ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

Belagavi Shivam Associates Case: 4,500 ಕೋಟಿ ರೂ. ವಂಚನೆ ಪ್ರಕರಣ; ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ ಮಾಲೀಕ ಶಿವಾನಂದ ನೀಲಣ್ಣವರ್‌ ಅರೆಸ್ಟ್‌

4,500 ಕೋಟಿ ವಂಚನೆ ಪ್ರಕರಣ; ಶಿವಾನಂದ ನೀಲಣ್ಣವರ್‌ ಅರೆಸ್ಟ್‌

Belagavi News: ಶಿವಂ ಅಸೋಸಿಯೇಟ್ಸ್‌ ಮಾಲೀಕನ ಮನೆ, ಕಚೇರಿ ಮೇಲೆ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ್ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದರು. ಅಂದಾಜು 4,500 ಕೋಟಿ ಹಣ ವಂಚನೆ ಮಾಡಿದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಸುಮಾರು 8 ಗಂಟೆಳ ದಾಖಲೆ ಪರಿಶೀಲನೆ ನಡೆಸಲಾಗಿತ್ತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಉಪನ್ಯಾಸಕನ ಬಂಧನ

ನೀಟ್ ಪ್ರಕರಣ: ಉಪನ್ಯಾಸಕನ ಬಂಧನ

2026ರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪನ್ಯಾಸಕನೊಬ್ಬನನ್ನು ಬಂಧಿಸಲಾಗಿದೆ. ಪ್ರಕರಣದ ಕಿಂಗ್ ಪಿನ್ ಎಂದು ಗುರುತಿಸಲಾದ ಪುಣೆ ಮೂಲದ ರಸಾಯನ ಶಾಸ್ತ್ರ ಉಪನ್ಯಾಸಕ ಪಿವಿ ಕುಲಕರ್ಣಿ ಎಂಬಾತನನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ರಹಸ್ಯ ಬೋಧನಾ ಅವಧಿಯಲ್ಲಿ ಹಲವಾರು ಆಕಾಂಕ್ಷಿಗಳಿಗೆ ಆತ ಪ್ರಶ್ನೆ ಪತ್ರಿಕೆ ಹಂಚಿದ್ದಾನೆ ಎಂದು ಆರೋಪಿಸಲಾಗಿದೆ.

ಹೆಂಡತಿಯ ಎದುರು ಅವಮಾನಿಸಿದ್ದಕ್ಕಾಗಿ ಹೆತ್ತವರನ್ನೇ ಹೊಡೆದು ಕೊಂದ ಮಗ!

ಹೆತ್ತವರನ್ನೇ ಹೊಡೆದು ಕೊಂದ ಮಗ!

ಹೆಂಡತಿಯ ಎದುರೇ ತನಗೆ ಅವಮಾನ ಮಾಡಿದರೆಂದು ಹೆತ್ತವರನ್ನೇ ಮಗ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಧುಲೆಯ ಶಿರ್ಪುರದ ಮಹಾವೀರ್ ಸೊಸೈಟಿಯಲ್ಲಿ ನಡೆದಿದೆ. ಪೋಷಕರು ತಮ್ಮ ಮಗಳ ಮದುವೆಯಲ್ಲಿ ಭಾಗವಹಿಸಿ ಮನೆಗೆ ಮರಳಿದ್ದರು. ಮರಳಿ ಬಂದ ಬಳಿಕ ಮನೆಯಲ್ಲಿ ಕಲಹ ಉಂಟಾಗಿದೆ.

ಲಿಂಗಸುಗೂರಿನಲ್ಲಿ ಹೀನ ಕೃತ್ಯ; ತಂದೆ, ಆತನ ಸ್ನೇಹಿತನಿಂದಲೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ!

ತಂದೆ, ಆತನ ಸ್ನೇಹಿತನಿಂದಲೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ!

Raichur News: ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಹೀನ ಕೃತ್ಯ ನಡೆದಿದೆ. ಮಗಳ ಮೇಲೆ ತಂದೆ ಮತ್ತು ಆತನ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಯ ಕೇಳಲೆಂದು ಬಸ್ ಬಳಿ ಬಂದಿದ್ದ ಮೂವರು ಮಕ್ಕಳ ತಾಯಿ ಮೇಲೆ ಸಾಮೂಹಿಕ ಅತ್ಯಾಚಾರ

ದೆಹಲಿ ಅತ್ಯಾಚಾರ ಪ್ರಕರಣ: ಆ ದಿನ ನಡೆದಿದ್ದು ಏನು?

