ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂನ ಖ್ಯಾತ ಚಿತ್ರ ನಿರ್ದೇಶನಕ ಬಂಧನ

ಲೈಂಗಿಕ ದೌರ್ಜನ್ಯ: ಚಿತ್ರ ನಿರ್ದೇಶಕನ ಬಂಧನ

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಲಯಾಳಂ ಖ್ಯಾತ ಚಲನಚಿತ್ರ ನಿರ್ದೇಶಕ, ಮಾಜಿ ಶಾಸಕ ಪಿ.ಟಿ. ಕುಂಜು ಮುಹಮ್ಮದ್ ಎಂಬವರನ್ನು ಬಂಧಿಸಲಾಗಿದೆ. ಕೇರಳದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ಬಂದ ದೂರಿನ ಹಿನ್ನೆಲೆಯಲ್ಲಿ ಪೊಲೀಸರ ಮುಂದೆ ಹಾಜರಾದ ಅವರನ್ನು ಔಪಚಾರಿಕವಾಗಿ ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸೇನಾ ಶಿಬಿರದಲ್ಲಿ ಗುಂಡಿನ ದಾಳಿ ಓರ್ವ ಅಧಿಕಾರಿ ಹುತಾತ್ಮ

ಗುಂಡಿನ ದಾಳಿ: ಸೇನಾಧಿಕಾರಿ ಸಾವು

ಜಮ್ಮು ಮತ್ತು ಕಾಶ್ಮೀರದ ಸೇನಾ ಶಿಬಿರದೊಳಗೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಸೇನಾಧಿಕಾರಿ ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಓರ್ವ ಜವಾನ ನಾಪತ್ತೆಯಾಗಿದ್ದಾನೆ. ಈ ದಾಳಿಯಲ್ಲಿ ಭಯೋತ್ಪಾದಕರ ಪಾತ್ರವನ್ನು ತಳ್ಳಿ ಹಾಕಲಾಗಿದೆ. ಘಟನೆಯ ಕಾರಣ ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ.

ಉನ್ನಾವೋ ಅತ್ಯಾಚಾರ ಆರೋಪಿ ಸೆಂಗಾರ್‌ಗೆ ಜಾಮೀನು;  ಪ್ರತಿಭಟಿಸಿದ್ದ ಸಂತ್ರಸ್ತೆ ತಾಯಿ ಮೇಲೆ ಹಲ್ಲೆ

ಉನ್ನಾವೋ ಅತ್ಯಾಚಾರ ಆರೋಪಿ ಸೆಂಗಾರ್‌ಗೆ ಜಾಮೀನು

2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ ದಿಲ್ಲಿ ಹೈಕೋರ್ಟ್ ಆದೇಶವನ್ನು ವಿರೋಧಿಸಿ, ಸಂತ್ರಸ್ತೆ, ಆಕೆಯ ತಾಯಿ ಮತ್ತು ಮಹಿಳಾ ಕಾರ್ಯಕರ್ತೆ ಯೋಗಿತಾ ಭಯನಾ ಮಂಗಳವಾರ ಇಂಡಿಯಾ ಗೇಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಯಾವಾಗ ಭಾರತಕ್ಕೆ ಮರಳಿ ಬರುತ್ತಿರಿ... ಉದ್ಯಮಿ ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ವಿಜಯ್ ಮಲ್ಯ ಅರ್ಜಿ ವಿಚಾರಣೆ ಫೆಬ್ರವರಿ 12ಕ್ಕೆ ಮುಂದೂಡಿಕೆ

ಬಹು ಸಾಲ ಮರುಪಾವತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 2016ರಿಂದ ಯುಕೆಯಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರು ತಮ್ಮನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು ಘೋಷಿಸಿರುವ ಮತ್ತು 2018ರ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿದ ನ್ಯಾಯಾಲಯವು ಭಾರತಕ್ಕೆ ಯಾವಾಗ ಮರಳುತ್ತಿರಿ ಎಂದು ಪ್ರಶ್ನಿಸಿದೆ.

