ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಸಾಲದ ಬಡ್ಡಿ ಪಾವತಿಸದ್ದಕ್ಕೆ ಯುವತಿಯನ್ನು ವಿವಸ್ತ್ರಗೊಳಿಸಿ ವಿಡಿಯೊ ರೆಕಾರ್ಡ್ ಮಾಡಿದ ಕಿಡಿಗೇಡಿಗಳು; ಬೆಂಗಳೂರಿನಲ್ಲೊಂದು ರಾಜ್ಯವೇ ತಲೆತಗ್ಗಿಸುವ ಘಟನೆ

ಸಾಲದ ಬಡ್ಡಿ ಪಾವತಿಸದ್ದಕ್ಕೆ ಯುವತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ

Woman Assaulted: ಸಾಲದ ಬಡ್ಡಿ ಪಾವತಿಸದ ಕಾರಣ ಯುವತಿಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಸಂತ್ರಸ್ತೆ ಎರಡು ವರ್ಷಗಳ ಹಿಂದೆ ರೇಷ್ಮಾ ಅವರಿಂದ 1 ಲಕ್ಷ ರೂಪಾಯಿ ಸಾಲ ಪಡೆದಿದ್ದು, ಕಳೆದ ಆರು ತಿಂಗಳಿನಿಂದ ಬಡ್ಡಿ ಪಾವತಿಸಿರಲಿಲ್ಲ ಎನ್ನಲಾಗಿದೆ.

Parashurama caught in Lokayukta trap: ಲೋಕಾಯುಕ್ತ ಬಲೆಗೆ ಬಿದ್ದ ಪರಶುರಾಮ; ಪರಾರಿಯಾಗಿದ್ದ ವೀರೇಶನ ವಿರುದ್ಧವೂ ಇಲಾಖಾ ಕ್ರಮ

ಲಂಚ ಪ್ರಕರಣ: ಇಬ್ಬರು ಪೊಲೀಸ್ ಪೇದೆ ಅಮಾನತು

ಸೆ.3ರಂದು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ರೂಢಿಗತ ಅಪರಾಧಿ ಕಾರ್ತಿಕ ಎಂಬಾತನಿಗೆ ಗಡಿಪಾರು ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿತ್ತು. ಒಂದು ಲಕ್ಷ ರೂ. ನೀಡುವಂತೆ ಒತ್ತಡ ಹೇರಲಾಗಿತ್ತು ಎನ್ನಲಾಗಿದ್ದು, ಈ ಪೈಕಿ ಈಗಾಗಲೇ ₹50 ಸಾವಿರ ಪಡೆದಿದ್ದರು. ಬಳಿಕ ಮತ್ತೆ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Accident: ಬೊಲೆರೋ ಪಲ್ಟಿ: 10 ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಬೊಲೆರೋ ಪಲ್ಟಿ: 10 ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳ ಮೂಲದ 10 ಮಂದಿ ಕಾರ್ಮಿಕರು ಹಳೆ ಉಪ್ಪಾರಹಳ್ಳಿಯಿಂದ ದೊಡ್ಡಬಳ್ಳಾ ಪುರದ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಾಹನದ ಮುಂಭಾಗದ ಟೈರ್ ಏಕಾಏಕಿ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ರಸ್ತೆ ಬದಿಗೆ ಉರುಳಿ 3–4 ಬಾರಿ ಪಲ್ಟಿಯಾಗಿದೆ ಎನ್ನಲಾಗಿದೆ.

