ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಶಾರ್ಟ್‌ಕಟ್ ರೂಟ್‌ನಿಂದ ಭಾರಿ ದುರಂತ: ಬಾವಿಯೊಳಗೆ ಕಾರು ಬಿದ್ದು 9 ಮಂದಿ ಜಲ ಸಮಾಧಿ

ಬಾವಿಯೊಳಗೆ ಕಾರು ಬಿದ್ದು 9 ಮಂದಿ ದುರ್ಮರಣ

Car falls into a well: ಶಾರ್ಟ್ ಕಟ್ ರೂಟ್‌ನಲ್ಲಿ ಹೋಗಿ ಕುಟುಂಬವೊಂದು ದುರ್ಮರಣಕ್ಕೀಡಾದ ಮನಕಲುಕುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಆರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಸದಸ್ಯರು ಮೃತಪಟ್ಟಿದ್ದಾರೆ. ಶಾರ್ಟ್‌ಕಟ್ ಮೂಲಕ ತೆರಳಿದ್ದೇ ಈ ದುರಂತಕ್ಕೆ ಕಾರಣ.

Dharwad News: ಬೇಕಂತಲೇ ಯುವತಿಯರ ಮೈ ಕೈ ಮುಟ್ಟಿ ಅನುಚಿತ ವರ್ತನೆ; ಧಾರವಾಡದಲ್ಲಿ‌ ಮುಸ್ಲಿಂ ಜಿಮ್ ಟ್ರೈನರ್‌ ಅರೆಸ್ಟ್

ಯುವತಿಯರಿಗೆ ಬ್ಯಾಡ್‌ ಟಚ್‌ ಮಾಡುತ್ತಿದ್ದ ಮುಸ್ಲಿಂ ಜಿಮ್ ಟ್ರೈನರ್‌ ಅರೆಸ್ಟ್

Dharwad gym trainer Arrest: ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಸಾಬಿರ್, ಜಿಮ್‌ನಲ್ಲಿ ಮಹಿಳೆಯರ ಶೌಚಾಲಯಕ್ಕೆ ಹೋಗಿ ಬರುವುದು, ಟ್ರೈನಿಂಗ್ ವೇಳೆ ಬೇಕಂತಲೇ ಮೈ ಕೈ ಮುಟ್ಟಿ ಅನುಚಿತ ವರ್ತನೆ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ಒಂದೋ ಗಂಡನಿಗೆ ಕಿಡ್ನಿ ದಾನ ಮಾಡು, ಇಲ್ಲ 30 ಲಕ್ಷ ರೂ. ಹೊಂದಿಸು; ಮಹಿಳೆಗೆ ಅತ್ತೆ-ಮಾವನ ವರದಕ್ಷಿಣೆ ಡಿಮ್ಯಾಂಡ್

ಗಂಡನಿಗೆ ಕಿಡ್ನಿ ದಾನ ಮಾಡುವಂತೆ ಮಹಿಳೆಗೆ ಪತಿ ಮನೆಯಲ್ಲಿ ಕಿರುಕುಳ

Dowry case: ಕಿಡ್ನಿ ದಾನ ಮಾಡಿ ಅಥವಾ 30 ಲಕ್ಷ ರೂಪಾಯಿ ತನ್ನಿ ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ಉತ್ತರ ಪ್ರದೇಶದ ಕಾನ್ಪುರದ ಮಹಿಳೆಯೊಬ್ಬರು ತಮ್ಮ ಪತಿ ಮತ್ತು ಅತ್ತೆ-ಮಾವನ ವಿರುದ್ಧ ಮಾನಸಿಕ ಹಿಂಸೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪಗಳನ್ನು ಹೊರಿಸಿದ್ದಾರೆ. ಕಾನ್ಪುರದ ಚಕೇರಿ ಪೊಲೀಸರು ವರದಕ್ಷಿಣೆ ಕಿರುಕುಳ, ವಂಚನೆ ಮತ್ತು ಕ್ರೌರ್ಯ ಪ್ರಕರಣ ದಾಖಲಿಸಿದ್ದಾರೆ.

