ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Delhi blast: ಮಗಳ ಕೃತ್ಯ ನಂಬೋಕಾಗ್ತಿಲ್ಲ: ಉಗ್ರ ಡಾಕ್ಟರ್‌ ಶಾಹೀನ್‌ ತಂದೆ ಪ್ರತಿಕ್ರಿಯೆ

ಮಗಳ ಕೃತ್ಯ ನಂಬೋಕಾಗ್ತಿಲ್ಲ: ಉಗ್ರ ಡಾಕ್ಟರ್‌ ಶಾಹೀನ್‌ ತಂದೆ ಪ್ರತಿಕ್ರಿಯೆ

Delhi Red Fort car blast: ಶಾಹೀನ್ ತನಿಖೆ ಬಳಿಕ ಪರ್ವೇಜ್ ಮನೆಗೆ ತನಿಖಾ ತಂಡ ದಾಳಿ ಮಾಡಿತ್ತು. ಶಾಹೀನ್ ಅಲ್-ಫಲಾಹ್ ವಿಶ್ವವಿದ್ಯಾಲಯದೊಂದಿಗೆ ಸಂಬಂಧ ಹೊಂದಿದ್ದಾಳೆ. ಫರಿದಾಬಾದ್‌ನಲ್ಲಿ ಬಾಡಿಗೆಗೆ ಪಡೆದಿದ್ದ ಎರಡು ಕೊಠಡಿಗಳಿಂದ 2,900 ಕೆಜಿ ಸ್ಫೋಟಕಗಳು ಮತ್ತು ದಹನಕಾರಿ ವಸ್ತುಗಳನ್ನು ವಶಪಡಿಸಿಕೊಂಡ ನಂತರ ಬಂಧಿಸಲ್ಪಟ್ಟ ಕಾಶ್ಮೀರಿ ವೈದ್ಯ ಡಾ. ಮುಜಮ್ಮಿಲ್ ಜೊತೆ ಕೂಡ ನಿಕಟ ಸಂಪರ್ಕ ಹೊಂದಿದ್ದಾಳೆಂದು ವರದಿಯಾಗಿದೆ.

Viral Video: ದೆಹಲಿ ಬಾಂಬ್ ಸ್ಫೋಟ ಹೇಗಿತ್ತು ಗೊತ್ತೇ? ಇಲ್ಲಿದೆ ಭಯಾನಕ ವಿಡಿಯೊ..

ದೆಹಲಿ ಬಾಂಬ್ ಸ್ಫೋಟ ವಿಡಿಯೊ ವೈರಲ್

ದೆಹಲಿಯ ಕೆಂಪು ಕೋಟೆಯಲ್ಲಿ ಸೋಮವಾರ ರಾತ್ರಿ ನಡೆದ ಭಯಾನಕ ಬಾಂಬ್ (Delhi bomb blast) ಸ್ಪೋಟದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸ್ಥಳೀಯ ಬ್ಲಾಗರ್ ಒಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಈ ವಿಡಿಯೊದಲ್ಲಿ ಜನನಿಬಿಡ ಪ್ರದೇಶದಲ್ಲಿ ಉಂಟಾದ ಅತ್ಯಂತ ಭಯಾನಕ ಕ್ಷಣ ಹೇಗಿತ್ತು ಎಂಬುದನ್ನು ಕಾಣಬಹುದಾಗಿದೆ.

Mysuru News: ಅಕ್ರಮ ಸಂಬಂಧಕ್ಕೆ ಅಡ್ಡಿ; ಮಲಗಿದ್ದ ಗಂಡನ ಮರ್ಮಾಂಗಕ್ಕೆ ಹೊಡೆದು ಕೊಂದ ಪತ್ನಿ!

ಅಕ್ರಮ ಸಂಬಂಧಕ್ಕೆ ಅಡ್ಡಿ; ಗಂಡನ ಮರ್ಮಾಂಗಕ್ಕೆ ಹೊಡೆದು ಕೊಂದ ಪತ್ನಿ!