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ ಬಳಿ ಪ್ರೇಮ ನಿವೇದನೆ; ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ: ಬೆಂಗಳೂರಿನಲ್ಲೊಂದು ಭೀಕರ ಕೃತ್ಯ

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ನಡುರಸ್ತೆಯಲ್ಲೇ ಹಲ್ಲೆ

Pressure for relationship: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಯುವತಿಯ ಬಳಿ ಪ್ರೀತಿಸುವಂತೆ ಒತ್ತಡ ಹಾಕಿದ್ದು, ಆಕೆ ನಿರಾಕರಿಸಿದ ಕಾರಣ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಾಪಿ ಯುವತಿಯ ತಲೆ ಮತ್ತು ಬೆನ್ನಿಗೆ ಪದೇ ಪದೆ ಹೊಡೆದು ರಸ್ತೆಯ ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ.

ಮನೆಯ ಹೊರಗೆ ಸಿಕ್ತು ಪ್ಲಾಸ್ಟಿಕ್ ಚೀಲ, ಕಂಬಳಿಯಲ್ಲಿ ಸುತ್ತಿದ ಅಪರಿಚಿತ ಮಹಿಳೆಯ ಶವ; ಮಾಲೀಕ್‌ ಶಾಕ್‌

ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಅಪರಿಚಿತ ಮಹಿಳೆಯ ಶವ ಪತ್ತೆ

Crime News: ಜೈಪುರದ ಮನೆಯೊಂದರ ವರಾಂಡದಲ್ಲಿ ಅಪರಿಚಿತ ಮಹಿಳೆಯೊಬ್ಬಳ ಶವ ಪತ್ತೆಯಾಗಿದ್ದು, ಅದು ಪ್ಲಾಸ್ಟಿಕ್ ಚೀಲ ಮತ್ತು ಬೆಡ್‌ಶೀಟ್‌ನಲ್ಲಿ ಮಡಚಿ ಇಟ್ಟಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ಯಾರೋ ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಈ ರೀತಿ ಯಾರದ್ದೋ ಮನೆಯಲ್ಲಿ ಬಿಟ್ಟು ಹೋಗಿರಬಹುದು ಎಂದು ಶಂಕಿಸಲಾಗಿದೆ.

POCSO Case: ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ನಿಯನ್ನು ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

ಪತ್ನಿಯನ್ನು ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

Bengaluru shootout case: ಬೆಂಗಳೂರಿನಲ್ಲಿ ನೆಲೆಸಿದ್ದ ತಮಿಳುನಾಡಿನ ಸೇಲಂ ಮೂಲದ ದಂಪತಿ, ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ನಲ್ಲಿ ವಿಚಾರಣೆ ಮುಗಿದ ಬಳಿಕ ಬಸವೇಶ್ವರ ನಗರದ ಹೋಟೆಲ್‌ ಬಳಿ ಇಬ್ಬರಿಗೂ ಜಗಳ ನಡೆದಿದ್ದು, ಈ ವೇಳೆ ಗನ್‌ನಿಂದ ಶೂಟ್‌ ಮಾಡಿ ಪತ್ನಿಯನ್ನು ಗಂಡ ಕೊಲೆ ಮಾಡಿದ್ದಾನೆ.

ವಿಚ್ಛೇದಿತ ಪತ್ನಿಗೆ ಮಕ್ಕಳನ್ನು ಒಪ್ಪಿಸಲು ಇಚ್ಛಿಸದ ಪತಿ ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ

ತಾಯಿ, ಮಕ್ಕಳಿಗೆ ವಿಷವುಣಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಇಬ್ಬರು ಮಕ್ಕಳಿಗೆ ಹಾಗೂ ತನ್ನ ತಾಯಿಗೆ ವಿಷವುಣಿಸಿ ವ್ಯಕ್ತಿಯೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಕಲಾಧರನ್ ಎಂಬಾತ ತನ್ನ ಇಬ್ಬರು ಮಕ್ಕಳು ಹಾಗೂ ತಾಯಿಗೆ ಹಾಲಿಗೆ ಕೀಟನಾಶಕ ಬೆರೆಸಿ ಕುಡಿಸಿದ್ದಾನೆ. ಬಳಿಕ ತಾನು ಅದನ್ನು ಕುಡಿದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವೀಕ್‌ ಡೇಸ್‌ನಲ್ಲಿ ಕನ್ನಡ ಪ್ರೊಫೆಸರ್, ವೀಕೆಂಡ್‌ನಲ್ಲಿ ಕಿಲಾಡಿ ಕಳ್ಳಿ; 32 ಲಕ್ಷ ಮೌಲ್ಯದ ಚಿನ್ನ, ನಗದು ಕಳ್ಳತನ!

