ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

Bengaluru News: ಪ್ರಿಯಕರನ ಕೈಕಾಲು ಕಟ್ಟಿ ಭೀಕರವಾಗಿ ಹತೈಗೈದ ಕಿರುತೆರೆ ನಟಿ

ಪ್ರಿಯಕರನನ್ನು ಭೀಕರವಾಗಿ ಹತೈಗೈದ ಕಿರುತೆರೆ ನಟಿ

Crime News: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಬಾಗಲಗುಂಟೆಯ ವಿಜಯಲಕ್ಷ್ಮೀ ಬಡಾವಣೆಯ ಮನೆಯೊಂದರಲ್ಲಿ ಪ್ರಿಯಕರನನ್ನು ಕಿರುತೆರೆ ನಟಿ ಊರ್ವಶಿ ಕೊಲೆ ಮಾಡಿದ್ದಾಳೆ. ಕೆಲವು ದಿನಗಲ ಹಿಂದೆ ಮೃತದೇಹ ಪತ್ತೆಯಾಗಿತ್ತು. ಇದೀಗ ಕೊಲೆಯ ರಹಸ್ಯ ಬಯಲಾಗಿದ್ದು, ಮೃತನನ್ನು ಮೋಹನ ಕೃಷ್ಣ ಎಂದು ಗುರುತಿಸಲಾಗಿದೆ.

ಲಕ್ನೋದಲ್ಲಿ ಬಿರಿಯಾನಿ ಅಂಗಡಿಯ ಫ್ರೀಜರ್‌ನಲ್ಲಿ ಯುವಕನ ಶವ ಪತ್ತೆ: ಬೆಚ್ಚಿಬಿದ್ದ ಮಾಲೀಕ

ದೇಶವೇ ಬೆಚ್ಚಿಬೀಳಿಸುವ ಘಟನೆ: ಬಿರಿಯಾನಿ ಅಂಗಡಿಯ ಫ್ರೀಜರ್‌ನಲ್ಲಿ ಶವ ಪತ್ತೆ!

ವೆಜ್ ಬಿರಿಯಾನಿ ಅಂಗಡಿಯ ಫ್ರೀಜರ್‌ನಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಇದನ್ನು ಗಮನಿಸಿದ ಪೊಲೀಸರೇ ದಿಗ್ಭ್ರಮೆಗೊಂಡಿದ್ದಾರೆ. ಜಿಸಿಆರ್‌ಜಿ ಕಾಲೇಜು ಗೇಟ್‌ನ ಎದುರಿನ ಅಂಗಡಿ ಇರುವ ಬಕ್ಷಿ ಕಾ ತಲಾಬ್ ಪ್ರದೇಶದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ಮೃತ ವ್ಯಕ್ತಿಯನ್ನು ಯಾರೆಂದು ಇನ್ನೂ ಗುರುತಿಸಲಾಗಿಲ್ಲ.

Assault Case: ಪಿಯುಸಿ ಪರೀಕ್ಷೆ ಬರೆಯಲು ಹೋಗದಂತೆ ವಿದ್ಯಾರ್ಥಿನಿ ಮೇಲೆ ಸೋದರಮಾವನ ಹಲ್ಲೆ

ಪಿಯುಸಿ ಪರೀಕ್ಷೆ ಬರೆಯಲು ಹೋಗದಂತೆ ವಿದ್ಯಾರ್ಥಿನಿ ಮೇಲೆ ಸೋದರಮಾವನ ಹಲ್ಲೆ

ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ (2nd PUC Exam) ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸೋದರ ಮಾವ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನಲೆಯಲ್ಲಿ, ನೀನು ಓದಬಾರದು ಅಂತ ಹಲ್ಲೆ ಮಾಡಿದ್ದಾನೆ.

