ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

Bomb Threat: ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ

ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ

ಹಲಸೂರು (Halasuru) ಬಳಿ ಇರುವ ಇಟಲಿ ರಾಯಭಾರಿ ಕಚೇರಿಗೆ (Italian Embassy) ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಜನವರಿ 30ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. ಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬವರು ಹಲಸೂರು ಪೊಲೀಸರಿಗೆ ದೂರು ನೀಡಿದ್ದಾರೆ.

Assault Case: ಮುಸ್ಲಿಂ ದಂಪತಿಯ ಸಹಾಯಕ್ಕೆ ಬಂದ ಹಿಂದೂ ಯುವಕನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರಿಂದ ಹಲ್ಲೆ

ದಂಪತಿ ಸಹಾಯಕ್ಕೆ ಬಂದ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಹಲ್ಲೆ

ಬಸ್ ನಿಲ್ದಾಣದಲ್ಲಿ ಬುರ್ಕಾ ಧರಿಸಿದ್ದ ಆಫಿಯಾ ಮತ್ತು ಆಕೆಯ 16 ವರ್ಷದ ಮಗಳ ಜೊತೆ ಮಾತನಾಡುತ್ತಿದ್ದ ವೆಂಕಟೇಶನನ್ನು ಕಂಡ ಕೆಲವು ಮುಸ್ಲಿಂ ಯುವಕರು, ಆತ ಮುಸ್ಲಿಂ ಬಾಲಕಿಯನ್ನು ಪ್ರೀತಿಸುತ್ತಿದ್ದಾನೆ ಎಂದು ತಪ್ಪು ಭಾವಿಸಿದ್ದಾರೆ. 'ಇವರು ನಮ್ಮೂರಿನವರು, ನಾನು ಇವರನ್ನು ಮನೆಗೆ ಕರೆದೊಯ್ಯಲು ಬಂದಿದ್ದೇನೆ' ಎಂದು ವೆಂಕಟೇಶ ಎಷ್ಟೇ ಬೇಡಿಕೊಂಡರೂ ಕೇಳದ ಯುವಕರ ಗುಂಪು ಆತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.

ಪ್ರಿಯಕರನೊಟ್ಟಿಗೆ ಸೇರಿ ಪತಿಗೆ ಸ್ಕೆಚ್‌; ಹಿಟ್‌ ಆ್ಯಂಡ್‌ ರನ್‌ ನಾಟಕ, ನವವಿವಾಹಿತೆಯ ಬಣ್ಣ ಬಯಲಾಗಿದ್ದೇಗೆ?

ಪ್ರಿಯಕರನೊಟ್ಟಿಗೆ ಸೇರಿ ಪತಿಗೆ ಸ್ಕೆಚ್‌; ಯುವತಿ ಬಣ್ಣ ಬಯಲಾಗಿದ್ದೇಗೆ?

ಕಳೆದ ವರ್ಷ ಮೇಘಾಲಯದಲ್ಲಿ ನಡೆದಿದ್ದ ರಾಜಾ ರಘುವಂಶಿ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪತ್ನಿಯೇ ತನ್ನ ಪ್ರಿಯಕರನೊಟ್ಟಿಗೆ ಸೇರಿ ತನ್ನ ಪತಿಯನ್ನು ಹತ್ಯೆ ಮಾಡಿದ್ದಳು. ಇದೀಗ ಅಂತಹುದೇ ಪ್ರಕರಣವೊಂದು ನಡೆದಿದ್ದು, ನವವಿವಾಹಿತೆ ತನ್ನ ಪತಿಯನ್ನು ಕೊಲ್ಲಲು ತನ್ನ ಪ್ರಿಯಕರನಿಗೆ ಸುಪಾರಿ ನೀಡಿದ್ದಳು ಎಂದು ತಿಳಿದು ಬಂದಿದೆ.