Chamarajanagar News: ಪ್ರೀತಿ ಹೆಸರಿನಲ್ಲಿ ಕಿರುಕುಳ; ಚಾಮರಾಜನಗರದಲ್ಲಿ ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಪ್ರೀತಿ ಹೆಸರಿನಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ಕಾಟಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಯಳಂದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಮೊಟ್ಟೆಯಲ್ಲಿ ಹುಳು ಪತ್ತೆ: ಬ್ಲಿಂಕಿಟ್ ವಿರುದ್ಧ ದೂರು; ಮಂಗಳೂರಿನ ಆಹಾರ ಮಳಿಗೆ ಮೇಲೆ ಅಧಿಕಾರಿಗಳ ದಾಳಿ

ಬ್ಲಿಂಕಿಟ್ ನಲ್ಲಿ ಆರ್ಡರ್ ಮಾಡಿದ್ದ ಮೊಟ್ಟೆಯಲ್ಲಿ ಹುಳು ಪತ್ತೆ

ಕ್ವಿಕ್-ಕಾಮರ್ಸ್ ಪ್ಲಾಟ್‌ಫಾರ್ಮ್ ಬ್ಲಿಂಕಿಟ್ ನಲ್ಲಿ ಆರ್ಡರ್ ಮಾಡಿದ್ದ ಮೊಟ್ಟೆಯಲ್ಲಿ ಹುಳು ಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗ್ರಾಹಕರು ದೂರು ನೀಡಿದ ಬಳಿಕ ತನಿಖೆ ಹಿನ್ನೆಲೆಯಲ್ಲಿ ಆಹಾರ ಮಳಿಗೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಮಳಿಗೆಯಲ್ಲಿ ಹಾನಿಗೊಳಗಾಗಿರುವ ಮೊಟ್ಟೆಗಳು ಕಂಡು ಬಂದಿದ್ದರಿಂದ ಶೇಖರಣಾ ಕೊಠಡಿಯನ್ನು ಸೀಲ್ ಮಾಡಲಾಗಿದೆ.

ತೆಲಂಗಾಣ ಸೇನಾ ನೆಲೆಯಿಂದ 4 ಎಕೆ-203 ರೈಫಲ್‌ ಸೇರಿ11 ಶಸ್ತ್ರಾಸ್ತ್ರಗಳ ಕಳವು

ಸೇನಾ ನೆಲೆಯಿಂದ ಶಸ್ತ್ರಾಸ್ತ್ರಗಳ ಕಳವು

Army Weapons Theft: ತೆಲಂಗಾಣದ ಸಿಕಂದರಾಬಾದ್ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮದ್ರಾಸ್ ರೆಜಿಮೆಂಟ್‌ನ ಅತ್ಯಂತ ಸುರಕ್ಷಿತ ಶಸ್ತ್ರಾಗಾರದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಕಳವು ಮಾಡಲಾಗಿದೆ. ಈ ಬಗ್ಗೆ ತೆಲಂಗಾಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್‌ 30 ರಾತ್ರಿ ಕಳವು ನಡೆದಿರಬಹುದು ಎನ್ನಲಾಗಿದೆ.

ಮೂವರು ಮಹಿಳೆಯರು ಸೇರಿ ನಾಲ್ವರು ಬಂಧನ

ಮೂವರು ಮಹಿಳೆಯರು ಸೇರಿ ನಾಲ್ವರು ಬಂಧನ

ನಗರದ ಕರೇಕಲ್ಲಹಳ್ಳಿ ಸಮೀಪದ ಇಡಗೂರು ಮುಖ್ಯರಸ್ತೆ ಬಳಿಯ ಹಳೆಯ ಮನೆಯೊಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ರೇಷ್ಮಾ (41), ಆಯೇಷಾ (25), ಕವಿತಾಬಾಯಿ (31) ಹಾಗೂ ಶಶಿಕುಮಾರ್ (23) ಎಂದು ಗುರುತಿಸಲಾಗಿದೆ.

ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು

ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಗುಡಿಬಂಡೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಆಂಧ್ರಪ್ರದೇಶ ಮೂಲದ 31 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕೊತ್ತವಾರಿ ಪಲ್ಲಿ ಗ್ರಾಮದ ನಿವಾಸಿ ಸಿಂಧೂಜಾ (31) ಎಂದು ಗುರುತಿಸಲಾಗಿದೆ.