ಕೇರಳಂ ವಿಧಾನಸಭಾ ಚುನಾವಣೆಗೆ ದಿನಗಣನೆ: ಕಚೇರಿ ಮುಂದೆ ನಡೆದ ಸಿಪಿಐ ಬೆಂಬಲಿಗ ರೈತನ ಆತ್ಮಹತ್ಯೆ ಎಲ್‌ಡಿಎಫ್‌ಗೆ ಹಿನ್ನಡೆಯಾಗುತ್ತಾ?

ಕೇರಳದಲ್ಲಿ ಸಿಪಿಐ ಬೆಂಬಲಿಗ ರೈತ ಆತ್ಮಹತ್ಯೆ

ಸಿಪಿಐ ಬೆಂಬಲಿಗ ರೈತರೊಬ್ಬರು ಕೇರಳದ ಕೊಟ್ಟಾಯಂ ಜಿಲ್ಲೆಯ ವೈಕಂನ ಥಲಯಾಝಂನಲ್ಲಿರುವ ಎಡ ಪ್ರಜಾಸತ್ತಾತ್ಮಕ ರಂಗದ ಚುನಾವಣಾ ಸಮಿತಿ ಕಚೇರಿ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಚೆಲ್ಲಾಪ್ಪನ್ ಪುಲಿಕ್ಕಸೇರಿ ಎಂದು ಗುರುತಿಸಲಾಗಿದೆ. ಸಿಪಿಐ ಜಿಲ್ಲಾ ನಾಯಕರು ತಮ್ಮ ಜೀವನೋಪಾಯವನ್ನು ನಾಶಪಡಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಎನ್ನಲಾಗಿದೆ.

Chikkamagaluru News: ಎನ್.ಆರ್.ಪುರದಲ್ಲಿ ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್‌ ಆತ್ಮಹತ್ಯೆ

ಎನ್.ಆರ್.ಪುರದಲ್ಲಿ ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್‌ ಆತ್ಮಹತ್ಯೆ

NR Pura Nurse Death Case: ಶಿವಮೊಗ್ಗದ ಪ್ರತಿಷ್ಠಿತ 'ನಾರಾಯಣ ಹೃದಯಾಲಯ' ಆಸ್ಪತ್ರೆಯ ನರ್ಸ್ ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಮುತ್ತಿನಕೊಪ್ಪದ ಮನೆಗೆ ಮರಳಿದ್ದ ಅವರು, ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Muda Case: ಮುಡಾ ಪ್ರಕರಣ; ಬಿ ರಿಪೋರ್ಟ್​ ಅಂಗೀಕಾರ ಪ್ರಶ್ನಿಸಿ ಹೈಕೋರ್ಟ್​ಗೆ ಇಡಿ ಅರ್ಜಿ

ಮುಡಾ ಪ್ರಕರಣ; ಬಿ ರಿಪೋರ್ಟ್​ ಅಂಗೀಕಾರ ಪ್ರಶ್ನಿಸಿ ಇಡಿ ಅರ್ಜಿ

ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

Basava Jaya Mruthyunjaya Swamiji: ಲೈಂಗಿಕ ದೌರ್ಜನ್ಯ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ದೂರು

ಲೈಂಗಿಕ ದೌರ್ಜನ್ಯ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ದೂರು

ಬೆಂಗಳೂರಿನ ತ್ಯಾಗರಾಜನಗರ ನಿವಾಸಿಯಾಗಿರುವ ಮಹಿಳೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಸ್ವಾಮೀಜಿ ತನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಸ್ವಾಮೀಜಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ; ಇಬ್ಬರು ಮಕ್ಕಳು ಸಾವು