ಮಹಿಳೆ ಕಿಡ್ನ್ಯಾಪ್‌ ಪ್ರಕರಣ; ಮಾಜಿ ಸಚಿವ ಎಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಶಾಕ್‌

ಮಹಿಳೆ ಕಿಡ್ನ್ಯಾಪ್‌ ಪ್ರಕರಣ; ಎಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಶಾಕ್‌

HD Revanna Case: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ರದ್ದು ಕೋರಿ ಎಚ್.ಡಿ.ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ. ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠ, ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವು ಮಾಡಿದೆ.

Shakti Scheme: ಹೆತ್ತವರು ಬೈದರೆಂದು ಅಕ್ಕ- ತಮ್ಮ ಮನೆಯಿಂದ ಪರಾರಿ, ಶಕ್ತಿ ಯೋಜನೆ ಬಳಸಿ ಸುತ್ತಾಟ!

ಮನೆಯಿಂದ ಪರಾರಿಯಾಗಿ ಶಕ್ತಿ ಯೋಜನೆ ಬಳಸಿ ಊರು ಸುತ್ತಾಡಿದ ಅಕ್ಕ- ತಮ್ಮ!

ಟ್ಯೂಷನ್ ಗೆ ಹಾಜರಾಗದ ಕಾರಣ ಪೋಷಕರು ಮಕ್ಕಳನ್ನು ಬೈದಿದ್ದರು. ಬೈದಿದ್ದರಿಂದ ಅಸಮಾಧಾನಗೊಂಡ 13 ವರ್ಷದ ಬಾಲಕಿ ತನ್ನ ಒಂಬತ್ತು ವರ್ಷದ ಸಹೋದರನೊಂದಿಗೆ ಮನೆ ತೊರೆಯಲು ನಿರ್ಧರಿಸಿದ್ದಳು. ಫೆಬ್ರವರಿ 1ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿ ತನ್ನ ಆಧಾರ್ ಕಾರ್ಡ್ ತೆಗೆದುಕೊಂಡು ತನ್ನ ಸಹೋದರನೊಂದಿಗೆ ಮನೆಯಿಂದ ಹೊರಬಂದಿದ್ದಳು.

ಪ್ರಿಯಕರನೊಂದಿಗೆ ಸೇರಿ ಮಾವನ ಕತ್ತು ಸೀಳಿ ಕೊಲೆಗೈದ ಸೊಸೆ; ಭೀಕರ ದೃಶ್ಯವನ್ನು ರೆಕಾರ್ಡ್ ಮಾಡಿದ ಪಾಪಿಗಳು

ಮಾವನ ಗಂಟಲು ಸೀಳಿ ಕೊಲೆ ಮಾಡಿದ ಸೊಸೆ

ಮೂವರು ಮಕ್ಕಳ ತಾಯಿ ತನ್ನ ಪ್ರಿಯಕರ ಹಾಗೂ ಸಹಚರರೊಂದಿಗೆ ಸೇರಿ ಮಾವನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಗಂಟಲು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ. ಈ ಭೀಕರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಲಾಗಿದ್ದು, ಪೊಲೀಸರು ಸೊಸೆ ಪಿಂಕಿ ರಾಜ್‌ಭರ್, ಆಕೆಯ ಪ್ರಿಯಕರ ರಾಮ್ಮಿಲನ್ ಹಾಗೂ ಇಬ್ಬರು ಸಹಚರರನ್ನು ಬಂಧಿಸಿ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.

Chikkamagaluru: ಹಿಂದೂ ಗೃಹಿಣಿ ಮನೆಯಲ್ಲಿ ಅರೆಬೆತ್ತಲಾಗಿ ಕಂಡುಬಂದ ಮುಸ್ಲಿಂ ಕಾಂಗ್ರೆಸ್‌ ಮುಖಂಡ, ಹಲ್ಲೆ

ಹಿಂದೂ ಗೃಹಿಣಿ ಮನೆಯಲ್ಲಿ ಕಂಡುಬಂದ ಮುಸ್ಲಿಂ ಕಾಂಗ್ರೆಸ್‌ ಮುಖಂಡ, ಹಲ್ಲೆ

ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹಿಂದೂ ಹುಡುಗರು, ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