ರೈಲಿಗೆ ಸಿಲುಕಿ ಯುವಕ ಸಾವು: ಆತ್ಮಹತ್ಯೆ ಶಂಕೆ

ರೈಲಿಗೆ ಸಿಲುಕಿ ಯುವಕ ಸಾವು: ಆತ್ಮಹತ್ಯೆ ಶಂಕೆ

ಸುಮಾರು ಎಂಟು ವರ್ಷಗಳ ಹಿಂದೆ ಬೆಂಗಳೂರಿನ ದೊಮ್ಮಸಂದ್ರದ ಮೀನಾಕ್ಷಿ ಅವರನ್ನು ವಿವಾಹವಾಗಿದ್ದ ಮಂಜುನಾಥ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ 20 ದಿನಗಳ ಹಿಂದೆ ಪತ್ನಿ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದರು. ಬಳಿಕ ಅವರು ವಾಪಸ್ ಬಾರದ ಹಿನ್ನೆಲೆಯಲ್ಲಿ ಮಂಜುನಾಥ್ ನೊಂದಿದ್ದರು ಎನ್ನಲಾಗಿದೆ.

Fake Lokayukat Officer: ಲೋಕಾಯುಕ್ತ ಅಧಿಕಾರಿ ಎಂದು ನರ್ಸ್‌ಗೆ ಬೆದರಿಕೆ: 50 ಸಾವಿರ ವಸೂಲಿ: ನಕಲಿ ಅಧಿಕಾರಿ ಚೇತನ್‌ ಬಂಧನ

ನಕಲಿ ಅಧಿಕಾರಿ ಚೇತನ್‌ ಬಂಧನ

ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುನಿತಾ ಅವರು ತಮ್ಮ ಸ್ವಗ್ರಾಮ ಪೆರೇಸಂದ್ರದಲ್ಲಿನ ಮನೆಯಲ್ಲಿ ಸರ್ಕಾರಿ ಔಷಧಿಗಳನ್ನು ಬಳಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತನಿಖೆಗೆ ಆದೇಶಿಸಿದ್ದರೆನ್ನಲಾಗಿದೆ.

ಭದ್ರತಾ ಪಡೆಗಳ ಮಿಂಚಿನ ಕಾರ್ಯಾಚರಣೆ; ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಬಳಿ ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಪ್ರಜೆಯ ಬಂಧನ

ಜಮ್ಮುವಿನಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧನ

Pakistani Infiltrator Arrests: ಜಮ್ಮು ಮತ್ತು ಕಾಶ್ಮೀರದ ಕನಚಕ್ ಸೆಕ್ಟರ್‌ನಲ್ಲಿ ಅಂತಾರಾಷ್ಟ್ರೀಯ ಗಡಿ (ಐಬಿ) ಬಳಿ ಭದ್ರತಾ ಪಡೆ (ಬಿಎಸ್‌ಎಫ್) ಶಂಕಿತ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದೆ. ಒಳನುಗ್ಗಿದ ವ್ಯಕ್ತಿಯನ್ನು ಪಾಕಿಸ್ತಾನದ ಸಿಯಾಲ್‌ಕೋಟ್ ಜಿಲ್ಲೆಯ ಲುನಿ ಗ್ರಾಮದ ನಿವಾಸಿ ನಜೀರ್ ಎಂದು ಗುರುತಿಸಲಾಗಿದೆ.