ಮಣಿಪುರದಲ್ಲಿ ಬಾಂಬ್ ದಾಳಿಯಿಂದ ಇಬ್ಬರು ಮಕ್ಕಳು ಸಾವು

ಶಂಕಿತ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟಂತೆ ಮಣಿಪುರದ ಬಿಷ್ಣುಪುರದಲ್ಲಿ ನಡೆದಿದೆ. ಮೊಯಿರಾಂಗ್ ಟ್ರೋಂಗ್ಲಾಬಿಯಲ್ಲಿರುವ ನಿವಾಸದ ಮೇಲೆ ಶಂಕಿತ ಉಗ್ರರು ಮಂಗಳವಾರ ಬೆಳಗಿನ ಜಾವಾ ಬಾಂಬ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮಕ್ಕಳಿಬ್ಬರ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ರೆಡಿಮೇಡ್‌ ದೋಸೆ ಹಿಟ್ಟು ತಿಂದು ಇಬ್ಬರು ಮಕ್ಕಳು ಸಾವು; ಪೋಷಕರ ಸ್ಥಿತಿ ಚಿಂತಾಜನಕ!

ರೆಡಿಮೇಡ್ ದೋಸೆ ಹಿಟ್ಟಿನಿಂದ ಇಬ್ಬರು ಮಕ್ಕಳು ಸಾವು!

ಗುಜರಾತ್‌ನ ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ರೆಡಿಮೇಡ್ ದೋಸೆ ಹಿಟ್ಟಿನಿಂದ ತಯಾರಿಸಿದ ಆಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ದಂಪತಿಗಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಹಾರ ಇಲಾಖೆಯು ಮಾದರಿಗಳನ್ನು ಸಂಗ್ರಹಿಸಿ ತನಿಖೆ ಆರಂಭಿಸಿದೆ.

Murder Case: ಅಕ್ರಮ ಸಂಬಂಧಕ್ಕೆ ಅಡ್ಡಿ, ಪ್ರೇಯಸಿಯ ಗಂಡನನ್ನೇ ಕೊಂದು ಮೂಟೆಕಟ್ಟಿದ ಪಾಪಿ

ಅಕ್ರಮ ಸಂಬಂಧಕ್ಕೆ ಅಡ್ಡಿ, ಪ್ರೇಯಸಿಯ ಗಂಡನನ್ನೇ ಕೊಂದು ಮೂಟೆಕಟ್ಟಿದ ಪಾಪಿ

ಕೊಲೆಯಾದ ಸುನೀಲ್ ನಾಯಕ್ ಪತ್ನಿಯೊಂದಿಗೆ ಆರೋಪಿ ಬಸುದೇವ್ ಮಲ್ಲಿಕ್ ಅನೈತಿಕ ಸಂಬಂಧ ಹೊಂದಿದ್ದ. ಈ ವಿಷಯ ಸುನೀಲ್‌ಗೆ ತಿಳಿದು ಮನೆಯಲ್ಲಿ ದಂಪತಿಗಳ ನಡುವೆ ತೀವ್ರ ಗಲಾಟೆ ನಡೆದಿತ್ತು. ತನ್ನ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಸುನೀಲ್‌ನನ್ನು ಹೇಗಾದರೂ ಮಾಡಿ ಮುಗಿಸಬೇಕೆಂದು ಸಂಚು ರೂಪಿಸಿದ್ದ ಬಸುದೇವ್.

Assault Case: ಮಠದಿಂದ ಎಳೆದೊಯ್ದು ದಲಿತ ಸ್ವಾಮೀಜಿ ಮೇಲೆ ಮಾರಕ ಹಲ್ಲೆ; ಆರೋಪ ಏನು?

ಮಠದಿಂದ ಎಳೆದೊಯ್ದು ದಲಿತ ಸ್ವಾಮೀಜಿ ಮೇಲೆ ಮಾರಕ ಹಲ್ಲೆ; ಆರೋಪ ಏನು?

