ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ನಟ ದ್ವಾರಕೀಶ್‌ ಸೊಸೆ ವಿರುದ್ಧ ಹಲವರಿಗೆ ವಂಚನೆ; ಹಣ ವಾಪಸ್‌ ಕೇಳಿದ್ದಕ್ಕೆ ಪೊರಕೆಯಿಂದ ಹಲ್ಲೆ!

ನಟ ದ್ವಾರಕೀಶ್‌ ಸೊಸೆ ವಿರುದ್ಧ ಹಲವರಿಗೆ ವಂಚನೆ ಆರೋಪ

Varsha Rai: ದ್ವಾರಕೀಶ್ ಅವರ ಎರಡನೇ ಪತ್ನಿ ಶೈಲಜಾ ಕುಮಾರಿ ಅವರ ಪುತ್ರ ಸಮರ್ಥ್ ಅವರ ಪತ್ನಿ ವರ್ಷಾ ರೈ ವಿರುದ್ಧ ಹತ್ತಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಪೊರಕೆಯಿಂದ ವರ್ಷಾ ರೈ ಹಲ್ಲೆ ನಡೆಸಿದ್ದಾರೆ.

ಕಾರವಾರದಲ್ಲಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, ಮೂವರಿಗೆ ಗಂಭೀರ ಗಾಯ

ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, 3 ಮಂದಿಗೆ ಗಾಯ

Karwar Accident: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಭೀಕರ ಅಪಘಾತ ನಡೆದಿದೆ. ಕಂಟೇನರ್ ಚಾಲಕ ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದಲ್ಲಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಲ್ಲದೇ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಎಂಡಬ್ಲ್ಯು ಕಾರ್‌  ಭೀಕರ ಅಪಘಾತ: ಶಾಕುನ್ ಗ್ರೂಪ್ ಎಂಡಿ ವಲ್ಲಭ ಮಹೇಶ್ವರಿ ನಿಧನ

ರಸ್ತೆ ಅಪಘಾತಕ್ಕೆ ಶಾಕುನ್ ಗ್ರೂಪ್ ಎಂಡಿ ವಲ್ಲಭ ಮಹೇಶ್ವರಿ ಬಲಿ

ಶಾಕುನ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ವಲ್ಲಭ ಮಹೇಶ್ವರಿ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಜಸ್ಥಾನದ ಅಲ್ವಾರ್ ಬಳಿ ಅವರು ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ಪೋಕ್ಸೊ ಕೇಸ್‌; ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಪೋಕ್ಸೊ ಕೇಸ್‌; ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದರು.

ಚಾಟ್ ಜಿಪಿಟಿ ಮೂಲಕ ಆತ್ಮಹತ್ಯೆಯ ವಿಧಾನ ಹುಡುಕಾಡಿದ ಯುವತಿಯರು; ಎಲಾನ್‌ ಮಸ್ಕ್ ಹೇಳಿದ್ದೇನು?

