ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರೈಂ

Inspector Sandesh: ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ: ಸಚಿವ ಪರಮೇಶ್ವರ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ಸಿಐಡಿಗೆ: ಸಚಿವ ಪರಮೇಶ್ವರ್

'ಮೂಡುಬಿದಿರೆ ಘಟನೆಯ ಕುರಿತು ಇಂದು ಕೆಲವು ಸಂತ್ರಸ್ತೆಯರು ನನ್ನನ್ನು ಭೇಟಿ ಮಾಡಿದರು. ಅವರು ನೀಡಿದ ಮಾಹಿತಿ ಮತ್ತು ಘಟನೆಗಳ ಆಧಾರದ ಮೇಲೆ ಸತ್ಯಾಸತ್ಯತೆ ಹೊರಬರಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ' ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ವಾಯುಪಡೆಯ ಸಿಬ್ಬಂದಿ ಅರೆಸ್ಟ್‌

ಬೇಹುಗಾರಿಕೆ ನಡೆಸುತ್ತಿದ್ದ ವಾಯುಪಡೆಯ ಸಿಬ್ಬಂದಿ ಬಂಧನ

Air Force personnel arrested: ಪಾಕಿಸ್ತಾನ ಹ್ಯಾಂಡ್ಲರ್‌ಗಳಿಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾಯುಪಡೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ. ರಾಜಸ್ಥಾನ ಗುಪ್ತಚರ ಮತ್ತು ವಾಯುಪಡೆಯ ಗುಪ್ತಚರ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಪ್ರಫುಲ್ ಕುಮಾರ್ ತಿಳಿಸಿದ್ದಾರೆ.

ಬಾಡಿಗೆದಾರನೊಂದಿಗೆ ಸೊಸೆಯ ಲವ್ವಿ-ಡವ್ವಿ; ಪ್ರೇಮಿಯೊಂದಿಗೆ ಸೇರಿ ಅತ್ತೆಯ ಭೀಕರ ಕೊಲೆ

ಅಕ್ರಮ ಸಂಬಂಧಕ್ಕೆ ಅಡ್ಡಿ: ಅತ್ತೆಯನ್ನ ಕೊಲೆಗೈದ ಸೊಸೆ

ಉತ್ತರ ಪ್ರದೇಶದ ಲಖನೌನಲ್ಲಿ ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅತ್ತೆಯನ್ನು ಸೊಸೆ ತನ್ನ ಪ್ರೇಮಿಯೊಂದಿಗೆ ಸೇರಿ ಸಂಚು ರೂಪಿಸಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಗಿತಗೊಳಿಸಿ ಉಸಿರುಗಟ್ಟಿಸಿ ಹತ್ಯೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

Murder Case: ಹಾಡಹಗಲೇ ಮಹಿಳೆಯನ್ನು ಹೊಡೆದು ಕೊಂದು ತಿಪ್ಪೆಗೆಸೆದು ಹೋದ ಕಿರಾತಕರು!

ಹಾಡಹಗಲೇ ಮಹಿಳೆಯನ್ನು ಹೊಡೆದು ಕೊಂದು ತಿಪ್ಪೆಗೆಸೆದು ಹೋದ ಕಿರಾತಕರು!

ಕೆಂಗೇರಿಯ ಮುಖ್ಯ ರಸ್ತೆಯಲ್ಲಿರುವ ಮೈಲ್ಸಂದ್ರ ಬಸ್ ನಿಲ್ದಾಣದ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಮಹದೇಶ್ವರ ಬಡಾವಣೆಯ ನಿವಾಸಿಯಾದ ಕೆಂಪಮ್ಮ (45) ಎಂಬವರೇ ಕೊಲೆಯಾದ ದುರ್ದೈವಿ. ಹಂತಕರು ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ರಸ್ತೆ ಪಕ್ಕದ ಕಸದ ರಾಶಿಯಲ್ಲಿ ಎಸೆದಿದ್ದಾರೆ.

