ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Kanakapura murder: ಪ್ರೇಯಸಿಯನ್ನು ಗುಂಡಿಟ್ಟು ಕೊಂದು ತೋಟದಲ್ಲಿ ಹೂತುಹಾಕಿದ ಯುವಕ!

ಪ್ರೇಯಸಿಯನ್ನು ಕೊಂದು ತೋಟದಲ್ಲಿ ಹೂತುಹಾಕಿದ ಯುವಕ!

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಕೆಂಪಲನಾಥ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಶಯಗೊಂಡ ಯುವಕ, ಆಕೆಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿ, ಶವವನ್ನು ತೋಟದಲ್ಲಿ ಹೂತುಹಾಕಿದ್ದಾನೆ.

Bengaluru girl dies: ಬೆಂಗಳೂರಿನಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು; ಲಿವ್ ಇನ್‌ನಲ್ಲಿದ್ದ ಪೋಷಕರ ಮೇಲೆ ಶಂಕೆ

ಬೆಂಗಳೂರಿನಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು

ಬೆಂಗಳೂರು ನಗರದ ಬಾಣಸವಾಡಿಯಲ್ಲಿ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಮಗುವಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಸಾವನ್ನಪ್ಪಿರುವುದಾಗಿ ಪೋಷಕರು ತಿಳಿಸಿದ್ದಾರೆ. ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲಿವ್ ಇನ್‌ನಲ್ಲಿದ್ದ ಪೋಷಕರ ಮೇಲೆ ಶಂಕೆ ವ್ಯಕ್ತವಾಗಿದೆ.

Belagavi News: ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, ಸುಮಾರು 6 ಜನರು ಸೇರಿ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಅರೆಸ್ಟ್‌; ಇಲಿಪಾಷಾಣ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲು

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಬಂಧನ

ಪ್ರೀತಿ ನಿರಾಕರಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿಯೇ ಯುವತಿಯನ್ನು ಕೊಂದಿದ್ದ ಆರೋಪಿ ಚೇತನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕಕ್ಕೆಪದವು ನಿವಾಸಿಯಾಗಿದ್ದ ಲಾವಣ್ಯಳನ್ನು ಆಕೆಯ ದೂರದ ಸಂಬಂಧಿ ಆರೋಪಿ ಚೇತನ್‌ ನಿನ್ನೆ ಕೊಲೆ ಮಾಡಿದ್ದ.

ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು

ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ

ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮುರ್ಷಿದಾಬಾದ್‌ನ ಬೆರ್ಹಾಂಪೋರ್ ಪ್ರದೇಶದಲ್ಲಿ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್‌ನಲ್ಲಿ ಶುಕ್ರವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ.

YouTuber Amuku Dumuku: ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ; ಅಮುಕು ಡುಮುಕು ಮಂಜು ವಿರುದ್ಧ ಎಫ್‌ಐಆರ್‌

ಮಹಿಳೆ ಜತೆ ಅನುಚಿತ ವರ್ತನೆ; ಅಮುಕು ಡುಮುಕು ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ರೆಸ್ಟೋ ಬಾರ್‌ನಲ್ಲಿಊಟ ಮತ್ತು ಮದ್ಯ ಸೇವನೆ ಮಾಡಿದ ಬಳಿಕ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಮಂಜು ಅಲಿಯಾಸ್ ಅಮುಕು ಡುಮುಕು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

150 ಕೋಟಿ ರುಪಾಯಿ ಆಸ್ತಿಗಾಗಿ ಹರಿಯಿತು ನೆತ್ತರು: ಕುಡಿದ ಮತ್ತಿನಲ್ಲಿ ತಂದೆಯನ್ನೇ ಗುಂಡಿಕ್ಕಿ ಕೊಂದ ಪಾಪಿ ಪುತ್ರ

150 ಕೋಟಿ ರುಪಾಯಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪುತ್ರ

Crime News: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮೋದಿನಗರದಲ್ಲಿ ₹150 ಕೋಟಿ ಮೌಲ್ಯದ ಆಸ್ತಿ ವಿವಾದ ದುರಂತ ಅಂತ್ಯ ಕಂಡಿದೆ. ಮದ್ಯದ ಅಮಲಿನಲ್ಲಿದ್ದ 32 ವರ್ಷದ ಪುತ್ರ ನಿಖಿಲ್ ತನ್ನ ತಂದೆ ಹರಿಯೋಂ ಚೌಧರಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈಗಾಗಲೇ 25 ಬಿಘಾ ಜಮೀನು ಮತ್ತು ಅಂಗಡಿಗಳನ್ನು ಪಡೆದಿದ್ದರೂ ಉಳಿದ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಡುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Bantwal Murder: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ! Video

ಯುವತಿಯನ್ನು ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ಯುವಕ!