ಈಕೆ ವೀಕ್‌ ಡೇಸ್‌ನಲ್ಲಿ ಕನ್ನಡ ಪ್ರೊಫೆಸರ್, ವೀಕೆಂಡ್‌ನಲ್ಲಿ ಕಿಲಾಡಿ ಕಳ್ಳಿ!

ಬೆಂಗಳೂರಿನ ಬೆಳ್ಳಂದೂರು ಬಳಿಯ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ಆಗಿದ್ದ ಆರೋಪಿ, ವಾರಪೂರ್ತಿ ಪಾಠ ಮಾಡುತ್ತಿದ್ದಳು. ಆದರೆ ಭಾನುವಾರ ಮಾತ್ರ ಸಂಬಂಧಿಕರ ರೀತಿಯಲ್ಲಿ ಕಲ್ಯಾಣ ಮಂಟಪ ಪ್ರವೇಶಿಸಿ, ನಗದು ಮತ್ತು ಚಿನ್ನಾಭರಣ ಕದಿಯುತ್ತಿದ್ದಳು.

ಅಸ್ಸಾಂನ ಕರ್ಬಿ ಅಂಗ್ಲಾಂಗ್‌ನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಭುಗಿಲೆದ್ದ ಹಿಂಸಾಚಾರ

ನಿಷೇಧಾಜ್ಞೆ ನಡುವೆಯೇ ಅಸ್ಸಾಂನಲ್ಲಿ ಭುಗಿಲೆದ್ದ ಹಿಂಸಾಚಾರ

ಗಲಭೆ ಪೀಡಿತ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಎರಡು ಗುಂಪುಗಳ ನಡುವಿನ ಘರ್ಷಣೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು. ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಈ ಸಂದರ್ಭದಲ್ಲಿ ಸುಮಾರು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಸಕ ಬೈರತಿ ಬಸವರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಶಾಸಕ ಬೈರತಿ ಬಸವರಾಜ್‌ಗೆ ಶಾಕ್; ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬಂಧನದ ಭೀತಿಯಿಂದ ಈಗಾಗಲೇ ಶಾಸಕ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಸಿಐಡಿ ಪೊಲೀಸರು 3 ವಿಶೇಷ ತಂಡ ರಚನೆ ಮಾಡಿ ಬಲೆ ಬೀಸಿದ್ದಾರೆ. ಗೋವಾ ಮತ್ತು ಮಹಾರಾಷ್ಟ್ರ ಸೇರಿ ವಿವಿಧೆಡೆ ಪೊಲೀಸರಿಂದ ಹುಡುಕಾಟ ನಡೆಸುತ್ತಿದ್ದಾರೆ.

2017ರ ಉನ್ನಾವ್ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್‌ಗೆ ಜಾಮೀನು ಮಂಜೂರು, ಕಠಿಣ ಷರತ್ತು ಅನ್ವಯ

ಉನ್ನಾವ್ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್‌ಗೆ ಜಾಮೀನು

Unnao Rape Case: 2017ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಅವರ ಜೀವಾವಧಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಜಾಮೀನಿನೊಂದಿಗೆ ಕೆಲವು ಕಠಿಣ ಷರತ್ತು ವಿಧಿಸಲಾಗಿದೆ.

ಮಲಗಿದ್ದಾಗ ಆಕಸ್ಮಿಕವಾಗಿ ಮಲ ವಿಸರ್ಜನೆ ಮಾಡಿದ 3 ವರ್ಷದ ಬಾಲಕನ ಹತ್ಯೆ; ತಾಯಿಯ ಗೆಳೆಯನಿಂದಲೇ ಕೃತ್ಯ!