ಆತ್ಮಹತ್ಯೆಯ ವಿಧಾನಕ್ಕಾಗಿ ಚಾಟ್ ಜಿಪಿಟಿ ಮೊರೆ ಹೋದ ವಿದ್ಯಾರ್ಥಿನಿಯರು

ಗುಜರಾತ್‌ನ ಸೂರತ್‌ನ ಸ್ವಾಮಿನಾರಾಯಣ ದೇವಸ್ಥಾನದ ಶೌಚಾಲಯದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. 18–20 ವರ್ಷದ ಬಾಲ್ಯದ ಸ್ನೇಹಿತೆಯರಾದ ಅವರು ಕಳೆದ ಶುಕ್ರವಾರ (ಮಾರ್ಚ್‌ 6) ಕಾಲೇಜಿಗೆ ಹೋಗಿ ಮನೆಗೆ ಮರಳಿರಲಿಲ್ಲ. ಮೊಬೈಲ್ ಲೊಕೇಶನ್ ಆಧರಿಸಿ ಹುಡುಕಿದಾಗ ದೇವಸ್ಥಾನದ ಶೌಚಾಲಯದಲ್ಲಿ ಅವರ ಮೃತದೇಹಗಳು ಪತ್ತೆಯಾಗಿದ್ದು, ಘಟನಾ ಸ್ಥಳದಲ್ಲಿ ಅರಿವಳಿಕೆ ಮದ್ದು ಮತ್ತು ಸಿರಿಂಜ್‌ಗಳು ದೊರೆತಿದೆ. ಅದನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮೊಬೈಲ್ ಪರಿಶೀಲಿಸಿದಾಗ ಆತ್ಮಹತ್ಯೆಗೆ ಯಾವ ಔಷಧ ಬಳಸಬಹುದು ಎಂದು ChatGPTನಲ್ಲಿ ಹುಡುಕಿರುವುದು ತಿಳಿದುಬಂದಿದೆ. ಈ ಬಗ್ಗೆ ಎಲಾನ್‌ ಮಸ್ಕ್‌ ಪ್ರತಿಕ್ರಿಯಿಸಿದ್ದಾರೆ.

ಲೀವ್ ಇನ್ ಸಂಗಾತಿ ಮೇಲೆ ಆ್ಯಸಿಡ್ ಎರಚಿದ ಗೆಳೆಯ

ಆಸ್ಪತ್ರೆಯಲ್ಲೇ ಗೆಳತಿ ಮೇಲೆ ಆ್ಯಸಿಡ್ ಎರಚಿದ ವ್ಯಕ್ತಿ

ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ತನ್ನ ಗೆಳತಿ ಮೇಲೆ ಆ್ಯಸಿಡ್ ಎರಚಿದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಲೀವ್ ಇನ್ ಸಂಗಾತಿಯ ಮೇಲೆ ಹಲ್ಲೆ ನಡೆಸಿದ ಬಳಿಕ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ತಕ್ಷಣವೇ ಮಹಿಳೆಗೆ ಚಿಕಿತ್ಸೆ ನೀಡಲಾಗಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ.

ದೆಹಲಿಯಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ; ಮಣಿಪುರದ ಯುವತಿ ಮೇಲೆ ಹಲ್ಲೆ

ಮಣಿಪುರ ಯುವತಿಯ ಮೇಲೆ ದೆಹಲಿಯಲ್ಲಿ ಹಲ್ಲೆ; ಜನಾಂಗೀಯ ನಿಂದನೆ

ನವದೆಹಲಿ ಸಾಕೇತ್ ಜಿಲ್ಲಾ ನ್ಯಾಯಾಲಯದ ಸಮೀಪ ಮಣಿಪುರ ಮೂಲದ ಯುವತಿಯೊಬ್ಬರ ಮೇಲೆ ಅಪರಿಚಿತ ಪುರುಷರ ಗುಂಪು ಅಸಭ್ಯ ಕಮೆಂಟ್ ಮಾಡಿದ ಬಳಿಕ ಹಲ್ಲೆ ನಡೆಸಿದೆ. ಗಾಯಗೊಂಡ ಯುವತಿಯನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ, ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Self Harming: 2 ವರ್ಷದ ಮಗುವಿನ ಕತ್ತು ಹಿಸುಕಿ, ನೇಣು ಹಾಕಿಕೊಂಡ ದಂಪತಿ

2 ವರ್ಷದ ಮಗುವಿನ ಕತ್ತು ಹಿಸುಕಿ, ನೇಣು ಹಾಕಿಕೊಂಡ ದಂಪತಿ

ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ದಂಪತಿ ಬಾಡಿಗೆಗೆ ಇದ್ದರು. ಇಂದು (ಮಾ.9) ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಮಗು ಅಸ್ವಸ್ಥಗೊಂಡಿದೆ. ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.