Physical Abuse: ಡ್ರಗ್ಸ್‌ ನೀಡಿ ಅತ್ಯಾಚಾರ ಪ್ರಕರಣದಲ್ಲಿ ಕಾರ್ಪೊರೇಟರ್‌ ಮಗ ಅಂದರ್‌

ಡ್ರಗ್ಸ್‌ ನೀಡಿ ಅತ್ಯಾಚಾರ ಪ್ರಕರಣದಲ್ಲಿ ಕಾರ್ಪೊರೇಟರ್‌ ಮಗ ಅಂದರ್‌

ಡ್ರಗ್ಸ್ ದಂಧೆ ಜತೆ ಸೆಕ್ಸ್ ದಂಧೆಗೂ ಬಯಲಾಗಿದ್ದ ಕೇಸ್​ನಲ್ಲಿ ಮತ್ತೆ ಮೂವರು ಬಂಧನವಾಗಿದ್ದಾರೆ. ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ನಿಖಿಲ್, ಡಿಕ್ಸನ್ ಹೆಡೆಮುರಿ ಕಟ್ಟಿದ್ದ ಅಮೃತಹಳ್ಳಿ ಪೊಲೀಸರು ಇದೀಗ ಅನಿರುದ್ಧ, ಶ್ರವಣ್, ಮೋಹಿತ್ ಎಂಬ ಮೂವರನ್ನು ಕಸ್ಟಡಿಗೆ ಪಡೆದಿದ್ದಾರೆ. ಈ ಮೂವರು ಕೂಡ ನಿಖಿಲ್ ಕೃತ್ಯಕ್ಕೆ ಪ್ರತ್ಯಕ್ಷ, ಪರೋಕ್ಷವಾಗಿ ಸಾಥ್ ನೀಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬಯಲಾಗಿದೆ.

Elephant attack in Madikeri: ಮಡಿಕೇರಿಯಲ್ಲಿ ಆನೆ ದಾಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು

ಮಡಿಕೇರಿಯಲ್ಲಿ ಆನೆ ದಾಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು

Elephant attack: ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕಾಲೇಜು ಮುಗಿಸಿ ಸಂಜೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ. ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಶಿಗ್ಗಾಂವಿಯಲ್ಲಿ ಭೀಕರ ಅಪಘಾತ; ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ದುರ್ಮರಣ

ಲಾರಿಗೆ ಕಾರು ಡಿಕ್ಕಿಯಾಗಿ 15 ಹಿಂದಷ್ಟೇ ಮದುವೆಯಾಗಿದ್ದ ದಂಪತಿ ಸಾವು

Haveri Accident: ಶಿಗ್ಗಾಂವಿ ಸಮೀಪದ ಅಂಬುಜಾ ಪ್ಯಾಕ್ಟರಿ ಬಳಿ ಭೀಕರ ಅಪಘಾತ ನಡೆದಿದೆ. ದೇವರ ದರ್ಶನ ಮುಗಿಸಿಕೊಂಡು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಮುಂಜಾನೆ ಹೋಗುತ್ತಿದ್ದಾಗ ದುರಂತ ಸಂಭವಿಸಿದ್ದು, 15 ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಮೃತಪಟ್ಟಿದ್ದಾರೆ.

ಗಡಿ ನಿಯಂತ್ರಣ ರೇಖೆ ದಾಟಿ ಭಾರತದೊಳಗೆ ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್

ಮತ್ತೆ ಭಾರತದೊಳಗೆ ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್

ಭಾರತದ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕಿಸ್ತಾನದ ಡ್ರೋನ್ ಒಳಗೆ ಬಂದಿದ್ದು, ಭಾರತೀಯ ಸೇನೆಯು ಅದರ ಮೇಲೆ ಗುಂಡಿನ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಪಾಕಿಸ್ತಾನದ ಡ್ರೋನ್ ಗಳು ಭಾರತದೊಳಗೆ ಪ್ರವೇಶಿಸಿದೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

