ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

ವಾಮಾಚಾರದ ವೇಳೆ ದುರಂತ; ಭೂತ ಬಿಡಿಸಲು ಹೋಗಿ ಮಗಳನ್ನೇ ಕೊಂದ ತಾಯಿ

ಮೂಢನಂಬಿಕೆಗೆ ಹೆತ್ತ ಕರುಳನ್ನೇ ಬಲಿ ಕೊಟ್ಟ ತಾಯಿ

ಮಗಳ ಮೇಲೆ ಬಂದಿದ್ದ ದೆವ್ವವನ್ನು ಬಿಡಿಸಲು ಯತ್ನಿಸಿದ ತಾಯಿ ಆಕೆಯ ಜೀವವನ್ನೇ ತೆಗೆದ ಹೃದಯವಿದ್ರಾವಕ ಘಟನೆ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ. ಮಗಳ ಸಾವಿಗೆ ಕಾರಣಳಾದ ಲಿ ಎಂಬ ಮಹಿಳೆಗೆ ಶೆನ್‌ಝೆನ್ ನಗರದ ಶೆನ್‌ಝೆನ್ ಮುನ್ಸಿಪಲ್ ಪೀಪಲ್ಸ್ ಪ್ರೊಕ್ಯೂರೇಟರೇಟ್ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ವರದಿಗಳ ಪ್ರಕಾರ, ಲಿ ಮತ್ತು ಆಕೆಯ ಇಬ್ಬರು ಪುತ್ರಿಯರು ಟೆಲಿಪಥಿ ಹಾಗೂ ಔಷಧೋಪಚಾರಕ್ಕೆ ಸಂಬಂಧಿಸಿದ ಕೆಲವು ಮೂಢನಂಬಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ದೆವ್ವಗಳು ತಮ್ಮನ್ನು ಹಿಂಬಾಲಿಸುತ್ತಿವೆ ಹಾಗೂ ತಮ್ಮ ಆತ್ಮಗಳಿಗೆ ಅಪಾಯವಿದೆ ಎಂಬ ಭ್ರಮೆಯೇ ಈ ದುರ್ಘಟನೆಗೆ ಕಾರಣ ಎಂದು ತಿಳಿದುಬಂದಿದೆ.

ಮಹಿಳೆ ಮೇಲೆ  ಗ್ಯಾಂಗ್‌ ರೇಪ್‌;  ಚಲಿಸುತ್ತಿದ್ದ ವಾಹನದಿಂದ ಎಸೆದ ದುಷ್ಟರು

ಮಹಿಳೆ ಮೇಲೆ ಅತ್ಯಾಚಾರ ಮಾಡಿ ಚಲಿಸುತ್ತಿದ್ದ ವಾಹನದಿಂದ ಎಸೆದ ದುಷ್ಟರು

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆಯ ಮೇಲೆ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ನಡೆಸಿ ಹಲ್ಲೆ ನಡೆಸಿದ ಘಟನೆ ಗುರ್ಗಾಂವ್-ಫರಿದಾಬಾದ್ ರಸ್ತೆಯಲ್ಲಿ ನಡೆದಿದೆ. ಸಂತ್ರಸ್ತೆಯ ಕುಟುಂಬದವರ ದೂರಿನ ಮೇರೆಗೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫರಿದಾಬಾದ್ ಅಪರಾಧ ವಿಭಾಗವು ಮಂಗಳವಾರ ಇಬ್ಬರು ಶಂಕಿತರನ್ನು ಬಂಧಿಸಿದೆ.