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಲಿತ ಸಮುದಾಯದವರಾದ ಬಾಲಕೃಷ್ಣ ಸ್ವಾಮೀಜಿಯ ಬಟ್ಟೆಯೇ ಹರಿದು ಹೋಗುವಂತೆ ದುರುಳರು ಹಲ್ಲೆ ನಡೆಸಿದ್ದಾರೆ. ಶ್ರೀ ಮಾತಾ ಮಾಣಿಕೇಶ್ವರಿ ಟ್ರಸ್ಟ್‌ ಕಾರ್ಯದರ್ಶಿ ಶಿವಯ್ಯ ಸ್ವಾಮಿ ಎನ್ನುವವರ ಕಡೆಯವರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪವಿದೆ.

Dr. K.Annadani: ಜೆಡಿಎಸ್‌ ಮಾಜಿ ಶಾಸಕ ಅನ್ನದಾನಿ ವಿರುದ್ಧ ಅಕ್ರಮ ಸಂಬಂಧ ಆರೋಪ; ಮಹಿಳೆಯ ಪತಿಯಿಂದ ಎಚ್‌ಡಿಕೆಗೆ ದೂರು

ಜೆಡಿಎಸ್‌ ಮಾಜಿ ಶಾಸಕ ಅನ್ನದಾನಿ ವಿರುದ್ಧ ಅಕ್ರಮ ಸಂಬಂಧ ಆರೋಪ

ನನ್ನ ಸಂಸಾರ ಹಾಳಾಗಲು ಮಾಜಿ ಶಾಸಕ ಡಾ.ಕೆ. ಅನ್ನದಾನಿ ಅವರೇ ಕಾರಣ, ದಯವಿಟ್ಟು ನನಗೆ ನ್ಯಾಯ ಕೊಡಿಸಿ ಎಂದು ವ್ಯಕ್ತಿಯೊಬ್ಬರು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದಾರೆ. ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮಾಜಿ ಶಾಸಕರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ದೂರುದಾರ ಆರೋಪಿಸಿದ್ದಾರೆ.

ಕ್ರಿಕೆಟ್ ಪಂದ್ಯದ ವೇಳೆ ರನೌಟ್ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ; ಚಾಕು ಇರಿದು 21 ವರ್ಷದ ಅಂಪೈರ್‌ನ ಹತ್ಯೆ

ಕ್ರಿಕೆಟ್ ಪಂದ್ಯದಲ್ಲಿ ರನೌಟ್ ವಿಚಾರಕ್ಕೆ ಜಗಳ; ಅಂಪೈರ್ ಹತ್ಯೆ

Crime News: ವಿಶಾಖಪಟ್ಟಣದಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದರ ವೇಳೆ ಕ್ಷುಲ್ಲಕ ನಡೆದ ಜಗಳದಲ್ಲಿ 21 ವರ್ಷದ ಅಂಪೈರ್‌ನನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ಸಮಸ್ಯೆಯನ್ನು ಬಗೆಹರಿಸುವ ನೆಪದಲ್ಲಿ ಕರೆಸಿ ಈ ದುಷ್ಕೃತ್ಯ ಎಸಗಲಾಗಿದೆ.

ಹಸುವಿನ ಕಾಲನ್ನು ಟ್ರಕ್‌ಗೆ ಕಟ್ಟಿ ಮೀಟರ್‌ಗಟ್ಟಲೆ ಎಳೆದೊಯ್ದ ಪಾಪಿ

ಹಸುವಿನ ಕಾಲನ್ನು ಟ್ರಕ್‌ಗೆ ಕಟ್ಟಿ ಎಳೆದೊಯ್ದ ಪಾಪಿ

Crime News: ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಪ್ರಾಣಿ ಹಿಂಸೆಯ ಕ್ರೂರ ಕೃತ್ಯ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಟ್ರಕ್ ಚಾಲಕನೊಬ್ಬ ಹಸುವಿನ ಕಾಲನ್ನು ತನ್ನ ವಾಹನದ ಹಿಂದಕ್ಕೆ ಕಟ್ಟಿ ಹಲವು ಮೀಟರ್‌ಗಳಷ್ಟು ಎಳೆದುಕೊಂಡು ಹೋಗಿರುವ ಆಘಾತಕಾರಿ ಘಟನೆ ನಡೆದಿದೆ. ಚಾಲಕನನ್ನು ತಕ್ಷಣ ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