Woman kills husband in Mysuru: ಪರಪುರುಷನ ಜತೆ ಸಂಬಂಧ ಬೆಳೆಸಿದ್ದ ಪತ್ನಿಗೆ ಪತಿ ಎಚ್ಚರಿಕೆ ನೀಡಿದ್ದ. ಯಾವಾಗ ತನ್ನ ಅನೈತಿಕ ಸಂಬಂಧಕ್ಕೆ ಗಂಡನೇ ಅಡ್ಡಿಯಾದನೋ ಆಗ ಆತನ ಕಥೆ ಮುಗಿಸಲು ಪತ್ನಿ ಪ್ಲ್ಯಾನ್‌ ಮಾಡಿದ್ದಳು. ಮನೆಯಲ್ಲಿ ಗಂಡ ಮಲಗಿದ್ದಾಗ ಹೊಡೆದು ಕೊಂದಿದ್ದಾಳೆ.

Delhi blast: ದೆಹಲಿ ಸ್ಪೋಟದ ಹಿಂದೆ ಮುಸ್ಲಿಂ ಧರ್ಮಗುರು ಮೌಲ್ವಿ ಇರ್ಫಾನ್ ಅಹ್ಮದ್ ?

ದೆಹಲಿ ಸ್ಪೋಟದ ಹಿಂದೆ ಮೌಲ್ವಿ ಕೈವಾಡ?

ದೆಹಲಿ ಕೆಂಪು ಕೋಟೆ ಸಮೀಪ ಸೋಮವಾರ ರಾತ್ರಿ ನಡೆದ ಬಾಂಬ್ ಸ್ಫೋಟ (Delhi blast) ಪ್ರಕರಣದಲ್ಲಿ ಮುಸ್ಲಿಂ ಧರ್ಮಗುರುವಿನ ಪಾತ್ರ ಇದೆಯೇ? ಹೀಗೊಂದು ಸಂದೇಹ ಈಗ ಹುಟ್ಟಿಕೊಂಡಿದೆ. ಯಾಕೆಂದರೆ ಫರಿದಾಬಾದ್ ನಲ್ಲಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರನ್ನಾಗಿ ಮಾಡುವಲ್ಲಿ ಮೌಲ್ವಿಯೊಬ್ಬರ ಹೆಸರು ಕೇಳಿ ಬಂದಿದೆ. ಅದು ಯಾರು? ಅವರಿಗೂ ದೆಹಲಿ ಬಾಂಬ್ ಸ್ಪೋಟಕ್ಕೂ ಏನು ಸಂಬಂಧ ? ಇಲ್ಲಿದೆ ಸಂಪೂರ್ಣ ಮಾಹಿತಿ.

ಬರೋಬ್ಬರಿ 14 ರೇಪ್‌ & ಮರ್ಡರ್‌ ಕೇಸ್‌ನ ನರ ಹಂತಕ ಸುರೇಂದರ್‌ ಕೋಲಿ ಖುಲಾಸೆ; ತಕ್ಷಣ ರಿಲೀಸ್‌ಗೆ ಸುಪ್ರೀಂ ಆದೇಶ

ನರ ಹಂತಕ ಸುರೇಂದರ್‌ ಕೋಲಿ ರಿಲೀಸ್‌ಗೆ ಸುಪ್ರೀಂ ಆದೇಶ

2006 Nithari serial killings case: 2006ರ ನಿಥಾರಿ ಸೀರಿಯಲ್‌ ಕಿಲ್ಲಿಂಗ್‌ ಕೇಸ್‌ ಎಂದೇ ಕುಖ್ಯಾತಿ ಪಡೆದಿರುವ ಈ ಕೇಸ್‌ನ ಪ್ರಮುಖ ಆರೋಪಿ ಸುರೇಂದ್ರ ಕೋಲಿಯನ್ನು ಸುಪ್ರೀಂ ಕೋರ್ಟ್‌ ಕೊನೆಯ ಪ್ರಕರಣದಿಂದಲೂ ಖುಲಾಸೆಗೊಳಿಸಿದೆ. ಅಲ್ಲದೇ ತಕ್ಷಣ ರಿಲೀಸ್‌ ಮಾಡುವಂತೆ ಆದೇಶ ಹೊರಡಿಸಿದೆ.