ದೆಹಲಿಯಲ್ಲಿ ಸೋಮವಾರ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಪೊಲೀಸರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದು, ಆ ದಿನ ಸಮಯ ಕೇಳಲೆಂದು ಆಕೆ ಬಸ್ ಹತ್ತಿರ ಹೋಗಿರುವುದಾಗಿ ಹೇಳಿದ್ದಾಳೆ. ಅದರೊಳಗಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಒಳಗೆ ಕರೆದಿದ್ದು, ಬಳಿಕ ಅದರೊಳಗಿದ್ದ ಇಬ್ಬರೊಂದಿಗೆ ಸೇರಿ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ಆಕೆ ತಿಳಿಸಿದ್ದಾಳೆ.

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ: 500ರಿಂದ 600 ಅಂಕ ಗ್ಯಾರಂಟಿ ಭರವಸೆ ನೀಡಿದ್ದ ಆರೋಪಿಗಳು

ನೀಟ್ ಪತ್ರಿಕೆ ಸೋರಿಕೆ: ವಾಟ್ಸಾಪ್ ಚಾಟ್‌ಗಳಿಂದ ಹಲವು ಮಾಹಿತಿ ಬಹಿರಂಗ

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ವಾಟ್ಸಾಪ್ ಚಾಟ್‌ ನಿಂದ ಹಲವಾರು ಮಾಹಿತಿಗಳು ಬಹಿರಂಗಗೊಂಡಿವೆ. ಈ ಪ್ರಶ್ನೆ ಪತ್ರಿಕೆಯು ಅಭ್ಯರ್ಥಿಗಳಿಗೆ 500 ರಿಂದ 600 ಅಂಕಗಳ ಗ್ಯಾರಂಟಿ ನೀಡುತ್ತದೆ. ಸೋರಿಕೆಯಾದ ನೀಟ್ ಪ್ರಶ್ನೆ ಪತ್ರಿಕೆಯು ಜಮ್ಮು ಮತ್ತು ಕಾಶ್ಮೀರ, ಬಿಹಾರ, ಕೇರಳ ಸೇರಿದಂತೆ ಹಲವು ರಾಜ್ಯಗಳಿಗೆ ಹಂಚಿಕೆಯಾಗಿದೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ನಟ ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಬೇಗ ಜೈಲಿನಿಂದ ಬಿಡುಗಡೆಯಾಗಿ ಸಿನಿಮಾ ಜಗತ್ತಿಗೆ ಮರಳಬೇಕು ಎಂದು ಕಾಯುತ್ತಿದ್ದಾರೆ. ಸುಪ್ರೀಂ ಕೋರ್ಟ್ ನಾಳೆ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಚಿತ್ರರಂಗ ಮತ್ತು ದರ್ಶನ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮಣಿಪುರದಲ್ಲಿ ಗುಂಡಿನ ದಾಳಿ: ಮೂವರು ಚರ್ಚ್ ನಾಯಕರು ಸಾವು, ಹಲವರಿಗೆ ಗಾಯ

ಮಣಿಪುರದಲ್ಲಿ ಮೂವರು ಚರ್ಚ್ ನಾಯಕರ ಹತ್ಯೆ

ಮಣಿಪುರದ ಕಾಂಗ್ಪೋಕ್ಪಿಯಲ್ಲಿ ಮೂವರು ಚರ್ಚ್ ನಾಯಕರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಚರ್ಚ್ ನಾಯಕರು ಲಮ್ಕಾದಲ್ಲಿ ನಡೆದ ಥಡೌ ಬ್ಯಾಪ್ಟಿಸ್ಟ್ ಅಸೋಸಿಯೇಷನ್ ಸಮ್ಮೇಳನದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಯಲ್ಲಿ ಸುಮಾರು ಐದು ಮಂದಿ ಗಾಯಗೊಂಡಿದ್ದು, ಸ್ಥಳದಲ್ಲಿ ಉದ್ವಿಗ್ನತೆಯನ್ನು ಉಂಟು ಮಾಡಿದೆ.

