೇನಿ ಸಂಜುಶ್ (21) ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಈವರೆಗೆ ಬಂಧಿಸಲಾಗಿಲ್ಲ ಎಂದು ಮಾಧಾಪುರದ ಸಹಾಯಕ ಪೊಲೀಸ್ ಆಯುಕ್ತ ಸಿ.ಎಚ್. ​​ಶ್ರೀಧರ್ ತಿಳಿಸಿದ್ದಾರೆ.

ನಿಷೇಧಿತ ವಸ್ತು ಸೇವಿಸಿ ಹದಿಹರೆಯದ ಬಾಲಕ ಸಾವು: ಮೀಶೋ ವಿರುದ್ಧ ಎಫ್‌ಐಆರ್ ದಾಖಲು

ನಿಷೇಧಿತ ವಸ್ತು ಸೇವಿಸಿ ಬಾಲಕ ಸಾವು: ಮೀಶೋ ವಿರುದ್ಧ ಎಫ್‌ಐಆರ್

Teenager dies: 12ನೇ ತರಗತಿಯ ವಿದ್ಯಾರ್ಥಿಯೊಬ್ಬ ನಿಷೇಧಿತ ವಸ್ತುವನ್ನು ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇ-ಕಾಮರ್ಸ್ ವೇದಿಕೆ ಮೀಶೋ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಸಮಯದಲ್ಲಿ ಹದಿಹರೆಯದ ಬಾಲಕ, ಮೀಶೋದಿಂದ ವಿಷಕಾರಿ ವಸ್ತುವನ್ನು ಆರ್ಡರ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಯೆಮೆನ್, ಸೊಮಾಲಿಯಾ ಕರಾವಳಿ ಭಾಗದಲ್ಲಿ 22 ಭಾರತೀಯರಿದ್ದ 2 ಹಡಗು ಅಪಹರಿಸಿದ ಕಡಲ್ಗಳ್ಳರು

ಭಾರತೀಯರಿದ್ದ ಎರಡು ಹಡಗು ಅಪಹರಣ

ಎರಡು ಪ್ರತ್ಯೇಕ ಘಟನೆಯಲ್ಲಿ 22 ಭಾರತೀಯರಿದ್ದ ಹಡಗಳನ್ನು ಕಡಲ್ಗಳ್ಳರು ಅಪಹರಣ ನಡೆಸಿದ್ದಾರೆ. ಯೆಮೆನ್ ಮತ್ತು ಸೊಮಾಲಿಯಾ ಬಳಿ ಈ ಘಟನೆ ನಡೆದಿದೆ. ಎರಿಟ್ರಿಯಾ ಧ್ವಜ ಹೊಂದಿದ್ದ ತೈಲ ಉತ್ಪನ್ನಗಳ ಟ್ಯಾಂಕರ್ ಎಂ.ಟಿ. ಸಿಬು 1 ಮತ್ತು ಕ್ಯಾಮರೂನ್ ಧ್ವಜ ಹೊಂದಿದ್ದ ಸರಕು ಹಡಗು ಎಂ/ವಿ ಲುಟುಫ್ ಹಡಗಳನ್ನು ಕಡಲ್ಗಳ್ಳರು ಅಪಹರಿಸಿದ್ದಾರೆ ಎನ್ನಲಾಗಿದೆ.