Malur Vote Recount: ಬಿಗಿ ಭದ್ರತೆಯಲ್ಲಿ ಮಾಲೂರು ಕ್ಷೇತ್ರದ ಮರು ಮತ ಎಣಿಕೆ; ಮಾಧ್ಯಮಗಳಿಗೆ ನಿರ್ಬಂಧ

ಬಿಗಿ ಭದ್ರತೆಯಲ್ಲಿ ಮಾಲೂರು ಕ್ಷೇತ್ರದ ಮರು ಮತ ಎಣಿಕೆ

Malur assembly election results: 2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ 248 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ವಿರುದ್ಧ ಗೆದ್ದಿದ್ದರು. ಆದರೇ, ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಮರು ಮತ ಎಣಿಕೆ ನಡೆಯುತ್ತಿದೆ.

Delhi Terror Attack 2025: ದೆಹಲಿ ಭಯೋತ್ಪಾದಕ ದಾಳಿಗೆ ಫರಿದಾಬಾದ್ ಅಲ್ ಫಲಾಹ್ ವಿವಿಯಲ್ಲಿ ಸಂಚು ?

ದೆಹಲಿ ದಾಳಿಗೆ ಫರಿದಾಬಾದ್ ನಲ್ಲಿ ಸಂಚು ರೂಪಿಸಲಾಗಿತ್ತೆ?

ದೆಹಲಿಯಲ್ಲಿ ಸೋಮವಾರ ಭಯೋತ್ಪಾದಕ ದಾಳಿ ನಡೆದ ಬಳಿಕ ಎಲ್ಲರ ಗಮನವನ್ನು ಹರಿಯಾಣದ ಫರಿದಾಬಾದ್ ಸೆಳೆದಿದೆ. ಯಾಕೆಂದರೆ ಇಲ್ಲಿನ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಎರಡು ಎಕೆ -47 ರೈಫಲ್‌ಗಳು, 350 ಕಿಲೋಗ್ರಾಂಗಳಷ್ಟು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಸಂಚು ಇದು ಎಂದು ಪೊಲೀಸರು ತಿಳಿಸಿದ್ದಾರೆ.

Viral Video: ಹೆದ್ದಾರಿಯಲ್ಲಿ ಚಲಿಸುತ್ತಿರುವ ಕಾರಿನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸಿದ ಮಹಿಳೆ; ವಿಡಿಯೊ ವೈರಲ್

ಚಲಿಸುತ್ತಿರುವ ಕಾರಿನಲ್ಲಿ ಮಹಿಳೆಯ ಹುಚ್ಚಾಟ

Woman Performs Dangerous Stunt: ಹೈವೆಯಲ್ಲಿ ಚಲಿಸುತ್ತಿದ್ದ ಕಾರಿನ ಕಿಟಕಿಯಿಂದ ಹೊರಗೆ ತಲೆಹಾಕಿ ಅಪಾಯಕಾರಿ ಸಾಹಸ ಪ್ರದರ್ಶಿಸಿದ ಮಹಿಳೆಯ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿರುವ ಈ ಕೃತ್ಯವು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

Delhi Red Fort Blast: ನಿಧಾನಗತಿಯಲ್ಲಿ ಚಲಿಸುತ್ತಿದ್ದ ಕಾರು ಕೆಂಪು ದೀಪದ ಬಳಿ ನಿಂತ ಬಳಿಕ ಸ್ಫೋಟ:  ಪೊಲೀಸ್‌ ಅಧಿಕಾರಿ

ಕೆಂಪು ದೀಪದ ಬಳಿ ನಿಂತ ಬಳಿಕ ಕಾರು ಸ್ಫೋಟ: ಪೊಲೀಸರು

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟದಿಂದ ಎಂಟು ಮಂದಿ ಸಾವಿಗೀಡಾಗಿದ್ದು, 15 ಮಂದಿ ಗಾಯಕ್ಕೆ ತುತ್ತಾಗಿದ್ದರೆ. ಈ ಬಗ್ಗೆ ದೆಹಲಿ ಪೊಲೀಸರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಮಾರುತಿ ಸುಜುಕಿ ಇಕೊ ಕಾರು ಗೌರಿ ಶಂಕರ್‌ ಹಾಗೂ ಜೈನ್‌ ದೆವಾಲಯದ ಬಳಿ ನಿಧಾನಗತಿಯಲ್ಲಿ ಚಲಿಸುತ್ತಿದ್ದಾಗ ಸ್ಪೋಟಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Delhi Blast: ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌

ದೆಹಲಿ ಸ್ಫೋಟ; ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌

High alert in Bengaluru: ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮೆಟ್ರೋ, ರೈಲ್ವೆ ನಿಲ್ದಾಣ ಹಾಗೂ ಏರ್‌ಪೋರ್ಟ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಹೊರ ರಾಜ್ಯದವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.