ಬೆಂಗಳೂರಿನಲ್ಲಿ ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ದುರ್ಘಟನೆ ನಡೆದಿದೆ. ಮಳೆನೀರಿನ ಇಂಗುಗುಂಡಿಯನ್ನು ಕೆಮಿಕಲ್ ಹಾಕಿ ಸ್ವಚ್ಛಗೊಳಿಸುವಾಗ ಮಾಲೀಕ ಮೂರ್ಛೆ ಹೋಗಿದ್ದಾರೆ. ಅವರನ್ನು ರಕ್ಷಿಸಲು ಹೋದ ಪ್ಲಂಬರ್ ಕೂಡ​​ ಮೂರ್ಛೆ ಹೋಗಿದ್ದಾರೆ. ಇವರಿಬ್ಬರನ್ನು ನೋಡಲು ಹೋದ ಮತ್ತೊಬ್ಬ ಯುವಕ ಕೂಡ ಪ್ರಜ್ಞೆತಪ್ಪಿದ್ದಾನೆ. ಮೂವರನ್ನೂ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಹಾಸನದಲ್ಲಿ ಗ್ರಾಹಕರ 3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌; ಸಾಲದ ಹೆಸರಲ್ಲಿ ವಂಚನೆ!

ಗ್ರಾಹಕರ 3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌

Hassan Bank Fraud Case: ಬ್ಯಾಂಕ್​​ನಲ್ಲಿ ಎಫ್‌ಡಿ ಇಟ್ಟರೆ 25 ಲಕ್ಷದಿಂದ 1 ಕೋಟಿವರೆಗೂ ಸಾಲ ಕೊಡಿಸುವ ಆಮಿಷವನ್ನು ಗ್ರಾಹಕರಿಗೆ ಲೇಡಿ ಬ್ಯಾಂಕ್​ ಮ್ಯಾನೇಜರ್ ಒಡ್ಡಿದ್ದಳು. ಅವರ ಮಾತು ನಂಬಿ ಬ್ಯಾಂಕ್‌ನಲ್ಲಿ ಜನ ಹಣ ಇಟ್ಟಿದ್ದಾರೆ. ಆದರೆ, ಎಫ್​ಡಿ ಮಾಡಿರುವ ಹಣಕ್ಕೆ ಯಾವುದೇ ದಾಖಲೆಯನ್ನು ಮ್ಯಾನೇಜರ್​​ ನೀಡಿಲ್ಲ ಎನ್ನಲಾಗಿದೆ. ಗ್ರಾಹಕರಿಂದ ಸಂಗ್ರಹಿಸಿದ ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌ ಆಗಿದ್ದಾಳೆ.

Viral Video: ಸೆಲ್ಫಿಗಾಗಿ ವಿದೇಶಿ ಮಹಿಳೆ ಹಿಂದೆ ಬಿದ್ದ ಯುವಕರು; ವಿಡಿಯೊ ವೈರಲ್

ಮುಂಬೈಯಲ್ಲಿ ವಿದೇಶಿ ಮಹಿಳೆಗೆ ಕಿರುಕುಳ

ಮಹಾರಾಷ್ಟ್ರದ ಮುಂಬೈ ನಗರದ ಮಹಾಲಕ್ಷ್ಮೀ ಪ್ರದೇಶದಲ್ಲಿ ವಿದೇಶಿ ಮಹಿಳಾ ಪ್ರವಾಸಿಗೆಯೊಬ್ಬರಿಗೆ ಸೆಲ್ಫಿ ತೆಗೆಯುವ ನೆಪದಲ್ಲಿ ಇಬ್ಬರು ಯುವಕರು ಹಿಂಬಾಲಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಮಹಿಳೆ ಪದೇ ಪದೆ ನಿರಾಕರಿಸಿದ್ದರೂ ಅವರು ಹಿಂದೆ ಸರಿಯದೆ ಹಿಂಬಾಲಿಸಿದ ದೃಶ್ಯಗಳು ವೈರಲ್ ವಿಡಿಯೊದಲ್ಲಿ ಕಂಡು ಬಂದಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳಾ ಸುರಕ್ಷತೆ ಹಾಗೂ ಪ್ರವಾಸಿಗರ ಭದ್ರತೆ ಕುರಿತು ಮತ್ತೆ ಚರ್ಚೆ ಆರಂಭವಾಗಿದೆ.