ಬಾಳೆಹಣ್ಣಿಗೂ ವಿಷ! ಉಡುಪಿಯಲ್ಲಿ ಅಕ್ರಮ ಬಾಳೆಹಣ್ಣು ಮಾಗಿಸುವ ಘಟಕಗಳ ಮೇಲೆ ಅಧಿಕಾರಿಗಳಿಂದ ದಾಳಿ

ಅಕ್ರಮ ಬಾಳೆಹಣ್ಣು ಮಾಗಿಸುವ ಘಟಕಗಳ ಮೇಲೆ ಅಧಿಕಾರಿಗಳಿಂದ ದಾಳಿ

illegal banana ripening units: ಕಾನೂನುಬಾಹಿರವಾಗಿ ರಾಸಾಯನಿಕ ಬಳಸಿ ಬಾಳೆಹಣ್ಣು ಹಣ್ಣು ಮಾಡುವ ಜಾಲ ಸಕ್ರಿಯವಾಗಿರುವ ಮಾಹಿತಿ ಮೇರೆಗೆ ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದಲ್ಲಿ ಹಲವು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ಸಮಯದಲ್ಲಿ, ಅಧಿಕಾರಿಗಳು ರೂ. 4 ಲಕ್ಷ ಮೌಲ್ಯದ 5,000 ಕೆಜಿ ಹಸಿ ಬಾಳೆ ಗೊಂಚಲುಗಳನ್ನು ವಶಪಡಿಸಿಕೊಂಡರು.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕದ ರೈಲು ನಿಲ್ದಾಣಗಳಲ್ಲಿ ಫಂಗಸ್ ಬಂದ, ಅವಧಿ ಮೀರಿದ ಆಹಾರ ಮಾರಾಟ

ಪ್ರಯಾಣಿಕರೇ ಎಚ್ಚರ; ರೈಲು ನಿಲ್ದಾಣದ ಆಹಾರ ಸುರಕ್ಷಿತವಲ್ಲ

ಫಂಗಸ್ ಬೆಳೆದಿರುವ, ಬಣ್ಣ ಬಳಸಿರುವ, ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ರೈಲು ನಿಲ್ದಾಣಗಳಲ್ಲಿ ಮಾರಾಟ ಮಾಡುತ್ತಿರುವುದನ್ನು ಕರ್ನಾಟಕದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪತ್ತೆ ಮಾಡಿದೆ. ರಾಜ್ಯದ ಒಟ್ಟು 36 ರೈಲು ನಿಲ್ದಾಣಗಳಲ್ಲಿ ಗುರುವಾರ ನಡೆಸಿರುವ ತಪಾಸಣೆ ವೇಳೆ ಈ ಅಂಶಗಳು ಕಂಡು ಬಂದಿವೆ.

ಕೃತ್ಯಕ್ಕೆ ಬಳಸಿದ 5 ಗೂಡ್ಸ್ ವಾಹನ ಹಾಗೂ ನಾಲ್ಕು ಜನ ಆರೋಪಿಗಳ ವಶಕ್ಕೆ ಪಡೆದ ರಾಮದುರ್ಗ ಪೊಲೀಸರು

ಅಕ್ರಮ ಗೋಮಾಂಸ ಅಡ್ಡೆ ಮೇಲೆ ಹಿಂದೂ ಕಾರ್ಯಕರ್ತರು ದಾಳಿ

ಗೋಹತ್ಯೆ ನಿಷೇಧ ಕಾಯ್ದೆ ಗಾಳಿಗೆ ತೂರಿ ಹೋಗಿದ್ದು, ಅಕ್ರಮ ಕಸಾಯಿಖಾನೆಯೊಂದರ ಮೇಲೆ ಹಿಂದೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಬುಧವಾರ ದಿಢೀರ್ ದಾಳಿ ನಡೆಸಿದ್ದಾರೆ. ಕಾನೂನು ಬಾಹಿರವಾಗಿ ಜಿವಂತ ಹಸುಗಳನ್ನು ಹಾಗೂ ಎತ್ತುಗಳನ್ನು ಕಟಾವು ಮಾಡುತ್ತಿದ್ದ ವೇಳೆ ಪೊಲೀಸರ ಸಹಾಯದಿಂದ ಮಾಲೀಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ಒಪ್ಪಿಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಹೋಂವರ್ಕ್ ಮಾಡಿಲ್ಲವೆಂದು ಥಳಿಸಿದ ಶಿಕ್ಷಕಿ; ಮಡಿಲಲ್ಲೇ ಪ್ರಾಣಬಿಟ್ಟ 6 ವರ್ಷದ ಬಾಲಕ: ಕರುಳು ಹಿಂಡುವ ವಿಡಿಯೊ ವೈರಲ್‌

