ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಸಲ್ಮಾನ್ ಎಸ್ಕೇಪ್: ಆರೋಪಿ ಬಂಧಿಸುವಲ್ಲಿ ಪೊಲೀಸರು ವಿಫಲ; ವ್ಯಾಪಕ ಆಕ್ರೋಶ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಎಸ್ಕೇಪ್

Physical assault: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಆರೋಪಿ ಅಪರಾಧ ಸ್ಥಳದಲ್ಲೇ ಪತ್ತೆಯಾಗಿದ್ದರೂ, ಪೊಲೀಸರು ಅವನನ್ನು ಬಂಧಿಸಲು ವಿಫಲರಾಗಿದ್ದಾರೆ. ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶವನ್ನು ಉಂಟುಮಾಡಿದ್ದು, ಮಕ್ಕಳ ಸುರಕ್ಷತೆ ಮತ್ತು ಪೊಲೀಸರ ಕಾರ್ಯಕ್ಷಮತೆ ಬಗ್ಗೆ ತೀವ್ರ ಅಸಮಾಧಾನವುಂಟು ಮಾಡಿದೆ.

ಬೋಳು ತಲೆಯೇ ಈತನ ಪ್ಲಸ್‌ ಪಾಯಿಂಟ್‌; ವಿಗ್ ಧರಿಸಿ ಪೊಲೀಸರನ್ನು ಯಾಮಾರಿಸುತ್ತಿದ್ದ ಕುಖ್ಯಾತ ಕ್ರಿಮಿನಲ್ ಸಿಕ್ಕಿಬಿದ್ದಿದ್ದು ಹೇಗೆ?

ಅಪರಾಧ ಮಾಡಿ ವಿಗ್ ಧರಿಸುತ್ತಿದ್ದ ಕುಖ್ಯಾತ ಕ್ರಿಮಿನಲ್ ಅರೆಸ್ಟ್

ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಜಿತೇಂದ್ರ ಅಲಿಯಾಸ್ ಜಿತು ಎಂಬ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಇದೀಗ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ, ದೆಹಲಿ ಮತ್ತು ಹರಿಯಾಣದಲ್ಲಿ ಒಟ್ಟು 28 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದವು.

ಭಯೋತ್ಪಾದಕರೊಂದಿಗೆ ಸಂಪರ್ಕ: ಜಮ್ಮುವಿನಲ್ಲಿ 19 ವರ್ಷದ ಯುವಕನ ಬಂಧನ

ಜಮ್ಮುವಿನಲ್ಲಿ 19 ವರ್ಷದ ಯುವಕನ ಬಂಧನ

Suspicion of Links with Terrorists: ಜಮ್ಮುವಿನಲ್ಲಿ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖಾ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿದ್ದು, ಆರೋಪಿಯು ಭಯೋತ್ಪಾದಕ ಕೃತ್ಯ ನಡೆಸಲು ಯೋಜನೆ ರೂಪಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಧನದಾಹಿ ಪತಿಯ ಹಿಂಸೆಗೆ ಬಲಿಯಾಯ್ತಾ ಜೀವ? ಬೆಂಕಿ ಹಚ್ಚಿಕೊಂಡು ಗರ್ಭಿಣಿ ಆತ್ಮಹತ್ಯೆ!

ಶವವಾಗಿ ಪತ್ತೆಯಾದ ಗರ್ಭಿಣಿ

20 ವರ್ಷದ ಗರ್ಭಿಣಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಗಂಡನ ಚಿತ್ರ ಹಿಂಸೆಯೇ ಇದಕ್ಕೆ ಕಾರಣ ಎಂದು ಆಕೆಯ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಕೇರಳದ ತ್ರಿಶೂರ್ ಜಿಲ್ಲೆಯ ಶರೂನ್ ಮತ್ತು ಅರ್ಚನಾ ಪ್ರೀತಿಸಿ ಮದುವೆಯಾಗಿದ್ದು ಅರ್ಚನಾ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ.