ಬೀದಿ ನಾಯಿಗೆ ಮತ್ತೊಂದು ಬಲಿ; ಥಾಣೆಯಲ್ಲಿ ಬಾಲಕನನ್ನು ಕಚ್ಚಿ ಕೊಂದ ರಕ್ಕಸ ಶ್ವಾನ

ಬೀದಿ ನಾಯಿ ದಾಳಿ: ಬಾಲಕ ಸಾವು

ಬೀದಿ ನಾಯಿಯೊಂದು ದಾಳಿ ನಡೆಸಿ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ನಡೆದಿದೆ. ಬಾಲಕನನ್ನು ರಕ್ಷಿಸಲು ಹೋದ ಸ್ನೇಹಿತನ ಮೇಲೂ ನಾಯಿ ದಾಳಿ ನಡೆಸಿ ಗಾಯಗೊಳಿಸಿದೆ. ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಸೂರತ್‌ನಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ: ಕ್ರೆಡಿಟ್ ಕಾರ್ಡ್ ವಂಚನೆ, ಮಾನಸಿಕ ಕಿರುಕುಳ ನೀಡಿದ್ದ ಆರೋಪಿ ಬಂಧನ!

ಸೂರತ್ ಸಾಮೂಹಿಕ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ದೆಹಲಿಯಲ್ಲಿ ಬಂಧನ

ಸೂರತ್‌ನ ಖೇತನ್ ಕುಟುಂಬದ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ವೈಭವ್ ರುಂಗ್ತಾವನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಬಾಲಮುಕುಂದ್ ಖೇತನ್ ಬರೆದ ಡೆತ್‌ನೋಟ್ ಹಾಗೂ ವಿಷ ಸೇವಿಸಿ ಬದುಕುಳಿದ 7 ವರ್ಷದ ಪುತ್ರಿಯ ಹೇಳಿಕೆಯ ಆಧಾರದ ಮೇಲೆ ಬಂಧನ ನಡೆದಿದೆ. ಕ್ರೆಡಿಟ್ ಕಾರ್ಡ್ ದುರುಪಯೋಗ ಮತ್ತು ನಿರಂತರ ಮಾನಸಿಕ ಕಿರುಕುಳದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕುಟುಂಬ ಅಲ್ಯೂಮಿನಿಯಂ ಫಾಸ್ಫೈಡ್ ವಿಷ ಸೇವಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Body Found: ಬೆಂಗಳೂರಿನ ಮನೆಯೊಳಗೆ ವ್ಯಕ್ತಿಯ ಕೊಳೆತ ಶವ ಪತ್ತೆ; ಹತ್ಯೆ ಎಸಗಿ ಮನೆಗೆ ಲಾಕ್‌ ಮಾಡಿದ ದುಷ್ಟರು

ಬೆಂಗಳೂರಿನ ಮನೆಯೊಳಗೆ ಕೊಳೆತ ಶವ ಪತ್ತೆ; ಹತ್ಯೆಯೆಸಗಿ ಮನೆಗೆ ಲಾಕ್‌

ನಾಗರಾಜ್ ಎಂಬವರಿಗೆ ಸೇರಿದ ಮನೆಯಲ್ಲಿ ಶವ ಪತ್ತೆಯಾಗಿದೆ. 4 ದಿನದ ಹಿಂದೆ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಮನೆಗೆ ಬೀಗ ಹಾಕಲಾಗಿತ್ತು ಹಾಗೂ ಸುತ್ತಮುತ್ತ ಕೆಟ್ಟ ವಾಸನೆ ಬರುತ್ತಿತ್ತು. ಮನೆ ಮಾಲೀಕ ನಾಗರಾಜ್‌ಗೆ ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಬಂದಿದ್ದು, ಈ ವೇಳೆ ಗುರುತು ಸಿಗದ ಬೆತ್ತಲೆ ಕೊಳೆತ ಮೃತದೇಹ ಕಂಡು ಶಾಕ್ ಆಗಿದ್ದಾರೆ.