Bengaluru News: ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅನಂತ್ ಕುಮಾರ್ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಡಿ.30ರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಾಲ್ಕನಿ ಬಳಿ ತನ್ನ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆತ್ಮಹತ್ಯೆಯ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

Renuka swamy murder case: ರೇಣುಕಾಸ್ವಾಮಿ ತಾಯಿಯನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಪ್ರಾಸಿಕ್ಯೂಷನ್‌ ಮನವಿ

ರೇಣುಕಾಸ್ವಾಮಿ ತಾಯಿ ಪ್ರತಿಕೂಲ ಸಾಕ್ಷಿಯಾಗಿಸಲು ಪ್ರಾಸಿಕ್ಯೂಷನ್‌ ಮನವಿ

ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವದ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್‌ಪಿಪಿ (SPP) ಮನವಿ ಮಾಡಿದ್ದಾರೆ. ಎಸ್‌ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ. ರತ್ನಪ್ರಭಾ 8 ಅಂಶಗಳಲ್ಲಿ ಪ್ರಾಸಿಕ್ಯೂಷನ್ ವಿರುದ್ಧವೇ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ.

ದೇಶವೇ ನಾಚಿಕೆಯಿಂದ ತಲೆ ತಗ್ಗಿಸುವ ಘಟನೆ; 3 ತಿಂಗಳ ಹಸುಳೆ ಮೇಲೆ ಅತ್ಯಾಚಾರ ಎಸಗಿದ 30 ವರ್ಷದ ನೀಚ

3 ತಿಂಗಳ ಹಸುಳೆ ಮೇಲೆ ಅತ್ಯಾಚಾರ ಎಸಗಿದ 30 ವರ್ಷದ ನೀಚ

Physical Assault: 30 ವರ್ಷದ ಪಾಪಿಯೊಬ್ಬ ತನ್ನ 3 ತಿಂಗಳ ಸೊಸೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯ ಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಹಸುಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಸದ್ಯ ಈ ವಿಚಾರ ತಿಳಿದು ನಾಗರಿಕ ಸಮಾಜವೇ ಬೆಚ್ಚಿ ಬಿದ್ದಿದೆ.

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಜೈಲಾಧಿಕಾರಿ ಪತ್ರ

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಪತ್ರ

RD Patil: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್‌ ಕಿರಿಕ್‌ ಮಿತಿಮೀರಿದೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಬೇರೆ ಜೈಲಿಗೆ ವರ್ಗಾಯಿಸುವಂತೆ ಜೈಲು ಮುಖ್ಯ ಅಧೀಕ್ಷಕಿ ಡಾ. ಅನಿತಾ ಅವರು ಕಾರಾಗೃಹ ಇಲಾಖೆಯ ಡಿಐಜಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

Terror module: ಭಯೋತ್ಪಾದಕ ಜಾಲ ಬೇಧಿಸಿದ ಅಸ್ಸಾಂ ಪೊಲೀಸರು; 11 ಜನರ ಬಂಧನ

ಭಯೋತ್ಪಾದಕ ಜಾಲ ಬೇಧಿಸಿದ ಅಸ್ಸಾಂ ಪೊಲೀಸರು; 11 ಜನರ ಬಂಧನ

Assam police terrorist bust: ಅಸ್ಸಾಂ ಪೊಲೀಸರು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಮಾಡ್ಯೂಲ್ ಬೇಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 11 ಮಂದಿಯನ್ನು ಬಂಧಿಸಲಾಗಿದೆ. ಇದು ರಾಜ್ಯದಲ್ಲಿ ಭದ್ರತೆ ಹೆಚ್ಚಿಸಲು ಮತ್ತು ಉಗ್ರ ಸಂಘಟನೆಗಳ ಚಟುವಟಿಕೆಗಳನ್ನು ತಡೆಯುವಲ್ಲಿ ಪ್ರಮುಖ ಬೆಳವಣಿಗೆ ಎನಿಸಿಕೊಂಡಿದೆ. ಭಾರತೀಯ ಭದ್ರತಾ ಪಡೆ ಮತ್ತು ಗುಪ್ತಚರ ವ್ಯವಸ್ಥೆಯು ಅಸ್ಸಾಂನಲ್ಲಿ ಭಾರಿ ಕಣ್ಗಾವಲು ಹೆಚ್ಚಿಸಿದೆ.