20 ವರ್ಷ ಕಳೆದರೂ ನಡೆಯದ ಭೂ ಹಂಚಿಕೆ: ಚಿಕ್ಕಬಳ್ಳಾಪುರದಲ್ಲಿ ಮನನೊಂದು ಕಾರ್ಗಿಲ್ ಯೋಧ ಆತ್ಮಹತ್ಯೆಗೆ ಯತ್ನ

ಕಾರ್ಗಿಲ್ ಯೋಧ ಆತ್ಮಹತ್ಯೆಗೆ ಯತ್ನ

chikkaballapur crime: ಕಾರ್ಗಿಲ್ ಯೋಧನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಭೂ ಹಂಚಿಕೆಯಲ್ಲಿ ದೀರ್ಘಕಾಲದ ವಿಳಂಬದ ಕಾರಣದಿಂದ ನೊಂದಿದ್ದ ಅವರು ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಅವರು ಚೇತರಿಸಿಕೊಂಡ ಬಳಿಕ ಅವರ ಹೇಳಿಕೆಗಳನ್ನು ಪಡೆಯುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರು ವರ್ಷಗಳ ನಂತರ ಪ್ರಕರಣ ಬೆಳಕಿಗೆ, ಮದರಸಾ ಶಿಕ್ಷಕನ ಬಂಧನ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮದರಸಾ ಶಿಕ್ಷಕನ ಬಂಧನ

Minor Boy Physical Assaulted: ಅಪ್ರಾಪ್ತ ಬಾಲಕನ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮದರಸಾ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಕೇರಳಂನ ಕಣ್ಣೂರಿನಲ್ಲಿ ಘಟನೆ ನಡೆದಿದೆ. ಮಲಪ್ಪುರಂನ ತವನೂರು ಮೂಲದ 45 ವರ್ಷದ ಮೊಹಮ್ಮದ್ ಬಶೀರ್ ಎಂಬ ಆರೋಪಿಯನ್ನು ಚೋಕ್ಲಿ ಪೊಲೀಸರು ಬಂಧಿಸಿದ್ದಾರೆ.

Bengaluru Accident: ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ; ಪತ್ನಿ ಕಣ್ಣೆದುರೇ ನವ ವಿವಾಹಿತ ದುರ್ಮರಣ!

ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ; ಪತ್ನಿ ಕಣ್ಣೆದುರೇ ನವ ವಿವಾಹಿತ ದುರ್ಮರಣ!

ಬೆಂಗಳೂರಿನ ಹೊರಬಲಯದ ನೆಲಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬಸ್‌ ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಸವಾರ ಕೆಳಗೆ ಬಿದ್ದಿದ್ದಾರೆ. ಅವರ ಮೇಲೆ ಬಸ್ ಹರಿದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಕ್ಕಳಾಗಿಲ್ಲವೆಂದು ಪತ್ನಿಗೆ ಕಿರುಕುಳ; ಮತ್ತೊಂದು ನಿಶ್ಚಿತಾರ್ಥ ಆರೋಪ: ಪತಿ ವಿರುದ್ಧ ಪತ್ನಿಯಿಂದ ದೂರು; ‘ನಾನು ಮೋಸ ಮಾಡಿಲ್ಲ’ ಎಂದು ಮಸ್ತಾನ್ ಸ್ಪಷ್ಟನೆ

‘ನಾನು ಮೋಸ ಮಾಡಿಲ್ಲ’ ಎಂದು ಮಸ್ತಾನ್ ಸ್ಪಷ್ಟನೆ

ತಾಲೂಕಿನ ಗಂಗಿರೆಡ್ಡಿಪಾಳ್ಯದ ಸುಲ್ತಾನಾ (25), ಕೊಂಡ್ಲಿಗಾನಹಳ್ಳಿ ಗ್ರಾಮದ ಮಸ್ತಾನ್ (26) ಅವರನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಮಕ್ಕಳಾಗದ ಕಾರಣವನ್ನು ಮುಂದಿಟ್ಟುಕೊಂಡು ಪತಿ ನಿರಂತರವಾಗಿ ಅವಮಾನಿಸಿ ಕಿರುಕುಳ ನೀಡುತ್ತಿದ್ದರು ಎಂದು ಸುಲ್ತಾನಾ ದೂರಿನಲ್ಲಿ ಆರೋಪಿಸಿದ್ದಾರೆ. ಮಕ್ಕಳಾಗದ ಹಿನ್ನೆಲೆಯಲ್ಲಿ ದಂಪತಿ ವಿವಿಧ ಚಿಕಿತ್ಸೆಯನ್ನೂ ಪಡೆದಿದ್ದರು ಎನ್ನಲಾಗಿದೆ.