ಯುವತಿ ನಿರಾಕರಿಸಿದರೂ ಪ್ರೀತಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇಂದು ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಹಿಂಬಾಲಿಸಿದ ಆರೋಪಿ, ಬಸ್ಸಿನಿಂದ ಇಳಿಸಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

Viral Video: ಕ್ಷುಲ್ಲಕ ಕಾರಣಕ್ಕೆ ಲಿಫ್ಟ್‌ನಲ್ಲೇ ಹೊಡೆದಾಡಿದ ಅಪಾರ್ಟ್‌ಮೆಂಟ್ ಮಾಲಕರು; ದೊಡ್ಡವರ ಸಣ್ಣ ಗುಣ ಎಂದ ನೆಟ್ಟಿಗರು

ಅಪಾರ್ಟ್‌ಮೆಂಟ್ ವಿವಾದಕ್ಕೆ ಲಿಫ್ಟ್‌ನಲ್ಲೇ ಹೊಡೆದಾಟ: ವಿಡಿಯೊ ವೈರಲ್

ಅಪಾರ್ಟ್‌ಮೆಂಟ್ ಮಾಲಕರ ಸಂಘದ ಸದಸ್ಯರಿಬ್ಬರು ಹಳೆಯ ವೈಷಮ್ಯದ ವಿಚಾರವಾಗಿ ಲಿಫ್ಟ್ ಒಳಗೆಯೇ ಹೊಡೆದಾಡಿಕೊಂಡ ಘಟನೆ ನಡೆದಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ GS-7 ಹೈ-ರೈಸ್ ಸೊಸೈಟಿಯ ಲಿಫ್ಟ್ ಒಳಗೆ ಈ ಘಟನೆ ನಡೆದಿದ್ದು, ಅಪಾರ್ಟ್‌ಮೆಂಟ್ ಮಾಲಕರ ಸಂಘದ ಇಬ್ಬರು ಮಾಜಿ ಪದಾಧಿಕಾರಿಗಳು ಹಲ್ಲೆಯಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಘಟನೆ ವಿಡಿಯೊ ವೈರಲ್ ಆಗಿದೆ.

Bengaluru Murder: ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದು ಪತಿಯೂ ಆತ್ಮಹತ್ಯೆ!

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದ ಪತಿ!

ಬೆಂಗಳೂರು ನಗರದ ಸಿಕೆ ಅಚ್ಚುಕಟ್ಟು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಗರ್ಭಿಣಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Bengaluru Murder: ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಗೆ ತಮ್ಮನಿಂದ ಚಾಕು ಇರಿತ; ಚಿಕಿತ್ಸೆ ಫಲಿಸದೆ ಲಾ ವಿದ್ಯಾರ್ಥಿನಿ ಸಾವು

ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದ ತಮ್ಮ!

​ಬೆಂಗಳೂರಿನ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪ್ರೀತಿಸುತ್ತಿದ್ದ. ಆದರೆ, ಆಕೆ ದೂರವಾದ ಹಿನ್ನೆಲೆಯಲ್ಲಿ ಯುವತಿಗೆ ತಮ್ಮ ಚಾಕುವಿನಿಂದ ಇರಿದಿದ್ದಾನೆ. ಯುವತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

Viral Video: ಸಮೋಸ ನೀಡಲು ತಡವಾಗಿದ್ದಕ್ಕೆ ರಣರಂಗವಾದ ಬೇಕರಿ; ನೌಕರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ರಾಹಕರು

ಸಮೋಸಕ್ಕಾಗಿ ಅಂಗಡಿಯಲ್ಲೇ ಮಾರಾಮಾರಿ: ವಿಡಿಯೊ ವೈರಲ್

Viral News: ಮಹಾರಾಷ್ಟ್ರದ ಶಿರೂರ್ ತಾಲೂಕಿನ ಕರೇಗಾಂವ್ ಗ್ರಾಮದ ಸ್ವೀಟ್ ಅಂಗಡಿಯಲ್ಲಿ ಸಮೋಸವನ್ನು ಮೊದಲು ಯಾರಿಗೆ ನೀಡಬೇಕೆಂಬ ವಿವಾದ ಹಿಂಸಾಚಾರಕ್ಕೆ ತಿರುಗಿದೆ‌. ಬೇಕರಿ ಉದ್ಯೋಗಿ ರಾಜು ಲಾಬುರಾಮ್ ದೇವಸಿ ಸಲ್ಲಿಸಿದ ದೂರಿನ ಆಧಾರದ ಮೇಲೆ ರಂಜನ್‌ಗಾಂವ್ ಎಂಐಡಿಸಿ ಪೊಲೀಸರು ಕರೇಗಾಂವ್ ನಿವಾಸಿಗಳಾದ ಈಶ್ವರ್ ರಂಗನಾಥ್ ನವಲೆ ಮತ್ತು ಸಾಯಿ ಲಕ್ಷ್ಮಣ್ ನವಲೆ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ವಿಡಿಯೊ ವೈರಲ್‌ ಆಗಿದೆ.