ನೀಟ್ ಪ್ರಶ್ನೆ ಪತ್ರಿಕೆಗಾಗಿ ಗುರುಗ್ರಾಮ ವೈದ್ಯರೊಂದಿಗೆ ನಡೆದಿತ್ತು 30 ಲಕ್ಷ ರೂ. ಗೆ ಒಪ್ಪಂದ

30 ಲಕ್ಷ ರೂ. ಗೆ ಮಾರಾಟವಾಗಿತ್ತು ನೀಟ್ ಪತ್ರಿಕೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಹಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ರಾಜಸ್ಥಾನ ಸಹೋದರರಿಬ್ಬರ ಬಂಧನದ ಬಳಿಕ ನೀಟ್ ಪತ್ರಿಕೆ 30 ಲಕ್ಷ ರೂ. ಗೆ ಮಾರಾಟವಾಗಿರುವುದಾಗಿ ತಿಳಿದು ಬಂದಿದೆ. ಇದರಲ್ಲಿ ವೈದ್ಯರೊಬ್ಬರು ಶಾಮೀಲಾಗಿರುವುದು ಕೂಡ ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಪೂಂಚ್‌ನಲ್ಲಿ ಒಳನುಸುಳಲು ಯತ್ನಸಿದ ಭಯೋತ್ಪಾದಕರನ್ನು ತಡೆದ ಭಾರತೀಯ ಸೇನೆ; ಓರ್ವ ಬಲಿ

ಪೂಂಚ್‌ನಲ್ಲಿ ಒಳನುಸುಳಲು ಯತ್ನಸಿದ ಭಯೋತ್ಪಾದಕರು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ಭಾಗದಲ್ಲಿ ಭಾರತದೊಳಗೆ ಒಳನುಸುಳಲು ಯತ್ನಿಸಿದ ಭಯೋತ್ಪಾದಕರ ದೊಡ್ಡ ಗುಂಪನ್ನು ಭಾರತೀಯ ಸೇನೆ ತಡೆದಿದೆ. ಮಂಗಳವಾರ ಸಂಜೆ ವೇಳೆಗೆ ಅನುಮಾನಾಸ್ಪದ ಚಲನವಲನಗಳು ಕಂಡು ಬಂದಿದ್ದರಿಂದ ಕೂಡಲೇ ಕಾರ್ಯಪ್ರವೃತ್ತವಾದ ಭಾರತೀಯ ಸೇನೆಯು ಭಯೋತ್ಪಾದಕರ ಒಳನುಸುಳುವಿಕೆಯನ್ನು ತಡೆಯುವಲ್ಲಿ ಯಶಸ್ವಿಯಾಗಿದೆ.

ನಡುರಸ್ತೆಯಲ್ಲಿಯೇ ನಾಯಿಯನ್ನು ಹೊಡೆದು ಕೊಂದ ಕಿಡಿಗೇಡಿಗಳು; ಮಾನವೀಯತೆಯನ್ನೇ ಮರೆತವರ ಕೃತ್ಯಕ್ಕೆ ಆಕ್ರೋಶ

ಬೀದಿ ನಾಯಿಯನ್ನು ಅಮಾನವೀಯವಾಗಿ ಕೊಂದ ದುಷ್ಕರ್ಮಿಗಳು

Viral Video: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದೆ. ಬೀದಿ ನಾಯಿಯನ್ನು ಜನರ ಗುಂಪೊಂದು ಅತ್ಯಂತ ಕ್ರೂರವಾಗಿ ಹೊಡೆದು ಕೊಂದಿದೆ. ಕೃತ್ಯದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಜನರ ಮನಸ್ಥಿತಿ ಹಾಗೂ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಸಹಾಯಕನ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರ

ಸುವೇಂದು ಅಧಿಕಾರಿ ಸಹಾಯಕನ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರ

ಚುನಾವಣೆ ಫಲಿತಾಂಶ ಘೋಷಣೆಯಾದ ಬಳಿಕ ಪಶ್ಚಿಮ ಬಂಗಾಳದಲ್ಲಿ ಘರ್ಷಣೆಗಳು ಉಂಟಾಗಿದ್ದವು. ಉತ್ತರ 24 ಪರಗಣ ಜಿಲ್ಲೆಯಲ್ಲಿ ಮೇ 4ರಂದು ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ ರಥ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದ್ದು, ಇದೀಗ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ.