ನ್ಯೂ ಇಯರ್‌ ಶುಭಾಶಯದ ಲಿಂಕ್‌ ಕ್ಲಿಕ್‌ ಮಾಡುವ ಮುನ್ನ ಎಚ್ಚರ; ವಂಚನೆಯ ಹೊಸ ವಿಧಾನದ ಬಗ್ಗೆ ಪೊಲೀಸರಿಂದ ಮಹತ್ವದ ಅಪ್‌ಡೇಟ್‌

ಹೊಸ ವರ್ಷ ಶುಭಾಶಯ ಸಂದೇಶಗಳ ಬಗ್ಗೆ ಎಚ್ಚರ

ಹೊಸ ವರ್ಷಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಈಗಾಗಲೇ ಮೊಬೈಲ್ ಗಳಲ್ಲಿ ಶುಭಾಶಯ ಸಂದೇಶಗಳು ಹರಿದಾಡುತ್ತದೆ. ಈ ನಡುವೆ ವಂಚನೆಯ ಶುಭಾಶಯ ಸಂದೇಶಗಳು ಬರಬಹುದು ಎಂದು ತೆಲಂಗಾಣ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಯಾವುದೇ ಸಂದೇಶ ತೆರೆಯುವ ಮುನ್ನ ಎಚ್ಚರಿಕೆ ವಹಿಸುವಂತೆ ಅವರು ತಿಳಿಸಿದ್ದಾರೆ.

ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಡ; ಸೈಕೋ ಪತಿ ವಿರುದ್ಧ ಪತ್ನಿ ದೂರು

ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕ್ರಿಯೆಗೆ ಪತಿ ಒತ್ತಡ; ಪತ್ನಿ ದೂರು

Bengaluru News: ಬೆಂಗಳೂರಿನಲ್ಲಿ ಮಂಜುನಾಥ್‌ ಎಂಬಾತನ ವಿರುದ್ಧ ಪತ್ನಿ ದೂರು ನೀಡಿದ್ದಾಳೆ. ಈ ದಂಪತಿ ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳು. ಮದುವೆಯಾದ ಮೂರೇ ತಿಂಗಳಿಗೆ ಪತಿಯ ವರ್ತನೆಗೆ ಬೇಸತ್ತ ಹೆಂಡತಿ, ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ.

Hulikal Ghat Bus Accident: ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿ; ಮಗು ಸಾವು, ಹಲವರಿಗೆ ಗಾಯ

ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ ಅಪಘಾತ; ಮಗು ಸಾವು, ಹಲವರಿಗೆ ಗಾಯ

Bus Accident in Shivamogga: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ದುರ್ಗಾಂಬ ಬಸ್, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್‌ ಘಾಟ್‌ನಲ್ಲಿ ಅಪಘಾತಕ್ಕೀಡಾಗಿದ್ದು, ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮಗು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಒಬ್ಬ ಸಾವು, ಮೂವರಿಗೆ ಗಾಯ

ಬೆಂಗಳೂರಿನ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಒಬ್ಬ ಸಾವು

Bengaluru Cylinder Blast: ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ಅವಘಡ ನಡೆದಿದೆ. ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅವಘಡ ಸಂಭವಿಸಿದ್ದು, ಒಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಎಚ್‌ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಲಸೆ ಕಾರ್ಮಿಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಹದಿಹರೆಯದ ಬಾಲಕರು; ತೀವ್ರ ಆಕ್ರೋಶ

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕನ ಮೇಲೆ ಮಚ್ಚಿನಿಂದ ಹಲ್ಲೆ

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕನ ಮೇಲೆ ಹದಿಹರೆಯದ ಕೆಲವು ಬಾಲಕರು ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ವಿಡಿಯೊವನ್ನು ಸ್ವತಃ ಹುಡುಗರೇ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ದಾಳಿ ನಡೆಸಿದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

MLA HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣಗೆ ಬಿಗ್‌ ರಿಲೀಫ್‌; ಕೇಸ್‌ ಕೈಬಿಟ್ಟ ಕೋರ್ಟ್‌

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣಗೆ ಬಿಗ್‌ ರಿಲೀಫ್‌

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮನೆಕೆಲಸದಾಕೆ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ಇದೀಗ ರೇವಣ್ಣರನ್ನು ಕೋರ್ಟ್‌ ಖುಲಾಸೆಗೊಳಿಸಿದೆ.