ಶಿಕ್ಷಕಿಯ ಥಳಿತಕ್ಕೆ ಬಾಲಕ ಬಲಿ

Visakhapatnam Horror: ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬಳು 6 ವರ್ಷದ ಬಾಲಕನಿಗೆ ಕೋಲಿನಿಂದ ಹೊಡೆದಿದ್ದು, ಆತ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಸಿಸಿಟಿವಿ ದೃಶ್ಯಗಳಲ್ಲಿ ಶಿಕ್ಷಕಿ ಬಾಲಕನಿಗೆ ಹೊಡೆಯುತ್ತಿರುವುದು ಕಂಡುಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಶಿಲ್ಲಾಂಗ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಕೆಎಸ್‌ಯು ಪ್ರತಿಭಟನೆ: ಪ್ರವಾಸಿಗರ ಕಾರ್‌ ಮೇಲೆ ಭೀಕರ ದಾಳಿ! ಮಗುವಿಗೆ ಗಾಯ

ಶಿಲ್ಲಾಂಗ್‌ನಲ್ಲಿ ಪ್ರವಾಸಿಗರ ಕಾರ್ ಮೇಲೆ ದಾಳಿ ನಡೆಸಿದ ಪ್ರತಿಭಟನಕಾರರು

Viral Video: ಮೇಘಾಲಯದ ಶಿಲ್ಲಾಂಗ್‌ನಲ್ಲಿ ಖಾಸಿ ವಿದ್ಯಾರ್ಥಿ ಒಕ್ಕೂಟ (ಕೆಎಸ್‌ಯು) ನಡೆಸಿದ ಕಪ್ಪು ಬಾವುಟದ ಬೈಕ್ ರ್‍ಯಾಲಿ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಹಲವರು ಗಾಯಗೊಂಡಿದ್ದಾರೆ. ಈ ನಡುವೆ ಪ್ರವಾಸಿಗರ ವಾಹನವೊಂದರ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದು ಮಗುವೊಂದು ಗಾಯಗೊಂಡಿದೆ‌.

“ಮುಂದಿನ ಜನ್ಮದಲ್ಲಿ ವೈದ್ಯನಾಗುವೆ”: ಡೆತ್‌ನೋಟ್ ಬರೆದಿಟ್ಟು 19 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಡೆತ್‌ನೋಟ್ ಬರೆದಿಟ್ಟು, ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು

NEET aspirant dies by self-harming: ಮುಂದಿನ ಜನ್ಮದಲ್ಲಿ ತಾನು ಖಂಡಿತವಾಗಿಯೂ ವೈದ್ಯನಾಗುತ್ತೇನೆ ಎಂದು ಪತ್ರ ಬರೆದಿಟ್ಟು, ವೈದ್ಯಕೀಯ ಕಾಲೇಜು ಪ್ರವೇಶ ಪರೀಕ್ಷೆಗೆ (ನೀಟ್‌) ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ವೈಜಾಪುರ ತಾಲೂಕಿನ ಖಂಡಾಲದಲ್ಲಿ ಘಟನೆ ನಡೆದಿದೆ.

ಬಸ್ ಬಾಗಿಲಿಗೆ ಕುತ್ತಿಗೆ ಸಿಲುಕಿ 7 ವರ್ಷದ ಬಾಲಕ ಸಾವು; ಸಿಸಿಟಿವಿ ಕ್ಯಾಮರಾದಲ್ಲಿ ಆಘಾತಕಾರಿ ದೃಶ್ಯ ಸೆರೆ

ಬಸ್ ಬಾಗಿಲಿಗೆ ಕುತ್ತಿಗೆ ಸಿಲುಕಿ 7 ವರ್ಷದ ಬಾಲಕ ಸಾವು

Gujarat News: ಐಷಾರಾಮಿ ಬಸ್‌ನ ಹೈಡ್ರಾಲಿಕ್ ಬಾಗಿಲಿಗೆ ಕುತ್ತಿಗೆ ಸಿಲುಕಿಕೊಂಡು ಏಳು ವರ್ಷದ ಬಾಲಕ ಮೃತಪಟ್ಟ ಆಘಾತಕಾರಿ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಸಿಸಿಟಿವಿಯ ದೃಶ್ಯಾವಳಿಗಳಲ್ಲಿ, ಬಾಲಕನು ಬಸ್ಸಿನ ಒಳಗೆ ಓಡಾಡುತ್ತಿರುವುದು ಕಂಡುಬಂದಿದೆ. ಆದರೆ, ಬಾಲಕನು ಬಾಗಿಲಿಗೆ ಹೇಗೆ ಸಿಕ್ಕಿಬಿದ್ದನು ಎಂಬ ಬಗ್ಗೆ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿಲ್ಲ.