Belagavi News: ಮದುವೆ ಆಗೋದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ, ವಂಚನೆ: ಆರೋಪಿ ಅರೆಸ್ಟ್‌

ಮದುವೆ ಆಗೋದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ, ವಂಚನೆ

ಇನ್‌ಸ್ಟಾಗ್ರಾಂ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಯುವತಿಯನ್ನು ಮದುವೆಯಾಗುವುದಾಗಿ ಬಣ್ಣಬಣ್ಣದ ಮಾತುಗಳನ್ನಾಡಿ ನಂಬಿಸಿ ನಿರಂತರ ಅತ್ಯಾಚಾರ ನಡೆಸಿದ್ದಾನೆ. ಈ ನಡುವೆ ಯುವತಿ ಮದುವೆಯಾಗು ಎಂದಿದ್ದಕ್ಕೆ, 3 ಕೋಟಿ ರೂಪಾಯಿ ಹಣ ನೀಡಬೇಕು ಎಂದು ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಹೀಗಾಗಿ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ.

ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ಸ್ಥಾಪನೆಯ ಸಂಚು ವಿಫಲ: ಆಂಧ್ರ ಪ್ರದೇಶ ಪೊಲೀಸರಿಂದ ಅಂತಾರಾಷ್ಟ್ರೀಯ ಭಯೋತ್ಪಾದಕ ಜಾಲ ಬಯಲು

ಆಂಧ್ರದಲ್ಲಿ ಐಸಿಸ್ ಸಂಪರ್ಕದ ಭಯೋತ್ಪಾದಕ ಜಾಲ ಪತ್ತೆ: 12 ಮಂದಿ ಬಂಧನ

ಆಂಧ್ರ ಪ್ರದೇಶದಲ್ಲಿ ಐಸಿಸ್ ಮತ್ತು ಅಲ್-ಖೈದಾ ಸಂಪರ್ಕ ಹೊಂದಿದ್ದ ಭಯೋತ್ಪಾದಕ ಜಾಲವನ್ನು ಪೊಲೀಸರು ಭೇದಿಸಿ 12 ಮಂದಿಯನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಪ್ರೇರೇಪಿಸಿ, ಶಸ್ತ್ರಾಸ್ತ್ರ ತರಬೇತಿ ಮತ್ತು ಐಇಡಿ ತಯಾರಿಕೆ ಕುರಿತು ಮಾಹಿತಿ ಹಂಚಲಾಗುತ್ತಿತ್ತು. ಈ ವೇಳೆ ಮಹಿಳೆಯರಿಗಾಗಿ ಪ್ರತ್ಯೇಕ ಘಟಕ ರಚನೆ ಯತ್ನವೂ ಪತ್ತೆಯಾಗಿದೆ.

ಕೊಲೆ ರಹಸ್ಯ ಭೇದಿಸಿದ ರಸ್ತೆ ಬದಿ ಬಿದ್ದಿದ್ದ ಮದ್ಯದ ಬಾಟಲ್‌; ಏನಿದು ಥ್ರಿಲ್ಲರ್‌ ಸಿನಿಮಾವನ್ನೂ ಮೀರಿಸುವ ರೋಚಕ ಘಟನೆ?

ರಸ್ತೆ ಬದಿ ಬಿದ್ದಿದ್ದ ಮದ್ಯದ ಬಾಟಲಿಯಿಂದ ಕೊಲೆ ರಹಸ್ಯ ಬಯಲು

Crime News: ರಸ್ತೆ ಬದಿ ಅರೆಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣವನ್ನು ಭೇದಿಸಿದ್ದು ಖಾಲಿ ಮದ್ಯದ ಬಾಟಲ್‌ ಎಂದರೆ ನಂಬುತ್ತೀರಾ? ಹೌದು, ನಿರುಪಯುಕ್ತ ಎಂದು ನಿರ್ಲಕ್ಷಿಸುವ ವಸ್ತುವೊಂದು ಹೇಗೆ ಕೆಲವೊಮ್ಮೆ ಮುಖ್ಯವಾಗುತ್ತದೆ ಎನ್ನುವುದಕ್ಕೆ ಈ ಘಟನೆ ಮುಖ್ಯ ಸಾಕ್ಷಿ.