Road Acident: ರೋಣ ಸಮೀಪ ಭೀಕರ ಅಪಘಾತ: ಕ್ರೂಸರ್‌ಗೆ ಲಾರಿ ಡಿಕ್ಕಿ, ಮೂವರು ಕಾರ್ಮಿಕರು ಸಾವು

ರೋಣ ಸಮೀಪ ಭೀಕರ ಅಪಘಾತ: ಕ್ರೂಸರ್‌ಗೆ ಲಾರಿ ಡಿಕ್ಕಿ, ಮೂವರು ಕಾರ್ಮಿಕರು ಸಾವು

ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

14 ವರ್ಷದ ವಿದ್ಯಾರ್ಥಿನಿಯ ಜೀವನವನ್ನೇ ಕತ್ತಲಿಗೆ ದೂಡಿದ ಶಿಕ್ಷಕಿ; ಹೋಮ್‌ ವರ್ಕ್‌ ಮಾಡದ್ದಕ್ಕೆ ಕಪಾಳಕ್ಕೆ ಹೊಡೆದ ಪೆಟ್ಟಿಗೆ ಶಾಶ್ವತವಾಗಿ ಕಿವುಡಾದ ಬಾಲಕಿ

ಶಿಕ್ಷಕಿ ಹೊಡೆದ ಏಟಿಗೆ ಬಾಲಕಿಯ ಕಿವಿ ಡಮಾರ್

ಗಾಂಧಿನಗರದ ಸೆಕ್ಟರ್–28ರಲ್ಲಿರುವ ಖಾಸಗಿ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿ ಪಾರುಲ್‌ಬೆನ್, ಹೋಮ್‌ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 14 ವರ್ಷದ ವಿದ್ಯಾರ್ಥಿನಿಯ ಎಡಗೆನ್ನೆಗೆ ಜೋರಾಗಿ ಕಪಾಳಮೋಕ್ಷ ಮಾಡಿದ್ದಾಳೆ. ಆ ಹೊಡೆತದಿಂದ ವಿದ್ಯಾರ್ಥಿನಿಯ ಕಿವಿಯ ತಮಟೆ ಹರಿದು ಹೋಗಿದೆ. ನಂತರ ವೈದ್ಯರು ಬಾಲಕಿಯು ಶಾಶ್ವತವಾಗಿ ಶ್ರವಣಶಕ್ತಿ ಕಳೆದುಕೊಂಡಿದ್ದಾಳೆ ಎಂದು ದೃಢಪಡಿಸಿದ್ದಾರೆ.

ಬಲವಂತದ ಮತಾಂತರ, ಲೈಂಗಿಕ ದೌರ್ಜನ್ಯ; ಜಾಲದೊಳಗೆ ಸಿಕ್ಕಿಬಿದ್ದಿದ್ದು ಬರೋಬ್ಬರಿ 350ಕ್ಕೂ ಹೆಚ್ಚು ಹಿಂದೂ ಮಹಿಳೆಯರು

ಬಲವಂತದ ಮತಾಂತರ, ಲೈಂಗಿಕ ದೌರ್ಜನ್ಯ; ಹಿಂದೂ ಮಹಿಳೆಯರೇ ಟಾರ್ಗೆಟ್

Hindu women targets: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಒಂದು ಲಾಡ್ಜ್‌ನಲ್ಲಿ ನಡೆದ ಬಲವಂತದ ಧಾರ್ಮಿಕ ಮತಾಂತರ ಮತ್ತು ಲೈಂಗಿಕ ಶೋಷಣೆ ಬಗ್ಗೆ ಭಯಾನಕ ವಿವರಗಳು ಹೊರಬಿದ್ದಿವೆ. ಸಂತ್ರಸ್ತೆಯರ ಸಾಕ್ಷ್ಯ ಮತ್ತು ಸ್ಥಳೀಯ ವರದಿಗಳ ಪ್ರಕಾರ, 350ಕ್ಕೂ ಹೆಚ್ಚು ಮಹಿಳೆಯರನ್ನು ಈ ನೆಟ್‌ವರ್ಕ್‌ ಜಾಲಕ್ಕೆ ಎಳೆದುಕೊಳ್ಳಲಾಗಿದೆ. ಹಿಂದೂ ಮಹಿಳೆಯರೇ ಈ ದಂಧೆಕೋರರ ಟಾರ್ಗೆಟ್ ಎನ್ನುವ ವಿಚಾರವೂ ಬಯಲಾಗಿದೆ.