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿ; ಅವಮಾನಕ್ಕೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದಿದ್ದಕ್ಕೆ ಆತ್ಮಹತ್ಯೆಗೆ ಶರಣು

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ನಂತರ ಅವಮಾನ ತಾಳಲಾರದೆ 19 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬ ನಿರ್ಮಾಣ ಹಂತದಲ್ಲಿರುವ ಕಟ್ಟಡದ 12 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆ ಶನಿವಾರ ಬಾಗ್ರು ಪ್ರದೇಶದಲ್ಲಿ ನಡೆದಿದೆ.

ನಾನು ಭಾರತೀಯ;  ಜನಾಂಗೀಯ ದಾಳಿಯಲ್ಲಿ ಹತ್ಯೆಗೊಳಗಾಗುವ ಮುನ್ನ ತ್ರಿಪುರಾ ವಿದ್ಯಾರ್ಥಿ ಕೊನೆಯದಾಗಿ ಹೇಳಿದ್ದೇನು?

ನಾನು ಭಾರತೀಯ: ತ್ರಿಪುರಾ ವಿದ್ಯಾರ್ಥಿಯ ಕೊನೆಯ ಮಾತಿದು

Tripura student last words: ಡೆಹ್ರಾಡೂನ್‌ನಲ್ಲಿ ನಡೆದ ಜನಾಂಗೀಯ ದಾಳಿಯಲ್ಲಿ ತ್ರಿಪುರಾದ ವಿದ್ಯಾರ್ಥಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಸಾವಿನ ಕ್ಷಣಗಳ ಮೊದಲು ಅವರು ಆಡಿದ ಮಾತುಗಳು ಎಲ್ಲರ ಮನಸ್ಸನ್ನು ತಟ್ಟಿವೆ. ನಾನು ಚೀನಾದವನಲ್ಲ, ಭಾರತೀಯ ಎಂದು ಹೇಳಿದ್ದಾರೆ. ಈ ಘಟನೆ ವ್ಯಾಪಕ ಆಕ್ರೋಶ ಮತ್ತು ದುಃಖಕ್ಕೆ ಕಾರಣವಾಗಿದೆ.

Pavagada Crime: ಪಾವಗಡ ಆರ್‌ಎಂಸಿ ಯಾರ್ಡ್‌ನಲ್ಲಿ ಅನಾಮಿಕ ವ್ಯಕ್ತಿಯ ಶವ ಪತ್ತೆ: ಸಂತೆಗೆ ಬಂದ ಜನರಲ್ಲಿ ಆತಂಕ

ಪಾವಗಡ ಆರ್‌ಎಂಸಿ ಯಾರ್ಡ್‌ನಲ್ಲಿ ಅನಾಮಿಕ ವ್ಯಕ್ತಿಯ ಶವ ಪತ್ತೆ

ಶವವು ಸುಮಾರು ಎರಡು–ಮೂರು ದಿನಗಳ ಹಿಂದೆ ಮೃತಪಟ್ಟಿರು ವಂತೆ ಶಂಕಿಸಲಾಗಿದ್ದು, ಮೃತನ ಕುತ್ತಿಗೆ ಭಾಗದಲ್ಲಿ ಬಲವಾದ ಪೆಟ್ಟು ಬಿದ್ದಿರುವ ಗುರುತುಗಳು ಕಂಡುಬರುತ್ತಿವೆ. ಇದರಿಂದ ಯಾರೋ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಿ ಶವವನ್ನು ಇಲ್ಲಿ ತಂದು ಎಸೆದು ಹೋಗಿರಬಹುದೆಂಬ ಅನುಮಾನಗಳು ವ್ಯಕ್ತವಾಗಿವೆ.