Bengaluru assault case: ಬೆಂಗಳೂರಲ್ಲಿ ಕನ್ನಡಿಗರ ಮೇಲೆ ತಮಿಳು ಗೂಂಡಾಗಳಿಂದ ಹಲ್ಲೆ; ಟಿಟಿ ವಾಹನ ಅಡ್ಡಗಟ್ಟಿ ಕಿರಿಕ್‌!

ಬೆಂಗಳೂರಲ್ಲಿ ಕನ್ನಡಿಗರ ಮೇಲೆ ತಮಿಳು ಗೂಂಡಾಗಳಿಂದ ಹಲ್ಲೆ!

ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ತಮಿಳುನಾಡಿನ ಕೃಷ್ಣಗಿರಿಗೆ ಚಾಲಕ ಬಾಡಿಗೆಗೆ ಹೋಗಿದ್ದ. ಈ ವೇಳೆ ವಾಹನದಲ್ಲಿ ಇದ್ದ ಕನ್ನಡಿಗರು ಮತ್ತು ಕೃಷ್ಣಗಿರಿಯ ಸ್ಥಳೀಯರ ನಡುವೆ ಕಿರಿಕ್ ಆಗಿದೆ. ಈ ವೇಳೆ ತಕ್ಷಣ ಅಲ್ಲಿಂದ ತಪ್ಪಿಸಿಕೊಂಡು ಟಿಟಿ ವಾಹನದಲ್ಲಿ ಕನ್ನಡಿಗರು ಅತ್ತಿಬೆಲೆ ಕಡೆಗೆ ಬಂದಿದ್ದಾರೆ. ಆದರೆ, ತಮಿಳು ಗೂಂಡಾಗಳು ಟಿಟಿ ವಾಹನ ಬೆನ್ನಟ್ಟಿ ಬಂದು, ಅತ್ತಿಬೆಲೆ ಟೋಲ್‌ ಬಳಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದಾರೆ.

Kalaburagi Murder Case: ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಹತ್ಯೆ; ಶವವನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು!

ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಹತ್ಯೆ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಇತ್ತೀಚೆಗೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆ ಶವದ ಗುರುತು ಪತ್ತೆಯಾಗಿದೆ. ಕೊಲೆಯಾದ ಮಹಿಳೆ ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾದ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ ಎಂದು ತಿಳಿದುಬಂದಿದೆ.

ಕೇವಲ ಸೀಬೆ ಹಣ್ಣು ಕದ್ದಿದ್ದಕ್ಕೆ ಬಾಲಕಿಯನ್ನು ಸರಪಳಿಯಲ್ಲಿ ಕಟ್ಟಿ ಹಲ್ಲೆ ನಡೆಸಿದ ಮಾಜಿ ಸೈನಿಕ

ಸೀಬೆ ಹಣ್ಣು ಕದ್ದಿದ್ದಕ್ಕೆ ಬಾಲಕಿಯನ್ನು ಕಟ್ಟಿ ಹಲ್ಲೆ

Crime News: ಮನೆಯ ಬಳಿ ಮರದಿಂದ ಸೀಬೆ ಹಣ್ಣುಗಳನ್ನು ಕಿತ್ತಿದ್ದಕ್ಕಾಗಿ ನಿವೃತ್ತ ಸೇನಾ ಸಿಬ್ಬಂದಿಯೊಬ್ಬರು ಅಪ್ರಾಪ್ತ ಬಾಲಕಿಯನ್ನು ಕಟ್ಟಿಹಾಕಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ನಿವಾಸದ ಬಳಿಯ ಮರದಿಂದ ಸೀಬೆ ಹಣ್ಣುಗಳನ್ನು ಕಿತ್ತುಕೊಂಡಿದ್ದು ಘಟನೆಗೆ ಕಾರಣ.