ಸಿದ್ದಾಪುರ ಕೊಲೆ ಕೇಸ್‌; ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾಗೆ 8 ದಿನ ನ್ಯಾಯಾಂಗ ಬಂಧನ

ಕೊಲೆ ಪ್ರಕರಣ; ಕಮಲಾಕರ ಭಟ್, ಸುಚಿತ್ರಾಗೆ ನ್ಯಾಯಾಂಗ ಬಂಧನ

ಎರಡು ಮಕ್ಕಳ ತಾಯಿ ಸುಚಿತ್ರಾ ಜತೆಗಿನ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ನಡೆದ ಗಲಾಟೆ ವೇಳೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಂಧನವಾದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Killer Games: ಮೂವರು ಬಾಲಕಿಯರ ಪ್ರಾಣ ತೆಗೆದ ಕೊರಿಯನ್ ಗೇಮ್‌; ಏನಿದು ಕೊಲ್ಲುವ ಆಟ? ಭಾರತದಲ್ಲಿ ಬ್ಯಾನ್‌ ಆದ ಬ್ಲ್ಯೂ ವೇಲ್‌ಗೂ ಇದಕ್ಕೂ ಇರುವ ಸಾಮ್ಯತೆ ಏನು?

‘ಕೊರಿಯನ್ ಲವ್ ಗೇಮ್’ಗೆ ಬಲಿಯಾದ ಮೂವರು ಸಹೋದರಿಯರು

Ghaziabad Tragedy: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಆನ್‌ಲೈನ್ ಗೇಮ್‌ನಿಂದಾಗಿ ಮೂವರು ಅಪ್ರಾಪ್ತ ಸಹೋದರಿಯರು 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಸಂಭವಿಸಿದೆ. ಮಧ್ಯರಾತ್ರಿ ನಡೆದ ಈ ಘಟನೆ ಆನ್‌ಲೈನ್ ಗೇಮಿಂಗ್ ವ್ಯಸನದ ಗಂಭೀರ ಪರಿಣಾಮಗಳನ್ನು ಮತ್ತೆ ಹೊರ ಹಾಕಿದೆ. ಗೇಮ್‌ನ ಟಾಸ್ಕ್‌ ಒಂದರ ಭಾಗವಾಗಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಪ್ರಾಪ್ತ ಬಾಲಕಿಯನ್ನು ಹಾಸಿಗೆಯೊಳಗೆ ಬಚ್ಚಿಟ್ಟ ಅಮ್ರಿನ್ ಅಖ್ತರ್ ಲಸ್ಕರ್; ಸತತ 6 ವರ್ಷಗಳಿಂದ ದೌರ್ಜನ್ಯ: ಘಟನೆ ಬೆಳಕಿಗೆ ಬಂದಿದ್ದು ಹೇಗೆ?

ಅಪ್ರಾಪ್ತೆಯನ್ನು ದುಡಿಸಿದ್ದಲ್ಲದೆ, ಹಾಸಿಗೆಯೊಳಗೆ ಬಚ್ಚಿಟ್ಟ ಆರೋಪಿಗಳು

Child labour: ಅಪ್ರಾಪ್ತ ಬಾಲಕಿಯನ್ನು ಕಾರ್ಮಿಕಳಂತೆ ದುಡಿಸಿಕೊಂಡು, ಹಾಸಿಗೆಯೊಳಗೆ ಬಚ್ಚಿಟ್ಟ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಬಾಲಕಿಯನ್ನು ರಕ್ಷಿಸುವ ಕಾರ್ಯಾಚರಣೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಮಕ್ಕಳ ಕಳ್ಳಸಾಗಣೆಯ ಪ್ರಕರಣವಿರಬಹುದು ಎಂದು ಶಂಕಿಸಲಾಗಿದೆ.