ಪ್ರಧಾನಿ ಮೋದಿ ಬಳಿಕ ಹಿಮಂತ ಬಿಸ್ವಾ ಶರ್ಮಾ ಮೇಲೆ ದಾಳಿಗೆ ಸಂಚು? ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗುಂಡುಗಳೊಂದಿಗೆ ಬಂದಿದ್ದ ವ್ಯಕ್ತಿಯ ಬಂಧನ

ಹಿಮಂತ ಬಿಸ್ವಾ ಶರ್ಮಾ ಮೇಲೆ ದಾಳಿಗೆ ಸಂಚು?

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಕ್ತಿಯೊಬ್ಬ ಮದ್ದುಗುಂಡುಗಳೊಂದಿಗೆ ಆಗಮಿಸಿದ್ದು, ಆತನನ್ನು ತಕ್ಷಣವೇ ಬಂಧಿಸಲಾಗಿದೆ. ಪಶುವೈದ್ಯಕೀಯ ಕಾಲೇಜು ಮೈದಾನದ ಪ್ರವೇಶದ್ವಾರದಲ್ಲಿ ಸ್ಕ್ರೀನಿಂಗ್ ಸಮಯದಲ್ಲಿ ಆರೋಪಿ ಸಿಕ್ಕಿಬಿದ್ದಿದ್ದು, ವಿಚಾರಣೆಗಾಗಿ ಆತನನ್ನು ಬಸಿಷ್ಠ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ.

Bowring Hospital tragedy: ಬೌರಿಂಗ್ ಆಸ್ಪತ್ರೆ ದುರಂತ; ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ಬೆಂಗಳೂರು ಡಿಸಿ

ಬೌರಿಂಗ್ ಆಸ್ಪತ್ರೆ ದುರಂತ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ಡಿಸಿ

ಏಪ್ರಿಲ್‌ 29ರಂದು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಇಬ್ಬರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದರು. ಘಟನೆ ಬಳಿಕ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಇದೀಗ ಬೆಂಗಳೂರು ನಗರ ಡಿಸಿ ಜಗದೀಶ ಅವರು ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ.

ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ; ಆರೋಪಿಗೆ ತಮಿಳುನಾಡು ನಂಟಿನ ಶಂಕೆ

ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ; NIA ತನಿಖೆ

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಉಂಟಾಗಿರುವ ಭದ್ರತಾ ಲೋಪವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೇರಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳು ಪ್ರಕರಣದ ಬೆನ್ನತ್ತಿವೆ.

Belagavi News: ಜನ್ಮದಿನದಂದೇ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಜನ್ಮದಿನದಂದೇ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಜನ್ಮದಿನದಂದೇ ವಸತಿ ನಿಲಯದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ‌ನಡೆದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

MLC Shashil G Namoshi: ಒಡ ಹುಟ್ಟಿದ ಸಹೋದರನಿಗೇ ವಂಚಿಸಿದ್ರಾ ಬಿಜೆಪಿ ಎಂಎಲ್‌ಸಿ ಶಶೀಲ್ ನಮೋಶಿ?

ಒಡ ಹುಟ್ಟಿದ ಸಹೋದರನಿಗೇ ವಂಚಿಸಿದ್ರಾ ಬಿಜೆಪಿ ಎಂಎಲ್‌ಸಿ ಶಶೀಲ್ ನಮೋಶಿ?