Murder Case: ಕಿಡ್ನ್ಯಾಪ್‌ ಆಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಶವ ತಮಿಳುನಾಡಿನಲ್ಲಿ ಪತ್ತೆ

ಕಿಡ್ನ್ಯಾಪ್‌ ಆಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಶವವಾಗಿ ಪತ್ತೆ

ತಮಿಳುನಾಡಿನ ಡೆಂಕಣಿಕೋಟೆ ಬಳಿ ಶವ ಸಿಕ್ಕಿದ್ದು, ಮೋಹನ್ ಬಾಬು ಎಂಬಾತನೇ ಗೋಪಾಲನ ಕೊಲೆಗೆ ಸುಪಾರಿ ಕೊಟ್ಟಿದ್ದ ಎನ್ನುವ ಆರೋಪ ಸಹ ಕೇಳಿ ಬಂದಿದೆ. ನಿನ್ನೆ ಗೋಪಾಲನ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ್ದರು. ಅಪಹರಿಸಿ ಕಾರಿನಲ್ಲಿ ಕರೆದೊಯ್ದು ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ.

Gudibande News: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ವಿವಾಹಿತೆ: ಪತಿ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು

ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ವಿವಾಹಿತೆ

ಮೃತ ವರಲಕ್ಷ್ಮಿಯ ತಂದೆ ನರಸಿಂಹಪ್ಪ (ಪಾಪನಾಯಕನಹಳ್ಳಿ, ಬಾಗೇಪಲ್ಲಿ ತಾಲೂಕು) ನೀಡಿರುವ ದೂರಿನ ಪ್ರಕಾರ, ಕಳೆದ 3 ವರ್ಷಗಳ ಹಿಂದೆ ಆರ್. ಚೊಕ್ಕನಹಳ್ಳಿ ಗ್ರಾಮದ ಗಂಗಪ್ಪ ಅವರ ಪುತ್ರ ಗಂಗರಾಜು ಜೊತೆ ವರಲಕ್ಷ್ಮಿಯ ವಿವಾಹ ನಡೆದಿತ್ತು. ಇವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲಿ ಚಿನ್ನಾಭರಣ ಸೇರಿದಂತೆ ಹಲವು ವಸ್ತುಗಳನ್ನು ವರಪಕ್ಷಕ್ಕೆ ನೀಡಲಾಗಿತ್ತು

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ, ಪ್ರಣಯ, ಬ್ರೇಕಪ್‌; ಅವಳಿ ಸಹೋದರಿಯನ್ನು 40 ಬಾರಿ ಇರಿದು ಕೊಂದ 25 ವರ್ಷದ ಎಂಜಿನಿಯರ್‌

ಅವಳಿ ಸಹೋದರಿಯನ್ನು 40 ಬಾರಿ ಇರಿದು ಕೊಂದ ಎಂಜಿನಿಯರ್‌

Moradabad Horror: ತನ್ನ ಬ್ರೇಕಪ್‌ಗೆ ತಾಯಿ ಮತ್ತು ಸಹೋದರಿಯೇ ಕಾರಣ ಎಂದು ಭಾವಿಸಿ ಯುವಕನೊಬ್ಬ ಕ್ರೂರ ಕೃತ್ಯ ಎಸಗಿದ್ದಾನೆ. ಆತನ ಹಲ್ಲೆಯಿಂದ ಗಂಭೀರ ಗಾಯಗೊಂಡ ಸಹೋದರಿ ಮೃತಪಟ್ಟರೆ, ತಾಯಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಈ ಘಟನೆ ನಡೆದಿದೆ.