ಬಾರ್‌ ಲೈಸೆನ್ಸ್ ನೀಡಲು 60 ಲಕ್ಷ ಲಂಚಕ್ಕೆ ಬೇಡಿಕೆ; ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತು

ಬಾರ್‌ ಲೈಸೆನ್ಸ್ ನೀಡಲು 60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಡಿಸಿ ಅಮಾನತು

Bribe case: ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಇದರ ಬೆನ್ನಲ್ಲೇ ಮದ್ಯದಂಗಡಿ ಲೈಸೆನ್ಸ್ ನೀಡಲು ಬರೋಬ್ಬರಿ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯದ ಅಬಕಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಆರಂಭದಲ್ಲಿ ಒಬ್ಬ ಹುಡುಗಿ ಹಿಂದೆ ಸರಿದಳು, ನಂತರ ಆಗಿದ್ದು ದುರಂತ; ಗಾಜಿಯಾಬಾದ್ ಸಹೋದರಿಯರ ಆತ್ಮಹತ್ಯೆಯ ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಸಹೋದರಿಯರ ಆತ್ಮಹತ್ಯೆಯನ್ನು ಪ್ರತ್ಯಕ್ಷ ಕಂಡವರು ಹೇಳಿದ್ದೇನು?

Ghaziabad Tragedy: ಗಾಜಿಯಾಬಾದ್‌ನಲ್ಲಿ ನಡೆದ ಮೂವರು ಸಹೋದರಿಯರ ಆತ್ಮಹತ್ಯೆಯನ್ನು ಕಣ್ಣಾರೆ ಕಂಡ ಪ್ರತ್ಯಕ್ಷದರ್ಶಿಯೊಬ್ಬರು, ಘಟನೆಯಿಂದ ನಡುಗಿ ಹೋಗಿರುವುದಾಗಿ ತಿಳಿಸಿದ್ದಾರೆ. ಮೂವರು ಸಹೋದರಿಯರ ಅಂತಿಮ ಕ್ಷಣಗಳನ್ನು ಕಣ್ಣಾರೆ ಕಂಡ ಅಕ್ಕ-ಪಕ್ಕದ ನಿವಾಸಿಗಳು ಭಯಾನಕ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಆರಂಭದಲ್ಲಿ ಆ ದೃಶ್ಯವನ್ನು ದಂಪತಿ ಮತ್ತು ಅವರ ಮಗು ಆತ್ಮಹತ್ಯೆಗೆ ಯತ್ನಿಸುತ್ತಿದೆ ಎಂದು ತಪ್ಪಾಗಿ ಭಾವಿಸಿದ್ದರಂತೆ.

ವಂಟಮೂರಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

ವಂಟಮೂರಿ ಮಹಿಳೆಗೆ ಹಲ್ಲೆ ಕೇಸ್‌; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

Vantamuri case: 2023ರ ಡಿಸೆಂಬರ್ 10ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಯುವಕನೊಬ್ಬ ತಾನು ಪ್ರೀತಿಸಿದ್ದ ಯುವತಿಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ.

ಅಳುವ ಇಮೋಜಿಯೊಂದಿಗೆ ಡೆತ್‌ ನೋಟ್‌ ಬರೆದಿದ್ದ ಆತ್ಮಹತ್ಯೆ ಮಾಡಿಕೊಂಡ ಸೋದರಿಯರು; ಪತ್ರದಲ್ಲಿ ಏನಿದೆ?