Reels craze: ಹುಬ್ಬಳ್ಳಿ: ರೀಲ್ಸ್‌ಗಾಗಿ ಕಾರು ಗುದ್ದಿಸಿದ ಬಾಲಕ, ಆತನ ಅಪ್ಪ ಇಬ್ಬರೂ ಸೆರೆ

ಹುಬ್ಬಳ್ಳಿ: ರೀಲ್ಸ್‌ಗಾಗಿ ಕಾರು ಗುದ್ದಿಸಿದ ಬಾಲಕ, ಆತನ ಅಪ್ಪ ಇಬ್ಬರೂ ಸೆರೆ

ರೀಲ್ಸ್ ಮಾಡಲು ಹೋದಾಗ ಆಡಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿದ್ದು, ಬಾಲಕನೋರ್ವ ಮೃತಪಟ್ಟಿದ್ದ. ನಮೀಷ್ ಇದ್ದ ಸ್ಕೂಟಿಗೆ 17ನೇ ವರ್ಷದ ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಆಡಿ ಕಾರು ಗುದ್ದಿದ ಪರಿಣಾಮ ನಮೀಷ್ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಬಗ್ಗೆ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಬಾಲಕಿಯನ್ನು ಕತ್ತು ಸೀಳಿ ಕೊಂದಿದ್ದ ಆರೋಪಿ ಶಬೀಲ್‌ ಅಜ್ಮೀರ್‌ನಲ್ಲಿ ಅರೆಸ್ಟ್‌

ಬಾಲಕಿಯನ್ನು ಹತ್ಯೆಗೈದಿದ್ದ ಆರೋಪಿ ಶಬೀಲ್‌ ಅಜ್ಮೀರ್‌ನಲ್ಲಿ ಅರೆಸ್ಟ್‌

Bengaluru Murder Case: ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಶಬೀಲ್‌ನನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿ ಬಂಧಿಸಲಾಗಿದೆ. ಮದುವೆಯಾಗಬೇಕಿದ್ದ ಹುಡುಗಿಯನ್ನೇ ಕೊಲೆ ಮಾಡಿ ಈತ ಪರಾರಿಯಾಗಿದ್ದ. ಇದೀಗ ಆರೋಪಿಯ ಬಂಧನವಾಗಿದೆ.

Ranya Rao Case: ಚಿನ್ನ ಅಕ್ರಮ ಸಾಗಣೆ ಪ್ರಕರಣ; ಉಗಾಂಡ ಏಜೆಂಟ್‌ನಿಂದ 2 ಕೋಟಿ ಕಳೆದುಕೊಂಡಿದ್ದ ರನ್ಯಾ ರಾವ್‌!

ಉಗಾಂಡ ಏಜೆಂಟ್‌ನಿಂದ 2 ಕೋಟಿ ಕಳೆದುಕೊಂಡಿದ್ದ ರನ್ಯಾ ರಾವ್‌!

102 ಕೋಟಿ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ ವಿರುದ್ಧ ಜಾರಿ ನಿರ್ದೇಶನಾಲಯವು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಇದರಲ್ಲಿ ರನ್ಯಾ ರಾವ್‌ಗೆ ಉಗಾಂಡ ಏಜೆಂಟ್‌ನಿಂದ ಆಗಿದ್ದ ವಂಚನೆ ಬಗ್ಗೆ ಉಲ್ಲೇಖಿಸಲಾಗಿದೆ.

ಚುನಾವಣೆಗೆ ಮುನ್ನ ನಿಷೇಧಿತ ಉಲ್ಫಾ ಉಗ್ರರಿಂದ ದಾಳಿ: ಅಸ್ಸಾಂನಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯ

ನಿಷೇಧಿತ ಉಲ್ಫಾ ಉಗ್ರರಿಂದ ದಾಳಿ ಶಂಕೆ; ಪೊಲೀಸರಿಗೆ ಗಾಯ

ULFA Militants Attack: ಏಪ್ರಿಲ್ 9ರಂದು ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ, ಶಂಕಿತ ಭಯೋತ್ಪಾದಕರು ತಿನ್ಸುಕಿಯಾ ಜಿಲ್ಲೆಯ ಪೊಲೀಸ್ ಕಮಾಂಡೋ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಟಿನ್ಸುಕಿಯಾ ಜಿಲ್ಲೆಯ ಜಗುನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Belagavi News: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

ಬೆಳಗಾವಿಯಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

Army officer Death: ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ಘಟನೆ ನಡೆದಿದೆ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜುವಾಗ ಅಧಿಕಾರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಬೆಕ್ಕು ಸಾಕಲು ನಿರಾಕರಿಸಿದ ಮನೆಯವರು: ಹೈದರಾಬಾದ್‌ನಲ್ಲಿ ಯುವತಿ ಆತ್ಮಹತ್ಯೆ

ಬೆಕ್ಕಿನ ವಿಚಾರಕ್ಕೆ ಜಗಳ: ಯುವ ವೈದ್ಯೆ ಆತ್ಮಹತ್ಯೆ

ಬೆಕ್ಕು ಸಾಕುವ ವಿಚಾರಕ್ಕೆ ಯುವ ವೈದ್ಯೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೈದರಾಬಾದ್‌ನ ಅಲ್ವಾಲ್‌ನಲ್ಲಿ ಈ ಘಟನೆ ಕಂಡು ಬಂದಿದ್ದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. 23 ವರ್ಷದ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠಾ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 9 ಕೋಟಿ ಮೌಲ್ಯದ ಡ್ರಗ್ಸ್‌ ವಶ; ನಾಯಿಗೆ ನೀಡುವ ಫುಡ್‌ ಪ್ಯಾಕೆಟ್‌ನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳು!