ನೆರೆಮನೆಯವರ ಮೇಲಿನ ಕೋಪಕ್ಕೆ ಅಮಾಯಕ ನಾಯಿಮರಿಗಳನ್ನು ಗೋಡೆಗೆ ಅಪ್ಪಳಿಸಿ ಕೊಂದ ಮಹಿಳೆ; ನಾರಿ ಅಲ್ಲ ಹೆಮ್ಮಾರಿ ಎಂದ ನೆಟ್ಟಿಗರು

ನಾಯಿ ಮರಿಗಳನ್ನು ಅಮಾನುಷವಾಗಿ ಕೊಂದ ಮಹಿಳೆ: ಭುಗಿಲೆದ್ದ ಆಕ್ರೋಶ

Viral Video: ನೆರೆಮನೆಯೊಂದಿಗೆ ಜಗಳ ಉಂಟಾಯಿತು ಎನ್ನುವ ಕಾರಣಕ್ಕೆ ಮಹಿಳೆಯೊಬ್ಬಳು‌ ಗೋಡೆಗೆ ಎರಡು ನಾಯಿ ಮರಿಗಳನ್ನು ಹೊಡೆದು ಕೊಂದೇ ಬಿಟ್ಟಿದ್ದಾಳೆ.‌ ನೆರೆಮನೆಯವರ ಜತೆಗೆ ವೈಯಕ್ತಿಕ ದ್ವೇಷದ ಕಾರಣದಿಂದ ಅಮಾಯಕ ನಾಯಿಮರಿಗಳನ್ನು ಹತ್ಯೆ ಮಾಡಿದ್ದಾಳೆ. ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಲೋ ಟ್ರಾವೆಲ್‌ಗೆ ಹೊರಟ ಯುವತಿಗೆ ಭಯಾನಕ ಅನುಭವ: ಟ್ಯಾಕ್ಸಿ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ; ತಪ್ಪಿಸಿಕೊಂಡು ರಾತ್ರಿಯಿಡೀ ಕಾಡಿನಲ್ಲಿ ಕಳೆದ ಸಂತ್ರಸ್ತೆ

ಏಕಾಂಗಿ ಪ್ರವಾಸವಾಯ್ತು ಭಯಾನಕ ರಾತ್ರಿ

Taxi Driver Attempts Physical Assault: ಟ್ಯಾಕ್ಸಿ ಚಾಲಕನಿಂದ ನಡೆದ ಅತ್ಯಾಚಾರ ಯತ್ನದಿಂದ ತಪ್ಪಿಸಿಕೊಳ್ಳಲು ಕಾಡಿನಲ್ಲಿ ಗಂಟೆಗಟ್ಟಲೆ ಅಡಗಿಕೊಂಡಿದ್ದ ಯುವತಿಗೆ ಏಕಾಂಗಿ ಪ್ರವಾಸವು ಭಯಾನಕ ರಾತ್ರಿಯಾಗಿ ಮಾರ್ಪಟ್ಟಿದೆ. 31 ವರ್ಷದ ಮಹಿಳೆ ದೆಹಲಿಯಿಂದ ಡೆಹ್ರಾಡೂನ್ ಮೂಲಕ ಕಥ್ಗೋಡಮ್‌ಗೆ ಆಗಮಿಸಿ ನೈನಿತಾಲ್‌ಗೆ ಟ್ಯಾಕ್ಸಿ ಬಾಡಿಗೆಗೆ ಪಡೆದಾಗ ಈ ಘಟನೆ ನಡೆದಿದೆ.

ಬೈಕ್‌ ವಿಚಾರಕ್ಕೆ ಜಗಳ; ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಯುವಕ!

ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಯುವಕ!

Bengaluru News: ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತರಬನಹಳ್ಳಿಯಲ್ಲಿ ಘಟನೆ ನಡೆದಿದೆ. ಗಾಯಗೊಂಡ ಯುವತಿ ಹಾಗೂ ಆಕೆಯ ಪೋಷಕರನ್ನು ಸ್ಥಳೀಯರು ರಕ್ಷಣೆ ಮಾಡಿ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಮಹಿಳಾ ದಿನಾಚರಣೆಯಂದೇ ಘೋರ ದುರಂತ: ನೀರಿನ ಟ್ಯಾಂಕ್‌ನಲ್ಲಿ ಮೂವರು ಬಾಲಕಿಯರ ಶವ ಪತ್ತೆ; ತಂದೆಯೇ ಕೊಲೆಗಾರ?