Bengaluru Crime: ಬೆಂಗಳೂರಿನಲ್ಲಿ ಭೀಕರ ಅತ್ಯಾಚಾರ ದಂಧೆ, ಡ್ರಗ್ಸ್‌ ನೀಡಿ 19 ಕಾಲೇಜು ಯುವತಿಯರ ಮೇಲೆ ದೌರ್ಜನ್ಯ

ಭೀಕರ ಅತ್ಯಾಚಾರ ದಂಧೆ, ಡ್ರಗ್ಸ್‌ ನೀಡಿ 19 ಕಾಲೇಜು ಯುವತಿಯರ ಮೇಲೆ ದೌರ್ಜನ್ಯ

ತನಿಖೆಯ ವೇಳೆ ಪೊಲೀಸರಿಗೆ ಆಘಾತಕಾರಿ ವಿಷಯವೊಂದು ತಿಳಿದುಬಂದಿದೆ. ಈ ಪಾರ್ಟಿಗಳು ನಡೆಯುತ್ತಿದ್ದ ಜಕ್ಕೂರು ಸಮೀಪದ ವಿಲ್ಲಾ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಗೆ ಸೇರಿದ್ದೆನ್ನಲಾಗಿದೆ. ಈ ಬಗ್ಗೆ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ನಿಕಿಲ್ ಬಂಧನವಾಗುತ್ತಿದ್ದಂತೆಯೇ ಕೆಲವು ಪ್ರಭಾವಿಗಳು ಪೊಲೀಸರ ಮೇಲೆ ಒತ್ತಡ ಹೇರಿದ್ದರು ಎಂದೂ ಗೊತ್ತಾಗಿದೆ.

Assault case: ಕೊಡಗಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ, ಒಬ್ಬನ ಬಂಧನ

ಕೊಡಗಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ, ಒಬ್ಬನ ಬಂಧನ

ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಪರ ಸಂಘಟನೆಗಳು (Hindu Organizations) ಆಗ್ರಹಿಸಿವೆ. ರಾಶೀದ್ ಸಿದ್ದಿಕ್, ಸುಹೇಲ್ ಹಾಗೂ ನಾಫಿ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಾಲ್ವರ ಪೈಕಿ ಸುಹೇಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಒಂದೇ ದಿನ 2 ಪ್ರತ್ಯೇಕ ಸ್ಥಳದಲ್ಲಿ ಪ್ರಿಯಕರ, ಅಪರಿಚಿತನಿಂದ ಯುವತಿ ಮೇಲೆ ಅತ್ಯಾಚಾರ; ದೇಶವನ್ನೇ ಬೆಚ್ಚಿ ಬೀಳಿಸಿದ ಘಟನೆ

ಒಂದೇ ದಿನ 2 ಪ್ರತ್ಯೇಕ ಸ್ಥಳದಲ್ಲಿ ಯುವತಿ ಮೇಲೆ ಅತ್ಯಾಚಾರ

Odisha Horror: 23 ವರ್ಷದ ಯವತಿಯ ಮೇಲೆ ಪ್ರಿಯಕರ ಮತ್ತು ಅಪರಿಚಿತ ವ್ಯಕ್ತಿ ಒಂದೇ ದಿನ 2 ಬಾರಿ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಜಗತ್‌ಸಿಂಘ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ್ದಲ್ಲದೆ ಯುವತಿಯನ್ನು ಕಟ್ಟಡದಿಂದ ದೂರಿ ಕೊಲೆ ಮಾಡಲಾಗಿದ್ದು, ಸದ್ಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಬೆಚ್ಚಿ ಬೀಳಿಸುವ ಘಟನೆ: ಉಜ್ಜಯಿನಿ ಆಶ್ರಮದಲ್ಲಿ 14 ತಿಂಗಳಲ್ಲಿ 17 ವಿಶೇಷ ಚೇತನ ಮಕ್ಕಳ ಸಾವು, ಹೈಕೋರ್ಟ್ ಮಧ್ಯ ಪ್ರವೇಶ