ಎಂಎಲ್‌ಸಿ ಶಶೀಲ್ ನಮೋಶಿ ಅವರು ನಮ್ಮ ಮನೆಗೆ ನಮ್ಮನ್ನೇ ಹೋಗಲು ಬಿಡುತ್ತಿಲ್ಲ ಎಂದು ಸಹೋದರ ಅನಿಲ್‌ ನಮೋಶಿ ಕುಟುಂಬ ಆರೋಪಿಸಿದೆ. ಅಲ್ಲದೇ ತಮಗೆ ನ್ಯಾಯ ಸಿಗಬೇಕೆಂದು ಮನೆಯ ಮುಂಭಾಗದಲ್ಲೇ ವಸ್ತುಗಳನ್ನು ಇಟ್ಟುಕೊಂಡು ಅನಿಲ್‌ ನಮೋಶಿ ಕುಟುಂಬ ಧರಣಿ ನಡೆಸಿದೆ.

Pregnant dies due to doctor's negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ: ಚಿಂತಾಮಣಿಯಲ್ಲಿ ತಡರಾತ್ರಿ ಹೈಡ್ರಾಮಾ!

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ: ಚಿಂತಾಮಣಿಯಲ್ಲಿ ಹೈಡ್ರಾಮಾ!

ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಓಬಳೇಶ್ ಎಂಬುವವರ ಪತ್ನಿ ನರ್ಮದಾ (24)ಮೃತಪಟ್ಟ ದುರ್ದೈವಿ. ಎರಡು ತಿಂಗಳ ಹಿಂದೆಯಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸೆಗೆ (ಮಕ್ಕಳಾಗದಂತೆ ಆಪರೇಷನ್)ಒಳಗಾಗಿದ್ದ ಅವರು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದರು.

ಬೆಂಗಳೂರಿನಲ್ಲಿ ಘೋರ ಘಟನೆ; ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು

ಬೆಂಗಳೂರಿನಲ್ಲಿ ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು

Bengaluru fire accident: ಬೆಂಗಳೂರು ಹೊರವಲಯದ ಕೊತ್ತನೂರು ಬಳಿಯ ನಾರಾಯಣಪುರದಲ್ಲಿ ಅವಘಡ ನಡೆದಿದೆ. ಅಜ್ಜಿ ಶೆಡ್‌ನಿಂದ ಹೊರಗಡೆ ಹೋಗಿದ್ದಾಗ ಬೆಂಕಿ ಕಾಣಿಸಿಕೊಂಡಿದ್ದು, ಒಳಗಿದ್ದ ಮಕ್ಕಳು ಬೆಂಕಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತೆಲಂಗಾಣದಲ್ಲಿ ಭೀಕರ ಅಪಘಾತ: 140 ಕಿ.ಮೀ. ವೇಗದಲ್ಲಿ ಬಂದ ಹಯಾಬುಸಾ ಬೈಕ್ ಕಾರಿಗೆ ಡಿಕ್ಕಿ, ಐವರ ಸಾವು

ಹಯಾಬುಸಾ ಬೈಕ್ ಕಾರಿಗೆ ಡಿಕ್ಕಿ; ಐವರು ಬಲಿ

ತೆಲಂಗಾಣದ ಮಹಬೂಬ್‌ನಗರದ ಪಾಲಕೊಂಡ ಬೈಪಾಸ್ ರಸ್ತೆಯಲ್ಲಿ ಅಕ್ರಮ ಬೈಕ್ ರೇಸಿಂಗ್ ವೇಳೆ ನಿಯಂತ್ರಣ ತಪ್ಪಿದ ಸುಝುಕಿ ಹಯಾಬುಸಾ ಕಾರಿಗೆ ಡಿಕ್ಕಿ ಹೊಡೆದು ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಮೂವರು ಸೇರಿದ್ದು, ಅತೀ ವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ದುರಂತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರು ರಾತ್ರಿ ಬೈಕ್ ರೇಸಿಂಗ್ ತಡೆಗೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ ಪ್ರಕರಣ; ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ ಮೂವರ ಬಂಧನ

ಚಂದ್ರನಾಥ್ ಹತ್ಯೆ ಪ್ರಕರಣ: ಮೂವರ ಬಂಧನ

Murder case of Chandranath Rath: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಸುಳಿವೊಂದು ಲಭ್ಯವಾಗಿದೆ. ಕೋಲ್ಕತ್ತಾ ಬಳಿಯ ಟೋಲ್ ಬೂತ್‌ನಲ್ಲಿ ಮಾಡಲಾದ ಯುಪಿಐ ಪಾವತಿಯು ನಿರ್ಣಾಯಕ ಸುಳಿವು ನೀಡಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ.