RSS ಕಾರ್ಯಕರ್ತನ ಕೊಲೆ ಪ್ರಕರಣ... ಹಂತಕನಿಗೆ ಪೊಲೀಸರಿಂದ ಗುಂಡೇಟು

ಕೊಲೆ ಪ್ರಕರಣ: ಪ್ರಮುಖ ಆರೋಪಿ ಮೇಲೆ ಗುಂಡಿನ ದಾಳಿ

ಕೆಲವು ದಿನಗಳ ಹಿಂದೆ ಪಂಜಾಬ್ ನ ಫಿರೋಜ್‌ಪುರದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ನವೀನ್ ಅರೋರಾ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಈ ವೇಳೆ ಹೆಡ್ ಕಾನ್‌ಸ್ಟೆಬಲ್‌ಗೂ ಗಾಯವಾಗಿದೆ. ಆರೋಪಿ ಮತ್ತು ಹೆಡ್ ಕಾನ್‌ಸ್ಟೆಬಲ್‌ ಇಬ್ಬರನ್ನೂ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂಜಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಂದ ಸೈಬರ್‌ ಕ್ರೈಂ.... ಇವ್ರು ಕೊಳ್ಳೆ ಹೊಡೆದಿದ್ದು ಎಷ್ಟು ಗೊತ್ತಾ?

ಸೈಬರ್ ಕ್ರೈಮ್: ಏಳು ಮಂದಿ ಬಂಧನ

ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಭಾರಿ ಪ್ರಮಾಣದ ವಂಚನೆ ಪ್ರಕರಣವನ್ನು ಭೇದಿಸಿರುವ ಪುದುಚೇರಿಯ ಸೈಬರ್ ಕ್ರೈಮ್ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. 5 ಲಕ್ಷ ರೂ. ನಗದು, 171 ಚೆಕ್ ಪುಸ್ತಕಗಳು, 75 ಎಟಿಎಂ ಕಾರ್ಡ್‌ಗಳು, 20 ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌, ಕಂಪ್ಯೂಟರ್‌, ಬ್ಯಾಂಕ್ ಖಾತೆ ಪುಸ್ತಕಗಳು, ಕ್ರೆಡಿಟ್ ಕಾರ್ಡ್‌ಗಳು, ಕಾರು ಸೇರಿದಂತೆ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

Viral Video: ರೈಲ್ವೆ ಹಳಿ ಮೇಲೆ ಉರುಳಿದ ಟ್ರಕ್‌;  ತಪ್ಪಿದ ಭಾರೀ ಅನಾಹುತ, ವಿಡಿಯೋ ನೋಡಿ

ರೈಲ್ವೆ ಹಳಿ ಮೇಲೆ ಉರುಳಿದ ಟ್ರಕ್‌; ತಪ್ಪಿದ ಭಾರೀ ಅನಾಹುತ

Truck Accident: ಅತಿ ವೇಗದ ಡಂಪರ್ ಟ್ರಕ್ ನಿಯಂತ್ರಣ ತಪ್ಪಿ, ಸೇತುವೆಯ ಬೇಲಿಯನ್ನು ಮುರಿದು ಸುಮಾರು 25 ಅಡಿ ರೈಲ್ವೆ ಹಳಿಗೆ ಉರುಳಿ ಬಿದ್ದದೆ. ಉತ್ತರ ಪ್ರದೇಶದ ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಅಮೃತಸರದಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ಹಳಿಯಲ್ಲಿ ಹಾದು ಹೋಗುವಾಗ ಈ ಘಟನೆ ಸಂಭವಿಸಿತ್ತು.

Murder Case: ತಾಯಿ ಇಲ್ಲದ ಬಾಲಕಿಯ ಕತ್ತು ಹಿಸುಕಿ ಹತ್ಯೆ

ತಾಯಿ ಇಲ್ಲದ ಬಾಲಕಿಯ ಕತ್ತು ಹಿಸುಕಿ ಹತ್ಯೆ

Bengaluru crime news: ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ನಂತರ ಹುಡುಕಾಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಹತ್ಯೆಯ ಹಿಂದಿನ ನಿಖರ ಕಾರಣ ಗೊತ್ತಾಗಿಲ್ಲ. ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ.

