ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಅಪ್ಪ-ಅಮ್ಮ ಕ್ಷಮಿಸಿ, ನಾನು ಮಾಡುತ್ತಿರೋದು ಸರಿಯಲ್ಲ; ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ಹಾಸ್ಟೆಲ್‌ನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಐಐಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

Bengaluru Student Death: ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿಯೊಬ್ಬ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಐಐಎಸ್‌ಸಿಯಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ತೆರಳಿ ಕೇಸ್‌ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

ರೀಲ್ಸ್‌ ಗೀಳಿಗೆ ಪತ್ನಿಯನ್ನೇ ಕೊಂದ; ಬೆಂಗಳೂರಿನಿಂದ  ಬಿಹಾರಕ್ಕೆ ಓಡಿ ಹೋಗಿದ್ದ ಪತಿ ಬಂಧನ

ಪತ್ನಿಯನ್ನು ಕೊಂದು ಬಿಹಾರಕ್ಕೆ ಓಡಿ ಹೋಗಿದ್ದ ಪತಿ ಬಂಧನ

Crime News: ಪತ್ನಿಯನ್ನು ಕೊಂದು ತನ್ನ ತವರು ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪದ ಮೇಲೆ 24 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣ ಬೆಳಕಿಗೆ ಬಂದ ಕೂಡಲೇ ಬೆಂಗಳೂರು ಪೊಲೀಸರು ಬಿಹಾರಕ್ಕೆ ತೆರಳಿ ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ನಂತರ ವಿಚಾರಣೆಗಾಗಿ ಕುಂಬಳಗೋಡಿಗೆ ಕರೆತಂದರು.

ಕುಶಾಲನಗರದಲ್ಲಿ ಘೋರ ಘಟನೆ; ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

Kushalnagar News: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದು ಮಗು ಗಂಭೀರವಾಗಿ ಗಾಯಗೊಂಡಿತ್ತು. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.

ಶಾಲೆಯಲ್ಲಿ ಗುಂಡಿನ ದಾಳಿ: ಹದಿಹರೆಯದ ಬಾಲಕನಿಂದ ಫೈರಿಂಗ್, ಐವರು ಸಾವು

ಶಾಲೆಯಲ್ಲಿ ಗುಂಡಿನ ದಾಳಿ: ಐವರು ಸಾವು

Thailand School Shooting: ಥೈಲ್ಯಾಂಡ್‌ನ ಶಾಲೆಯೊಂದರಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಶಂಕಿತ ಹದಿಹರೆಯದ ಬಂದೂಕುಧಾರಿಯೊಬ್ಬ ತನ್ನ ಅಜ್ಜ-ಅಜ್ಜಿಯರ ಮೇಲೆ ಗುಂಡು ಹಾರಿಸಿದ್ದು, ಒಟ್ಟು ಐದು ಜನರನ್ನು ಹತ್ಯೆ ಮಾಡಿದ್ದಾನೆ. ಬ್ಯಾಂಗ್ ಕ್ರುವಾಯಿ ಜಿಲ್ಲೆಯ ಡೆಬ್‌ಸಿರಿನ್ ನೊಂಥಬುರಿ ಶಾಲೆಯಲ್ಲಿ ಈ ದಾಳಿ ನಡೆದಿದೆ.

Udupi shootout case: ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ!

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಕೊಲೆ!

Udupi News: ಉಡುಪಿ ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್‌ ಮುಖಂಡನ ನೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು: ಪಾಟ್ನಾದಲ್ಲಿ ಭುಗಿಲೆದ್ದ ಹಿಂಸಾಚಾರ, ಹೊತ್ತಿ ಉರಿದ ವಾಹನಗಳು

ಪಾಟ್ನಾದಲ್ಲಿ ಹಿಂಸಾಚಾರ; ಪೊಲೀಸ್ ಜೀಪ್ ಗಳಿಗೆ ಬೆಂಕಿ

ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದರಿಂದ ಪಾಟ್ನಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಉದ್ರಿಕ್ತ ಜನ ಸಮೂಹ ಮೂರು ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಹಲವೆಡೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Bengaluru News: ಸಲಿಂಗ ಪ್ರೀತಿಗೆ ಮನೆಯವರ ವಿರೋಧ; ಮನನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರು!

ಸಲಿಂಗ ಪ್ರೀತಿ; ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಯುವತಿಯರು!