Belagavi news: ಪತ್ನಿಯ ಆತ್ಮಹತ್ಯೆ ಸುದ್ದಿ ತಿಳಿದು ಧಾವಿಸಿ ಬರುವಾಗ ಆಕ್ಸಿಡೆಂಟ್‌, ಪತಿಯೂ ಸಾವು!

ಪತ್ನಿಯ ಆತ್ಮಹತ್ಯೆ ತಿಳಿದು ಧಾವಿಸಿ ಬರುವಾಗ ಆಕ್ಸಿಡೆಂಟ್‌, ಪತಿಯೂ ಸಾವು!

ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡ ಕರೆಪ್ಪ, ಬೈಕ್‌ನಲ್ಲಿ ಆಸ್ಪತ್ರೆಗೆ ಧಾವಿಸುತ್ತಿದ್ದ ವೇಳೆ ಅಪಘಾತವಾಗಿದೆ.

ಮದರಸಾದಲ್ಲಿ ಅಕ್ರಮವಾಗಿ ಪಿಸ್ತೂಲ್ ಸಂಗ್ರಹ; ಮೂವರ ಬಂಧನ

ಪಿಸ್ತೂಲ್ ಪತ್ತೆ, ಬಿಹಾರ ಮದರಸಾಕ್ಕೆ ಬೀಗ; ಮೂವರ ಬಂಧನ

Bihar madrasa sealed: ಮದರಸಾದ ಮೇಲೆ ದಾಳಿ ನಡೆಸಿದ ಪೊಲೀಸರು, ಒಂದು ಪಿಸ್ತೂಲ್, ಕಾರ್ಟ್ರಿಡ್ಜ್‌ಗಳು ಮತ್ತು ಹಲವಾರು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿರುವ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ವಿಚಾರಣೆಗಾಗಿ ಮೂವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಮದರಸಾಗೆ ಬೀಗ ಜಡಿಯಲಾಗಿದೆ.

Love Jihad: ಹುಬ್ಬಳ್ಳಿ ಜಿಮ್‌ ಲವ್‌ ಜಿಹಾದ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡನ ಕೈವಾಡ: ಯುವತಿ ಆರೋಪ

ಹುಬ್ಬಳ್ಳಿ ಲವ್‌ ಜಿಹಾದ್‌ನಲ್ಲಿ ಕಾಂಗ್ರೆಸ್‌ ಮುಖಂಡನ ಕೈವಾಡ: ಯುವತಿ ಆರೋಪ

ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಆರೋಪಿ ನನ್ನ ಖಾಸಗಿ ಕ್ಷಣಗಳ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆರೋಪಿಸಿದ್ದಾರೆ.

Rowdy Sheeter murder: ಸಿಗರೇಟ್‌ ವಿಚಾರಕ್ಕೆ ಗ್ಯಾಂಗ್‌ವಾರ್‌, ಮದ್ದೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ

ಸಿಗರೇಟ್‌ಗಾಗಿ ಗ್ಯಾಂಗ್‌ವಾರ್‌, ಮದ್ದೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ

ಸಿಗರೇಟ್‌ ವಿಚಾರವಾಗಿ ಎದ್ದ ತಗಾದೆ ಎರಡು ಗುಂಪುಗಳ ನಡುವೆ ಬಡಿದಾಟಕ್ಕೆ ತಿರುಗಿದ್ದು, ಇದರಲ್ಲಿ ರೌಡಿ ಶೀಟರ್, ಮರಳಿಗ ಗ್ರಾಮದ ಯಶ್ವಂತ್ @ ಕಜ್ಜಿ ಅಭಿ ಎಂಬಾತನನ್ನು ಕೊಲೆ ಮಾಡಲಾಗಿದೆ. ಹೊಡೆದಾಟದಲ್ಲಿ ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Loading...