Viral Video: ಇದೆಂಥ ಕೃತ್ಯ? ಕೈಕಾಲುಗಳಿಗೆ ಸಂಕೋಲೆ ಬಿಗಿದಿದ್ದರೂ ದುಡಿಯುತ್ತಿರುವ ಕಾರ್ಮಿಕನ ವಿಡಿಯೊ ವೈರಲ್

ಕೈಕಾಲುಗಳಿಗೆ ಸಂಕೋಲೆ ಬಿಗಿದಿದ್ದರೂ ದುಡಿವ ಕಾರ್ಮಿಕ

ಕಾರ್ಮಿಕನ‌ ಕೈ ಮತ್ತು ಕಾಲುಗಳಿಗೆ ಕಬ್ಬಿಣದ ಸರಪಳಿ ಬಿಗಿದು ಕೆಲಸ ಮಾಡಲು ಬಲವಂತ ಪಡಿಸುತ್ತಿರುವ ಆಘಾತಕಾರಿ ವಿಡಿಯೊ ಭಾರಿ ವೈರಲ್ ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬಡ ಕಾರ್ಮಿಕರ ಮೇಲೆ ಮನಸೋ ಇಚ್ಛೆ ಈ ರೀತಿ ದುಡಿಸುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಬಳಕೆದಾರರು ಆಗ್ರಹಿಸಿದ್ದಾರೆ.

ಇವರು ಗೆಳೆಯರಲ್ಲ...; ಹುಟ್ಟುಹಬ್ಬದ ಆಚರಣೆಗೆಂದು ಕರೆದು ಬೆಂಕಿ ಹಚ್ಚಿದ ಐವರು ಆರೋಪಿಗಳ ಬಂಧನ

ಬರ್ತ್‌ಡೇ ನೆಪದಲ್ಲಿ ಸ್ನೇಹಿತನನ್ನು ಕರೆಸಿ ಹತ್ಯೆ ಮಾಡಲು ಮುಂದಾದ ಪಾಪಿಗಳು

Viral News: ಬರ್ತಡೇ ಪಾರ್ಟಿಗಾಗಿ ಯುವಕನೊಬ್ಬನನ್ನು ಕರೆಸಿಕೊಂಡು ಬಳಿಕ ಆತನನ್ನು ಗೆಳೆಯರೆಲ್ಲ ಒಟ್ಟಾಗಿ ಸೇರಿ ಹತ್ಯೆ ಮಾಡಲು ಮುಂದಾದ ಘಟನೆ ಮಹಾರಾಷ್ಟ್ರದ ಕುರ್ಲಾದಲ್ಲಿ ನಡೆದಿದೆ. 21 ವರ್ಷದ ಯುವಕನ ಹುಟ್ಟುಹಬ್ಬದಂದು ಆತನ ಫ್ರೆಂಡ್ಸ್ ಸರ್‌ಪ್ರೈಸ್‌ ಪಾರ್ಟಿಗೆ ಬರುವಂತೆ ಹೇಳಿದ್ದಾರೆ. ಹೀಗಾಗಿ ಆತ ಸ್ನೇಹಿತರು ತಿಳಿಸಿದ್ದ ಸ್ಥಳಕ್ಕೆ ತೆರಳಿದ್ದಾನೆ. ಅಲ್ಲಿಗೆ ಕರೆಸಿಕೊಂಡ ನಂತರ ಆತನ ಐವರು ಗೆಳೆಯರು ಒಟ್ಟಾಗಿ ಸೇರಿ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂಇದೆ.

Shivasharanappa Gouda Patil: ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ

ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ

ಶಿವಶರಣಪ್ಪಗೌಡ ಪಾಟೀಲ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ಸಲ ಪರಾಭವಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಕೊಪ್ಪಳ ಜಿಲ್ಲೆಯಲ್ಲಿ ಜನಪ್ರಿಯ ಶಾಸಕರಾಗಿದ್ದ ಇವರು, ರೈತರ ಸಮಸ್ಯೆಗಳಿಗೆ ಧ್ವನಿಯಾಗಿದ್ದಲ್ಲದೆ, ಮೂಲ ಸೌಕರ್ಯಗಳ ಅಭಿವೃದ್ಧಿಗೂ ವಿಶೇಷ ಗಮನ ನೀಡಿದ್ದರು.