ಬೆಂಗಳೂರಿನಲ್ಲಿ 9 ಕೋಟಿ ಮೌಲ್ಯದ ಡ್ರಗ್ಸ್‌ ವಶ; ಮೂವರು ಅರೆಸ್ಟ್‌

Drugs seized in Bengaluru: ಬೆಂಗಳೂರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಂಪರ್ಕದಲ್ಲಿದ್ದ ಇಬ್ಬರನ್ನು ಅಧಿಕಾರಿಗಳು ಅರೆಸ್ಟ್‌ ಮಾಡಿದ್ದಾರೆ. ನಾಯಿಗೆ ನೀಡುವ ಫುಡ್‌ ಪ್ಯಾಕೆಟ್‌ನಲ್ಲಿ ಮಾದಕ ವಸ್ತುಗಳನ್ನು ಇಟ್ಟು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಾಗಿಸುತ್ತಿದ್ದ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಕೇಸ್‌; ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ  ಕಾರ್ ಡ್ರಿಫ್ಟಿಂಗ್?

ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? ಪೊಲೀಸರು ಹೇಳಿದ್ದೇನು?

ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಲಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡ್ರಿಫ್ಟಿಂಗ್‌ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು; ತನಿಖೆ ಶುರು

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ ಬೆನ್ನಲ್ಲೇ ಇದೀಗ ಸಂದೇಶ್‌ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ.

ಕಾಶಿಗೆ ತೆರಳುತ್ತಿದ್ದವರು ಮಸಣಕ್ಕೆ; ಲಾರಿ- ಟಿಟಿ ನಡುವೆ ಡಿಕ್ಕಿ, ಮೂವರು ಸ್ಥಳದಲ್ಲಿಯೇ ಸಾವು

ಲಾರಿ- ಟಿಟಿ ನಡುವೆ ಡಿಕ್ಕಿ, ಮೂವರು ಸ್ಥಳದಲ್ಲಿಯೇ ಸಾವು

Road Accident: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Hotel Raid: ಚಿಕ್ಕಬಳ್ಳಾಪುರ ತಹಸಿಲ್ದಾರ್ ನೇತೃತ್ವದಲ್ಲಿ ಮಿಂಚಿನ ದಾಳಿ 22 ವಾಣಿಜ್ಯ 13 ಗೃಹ ಬಳಕೆ ಸಿಲಿಂಡರ್ ವಶ

ಚಿಕ್ಕಬಳ್ಳಾಪುರ ತಹಸಿಲ್ದಾರ್ ನೇತೃತ್ವದಲ್ಲಿ ಮಿಂಚಿನ ದಾಳಿ

ಇರಾನ್ ಮತ್ತು ಇಸ್ರೇಲ್ ಅಮೆರಿಕ ನಡುವಿನ ಯುದ್ಧದ ಕಾರ್ಮೋಡ ವಿಶ್ವವನ್ನು ಕಾಡಿರು ವಂತೆ ಭಾರತವನ್ನು ತೀವ್ರವಾಗಿ ಬಾಧಿಸಿದೆ. ಪರಿಣಾಮ ಪೆಟ್ರೋಲಿಯಂ ಉತ್ಪನ್ನಗಳ ಆಮದಿ ನಲ್ಲಿ ಭಾರೀ ಏರುಪೇರಾಗಿದೆ. ಇದನ್ನು ಸರಿ ದೂಗಿಸಲು ಭಾರತ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಂಡಿದೆ.