ಉಜ್ಜಯಿನಿ ಆಶ್ರಮದಲ್ಲಿ 14 ತಿಂಗಳಲ್ಲಿ 17 ಮಕ್ಕಳ ಸಾವು

ಮಧ್ಯ ಪ್ರದೇಶದ ಉಜ್ಜಯಿನಿಯ ಅಂಕಿತ್ ಸೇವಾಧಾಮ ಆಶ್ರಮದಲ್ಲಿ ಕಳೆದ 14 ತಿಂಗಳಲ್ಲಿ 17 ವಿಶೇಷ ಚೇತನ ಮಕ್ಕಳು ಸಾವನ್ನಪ್ಪಿರುವ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಮಧ್ಯ ಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡು, ರಾಜ್ಯದ ಹಿರಿಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಇವರು ʼಭಕ್ತʼ ಕಳ್ಳರು; ದೇವರಿಗೆ ಕೈ ಮುಗಿದು ಕಾಣಿಕೆ ಪೆಟ್ಟಿಗೆ ಹೊತ್ತೊಯ್ದ ಖದೀಮರು

ದೇವಿಗೆ ಕೈ ಮುಗಿದು, ಕಾಣಿಕೆ ಡಬ್ಬಿ ಹೊತ್ತೊಯ್ದ ಕಳ್ಳರು

ಉತ್ತರಾಖಂಡದ ರುದ್ರಾಪುರದ ಅಟೇರಿಯಾ ಮಾತಾ ದೇವಸ್ಥಾನದಲ್ಲಿ ನಡೆದ ಘಟನೆಯು ಅಚ್ಚರಿಗೆ ಕಾರಣವಾಗಿದೆ. ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿರುವ ಪ್ರಸಿದ್ಧ ದೇವಸ್ಥಾನದಲ್ಲಿ ಮುಸುಕುಧಾರಿ ಕಳ್ಳರು ಕಾಣಿಕೆ ಪೆಟ್ಟಿಗೆಗಳನ್ನು ಹೊತ್ತೊಯ್ದಿರುವುದು ಮಾತ್ರವಲ್ಲ, ಕೃತ್ಯಕ್ಕೂ ಮುನ್ನ ದೇವಿಯ ವಿಗ್ರಹದ ಮುಂದೆ ಕೈ ಮುಗಿದು ಪ್ರಾರ್ಥನೆ ಸಲ್ಲಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಾರ್ಕ್‌ನಲ್ಲಿ ಪ್ರಿಯತಮೆಗೆ 30-40 ಬಾರಿ ಕಪಾಳಮೋಕ್ಷ ಮಾಡಿದ ಯುವಕ; ಕ್ಲಾಸ್‌ ತೆಗೆದುಕೊಂಡ ನೆಟ್ಟಿಗರು

ಯುವತಿಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿದ ಯುವಕ

Viral Video: ಯುವಕನೊಬ್ಬ ತನ್ನ ಪ್ರಿಯತಮೆ ಮೇಲೆ ಸಾರ್ವಜನಿಕವಾಗಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಕಂಡು ಬಂದಿದೆ. ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ಸ್ವರ್ಣ ಜಯಂತಿ ಪಾರ್ಕ್‌ನಲ್ಲಿ ಈ ಅಘಾತಕಾರಿ ಘಟನೆ ಕಂಡು ಬಂದಿದೆ.