Koppal News: ಕೊಪ್ಪಳದಲ್ಲಿ ಮಗುವಿಗೆ ಜನ್ಮ ನೀಡಿದ 10 ತರಗತಿ ವಿದ್ಯಾರ್ಥಿನಿ; ಪೋಕ್ಸೊ ಕೇಸ್‌ ದಾಖಲು

ಕೊಪ್ಪಳದಲ್ಲಿ ಮಗುವಿಗೆ ಜನ್ಮ ನೀಡಿದ 10 ತರಗತಿ ವಿದ್ಯಾರ್ಥಿನಿ

ಕೊಪ್ಪಳದ ಕುಕನೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಬಾಲಕಿಯ ಈ ಸ್ಥಿತಿಗೆ ಕಾರಣವಾದ ಆರೋಪಿ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಘಟನೆಯಿಂದಾಗಿ ವಸತಿನಿಲಯದಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಪೋಷಕರಲ್ಲಿ ಆತಂಕ ಉಂಟಾಗಿವೆ.

ಪಾನ್ ಮಸಾಲಾ ಉದ್ಯಮದ ದೊರೆ ಕಮಲ್ ಕಿಶೋರ್ ಚೌರಾಸಿಯಾ ಸೊಸೆ ನೇಣು ಬಿಗಿದು ಆತ್ಮಹತ್ಯೆ

ಪಾನ್ ಮಸಾಲಾ ಉದ್ಯಮಿಯ ಸೊಸೆ ಆತ್ಮಹತ್ಯೆ

Pan Masala: ಪಾನ್ ಮಸಾಲಾ ಉದ್ಯಮಿ ಕಮಲ್ ಕಿಶೋರ್ ಚೌರಾಸಿಯಾ ಅವರ ಸೊಸೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅವರು ತಮ್ಮ ಜೀವನವನ್ನು ಅಂತ್ಯ ಮಾಡಿಕೊಂಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

Murugha Mutt seer Case: ಮುರುಘಾ ಶ್ರೀ ವಿರುದ್ಧ ಇದ್ದ ಕೇಸ್‌ ಏನು?; ಇಲ್ಲಿದೆ ಸಂಪೂರ್ಣ ವಿವರ

ಮುರುಘಾ ಶ್ರೀ ವಿರುದ್ಧ ಇದ್ದ ಕೇಸ್‌ ಏನು?; ಇಲ್ಲಿದೆ ಸಂಪೂರ್ಣ ವಿವರ

Chitradurga News: ಮೊದಲ ಪೋಕ್ಸೊ ಪ್ರಕರಣದಲ್ಲಿ ಎ1 ಮುರುಘಾ ಶ್ರೀ, ಎರಡನೇ ಆರೋಪಿ ರಶ್ಮಿ, ನಾಲ್ಕನೇ ಆರೋಪಿ, ಮಠದ ಮ್ಯಾನೇಜರ್ ಪರಮಶಿವಯ್ಯ ನಿರ್ದೋಷಿಗಳು ಎಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಶ್ರೀಗಳ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.

Murugha Mutt seer Case: ಪೋಕ್ಸೊ ಕೇಸ್‌ನಲ್ಲಿ ಮುರುಘಾ ಶ್ರೀಗಳಿಗೆ ಬಿಗ್‌ ರಿಲೀಫ್‌; ಮೊದಲ ಪ್ರಕರಣದಲ್ಲಿ ಖುಲಾಸೆಗೊಳಿಸಿದ ಚಿತ್ರದುರ್ಗ ಕೋರ್ಟ್

ಪೋಕ್ಸೊ ಕೇಸ್‌ನಲ್ಲಿ ಮುರುಘಾ ಶ್ರೀಗಳನ್ನು ಖುಲಾಸೆಗೊಳಿಸಿದ ಕೋರ್ಟ್

Chitradurga News: ಆರೋಪ ಸಾಬೀತಾಗಿದ್ದರೆ ಮುರುಘಾ ಶ್ರೀಗಳಿಗೆ ಕನಿಷ್ಠ 20 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇತ್ತು. ಮುರುಘಾ ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸುದೀರ್ಘ ವಿಚಾರಣೆ ನಡೆದಿದ್ದು, ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದೆ.