ದಾವಣಗೆರೆಯಲ್ಲಿ ರಂಜಾನ್‌ ನಮಾಜ್‌ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಮಂದಿಗೆ ಗಾಯ

ರಂಜಾನ್ ನಮಾಜ್‌ ವೇಳೆ ಹೆಜ್ಜೇನು ದಾಳಿ; 25 ಮಂದಿಗೆ ಗಾಯ

Davangere Honey bee attack: ದಾವಣಗೆರೆ ತಾಲೂಕಿನ ಆನಗೋಡು ಬಳಿ ಘಟನೆ ನಡೆದಿದೆ. ರಂಜಾನ್‌ ಹಿನ್ನೆಲೆಯಲ್ಲಿ ರಂಜಾನ್ ಪ್ರಯುಕ್ತ 800ಕ್ಕೂ ಅಧಿಕ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ವೇಳೆ ಹೆಜ್ಜೇನು ದಾಳಿ ನಡೆಸಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸಂಭ್ರಮದ ಬೆನ್ನಲ್ಲೇ ಸೂತಕ;  ಅವಳಿ ಸಹೋದರಿಯರನ್ನು ವಿವಾಹವಾಗಿದ್ದ ಅವಳಿಗಳಲ್ಲಿ ಓರ್ವ ವರ ಆತ್ಮಹತ್ಯೆ

ಅವಳಿ ಸೋದರಿಯರನ್ನು ವಿವಾಹವಾಗಿದ್ದ ಅವಳಿ ಸಹೋದರರಲ್ಲೊಬ್ಬ ಆತ್ಮಹತ್ಯೆ

Crime News: ಟ್ವಿನ್ಸ್ ಡೇ ದಿನದಂದೇ ಅವಳಿ ಸಹೋದರರು ಅವಳಿ ಸಹೋದರಿಯರ ಕೈಹಿಡಿದರು. ಅವರ ಮದುವೆಯ ಫೋಟೋಗಳು ಆಂಧ್ರಪ್ರದೇಶದಲ್ಲಿ ವೈರಲ್ ಆಗಿತ್ತು. ಎಲ್ಲರೂ ಖುಷಿಯಿಂದ ಹಾರೈಸಿ, ಅಭಿನಂದಿಸಿದ್ದರು. ಆದರೆ, ಮದುವೆಯಾಗಿ ಒಂದು ತಿಂಗಳಾಗುತ್ತಲೇ ನವವರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಮರೆಡ್ಡಿ ಜಿಲ್ಲೆಯ ಮಚಾರೆಡ್ಡಿ ಮಂಡಲದ ಘನಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಆಸ್ಪತ್ರೆಗೆ ಬಂದವ ಸೇರಿದ್ದು ಮಸಣಕ್ಕೆ; ಲಿಫ್ಟ್‌ನಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ಸಿಲುಕಿದ್ದ ವ್ಯಕ್ತಿ ಸಾವು

ಲಿಫ್ಟ್‌ನಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ಸಿಲುಕಿದ್ದ ವ್ಯಕ್ತಿ ಸಾವು

Hospital visit turns tragic: ಲಿಫ್ಟ್ ಅಸಮರ್ಪಕ ಕಾರ್ಯ ನಿರ್ವಹಿಸಿದ್ದರಿಂದ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಕೋಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ವೈದ್ಯಕೀಯ ಸಂಸ್ಥೆಗಳ ಮೂಲಸೌಕರ್ಯ ನಿರ್ವಹಣೆ ಬಗ್ಗೆ ತುರ್ತು ಪ್ರಶ್ನೆಗಳನ್ನು ಎಬ್ಬಿಸಿದೆ. ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಸಂದೇಶ್ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿಲ್ಲ ಎಂದ ಕಮಿಷನರ್

ಇನ್‌ಸ್ಪೆಕ್ಟರ್‌ ಸಂದೇಶ್ ಲೈಂಗಿಕ ಕಿರುಕುಳ ನೀಡಿಲ್ಲ ಎಂದ ಕಮಿಷನರ್

ಇಬ್ಬರು ಮಹಿಳೆಯರ ಆರೋಪ ಸುಳ್ಳು ಎಂದು ಪೊಲೀಸ್ ವರದಿಯಲ್ಲಿ ತಿಳಿದು ಬಂದಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್‌ಸ್ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಮತ್ತು ಪ್ರೇರಿತ ಎಂದು ಸಾಬೀತು ಆಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದರು.

Belagavi Digital Arrest: ಬೆಳಗಾವಿಯಲ್ಲಿ ವೃದ್ಧ ಉದ್ಯಮಿಯ ಡಿಜಿಟಲ್ ಅರೆಸ್ಟ್‌; ಬರೋಬ್ಬರಿ 15 ಕೋಟಿ ರೂ. ಪೀಕಿದ ಸೈಬರ್‌ ವಂಚಕರು!

ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್‌; ವೃದ್ಧ ಉದ್ಯಮಿಗೆ 15 ಕೋಟಿ ವಂಚನೆ

ನಿಮ್ಮ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಬೆದರಿಕೆ ಹಾಕಿರುವ ಸೈಬರ್‌ ಕಳ್ಳರು, ಉದ್ಯಮಿಯಿಂದ ಹಂತ ಹಂತವಾಗಿ 15 ಕೋಟಿ ಹಣ ವಸೂಲಿ ಮಾಡಿದ್ದಾರೆ. ಈ ಸಂಬಂಧ ಬೆಳಗಾವಿ ನಗರ ಸಿಇಎನ್ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ ಘೋರ ಘಟನೆ; ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುವ ವೇಳೆ ಲಾರಿ ಹರಿದು 4 ವರ್ಷದ ಬಾಲಕಿ ಸಾವು

ದೇವಸ್ಥಾನಕ್ಕೆ ತೆರಳುವ ವೇಳೆ ಲಾರಿ ಹರಿದು 4 ವರ್ಷದ ಬಾಲಕಿ ಸಾವು

ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಅಪಘಾತ ನಡೆದಿದೆ. ತಾಯಿ ಜತೆ ದೇವಸ್ಥಾನಕ್ಕೆ ಹೋಗುತ್ತಿದ್ದ ಬಾಲಕಿ ಮೇಲೆ ಲಾರಿ ಹರಿದಿದ್ದರಿಂದ ದುರಂತ ಸಂಭವಿಸಿದೆ. ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

First Night: ಫಸ್ಟ್‌ನೈಟ್‌ ಮಾಡಿಕೊಳ್ಳದ ಗಂಡ, ಪೊಲೀಸರಿಗೆ ದೂರು ನೀಡಿದ ಹೆಂಡತಿ

ಫಸ್ಟ್‌ನೈಟ್‌ ಮಾಡಿಕೊಳ್ಳದ ಗಂಡ, ಪೊಲೀಸರಿಗೆ ದೂರು ನೀಡಿದ ಹೆಂಡತಿ

ಮದುವೆಯ ದಿನದಿಂದಲೂ ತನ್ನ ಪತಿ ಯಾವುದೇ ದೈಹಿಕ ಸಂಬಂಧವನ್ನು ತಪ್ಪಿಸಿದ್ದಾನೆ.‌ ಸಾಮಾನ್ಯ ವೈವಾಹಿಕ ಜೀವನದ ನಿರೀಕ್ಷೆಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರೂ, ತನ್ನ ಪತಿ ನಿರಂತರವಾಗಿ ದೂರ ಉಳಿದು 'ಮೊದಲ ರಾತ್ರಿ'ಗೆ ಒಪ್ಪಲಿಲ್ಲ. ಇದು ತನಗೆ ತೀವ್ರ ಮಾನಸಿಕ ಯಾತನೆಯನ್ನು ಉಂಟುಮಾಡಿತು ಎಂದು ಮಹಿಳೆ ತಮ್ಮ ನೋವು ತೋಡಿಕೊಂಡಿದ್ದಾರೆ.

Self Harming: ನಿವೃತ್ತಿಗೆ ಒಂದೇ ವಾರ, ಕಚೇರಿಯಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆ!

ನಿವೃತ್ತಿಗೆ ಒಂದೇ ವಾರ, ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ!

ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಮಲ್ಲಿಕಾರ್ಜುನ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಒಂದೇ ವಾರದಲ್ಲಿ ಇವರ ಸೇವಾವಧಿ ಮುಕ್ತಾಯಗೊಳ್ಳಬೇಕಿತ್ತು. ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಕೃಷ್ಣಪ್ಪ ನೀಡಿದ ಕಿರುಕುಳವೇ ಈ ನಿರ್ಧಾರಕ್ಕೆ ಕಾರಣ ಎಂದು ವಿಡಿಯೋದಲ್ಲಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Hotel Raid: ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 2 ಗೃಹ ಬಳಕೆ ಸಿಲಿಂಡರ್‌ಗಳ ಜಪ್ತಿ

ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ

ಪಟ್ಟಣದ ಓವನ್ ಬೇಕರಿ  ಪಕ್ಕದಲ್ಲಿ ಇರುವ ಕಬಾಬ್ ಅಂಗಡಿ ಹಾಗೂ ಎಗ್ ರೈಸ್ ಸೆಂಟರ್‌ ಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬದಲಿಗೆ ಡೊಮೆಸ್ಟಿಕ್ (ಗೃಹಬಳಕೆ) ಸಿಲಿಂಡರ್‌ ಗಳನ್ನು ಬಳಸಲಾಗುತ್ತಿದೆ ಎಂಬ ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ ಎನ್ ಪತ್ರಿ  ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ

Loading...