Knife Attack: ಸುರಿನಾಂನಲ್ಲಿ ವ್ಯಕ್ತಿಯಿಂದ ಚಾಕು ಇರಿತ, 5 ಮಕ್ಕಳು ಸೇರಿ 9 ಮಂದಿ ಸಾವು

ಸುರಿನಾಂನಲ್ಲಿ ವ್ಯಕ್ತಿಯಿಂದ ಚಾಕು ಇರಿತ, 5 ಮಕ್ಕಳು ಸೇರಿ 9 ಮಂದಿ ಸಾವು

ಶಂಕಿತನ ಹೆಂಡತಿ ಇತ್ತೀಚೆಗೆ ಆತನನ್ನು ಬಿಟ್ಟು ಹೋಗಿದ್ದು, ಅವರ ನಾಲ್ವರು ಮಕ್ಕಳನ್ನು ಆತನ ಆರೈಕೆಯಲ್ಲಿ ಬಿಟ್ಟು ಹೋಗಿದ್ದಾಳೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಶಂಕಿತನು ಚಾಕುವಿನಿಂದ ಶಸ್ತ್ರಸಜ್ಜಿತನಾಗಿ ಮೊದಲು ತನ್ನ ಮಕ್ಕಳ ಮೇಲೆ ಮತ್ತು ನಂತರ ಆರು ನೆರೆಹೊರೆಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಯದ್ವಾತದ್ವಾ ಇರಿದು ಕೊಲೆಯ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

Assault Case: ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ, ಪಾನ್‌ ಶಾಪ್‌ ಚಿಂದಿ, ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ, ಮಾರಕಾಸ್ತ್ರಗಳಿಂದ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಬಷೀರ್ ಎಂಬವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ. ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದರ ಜೊತೆಗೆ, ಕಾರೊಂದರ ಮೇಲೂ ರೌಡಿಗಳು ದಾಳಿ ಮಾಡಿದ್ದಾರೆ. ಕಾರಿನ ಒಳಗೆ ಇದ್ದ ಇಬ್ಬರು ಯುವಕರ ಮೇಲೆ ಪುಡಿ ರೌಡಿಗಳು ದಾಳಿ ಮಾಡಲು ಯತ್ನಿಸಿದ್ದಾರೆ. ಕಾರಿನೊಳಗಿದ್ದ ಯುವಕರು ಅದೃಷ್ಟವಶಾತ್ ಗ್ರೇಟ್ ಎಸ್ಕೇಪ್ ಆಗಿದ್ದಾರೆ.

ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆ; ಮ್ಯಾನೇಜರ್‌ ಮೇಲೆ ಗುಂಡು ಹಾರಿಸಿ 5 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ!

ಹುಣಸೂರಿನಲ್ಲಿ ಚಿನ್ನದಂಗಡಿ ದರೋಡೆ; 5 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ

Jewellery shop Robbery in Hunsur: ದರೋಡೆಕೋರರು ಗನ್‌ ತೋರಿಸಿ ಸುಮಾರು 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ ಮಾಡಿದ್ದಾರೆ. 5ಕ್ಕೂ ಹೆಚ್ಚು ಜನರಿದ್ದ ಗ್ಯಾಂಗ್‌ನಿಂದ ಕೃತ್ಯ ಎಸಗಲಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ:  ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ, ನಿರಂತರ ಚಳುವಳಿ ಮತ್ತು ಸಿದ್ಧಾಂತ: ಸಿಎಂ

ಬೆಂಗಳೂರಿನ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು. MGNAREGA ಕಾರ್ಯಕ್ರಮದಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು. ಈಗ ರಾಜ್ಯಗಳ ಮೇಲೆ ಭಾರಿ ಹೊರೆಯನ್ನೇ ಹೊರೆಸುತ್ತಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