ಡೆತ್‌ ನೋಟ್‌ ಸರಿಯಾಗಿ ಓದಿ; ಸಹೋದರಿಯರ ಲಾಸ್ಟ್‌ ಮೆಸೇಜ್‌

ಉತ್ತರ ಪ್ರದೇಶದ ಗಾಜಿಯಾಬಾದ್‍ನ ಅಪಾರ್ಟ್‌ಮೆಂಟ್‍ವೊಂದರಿಂದ ಜಿಗಿದು ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾದ ಘಟನೆ ಭಾರಿ ಸಂಚಲನ ಮೂಡಿಸಿದೆ. ಈ ದುರ್ಘಟನೆಗೆ ಆನ್‌ಲೈನ್ ಗೇಮ್ ಕಾರಣವೇ ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಹೆಲ್ಮೆಟ್‌ನಿಂದ ಹೊಡೆದು ಉದ್ಯಮಿಯನ್ನು ಹತ್ಯೆಗೈದ ಡೆಲಿವರಿ ಏಜೆಂಟ್‌ಗಳು; ಕಾರಣವೇನು?

ಹೆಲ್ಮೆಟ್‌ನಿಂದ ಹೊಡೆದು ಉದ್ಯಮಿಯ ಭೀಕರ ಹತ್ಯೆ

ರಾಷ್ಟ್ರ ರಾಜಧಾನಿ ದೆಹಲಿಯ ಕನ್ನಾಟ್‌ನಲ್ಲಿ ಸಣ್ಣ ವಿಚಾರಕ್ಕೆ ನಡೆದ ಜಗಳದಲ್ಲಿ ಒಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ರಾತ್ರಿ ಪಾರ್ಟಿಗೆ ಹೋಗಿದ್ದ 36 ವರ್ಷದ ಉದ್ಯಮಿಯನ್ನು ಮೂವರು ಡೆಲಿವರಿ ಬಾಯ್‌ಗಳು ಥಳಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಹೆಲ್ಮೆಟ್‌ನಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಲಾಗಿದೆ.

Murder and Robbery Case: ಒಂಟಿಯಾಗಿದ್ದ ವೃದ್ಧೆಯನ್ನು ಕೊಂದು 73 ಗ್ರಾಂ ಚಿನ್ನಾಭರಣ ದರೋಡೆ

ಒಂಟಿಯಾಗಿದ್ದ ವೃದ್ಧೆಯನ್ನು ಕೊಂದು 73 ಗ್ರಾಂ ಚಿನ್ನಾಭರಣ ದರೋಡೆ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯ ವೃದ್ದೆ ಕೊಲ್ಲಾರಿ ಕಮಲಮ್ಮ (64) ಅವರು ಒಂಟಿಯಾಗಿ ವಾಸವಾಗಿದ್ದರು. ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ ಸೇರಿದಂತೆ ಒಟ್ಟು 73 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಆನ್‌ಲೈನ್‌ ಗೇಮ್‌ ಚಟ;  9 ನೇ ಮಹಡಿಯಿಂದ ಜಿಗಿದು ಮೂವರು ಅಪ್ರಾಪ್ತ ಸಹೋದರಿಯರು ಆತ್ಮಹತ್ಯೆ

9 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮೂವರು ಸಹೋದರಿಯರು

ಆನ್‌ಲೈನ್ ಗೇಮಿಂಗ್‌ ಆಡಬೇಡಿ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮೂವರು ಸಹೋದರಿಯರು ತಮ್ಮ ಅಪಾರ್ಟ್‌ಮೆಂಟ್ ಕಟ್ಟಡದ ಒಂಬತ್ತನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ಬಾಲಕಿಯರನ್ನು ಪಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. COVID-19 ಸಾಂಕ್ರಾಮಿಕ ಸಮಯದಲ್ಲಿ ಅವರು ಆನ್‌ಲೈನ್ ಆಟಗಳಿಗೆ ವ್ಯಸನಿಯಾಗಿದ್ದರು.