ಆಕಸ್ಮಿಕವಾಗಿ ಮಲವಿಸರ್ಜನೆ ಮಾಡಿದ 3 ವರ್ಷದ ಬಾಲಕನ ಹತ್ಯೆ

Crime News: ಮಲಗಿದ ವೇಳೆ ಆಕಸ್ಮಿಕವಾಗಿ ಮಲ ವಿಸರ್ಜನೆ ಮಾಡಿದ ಕಾರಣಕ್ಕೆ 3 ವರ್ಷದ ಬಾಲಕನನ್ನು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಅಮಾನುಷ ಕೃತ್ಯವನ್ನು ಬಾಲಕನ ತಾಯಿಯ ಗೆಳೆಯನೇ ನಡೆಸಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಭೂಗತ ಪಾತಕಿಯ ಮಗಳಾದರೂ ಲೈಂಗಿಕ ದೌರ್ಜನ್ಯ ಅನುಭವಿಸಿದ್ದೇನೆ ಎಂದ ಹಸೀನ್ ಮಸ್ತಾನ್ ಮಿರ್ಜಾ

ಮೋದಿ, ಶಾ ಬಳಿ ನ್ಯಾಯಕ್ಕಾಗಿ ಅಂಗಲಾಚಿದ ಭೂಗತ ಪಾತಕಿಯ ಮಗಳು

ಭೂಗತ ಪಾತಕಿಯ ಮಗಳಾದರೂ ಲೈಂಗಿಕ ದೌರ್ಜನ್ಯ ಅನುಭವಿಸಿದ್ದೇನೆ, ಅತ್ಯಾಚಾರ ಮಾಡಲಾಗಿದೆ, ಬಲವಂತವಾಗಿ ಮದುವೆ ಮಾಡಿಸಲಾಗಿದೆ ಎಂದು ಭೂಗತ ಲೋಕದ ಪಾತಕಿ ಹಾಜಿ ಮಸ್ತಾನ್ ಅವರ ಮಗಳು ಆರೋಪಿಸಿದ್ದಾರೆ. ಅತ್ಯಾಚಾರ, ಬಲವಂತದ ಮದುವೆ ಆರೋಪ ಮಾಡಿದ್ದಾರೆ. ತನ್ನ ಆಸ್ತಿಯನ್ನು ಅಕ್ರಮವಾಗಿ ಕಬಳಿಸಿರುವ ಪ್ರಕರಣದಲ್ಲಿ ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಅವರು ಮನವಿ ಮಾಡಿದ್ದಾರೆ.

ಚಾಕೋಲೆಟ್‌ ನೀಡಿ ಲೈಂಗಿಕ ದೌರ್ಜನ್ಯ; ಹಾಸನದಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ

ಹಾಸನದಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ

Hassan News: ಬಾಲಕಿಯ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯ‌ ಎಸಗಿದ್ದ. ಹೀಗಾಗಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯು ನಿತ್ಯ ಚಾಕೋಲೆಟ್​ ನೀಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸದ್ಯ ಆರೋಪಿಯನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

K Raghunath Murder Case: ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌: ಸಿಬಿಐಗೆ ಸಿಕ್ಕಿಬಿದ್ದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು

ಉದ್ಯಮಿ ಹತ್ಯೆ: ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಸಿಬಿಐ ವಶಕ್ಕೆ

ಹೆಚ್‌ಎಎಲ್‌ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಬಳಿ ಮೇ 14, 2019 ರಲ್ಲಿಆದಿಕೇಶವುಲು ಗೆಸ್ಟ್ ಹೌಸ್‌ನಲ್ಲಿ ರಘುನಾಥ್ ಮೃತಪಟ್ಟಿದ್ದರು. ತನಿಖೆ ಆರಂಭಿಸಿದ ಚೆನ್ನೈ ಸಿಬಿಐ ಕೊಲೆ ಕೇಸ್‌ ದಾಖಲಿಸಿ ಈಗ ಆದಿಕೇಶವುಲು ಮಗ ಶ್ರೀನಿವಾಸ್‌ ಹಾಗೂ ಮಗಳು ಕಲ್ಪಜರನ್ನು ಬಂಧಿಸಿದೆ. ತನಿಖೆ ನಡೆಸಿದ್ದ ಅಂದಿನ ಹೆಚ್‌ಎಎಲ್‌ ಇನ್ಸ್‌ಪೆಕ್ಟರ್‌ ಮೋಹನ್‌ ಅವರನ್ನೂ ಸಿಬಿಐ ಬಂಧಿಸಿ ವಿಚಾರಣೆ ನಡೆಸುತ್ತಿದೆ.