''ನೀನು ಮುಸ್ಲಿಮಾ?ʼʼ ಧರ್ಮ ಕೇಳಿ ಭಾರತ ಮೂಲದ ಮುಸ್ಲಿಂ ವ್ಯಕ್ತಿಯ ಮೇಲೆ ಅಮೆರಿಕದಲ್ಲಿ ಚಾಕು ದಾಳಿ

ಅಮೆರಿಕದಲ್ಲಿ ಭಾರತೀಯ ಮುಸ್ಲಿಂ ವ್ಯಕ್ತಿಯ ಮೇಲೆ ದಾಳಿ

ಅಮೆರಿಕದ ಉಟಾ ರಾಜ್ಯದ ವೆಸ್ಟ್ ವ್ಯಾಲಿ ಸಿಟಿಯ ವ್ಯಾಲಿ ಫೇರ್ ಮಾಲ್‌ನಲ್ಲಿ ಭಾರತ ಮೂಲದ ಮುಸ್ಲಿಂ ಉದ್ಯೋಗಿಯ ಮೇಲೆ ಧರ್ಮ ಕೇಳಿದ ಬಳಿಕ ಚಾಕು ದಾಳಿ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಯುವಕ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವೈದ್ಯನನ್ನು ಕೊಲೆ ಮಾಡಿದ ಪತ್ನಿ; 10 ವರ್ಷದ ಮಗನ ಮೇಲೆ ಹಲ್ಲೆ ನಡೆಸಿ ಮೊಬೈಲ್‌ ನೋಡುತ್ತ ಕುಳಿತ ಪಾಪಿ

ವೈದ್ಯನನ್ನು ಕೊಲೆ ಮಾಡಿದ ಪತ್ನಿ; ಕಾರಣ ನಿಗೂಢ

Dharwad News: ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿ ಡಾ. ಪ್ರಿಯಾಂಕಾ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆಸಿದ್ದಾಳೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ವಯಸ್ಸಿನ ಕಾರಣಕ್ಕೆ ಮದುವೆ ರದ್ದು: ಸಿಟ್ಟಿಗೆದ್ದ ವ್ಯಕ್ತಿಯಿಂದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ, ತಾಯಿ ಕೊಲೆ

ಮದುವೆ ರದ್ದಾಗಿದ್ದಕ್ಕೆ ಯುವತಿ ಮೇಲೆ ಹಲ್ಲೆ, ತಾಯಿ ಹತ್ಯೆ

Crime News: ಮದುವೆ ರದ್ದಿನಿಂದ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಯುವತಿ ಪ್ರೇಯಸಿ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯನ್ನು ಕಾಪಾಡಲು ಮುಂದಾದ ತಾಯಿ ಕೊಲೆಯಾದ ದುರ್ಘಟನೆ ತಮಿಳುನಾಡಿನ ವಿರುಧುನಗರದಲ್ಲಿ ನಡೆದಿದೆ. ಘಟನೆಯಲ್ಲಿ ಯುವತಿ ವರ್ಷಾಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಡೇಕೇರ್‌ನಲ್ಲಿ ಪುಟ್ಟ ಕಂದಮ್ಮಗಳ ಮೇಲಿನ ದೌರ್ಜನ್ಯ ಪ್ರಕರಣ: ಕೇಸ್‌ನಲ್ಲಿ ಸಿಕ್ತು ಮತ್ತೊಂದು ಟ್ವಿಸ್ಟ್‌

ಡೇಕೇರ್‌ ಮಾಜಿ ಸಿಬ್ಬಂದಿ ವಿರುದ್ಧ ಕ್ಯಾಪ್ಜೆಮಿನಿ ಆರೋಪ

Bengaluru daycare abuse case: ಡೇಕೇರ್ ಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಮ್ಯಾನೇಜ್‌ಮೆಂಟ್, ಇದು ಮಾಜಿ ಉದ್ಯೋಗಿಗಳು ಹಣ ವಸೂಲಿ ಹಾಗೂ ಸಂಸ್ಥೆಯ ಹೆಸರು ಕೆಡಿಸಲು ನಡೆಸಿರುವ ಬಹಳ ವ್ಯವಸ್ಥಿತವಾದ ಪಿತೂರಿ ಎಂದು ಗಂಭೀರ ಆರೋಪ ಮಾಡಿದೆ. ಇದೊಂದು ಕ್ರಿಮಿನಲ್ ಪಿತೂರಿಯಾಗಿದ್ದು, ಮಕ್ಕಳ ಸುರಕ್ಷತೆಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.