ಜಮೀನು ಮಾರಾಟ ಮಾಡಿದ ಹೆತ್ತವರನ್ನು ರಸ್ತೆಯಲ್ಲೇ ಥಳಿಸಿದ ಮಕ್ಕಳು; ವಿಡಿಯೊ ವೈರಲ್‌

ಜಮೀನು ಮಾರಾಟ ಮಾಡಿದ ಹೆತ್ತವರನ್ನು ರಸ್ತೆಯಲ್ಲೇ ಥಳಿಸಿದ ಮಕ್ಕಳು

Viral Video: ಮಹಾರಾಷ್ಟ್ರದಲ್ಲಿ ತಾಯಿಯ ಹೆಸರಿನಲ್ಲಿದ್ದ ಜಮೀನನ್ನು ತಮ್ಮನ್ನು ಕೇಳದೆ ಮಾರಟ ಮಾಡಿದ್ದಾರೆ ಎಂಬ ಕಾರಣಕ್ಕೆ ಇಬ್ಬರು ಪುತ್ರರು ವೃದ್ಧ ತಂದೆ-ತಾಯಿಯ ರಸ್ತೆ ಮಧ್ಯೆ ದೊಣ್ಣೆಯಿಂದ ಕ್ರೂರವಾಗಿ ಹಲ್ಲೆ ಮಾಡಿರುವ ದಾರುಣ ಘಟನೆ ಸಂಭವಿಸಿದೆ. ಸದ್ಯ ಈ ಘಟನೆಯ ವಿಡಿಯೊ ವೈರಲ್‌ ಆಗಿದೆ.

ಪಿಯುಸಿ ವಿದ್ಯಾರ್ಥಿನಿ ಸಾವು: ಪ್ರಕರಣ ದಾಖಲು

ಪಿಯುಸಿ ವಿದ್ಯಾರ್ಥಿನಿ ಸಾವು: ಪ್ರಕರಣ ದಾಖಲು

ಮೃತ ಶ್ರೇಯಾ ಅವರು ರಾಮಕೃಷ್ಣ ಹಾಗೂ ನಾಗರತ್ನಮ್ಮ ದಂಪತಿಯ ಕಿರಿಯ ಪುತ್ರಿಯಾಗಿದ್ದು, ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಕಾಲೇಜಿನಿಂದ ಚಿಕ್ಕಬಳ್ಳಾಪುರಕ್ಕೆ ಮರಳಿದ್ದರು ಎನ್ನಲಾಗಿದೆ. ಪೋಷಕರು ಮಗಳಿಗೆ ಚಿಕಿತ್ಸೆ ಕೊಡಿಸಿದ್ದರು ಎಂದು ತಿಳಿದುಬಂದಿದೆ.

