ಪೊಲೀಸ್ ಅಧಿಕಾರಿಯನ್ನು ಥಳಿಸಿ ಕೊಂದ ದುಷ್ಕರ್ಮಿಗಳು
ಪೊಲೀಸ್ ಅಧಿಕಾರಿಯೊಬ್ಬರನ್ನು ಕಟ್ಟಿ ಥಳಿಸಿ ಹಾಕಿ ಕೊಂದಿರುವ ಘಟನೆ ಒಡಿಶಾದ ಖೋರ್ಧಾ ಜಿಲ್ಲೆಯಲ್ಲಿ ನಡೆದಿದೆ. ಪ್ರವಾಸದಲ್ಲಿದ್ದ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಕಾನ್ಸ್ಟೆಬಲ್ ಅನ್ನು ಗುಂಪೊಂದು ಥಳಿಸಿ ಕೊಂದು ಹಾಕಿದೆ. ಸೌಮ್ಯ ರಂಜನ್ ಸ್ವೈನ್ ಮೃತರು. ಈ ಘಟನೆಯು ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.