Self Harming: ಗಂಡನ ಮನೆಯಲ್ಲಿ ಕಿರುಕುಳ, ಮದುವೆಯಾದ ಆರು ತಿಂಗಳಲ್ಲೇ ಮಹಿಳೆ ನಾಲೆಗೆ ಹಾರಿ ಆತ್ಮಹತ್ಯೆ

ಗಂಡನ ಮನೆಯಲ್ಲಿ ಕಿರುಕುಳ, ಮದುವೆಯಾದ ಆರು ತಿಂಗಳಲ್ಲೇ ಮಹಿಳೆ ಆತ್ಮಹತ್ಯೆ

Shivamogga news: ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ಗುರುತಿಸಲಾಗಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿಎಸ್‌ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು. 2025ರ ಏಪ್ರಿಲ್ 14ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆಯಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು.

Murugha math Sri: ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ಇಂದು

ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ಇಂದು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ (POCSO case) ಆರೋಪ ಎದುರಿಸುತ್ತಿರುವ ಮುರುಘಾ ಶರಣರ ಪ್ರಕರಣದ ವಾದ-ಪ್ರತಿವಾದ ಪೂರ್ಣಗೊಂಡಿದೆ. ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸುದೀರ್ಘ ವಿಚಾರಣೆ ನಡೆದಿದ್ದು, ವಾದ ಆಲಿಸಿದ ನ್ಯಾಯಾಲಯ ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸುವುದಾಗಿ ತಿಳಿಸಿದೆ.

Robbery Case: ಸೊಸೆ, ಅಪ್ರಾಪ್ತ ಮೊಮ್ಮಗನೊಂದಿಗೆ ಮಗಳ ಮನೆಗೆ ಸ್ಕೆಚ್: 50 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕದ್ದು ವೃದ್ಧ ಎಸ್ಕೇಪ್

ಸೊಸೆ, ಅಪ್ರಾಪ್ತ ಮೊಮ್ಮಗನೊಂದಿಗೆ ಸೇರಿ ಮಗಳ ಮನೆಗೆ ಸ್ಕೆಚ್

Uttar Pradesh Crime: ಬಹ್ರೈಚ್‌ನಲ್ಲಿ ಮಹಿಳೆಗೆ ಮಾದಕ ದ್ರವ್ಯ ನೀಡಿ ಸುಮಾರು 50 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕದ್ದ ಆರೋಪ ಕೇಳಿಬಂದಿದೆ. ಮಹಿಳೆಯ 70 ವರ್ಷದ ತಂದೆ, ಅವರ ಸೊಸೆ ಹಾಗೂ ಅಪ್ರಾಪ್ತ ಮೊಮ್ಮಗ ಈ ಕೃತ್ಯವೆಸಗಿದವರು. ಪ್ರಕರಣ ಸಂಬಂಧ ಸೊಸೆಯನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ.

Mahantesh Bilagi Death: ಜೇವರ್ಗಿ ಬಳಿ ಭೀಕರ ಕಾರು ಅಪಘಾತ; ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

Kalaburagi Car Accident: ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಮಂಗಳವಾರ ಕಾರು ಅಪಘಾತಕ್ಕೀಡಾಗಿದೆ. ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಜನವರಿಯಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

Belagavi News: 4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ತಾಯಿ!

4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ತಾಯಿ!