ಪೊಲೀಸ್ ಕಸ್ಟಡಿಯಲ್ಲಿದ್ದ ವಿಶೇಷ ಚೇತನ ವ್ಯಕ್ತಿ ಸಾವು: ಜೈಲು ವಾರ್ಡನ್ ಬಂಧನ

ಪೊಲೀಸ್ ಕಸ್ಟಡಿಯಲ್ಲಿದ್ದ ವಿಶೇಷ ಚೇತನ ವ್ಯಕ್ತಿ ಸಾವು

Differently-abled man dies in police custody: ಪೊಲೀಸ್ ಕಸ್ಟಡಿಯಲ್ಲಿದ್ದ 19 ಗಾಯಗಳೊಂದಿಗೆ ವಿಶೇಷ ಚೇತನ ವ್ಯಕ್ತಿ ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದೆ. ಕಸ್ಟಡಿ ಹಿಂಸಾಚಾರ ಮತ್ತು ರಾಜಕೀಯ ವಿವಾದದ ಆರೋಪಗಳಿಗೆ ಕಾರಣವಾದ ನಂತರ ತಮಿಳುನಾಡಿನ ಜೈಲು ವಾರ್ಡನ್ ಒಬ್ಬರನ್ನು ಬಂಧಿಸಲಾಗಿದೆ.

ಶಿಕ್ಷಕರಿಂದ ಕಿರುಕುಳ; ಬಿಲ್ಡಿಂಗ್‌ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ 7 ನೇ ತರಗತಿ ವಿದ್ಯಾರ್ಥಿ!

ಬಿಲ್ಡಿಂಗ್‌ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ 7 ನೇ ತರಗತಿ ವಿದ್ಯಾರ್ಥಿ!

ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್‌ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ʼʼಇಂಗ್ಲಿಷ್ ವರ್ಣಮಾಲೆ ಗೊತ್ತೆ?ʼʼ: ಸಾರ್ವಜನಿಕ ವೇದಿಕೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಅವಮಾನಿಸಿದ ಕೇರಳಂ ಮಾಜಿ ಸಚಿವ ಜಲೀಲ್; ಪ್ರಕರಣ ದಾಖಲು

ಮಾಜಿ ಸಚಿವ ಜಲೀಲ್ ವಿರುದ್ಧ ಮಕ್ಕಳ ಹಕ್ಕುಗಳ ಆಯೋಗದಿಂದ ಪ್ರಕರಣ

KT Jaleel: ಪಾಲಕ್ಕಾಡಿನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ವಿದ್ಯಾರ್ಥಿಗಳನ್ನು ಅವಮಾನಿಸಿದ ಆರೋಪದಡಿ ಕೇರಳಂನ ಮಾಜಿ ಸಚಿವ ಕೆ.ಟಿ. ಜಲೀಲ್ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಪ್ರಕರಣ ದಾಖಲಿಸಿದೆ. ತಮ್ಮ ನಡೆಯನ್ನು ಸಮರ್ಥಿಸಿಕೊಂಡ ಜಲೀಲ್, ತಾವು ಶಿಕ್ಷಕರಂತೆ ಮಾತನಾಡಿದ್ದು, ಅವಮಾನಿಸುವ ಉದ್ದೇಶ ಇರಲಿಲ್ಲ ಎಂದಿದ್ದಾರೆ. ಜತೆಗೆ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದು ಹೇಳಿದ್ದಾರೆ.