ಬ್ಯಾಂಕ್, ರೈಲ್ವೆಯಲ್ಲಿ ಹೆಚ್ಚಿನ ಭ್ರಷ್ಟಾಚಾರ; 2025ರಲ್ಲಿ 70,500ಕ್ಕೂ ಹೆಚ್ಚು ದೂರು ದಾಖಲು

2025ರಲ್ಲಿ 70,500ಕ್ಕೂ ಹೆಚ್ಚು ಭ್ರಷ್ಟಾಚಾರ ದೂರು ದಾಖಲು

ಸರ್ಕಾರಿ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿರುವುದನ್ನು ಕೇಂದ್ರ ಜಾಗೃತ ಆಯೋಗದ ವಾರ್ಷಿಕ ವರದಿ ಬಹಿರಂಗಪಡಿಸಿದೆ. ಸರ್ಕಾರಿ ಸಂಸ್ಥೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಬ್ಯಾಂಕ್, ರೈಲ್ವೆಗಳಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆದಿವೆ ಎಂಬುದನ್ನು ಅಂಕಿ ಅಂಶಗಳು ತೋರಿಸಿವೆ. 2025ರಲ್ಲಿ ಸರ್ಕಾರಿ ಸಂಸ್ಥೆಗಳ ವಿರುದ್ಧ 70,500ಕ್ಕೂ ಹೆಚ್ಚು ಭ್ರಷ್ಟಾಚಾರ ದೂರುಗಳನ್ನು ಕೇಂದ್ರ ಜಾಗೃತ ಆಯೋಗವು ದಾಖಲಿಸಿದೆ.

ಬಾಗಲಕೋಟೆಯ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಾಗಲೇ ಮೇಲ್ಚಾವಣಿ ಕುಸಿತ; ಹಲವು ಮಕ್ಕಳಿಗೆ ಗಾಯ!

ಸರ್ಕಾರಿ ಶಾಲೆಯ ಮೇಲ್ಚಾವಣಿ ಕಾಂಕ್ರೀಟ್‌ ಕುಸಿದು ಹಲವು ಮಕ್ಕಳಿಗೆ ಗಾಯ

Bagalkot News: ಬಾಗಲಕೋಟೆಯ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ತರಗತಿ ನಡೆಯುವಾಗಲೇ ಕೊಠಡಿ ಮೇಲ್ಛಾವಣಿ ಕುಸಿತಗೊಂಡಿದ್ದು, ಗಾಯಗೊಂಡ ಮಕ್ಕಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

3 ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರಿನ ಮಹಿಳೆ

ಅವಳಿ ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆಗೆ ಯತ್ನ

self herming: ಮಹಿಳೆಯೊಬ್ಬರು ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆರಿಗೆ ಬಳಿಕ ಮಹಿಳೆಯ ನಡವಳಿಕೆಯಲ್ಲಿ ಬದಲಾವಣೆಯಾಗಿದ್ದು, ಆಕೆ ಮಕ್ಕಳನ್ನು ನೋಡಿಕೊಳ್ಳಲು ನಿರಾಸಕ್ತಿ ತೋರಿಸಿದ್ದಳು. ಮಕ್ಕಳನ್ನು ಆಶ್ರಮಕ್ಕೆ ಕಳುಹಿಸುವ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದಳು ಎಂದು ಮನೆಯವರು ಆರೋಪಿಸಿದ್ದಾರೆ.

ಬಿರಿಯಾನಿ ತಿಂದಿದ್ದಕ್ಕೆ ಶಿಕ್ಷೆ; ನೊಂದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Crime news: ಬಿರಿಯಾನಿ ತಿಂದಿದ್ದಕ್ಕೆ ಶಿಕ್ಷೆ ನೀಡಿದ್ದಕ್ಕೆ ನೊಂದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಫರಿದಾಬಾದ್‌ನ ನವೋದಯ ವಿದ್ಯಾ ನಿಕೇತನ ಸೀನಿಯರ್ ಸೆಕೆಂಡರಿ ಶಾಲೆಯಲ್ಲಿ ಮಂಗಳವಾರ ನಡೆದಿದೆ.ಫರಿದಾಬಾದ್‌ನ ದಬುವಾ ನಿವಾಸಿ ಜಾನ್ವಿ ಶಾಲೆಯ ಮೂರನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾಳೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