Delhi Red Fort Blast: ಭಯಾನಕ ದುರ್ಘಟನೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು! ವಿಡಿಯೊ

Delhi Red Fort Blast: ಭಯಾನಕ ದೃಶ್ಯಗಳನ್ನು ವಿವರಿಸಿದ ಪ್ರತ್ಯಕ್ಷದರ್ಶಿ!

ಹಳೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ಸ್ಪೋಟ ನಡೆದಿದ್ದು ಎಂಟು ಮಂಡಿ ಸಾವಿಗೀಡಾಗಿದ್ದಾರೆ ಹಾಗೂ ಹಲವು ಮಂದಿ ಗಾಯಕ್ಕೆ ತುತ್ತಾಗಿದ್ದಾರೆ. ಈ ದುರ್ಘಟನೆಯಿಂದ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಈ ಭಯಾನಕ ದೃಶ್ಯಗಳ ಬಗ್ಗೆ ಪ್ರತ್ಯಕ್ಷದರ್ಶಿಗಳು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ವಿಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

Delhi Blast: ಛಿದ್ರ ಛಿದ್ರವಾದ ದೇಹಗಳು, ದಿಕ್ಕಾಪಾಲಾಗಿ ಓಡಿದ ಜನ; ದೆಹಲಿ ಸ್ಫೋಟದ ಭೀಕರ ದೃಶ್ಯಗಳು ಇಲ್ಲಿವೆ

ಛಿದ್ರಛಿದ್ರವಾದ ದೇಹಗಳು; ದೆಹಲಿ ಸ್ಫೋಟದ ಭೀಕರ ದೃಶ್ಯಗಳು ಇಲ್ಲಿವೆ

Delhi News: ಕೆಂಪುಕೋಟೆ ಮುಂಭಾಗದ ಲಾಲ್‌ ಕಿಲಾ ಮೆಟ್ರೋ ನಿಲ್ದಾಣದ ಬಳಿಕ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ 10ಕ್ಕೂ ಹೆಚ್ಚು ಕಾರುಗಳು ಧ್ವಂಸವಾಗಿದ್ದು, ಕೆಲವರ ದೇಹಗಳು ಛಿದ್ರಛಿದ್ರವಾಗಿರುವುದು ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿದೆ. ಎನ್‌ಐಎ, ಎನ್‌ಎಸ್‌ಜಿ ತಂಡಗಳು ತೆರಳಿ ಪರಿಶೀಲಿಸುತ್ತಿದ್ದಾರೆ.

Bengaluru central Jail: ಸೆಂಟ್ರಲ್‌ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ, ಸಿಸಿಬಿಯಿಂದ ದರ್ಶನ್‌ ಆಪ್ತ ಧನ್ವೀರ್‌ ವಿಚಾರಣೆ

ಜೈಲಿನಲ್ಲಿ ರಾಜಾತಿಥ್ಯ, ಸಿಸಿಬಿಯಿಂದ ದರ್ಶನ್‌ ಆಪ್ತ ಧನ್ವೀರ್‌ ವಿಚಾರಣೆ

Parappana Agrahara Jail: ಜೈಲಿನ ವಿಡಿಯೋ ಹೊರಗಡೆ ಬಂದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ದರ್ಶನ್ ಆಪ್ತ ಧನ್ವೀರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ಒಂದು ಗಂಟೆಗೆ ಮನೆಯ ಬಳಿ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