Theft Case: ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ರೂ. ಎಗರಿಸಿದ ಖದೀಮರು!

ಅಪಘಾತವಾಗಿ ಬಿದ್ದ ವ್ಯಕ್ತಿ ಮೊಬೈಲ್‌ನಿಂದ 80,000 ರೂ. ಎಗರಿಸಿದ ಖದೀಮರು!

ಮೈಸೂರು ತಾಲೂಕಿನ ಕಡಕೊಳದ ಬಳಿ ಡಿ.19 ರಂದು ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಬಂದ ರಮೇಶ ಮತ್ತು ಮನು, ಗಣೇಶ್ ಮೊಬೈಲ್ ತೆಗೆದುಕೊಂಡು ಯುಪಿಐ (UPI) ಮೂಲಕ 80 ಸಾವಿರ ರೂ. ಹಣ ವರ್ಗಾವಣೆ ಮಾಡಿಕೊಂಡು ಆಸ್ಪತ್ರೆಗೆ ಸೇರಿಸದೇ ಪರಾರಿ ಆಗಿದ್ದರು.

Assault Case: ಅನೈತಿಕ ಸಂಬಂಧಕ್ಕೆ ಕರೆ, ಬರದಿದ್ದುದಕ್ಕೆ ಯುವಕನಿಗೆ ಮಚ್ಚಿನ ಅಟ್ಯಾಕ್!

ಅನೈತಿಕ ಸಂಬಂಧಕ್ಕೆ ಕರೆ, ಬರದಿದ್ದುದಕ್ಕೆ ಯುವಕನಿಗೆ ಮಚ್ಚಿನ ಅಟ್ಯಾಕ್!

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಘಟನೆ ದೊಡ್ಡಬಳ್ಳಾಪುರದ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ದೀಪ ಎಂಬಾಕೆ ಜೊತೆ ಅದೇ ಗ್ರಾಮದಲ್ಲಿ ನೆಲೆಸಿದ್ದ ಕಾರ್ತಿಕ್​ ಎಂಬ ಯುವಕ ಅಕ್ರಮ ಸಂಬಂಧ ಹೊಂದಿದ್ದ. ವಿಚಾರ ತಿಳಿದು ಕಾರ್ತಿಕ್​ ಕುಟುಂಬಸ್ಥರು ಆತನಿಗೆ ಬುದ್ದಿವಾದ ಹೇಳಿದ್ದಾರೆ. ಆಕೆಯ ಸಹವಾಸ ಬಿಟ್ಟುಬಿಡು ಎಂದಿದ್ದಾರೆ.

Murder Case: ಗೆಳೆಯನ ಜೊತೆ ಲವ್ವಿಡವ್ವಿ; ಗಂಡನನ್ನು ಕೊಂದು ದೇಹ ಕತ್ತರಿಸಿ ನದಿಗೆಸೆದ ಪತ್ನಿ!

ಗಂಡನನ್ನು ಕೊಂದು ದೇಹ ಕತ್ತರಿಸಿ ನದಿಗೆಸೆದ ಪತ್ನಿ!