ಪತ್ನಿ, ಸಹೋದರಿಯನ್ನು ಗುಂಡಿಕ್ಕಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಎಸ್‌ಬಿಐ ಉದ್ಯೋಗಿ; ಕೊಲೆ ವಿಚಾರ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಹಾಕಿ ವಿಕೃತಿ

ಪತ್ನಿ, ಸಹೋದರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಎಸ್‌ಬಿಐ ಉದ್ಯೋಗಿ

Crime News: ಪತ್ನಿ, ಸಹೋದರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ. 38 ವರ್ಷದ ಮಾನಸ್ ವಾಜಪೇಯಿ ತನ್ನ ಪತ್ನಿ ದಿವ್ಯಾ ಅವರನ್ನು ಬ್ಯಾಂಕಿನ ಹೊರಗೆ ಕರೆದು ಕೆಲವು ನಿಮಿಷಗಳ ಕಾಲ ಮಾತನಾಡಿ, ಗುಂಡು ಹಾರಿಸಿ ಪರಾರಿಯಾಗಿದ್ದಾನೆ.

ಪಶ್ಚಿಮ ಬಂಗಾಳದ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಪುಗಳ  ನಡುವೆ ಘರ್ಷಣೆ; ಹಲವರಿಗೆ ಗಾಯ

ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ; ಹಲವರಿಗೆ ಗಾಯ

ಪಶ್ಚಿಮ ಬಂಗಾಳದ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ವಿಶ್ವವಿದ್ಯಾಲಯದ ಸಾಮಾನ್ಯ ಸಭೆಯ ಕುರಿತು ಎಸ್‌ಎಫ್‌ಐ ಮತ್ತು ಎಬಿವಿಪಿ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ. ಈ ಘಟನೆಯಿಂದ ಕ್ಯಾಂಪಸ್ ಆವರಣದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಪ್ರಾಂಶುಪಾಲರನ್ನು 27 ಬಾರಿ ಇರಿದು ಹತ್ಯೆ ಮಾಡಿದ ಶಾಲಾ ಬಾಲಕರು; ಐಷಾರಾಮಿ ಜೀವನಶೈಲಿಗೆ ಈ ಕೃತ್ಯ

ಪ್ರಾಂಶುಪಾಲರನ್ನು 27 ಬಾರಿ ಇರಿದು ಹತ್ಯೆ ಮಾಡಿದ ಶಾಲಾ ಬಾಲಕರು

Crime News: 48 ವರ್ಷದ ಶಾಲಾ ಪ್ರಾಂಶುಪಾಲೆಯನ್ನು ಇಬ್ಬರು ವಿದ್ಯಾರ್ಥಿಗಳು ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ನಲ್ಗೊಂಡದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಹಣ ಮತ್ತು ಐಷಾರಾಮಿ ಜೀವನಶೈಲಿಗಾಗಿ ಕೊಲೆ ಮಾಡಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಇತ್ತ ವೃಷಭಾವತಿ ನಾಲೆಯಲ್ಲಿ ತೇಲಿದ 500 ರುಪಾಯಿಯ ಕಂತೆ ಕಂತೆ ನೋಟು; ಅತ್ತ ನಕಲಿ ಔಷಧ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ: ಏನಾಗ್ತಿದೆ ರಾಮನಗರದಲ್ಲಿ?