ನೇಪಾಳ ಮೂಲದ ಇಬ್ಬರು ಯುವತಿಯರು ಬೆಂಗಳೂರಿನ ಯಲಹಂಕದ ಶಿವನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಅಪಾರ್ಟ್‌ಮೆಂಟ್‌ಗಳಲ್ಲಿ ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇವರ ಸಾವಿನ ಬಗ್ಗೆ ಯಲಹಂಕ ಓಲ್ಡ್ ಟೌನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗುಂಡಿನ ಸದ್ದಿಗೆ ಬೆದರಿದ ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಮನಬಂದಂತೆ ಏರ್ ಗನ್‌ನಿಂದ ಶೂಟೌಟ್ ಮಾಡಿದ ಟೆಕ್ಕಿ

ಗುಂಡಿನ ಸದ್ದಿಗೆ ಬೆದರಿದ ಸಿಲಿಕಾನ್ ಸಿಟಿ ಬೆಂಗಳೂರು

Techie Opens Fire: ಬೆಂಗಳೂರಿನ ಅಪಾರ್ಟ್‌ಮೆಂಟ್ ಒಳಗೆ ಭದ್ರತಾ ಸಿಬ್ಬಂದಿ ಮತ್ತು ವಾಹನಗಳ ಮೇಲೆ ಏರ್ ಗನ್‌ನಿಂದ ಗುಂಡು ಹಾರಿಸಿದ ಆರೋಪದ ಮೇಲೆ 40 ವರ್ಷದ ಐಟಿ ಉದ್ಯೋಗಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ವೇಳೆ ಅನುರಾಗ್ ತಿವಾರಿ ಕುಡಿದ ಅಮಲಿನಲ್ಲಿದ್ದ. ನಂತರ ಬಾಲ್ಕನಿಗೆ ಹೋಗಿ ಏರ್ ಗನ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಜೈಲು ಶಿಕ್ಷೆ

ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಜೈಲು ಶಿಕ್ಷೆ

ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಬಾಂಬೆ ಹೈಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. 2013ರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಗುರುವಾರ ಅವರನ್ನು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.

ಹದಿಹರೆಯದ ಬಾಲಕಿಯನ್ನು ಅಪಹರಿಸಿ, ಸ್ನೇಹಿತನಿಂದಲೇ ಅತ್ಯಾಚಾರ: ಪ್ರಕರಣ ಬೇಧಿಸಲು ಪೊಲೀಸರಿಗೆ ಸಹಾಯ ಮಾಡಿದ್ದು ಫುಡ್ ಡೆಲಿವರಿ ಆರ್ಡರ್

ಹದಿಹರೆಯದ ಬಾಲಕಿಯನ್ನು ಅಪಹರಿಸಿ, ಸ್ನೇಹಿತನಿಂದಲೇ ಅತ್ಯಾಚಾರ

Crime News: ಹದಿಹರೆಯದ ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತನೇ ಅಪಹರಿಸಿ, ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 16 ವರ್ಷದ ಬಾಲಕಿ ಇನ್‌ಸ್ಟಾಗ್ರಾಮ್, ಸ್ನ್ಯಾಪ್‌ಚಾಟ್ ಮತ್ತು ಕೆಲವು ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

2013ರ ಲೈಂಗಿಕ ದೌರ್ಜನ್ಯ ಪ್ರಕರಣ: ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ ಅಪರಾಧಿ ಎಂದು ಘೋಷಿಸಿದ ಬಾಂಬೆ ಹೈಕೋರ್ಟ್‌

ಲೈಂಗಿಕ ದೌರ್ಜನ್ಯ: ತೆಹಲ್ಕಾ ಮಾಜಿ ಸಂಪಾದಕ ದೋಷಿ ಎಂದು ಘೋಷಣೆ

ಕಿರಿಯ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಲ್ಲಿ ಬಂಧಿಸಲಾಗಿದ್ದ ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ ನನ್ನು ಬಾಂಬೆ ಹೈಕೋರ್ಟ್ ದೋಷಿ ಎಂದು ಘೋಷಿಸಿದೆ. 2013ರಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತರುಣ್ ತೇಜ್‌ಪಾಲ್ ನನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.

ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ 10 ದಿನ ಕಂಬಕ್ಕೆ ಕಟ್ಟಿ ಹಾಕಿದ ಸ್ವಯಂ ಘೋಷಿತ ದೇವಮಾನವ: ಮೂಢನಂಬಿಕೆಗೆ ಬಲಿಯಾಯ್ತು ಜೀವ

ಚಿಕಿತ್ಸೆ ನೆಪದಲ್ಲಿ 10 ದಿನ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿದ ದೇವಮಾನವ

Woman Dies after Mental Illness Treatment: ಸ್ವಯಂ ಘೋಷಿತ ದೇವ ಮಾನವನೊಬ್ಬ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ನೀಡಿದ ಪರಿಣಾಮ 33 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮತ್ತು ತನಿಖಾ ವರದಿಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Bengaluru Accident: ನೆಲಮಂಗಲ ಬಳಿ ಮಹೀಂದ್ರಾ ಥಾರ್ ಪಲ್ಟಿಯಾಗಿ ಇಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ

ನೆಲಮಂಗಲ ಬಳಿ ಮಹೀಂದ್ರಾ ಥಾರ್ ಪಲ್ಟಿಯಾಗಿ ಇಬ್ಬರ ದುರ್ಮರಣ

Bengaluru Accident: ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಭೀಕರ ಅಪಘಾತ ನಡೆದಿದೆ. ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಥಾರ್‌ ಜೀಪ್‌ ಗದ್ದೆಗೆ ಬಿದ್ದು, ದುರಂತ ಸಂಭವಿಸಿದೆ.

ಶಾಲಾ ಬಾಲಕಿಯ ಅಪಹರಿಸಿ, ಅತ್ಯಾಚಾರ ಆರೋಪ: ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿದ ಗ್ರಾಮಸ್ಥರು

ಅತ್ಯಾಚಾರ ಆರೋಪಿಯನ್ನು ಥಳಿಸಿ ಹತ್ಯೆ ಮಾಡಿದ ಗ್ರಾಮಸ್ಥರು

Crime News: ಬಾಲಕಿಯ ಅತ್ಯಾಚಾರ ಆರೋಪಿಯನ್ನು ಉದ್ರಿಕ್ತ ಗುಂಪು ಥಳಿಸಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಎಮ್ರೋಜ್‌ನನ್ನು ಜನಸಂದಣಿಯಿಂದ ರಕ್ಷಿಸಿದ ಪೊಲೀಸರು, ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

Yadgir Breaking: ಯಾದಗಿರಿ: ಬಾಡಿಯಾಳ–ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

ಕೈಗಾರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಅದರ ಪರಿಣಾಮ ಐವರು ಕಾರ್ಮಿಕರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

Chinthamani News: ಕನಂಪಲ್ಲಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು: ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು, ಓರ್ವ ಗ್ರಾಹಕ ಬಂಧನ

ಕನಂಪಲ್ಲಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು

ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಅಪರಾಧ ದಳದ ಕೆಂಚಾರಹಳ್ಳಿ ಪಿಎಸ್‌ಐ ಶ್ಯಾಮಲಾ ಹಾಗೂ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವರಾಜ್ ಎಸ್. ನೇತೃತ್ವದ ತಂಡ ಕನಂಪಲ್ಲಿಯಿಂದ ಕಲ್ಲಹಳ್ಳಿಗೆ ಹೋಗುವ ರಸ್ತೆಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿತು. ಪರಿಶೀಲನೆ ವೇಳೆ ಮನೆಯಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿರುವುದು ದೃಢಪಟ್ಟಿದ್ದು, ದಂಧೆ ನಡೆಸುತ್ತಿದ್ದ 55 ವರ್ಷದ ಮನೆ ಮಾಲಕಿ, 32 ವರ್ಷದ ಮತ್ತೊಬ್ಬ ಮಹಿಳೆ ಹಾಗೂ ಆಶ್ರಯ ಬಡಾವಣೆ ನಿವಾಸಿ ಗ್ರಾಹಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Bengaluru News: ಬಸ್ ಹತ್ತಲು ಬಂದ ಭಿಕ್ಷುಕನನ್ನು ಕಾಲಿನಿಂದ ಒದ್ದು ಬೀಳಿಸಿದ್ದ ಕಂಡಕ್ಟರ್‌ ಅಮಾನತು