ಮೂವರು ಹೆಣ್ಣು ಮಕ್ಕಳನ್ನು ಕ್ರೂರವಾಗಿ ಕೊಂದ ತಂದೆ

Crime News: ಮೂವರು ಬಾಲಕಿಯರು ನೀರಿನ ಟ್ಯಾಂಕ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟ ಹೆಣ್ಣುಮಕ್ಕಳು, 8, 7 ಮತ್ತು 5 ವರ್ಷ ವಯಸ್ಸಿನವರಾಗಿದ್ದು, ಕಾಮರೆಡ್ಡಿ ನಿವಾಸಿಗಳಾಗಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ, ಮಕ್ಕಳು ತಮ್ಮ ತಂದೆಯೊಂದಿಗೆ ಹತ್ತಿರದ ದಿನಸಿ ಅಂಗಡಿಯಿಂದ ತಿಂಡಿ ಖರೀದಿಸಲು ಹೋಗಿದ್ದರು.

90 ವರ್ಷದ ವೃದ್ಧೆಯ ಮೇಲೆ ನಾಲ್ಕು ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ

ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

Crime News: 90 ವರ್ಷ ವಯಸ್ಸಿನ ವೃದ್ಧ ಮಹಿಳೆಯ ಮೇಲೆ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಓರ್ವ ಬಾಲಕ ಸಾವು, ವಾರ್ಡನ್‌ಗೆ ಗಾಯ

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ

ಇತ್ತೀಚೆಗೆ ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ಬಾಲಕನ ಕೊಲೆ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿಯೂ ಅಂತಹುದೇ ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ನಡೆದಿದೆ.

ಭೀಕರ ರಸ್ತೆ ಅಪಘಾತ; ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಭೀಕರ ರಸ್ತೆ ಅಪಘಾತ; ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಆಗರ ಕ್ರಾಸ್ ನಲ್ಲಿ ನಡೆದಿದೆ. ಮೃತರೆಲ್ಲಾ ಬೆಂಗಳೂರು (Bengaluru) ನಗರದ ತಿಲಕ್ ನಗರ ನಿವಾಸಿಗಳು ಎಂದು ಗುರುತಿಸಲಾಗಿದೆ.

ಪ್ರೇಯಸಿ, ತಂದೆ, ತಾಯಿ ಮೇಲೆ  ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಿಯಕರ!

ಪ್ರೇಯಸಿ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ಪ್ರಿಯಕರ!

ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್​​ ಸುರಿದು ವ್ಯಕ್ತಿಯೋರ್ವ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ. ಆರೋಪಿಯ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ(48) ಹಾಗೂ ತಾಯಿ ಮಂಜಮ್ಮ (42) ಗಂಭೀರವಾಗಿ ಗಾಯಗೊಂಡಿದ್ದಾರೆ.

Hubballi News: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ

ಅಟ್ರಾಸಿಟಿ ಕೇಸ್‌; ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ದಾರಿ ವಿಚಾರಕ್ಕೆ ಜಗಳ ನಡೆದ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು, ರೈತನ ಮೇಲೆ ಹಲ್ಲೆ ನಡೆಸಿದ್ದರು. ಆದರೆ, ತನ್ನ ಮೇಲೆಯೇ ಅಟ್ರಾಸಿಟಿ ಕೇಸ್‌ ದಾಖಲಾಗಿದ್ದರಿಂದ ವಿಚಾರಣೆಗ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳುವುದರ ಕುರಿತು ಸರ್ಚ್‌ ಮಾಡಿದ್ದ  ವಿದ್ಯಾರ್ಥಿನಿಯರು ದೇವಾಲಯದ ಸ್ನಾನಗೃಹದಲ್ಲಿ ಶವವಾಗಿ ಪತ್ತೆ!