6 ವರ್ಷಗಳಿಂದ ಕಾಣೆಯಾಗಿದ್ದ ಬಾಲಕನಿಗಾಗಿ ಹುಡುಕಾಡಿದ್ದ ಪೋಷಕರಿಗೆ ಬಂತು ಬರಸಿಡಿಲಿನ ಸುದ್ದಿ; ಓದಿದ್ರೆ ಕರುಳು ಚುರ್‌ ಎನ್ನುತ್ತೆ

ನಾಪತ್ತೆಯಾಗಿದ್ದ ಬಾಲಕನ ಸಮಾಧಿ ಪತ್ತೆ

crime news: 2020ರಲ್ಲಿ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕ ನಾಪತ್ತೆಯಾಗಿದ್ದ. ಆದರೆ, ಆರು ವರ್ಷಗಳ ನಂತರ ಆತನ ಸಮಾಧಿ ಪತ್ತೆಯಾಗಿದೆ. ಮಗುವನ್ನು ಅವನ ಸ್ವಂತ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಹತ್ಯೆ ಮಾಡಿದ್ದು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಪಕ್ಕದಲ್ಲಿ ಹೂಳಿದ್ದಾರೆ ಎಂದು ಆರೋಪಿಸಲಾಗಿದೆ. ಮಾಡಿರುವ ಅಪರಾಧವನ್ನು ಅವರು ಒಪ್ಪಿಕೊಂಡಿದ್ದಾರೆ.

Vinay Kulakarni: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಶಾಸಕ ವಿನಯ್ ಕುಲಕರ್ಣಿ ಜಾಮೀನು ಪಡೆಯುವ ಮೂಲಕ ನ್ಯಾಯ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದ್ದಾರೆ.

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ

ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ದಾಳಿ

ಬ್ಯಾಂಕ್ ಆಫ್ ಬರೋಡಾ ನೀಡಿದ ದೂರಿನ ಮೇರೆಗೆ ಹೊಸ ಪ್ರಕರಣ ದಾಖಲಾದ ಬಳಿಕ ಉದ್ಯಮಿ ಅನಿಲ್ ಅಂಬಾನಿ ಅವರ ಮನೆ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ.

Mallikarjuna Muthya: ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌, ಇಂದು ವಿಚಾರಣೆ ಸಾಧ್ಯತೆ

ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌, ಇಂದು ವಿಚಾರಣೆ ಸಾಧ್ಯತೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪವಾಡ ಪುರುಷ ಎಂದು ಫೇಮಸ್ ಆಗಿರುವ ಮಲ್ಲಿಕಾರ್ಜುನ್ ಮುತ್ಯಾಗೆ ಸಂಕಷ್ಟ ಎದುರಾಗಿದೆ. ಯಾದಗಿರಿಯ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮಠಕ್ಕೆ ಬಂದ ಭಕ್ತರ ಮಗುವಿನ ಜೊತೆ ಅನುಚಿತವಾಗಿ ವರ್ತಿಸಿದರು ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಸಂಕಷ್ಟ ತಂದೊಡ್ಡಿದೆ.

ವಾರಣಾಸಿ ನ್ಯಾಯಾಲಯ ಸ್ಫೋಟಿಸುವುದಾಗಿ ಎಚ್ಚರಿಕೆ: ಅವಿಮುಕ್ತೇಶ್ವರಾನಂದ ಶ್ರೀಗಳ ಪರ ವಕೀಲರಿಗೆ ಬಾಂಬ್ ಬೆದರಿಕೆ

ವಾರಣಾಸಿ ನ್ಯಾಯಾಲಯ ಸ್ಫೋಟಿಸುವುದಾಗಿ ಬೆದರಿಕೆ

Bomb threat to lawyer: ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಶ್ರೀನಾಥ್ ತ್ರಿಪಾಠಿ ಅವರ ಮೊಬೈಲ್ ಫೋನ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ನಾವು ವಾರಣಾಸಿ ನ್ಯಾಯಾಲಯವನ್ನು ಸ್ಫೋಟಿಸುತ್ತೇವೆ ಎಂದು ಸಂದೇಶದಲ್ಲಿ ಎಚ್ಚರಿಸಲಾಗಿದೆ.

Loading...