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮಲಂಗಿ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ. ಹೆಣ್ಣು ಮಗಳನ್ನು ಕೊಂದ ಬಳಿಕ ತಾಯಿ ಡ್ರಾಮಾ ಮಾಡಿದ್ದು, ಮಗುವಿಗೆ ಉಸಿರಾಡುತ್ತಿಲ್ಲ ಎಂದು ಮನೆಯವರಿಗೆ ಹೇಳಿದ್ದಾಳೆ. ಇದರಿಂದ ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ತೆಗೆದುಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಗಡಿ ಭಾಗಗಳ ವಿಡಿಯೊ ರೆಕಾರ್ಡ್‌ ಮಾಡುತ್ತಿದ್ದ ಚೀನಾ ಪ್ರಜೆ ಅರೆಸ್ಟ್‌!

ಭಾರತದ ಗಡಿ ಭಾಗಗಳ ವಿಡಿಯೊ ಮಾಡುತ್ತಿದ್ದ ಚೀನಾ ಪ್ರಜೆ ಅರೆಸ್ಟ್‌!

ಚೀನಿ ಪ್ರಜೆಯೊಬ್ಬ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಭಾರತ-ನೇಪಾಳ ಗಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ತಕ್ಷಣವೇ ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಎಸ್‌ಎಸ್‌ಬಿ ಅಧಿಕಾರಿಗಳು, ಈತ ಈ ಮೊದಲು ಪಾಕಿಸ್ತಾನಕ್ಕೂ ಮತ್ತು ನೇಪಾಳಕ್ಕೂ ಭೇಟಿ ನೀಡಿದ್ದಾನೆ. ಹಾಗಾಗಿ ಈತನನ್ನು ಶಂಕಿತ ಉಗ್ರನೆಂದು ಪರಿಗಣಿಸಲಾಗಿದೆ. ಘಟನೆ ಬಗ್ಗೆ ವಿಚಾರಣೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Murder Case: ಅಕ್ರಮ ಸಂಬಂಧದ ಸಂಶಯದಲ್ಲಿ ಯುವಕನ ಹೊಡೆದು ಕೊಲೆ

ಅಕ್ರಮ ಸಂಬಂಧದ ಸಂಶಯದಲ್ಲಿ ಯುವಕನ ಹೊಡೆದು ಕೊಲೆ

Bengaluru Crime News: 32 ವರ್ಷದ ನರಸಿಂಹರಾಜು ಕೊಲೆಯಾದ ಯುವಕ. ಮದುವೆಯಾಗಿದ್ದ ಮಹಿಳೆಯೊಬ್ಬರ ಜೊತೆ ನರಸಿಂಹರಾಜುಗೆ ಅಕ್ರಮ ಸಂಬಂಧ ಇತ್ತು. ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ನರಸಿಂಹರಾಜುವನ್ನು ಕೆಳಗೆ ಬೀಳಿಸಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಮನೆಯಿಂದ ಕರೆದೊಯ್ಯುವ ಹಾಗೂ ಹಲ್ಲೆ ಮಾಡುವ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ.

Meerut Murder Case: ಪತಿಯನ್ನು ಕೊಂದು ನೀಲಿ ಡ್ರಮ್‌ಗೆ ತುಂಬಿದ್ದ ಹಂತಕಿ ಮುಸ್ಕಾನ್‌ಗೆ ಹೆಣ್ಣು ಮಗು!

ನೀಲಿ ಡ್ರಮ್‌ ಹಂತಕಿ ಮುಸ್ಕಾನ್‌ಗೆ ಹೆಣ್ಣು ಮಗು!

ಮೀರತ್‌ನಲ್ಲಿ ಪತಿಯನ್ನು ಬರ್ಬರವಾಗಿ ಕೊಲೆಗೈದು ನೀಲಿ ಡ್ರಮ್‌ನಲ್ಲಿ ತುಂಬಿದ್ದ ಹಂತಕಿ ಮುಸ್ಕಾನ್‌ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಪತಿ ಸೌರಭ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪದಲ್ಲಿ ಜೈಲು ಪಾಲಾಗಿದ್ದ ಮುಸ್ಕಾನ್‌ ಸೋಮವಾರ ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

Dharmasthala Case: ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು

Dharmasthala Case: ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು

Mask Man Chinnayya: ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

Loading...