ಪುಂಡಾಟ ಮೆರೆದ ವಿದ್ಯಾರ್ಥಿಗಳ ಮೇಲೆ ದೂರು ದಾಖಲು : ಹುಡುಗರ ಪತ್ತೆಗೆ ಮುಂದಾದ ಪೊಲೀಸರು

ಪುಂಡಾಟ ಮೆರೆದ ವಿದ್ಯಾರ್ಥಿಗಳ ಮೇಲೆ ದೂರು ದಾಖಲು

ಬೈಕ್ ಕರ್ಕಶ ಶಬ್ಧ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್‌ಐ ಗಂಗರಾಜು ಸೈಲೆಂಟ್ ಆಗಿ ಹೋಗಿ ಎಂದು ತಿಳಿ ಹೇಳಿದ್ದರಂತೆ. ಈ ವೇಳೆ ಪೊಲೀಸರ ಎಚ್ಚರಿಕೆಗೆ ಕ್ಯಾರೆ ಎನ್ನದೇ ಒಬ್ಬ ವಿದ್ಯಾರ್ಥಿ ಬೈಕ್ ಜೋರು ಸೌಂಡ್ ಮಾಡಿದ್ದಾನೆ. ಬೇರೆ ವಿದ್ಯಾರ್ಥಿಗಳು ಬೇಡ ಅಂದ್ರೂ ಅವನೊಬ್ಬ ಪೊಲೀಸ್ ಏನು? ಮಾಡ್ತಾನೆ? ಎಂದು ಮತ್ತೆ ಶಬ್ಧ ಮಾಡಿದ್ದಾನೆ. ಈ ವೇಳೆ ಕೆರಳಿದ ಎಎಸ್‌ಐ ಗಂಗರಾಜು ವಿದ್ಯಾರ್ಥಿಯ ಮೇಲೆ ಲಾಠಿ ಬೀಸಿದ್ದು, ವಿದ್ಯಾರ್ಥಿಗೆ ಗಾಯವಾಗಿ ರಕ್ತ ಬಂದಿದೆ ಎನ್ನಲಾಗಿದೆ.

ಅಮ್ಮಂದಿರ ದಿನದಂದೇ ಹರಿಯಿತು ತಾಯಿಯ ನೆತ್ತರು; ಆಸ್ತಿಗಾಗಿ ಗುಂಡಿಟ್ಟು ಕೊಂದ ಪಾಪಿ ಮಗ

ಅಮ್ಮಂದಿರ ದಿನದಂದೇ ತಾಯಿಯನ್ನು ಕೊಂದ ಪಾಪಿ ಪುತ್ರ

Uttar Pradesh Horror: ಇಡೀ ಜಗತ್ತೇ ಅಮ್ಮಂದಿರ ದಿನ ಕೊಂಡಾಡುತ್ತಿದ್ದರೆ ಇಲ್ಲೊಬ್ಬ ಪಾಪಿ ಅದೇ ದಿನ ತನ್ನ ತಾಯಿಯನ್ನೇ ಕೊಂದಿದ್ದಾನೆ. ಆಸ್ತಿ ಮಾರಾಟ ವಿಚಾರಕ್ಕೆ ಸಂಬಂಧಿಸಿ ರಾಜ್‌ಕಿಶೋರ್ ಗುಪ್ತ ತನ್ನ ತಾಯಿ, ಸಹೋದರನನ್ನೇ ಕೊಂದು, ತಲೆ ಮರೆಸಿಕೊಂಡಿದ್ದಾನೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಪೋಷಕರ ಕಣ್ಣೆದುರೇ ಬಾಲಕನನ್ನು ಎಳೆದೊಯ್ದು ಕೊಂದ ಚಿರತೆ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನನ್ನು ಎಳೆದೊಯ್ದು ಕೊಂದ ಚಿರತೆ!

leopard attack in male mahadeshwara hills: ಮಲೆ ಮಹದೇಶ್ವರನ 77 ಮಲೆಗಳಲ್ಲಿ ಒಂದಾದ ನಾಗಮಲೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದಾಗ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ.

Loading...