ಪತ್ನಿಯೇ ತನ್ನ ಪ್ರಿಯಕರನೊಟ್ಟಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ರೂಬಿ ಮತ್ತು ಗೌರವ್ ಎಂದು ಗುರುತಿಸಲಾಗಿದ್ದು, ಚಂದೌಸಿ ಪ್ರದೇಶದ ಮೊಹಲ್ಲಾ ಚುನ್ನಿ ನಿವಾಸಿ ರೂಬಿ ನವೆಂಬರ್ 18 ರಂದು ತನ್ನ ಪತಿ ರಾಹುಲ್ (38) ನಾಪತ್ತೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದಳು

Murder Case: ಸಿನಿಮೀಯವಾಗಿ ಪತ್ನಿಯ ಕೊಲೆ ಮಾಡಿ ಅಪಘಾತದ ಡ್ರಾಮಾ, ಪತಿಯ ಸೆರೆ

ಸಿನಿಮೀಯವಾಗಿ ಪತ್ನಿಯ ಕೊಲೆ ಮಾಡಿ ಅಪಘಾತದ ಡ್ರಾಮಾ, ಪತಿಯ ಸೆರೆ

ಯಲಹಂಕದ ಬೊಮ್ಮಸಂದ್ರದ ಬಳಿ ವಾಸವಿದ್ದ ಅನಂತ್ (64) ಎಂಬಾತ ತನ್ನ ಪತ್ನಿ ಗಾಯತ್ರಿ (50) ಅವರನ್ನು ಸೈಟ್ ನೋಡಲೆಂದು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಸೈಟ್​ನಲ್ಲಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ನಂತರ ಗಾಯತ್ರಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂಬಂತೆ ನಾಟಕವಾಡಿ ಅಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.

ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕು ಇರಿದ ಕಿಡಿಗೇಡಿಗಳು!

ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕು ಇರಿತ

Shivamogga News: ಚಾಕು ಇರಿತಕ್ಕೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೆ ವೈಷಮ್ಯದಿಂದಾಗಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಮದುವೆಗೆ ಒಪ್ಪದ ಪ್ರಿಯಕರ; ಬಳ್ಳಾರಿಯಲ್ಲಿ ವಿಡಿಯೊ ಮಾಡುತ್ತಲೇ ವಿವಾಹಿತ ಮಹಿಳೆ ಆತ್ಮಹತ್ಯೆ

ಮದುವೆಗೆ ಒಪ್ಪದ ಪ್ರಿಯಕರ; ವಿಡಿಯೊ ಮಾಡುತ್ತಲೇ ವಿವಾಹಿತ ಮಹಿಳೆ ಆತ್ಮಹತ್ಯೆ

Bellary News: ಮಹಿಳೆಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದು, ಪತಿಯಿಂದ ದೂರವಿದ್ದಳು. ಈ ನಡುವೆ ಯುವಕನೊಬ್ಬನ ಜತೆ ಸ್ನೇಹವಾಗಿತ್ತು. ಆ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಹೀಗಾಗಿ ತನ್ನನ್ನು ಮದುವೆ ಆಗುವಂತೆ ಪ್ರಿಯಕರನಿಗೆ ಒತ್ತಾಯ ಮಾಡಿದ್ದಳು. ಆದರೆ, ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆದು, ಮಹಿಳೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಕಾರಿನಲ್ಲಿ ಬಾಂಬ್‌ ಸ್ಫೋಟ: ರಷ್ಯಾದ ಹಿರಿಯ ಜನರಲ್ ಸಾವು, ಉಕ್ರೇನ್ ಕೈವಾಡ?

ಬಾಂಬ್ ಸ್ಪೋಟದಿಂದ ರಷ್ಯಾದ ಹಿರಿಯ ಜನರಲ್ ಸಾವು

ಕಾರಿನ ಕೆಳಗೆ ಬಾಂಬ್ ಸ್ಪೋಟಗೊಂಡು ರಷ್ಯಾದ ಹಿರಿಯ ಜನರಲ್ ಸಾವನ್ನಪ್ಪಿರುವ ಘಟನೆ ಮಾಸ್ಕೋದಲ್ಲಿ ಸೋಮವಾರ ನಡೆದಿದೆ. ಈ ಸ್ಪೋಟದ ಹಿಂದೆ ಉಕ್ರೇನ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಜನರಲ್ ಸ್ಟಾಫ್‌ನೊಳಗಿನ ತರಬೇತಿ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಫನಿಲ್ ಸರ್ವರೋವ್ ಸಾವನ್ನಪ್ಪಿದ್ದಾರೆ.

Loading...