ರಾಮನಗರದಲ್ಲಿ ಬೃಹತ್ ನಕಲಿ ಔಷಧ ತಯಾರಿಸುತ್ತಿದ್ದ ಜಾಲ ಪತ್ತೆ

Ramanagara News: ರಾಮನಗರ ಸದ್ಯ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ರಾಮನಗರ ತಾಲೂಕಿನ ಭೈರಮಂಗಲದ ವೃಷಭಾವತಿ ನಾಲೆಯಲ್ಲಿ ಕಂತೆ ಕಂತೆ ನೋಟುಗಳು ತೇಲುತ್ತಿರುವುದನ್ನು ಕಂಡು ಬಂದಿದ್ದು, ಘಟನೆಯ ವಿಡಿಯೊ ವೈರಲ್‌ ಆಗಿದೆ. ಅತ್ತ ರಾಮನಗರದ ದೊಡ್ಡೇರಿ ಗ್ರಾಮದ ಬಳಿ ಫಾರ್ಮ್‌ಹೌಸ್‌ನಲ್ಲಿ ನಕಲಿ ಔಷಧ ದಂಧೆ ಜಾಲ ಪತ್ತೆಯಾಗಿದೆ. ಈ ಎರಡೂ ಘಟನೆಗಳ ಸಮಗ್ರ ತನಿಖೆಗೆ ಬಿಜೆಪಿ ಆಗ್ರಹಿಸಿದೆ.

ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಪೌಡರ್‌ ಬಳಕೆ;  ಅಡುಗೆ ಸಿಬ್ಬಂದಿ ಯಡವಟ್ಟಿನಿಂದ 36 ವಿದ್ಯಾರ್ಥಿಗಳು ಅಸ್ವಸ್ಥ

ಡಿಟರ್ಜೆಂಟ್ ಬೆರೆಸಿದ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಾಹ್ನದ ಊಟದಲ್ಲಿ ಉಪ್ಪು ಬದಲಿಗೆ ಡಿಟರ್ಜೆಂಟ್ ಪುಡಿ ಹಾಕಿದ್ದು, ಇದನ್ನು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬಿಹಾರದಲ್ಲಿ ನಡೆದಿದೆ. ಅಡುಗೆಮನೆಯಲ್ಲಿ ಉಪ್ಪು ಮತ್ತು ಡಿಟರ್ಜೆಂಟ್ ಪುಡಿ ತುಂಬಿದ ಪಾತ್ರೆಗಳನ್ನು ಒಂದೇ ಸ್ಥಳದಲ್ಲಿ ಇಟ್ಟಿದ್ದು ಈ ಘಟನೆಗೆ ಕಾರಣ ಎನ್ನಲಾಗಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯ ಆಫ್ರಿಕಾದಲ್ಲಿ ಚಿನ್ನದ ಗಣಿ ಕುಸಿದು 30 ಮಂದಿ ಸಾವು, ಅಪಾಯದಲ್ಲಿ ಹಲವರು

ಚಿನ್ನದ ಗಣಿ ಕುಸಿದು 30 ಮಂದಿ ಸಾವು

ಚಿನ್ನದ ಗಣಿ ಕುಸಿದು 30 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯ ಆಫ್ರಿಕಾ ಗಣರಾಜ್ಯದ ಪಶ್ಚಿಮ ಭಾಗದಲ್ಲಿ ಸಂಭವಿಸಿದೆ. ಅನೇಕರು ಒಳಗಡೆ ಸಿಲುಕಿರುವ ಸಾಧ್ಯತೆ ಇದೆ. ನನ-ಮಾಂಬೆರೆ ಪ್ರಾಂತ್ಯದ ಅಬ್ಬಾ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ದೆಹಲಿ ಜಲ ಮಂಡಳಿ ಟೆಂಡರ್ ಅಕ್ರಮ ಆರೋಪ; ಆಮ್‌ ಆದ್ಮಿ ನಾಯಕ ಸತ್ಯೇಂದ್ರ ಜೈನ್ ಮತ್ತೆ ಬಂಧನ

ದೆಹಲಿ ಜಲ ಮಂಡಳಿ ಟೆಂಡರ್ ಅಕ್ರಮ: ಸತ್ಯೇಂದ್ರ ಜೈನ್ ಬಂಧನ

ದೆಹಲಿ ಜಲ ಮಂಡಳಿಯ ಒಳಚರಂಡಿ ಸಂಸ್ಕರಣಾ ಘಟಕಗಳ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಪ್ರಕರಣದಲ್ಲಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದ್ದು, ಈ ಕ್ರಮವನ್ನು ಆಮ್ ಆದ್ಮಿ ಪಕ್ಷ ರಾಜಕೀಯ ಪ್ರೇರಿತ ಎಂದು ಆರೋಪಿಸಿದೆ.

Loading...