ವಿಜಯ್‌ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಜುಗರ; ಟಿವಿಕೆ ಮುಖಂಡನ ವಿರುದ್ಧ ಕೇಳಿಬಂತು ಲೈಂಗಿಕ ಕಿರುಕುಳ ಆರೋಪ

ಟಿವಿಕೆ ಮುಖಂಡನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Tamilaga Vettri Kazhagam: ತಮಿಳುನಾಡಿನ ಕರೂರ್ ಜಿಲ್ಲೆಯ ಟಿವಿಕೆ ಪಕ್ಷದ ಮುಖಂಡ ರಮೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. 25 ವರ್ಷದ ವಿವಾಹಿತ ಮಹಿಳೆ ದೂರು ನೀಡಿ, ಮೂರು ತಿಂಗಳಿನಿಂದ ನಿರಂತರ ದೌರ್ಜನ್ಯ ಎಸಗಿದ್ದಲ್ಲೆ ಅಪಹರಿಸಲು ಯತ್ನಿಸಿದ್ದಾನೆ ಎಂದು ಹೇಳಿದ್ದಾರೆ. ಘಟನೆಯ ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಆಟವಾಡುತ್ತಿದ್ದಾಗ ಮೊದಲ ಮಹಡಿಯಿಂದ ಬಿದ್ದ 4 ವರ್ಷದ ಮಗು; ಆರೋಗ್ಯ ಸ್ಥಿತಿ ಗಂಭೀರ! Video

ಮೊದಲ ಮಹಡಿಯಿಂದ ಬಿದ್ದ 4 ವರ್ಷದ ಮಗು; ಗಂಭೀರ ಗಾಯ

Chikkaballapur News: ಚಿಕ್ಕಬಳ್ಳಾಪುರದ ಬಟ್ಟೆ ಅಂಗಡಿಯಲ್ಲಿ ದುರ್ಘಟನೆ ನಡೆದಿದೆ. ಮೊದಲ ಮಹಡಿಯಲ್ಲಿ ಆಟವಾಡುತ್ತಿದ್ದ ಬಾಲಕಿ ಆಯತಪ್ಪಿ ಕೆಳಗೆ ಬಿದ್ದಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಬಟ್ಟೆ ಖರೀದಿಸಲು ಪೋಷಕರೊಂದಿಗೆ ಅಂಗಡಿಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

ಪಹಲ್ಗಾಮ್ ದಾಳಿಯ ಮಾಸ್ಟರ್‌ ಮೈಂಡ್‌, ಭಯೋತ್ಪಾದಕ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

ಉಗ್ರ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

Pahalgam Terror Attack: ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ವಿಶೇಷ ಎನ್ಐಎ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಆರೋಪಪಟ್ಟಿ ಸಲ್ಲಿಸಿದ ನಂತರ ಎನ್ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ.

ಪಿಎಸ್‌ಐಗೆ ಪರಸ್ತ್ರೀ ವ್ಯಾಮೋಹ; ವರದಕ್ಷಿಣೆಗಾಗಿ ಪತ್ನಿ, ಮಾವನ ಮೇಲೆ ಹಲ್ಲೆ ನಡೆಸಿದ ಪೊಲೀಸ್‌ ಅಧಿಕಾರಿ ಅರೆಸ್ಟ್‌

ಪತ್ನಿ, ಮಾವನ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ಪಿಎಸ್‌ಐ ಅರೆಸ್ಟ್‌

ಪತ್ನಿ ಮತ್ತು ಮಾವನ ಮೇಲೆಯೇ ಹಲ್ಲೆ ನಡೆಸಿರುವ ಪಿಎಸ್‌ಐ ವಿರುದ್ಧ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರಂಭದಲ್ಲಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಸತ್ಯಾಂಶ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

''ವಿಷಾದವಿಲ್ಲ ನಾನು ಮತ್ತೆ ಕೊಲ್ಲುತ್ತೇನೆ'': 3 ಕೊಲೆ ಮಾಡಿದ ಅಪರಾಧಿಯಿಂದ ಕೋರ್ಟ್ ಮುಂದೆಯೇ ಶಾಕಿಂಗ್ ಹೇಳಿಕೆ

ಮತ್ತೆ ಕೊಲ್ಲುತ್ತೇನೆ: ಕೋರ್ಟ್ ಮುಂದೆಯೇ ಶಾಕಿಂಗ್‌ ಹೇಳಿಕೆ ನೀಡಿದ ಅಪರಾಧಿ

Crime News: ಜೋಡಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾದ 58 ವರ್ಷದ ವ್ಯಕ್ತಿಯೊಬ್ಬ, “ನನಗೆ ಈ ಬಗ್ಗೆ ಯಾವುದೇ ವಿಷಾದವಿಲ್ಲ. ಯಾರಾದರೂ ತನ್ನ ದಾರಿಗೆ ಅಡ್ಡ ಬಂದರೆ ಮತ್ತೆ ಹತ್ಯೆ ಮಾಡುತ್ತೇನೆ” ಎಂದು ನ್ಯಾಯಾಲಯದಲ್ಲಿ ತಿಳಿಸಿದ್ದಾನೆ.

Loading...