ಲಿವ್‌ ಇನ್‌ ಸಂಗಾತಿಗೆ ವಂಚನೆ, ಆಕೆಯ ತಂಗಿ ಮೇಲೂ ಅತ್ಯಾಚಾರ; ಆರೋಪಿ ಅರೆಸ್ಟ್

ಲಿವ್‌ ಇನ್‌ ಸಂಗಾತಿಗೆ ವಂಚನೆ, ಆಕೆಯ ತಂಗಿ ಮೇಲೂ ಅತ್ಯಾಚಾರ ಎಸಗಿದ!

Bengaluru News: ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲವ್ ಸೆಕ್ಸ್​ ದೋಖಾ ಪ್ರಕರಣ ನಡೆದಿದೆ. ಸಂತ್ರಸ್ತ ಯುವತಿ ಬಳಿ ಲಕ್ಷ ಲಕ್ಷ ಹಣ ಪಡೆದಿದ್ದ ಆರೋಪಿ, ಯುವತಿ ಮನೆಯಲ್ಲಿ ಚಿನ್ನಾಭರಣ ಸಹ ಕದ್ದಿದ್ದ. ಈ ಬಗ್ಗೆ ದೂರು ನೀಡಿದರೆ ಸಾಯಿಸುತ್ತೇನೆ ಎಂದು ಬೆದರಿಸಿದ್ದ. ಅಲ್ಲದೇ ಸಂತ್ರಸ್ತೆಯ ಅಪ್ರಾಪ್ತ ವಯಸ್ಸಿನ ಸಹೋದರಿಯ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಜಮ್ಮು ಕಾಶ್ಮೀರದಲ್ಲಿ ಅಡಗಿರುವ ಉಗ್ರರ ಬೇಟೆ ಆರಂಭಿಸಿದ ಭದ್ರತಾ ಪಡೆ

ಜಮ್ಮು ಕಾಶ್ಮೀರದಲ್ಲಿ ಅಡಗಿರುವ ಉಗ್ರರು

ಜೈಶ್ ಕಮಾಂಡರ್ ಮತ್ತು ಸಹಾಯಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಡಗಿದ್ದಾರೆ ಎನ್ನುವ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಭಾರತೀಯ ಭದ್ರತಾ ಪಡೆಯು ಬೇಟೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಿಶ್ತ್ವಾರ್‌ನ ಚತ್ರೂ ಉಪವಿಭಾಗದ ಹಳ್ಳಿಗಳನ್ನು ಸುತ್ತುವರಿದಿರುವ ಭಾರತೀಯ ಸೇನೆಯು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಳೆದ ಒಂದು ವಾರದಿಂದ ಇಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

Physical Assault: ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ ಬಿಜೆಪಿ ನಾಯಕಿಯ ಪತಿ

ಮಹಿಳೆ ಮೇಲೆ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಬಿಜೆಪಿ ನಾಯಕಿಯ ಪತಿ

ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ.

ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದ ಡ್ರಗ್ಸ್‌ ದಂಧೆ; 3 ಫ್ಯಾಕ್ಟರಿ ಸೀಜ್‌, 55 ಕೋಟಿ ಮೌಲ್ಯದ ಡ್ರಗ್‌ ಪತ್ತೆ

ಬೆಂಗಳೂರಿನಲ್ಲಿ 3 ಫ್ಯಾಕ್ಟರಿ ಸೀಜ್‌, 55 ಕೋಟಿ ಮೌಲ್ಯದ ಡ್ರಗ್‌ ಪತ್ತೆ

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜಾಗುತ್ತಿದ್ದ ವೇಳೆಯಲ್ಲೇ ಭಾರೀ ಡ್ರಗ್ಸ್‌ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮಹಾರಾಷ್ಟ್ರದ ANTF ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಮಾಡಲಾಗಿದೆ.

Loading...