Ragging Case: ಮೈಸೂರಿನ ಶಾಲೆಯಲ್ಲಿ ಹುಡುಗನ ಮೇಲೆ ಬರ್ಬರ ರ‍್ಯಾಗಿಂಗ್, ಶಾಲೆ ಆಡಳಿತ ಮಂಡಳಿ, ಬಾಲಕರ ವಿರುದ್ಧ ಎಫ್‌ಐಆರ್‌

ಮೈಸೂರಿನಲ್ಲಿ ಹುಡುಗನ ಮೇಲೆ ರ‍್ಯಾಗಿಂಗ್, ಶಾಲೆ- ಬಾಲಕರ ವಿರುದ್ಧ ಎಫ್‌ಐಆರ್‌

Mysuru news: 13 ವರ್ಷದ ಬಾಲಕನ ಮೇಲೆ ಮೂವರಿಂದ ಹಲ್ಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿದ್ದಾರೆ. ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ್‌ ಲೀಡರ್ ಆಗಿದ್ದ. ಮೂವರು ಬಾಲಕರು ಇವನನ್ನು ಪ್ರತಿನಿತ್ಯ ಹಣ ಕೊಡು, ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಎಂದು ಪೀಡಿಸುತ್ತಿದ್ದರು. ಅಕ್ಟೋಬರ್ 25ರಂದು ಬಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಶೌಚಾಲಯದಲ್ಲಿ ಬಾಲಕನ ಮರ್ಮಾಂಗಕ್ಕೆ ಒದ್ದಿದ್ದಾರೆ. ಬಾಲಕನ ಸ್ಥಿತಿ ಕಂಡು ಪೋಷಕರು ಹೌಹಾರಿದ್ದಾರೆ.

Bengaluru Central Jail: ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ಕುಣಿತ, ಮೋಜು, ಮಸ್ತಿ: ಇನ್ನೊಂದು ವಿಡಿಯೋ ವೈರಲ್‌

ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ಮೋಜು, ಮಸ್ತಿ: ಇನ್ನೊಂದು ವಿಡಿಯೋ ವೈರಲ್‌

Parappana Agrahara Jail: ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಅಲರ್ಟ್​ ಆಗಿರುವ ಜೈಲಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್​ಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಒಟ್ಟು 100ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿ ಕೈದಿಗಳ ಬ್ಯಾರಕ್​ಗಳ ಪರಿಶೀಲನೆ ಮಾಡಿದ್ದು, ಪರಿಶೀಲನೆ ವೇಳೆ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಬ್ಯಾರಕ್​ಗಳಲ್ಲಿ ಸಿಬ್ಬಂದಿ ಪರಿಶೀಲನೆ ವೇಳೆ ಯಾವುದೇ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದಾಳಿಯ ಮಾಹಿತಿ ಸೋರಿಕೆ ಆಗಿರುವ ಅನುಮಾನ ವ್ಯಕ್ತವಾಗಿದೆ.

Bengaluru Crime News: ಸ್ಕರ್ಟ್‌ ಧರಿಸಿದ್ರೆ ರೇಪ್‌ ಮಾಡ್ತೀನಿ ಎಂದು ಬೆದರಿಸಿದ ಬೆಂಗಳೂರಿನ ರಿಕ್ಷಾ ಚಾಲಕ, ರೆಡ್ಡಿಟ್‌ ಪೋಸ್ಟ್‌ ವೈರಲ್‌