ಭಿಕ್ಷುಕನನ್ನು ಕಾಲಿನಿಂದ ಒದ್ದಿದ್ದ ಬಿಎಂಟಿಸಿ ಕಂಡಕ್ಟರ್‌ ಸಸ್ಪೆಂಡ್‌

BMTC Conductor suspended: ​ನೆಲಮಂಗಲ ಟೋಲ್ ಬಳಿ ಬಸ್ ಹತ್ತಲು ಬಂದ ವ್ಯಕ್ತಿಗೆ ನಿರ್ವಾಹಕ ಕಾಲಿನಿಂದ ಒದ್ದು ಬೀಳಿಸಿದ ದೃಶ್ಯ ಬೈಕ್ ಸವಾರರೊಬ್ಬರ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ನಿರ್ವಾಹಕನ ವಿರುದ್ಧ ಬಿಎಂಟಿಸಿ ಶಿಸ್ತುಕ್ರಮ ಕೈಗೊಂಡಿದೆ.

Mandya News: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಆರೋಪ!

ಯುವತಿ ಅನುಮಾನಾಸ್ಪದ ಸಾವು; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಆರೋಪ!

ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಮಗಳನ್ನು ಕರೆದೊಯ್ದ ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಗಳು ಅದಕ್ಕೆ ಒಪ್ಪದಿದ್ದಾಗ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಸ್ಸಾಂ ಸಿಆರ್‌ಪಿಎಫ್ ಶಿಬಿರದಲ್ಲಿ ಗುಂಡಿನ ದಾಳಿ: ಇಬ್ಬರು ಯೋಧರನ್ನು ಹತ್ಯೆಗೈದು ಎಎಸ್‌ಐ ಆತ್ಮಹತ್ಯೆ; ಕಾರಣ ನಿಗೂಢ

ಅಸ್ಸಾಂ ಸಿಆರ್‌ಪಿಎಫ್ ಕ್ಯಾಂಪ್‌ನಲ್ಲಿ ಭೀಕರ ದುರಂತ; ಮೂವರು ಸಾವು

CRPF Jawan: ಅಸ್ಸಾಂನ ನಾಗಾಂ ಜಿಲ್ಲೆಯ ಸಿಆರ್‌ಪಿಎಫ್ 34ನೇ ಬಟಾಲಿಯನ್ ಶಿಬಿರದಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ಬಲ್ಲಾನಿ ಪ್ರೇಮಬರಂ ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಮತ್ತೋರ್ವ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಎಎಸ್‌ಐ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಆರ್‌ಪಿಎಫ್ ಹಾಗೂ ಅಸ್ಸಾಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಭೀಕರ ಕೊಲೆ: ಅಪ್ರಾಪ್ತರು ಸೇರಿ 8 ಮಂದಿಯ  ಬಂಧನ

ಅತ್ಯಾಚಾರ, ಕೊಲೆ ಪ್ರಕರಣ: 8 ಮಂದಿಯ ಬಂಧನ

15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಹರೆಯದ ಮೂವರು ಸೇರಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದೆ. ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಖಾಸಗಿ ಭಾಗಗಳನ್ನು ವಿರೂಪಗೊಳಿಸಿ ಹತ್ಯೆ ಮಾಡಲಾಗಿದೆ. ಆಕೆಯ ದೇಹದ ವಿವಿಧ ಭಾಗಗಲ್ಲಿ ಚಿತ್ರಹಿಂಸೆ ನೀಡಿರುವ ಗುರುತುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Afzalpur News: ಶಾಸಕ ಎಂ.ವೈ.ಪಾಟೀಲರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಇಬ್ಬರ ವಿರುದ್ಧ ಎಫ್‌ಐಆರ್

ಶಾಸಕ ಎಂ.ವೈ.ಪಾಟೀಲರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ

ಶಾಸಕರಿಗೆ ಉದ್ದೇಶಪೂರ್ವಕವಾಗಿ ಅವಮಾನವಾಗುವ ರೀತಿಯಲ್ಲಿ sandipAfz007 ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ganeshjalde07 ಎಂಬ ಇನ್‌ಸ್ಟಾಗ್ರಾಮ್ ಖಾತೆ ಯಿಂದ ಶಾಸಕರನ್ನು ಉದ್ದೇಶಿಸಿ ಕೀಳುಮಟ್ಟದ ಹಾಗೂ ಅಶ್ಲೀಲ ಭಾಷೆಯಲ್ಲಿ ಕಾಮೆಂಟ್ ಮಾಡಲಾಗಿದೆ ಎನ್ನಲಾಗಿದೆ.