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಯುವತಿಯರು ಶವವಾಗಿ ಪತ್ತೆ

Crime News: ದೇವಾಲಯವೊಂದರ ಸಂಕೀರ್ಣದ ಸ್ನಾನಗೃಹದೊಳಗೆ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್‍ನ ಸೂರತ್‌ನಲ್ಲಿ ನಡೆದಿದೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ದೇವಾಲಯ ಸಂಕೀರ್ಣದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಸ್ನಾನಗೃಹದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

Honey trap case: ದಾವಣೆಗೆರೆ ಉದ್ಯಮಿಗೆ ಹನಿಟ್ರ್ಯಾಪ್‌; 25 ಲಕ್ಷ ರೂ. ಬೇಡಿಕೆ ಇಟ್ಟಿದ್ದ ನರ್ಸ್‌ ಸೇರಿ ನಾಲ್ವರು ಅರೆಸ್ಟ್‌

ಉದ್ಯಮಿಗೆ ಹನಿಟ್ರ್ಯಾಪ್‌ ಪ್ರಕರಣ; ನರ್ಸ್‌ ಸೇರಿ ನಾಲ್ವರು ಅರೆಸ್ಟ್‌

Davanagere News: ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆಯಲ್ಲಿ ಹನಿಟ್ರ್ಯಾಪ್ ಪ್ರಕರಣ ನಡೆದಿತ್ತು. ಹನಿಟ್ರ್ಯಾಪ್ ಮಾಡಿದ್ದ ನರ್ಸ್‌ ಸುಷ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎನ್ನುವ ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಮೂರು ದಿನಗಳಿಂದ ಅದೇ ಸಾಂಬಾರ್ ಬಡಿಸಿದ್ದಕ್ಕೆ ಕೂಗಾಡಿದ ಪತಿ; ಮನನೊಂದ ಪತ್ನಿ ಆತ್ಮಹತ್ಯೆ

ಸಾಂಬಾರ್ ವಿಚಾರಕ್ಕೆ ಜಗಳ; ಪತ್ನಿ ಆತ್ಮಹತ್ಯೆ

Crime news: ಮೂರು ದಿನಗಳ ಸಾಂಬಾರ್ ಅನ್ನು ಪದೇ ಪದೇ ಬಡಿಸುವ ಬಗ್ಗೆ ನಡೆದ ಕಲಹ 27 ವರ್ಷದ ಮಹಿಳೆಯ ಸಾವಿನಲ್ಲಿ ಅಂತ್ಯವಾಗಿದೆ. ತನ್ನ ಪತಿಯೊಂದಿಗೆ ಜಗಳವಾಡಿದ ನಂತರ ಮಹಿಳೆ ಕೀಟನಾಶಕ ಸೇವಿಸಿದ್ದಾಳೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಜಗಳದ ನಂತರ, ಕೃಷಿ ಬಳಕೆಗಾಗಿ ಇರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿದ್ದಾಳೆ ಎಂದು ಹೇಳಲಾಗಿದೆ.

POCSO case: ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಜೀವನಪೂರ್ತಿ ಜೈಲು ಶಿಕ್ಷೆ

ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಜೀವನಪೂರ್ತಿ ಜೈಲು ಶಿಕ್ಷೆ

ಹೆಂಡತಿ ಮೇಲಿನ ವೈಮನಸ್ಸಿನಿಂದಾಗಿ ತನ್ನ ಐದು ವರ್ಷದ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ವಿಜಯಪುರದ ವಿಶೇಷ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. ಮೂಲತಃ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ನಿವಾಸಿ ಆರೋಪಿ ಸೋಮನಿಂಗ ಕಳಸದವರ ಶಿಕ್ಷೆಗೆ ಗುರಿಯಾಗಿದ್ದಾನೆ.

Loading...