ಸ್ಕರ್ಟ್‌ ಧರಿಸಿದ್ರೆ ರೇಪ್‌ ಮಾಡ್ತೀನಿ ಎಂದು ಬೆದರಿಸಿದ ರಿಕ್ಷಾ ಚಾಲಕ

Physical Abuse: ನಾನು ಇಡೀ ಘಟನೆಯಿಂದ ಶಾಕ್‌ ಆಗಿದ್ದುದರಿಂದ ಆತನ ರಿಕ್ಷಾದ ನಂಬರ್ ಪ್ಲೇಟ್ ಸಂಖ್ಯೆಯನ್ನು ಬರೆದುಕೊಳ್ಳಲು ಅಥವಾ ಅವನ ಮುಖದ ಫೋಟೋ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ. ನಾನು ನನ್ನ ಗೆಳೆಯನೊಂದಿಗೆ ಇರುವಾಗಲೇ, ಹಾಡ ಹಗಲೇ ಹೀಗೆ ಬೆದರಿಸಬಲ್ಲ ವ್ಯಕ್ತಿ, ಮಹಿಳೆಯರು ಒಬ್ಬಂಟಿಯಾಗಿ ಸಿಕ್ಕಿದರೆ ಏನಾದರೂ ಮಾಡಬಲ್ಲ ಎಂಬುದು ಖಚಿತ. ಅದರಲ್ಲೂ ಅವನ ಆಟೋದಲ್ಲಿ ಪ್ರಯಾಣಿಕಳಾಗಿ ಸಿಕ್ಕಿದಾಗ. ಇದು ನನ್ನ ಚಿಂತೆ. ಅವನು ಬಲಿಷ್ಠನಾಗಿಯೂ ಇದ್ದ ಎಂದು ಯುವತಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

Anupama Parameswaran: 20 ವರ್ಷದ ಯುವತಿ ವಿರುದ್ಧ ದೂರು ದಾಖಲಿಸಿದ ನಟಿ ಅನುಪಮಾ ಪರಮೇಶ್ವರನ್: ಕಾರಣವೇನು?

20 ವರ್ಷದ ಯುವತಿ ವಿರುದ್ಧ ದೂರು ದಾಖಲಿಸಿದ ನಟಿ‌ ಅನುಪಮಾ!

ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮತ್ತು ಕುಟುಂಬದ ಕುರಿತು ಆಕ್ಷೇಪಾರ್ಹ ಹಾಗೂ ಸುಳ್ಳು ಮಾಹಿತಿ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ನಟಿ ದೂರು ನೀಡಿದ್ದಾರೆ. ತಮಿಳುನಾಡು ಮೂಲದ 20 ವರ್ಷದ ಯುವತಿಯ ವಿರುದ್ಧ ಕೇರಳ ಸೈಬರ್ ಕ್ರೈಂ ಪೊಲೀಸರು ದೂರು ದಾಖಲಿಸಿದ್ದಾರೆ.

Physical abuse: ಪಾಲಕರೊಟ್ಟಿಗೆ ಮಲಗಿದ್ದ 4 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ ದುರುಳ

4 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ ದುರುಳ

ಅಜ್ಜಿಯ ಪಕ್ಕದಲ್ಲೇ ಮಲಗಿದ್ದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾ ಬಳಿಯ ಹೂಗ್ಲಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ತಾರಕೇಶ್ವರ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿರುವ ಹೂಗ್ಲಿ ಗ್ರಾಮೀಣ ಠಾಣೆಯ ಪೊಲೀಸರು ಶಂಕಿತನೊಬ್ಬನನ್ನು ಬಂಧಿಸಿದ್ದಾರೆ.

ರಾಜ್ಯವೇ ತಲೆ ತಗ್ಗಿಸುವ ಘಟನೆ; ಅಪ್ರಾಪ್ತೆ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕ

ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕ

Koppal News: ಕೊಪ್ಪಳದಲ್ಲಿ 21 ವರ್ಷದ ಯುವಕನೊಬ್ಬ ತನ್ನ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸುಮಾರು 8 ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಸಹೋದರನಿಂದ ಗರ್ಭ ಧರಿಸಿದ ಸಂತ್ರಸ್ತೆ ಅಕ್ಟೋಬರ್‌ 30ರಂದು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಕಾಮುಕ ಸಹೋದರನ್ನು ಪೊಲೀಸರು ಬಂಧಿಸಿದ್ದಾರೆ.

Shootout Case:  ತಂದೆಯ ಪಿಸ್ತೂಲ್‌ನಿಂದ ಸಹಪಾಠಿ ಮೇಲೆ ಗುಂಡಿನ ದಾಳಿ ನಡೆಸಿದ ಬಾಲಕರು!

ಸಹಪಾಠಿ ಮೇಲೆ ಗುಂಡಿನ ದಾಳಿ ನಡೆಸಿದ ಬಾಲಕರು!