ಶಾಲೆಯಲ್ಲೇ ಹರಿಯಿತು ನೆತ್ತರು; ಶಿಕ್ಷಕಿಯನ್ನು ಕ್ಲಾಸ್‌ನಿಂದ ಹೊರಗೆಳೆದು 20 ಬಾರಿ ಇರಿದು ಕೊಂದ ಪಾಪಿ

ಶಾಲೆಗೆ ನುಗ್ಗಿ ಶಿಕ್ಷಕಿಯನ್ನು ಭೀಕರವಾಗಿ ಕೊಂದ ಪಾಪಿ

Viral News: ಮುಸುಕುಧಾರಿ ವ್ಯಕ್ತಿಯೊಬ್ಬ ಶಾಲೆಗೆ ನುಗ್ಗಿ ಹಾಡಹಗಲೇ ತರಗತಿಯಿಂದ ಶಿಕ್ಷಕಿಯನ್ನು ಹೊರಗೆಳೆದು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಶಿಕ್ಷಕಿಗೆ 18ರಿಂದ 20 ಇರಿತದ ಗಾಯಗಳಾಗಿದ್ದು, ದುಷ್ಕರ್ಮಿ ಆಕೆಯ ಕುತ್ತಿಗೆ ಮತ್ತು ಎದೆಯನ್ನು ಗುರಿಯಾಗಿಸಿಕೊಂಡು ಪದೇ ಪದೆ ಇರಿದಿದ್ದಾನೆ.‌ ಈ ಅಘಾತಕಾರಿ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಜೈಶ್‌-ಎ-ಮೊಹಮ್ಮದ್‌ ಗ್ಯಾಂಗ್ ಜತೆ ಸೇರಿ ಬಂಗಾಳ ಸಚಿವರ ಮಗನನ್ನು ಹನಿಟ್ರ್ಯಾಪ್‌ಗೆ ಕೆಡವಲು ಯೋಜನೆ: ಕಾಲೇಜು ವಿದ್ಯಾರ್ಥಿಯ ಬಂಧನ

ಜೈಶ್ ಜೊತೆ ನಂಟು: ಕಾಲೇಜು ವಿದ್ಯಾರ್ಥಿಯ ಬಂಧನ

ಪಾಕಿಸ್ತಾನ ಮೂಲದ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದ ಹಮೀಮ್ ಮೊಂಡಲ್ ಮತ್ತು ಅರ್ಪಿತಾ ಸರ್ಕಾರ್ ಬಂಧನದ ಬಳಿಕ ಇದೀಗ ಜೈಶ್-ಎ-ಮೊಹಮ್ಮದ್ ಜೊತೆಗೆ ನಂಟು ಹೊಂದಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ವಿಶೇಷ ಕಾರ್ಯಪಡೆಯು ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದೆ. ಪಶ್ಚಿಮ ಬಂಗಾಳ ಸಚಿವ ಮತ್ತು ಅವರ ಮಗನಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ದಾಖಲಿಸಿಕೊಂಡು ಅದನ್ನು ಹಮೀಮ್ ಮತ್ತು ಅರ್ಪಿತಾ ಜೊತೆಗೆ ಹಂಚಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಪ್ರಧಾನಿಯನ್ನು ನಿಂದಿಸಿದ ಅಪ್ರಾಪ್ತ ಬಾಲಕಿ ವಿರುದ್ಧ ಯಾವುದೇ ಕೇಸು ಇಲ್ಲ: ದೆಹಲಿ ಪೊಲೀಸ್

ಅಪ್ರಾಪ್ತ ಬಾಲಕಿ ವಿರುದ್ಧ ಯಾವುದೇ ಕೇಸಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿ ಬಳಿಕ ವಿಡಿಯೊ ಮೂಲಕ ಕ್ಷಮೆಯಾಚಿಸಿದ ಬಾಲಕಿ ವಿರುದ್ಧ ಯಾವುದೇ ಪ್ರಕರಣವಿಲ್ಲ ಎಂಬುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿಯವರನ್ನು ನಿಂದಿಸಿದ ಬಾಲಕಿ ವಿರುದ್ಧ ನೋಯ್ಡಾ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದರು. ಇದರ ಬಳಿಕ ಆಕೆ ಕ್ಷಮೆ ಕೇಳಿದ್ದು, ಆಕೆಯ ತಾಯಿಯು ಕೂಡ ಕ್ಷಮೆಯಾಚಿಸಿದ್ದರು.

Loading...