ದೇವಾಲಯದ ಬೀಗ ಮುರಿದು 12 ಲಕ್ಷ ಮೌಲ್ಯದ ಬೆಳ್ಳಿ, ಚಿನ್ನಾಭರಣ ಕಳ್ಳತನ

ದೇವಾಲಯದ ಬೀಗ ಮುರಿದು ಬೆಳ್ಳಿ, ಚಿನ್ನಾಭರಣ ಕಳ್ಳತನ

ದೇವಾಲಯಗಳ ಬೀಗ ಮುರಿದು ದೇವರ ವಿಗ್ರಹದ ಮೇಲಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ ಬೆಳ್ಳಿ ಮತ್ತು ಸುಮಾರು 2.25 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಹಾಸನದಅರಸೀಕೆರೆಯ ಚಿಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೂದಲು ಚಿಕ್ಕದಾಗಿ ಕತ್ತರಿಸಿಕೊಂಡಿದ್ದಕ್ಕೆ 21 ವರ್ಷದ ಪುತ್ರಿಯನ್ನು ಕೊಂದ ತಂದೆ, ಚಿಕ್ಕಪ್ಪ; ಕ್ಷುಲ್ಲಕ ಕಾರಣಕ್ಕೆ ಹಾರಿಹೋಯ್ತು ಕರ್ನಾಟಕದಲ್ಲಿ ಕೆಲಸ ಮಾಡುತ್ತಿದ್ದ ಮಧ್ಯ ಪ್ರದೇಶದ ಯುವತಿಯ ಪ್ರಾಣ

ಕ್ಷುಲ್ಲಕ ಕಾರಣಕ್ಕೆ ತಂದೆ-ಚಿಕ್ಕಪ್ಪನಿಂದಲೇ ಯುವತಿಯ ಕೊಲೆ

Gwalior Horror: ಮಧ್ಯ ಪ್ರದೇಶದ ಗ್ವಾಲಿಯರ್ ಜಿಲ್ಲೆಯ ಡಬ್ರಾದಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ನಂದಿನಿ ಯಾದವ್‌ ಅವರನ್ನು ತಂದೆ ಮತ್ತು ಚಿಕ್ಕಪ್ಪ ಸೇರಿ ಕೊಲೆ ಮಾಡಿದ್ದಾರೆ. ಕೆಲಸಕ್ಕೆ ಹೋಗುವುದು, ಕೂದಲು ಚಿಕ್ಕದಾಗಿ ಕತ್ತರಿಸಿಕೊ‍ಳ್ಳುವುದು ಹಾಗೂ ರಾಖಿ ಸಹೋದರನನ್ನು ಮನೆಗೆ ಕರೆತಂದಿರುವುದಕ್ಕೆ ಹತ್ಯೆ ಮಾಡಲಾಗಿದೆ. ಸದ್ಯ ಪಾಪಿ ತಂದೆಯನ್ನು ಬಂಧಿಸಲಾಗಿದ್ದು, ಚಿಕ್ಕಪ್ಪ ತಲೆಮರೆಸಿಕೊಂಡಿದ್ದಾನೆ.

Accident: ಅಪಘಾತದಲ್ಲಿ ಅಣ್ಣ-ತಮ್ಮಂದಿರು ಸ್ಥಳದಲ್ಲೇ ಸಾವು: ಆಟೋ ತಪ್ಪಿಸಲು ಹೋಗಿ ಎದುರಿನಿಂದ ಬಂದ ಇಚರ್‌ಗೆ ಬೈಕ್ ಡಿಕ್ಕಿ

ಅಪಘಾತದಲ್ಲಿ ಅಣ್ಣ-ತಮ್ಮಂದಿರು ಸ್ಥಳದಲ್ಲೇ ಸಾವು

ಬಾಗೇಪಲ್ಲಿ ರಾಷ್ಟ್ರೀಯ ಹೆದ್ದಾರಿಯ ಚಂಡೂರು ಕ್ರಾಸ್ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಅಣ್ಣ-ತಮ್ಮಂದಿರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಯರಲ್ಲಕ್ಕೇನಹಳ್ಳಿ ಗ್ರಾಮದ ನಿವಾಸಿಗಳಾದ ಬಾಲರಾಜು (25) ಹಾಗೂ ರಾಜಶೇಖರ್ (26) ಎಂದು ಗುರುತಿಸಲಾಗಿದೆ.

Loading...