ಗುರುಗ್ರಾಮ್‌ನ ಐಷಾರಾಮಿ ವಸತಿ ಸೊಸೈಟಿಯಲ್ಲಿ 11 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ತಮ್ಮ ತಂದೆಯ ಪಿಸ್ತೂಲ್‌ನಿಂದ ತಮ್ಮ ಸಹಪಾಠಿಯ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಘಟನೆ ನಡೆದಿದೆ. ಗುಂಡು ತಗುಲಿದ ಬಾಲಕ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ.

Physical Assault: ಬಾಲಕನನ್ನು ಅಪಹರಿಸಿ ಲೈಂಗಿಕ ಕಿರುಕುಳ; ಆರೋಪಿ ಮಹಿಳೆಗೆ 54 ವರ್ಷಗಳ ಜೈಲು ಶಿಕ್ಷೆ!

ತಮಿಳುನಾಡಿನಲ್ಲಿ ಬಾಲಕನನ್ನು ಅಪಹರಿಸಿ ಲೈಂಗಿಕ ಕಿರುಕುಳ

Tamil Nadu Physical assault case: ತಮಿಳುನಾಡಿನಲ್ಲಿ 14 ವರ್ಷದ ಬಾಲಕನನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಮಹಿಳೆಯೊಬ್ಬಳಿಗೆ ನ್ಯಾಯಾಲಯವು 54 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಆಕೆ ಬಾಲಕನನ್ನು ಬಲವಂತವಾಗಿ ಲೈಂಗಿಕ ಸಂಬಂಧಕ್ಕೆ ಒಳಪಡಿಸಿದ್ದಾಳೆ ಎಂದು ಆರೋಪಿಸಲಾಗಿದೆ.

Police Firing: ಆನೇಕಲ್‌ನಲ್ಲಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಆನೇಕಲ್‌ನಲ್ಲಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರ ಫೈರಿಂಗ್

Bengaluru Crime News: ಕಿಡ್ನಾಪ್​ ಮತ್ತು ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್​ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್​​ ಕಾನ್‌​ಸ್ಟೇಬಲ್​​ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ.

G Parameshwar: ಪರಪ್ಪನ ಅಗ್ರಹಾರದಲ್ಲಿ ಉಗ್ರನಿಗೆ ರಾಜಾತಿಥ್ಯ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಪರಪ್ಪನ ಅಗ್ರಹಾರದಲ್ಲಿ ಉಗ್ರನಿಗೆ ರಾಜಾತಿಥ್ಯ: ಗೃಹ ಸಚಿವರು ಹೇಳಿದ್ದೇನು?

Parappana Agrahara Jail: ಇಂಥ ಘಟನೆಗಳು ಮಂಗಳೂರು, ಬೆಳಗಾವಿ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇ ಪದೆ ಆಗಿದ್ದು ಕೇಳಿಬಂದಿದೆ. ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಅವರ ಜೊತೆಗೆ ನಾನು ಮಾತನಾಡಿದ್ದೇನೆ. ಈ ಬೆಳವಣಿಗೆಗೆ ಯಾರು ಹೊಣೆಗಾರರಾಗಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವರು ನುಡಿದಿದ್ದಾರೆ.

Black magic: ದೆವ್ವ ಬಿಡಿಸಲು ಮಹಿಳೆಗೆ ಮದ್ಯ ಕುಡಿಸಿ, ಬೀಡಿ ಸೇದುವಂತೆ ಒತ್ತಾಯ: ತಂದೆಯಿಂದ ದೂರು

ದೆವ್ವ ಬಿಡಿಸಲು ಮದ್ಯ ಕುಡಿಸಿ, ಬೀಡಿ ಸೇದುವಂತೆ ಮಾಡಿದರು

ಮಹಿಳೆಯೊಬ್ಬರಿಗೆ ದೆವ್ವ ಹಿಡಿದಿದೆ ಎಂದು ಹೇಳಿ ಆಕೆಗೆ ಮದ್ಯ ಕುಡಿಸಿ, ಬೀಡಿ ಸೇದುವಂತೆ ಒತ್ತಾಯಿಸಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ನಡೆದಿದೆ. ಆಕೆಗೆ ದೈಹಿಕ ಮತ್ತು ಮಾನಸಿಕ ಚಿತ್ರ ಹಿಂಸೆ ನೀಡಲಾಗಿದೆ ಎಂದು ಮಹಿಳೆಯ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Loading...