Gold theft: ಕರಗ ಖ್ಯಾತಿಯ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಚಿನ್ನ ಕಳವು, ಅಧಿಕಾರಿ ಅಮಾನತು

ಕರಗ ಖ್ಯಾತಿಯ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಚಿನ್ನ ಕಳವು, ಅಧಿಕಾರಿ ಅಮಾನತು

ನೆಕ್ಲೆಸ್‌ ಕಳವು ಬಗ್ಗೆ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕೆ.ಸತೀಶ್‌ ಕಳೆದ ವರ್ಷ ದೇವಸ್ಥಾನಕ್ಕೆ ಹುಂಡಿ ಎಣಿಕೆಗೆ ಬಂದಿದ್ದ ಅಧಿಕಾರಿಗಳು ಹುಂಡಿ ಹಣ, ಆಭರಣವನ್ನು ಬ್ಯಾಂಕ್‌ನಿಂದ ಅಪ್ರೇಸ್‌ ಮಾಡುವ ನೆಪದಲ್ಲಿ ಕೊಂಡೊಯ್ದಿದ್ದರು. ಈ ವೇಳೆ ಒಬ್ಬ ಅಧಿಕಾರಿ 122 ಗ್ರಾಂ ತೂಕದ ನೆಕ್ಲೆಸ್‌ ಕಳವು ಮಾಡಿದ್ದರು.

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದ ಖದೀಮರು; ತಕ್ಷಣ ಕ್ರಮಕ್ಕೆ ಭಾರತ ಆಗ್ರಹ

ಗಾಂಧಿ ಪ್ರತಿಮೆಗೆ ಹಾನಿ; ಕ್ರಮಕ್ಕೆ ಆಗ್ರಹ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದಿರುವ ಘಟನೆ ನಡೆದಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ಯಲಾಗಿದೆ. ಇದು ಭಾರತೀಯ ಮತ್ತು ಆಸ್ಟ್ರೇಲಿಯನ್ ಸಮುದಾಯದಲ್ಲಿ ತೀವ್ರ ಕಳವಳವನ್ನು ಉಂಟು ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ ಕ್ರಮಕ್ಕೆ ಆಗ್ರಹಿಸಿದೆ.

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು; ಸಂಬಂಧಿಕರಲ್ಲಿ ಕ್ಷಮೆ ಕೇಳಿದ್ದೇಕೆ?

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು

ರೈಲ್ವೇ ಹಳಿಯಲ್ಲಿ ತಾಯಿ ಮತ್ತು ಮಕ್ಕಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮಹಿಳೆ ತನ್ನ ಸಂಬಂಧಿಕರಿಗೆ ಕ್ಷಮೆ ಕೇಳಿ ಪತ್ರ ಬರೆದಿದ್ದು, ಡೆತ್ ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಈ ಹೃದಯ ವಿದ್ರಾವಕ ಘಟನೆಯ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಕುಡಿದ ಮತ್ತಿನಲ್ಲಿ ಅರೆಬೆತ್ತಲೆಯಾಗಿ ಪತ್ನಿ ಮೇಲೆ ಹಲ್ಲೆ ನಡೆಸಿದ ಕಾನ್‌ಸ್ಟೇಬಲ್; ಚಿಕ್ಕ ಮಗು ಕೈಲಿದ್ರೂ ಮನಸ್ಸು ಕರಗಲಿಲ್ಲ

ಅರೆಬೆತ್ತಲೆಯಾಗಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಪೇದೆ

Constable attacks wife: ಕುಡಿದ ಮತ್ತಿನಲ್ಲಿ ಕಾನ್‌ಸ್ಟೇಬಲ್‍ ಒಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪತ್ನಿಯು ತನ್ನ ಮಗುವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರೆ, ಪೇದೆಯು ಅರೆಬೆತ್ತಲೆಯಾಗಿದ್ದು, ಮನಬಂದಂತೆ ಹೆಂಡತಿಗೆ ಥಳಿಸಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Loading...